ಒಟ್ಟು 15 ಕಡೆಗಳಲ್ಲಿ , 10 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನ ಪಡೆದಿದ್ದೆನೋ ಸುಕೃತವ ಮುಂ-ದೇನ ಪಡೆದಿದ್ದೆನೋ ಮಾನ ನಿಧಿಯು ಚಿದಾನಂದ ಗುರುವ ಕಂಡುತಾನೆ ತಾನಾಗಿ ತನ್ನನು ಮರೆದಿರ್ದುದ ಪ ಆನಂದ ಮೂರುತಿಯ ನಾನೀಗ ಅತಿ ವೇಗ ಧ್ಯಾನಿಸಲುಏನೇನು ತೋರದೆ ಯೋಚನೆಗಳು ಕುಂದಿನಾನು ನೀನೆಂಬ ನೀತಿಯ ಮರೆದಿರ್ದುದಾ 1 ಶತಕೋಟಿ ಶಶಿಸೂರ್ಯರ ಪ್ರಭೆಯ ತಾಳ್ದುಶತ ಪತ್ರಗಳ ಗೇಹನ ಅತಿಹರುಷದಿ ಕಂಡು ಆತನೇ ತಾನಾಗಿಮತಿಯನೆ ತೊರೆದೆ ಮರೆತು ನಾ ನಿರ್ದುದ 2 ನಿರುಪಮ ನಿರ್ಗುಣನ ನಿರ್ವಿಕಲ್ಪ ನಿರವಯ ನಿರೀಹನವರಚಿದಾನಂದ ಗುರುವ ವರದಾತನಚರಣ ನೆನೆದು ಮನ ಚಲಿಸದಂತಿರ್ದುದ 3
--------------
ಚಿದಾನಂದ ಅವಧೂತರು
ಅವತಾರತ್ರಯ (1) ಕರುಣದೆನ್ನನು ಕಾಯಬೇಕಯ್ಯಾ ಕದರೂರ ರಾಯಕರುಣದೆನ್ನನು ಕಾಯಬೇಕ್ಕೆಹರಸುರಾದಿಗಳಿಂದ ವಂದ್ಯನೇದುರಿಥ ಪರಿಹರಿಸಿಹ ಪರಕೆ ನೀ-ನ್ಹರುಷದಲಿ ಸಾಧನ ಮಾಡಿ ಪ ಅಂಜನಿಯ ಗರ್ಭದಲ್ಲಿ ಜನಿಸಿದೆಯೊ ಶ್ರೀರಾಮನಂಘ್ರಿಕಂಜದಲ್ಲಿಹ ಭ್ರಮರನೆನಿಸಿಯಾಅಂಜದಂಬುಧಿಯ ದಾಟಿ ಸೀತೆಯ -ನಂಜಿಸುವ ರಾವಣನ ಬಲಗಳಭಂಜಿಸಿದಿ ಧರೆಯೊಳಗೆ ತೇಜಃಪುಂಜನಾಗಿಹ ಪ್ರಭುವೆ ಎನ್ನನು 1 ಅಖಿಳ ಕುರುಬಲಅಂತಕನಿಗೊಪ್ಪಿಸಿದಿ ಜಗದಾ -ದ್ಯಂತ ಸುಜನರಿಗಿತ್ತಿ ಸಂತಸಸಂತತೆನ್ನನು ಬಿಡದೆ ಪವನನೆ 2 ಮಧ್ಯಗೇಹನಲ್ಲಿ ಪುಟ್ಟಿದೆಯೊ ಸಚ್ಛಾಸ್ತ್ರ ಪಠಿಸಿ ಆ -ಪದ್ಧ ಮತದವರನ್ನು ಕುಟ್ಟಿದಿಯೊಉಧ್ವನುತ ರಮಾಪತಿ ವಿಠ್ಠಲನಸದ್ಯ ಮನದಲಿ ತೋರಿ ಕೊಟ್ಟೆ -ನ್ನುದ್ಧರಿಸಿ ಭವಕಡಲ ದಾಟಿಸೊಮಧ್ವಮುನಿ ಸಜ್ಜನತ್ಪ್ರಸಿದ್ಧನೆ 3
--------------
ರಮಾಪತಿವಿಠಲರು
ಇಂದು ನಿನ್ನಯ ಪಾದಾ ವಂದಿಸುವೆ ನಾನು ಛಂದದಿಂದಾ ಪ. ಮಂದಾರೊದ್ಧರನ ಪಾದಾ ಸೇವಕರೆಂದೆನಿಸಿದಿ ದುರ್ಮಾಯವಾದಿಗಳನು ಜಯಸಿದಿ ಬ್ರಹ್ಮರಾಯನೆಂದೆನಿಸೀದಿ ಅ.ಪ. ಅಂಜನಿಸುತನೆಂದೆನಿಸಿದೆ ಸಂಜೀವನವ ತಂದಿ ಕಂಜಾಕ್ಷಿಮುಖಿಗೆ ಉಂಗುರವನ್ನಿತ್ತಿ ವನವ ಕಿತ್ತಿ ಸಂಜೀವರಾಯನೆ ದುರುಳ ರಾವಣನ ಸಂಹರಿಸಿದಿ ವಿಭೀಷಣನಿಗೆ ರಾಜ್ಯಭಾರದಲ್ಲಿ ನಿಲ್ಲಿಸಿದಿ ಅಯೋಧ್ಯನಗರಿಗೆ ತೆರಳಿದಿ 1 ಕುಂತಿಯಾ ಕಂದಾ ಕೌರವಾದಿಗಳ ಕೊಂದ ಯುದ್ಧದಲ್ಲಿ ಪ್ರಚಂಡಾ ಭಾರತಿಗೆ ಗಂಡಾ ಲಂಡದುಷ್ಯಾಸನನ ತುಂಡು ತುಂಡುಮಾಡಿ ಸೀಳಿದ ವಿರಾಟ ನಗರದಿ ಸಂಚರಿಸಿದಾ ಕೀಚಕಾದಿಗಳ ಸಂಹರಿಸಿದಾ ಪಾಂಚಾಲಿಗೆ ಸೌಗಂಧೀಕುಸುಮವನೆ ತಂದಾ ಆನಂದಾ 2 ಮಧ್ಯಗೇಹನಲ್ಲಿ ಉದ್ಭವಿಸಿದೆಯೋ ನೀ ಇಲ್ಲಿ ಅದ್ವೈತ ಮತವೆಲ್ಲಾ ಕಾಲಿಲೆ ವದ್ಯೋ ಗೆದ್ಯೋ ಮಧ್ವಮತವೆಲ್ಲ ಉದ್ಧಾರ ಮಾಡಿದಾ ಬದರಿಕಾಶ್ರಮಕೆ ಪುನರಪಿ ಪೋದಾ ವ್ಯಾಸಮುನಿ ಪಾದಕೆ ಅಭಿವಂದಿಸಿದಾ ಉಡುಪಿಯೊಳು ಕಾಳಿಮರ್ಧನಕೃಷ್ಣನು ನಿಲ್ಲಿಸಿದಾ 3
--------------
ಕಳಸದ ಸುಂದರಮ್ಮ
ಈತನೀಗ ವಾತಜಾತನು ತನ್ನ ಪ ತÁತಗಾಗಿ ದನುಜಕುಲವಘಾತಿಸಿದ ವನೌಕಸಾರ್ಯಅ.ಪ. ಅಂಬುಧಿಯ ಲಂಘಿಸಿ ಭರದಿಲಂಬ ಶಿಖರದಲ್ಲಿ ಧುಮುಕಿಸಂಭ್ರಮದಿಂದ ಲಂಕೆಗೆ ಪೋಗಿಅಂಬುಜಾಕ್ಷಿಯನರಸಿದಾತ1 ಧರಣಿಸುತೆಯ ಚರಣಕೆರಗಿಕರುಣಿ ರಾಮನುಂಗುರವಿತ್ತುಕರದಿ ದಾನವರನು ಸವರಿಶರಧಿಯನುತ್ತರಿಸಿದಾತ 2 ಕಡಲ ತಡಿಯೊಳಿರ್ದ ಕಪಿಗ-ಳೊಡನೆ ರಾಮನಂಘ್ರಿಗೆರಗಿಮಡದಿ ಚೂಡಾರತುನವಿತ್ತುಕಡು ಕೃತಾರ್ಥನೆನಿಸಿಕೊಂಡ 3 ದುರುಳ ಕೌರವನನುಜನುರವಕರದಿ ಸೀಳಿ ರಕ್ತವ ಸುರಿದುನರಸಿಂಹನಿಗೆ ಅರ್ಪಿಸಿದಧರೆಗೆ ಭೀಮನೆನಿಸಿದಾತ 4 ಇಳೆಯೊಳಿದ್ದ ಮಧ್ಯಗೇಹನಕುಲದಿ ಜನಿಸಿ ಶುದ್ಧವಾದನಳಿನನಾಭನ ಒಲುಮೆಯಿಂದಮಲಿನರನ್ನು ಅಳಿದ ಧೀರ 5 ಇಪ್ಪತೊಂದು ಕುಮತಗಳನುಒಪ್ಪದಿಂದ ಗೆಲಿದು ಭಕ್ತಕಲ್ಪವೃಕ್ಷನೆನಿಸಿ ಮೆರೆದಸರ್ಪಶಯನನ ನಿಜವ ತೋರ್ದ6 ಧರಣಿ ಮಂಡಲದೊಳಗೆ ಭೂಮಿಸುರರ ಗಣಕೆ ಶಾಸ್ತ್ರಾಮೃತವಎರೆದು ಕೃಷ್ಣನ ಇರವ ತೋರಿವರ ಬದರಿಯೊಳ್ ನಿಂದ ಧೀರ7
--------------
ವ್ಯಾಸರಾಯರು
ಈತನೇನೆ ಮುಖ್ಯ ಪ್ರಾಣದೇವರು ಪ. ಖ್ಯಾತಿಯ ಪಡೆದ ರಾಮ ದೂತನು ಅ.ಪ. ಅಂಜನೆಯ ಕುಮಾರ ರಾಕ್ಷಸರ ಸಂಹಾರ ಸಂಜೀವನವ ತಂದ ಧೀರ ಸಾಗರವ ದಾಟಿದ 1 ಕುಂತಿಯಾ ಕಂದ ಕೀಚಕನ ಕೊಂದ ಸತಿಗೆ ಕುಸುಮವಾ ತಂದೆ ಲೋಕದೊಳಗೆ ಆನಂದ 2 ಮದ್ಯಗೇಹನಲಿ ಜನಿಸಿ ಪ್ರಖ್ಯಾತನೆನಿಸಿ ಕಾಳೀಮರ್ಧನಕೃಷ್ಣನಲಿ ಮನಸಿಟ್ಟ ಯತಿಯೆ 3
--------------
ಕಳಸದ ಸುಂದರಮ್ಮ
ನಮೋ ನಮೋ ಹನುಮ | ನಮೋ ನಮೋ ಭೀಮ| ನಮೋ ನಮೋ ಮಧ್ವರಾಯ ಸುಪ್ರಿಯ || ಅಂಬುಧಿಯ ಪೋರ್ದು | ನಿಜ ಡಿಂಭದೊಳ್ ಬೆರೆದು | ಚೆರ್ಬಿಂಬಳಂ ತರಿದು | ದಶಬಿಂಬನಾಪುರ ಪೊಕ್ಕು | ಗಂಟುಗಳ ದಾಟಿ | ಮೂರ್ಜಂಬಳಂತೋರಿ ಎಲ್ಲಂಬಳಂ ನಳಿದು ಅಂಬುಜಾಕ್ಷೆಗೆ ಮುದ್ರೆಯಿತ್ತ ಹನುಮಂತ 1 ಸತಿಯೆ ಹಂಬತ್ತಿದ ನತಿಗಳೇದು ಕೃತಕೋಪ ವೃತನಾಗಿ ಮಶತಂತುರದೆ ಹತಿಯೆ ಮೋಹತಿಯೆ | ಸಂಪತಿಯ ತೊಲಗಿ ಅಗತರಾಗಿಗತಿಯಲಿರುತಿಹ | ಮತಿಹೀನ ಬಕನಕೊಂದ ಭೀಮನಿಸ್ಸೀಮ 2 ಮಧ್ಯಗೇಹನುದರದಿಂದುದ್ಭವಿಸಿ ಜಗದ್ಭಲ ಭರಿತರಾಗಿ ಶಾಸ್ತ್ರ ಶುದ್ಧವನೆ ಕೈ ಕೊಂಡು ಮಧ್ವ ಮತದಲ್ಲಿ ಬಲು ಶುದ್ಧನಾಗಿ ಅದ್ವೈತಗಳ ನಳಿದು ಸದ್ವೈತ ಮಾರ್ಗದೊಳ್ | ಪೂರ್ಣಗುಣತೇಜ3
--------------
ಹೆನ್ನೆರಂಗದಾಸರು
ನೋಡಿದೆನು ಉಡುಪೀ ನಿವಾಸನ ನೋಡಿದೆನು ಯಾದವೇಶನ ನೋಡಿದೆನು ಮಾನಿಸ ವೇಷನ ನೋಡಿದೆನೊ ಲಕುಮೇಶನ ಪ ಪರಶುರಾಮನು ಭೂಮಿ ಸುರರಿಗೆ ಸರವು ಧಾರುಣಿ ಧಾರಿಯಾ ಎರದು ಕೇಸರಗಿರಿಯ ಪಡುಮೂಲ ಶರನಿಧಿಯನು ಶರದಲೀ ಭರದಿ ಬಿಡಿಸಿದ ಶೂರ್ಪಕಾರದ ತೆರದಿ ನೆಲ ನೀ ಧರುಣಿಗೆ ಪರಮ ಸಾಹಸ ರಾಮಭೋಜನು ಅರಸನಾದುದು ನೋಡಿದೆ 1 ಯಾಗಗೋಸುಗ ರಾಮ ಭೋಜನು ನೇಗಿಲಿಯ ಕೊನೆಯಿಂದಲಿ ಆಗ ಭೂಮಿಯ ಶೋಧಿಸÀಲು ಬಂದು ನಾಗ ಬಂದಿತು ಮೃತವಾಗಿ ತೂಗಿ ಶಿರವನು ಭೃಗು ಕುಲೇಶಗೆ ಬಾಗಿ ನೆನೆಯಲು ಸಂಕೇತಾ ಸಾಗಿ ಭೂಮಿಪಾಲ ರಿಪು ಚನ್ನಾಗಿ ಒಲಿದದು ನೋಡಿದೆ 2 ತಿಳುಹಿದನು ಪೂರ್ವದಲಿ ಈ ಫಣಿ ಖಳನು ಕಾಣೊ ಇವನಿಂದು ಅಳಿದು ಪೋದದು ಲೇಸು ಭೂಸುರ ಕುಲಕೆ ಸಂತೋಷವಾಯಿತು ಒಲುಮೆಯಲಿ ಸತ್ಕಾರ ವಿಧ ವೆ ಗ್ಗಳವಾಗಿ ಸುಯಾಗವ ಸುಲಭ ಮನದಲಿ ಮಾಡೆನಲು ನಿ ಶ್ಚಲ ಭಕುತಿಲಿ ಸ್ತುತಿಸಲು 3 ಇಂದಿರಾಪತಿ ಕರುಣಿಸೆಂದು ಅಂದಿಗಾ ರಾಮ ಭೋಜನು ಒಂದು ಕ್ರೋಶದ ಅಗಲ ರಜತಾ ಚಂದದಾಸನ ಮಾಡಿಸಿ ತಂದು ದೇವನ ಕುಳ್ಳಿರಿಸಿ ಆ ನಂದದಲಿ ಓಲಾಡುತಾ ಕುಂದದಲೆ ಮೇಧವನು ಮುಗಿಸಿ ಗೋ ವಿಂದನ ಪ್ರೀತಿಪಡಿಸಿದಾ 4 ಭೂತಳದೊಳು ರಜತಪೀಠಾಖ್ಯ ಖ್ಯಾತಿ ಆಯಿತು ಸರ್ವದಾ ಆ ತರುವಾಯದಲ್ಲಿ ಭಾರ್ಗವ ಭೂತನಾಥನ ನಂದದಿ ವಾತ ಭಕ್ಷನ ನಡುವೆ ನಿಂದನು ಮಾತುಯಿದು ಪುಶಿಯಲ್ಲವೊ ಪೂತುರೆ ಮೋಹಕವೆ ತೋರಿದ ಜಾತ ರಹಿತಗೆ ನಮೋ ನಮೋ 5 ಪರಿ ಇರಲು ಗಂಗೆಯ ಕಾಂತ ಮಹಾ ತಪವನೆ ಮಾಡಿ ಸಂತತ ಗೋಪಾಲಕೃಷ್ಣನ ಸಂತೋಷವನು ಬಡಿಸಿದಾ ಚಿಂತೆಯಲಿ ವಿದೂರನಾದನು ಮುಂತೆ ನಡೆದ ಕಥೆ ಕೇಳಿ ಕಂತುಹರನನ ಒಲಿಸಿ ಉಡುಪಾ ಕಾಂತ ವರವನೆ ಐದಿದಾ 6 ಮೂರು ಯುಗದಲಿ ಈ ಪರಿಯಾಗೆ ಮಾರುತ ಮಧ್ಯಗೇಹನ ಚಾರು ಮನೆಯಲಿ ಜನಿಸಿ ವೈಷ್ಣವಾ ಚಾರ್ಯ ಈ ದುಶ್ಯಾಸ್ತ್ರವ ಹಾರಿಸಿದ ಹರುಷದಲಿ ರುಕ್ಮಿಣಿ ದ್ವಾರಕೆಲಿ ಪೂಜೆ ಮಾಡಿದ ಮೂರುತಿಯ ಸ್ಥಾಪಿಸಿದ ಲೀಲೆಯು ಆರು ಬಣ್ಣಿಸಲಾಪರು 7 ಇದೇ ರಜತಪೀಠ ಅಜಕಾನನವಿದೆ ಇದೇ ಉಡುಪಿ ಇದೇ ಶಿವಕುಲ್ಲ್ಯ ಅದರ ಬಳಿಯಲಿಯಿಪ್ಪ ತೀರ್ಥವ ಅದುಭುತವ ವರ್ಣಿಸುವೆನು ಇದೇ ಅನಂತ ಸರೋವರವು ಮ ತ್ತಿದೇ ವಾರುಣ್ಯಚಂದ್ರಮತೀರ್ಥ ಇದಕೆ ಮಧ್ವಸರೋವರ ವೆಂ ಬದು ಕಾಣೊ ಶ್ರುತಿ ಉಕ್ತಿಲಿ 8 ಸಕಲ ದೇಶದ ಜನರು ತ್ರಿವಿಧ ಸುಖವಾರಿಧಿಯೊಳು ಸೂಸುತಾ ಅಖಿಳ ವೈಭವದಿಂದ ಬಪ್ಪ ಅಕಟ ಸಂದಣಿಗೇನೆಂಬೆ ಸೂರ್ಯ ಬಂದ ಕಾ ಲಕೆ ಕೃಷ್ಣನ ನೋಡುವೆನೆಂದು ಚಕ್ಕನೆ ನಿಲ್ಲದೆ ಬಂದು ನೆರದಂದು ಮುಕ್ತಾರ್ಥ ಹರಿಪ್ರೇರಕಾ 9 ಸಜ್ಜನರ ಸಿರಿಚರಣ ರಜದಲಿ ಮಜ್ಜನವ ಗೈವುತ ಹೆಜ್ಜಿಹೆಜ್ಜಿಗೆ ಕೃಷ್ಣ ಕೃಷ್ಣ ಅಬ್ಜನಾಭ ನಾರಾಯಣ ಮೂಜಗತ್ಪತೆ ಎಂದು ಸ್ತೋತ್ರ ನಿ ರ್ಲಜ್ಜನಾಗಿ ಪಠಿಸುತಾ ರಜ್ಜುಪಾಣಿಯ ಬಹಿರದಿಂದ ನಿ ವ್ರ್ಯಾಜ್ಯ ಭಕುತಿಲಿ ನೋಡಿದೆ 10 ಮೊದಲು ನಮಿಸಿದೆ ಚಂದ್ರಶೇಖರ ಪದುಮಗರ್ಭನ ಮಗನೆಂದು ಅದರ ತರುವಾಯದಲ್ಲಿ ಮಾಯಿಯ ಸದಬಡೆದ ಪೂರ್ಣಬೋಧರು ಸದಮಲಾ ಕುಳುತಿಪ್ಪ ಸ್ಥಾನವ ಒದಗಿ ನೋಡಿ ಕೊಂಡಾಡುತಾ ಮದನ ಜನಕಾನಂತ ಸ್ವಾಮಿಯ ಪದಯುಗಳವನು ನೋಡಿದೆ11 ರತುನ ಗರ್ಭದೊಳಧಿಕವಾದ ತೀ ರಥವಿದು ಮಧ್ವಾಖ್ಯದಿ ಸತತ ಬಿಡದಲೆ ಇಲ್ಲಿ ಭಾಗೀ ರಥಿವಾಸ ನದಿಗಳ ಕೂಡಿ ನುತಿಸಿ ಮೆಲ್ಲನೆ ಮುಟ್ಟಿ ಮಿಂದು ಮತ್ತೆ ಕರ್ಮದ ಚರಿಯವ ಹಿತ ಮನಸಿನಲ್ಲಿ ಮಾಡುವಂಥ ಕೃತ ಕಾರ್ಯವನು ನೋಡಿದೆ 12 ಅಲ್ಲಿಂದ ನವರಂಧ್ರಗಳು ಕಂಡು ಪುಲ್ಲಲೋಚನ ಕೃಷ್ಣನ ಸೊಲ್ಲಿನಿಂದಲಿ ಪಾಡಿ ಭಾರತಿ ವಲ್ಲಭನ ಕೊಂಡಾಡುತಾ ಮೆಲ್ಲ ಮೆಲ್ಲನೆ ದ್ವಾರವನೆ ಪೊಕ್ಕು ನಿಲ್ಲದಲೆ ಸಮೀಪಕೆ ಬಲ್ಲವನು ಗುಣಿಸುತ್ತ ಭಕುತ ವ ತ್ಸಲನಂಘ್ರಿ ನೋಡಿದೆ13 ಮೂರು ಬಗೆ ಭೂಷಣವ ಧರಿಸಿದ ಮೂರುತಿ ಇದೇ ಕಾಣಿರೊ ಪಾರುಗಾಣರು ಈತನ ಅವ ತಾರ ಗುಣಕ್ರಿಯೆ ಮಹಿಮೆಯಾ ವಾರಿಜೋದ್ಭವ ಶಿವ ಮುಖಾದ್ಯರು ಸಾರಿ ಹಾಹಾ ಎಂಬರೊ ಧಾರುಣಿಗೆ ಇದೇ ದೈವ ನವನೀತ ಚೋರನ ಕೊಂಡಾಡಿದೆ 14 ತ್ರಾಹಿ ತ್ರಯಾವಸ್ಥೆ ಪ್ರೇರಕ ತ್ರಾಹಿ ತ್ರಯಗುಣ ವಿರಹಿತಾ ತ್ರಾಹಿ ತ್ರಯಧಾಮ ವಾಸ ಸರ್ವೇಶ ತ್ರಾಹಿ ತ್ರಯ ರೂಪಾತ್ಮಕಾ ತ್ರಾಹಿ ತ್ರಯವನು ಗೆದ್ದ ಪ್ರಸಿದ್ಧ ತ್ರಾಹಿ ತ್ರಯವನು ಕೊಡುವನೆ ತ್ರಾಹಿ ತ್ರಯಗಣ್ಣ ವನಪಾಲಕ ತ್ರಾಹಿ ತ್ರಯಲೋಕಾಧಿಪಾ 15 ಪಾಹಿಪರಮಾನಂದ ಗೋವಿಂದ ಪಾಹಿ ಪರತರ ಪರಂಜ್ಯೋತಿ ಪಾಹಿ ಪತಿತ ಪಾವನ್ನ ಮೋಹನ್ನಾ ಪಾಹಿ ಪಾಲಾಂಬುಧಿಶಾಯಿ ಪಾಹಿ ಜಗದತ್ಯಂತ ಭಿನ್ನಾ ಪಾಹಿ ನಿರ್ಭಿನ್ನ ಸ್ವರೂಪ ಪಾಹಿ ನಖಶಿಖ ಜ್ಞಾನ ಪೂರ್ಣನ ಪಾಹಿ ಎನ್ನಯ ಪ್ರೇಮನೆ 16 ನಮೋ ನಮೋ ಚತುರಾತ್ಮ ಗುಣನಿಧಿ ನಮೋ ನಮೋ ಪುನ್ನಾಮಕ ನಮೋ ನಮೋ ವಟಪತ್ರಶಾಯಿ ನಮೋ ನಮೋ ಪುಣ್ಯಶ್ಲೋಕನೆ ನಮೋ ನಮೋ ಸಮಸ್ತ ಸರ್ವಗ ನಮೋ ನಮೋ ಸರ್ವ ಶಬ್ದನೆ ನಮೋ ನಮೋ ಅವ್ಯಕ್ತ ವ್ಯಕ್ತಾ ನಮೋ ನಮೋ ನಾರಾಯಣ 17 ಜಯ ಜಯತು ಕರಿವರದ ವಾಮನ ಜಯತು ನಾರದ ವಂದ್ಯನೆ ಜಯ ಜಯತು ಪ್ರಹ್ಲಾದ ರಕ್ಷಕ ಜಯ ಜಯತು ಪಾರ್ಥನ ಸಾರಥೆ ಜಯ ಜಯತು ಅಂಬರೀಷ ಪರಿಪಾಲಾ ಜಯತು ಪರಾಶರನುತಾ ಜಯ ಜಯತು ಪಾಂಚಾಲಿ ಮಾನ ಕಾಯ್ದನೆ ಜಯ ಜಯತು ಗೋಪಿಕಾ ವಲ್ಲಭಾ18 ಇನಿತು ಬಗೆಯಲಿ ತುತಿಸಿ ದೇವನ ಮನದಣಿಯ ಕೊಂಡಾಡುತಾ ಕ್ಷಣಬಿಡದೆ ತನ್ನ ನೆನೆಸಿದವರಿಗೆ ಹೊಣೆಯಾಗಿ ಪಾಲಿಸುವನು ಜನುಮ ಜನ್ಮದಲಿಂದ ಮಾಡಿದ ಘನದುರಿತ ಪರ್ವತಗಳು ಚಿನಿಗಡೆದು ಸಾಧನವೆಲ್ಲ ವೇಗ ತನಗೆ ತಾ ಮಾಡಿಸುವನು 19 ವ್ಯಾಧ ಭೂಸುರ ವೇಷವು ಭೇದ ಮಾಡಿದ ನಾರಾಯಣಿ ಸುಪ್ರಸಾದ ನಿರ್ಮಲರೂಪವು ಆದಿವಾರವು ವಿಡಿದು ಎರಡು ಐದು ದಿನ ಪರಿಯಂತವು ಶ್ರೀಧರೇಶನು ವೇಷ ಧರಿಸಿದ್ದು ಸಾಧು ಸಂಗಡ ನೋಡಿದೆ20 ಉದಯಕಾಲದ ಪೂಜೆಯಾಗಲು ಮುದ ನಿರ್ಮಾಲ್ಯ ವಿಸರ್ಜನೆ ಇದೆ ಪೂರೈಸಲು ಮತ್ತೆ ಪಂಚ ಸುಧ ಪೂಜೆ ಉದ್ವಾರ್ಥನೆ ಒದಗಿಯಾಗಲು ಮೇಲೆ ಸುಧ ವಿಧುದಂತೆ ಬೆಣ್ಣೆ ಶರ್ಕರ ಇದೆ ಮಹ ಪೂಜೆ ನೋಡಿದೆ 21 ಗಂಧ ಪರಿಮಳ ತುಲಸಿ ಪುಷ್ಪಾ ನಂದ ಭೂಷಣ ಧರಿಸಿಪ್ಪ ಒಂದು ಕೈಯಲಿ ದಾಮ ಕಡಗೋ ಲಂದದಲಿ ತಾಳಿದಾ ಮಂದರಿಗೆ ಇದು ಸಾಧ್ಯವಲ್ಲವು ಮುಂದೆ ಯತಿಗಳು ಮಂತ್ರವ ಮಂದ ನಗಿಯಲಿ ಪೇಳುತಿಪ್ಪ ಚಂದವನು ನಾ ನೋಡಿದೆ 22 ಎತ್ತುವ ಧೂಪಾರತಿಗಳು ಹತ್ತೆಂಟು ಬಗೆ ಮಂಗಳಾ ರುತ್ತಿ ನಾನಾ ನೈವೇದ್ಯ ಷಡುರಸ ಮೊತ್ತಂಗಳು ಪರಿವಿಧಾ ಉತ್ತಮ ಶಾಖಾದಿ ಘೃತದಧಿ ತತ್ತಕ್ರಫಲ ಪಕ್ವವು ಸುತ್ತಲು ತಂದಿಟ್ಟು ಅರ್ಪಿ ಸುತ್ತಲ್ಲಿಪ್ಪುದು ನೋಡಿದೆ 13 ಮಂತ್ರ ಘೋಷಣೆ ಭಾಗವತಜನ ನಿಂತು ಗಾಯನ ಮಾಡಲು ಅಂತವಿಲ್ಲದೆ ವಾದ್ಯಸಂದಣಿ ಚಿಂತಿಸುವ ನಿಜದಾಸರು ವಂತು ವಾಳೆಯಿಲ್ಲದಾ ಜನ ಸಂತೋಷದಲಿ ನಲಿವುತಾ ತಂತ್ರ ಸಾರೋಕ್ತದ ಪೂಜೆ ಅತ್ಯಂತವನು ನಾ ನೋಡಿದೆ 24 ತೀರ್ಥ ಪ್ರಸಾದ ಗಂಧ ಅಕ್ಷತೆ ಅರ್ಥಿಯಲ್ಲಿ ಕೊಡುವರು ವ್ಯರ್ಥವಲ್ಲಿವು ಇಲ್ಲಿ ಒಂದು ಮು ಹೂರ್ತವಾದರು ಎಂದಿಗೂ ಶುಭ ಪ ದಾರ್ಥ ಬಡಿಸಲು ಉಂಡು ಕೃ ತಾರ್ಥನಾದೆನು ಜ್ಞಾನವಧಿಕ ಸಾರ್ಥಕರನ ನೋಡಿದೆ25 ತರಣಿ ಮಕರಕೆ ಬರಲು ಗೋಪಾಲ ಮೆರೆವ ವೈಭವವೆಂಬೆನೇ ಗಜ ತುರಗ ಹರಿ ಗರುಡ ಶ್ರೀ ಹನುಮಂತನಾ ವರ ರೂಢನಾಗಿ ಮೆರೆದು ಆಮೇಲೆ ಮಿರುಗುವ ರಥವನೇ ಏರಿ ಪರಮ ವೇಗದಿ ಚತುರ್ವೀಧಿಯ ತಿರುಗಿ ಬಪ್ಪದು ನೋಡಿದೆ 26 ಓಕಳಿಯ ಸಂಭ್ರಮವೆ ಪೇಳಲು ಗೋಕುಲಕೆ ಸಮನೆನಿಸಿತು ವಾಕು ಕೇಳ್ ಸುರ ಮುನಿಗಳೊಡನೆ ಲೋಕಕ್ಕಾಶ್ಚರ್ಯ ತೋರುತಾ ಸೋಕಿ ಸೋಕದ ಹಾಸೆ ಓಕುಳೀ ಹಾಕಿ ಆಡುವ ಲೀಲೆಯ ಈ ಕಲಿಯುಗದಲ್ಲಿ ಸೋಜಿಗ ಈ ಕಥೆಯಾದುದು ನೋಡಿದೆ 27 ವಾಲಗ ಎಡಬಲದಲಿ ಪಂಜು ಕಟ್ಟಿಕೆಕಾರರು ರಂಜಿಸುವ ಪಲ್ಲಕ್ಕಿ ಸೇವಿಪ ರಂಜಳವಾಗಿ ಒಪ್ಪಲು ಕುಂಜರಾರಿಯ ಪೀಠದಮೇಲೆ ಕಂಜಲೋಚನ ಕುಳ್ಳಿರೆ ನಿ ರಂಜನದಲಿ ಪೂಜಿಸುವ ಮತಿ ಪುಂಜ ಯತಿಗಳ ನೋಡಿದೆ 28 ಶ್ರುತಿ ಪುರಾಣಗಳುಪನಿಕ್ಷತ್ ವೊ ಸತು ಶಾಸ್ತ್ರ ಪ್ರಬಂಧವು ಭಾಗವತ ಸುಸಂ ಗೀತಿಯಲಿ ರಾಗ ಭೇದವು ಶ್ರುತಿ ಕಥಾಭಾಗ ಪದ್ಯ ಅಷ್ಟಕ ಮಿತಿಯಿಲ್ಲದಲಿಪ್ಪ ಪ್ರಸಂಗ ತತುವ ಮಾರ್ಗದಿ ನುಡಿವ ಬಲು ಉ ನ್ನತ ಮಹಿಮರ ನೋಡಿದೆ 29
--------------
ವಿಜಯದಾಸ
ಶ್ರೀ ವೀರರಾಘವ ಅಪ್ರತಿ ಕೃಪಾನಿಧಿಯೆ ವೀರರಾಘವ ದೇವ ಕ್ಷಿಪ್ರದಲೆ ಎನ್ನಭೀಷ್ಟಗಳ ಪೂರೈಸೊ ಪ ಫಣಿಪಗಿರಿ ವೆಂಕಟನೆ ಎನ್ನ ಕುಲದೇವನೆ ಅನಂತ ಗುಣಪರಿಪೂರ್ಣ ಅನಂತ ಸುಖರೂಪ ವನಜೆಸಹ ನೀ ಇಲ್ಲಿ ವೀರರಾಘವನೆನಿಸಿ ಫಣಿಶಾಯಿ ಕಾಮದನಾಗಿರುವೆ ವಿಧಿತಾತ 1 ನಿನ್ನ ದರ್ಶನ ಮಾಳ್ಪ ಜನರ ಕಾಮದನೆಂದು ನಿನ್ನ ಬಳಿ ಬಂದಿಹೆನೊ ನಿನ್ನ ದಯದಿಂದ ಎನ್ನಭೀಷ್ಟಗಳೆಲ್ಲ ನೀ ಬಲ್ಲೆಯೋ ಸ್ವಾಮಿ ಘನ್ನ ಔದಾರ್ಯ ಕರುಣಾಂಬುಧಿಯೇ ಶರಣು 2 ವೇಧ ಮಂದಮುನಿಪೂಜ್ಯ ಬದರೀಶ ಉಡುಪೀಶ ಸ್ವಾದಿ ಯತಿವರಪೂಜ್ಯ ಭೂಧರ ಹಯಾಸ್ಯ ಪಾದತ್ರಯ ವಿಖ್ಯಾತ ವರದ ನರಹರಿ ರಂಗ ಮದ್ಗೇಹನಿಲಯ ಶ್ರೀ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಸುಜ್ಞಾನ ಸಮುದ್ರ ಮಧ್ವಮುನಿರಾಯ || ನಿವಾರಿಸಿದ | ಮಧ್ವ ಮುನಿರಾಯಾ ಪ ಸಂಕರನಾದಾ | ಮಧ್ವರಾಯಾ || ಗುಣಗಳಲ್ಲ ಕೆಡಿಸಿದಾ | ಮಧ್ವರಾಯಾ 1 ಹರಿಯಿಲ್ಲ ಗುರುವಿಲ್ಲ ಹರನು ಪುಸಿ ಎಂದು || ಮಧ್ವ | ಅವ | ಪರದೈವ ತಾನೆ ಎಂದು ಧರೆಯೊಳು ತಿರುಗಿದ | ಮಧ್ವ 2 ಮಿಥ್ಯ ಅಹಂ ಬ್ರಹ್ಮ ಜಗಕೆಂದ | ಮಧ್ವ || ಅವ | ಸತಿ ಒಂದೆ ಎಂದು ಮಧ್ವ 3 ಜಾತಿಧರ್ಮವೆಲ್ಲ ತೊರೆದು | ಜಾತಿ ಸಂಕರವಾಗೆ ಮಧ್ವ || ಮಿಥ್ಯ ಪಾತಕವೆ ತುಂಬಿತು | ಮಧ್ವರಾಯ 4 ಪೇಳಲು | ಮಧ್ವ ||ಬೊಮ್ಮ | ಪರಿಹರ ಕಾಣದೆ ಹರಿಗೆ ಬಿನ್ನೈಸಿದ | ಮಧ್ವ5 ಜಯ ತನಯನ್ನ ಕರೆದು | ದಯದಿಂದ ಪೇಳಲು | ಮಧ್ವ || ವೇಗ | ಪ್ರಿಯದಲ್ಲಿ ಬಂದು ಮಧ್ಯಗೇಹನಲ್ಲಿ ಅವತರಿಸಿದ | ಮಧ್ವ 6 ಮುಖ್ಯ ಶಿಷ್ಯ ತಿಪ್ಪಣ್ಣ ಅವಧಾನಿ ಸೋತು ವೈಷ್ಣವನಾಗೆ | ಮಧ್ವ || ಸಂಕರ ಮೂಲಿಯ ಪೊಕ್ಕ | ಮಧ್ವ 7 ಶುಂಠ ಮಿಕ್ಕ ರಕ್ಕಸರ ಗಂಟಲ ಮುರಿದುವಟ್ಟಿ | ಮಧ್ವ || ಉಂಟು ಮಾಡಿದನು ವೈಕುಂಠ ಪತಿದೇವವೆಂದು | ಮಧ್ವ8 ಮರುತ ಮತ ಉಧ್ಧರಿಸಿ | ಗುರುಕುಲ ತಿಲಕನಾದ | ಮಧ್ವ ||ಶಿರಿ ವಿಜಯವಿಠ್ಠಲನ್ನ ಚರಣಾಬ್ಜ ಭೃಂಗನಾದ ಮಧ್ವ 9
--------------
ವಿಜಯದಾಸ
ಕೋಲುಹಾಡುಕೋಲು ಮುಕ್ತಿ ಮಾರ್ಗದ ಕೋಲು ದುಷ್ಟಶಾಸನಕೋಲು ಸುಖತೀರ್ಥಯತಿರಾಯನ ಕರದಂಡುಕೋಲು ಕೋಲೆ ಪ.ಕಂಬುಗೇಹನ ಸೀಳ್ದ ಕಲ್ಲ ಬೆನ್ನಲಿ ತಾಳ್ದಕುಂಭಿನಿತಂದ ಕಂಬದಿ ಬಂದನಮ್ಮಯ್ಯಕೊಂಬುವರಿಲ್ಲ ತ್ಯಾಗವೆಂಬ ಬಲಿಯೊತ್ತಿದಡಂಬಕಕ್ಷತ್ರೇರ ಕಂಠದರಿ ನೋಡಮ್ಮಯ್ಯ1ಅಂಬುಧಿಯ ದಾಟಿದ ರಂಭೆರೊಳೋಲ್ಯಾಡಿ ದಿಗಂಬರ ತಿರುಗಿ ಪಶುವೇರಿದ ನಮ್ಮಯ್ಯಅಂಬುಜಜಾಂಡ ಒಳಕೊಂಬ ಒಡಲ ಚೆಲುವಕೊಂಬು ಕೊಳಲೂದುವರ್ಥಿಯ ನೋಡಿರಮ್ಮಯ್ಯ 2ಸರ್ವಜÕರಾಯನ ಪೂರ್ವದ್ವಾದಶಸ್ತವನಕೋರ್ವನೆ ಮೆಚ್ಚಿ ಉಡುಪಿಲಿ ನಿಂದನಮ್ಮಯ್ಯಉರ್ವಿಗುಬ್ಬಸ ಮತವ ಪೂರ್ವಪಕ್ಷವ ಮಾಡಿದಸರ್ವೇಶ ಪ್ರಸನ್ವೆಂಕಟ ಕೃಷ್ಣ ಕಾಣಮ್ಮಯ್ಯ 3
--------------
ಪ್ರಸನ್ನವೆಂಕಟದಾಸರು
ಗುರುವೆ ಭಾರತಿನಾಥ | ಶರಣು ಲಾಲಿಸೋ ಮಾತ |ಹರಿಪದಾರ್ಚನೆ ಕೊಟ್ಟು ಪೊರೆಯೋ ದಯೆಯಿಟ್ಟು ಪರಾಮ ಸೇವಕನಾಗಿವಾನರಕಟಕನೆರಹಿ |ನೀಂ ಮುದದಿ ಲವಣಾಬ್ಧಿ ದಾಟಿ ಪೋಗಿ ||ಭೂಮಿ ತನುಜೆಳಿಗೆ ವಾರ್ತೆಯನೆ ಪೇಳಿ | ರಾಗಟಿಯಸ್ವಾಮಿಗರ್ಪಿಸಿದ ಬಲವಂತ ಹನುಮಂತ 1ರಾಜಸೂಯವ ಮಾಡುವದಕೆ ಮಾಗಧನ ಕೊಂದೆ |ಮಾಜಿಸಿದೆ ಕುರುಪತಿಯ ಸಂತತಿಯನು ||ಸೋಜಿಗವು ನಿನ್ನ ಲೀಲೆಯು ಆಯುಜಾತ ಬಿ |ಡೌಜ ರಕ್ಷಕ ದ್ರೌಪದೀಶ ಬಲವಂತ 2ಬುಧಮಧ್ಯಗೇಹನಲಿ ಅವತರಿಸಿ ಕುಮತಗಳ |ಬೆದರಿಸಿತ್ರಿದಶಸಪ್ತ ಗ್ರಂಥ ಮಾಡಿ ||ಸುದಯದಿಂದುತ್ತಮರಿಗಿತ್ತು ಮತವನು ನಿಲಿಸಿ |ಬದರಿಯೋಳ್ ಪ್ರಾಣೇಶ ವಿಠಲನಲ್ಲಿರುವೆ 3
--------------
ಪ್ರಾಣೇಶದಾಸರು
ಪಾಲಿಸೆನ್ನ ಮಂದಬಾಲಿಶನ್ನಪಾಲಗಡಲೊಡೆಯ ಸಿರಿಲೋಲ ಪ.ಅಂಬುರುಹಸಂಭವ ತ್ರಿಯಂಬಕ ಶೇಷಾಂಬರಗದಂಭೋಳಿಸಂಭೃತನುತಾಂಘ್ರಿ 1ಅಷ್ಟಕೃತ್ಯ ಅಷ್ಟವಿಭವ ಅಷ್ಟ ಭೋಗ್ಯಥೇಷ್ಟ ಶಕ್ತಅಷ್ಟಹರಿತ ಶ್ರೇಷ್ಠವರ್ಯ ಶ್ರೇಷ್ಠ 2ದ್ಯುಗ ಶಶಿಭಾಯುಗನಯನ ಜಗಜಠರಘಹರಾಹಿನಗನಿಲಯ ಜಘನಕಟಿಪಾಣಿ 3ಕಿರೀಟ ಕುಂಡಲರಿದರಕೇಯೂರಕೌಸ್ತುಭಸಿರಿವತ್ಸವರಾಂಬರ ಮನೋಹರ ಮೇಖಲಧಾರಿ 4ದ್ರೌಪದಿ ಮುನಿವಧು ಬಾಲಧ್ರುವ ಪ್ರಹ್ಲಾದ ವಿಭೀಷಣೋದ್ಧವಾಕ್ರೂರ ಮುಖ್ಯವಮಾನಹಾರಿ 5ಋಗ್ಯಜುಸಾಮನಿಗಮಧರವಗೋಚರ ಮುನಿಗಣ ಸುಮನಗೇಹನಂತ ಸುಗುಣಾನಂದ ಪೂರ್ಣ 6ಮಧು ಕೈಟಭ ಮದನೇಮಿ ಜಲಂಧರಕಂಬುಸದನಖಳಾಬುಧಿ ಕುಲಾಂತಕ ದ್ವಿಜೋಪಕಾರಿ 7ಋಷಿ ಹನುಮ ರಸಗಾಯನ ತೋಷಭರಿತ ಹಾಸವದನಪ್ರಸನ್ನ ವೆಂಕಟೇಶ ನಮೋ ಸ್ವಾಮಿ 8
--------------
ಪ್ರಸನ್ನವೆಂಕಟದಾಸರು
ವೀರ ಹನುಮ ಬಹುಪರಾಕ್ರಮ - ಸುಜ್ಞಾನವಿತ್ತುಪಾಲಿಸಯ್ಯ ಜೀವರುತ್ತಮ ಪರಾಮದೂತನೆನಿಸಿಕೊಂಡಿನೀ - ರಾಕ್ಷಸರವನವನೆಲ್ಲ ಜಯಿಸಿ ಬಂದೇ ನಿ ||ಜಾನಕಿಗೆ ಉಂಗುರವಿತ್ತುಜಗತಿಗೆಲ್ಲ ಹರುಷವಿತ್ತುಜಾತಿಮಣಿಯ ರಾಮಗಿತ್ತುಲೋಕದಿ ಪ್ರಖ್ಯಾತನಾದೆ 1ಗೋಪಿಸುತನಪಾದಪೂಜಿಸಿ - ಗದೆಯ ಧರಿಸಿ |ಕೌರವರ ಬಲವ ಸವರಿಸಿ ||ದ್ರೌಪದಿಯ ಮೊರೆಯಕೇಳಿಕರುಣದಿಂದ - ತ್ವರದಿ ಬಂದುಪಾಪಿ ಕೀಚಕನನು ಕೊಂದುಭೀಮಸೇನನೆನಿಸಿಕೊಂಡೆ 2ಮಧ್ಯಗೇಹನಲಿ ಜನಿಸಿ ನೀ - ಬಾಲ್ಯದಲ್ಲಿಮಸ್ಕರಿಯ - ರೂಪಗೊಂಡೆ ನೀ ||ಸತ್ಯವತಿಯ ಸುತನ ಭಜಿಸಿ |ಸಮ್ಮುಖದಲಿ ಭಾಷ್ಯ ಮಾಡಿಸಜ್ಜನರನು ಪಾಲಿಸಿದ - ಪುರಂದರವಿಠಲನ ದಾಸ 3
--------------
ಪುರಂದರದಾಸರು
ಶ್ರೀ ಪ್ರಣವನಾರಾಯಣ ಕೃಷ್ಣ ಆಗಮನ ಸ್ತೋತ್ರ45ಬಾರೋ ಬಂದಿರೋ ಶ್ರೀಶ | ಶ್ರೀಧರಾ ಸಮೇತ ಬಂದಿರೋ ಈಶ ||ವಿಭುವೇ ಗುಣಾರ್ಣವ ಅಮಿತ ಪೌರುಷ ಸ್ವವಶ | ಅಮಿತಾರ್ಕ ಕಾಶ ||ಸರಸಿಜಾಸನ ಶಿವ ವಿಷಾದಿ ಅಮರವಂದ್ಯನೆಪರಮಭಾಗವತೇಷ್ಟ ಚಿಂತಾಮಣಿಯೇ ಜಯ ಜಯಶರಣು ಪಾಲಿಪ ಪ್ರಭುವೇ ನಾರಾಯಣನೇ ಕೃಷ್ಣನೇ || ಬಾರೋ|| ಪಪ್ರಣವಾಷ್ಠಾಕ್ಷರ ದಿವ್ಯ | ಆರುಅಕ್ಷರಮಂತ್ರ ಸುಪ್ರತಿಪಾದ್ಯವಿಶ್ವಾದಿ ಎಂಟು ರೂಪಚಿನ್ಮಯಕಾಯ|ಅರಿದರಧೃತಹಸ್ತಹಸ್ತವರದಅಭಯ| ಜಯ ಜಯತುಜೀಯಶ್ರೀಧರಾ ಸಮೇತನಾಗಿಹ ಪ್ರೋದ್ಯ ಪೂಷ ಸ್ವಕಾಂತಿ ತೇಜನೇಕೃದ್ಧವೀರ ಮಹಾದ್ಯುಸಹಸ್ರ ಉಲ್ಕ ನಿಜ ಸಚ್ಛಕ್ತ ಲೀಲೆಯಿಂಸರ್ವದಾ ಸರ್ವತ್ರ ಸರ್ವರೋಳ್ ಇದ್ದು ನಿಯಮಿಪ ವಿಭುವೇ ಪರತರ|ಕೃಷ್ಣರಾಮ ನೃಸಿಂಹ ವರಹನೇ ವಿಷ್ಣುವೇ ಪರಂಜ್ಯೋತಿ ಪರಂಬ್ರಹ್ಮ |ವಾಸುದೇವನೆ ಏಕದಶ ಶತಾನಂತರೂಪನಿರ್ದೋಷಗುಣನಿಧೇ |ಎನ್ನ ಪಾಲಿಪ ಪ್ರಭುವೇ ಶ್ರೀಶನೇ ವೇದಹನುಮಶಿವಾದಿ ವಂದ್ಯನೇ || ಬಾರೋ 1ಪ್ರಚುರಅಮಿತ ಆನಂದ ಅವಿಕಾರ ಚಿನ್ಮಯ ಸರ್ವಚೇಷ್ಟಕಕರ್ತಚೇತನಾಚರ ಸರ್ವವಶಿ ಜಗದ್ಭರ್ತಾ ಸೌಂದರ್ಯಸಾರನೆಇಂದ್ರಮಣಿ ದ್ಯುತಿವಂತ ಸೌಭಾಗ್ಯದಾತ |ಚಕ್ರಧರವರ ಅಭಯಹಸ್ತನೇ ಅಜಿತಅಜಜಗದೇಕವಂದ್ಯನೆಉರುದಯಾನಿಧೆ ಭೈಷ್ಮೀ ಸತ್ಯಾರೊಡನೆ ಬಂದು ನಿಂತಿದ್ದಿಲ್ಲಿಪರಮಲಾಭವು ಎನಗೆ ಸುಹೃದನೆ ಭೀಮದ್ರೌಪದಿ ಪಾಂಡವ ಪ್ರಿಯವಿದುರಗೊಲಿದನೆ ದೇವಕೀಸುತ ಸರ್ವಾಭೀಷ್ಟಪ್ರದ ಉದಾರನೆಉತ್ತರಾಸುಧಾಮಉದ್ಧವಗೋಪಿಜನ ಅಕ್ರೂರ ವರದನೇಹಲಧರಾನುಜ ಸುಭದ್ರೆ ಅಣ್ಣ ಷಣ್ಮಹಿಷಿರಮಣನೆ ಶರಣು ಸಂತತ || ಬಾರೋ 2ಸ್ವಾಮಿವೇಂಕಟರಮಣ | ಕುಲದೇವ ಸರ್ವೋತ್ತಮನೆ ಭಕ್ತಪ್ರಸನ್ನಪದ್ಮಾವತೀಶ ಕರುಣಿ ಪಾಲಿಸೋ ಎನ್ನ | ಶ್ರೀವತ್ಸ ಅರಿದರಾಅಭಯವರಕರ ಘನ್ನ | ಅಮಲೇಂದು ವದನಂ ||ಮುಗುಳುನಗೆ ಕಾರುಣ್ಯ ನೋಟವು ಜಗವನಳೆದ ತೀರ್ಥಪದಯುಗತಿರುಮಲೇಶ ಮದ್ಗೇಹನಿಲಯನೆ ರಂಗ ವರದ | ಲಕ್ಷ್ಮೀನೃಸಿಂಹನೆಪೂರ್ಣ ಪ್ರಮತಿಗಳಿಂದ ಪೂಜಿತ ಬೆಣ್ಣೆ ನರ್ತನ ಕೃಷ್ಣರಾಮನೇಇನನಿಗಮಿತ ಸ್ವಕಾಂತಿ ತೇಜನೇ ಕರ್ಣಕುಂಡಲೋಜ್ವಲ ಕಿರೀಟಿಯೆ |ಅನ್ನವಾಹನತಾತಪ್ರಸನ್ನ ಶ್ರೀನಿವಾಸನೆ ಪೂರ್ಣಕಾಮನೇ |ಘನದಯಾಂಬುಧೇ ದೇವ ದೇವಶಿಖಾಮಣಿಯೆ ಬಾ ||ಬಾರೋ ಬಂದಿರೋ ಶ್ರೀಶ|| 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀವ್ಯಾಸರಾಜರು105ಪಾಲಿಸೋ ಯತಿರಾಜ ಪಾಲಿಸೋಪಾಲಿಸೋ ಮುನಿ ವ್ಯಾಸ ರಾಜ | ಜಗ -ತ್ತಲ್ಲಿ ನಿನ್ಮಹಿಮೆ ಸುಭ್ರಾಜ | ಅಹ |ಕಾಲಲ್ಲಿ ಶರಣಾದೆ ಶ್ರೀಲೋಲಪ್ರಿಯ ನಿನ್ನಆಳೆಂದು ಗಣಿಸಿ ಪಾಲಿಪುದೆನ್ನ ಪ್ರತಿಕ್ಷಣ | ಪಾಲಿಸೋ | ಪದಿನಪ ಸುತೇಜ ಬ್ರಹ್ಮಣ್ಯ | ತೀರ್ಥಮುನಿಸಾರ್ವಭೌಮರ ದಿವ್ಯ |ಚಾರುವನರುಹಕರದಿಂದ ಉದಯ | ಇನ್ನುಏನೆಂಬೆ ನಿನ್ನ ಪ್ರಾಬಲ್ಯ | ಅಹ |ದೀನ ವತ್ಸಲ ನಿನ್ನ ಶರಣು ಹೊಕ್ಕೆನು ನಾನುಎನ್ನ ಭಾಗ್ಯೋದಯ ತವ ಕಾರುಣ್ಯದಿ ಇನ್ನು 1ಕರುಣಿ ಸುಶಾಂತ ಸುವರ್ಣ | ವರ್ಣತೀರುಥಕರ ಕಂಜೋತ್ಪನ್ನ | ಸುಸ್ಥಿರ ವರಭಕ್ತಿವಿಜ್ಞಾನ| ಸಂ-ಪನ್ನ ಶ್ರೀ ಪಾದಾರ್ಯರನ್ನ | ಅಹ |ಸೇರಿ ಸೇವಿಸಿ ವಾದಿಕರಿಪಂಚಾನನಾದಸೂರಿಸಜ್ಜನನುತ ವ್ಯಾಸ ಮುನೀಂದ್ರ2ಮಾಲೋಲ ಕೃಷ್ಣಸುಪ್ರಿಯರು |ನಿತ್ಯಕಾಳೀಶ ನಿಮ್ಮೋಳ್ ಪ್ರಚುರರು | ಮತ್ತುವ್ಯಾಳೇಶ ಅಂಶ ಸಂಯುತರು | ಎಂದುಹೇಳೋರು ಹೀಗೆ ವಿಬುಧರು | ಅಹ |ಕೀಳುವಿಷಯದಿ ಎನ್ ಮನ ಸೋಲದೇ ಹೊರಒಳಗಿಪ್ಪ ಹರಿರೂಪ ವ್ಯಾಳೆ ವ್ಯಾಳೆಗೆ ತೋರು 3ದ್ವಾಸಪ್ತತಿ ಸºಸ್ರ | ನಾಡಿತತ್ರಸ್ಥರೂಪಸಮೀರ| ಅವನವಿಂಶತಿ ಮೇಲೇಳು ನೂರು | ಪ್ರತಿಮನೀ ಸ್ಥಾಪಿಸದಿಯೋ ಹೇ ಧೀರ | ಅಹಈ ಸಮಸ್ತ ಹನುಮರೂಪ ಒಂದೊಂದರೊಳ್ಶತರೂಪ ಸ್ಮರಣೀಯ ಶ್ರೀಶ ಸಾಸಿರ ನಾಮ 4ಸಾತ್ಯವತೀಯ ವೇದಾರ್ಥ | ಅರಿತುಮಧ್ಯಗೇಹನು ವಿವರಿಸಿದ | ಆಗಜಯರಾಯ ತತ್ ಟೀಕೆ ಬರೆದ | ಈಗವ್ಯಾಸರಾಯನು ವಿವರಿಸಿದ | ಅಹಮಿಥ್ಯಾ ತತ್ವವ ಪೇಳ್ದ ಮಾಯ್‍ಗಳ ಬಾಯ್ ಮುಚ್ಚಿನಿತ್ಯಸುಖವನೀವ ತತ್ವ ಬೋಧಿಸಿದಿ5ಮಾರ್ತಾಂಡಕತ್ತಲೆ ಕಳೆವ | ತರ್ಕತಾಂಡವ ದುಸ್ತರ್ಕ ತರಿವ |ಬಂಡುಮಿಥ್ಯಾವಾದಿಗಳ ದುರ್ಮತವ | ತುಂಡುತುಂಡುಮಾಡಿದ ನ್ಯಾಯಾಮೃತವ | ಅಹಕೊಂಡಾಡಳಲವೇ ಚಂದ್ರಿಕಾಈವಆಹ್ಲಾದವಬ್ರಹ್ಮಾಂqದೊಡೆಯನ ಅಮೃತ ಪ್ರಸಾದವ 6ಪ್ರಣವಮಂತ್ರದಿ ಲಕ್ಷ್ಮೀರಮಣ | ಎಂಟುವರ್ಣ ಮಂತ್ರದಿ ಶ್ರೀರಮಣ | ವಿಷ್ಣುಷಡ್ವರ್ಣದಲ್ಲಿ ಸತ್ಯಾರಮಣ ಹಾಗೂವರ್ಣ ಸರ್ವದಿ ರಮಾ ರಮಣ | ಅಹಧ್ವನಿ ವರ್ಣ ಪ್ರತಿಪಾದ್ಯ ಸತ್ತಾದಿದಾತಅನುತ್ತಮಹರಿರೂಪಗುಣಕ್ರಿಯಾ ಹಾಡಿದಿ7ಭೂಪನ ಹರಿಯಾಸನವ ನೀ ಏರ್ದಿ | ಏರಿನೃಪವರನಪಮೃತ್ಯು ತರಿದಿ | ಯತಿತಪಸ್ವಿಗಳಿಗೆ ಪಾಠ ಪೇಳ್ದಿ | ಸರ್ವವಿಭುದರಿಂದಲಿ ಪೂಜ್ಯನಾದಿ | ಅಹ |ಗೋಪಾಲ ಅಸುಪಾಲನ್ನೊಲುಮೆ ನಿನ್ನಲ್ಲೆಷ್ಟೋಶ್ರೀಪನ ದಾಸವೃಂದಬ್ಜ ಕೂಟಕೆ ಸೂರ್ಯ 8ನರಸಿಂಹ ಗೋಪಾಲ ಕೃಷ್ಣ | ಯಜÕವರಾಹಪಟ್ಟಾಭಿರಾಮನ್ನ | ಬಹುಪರಾಶರ್ಯಾದಿ ರೂಪನ್ನ |ನಿತ್ಯನಿರುತ ಸಂಪೂಜಿಪ ಘನ್ನ | ಅಹವರಭಕ್ತಾಗ್ರಣಿ ನೀನು ಸರಸಿಜಾಸನ ಪಿತ'ಪ್ರಸನ್ನ ಶ್ರೀನಿವಾಸ' ನ್ನೊಲಿಸೋ ಎನಗೆಜೀಯ9 ಪ|| ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು