ಒಟ್ಟು 77 ಕಡೆಗಳಲ್ಲಿ , 27 ದಾಸರು , 74 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅ) ಶ್ರೀಹತಿಸ್ತುತಿಗಳು ಜಗದುದರನು ಹರಿ ಸೂತ್ರಧಾರಂ ನಗಿಸುವ ಅಳಿಸುವ ಕಾರಕನಿವ ತಾಂ ಪ ಪರಿಪರಿ ಸೃಷ್ಟಿಸುತಾ ಸಲಹುವನು ಅರಿವಿಂದವುಗಳ ಲಯಗೈಸುವನು ಭರಿತನು ಸಕಲ ಚರಾಚರಂಗಳಲಿ ನಿರುತವೆಲ್ಲ ತರತಮದಿಂದಾರಿಸಿ ಇರುವನು ಪರಮಾತ್ಮನು ಸರ್ವೇಶಂ 1 ನಿತ್ಯನಿರ್ಮಲನು ಸತ್ಯಸನಾತನು ಅತ್ಯಂತನು ಗುರುವನಂತನು ಮೃತ್ಯುನಿಯಾಮಕ ಮುಕ್ತಿಪ್ರದನು ಭೃತ್ಯವರ್ಗ ಸಂರಕ್ಷ ಶಕ್ತನು ಮತ್ತೊಂದಕು ಸಹ ಮೂಲನು 2 ಅಣೋರಣೀವನು ಮಹತೋಮಹೀಮನು ಗುಣಗಣಭರಿತನಗಣ್ಯನು ಕ್ಷಣಮಾದಲನು ಕಂಟಕನು ಕಾಲನು ತೃಣಮೊದಲು ಬ್ರಹ್ಮಾಂಡನು ಧೀರನು ಘನಮಹಿಮನು ಶ್ರೀ ಜಾಜೀಶಂ 3
--------------
ಶಾಮಶರ್ಮರು
279ಹನುಮ ಭೀಮಾನಂದ ಮುನಿರಾಯ ಎನ್ನದು ಸಲಹೆಂದು ಬಿನ್ನೈಪೆವಿ ಜ್ಞಾನ ರೂಪ ವಿಜಿತಾತ್ಮ 1 280ತ್ರಿದಶವಿಂಶತಿ ರೂಪ ಸುದತಿಯಿಂದೊಡಗೊಡಿ ಪದುಮಜಾಂಡದೊಳು ಸರ್ವತ್ರ | ಸರ್ವತ್ರ ಭಕುತರಾ ಬದಿಗನಾಗಿದ್ದು ಸಲಹುವಿ 2 281ಕೋಟಿತ್ರಯ ಸ್ವರೂಪಿ ದಾಟಿಸು ಭವಾಬ್ಧಿಯ ನಿ ಭಯಹಾರಿ ರಣದೊಳು ಕಿ ರೀಟಿಯ ಕಾಯ್ದಿ ಧ್ವಜನಾಗಿ 3 282ಪ್ರಾಣನಾಯಕ ನಿನ್ನ ಕಾಣ ಬೇಕೆಂದೆನುತ ಸಾನುರಾಗದಲಿ ನಮಿಸುವೆ | ನಮಿಸುವೆನು ಮೂಜಗ ಪರಮೇಷ್ಟಿ 4 283ಚತುರವಿಂಶತಿ ತತ್ವ ಪತಿಗಳೊಳಗೆ ಗರುವ ನತಿಸುವೆನು ನಿನ್ನ ಚರಣಕ್ಕೆ | ಚರಣಕಮಲವ ತೋರಿ ಕೃತ ಕೃತ್ಯನೆನಿಸೊ ಕೃಪೆಯಿಂದ 5 284ಮೂರೇಳು ಸಾವಿರದ ಆರ್ನೂರು ಮಂತ್ರವ ಈರೇಳು ಜಗದಿ ಜನರೊಳು | ಜನರೊಳು ಮಾಡಿ ಉ ದ್ಧಾರ ಗೈಸುವಿಯೊ ಸುಜನರ 6 285ಪವಮಾನರಾಯ ನೀ ತ್ರಿವಿಧ ಜೀವರೊಳಿದ್ದು ವಿವಿಧ ವ್ಯಾಪಾರ ನೀ ಮಾಡಿ | ನೀ ಮಾಡಿ ಮಾಡಿಸಿ ಅವರವರ ಗತಿಯ ಕೊಡುತಿಪ್ಪ 7 286 ಮಿಶ್ರ ಜೀವ ರೊಳಿದ್ದು ಮಿಶ್ರಜ್ಞಾನವನಿತ್ತು ಮಿಶ್ರ ಸಾಧನವ ನೀ ಮಾಡಿ | ನೀ ಮಾಡಿ ಮಾಡಿಸಿ ಮಿಶ್ರಗತಿಗಳನೆ ಕೊಡುತಿಪ್ಪೆ 8 287ಅನಿಲದೇವನೆ ದೈತ್ಯದನುಜ ರಾಕ್ಷ ಸರೊಳಿದ್ದು ಅನುಚಿತ ಕುಕರ್ಮ ನೀ ಮಾಡಿ | ನೀ ಮಾಡಿ ಮೋಹಿಸಿ ದಣಿಸುವಿಯೊ ಅವರ ದಿವಿಜೇಶ 9 288ಕಾಲನಿಯಮಕನೆ ಕಾಲತ್ರಯಾದಿಗಳಲ್ಲಿ ಕಾಲ ಕರ್ಮ ಅನುಸಾರ | ಅನುಸಾರವಿತ್ತು ಪಾಲಿಸುವಿ ಜಗವ ಪವಮಾನ10 289ಆಖಣಾಶ್ಮನೆ ನಿನ್ನ ಸೋಕಲರಿಯವು ದೋಷ ಶ್ರೀಕಂಠ ಮುಖ್ಯ ಸುರರಿಗೆ | ಸುರರಿಗಿಲ್ಲವು ಭಾರ ತೀಕಾಂತ ನಿನಗೆ ಬಹದೆಂತೊ 11 290 ಕಲ್ಯಾದಿ ದೈತ್ಯಕುಲದಲ್ಲಣ ದಯಾಸಾಂದ್ರ ಬಲ್ಲಿದನು ಜಗಕೆ ಭಯದೂರ | ಭಯದೂರ ಭಕ್ತರ ನೆಲ್ಲ ಕಾಲದಲ್ಲಿ ಸಲಹಯ್ಯ 12 291ಕಾರುಣ್ಯನಿಧಿ ಜಗದ ಉದ್ಧಾರಕನು ನೀನೆ ಉ ದ್ಧಾರ ಮಾಡದಿರೆ ಭಕುತರ | ಭಕುತರನು ಕಾವ ರಿನ್ನಾರು ಲೋಕದಲಿ ಜಯವಂತ 13 292ತ್ರಿಜಗದ್ಗುರುವರೇಣ್ಯ ಋಜುಗಣಾಧಿಪ ಪಾದಾಂ ಬುಜ ಯುಗ್ಮಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಮನ್ಮನದಿ ನಿಜರೂಪ ತೋರಿ ಸಂತೈಸೊ 14 293ಅನಿಲದೇವನೆ ನಿನ್ನ ಜನುಮ ಜನುಮಗಳಲ್ಲಿ ಎಂದೆಂದು ವಿಷಯ ಚಿಂ ತನೆಯ ಕೊಡದೆನ್ನ ಸಲಹೆಂದು 15 294ತಾರತಮ್ಯ ಜ್ಞಾನ ವೈರಾಗ್ಯಭಕ್ತಿ ಧಾರಡ್ಯವಾಗಿ ಇರಲೆಂದು | ಇರಲೆಂದು ಬಿನ್ನೈಪೆ ಭಾರತೀರಮಣ ನಿನಗಾನು 16 295 ಮರಣ ಜನನಗಳು ಬಂದರೆ ಬರಲಿ ಪ್ರದ್ವೇಷ ಗುರು ಹಿರಿಯರಲ್ಲಿ ಹರಿಯಲ್ಲಿ | ಹರಿಯಲ್ಲಿ ಕೊಡದೆ ಉ ದ್ಧರಿಸಬೇಕೆನ್ನ ಪರಮಾಪ್ತ 17 296ವಿಷಯದಾಸೆಗಳ ಬಿಡಿಸಿ ಅಸುನಾಥ ಎನ್ನ ಪಾ ಲಿಸಬೇಕು ಮನವ ನಿನ್ನಲ್ಲಿ | ನಿನ್ನಲ್ಲಿ ನಿಲಿಸಿ ಸಂ ತಸದಿ ಕಾಯೆನ್ನ ಮರುದೀಶ 18 297 ವಾಯು ಹನುಮದ್ಭೀಮರಾಯ ಮಧ್ವರ ಸ್ತೋತ್ರ ಬಾಯೊಳುಳ್ಳವಗೆ ಜನ್ಮಾದಿ | ಜನ್ಮಾದಿ ರೋಗಭಯ ವೀಯನೆಂದೆಂದು ಭಗವಂತ 19 298ಮಾತರಿಶ್ವನೆ ಎನ್ನ ಮಾತುಗಳ ಲಾಲಿಸಿ ಜಗ ನ್ನಾಥ ವಿಠಲನ್ನ ಮನದಲ್ಲಿ | ಮನದಲ್ಲಿ ತೋರಿ ಭವ ಭೀತಿಯನು ಬಿಡಿಸೊ ಭವ್ಯಾತ್ಮ 20 299 ನಮ್ಮ ಗುರುಗಳ ಪಾದ ಒಮ್ಮೆ ನೆನೆಯಲು ಆ ಜನ್ಮ ಕೃತ ಪಾಪ ಪರಿಹಾರ | ಪರಿಹಾರವಾಗಿ ಸ ದ್ಬೊಮ್ಮಪದವಿಯಲಿ ಸುಖಿಸುವಿ 21 300ಮೂರೇಳು ಸಾವಿರದ ಆರುನೂರು ಹಂಸ ಮೂರು ಮಂತ್ರಗಳ ಜನರೊಳು | ಜನರೊಳು ಮಾಡ್ವ ಸ ಮೀರನ ಅಡಿಗೆ ಶರಣೆಂಬೆ 22 301ಅಂಜಿದವರಿಗೆ ವಜ್ರಪಂಜರನೆನಿಪ ಪ್ರ ಭಂಜನ ಪ್ರಭುವೆ ಪ್ರತಿದಿನ | ಪ್ರತಿದಿನ ನಮ್ಮ ಭಯ ಭಂಜಿಸಿ ಕಾಯೊ ಬಹುರೂಪ 23 302ಭವಿಷ್ಯದ್ವಿಧಾತನೆ ತವ ಚರಣ ಸೇವಿಪೆನು ಶ್ರವಣ ಮನನಾದಿ ಭಕುತಿಯ | ಭಕುತಿ ನಿನ್ನಲ್ಲಿ ಮಾ ಧವನಲ್ಲಿ ಕೊಟ್ಟು ಸಲಹಯ್ಯ24 303ಕಲಿಮುಖ್ಯ ದೈತ್ಯರುಪಟಳವ ಪರಿಹರಿಸಿ ಮ ಸಿಂಧು ನಿ ನ್ನೊಲುಮೆಯೊಂದಿ ಹರಿಕಾಯ್ವ 25 304 ಭಾರತೀ ರಮಣ ಮದ್ಭಾರ ನಿನ್ನದು ಎನ್ನ ಪಾರ ದೋಷಗಳ ಎಣಿಸದೆ | ಎಣಿಸದೆ ಸಂತೈಸೊ ಸಿಂಧು ಎಂದೆಂದು 26 305ಶ್ರೀಶಸದ್ಮನೆ ಜೀವರಾಶಿಯೊಳಗೊಂದಧಿಕ ವಿಂಶತಿ ಸಹಸ್ರದಾರ್ನೂರು | ಆರ್ನೂರು ಹಗಲಿರುಳು ಶ್ವಾಸ ಜಪಮಾಡಿ ಹರಿಗೀವಿ 27 306ತಾಸಿಗೊಂಭೈ ನೂರು ಶ್ವಾಸಜಪಗಳ ಮಾಡಿ ಬೇಸರದೆ ನಮ್ಮ ಸಲಹುವಿ | ಸಲಹುವಿ ಶ್ರೀ ಭಾರ ತೀಶ ನಿನ್ನಡಿಗೆ ಶರಣೆಂಬೆ 28 307ಬಲದೇವ ನೀನೆ ಬೆಂಬಲವಾಗಿ ಇರಲು ದು ರ್ಬಲ ಕಾಲಕರ್ಮ ಕೆಡಿಸೋದೆ | ಕೆಡಿಸೋದೆ ನಿನ್ನ ಹಂ ಬಲು ಉಳ್ಳ ಜನರ ಜಗದೊಳು 29 308ಹಾಲಾಹಲವನುಂಡು ಪಾಲಿಸಿದೆ ಜಗವ ಕರು ಣಾಳು ಪವಮಾನ ವಿಜ್ಞಾನ | ವಿಜ್ಞಾನ ಭಕುತಿ ಶ್ರೀ ಲೋಲನಲಿ ಕೊಟ್ಟು ಸಲಹಯ್ಯ 30 309ವಾತಾತ್ಮಜನೆ ನಿನ್ನ ಪ್ರೀತಿಯನೆ ಪಡೆದ ಖ ಪೊರೆದಂತೆ ಪೊರೆಯೆನ್ನ ನೀನಿಂತು ಕ್ಷಣದಿ ಕೃಪೆಯಿಂದ 31 310ಅಪರಾಜಿತನೆ ಮನದೊಳಪರೋಕ್ಷವಿತ್ತೆನಗೆ ಸುಖವೀಯೊ ಭಾವಿ ಲೋ ಕಪಿತಾಮಹನೆ ಎನಗೆ ದಯವಾಗೊ 32 311 ಬುದ್ಧಿ ಬಲ ಕೀರ್ತಿ ಪರಿಶುದ್ದ ಭಕ್ತಿಜ್ಞಾನ ಸದ್ಧೈರ್ಯಾಜಾಡ್ಯ ಆಯುಷ್ಯ | ಆಯುಷ್ಯ ವಿತ್ತಭಿ
--------------
ಜಗನ್ನಾಥದಾಸರು
ಅಮ್ಮಮ್ಮ ಗೋಪಿಯೆನೆ ಏನೆಂಬೆ ಪರ ಬೊಮ್ಮ ಮಗನೆಂಬೊ ಧೈರ್ಯಕೆ ಪ. ಬೊಮ್ಮನಯ್ಯನ ಸಿರಿರಮ್ಮೆ ಪತಿಯ ಘನ ಪೆರ್ಮೆ ಗುಣಗಣನಿಲಯನ ಅ.ಪ. ಹೊಳೆವ ಶ್ರೀರೂಪು ವಟಪತ್ರದಲ್ಲಿ ಪ್ರಳಯಜಲಧಿಯ ಶಯನನ ಸೆಳೆಮಂಚದ ಮ್ಯಾಲೆ ಮಗ್ಗುಲೊಳಿಟ್ಟು ತನ್ನ ಗೋಪಿ 1 ಚರಾಚರಂಗಳ ಸೃಷ್ಟಿ ಸ್ವಯಿಚ್ಛೆಯಿಂದ ಪುರುಷರೂಪವ ಧರಿಸಿದ ಪರಮಮಂಗಳ ಮೂರುತಿಯ ತನ್ನ ಗೋಪಿ 2 ಕತ್ತಲೆಯನು ನುಂಗಿ ತತ್ವಂಗಳನು ಕೊಂಡು ಮತ್ತೆ ಬೊಮ್ಮಾಂಡದೊಳಗೆ ಪೊಕ್ಕು ತತ್ವಸಾರದಿಂದೊಪ್ಪುವ ಕೊಮರನ ಗೋಪಿ 3 ಅದಭ್ರಸೃಷ್ಟಿಗಳಿಗಗೋಚರನಾದ ಆದಿಮೂರುತಿ ¸ಚ್ಚಿದಾನಂದನ ಸದಾ ತನಯನೆಂದೆತ್ತಿ ಮುದ್ದಿಸಿ ಸುಖ ಗೋಪಿ 4 ಚತುರುಭುಜ ಶಂಖ ಚಕ್ರ ಗದೆ ಪದುಮ ಸುತಪ ಪ್ರಶ್ನೆಗೆ ವರವಿತ್ತ ಶ್ರುತಿಶಿರೋಮಣಿಯೆಂದರಿಯದೆ ತಾ ಗೋಪಿ 5 ಬೊಮ್ಮಕಲುಷಾನಂತ ಸಹಸ್ರಗಳ ನಿಮಿಷಮಾತ್ರದಿ ಪಡೆದನ ಬೊಮ್ಮಾಂಡವೆ ತನ್ನ ರೋಮಕೂಪದಲ್ಲಿಪ್ಪ್ಪ ರನ್ನವೆ ಮಗನೆಂದಳೆ ಗೋಪಿ6 ಅನ್ನಂತ ರವಿತೇಜಕಿರೀಟದ ಅನ್ನಘ್ರ್ಯ ಸರ್ವಾಭರಣ ಪೊನ್ನ ವಸ್ತ್ರವನ್ನುಟ್ಟ ಅದ್ಭ್ಬುತ ಬಾಲಕನ ಗೋಪಿ 7 ಅನ್ನಂತಾನಂತ ಜೀವಗಣಗಳು ಅನ್ನಂತಾನಂತ ಕರ್ಮಗಳು ಅನ್ನಂತಾನಂತ ಗಾಯತ್ರಿಗೆ ಕÀರ್ತೃ ವಿಷ್ಣು ಗೋಪಿ 8 ಅನ್ನಂತಾಸನ ಶ್ವೇತದ್ವೀಪ ವೈಕುಂಠ ದನ್ನವರತ ವಾಸವಾಗಿಪ್ಪನ ಅನ್ನಿಮಿಷರ ಯೋಚನೆಗೆ ಒಲಿದನ ಗೋಪಿ 9 ಧರ್ಮದÀ ವೃದ್ಧಿಗೆ ಧರ್ಮದ ಹಾನಿಗೆ ತನ್ನಿಚ್ಛೆಯಲವತರಿಸಿದ ಮಮ ಪ್ರಾಣಾಹಿ ಪಾಂಡವನೆನಿಸಿದ ಗೋಪಿ 10 ಉದ್ದಾಮ ಕಾಂಚೀದಾಮ ಕಂಕಣ ಶ್ರೀ- ಮುದ್ರೆಯ ಶ್ರೀವತ್ಸಕೌಸ್ತುಭಧರನ ಮಧ್ವಮುನಿಗೆ ತಾನೊಲಿದು ಬಂದನ ಗೋಪಿ 11 ಸರಸಿಜಬೊಮ್ಮಾಂಡ ಒಡೆದಾಗ ವಿರಿಂಚಿ ತೊಳೆದ ಪಾದೋದಕವ ಹರ ಸೇವಿಸಲಾಗ ಶಿವನ ಮಾಡಿದ ಹರಿಯ ಮಗನೆಂದಳೆ [ಗೋಪಿ] 12 ದೇವಕಿ ಉದರದಲ್ಲಿದ್ದಾಗ ಬ್ರಹ್ಮಾದಿ ದೇವರಿಂದಲ್ಲಿ ಕೀರ್ತಿಸಿಕೊಂಡು ಭಾವಕಿ ದೇವಕಿ ವಸುದೇವನಲ್ಲಿ ಪಿತೃ ಗೋಪಿ 13 ಶಿಶುರೂಪವ ತೋರಿದ ಬೊಮ್ಮನ ಕಂಡು ವಸುದೇವಗೆ ನದಿ ಎಡೆ ಬಿಡೆ ಸಾಸಿರನಾಮ ಚಿತ್ರವಾಗಿದ್ದ ಜಗ- ಗೋಪಿ 14 ಪಾಲಗಡಲಲ್ಲಿ ಪವಡಿಸಿಪ್ಪನ ಕಾಲಮೇಲೆ ಮಲಗಿಸಿಕೊಂಡು ನೀಲಮೇಘಶ್ಯಾಮಯೆಂದು ಬಣ್ಣಿಸುತಲಿ ಗೋಪಿ 15 ಆದಿದೇವನು ಬ್ರಹ್ಮಸೂತ್ರವ ಕಲ್ಪಿಸಿ ವೇದ ವಿಭಾಗವ ಮಾಡಿದನ ಆದರದಿಂತುಂತೆಂದು ಕಲಿಸಿ ಸಂ ಗೋಪಿ 16 ಭಾನುಶತಕೋಟಿತೇಜಪ್ರಕಾಶನ್ನ ಆನಂದವನೆ ನೋಡಿ ಮನ ಉಬ್ಬಿ ಆನಂದನಿಧಿಯ ತೊಡೆಯ ಮ್ಯಾಲೆಯಿಟ್ಟು ಗೋಪಿ 17 ಶೃಂಗಾರನಿಧಿಯನ್ನು ಬಾಯೆಂದು ಕರೆದು ರ- ಥಾಂಗಪಾಣಿಯನೆ ಎತ್ತಿಕೊಂಡು ತಿಂಗಳನೋಡಯ್ಯ ಕಂದ ಎಂದಾತನ ಗೋಪಿ 18 ಸನ್ನಕಾದಿಗಳಯ್ಯನ ಪಿತನ ಕರೆ ದೆನ್ನ ಮಾಣಿಕವೆಯೆಂದಪ್ಪಿಕೊಂಡು ಹೊನ್ನ ತಾ ಗುಬ್ಬಿಯೆಂದಾಡು ಎನ್ನಯ್ಯನೆ ಗೋಪಿ 19 ಗಂಭೀರವಾರಿಧಿಗೆ ಅಂಬಾ ಹೂಡಿದ ತೋಳು ಇಂದಿರೆಯನೆ ಅಪ್ಪಿದ ತೋಳು ಶಂಭರಾರಿಯ ಪಿತ ತೋಳನ್ನಾಡೈ ಎಂದು ಗೋಪಿ 20 ಪಾದ ಉ- ದ್ದಂಡ ಬಲಿಯಮೆಟ್ಟಿದ ಪಾದ ಪುಂಡರೀಕಾಯತವಾದ ಪಾದದಿ ಪ್ರ- ಗೋಪಿ 21 ನಿತ್ಯತೃಪ್ತನು ಹಸ್ತ (ಸಿದ?) ನೆಂದೆನುತಲೆ ಇತ್ತ ಬಾ ಹೊರೀಯೆಂದಾದರಿಸಿ ಹೊತ್ತಾರಿಂದಮ್ಮೆ ಉಣ್ಣದಿರಲು ಹೊಟ್ಟೆ ಗೋಪಿ 22 ಅಮ್ಮೆ ಉಂಬುವ ಪುಟ್ಟ ಬಾಯ ಮುದ್ದಿನ ಮಾ ರಮ್ಮೆಯನರಸುವನಚ್ಚರಿಯ ಅಮ್ಮೆ ನೋಡಿ ನಗುವ ಮುದ್ದು ಬಾಲಕನ ಪರ ಗೋಪಿ 23 ತಾಯ ಮೊಗವ ನೋಡುತ್ತಾಕಳಿಸುತ ಬಾಯಲ್ಲೀರೇಳುಲೋಕವ ತೋರೆ ಆಯತೆ ನೋಡಿ ಮರಳಿ ಕಂಗೆಟ್ಟು ವಿಶ್ವ- ಗೋಪಿ 24 ಜ್ಞಾನಘನನ ವಿಶ್ವತೋನಯನನ ಆನಂದಚರಿತ್ರನ ಅವ್ಯಕ್ತನ ಜ್ಞಾನಿಗಳ ಹೃತ್ಕಮಲದೊಳಿಹನ ಕಣ್ಣಮುಚ್ಚಿ ಗೋಪಿ 25 ಹಾಲ ಹರವಿಯ ಒಡೆದು ಬಂದು ಗೋ- ಪಾಲ ನೀನೆಲ್ಲಿಗೆ ಪೋದೆಯೆಂದು ಕಾಲಕರ್ಮಂಗಳಿಗೆ ಕಾರಣವಾದೋನ ಗೋಪಿ 26 ಜಗದುದರ ಜಂಘಿಸುತ ಅಡಿಯಿಡೆ ಮೃಗಲೋಚನೆ ಮೈಮರೆದಿರೆ ಅಗಣಿತಮಹಿಮನು ಚರಿಸುತ ಬರ ಗೋಪಿ 27 ಆಮ್ಮಹಾ ಮತ್ತಿಯ ಮರನ ಮುರಿದು ಸುರರು ಜಯವೆನ್ನೆ ಶ್ರೀಮಣಿ ಶಿವರಿಂದ ಕೀರ್ತಿಸಿಕೊಂಬ ಗೋಪಿ 28 ಕತ್ತಲೆಯೊಳಗಿದ್ದು ಅಂಜಿದ ಮಗನೆಂದು ಶ್ರುತಿಮಂತ್ರಗಳಿಂದುಚ್ಚರಿಸಿ ಮೃತ್ಯುಂಜಯನ ಪಿರಿಯನೆತ್ತಿಕೊಂಡು ಗೋಪಿ 29 ಶೇಷಶಾಯಿಯ ಹಾಸಿ ಮಲಗಿಸಿ ಚಾರು- ವೇಷನ್ನ ನಿದ್ರಿಗೈಸುವೆನೆಂದು ಸಾಸಿರಮುಖಭೂಷಣನ ಪಾಡುತ್ತ ಸಂ- ತೋಷದಿ ಮೈಮರೆದಳೆ ಗೋಪಿ30 ತ್ರಿಗುಣಾತೀತನ್ನ ಪೊಂದೊಟ್ಟಿಲೊಳ್ಮಲಗಿಸಿ ಜೋಗುಳ ಪಾಡುವ ಯಶೋದೆÉಯ ಎಸೆವ ನೀಲವಸ್ತ್ರನು ಪಾಡೆನ್ನೆ ಕೃಷ್ಣ ಅನು- ಗೋಪಿ 31 ಹರಿಯ ಹೊರಿಸುವಳಲ್ಯಲ್ಲಿ ನಿಮ್ಮಣ್ಣ ವರ ಸಿಂಹಾಸನವಾಗಿಪ್ಪನೆಂದು ಸಿರಿಯಕೂಡೇಕಾಂತದಲಿಪ್ಪನ್ನ ಗೋಪಿ 32 ಪಾದ ನಿಮ್ಮಣ್ಣನ ಶಿರದಲೊಪ್ಪಿದೆÀಯೆಲೆ ಕಂದ ಸುರವರರ ಭಾಗ್ಯನಿಧಿಯೆ ಬಲರಾಮ ಗೋಪಿ 33 ಕಣ್ಣಮುಚ್ಚಿದ ಕೃಷ್ಣನೆಂದು ತೊಟ್ಟಿಲ ಬಿಟ್ಟು ಪುಣ್ಯಾಂಗನೆ ಮೈಮರೆದಿರೆ ಅಣ್ಣ ಆಶನು ಬೆಣ್ಣೆಯ ಕಳಹೋದ ಚಿಣ್ಣನ ಕಾಣೆನೆಂದಳೆ ಗೋಪಿ34 ನೀಲಾಂಬರನ ಬೆನ್ನ ಮೆಟ್ಟಿ ನೆಲವಿನ ಮ್ಯಾಲಿನ ಬೆಣ್ಣೆಯ ಮೆಲ್ಲೆ ಕೃಷ್ಣ ಬಾಲಕಿಯರು ಕೂಡಿ ಕಳ್ಳ ಸಿಕ್ಕಿದನೆಂದು ಗೋಪಿ 35 ಹುಟ್ಟ್ಟದ ಬೆಳೆಯದ ಹಸುಳೆ ಅಣ್ಣನ ಬೆನ್ನ ಮೆಟ್ಟಿ ನೆಲವು ಜಗ್ಗಿದನೆಂದು ರಟ್ಟು ಮಾಡಿದಿರೆಲ್ಲ ನೋಡಿರವ್ವಾ ಎನ್ನ ಗೋಪಿ 36 ಕಂದನ ಎತ್ತಿಕೊಂಡು ರಾಜ್ಯದಂಗನೆಯರ ಮಂದಿರವನೆ ಪೊಕ್ಕು ಬರುತಿರೆ ಒಂದೊಂದು ಕೌತುಕವನೆ ಕಂಡಾನಂದ ಗೋಪಿ 37 ಶಶಿಮುಖಿಯಂಗಳದ ಹಾಲಹಳ್ಳ ಮೊಸರ ಮಡುವು ಬಾಗಿಲ ಮುಂದೆ ಪ್ರಸಾದವೆಲ್ಲ ಬೆಣ್ಣೆ ಫಲಿತವಾಗಿರೆ ಗೋಪಿ 38 ವಾರಿಧಿಯೊಳಗಿದ್ದ ಪನ್ನಗಶಾಯಿಯ ತೇರ ಮೇಲೆ ಇದ್ದ ಬಾಲಕನ ಮೂರುತಿ ಒಂದೆಂಬೋ ಅ- ಗೋಪಿ 39 ದ್ರೌಪದಿಗಕ್ಷಯವಿತ್ತನ ಗುರು ಸಾಂ- ದೀಪಗೆ ಸುತನ ತಂದಿತ್ತನ ಪ್ರೀತಿಯಿಂದಲಿ ಯಜ್ಞಪತ್ಯರಿಗೊಲಿದ ಸುಪ್ರ- ಗೋಪಿ 40 ಘಾತಪುತ್ರರ ಆರು ಮಂದಿಯ ತರಹೇಳಿ ಮಾತೆಯೆಚ್ಚರಿಸೆ ಅಂಗೀಕರಿಸಿ ಅತಿ ಬೇಗದಿಂದಣ್ಣನ ತಂದು ತೋರಿದ ಅ- ಗೋಪಿ 41 ಭಕುತ ಶ್ರುತದೇವ ಬಹುಳಾಶ್ವರಾಯಗೊಲಿ ದೇಕ ಕಾಲದಿ ರೂಪೆರಡಾಗಿ ಆ ಕರುಣಾಬ್ಧಿಯ ಮಾಯಾರೂಪಿÀನ ಪರಿ- ಗೋಪಿ 42 ಪೂತನಿ ಶಕಟವತ್ಸಾಸುರ ವೃಷಭÀನ ಪಾತಕಿ ಚಾಣೂರ ಕುಂಜರನ ಘಾತಿಸಿ ಕಂಸನ್ನ ರಂಟೆಯಾಡಿದ ಬಲು ಭೂತನ್ನ ಮಗನೆಂದಳೆ ಗೋಪಿ43 ಬಾಲತನದಲ್ಲಿ ಸಖನಾಗಿ ಬಂದು ಕು- ಚೇಲ ತಂದವಲಕ್ಕಿಯ ಧರಿಸಿ ಮೇಲುತನದಿಂದ ಸೌಭಾಗ್ಯವಿತ್ತ ಶ್ರೀ ಲೋಲನ್ನ ಮಗನೆಂದಳೆ ಗೋಪಿ&ಟಿbsಠಿ
--------------
ವಾದಿರಾಜ
ಅವಧೂತಾ ನೀ ಅವಗುಣಗಳ ನಿರ್ಧೂತಾ ದೇವನಹುದೋ ಶ್ರೀನಾಥಾ ಧ್ರುವ ಭಾವಿಸಿ ನೋಡಲು ಭಾವಕತೀತ ಭವಹರ ಗುರು ಸಾಕ್ಷಾತ ಪಾವನಗೈಸುವದಯ ಪ್ರಖ್ಯಾತ ದೇವಾದಿಗಳೊಂದಿತ 1 ಝಗಝಗಿಸುವ ಜಗಜ್ಯೋತಿ ಸ್ವರೂಪ ಅಗಣಿಗತುಣೋಪಮೋಪ ತ್ರಿಗುಣರಹಿತ ಚಿದ್ಛನ ಚಿದ್ರೂಪ ಯೋಗಿಜನರ ಪಾಲಿಪ 2 ಇಹಪರದಾತ ಮಹಿಪತಿ ಗುರುನಾಥ ಬಾಹ್ಯಾಂತ್ರ ಸದೋದಿತ ಮಹಾಮಹಿನು ನೀ ಆನಂದಭರಿತ ಸಹಕಾರ ನೀ ಸತತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆನಂದಾದ್ರಿವಿಠಲ | ನೀನೇ ಪೊರೆ ಇವಳಾ ಪ ಜ್ಞಾನಿಜನವಂದ್ಯ ಹರಿ | ಶ್ರೀನಿವಾಸಾಖ್ಯ ಅ.ಪ. ತರಳೆ ಬಹುನೊಂದಿಹಳೊ | ಕರುಣಾ ಮಾಳ್ಪುದು ದೇವದುರಿತವನ ದಾವಾಗ್ನಿ | ಶರಣಜನರೊಡೆಯಾ | ಮರುತ ಮತದಲ್ಲಿರುತೆ | ನೆರೆ ನಂಬಿಬಂದಿಹಳೊಕರುಣದಿಂ ಕೈಗೊಟ್ಟು | ಪರಿಪಾಲಿಸಿವಳಾ 1 ಅನ್ಯದೇವರ ಪೂಜೆ | ಇನ್ನಾದರು ಬಿಡಿಸಿನನ್ನೆಯಿಂ ನಿನ್ನನ್ನೆ | ಪೂಜಿಸುವ ಭಾಗ್ಯಾಇನ್ನಾದರೂ ಕೊಟ್ಟು | ಪನ್ನಂಗಶಯನಹರಿಮನ್ನಿಸೊ ಇವಳ ಹರಿ | ಅನ್ನಂತ ಮಹಿಮಾ 2 ಸಾಧುಜನ ಸದ್ವಂದ್ಯ | ಸತ್ಸಂಗವನೆ ಕೊಟ್ಟುಮಾಧವನೆ ನೀನಾಗಿ | ಕಾದುಕೊ ಹರಿಯೇಭೇಧಮತ ತತ್ವಗಳ | ಬೋಧಿಸುತ ಇವಳೀಗೆಸಾಧನವ ಗೈಸುವುದೋ | ಬಾದರಾಯಣನೇ 3 ಪತಿಸುತರು ಹಿತರಲ್ಲಿ | ವ್ಯಾಪ್ತ ನೀನೆಂಬಂಥಾಮತಿಯನೇ ಕೊಟ್ಟು ಸ | ದ್ಗತಿಯನೆ ಕರುಣಿಸೋ |ಸತತ ನಿನ್ನಯ ನಾಮ | ರತಿಯನೆ ಕರುಣಿಸುತಮತಿಮತಾಂವರರಂಘ್ರಿ | ಭಕ್ತಿಯನೆ ಈಯೋ 4 ಭಾವಜನಯ್ಯ ಎನೆಓವಿ ಬಿನ್ನವಿಪೆ ಹರಿ | ಸಲಿಸುವುದು ಇವನೇವೆಗುರ್ವಂತ ರಾತ್ಮಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಆಳ್ವಾರಾಚಾರ್ಯ ಸ್ತುತಿಗಳು 1. ವಿಶ್ವಕ್ಸೇನ ಪ್ರಾರ್ಥನೆ ಶ್ರೀನಾಥಜ್ಞಾಪ್ರಕಾರ ನಡೆಯುವ ಸೂತ್ರವತೀರಮಣ ಮಾನಿತ ಪ್ರದಾನ ಮಂತ್ರೀ ಪೂಜಿಪೆ ವಿಘ್ನೇಶಾ ನಮಿಪೆ ಪ ಬಿಳಿಯುಡೆ ತುಂಬಿದ ತಿಂಗಳ ಬೆಳಗಾ ತೊಳಗುವ ನಾಲಕು ತೋಳುಗಳ ಒಲಿದಿಹ ನಗೆಮೋಗ ವಿಷ್ಣು ನೆನೆವೆ ಸುಲಭದಿ ಕಾರ್ಯವ ಗೈಸುವನೆ1 ದ್ವಿರದವಕ್ತ್ರತಾ ಮೊದಲಾಗಿರುವ ಪರಿಜನ ನೂರ್ವರಿಂದೊಪ್ಪಿರುವೇ ಪರಿಪರಿ ತಡೆಗಳ ತರಿದೋಡಿಸುತ ಪೊರೆ ವಿಶ್ವಕ್ಸೇನಾಶ್ರಿತ ನಾನು 2 ಬಿಡುಗಣ್ಣರ ಬೆಡಗಿನ ಒಡಲುಳ್ಳ ಕುಡಿನೋಟದ ತಾವರೆಗಣ್ಣ ಪಿಡಿದಹ ಶಂಖ ಚಕ್ರ ಗದಾಯುಧ ಒಡೆಯ ಮುಕುಂದ ದ್ವಾರನಿಲಯನೇ 3 ಬೊಮ್ಮ ಭವಸುರರು ನಯದಿಂ ಮೊದಲಾರಾಧಿಪರು ಶುಭ ಫಲದಾಯಕ
--------------
ಶಾಮಶರ್ಮರು
ಇದು ಬಲು ಸೂಕ್ಷ್ಮ ಸದ್ಗತಿ ಸುಖಸಾಧನ ಧ್ರುವ ಬಯಲಿಗೆ ನಿರ್ಬಯಲಾಗೇದ ಗುಹ್ಯಗೂಢಕೆ ಮೀರ್ಯದ ಸೋಹ್ಯಸೊನ್ನಿದತ್ತಲದೆ ಕೈಯೊಳು ಸಿಲುಕದ 1 ಧ್ಯಾನಮೋನಕ ದೂರ ಏನೆಂದ್ಹೇಳಲಿ ವಿಚಾರ ಅನಂತಗುಣ ಅಪಾರ ‌ಘನ ಪರಾತ್ಪರ 2 ಕಣ್ಣಿನೊಳದೆ ಖೂನ ಧನ್ಯಗೈಸುವ ನಿಧಾನ ಚಿಣ್ಣ ಮಹಿಪತಿಗೆ ಪ್ರಾಣ ಆನಂದ ಘನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸುದಿನ ಶುಭದಿವಸ ನೋಡಿ ಬಂದು ಕೂಡಿದ ಸದ್ಗುರು ದಯಮಾಡಿ ಧ್ರುವ ಮುನ್ನ ಮಾಡಿದ ಸುಪಣ್ಯ ಒದಗಿತು ಭಿನ್ನವಿಲ್ಲದೆ ಸುಚಿನ್ಹ ಹೊಳೆಯಿತು ಧನ್ಯಗೈಸುವ ಸುಫಲದೋರಿತು ಎನ್ನ ಜನುಮ ಸಾಫಲ್ಯವಾಯಿತು 1 ಸ್ವಾಮಿ ಕಂಡೆ ಕಣ್ಣಿನೊಳಂತರಂಗ ಬ್ರಹ್ಮಾನಂದ ಭಾಸುತದೆ ಸರ್ವಾಂಗ ಸಮಾರಂಭದೋರುತದೆ ಸುಸಂಗ ಒಮ್ಮಿಂದೊಮ್ಮೆ ಬಂದ ನೋಡಿ ಶ್ರೀರಂಗ 2 ಗುಹ್ಯ ಒಡೆದು ಹೇಳಲು ಸುವಿಚಾರ ದಯವಿಟ್ಟು ಬಂದ ನೋಡಿದರ ಇಹಪರಕೆ ಸದ್ಗುರು ಸಹಕಾರ ಮಹಿಪತಿಗೆ ಮಾಡಿದ ಮನೋಹರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನಮ್ಮ ಶ್ರೀ ಹರಿ ಕೀರ್ತನಿ ಸಾಧು ಸಜ್ಜನರ ಮೃತಸಂಜೀವನಿ ಸದ್ಗೈಸುವ ದಿವ್ಯ ಸುಸಾಧನಿ ಸದ್ಗುರು ಸುಮೂರ್ತಿ ಪ್ರಾರ್ಥನಿ ಧ್ರುವ ಶಮದಮವೆಂಬೆರಡು ತಾಳಗೂಡಿ ಪ್ರೇಮ ಭಾವನೆ ಧ್ರುಪÀದಿಗಳ ಮಾಡಿ ಸಮರಸವೆ ಮೃದಂಗವಿದು ನೋಡಿ ಸಮದೃಷ್ಟಿಲಿವೆ ನಾಮ ಕೊಂಡಾಡಿ 1 ಸಾವಧಾನವೆಂಬ ನಿರೋಪಣಿ ನಿವಾಂತ ಕೇಳು ವಿಚಾರಣಿ ಈ ವಾಕ್ಯಬಲ್ಲ ಲಕ್ಷಕೊಬ್ಬ ಙÁ್ಞನಿ ಭಾವ ಬಲ್ಲುದೆ ಮುಖ್ಯ ಸಾಧನಿ 2 ಮನಸ್ವಸ್ತ ಮಾಡಿ ನೀವಿನ್ನು ಕೇಳಿ ಅನುಮಾನ ಬಿಟ್ಟಿ ಇಕ್ಕಿ ಚಪ್ಪಾಳಿ ಗನಗುರು ಪಾದದಲ್ಯೊಮ್ಮೆ ಹೊರಳಿ ಹಣಿಗ್ಹಚ್ಚಿಕೊಂಬಾ ಗುರುಪಾದಧೂಳಿ 3 ಚಿತ್ತ ಚಂಚಲಾಗ ಬಾರದು ನೋಡಿ ವಸ್ತು ಬಾಹುದು ಬ್ಯಾಗೆ ಕೈಗೂಡಿ ಮಿಥ್ಯಾ ಪ್ರಪಂಚ ಈಡ್ಯಾಡಿ ನಿತ್ಯ ನಿರ್ಗುಣಾನಂದ ಸ್ತುತಿಪಾಡಿ 4 ಪುಣ್ಯಕೀರ್ತನೆ ಕೇಳಿ ಸಂಭ್ರಮ ಧನ್ಯ ಧನ್ಯ ಕೇಳಿದವರ ಜನ್ಮ ಕಣ್ಣಾರೆ ಕಾಂಬುವ ನಿಜವರ್ಮ ಚಿಣ್ಣ ಮಹಿಪತಿಗಾನಂದೋ ಬ್ರಹ್ಮ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ನಿಜನೋಡಿರೋ ಧ್ರುವ ನೋಡಿನೋಡಿ ನೋಡಿ ನೋಡುದರೊಳು ಕೂಡಿ ನೋಡುವದೇನೆಂದು ನೋಡಿ ನೋಡಿದ ಮ್ಯಾಲಿನ್ನು ಮೂಡಿಬಂದರ ಘನ ನೋಡುವದೇ ಖೂನ ಮಾಡಿ ಮಾಡಿದ ಮಾಟವು ಕೂಡಿಬಂದರೆ ಕೈಯ ನಾಡಗೂಡ ಹೇಳಬ್ಯಾಡಿ ಗೂಢ ಗುಹ್ಯದ ಮಾತು ಒಡೆದು ಹೇಳುವದಲ್ಲಾ ನೋಡಿ ನಿಮ್ಮೊಳು ಬೆರೆದಾಡಿ 1 ಓದಿದರೋದಬೇಕಿದೊಂದೇ ಅಕ್ಷರ ಭೇದಿಸುವಂತೆ ಬ್ರಹ್ಮಾಂಡ ಇದೇ ಸಾಧಿಸಿನ್ನು ಮೂಲವ ತಿಳಿಯದೆ ಓದುವದ್ಯಾಕೆ ಉದ್ದಂಡ ಹಾದಿ ತಿಳಿಯದಿದ್ದರೆ ಹೇಳಿಕೊಡುವನು ಸದ್ಗುರು ಘನಪ್ರಪಂಚ ಭೋದಿಸಿ ಬ್ರಹ್ಮಾನುಸಂಧಾನದ ಸುಖ ಉದಯ ಮಾಡುವ ಅಖಂಡ 2 ನಾನ್ಯ ಪಂಥವೆಂಬ ಮಂತ್ರದನುಭವ ಚನ್ನಾಗ್ಯಾಗಬೇಕು ಖೂನ ಇನ್ನೊಂದು ಬ್ಯಾರೆಂಬ ಭಿನ್ನವಳಿದ ಮ್ಯಾಲೆ ತನ್ನೊಳಾಯಿತು ಸಮ್ಯಕಙÁ್ಞನ ಧನ್ಯ ಧನ್ಯ ಧನ್ಯ ಧನ್ಯಗೈಸುವದಿದು ಕಣ್ಣಾರೆ ಕಾಂಬೊ ಸಾಧನ ಉನ್ಮತವಾಗದೆ ಸನ್ಮತದೋರದು ಇನ್ನೊಬ್ಬರ ಕೇಳುವದೇನ 3 ಸರ್ವಮಿದಂ ಖಲು ಬ್ರಹ್ಮವೆಂಬುವ ಮಾತು ದೋರ್ವಾಂಗೆ ನೆಲೆಗೊಳಬೇಕು ಸರ್ವ ಸಾಕ್ಷಿ ಸರ್ವಾಧಾರವು ತಿಳಿಯದೆ ಗರ್ವಿತಲ್ಯಾಡುವ ಮಾತು ಹೋತು ಗುರ್ವಿನಂಘ್ರಿಗಿನ್ನು ಗುರುತವ ಕೇಳದೆ ಮವ್ರ್ಹಿನೊಳೀಹುದು ಮುಸುಕು ನಿರ್ವಿಕಲ್ಪನ ನಿಜ ಸ್ಮರಿಸುವಾಂಗೆ ಕಣ್ಣ ದೆರ್ವದಿದೊಂದೇ ಸಾಕು 4 ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎಂದು ಗುರುವಿಗೆ ಕೇಳಿ ನಿಜ ವಂದ ದೇಹದ ಒಳಗಿಹ್ಯ ದ್ಯಾವರ ತಿಳಿದರ ಜನ್ಮಕೆ ಬಂದುದು ಚಂದ ಸೋಹ್ಯ ಸೊನ್ನೆಯ ಗುಹ್ಯವ ತಿಳಿದರ ಭವ ಮೂಲದಿಂದ ಬಾಹ್ಯಾಂತ್ರ ಪರಿಪೂರ್ಣ ಭಾಸುತಲ್ಯದೆ ಮಹಿಪತಿಗಿದೆ ಬ್ರಹ್ಮಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಸಾಧಿಸಿನೋಡಿ ಮನ ಉನ್ಮನÀಮಾಡಿ ಘನಸುಖ ಭೇಧಿಸಿದರ ಭಾಸುತದೆ ತನ್ನೊಳು ತಾನೆ ಕೌತುಕಧ್ರುವ ನೋಡಿ ನೋಡಿ ಖೂನ ಅರುಹು ಇಲ್ಲದೆ ಜನದೊಳು ಬರುದೆ ಹೇಳ್ಯಾಡುದೇನ ನಿರ್ವಿಕಲ್ಪನ ನಿಜನೆಲೆನಿಭವರಿತು ನೋಡಿ ಸ್ಥಾನ ಸರ್ವಸಾಕ್ಷಿ ಸರ್ವಾತೀತವೆಂಬ ವಸ್ತು ನೋಡಿ ಪೂರ್ಣ 1 ಕಣ್ಣಿನ ಕೊನೆ ಮುಟ್ಟಿ ಕರಗಿ ಮನವು ನೋಡಿ ಪೂರ್ಣ ಬೊಧ ಸಣ್ಣ ದೊಡ್ಡವರೊಳಗಿದೆ ಒಂದು ಸಾರುತಿದೆ ವೇದ ಧನ್ಯ ಧನ್ಯಗೈಸುವ ನಿಜ ಪುಣ್ಯ ಗುರುಪಾದ ಚನ್ನಾಗ್ಯನುಭವದಿಂದ ನೋಡಲಿಕ್ಯಾಗದು ಸ್ವಾದ 2 ಸುರಿಮಳಿಗರೆವುತಲ್ಯದೆ ಸ್ವಸುಖದಾನಂದೊ ಬ್ರಹ್ಮ ತೆರೆತಿಳಿಯಲಿಕ್ಕೆ ಗುರು ಶರಣ ಹೋಗಬೇಕು ಇದೇ ವರ್ಮ ಹರುಷಗೈಸಿದ ನೋಡಿ ಪತಿತಪಾವನ ಸದ್ಗುರು ನಮ್ಮ ತರಳ ಮಹಿಪತಿಗಿದೆ ನಿತ್ಯಭಿನವದ ನೋಡಿ ಸಂಭ್ರಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ಗುರುಕೃಪೆಯದಾಟಗಳು ಧ್ರುವ ಮನಯೋಗದ ಗೋಲ್ಹಾಟಗಳು ಅನುದಿನ ಅನಿಮಿಷ ನಯನದ ನೋಟಗಳು ಜ್ಞಾನ ಸಮುದ್ರದ ಲೋಟಗಳು ಏನೇಂದ್ಹೇಳಲಿ ಸ್ವಾನಂದದ ಸುಖ ಅನಂದೋಬ್ರಹ್ಮದ ಆಟಗಳು 1 ಸೊನ್ನೆಯ ಸೂಟಿಗಳು ತಾಳಮೃಂದಗವು ಭೇರಿಡುತಿಹ್ಯ ಕೇಳುವ ಧಿಮಿಧಿಮಿಟಗಳು ತಲ್ಲೀನದಿ ಶ್ರುತಿಘೋಷಾಲಿಸುವನೀದೃಶ್ಯದ ಉದಾಟಗಳು ತಿಳಿಯಲು ಬಲು ಆವ್ಹಾಟಗಳು 2 ಬಲ್ಲವೇನು ನರಕೀಟಗಳು ದೇವದೇವೋತ್ಮನ ನೋಟಗಳು ದಯಕರುಣದಿ ಜೀವನ ¸ದ್ಗೈಸುವ ಭವನಾಶನ ಕೃಪಾದೃಷ್ಟಿಗಳು ಧನ್ಯಧನ್ಯ ಕುಲಕೋಟಿಗಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದು ಬಣ್ಣಿಸಲಿ ಗುರುರಾಯನಾ | ತಾ ನೆನೆದವರ ಧನ್ಯಗೈಸುವನಾ ಮಹಿಮೆ ಪ ಧರಿಯೊಳಜ್ಞಾನ ತಮಹರಣ ಭಾಸ್ಕರ ನೆನಿಪ | ಕರ ಕಮಲದಲಿ ಜನಿಸೀ | ವರಮೂಲ ಮಂತ್ರವನೆ ಗುರು ಮಹಿಪತಿಯಂಬಾ | ನಿರುತ ಖ್ಯಾತಿಯ ನಾಮ ಧರಿಸಿ ಬಂದನ ಮಹಿಮೆ1 ಘನಸಾರ ವಿದ್ಯದಾಕಾರವೋ | ಶುದ್ಧಜ್ಞಾನ ಕಲ್ಪ ದ್ರುಮವಿನಾ | ಮುದ್ದು ಫಲವೋಯನಲು ಸಿದ್ಧ ಸಾಧಕರ ನಡು | ಗದ್ದುಗೆಯೊಳೆಸೆವ ಗುಣ ನದ್ವೀತಿಯನ ಮಹಿಮೆ 2 ಸ್ವಸ್ಥ ಮನದಿಂದ ಭಕುತಿ ಸ್ತವನ ಮಾಡಲಿಕೆ | ಮಸ್ತಕದ ಮ್ಯಾಲಭಯ ಹಸ್ತನೀಡೀ | ಅಸ್ತಿ ಭಾತಿ ಪ್ರಿಯಂ ವಸ್ತು ವಿದೇಶ ಸಕಲ ಹೃದ | ಯಸ್ಥನೆಂದನು ಭವವ ವಿಸ್ತರಿಸುವನ ಮಹಿಮೆ 3 ಆರಿಗಳವಡದಿಹ ನೈರಾಸ್ಯ ವೃತ್ತಿಯಾ | ತಾರದಲಿ ನಡೆದು ಮುನಿ ವೈರಾಗ್ಯದಾ | ಸಿರಿ ಸಂಪದವ ತೋರಿದನು ನೋಡಲಿಕೆ | ಸಾರ ಸಾಂಖ್ಯವು ಯೋಗ ದಾರಿ ಬಲ್ಲನ ಮಹಿಮೆ4 ಹೊಂದಿದ್ದವರ ಚಿದಾನಂದ ಸುಖಸಾಗರದಿ | ನಿಂದು ಲೋಲ್ಯಾಡಿಸಿದ ನಂದಿಗಿಂದು | ತಂದೆ ಮಹಿಪತಿ ತನ್ನ ದ್ವಂದ್ವಪಾದುಕೆಗಳನು | ನಂದನ ಸಿರದಲ್ಲಿಟ್ಟು ಛಂದ ನೋಡುವನ ಮಹಿಮೆ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಟ್ಟಳೆ ನಿನ್ನದೆಂತೊ ಪ. ನಷ್ಟಗೈಸುವುದಿನ್ನು ಕಷ್ಟಪಡಿಸಲಿಬ್ಯಾಡ ಇಷ್ಟ ಕೃಷ್ಣಾರ್ಯನೆ ಅ.ಪ ಪುಟ್ಟಿದಾ ಮೊದಲಾಗಿ ನಷ್ಟತನವನೆ ಹೊಂದಿ ದುಷ್ಟರೊಳು ಶ್ರೇಷ್ಠನಾದೆ ಎಷ್ಟುದಿನ ಇದರಂತೆ ಇಟ್ಟಿರುವೆಯೊ ಗುರುವೆ ಇಷ್ಟೇವೆ ಎನ್ನ ಯೋಗ್ಯತೆಯು 1 ಪಾಪಿ ವಿಷಯ ಜ್ವಾಲೆಯು ಕುಪಿತದಿಂದೆನ್ನ ತಪಿಸಿ ಬೇಯಿಸುತಿದೆ ಕೃಪೆಯೆಂಬ ಮಳೆಗರೆದು ಉಪಶಮನವನೆ ಮಾಡು ಆಪದ್ಭಾಂಧವನಲ್ಲವೇ ಗುರುವೆ2 ಪಾಪಕಾರ್ಯರತನ ಪಾಪಿ ಎಂದೆನಿಸದೆ | ಜನರಿಂದ ತಪಸಿ ಎಂದೆನಿಸುವುದ್ಯಾತಕೆ ಭೂಪ ವಿಜಯ ರಾಮಚಂದ್ರವಿಠಲನ ಪಾದ ಪದುಮವ ನಂಬಿಹ ಗುರುವೆ 3
--------------
ವಿಜಯ ರಾಮಚಂದ್ರವಿಠಲ
ಕಂಡೆ ನಿಂದಾನಂದೋಬ್ರಹ್ಮನ ಮಂಡಲೇಶನ ಧ್ರುವ ಪಿಂಡ ಬ್ರಹ್ಮಾಂಡ ತಂಡಕ ಜಡದ ಖಂಡಿತವಾಗ ಸುಪಂಡಿತರಾತ್ಮನ 1 ಸನ್ಮಾರ್ಗ ಸದ್ಗತಿ ಸಾಧನ ಸದ್ಗುರು ನಿಧಾನ ಸದ್ಬ್ರಹ್ಮಾಕರ ಸದ್ವಾಸನೆ ಪೂರಿಸಿ ಸದ್ಗೈಸುವ ಸದ್ಭಾವ ಬೋಕ್ತನ 2 ನಿಜಸುಖ ಭಾಸುವ ಮಹಿಪತಿಗೋಸುಗ ಭಾಸ್ಕರ ಕೋಟಿ ಪ್ರಕಾಶನ ಕಂಡೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು