ಒಟ್ಟು 31 ಕಡೆಗಳಲ್ಲಿ , 24 ದಾಸರು , 31 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
3. ದೇವ-ದೇವತೆಗಳ ಸ್ತುತಿ ದೇವಿ ನೀಕರುಣಿಸಮ್ಮಾ|| ಮನದಲಿ ಭಜಿಸುವೆ ತಾಯಿ ಪ ವಾರಿಜಮುಖಿ ನಿನ್ನ ವಂದಿಸುವೆ ನಾನು ದಾರಿದ್ರ್ಯ ಪರಿಹರಿಸಿ ದಯಮಾಡಿ ಸಲಹಮ್ಮಾ 1 ಸಾಗರನ ಸುತೆ ಸಕಲ ಲೋಕ ಮಾತೆ ನಾಗಶಯನ ನುರದಲಿ ನಲಿದಾಡುವಿ 2 ಮದಗಜಗಾಮಿನಿ ಮಹಿಮಾ ಪ್ರಕಾಶಿನಿ ಪದುಮನಾಭನ ಪಟ್ಟಿದ ರಾಣಿ 3 ಚಂದಿರಮುಖಿ ಚಲುವಕಾಂತೆ ಸೀತೇ ಇಂದ್ರಾದಿಗಳಿಗೊಲಿದಿಷ್ಟಾರ್ಥ ವೀಯುವಿ 4 ಅರವಿಂದಾಲಯರನ್ನೆ ಆನಂದ ಪರಿಪೂರ್ಣೆ 'ವರ ಹೆನ್ನೆ ವಿಠಲನ’ ರಮಾ ನಮ್ಮಮ್ಮಾ ಕಾಯಮ್ಮಾ 5
--------------
ಹೆನ್ನೆರಂಗದಾಸರು
ಉಡುಪಿ ಪರಿಸರದ ದೇವತೆಗಳು ಕಣ್ವ ಋಷಿ ತಪಗೈದ ಅಜ್ಜರ್ಕಾಡೆಂಬಲ್ಲಿ ಅವನಿಗೊಲಿದಿರುವ ದುರ್ಗೆ ವಾಸವಾಗಿಹಳು ಒಳಕಾಡು ಎಂಬ ತಾನವೆ ಚಂದ್ರನ ತಪೋ ಭೂಮಿ ಇಲ್ಲಿಯೇ ಸಕಲ ವಿದ್ಯಾಲಯವಾಯ್ತು 132 ಬೆಳ್ಳಿ ಮಂಚದ ಕಾಲುಗಳು ನಾಲ್ಕು ಎಂಬಂತೆ ಆರ್ಮೊಗನ ರೂಪಗಳು ನಾಲ್ಕು ದೆಸೆಗಳಲಿ ಮಾಂಗೋಡು ತಾಂಗೋಡು ಆರಿತೋಡು ಮುಚ್ಲಿಕೋಡು ನಾಮದಿಂ ಬೆಳಗುವವು ಷಷ್ಠಿದಿನದಂದು 133 ಕಡಿಯಾಳಿ ಎಂಬಲ್ಲಿ ಮಹಿಷಮರ್ದಿನಿಯಾಗಿ ದುರ್ಗಾಲಯವು ಉಡುಪಿ ಪೂರ್ವದ್ವಾರದಲ್ಲಿ ಪುತ್ತೂರು ಬೈಲೂರು ಬಡಗು ತೆಂಕು ದೆಸೆಯಲ್ಲಿ ಕೃಷ್ಣ ಸೇವೆಗೆ ದುರ್ಗೆ ಕಟಿಬದ್ಧಳಿಹಳು 134 ಸತ್ಯ ನುಡಿಯಲ್ಲಿರಲಿ ಧರ್ಮ ನಡೆಯಲ್ಲಿರಲಿ ಸ್ವಾಧ್ಯಾಯದಲಿ ಎನಗೆ ಎಚ್ಚರವದಿರಲಿ ಅಜ್ಞಾನದಂಧಕಾರದ ದಿಕ್ಕಿನಿಂದೆನ್ನ ನಿನ್ನ ಬೆಳಕಿನ ಕಡೆಗೆ ಕರೆದೊಯ್ಯು ದೇವಾ 135 ಪರಶುರಾಮಕ್ಷೇತ್ರ ಹುಟ್ಟುಭೂಮಿಯು ಎನಗೆ ಪರಶುರಾಮನು ನೀನೆ ನಿನ್ನ ಕ್ಷೇತ್ರವಿದು ಪರಮಹಂಸಾಖ್ಯಯತಿಗಳ ಮಾನಸಹಂಸ ಸೋಹಂ ಎನ್ನುವ ಬ್ರಹ್ಮ ಎನ್ನೊಳಗೆ ಇರುವೆ 136 ಕೃಷ್ಣಾರ್ಪಣವದಿಲ್ಲದಾವುದು ಫಲ ಕೊಡದು ಅದರಿಂದ ಕೃಷ್ಣನಿಗೆ ಕೃತಿಯನರ್ಪಿಸುತ ಸಾಲೋಕ್ಯ ಸಾಮೀಪ್ಯವನ್ನು ಬಯಸುವೆ ನಾನು ಯೋಗ್ಯತಾನುಗುಣವಾಗಿ ಫಲವ ಕೊಡು ಹರಿಯೆ137 ಪರಶುರಾಮನು ರಾಮ ಪರಶು ರಾಮನು ಕೃಷ್ಣ ರಾಮದಾಸನು ನಾನು ಕೃಷ್ಣದಾಸನಿಹೆ ಬರೆದ ಕೃತಿಯಿಂದ ನೀನ್ ಸುಪ್ರಸನ್ನತೆ ಪಡೆದು ಭಕ್ತಿ ಮುಕ್ತಿಗಳ ಕೊಟ್ಟು ರಕ್ಷಿಸು ಶ್ರೀಶ 138 ಉಡುಪಾನ್ವಯಜ ನಾನು ಉಡುಪಾನ್ವಯದ ನೀನು ಉಡುಪಿ ಹುಟ್ಟೂರೆನಗೆ ನೀನುಡುಪಿಗತಿಥಿ ಮಧ್ವ ಹೃದಯವು ನಿನಗೆ ವಾಸದ ಸ್ಥಾನವಿರೆ ಮಾಧ್ವಕೋಟಿಗಳಲ್ಲಿ ಕೀಟನಾಗಿಹೆ ನಾನು 139 ವಿಷ್ಣು ಪದದೊಳಗಿರುವ ಜ್ಯೋತಿಲೋಕದ ಒಡೆಯ ಆ ಜ್ಯೋತಿಲೋಕಕ್ಕೆ ಕರೆದೊಯ್ಯುತ ನನ್ನ ಭಕುತರಿಗೆ ಮುಕುತಿ ಕೊಡುವುದೆ ನಿನ್ನ ಸಂಕಲ್ಪ ಅದರಿಂದ ನಿನ್ನನ್ನು ಶರಣು ಶರಣೆಂಬೆ 140 ಚಾಂದ್ರಮಾನದ ಪಿಂಗಳಾಖ್ಯ ಸಂವತ್ಸರದಿ ಚೈತ್ರ ಮಾಸದ ನವಮಿಯ ದಿನದಲ್ಲಿ ಕಾಲ ಇದನರ್ಪಿಸುತ ನಾನು ಕೃತಕೃತ್ಯನಾದೆ ಶ್ರೀಕೃಷ್ಣ ಕಾಪಾಡು 141
--------------
ನಿಡಂಬೂರು ರಾಮದಾಸ
ಉಡುಪಿಯ ಶ್ರೀಕೃಷ್ಣ ನುಡಿಯ ಲಾಲಿಸು ಮಾಧವ ನುಡಿಯ ಲಾಲಿಸು ಪಾಲಕಡಲಶಯನ ದೇವ ಕಡಗೋಲ ಪಿಡಿದ ನಮ್ಮುಡುಪಿಯ ಶ್ರೀಕೃಷ್ಣ ಪ. ಮಾನವ ಮದವನ್ನು ಮಸರಂತೆ ಮಥಿಸಿದ ಭಾವನ ತೋರುವಿಯೊ ಹಾಗಲ್ಲದಿದ್ದರೆ ದೇವತಗಳಿಗಮೃತವನುಣಿಸಿದನೆಂಬ ಸೋವನು ಸೂಚಿಪೆಯೊ ಸೌಭಾಗ್ಯ ಸಿರಿಯೊ ಸೇವಕರ ಸೇವಾನುಗುಣಫಲ ನೀವ ತರತಮ ಭಾವವೊ ಭವ ನಾವ ನಡೆಸುವ ನಿಪುಣತೆಯೊ ದುರಿ ತಾವಳಿಯ ದೂರೋಡಿಸುವೆಯೊ1 ಕಲಿಯ ಬಲದಿ ಜ್ಞಾನಕಲೆಯಡಗಲು ದೇವ- ರ್ಕಳು ಬಂದು ಸ್ತುತಿಸಲಂದು ಸಕಲಸುರ ತಿಲಕ ವಾಯುವಿನ ಭೂವಲಯದೊಳವ- ಗೊಳುವರೆ ಪೇಳ್ವೆನೆಂದು ನೀ ಮನಕೆ ತಂದು ಹಲವು ಭವದಲಿ ಭಜಿಪೆ ಸಜ್ಜನ ಕುಲಕೆ ಮೋಕ್ಷಾಂತದ ಚತುರ್ವಿಧ ಫಲವ ನೀಡುವೆನೆಂದು ಪವನನಿ- ಗೊಲಿದು ಬಂದೀ ನಿಲಯದೊಳಗಿಹೆ 2 ಸರ್ವಜ್ಞ ಮುನಿಕೃತ ಸಕಲ ಪೂಜೆಗಳನ್ನು ನಿವ್ರ್ಯಾಜದಲಿ ಕೊಳ್ಳುತ ನಿರ್ವಾಹಗೊಳುತ ದುರ್ವಾದಿಪಟಲಾದ್ರಿ ಗರ್ವಾಪಹರ ಶತ ಪರ್ವ ಶಾಸ್ತ್ರವ ಕೇಳುತ ಸಂತೋಷಪಡುತಾ ಪೂರ್ವಸುಪರ್ವ ರಿಪುಗಳ ನಿರ್ವಿಯೊಳಗಡಿಯಿಡಗೊಡದ ಸುರ ಸಾರ್ವಭೌಮ ಶುಭೋನ್ನತಿ ಪ್ರದ 3 ಶ್ರೀನಿಕೇತನ ಸರ್ವ ಪುರುಷಾರ್ಥದಾಯಿಯೆ ನೀನೆಲ್ಲೆ ನೆಲೆಯದೋರಿ ಇರಲಿನ್ನು ಭಜಿಸದೆ ನಾನಾ ದೈವಗಳ ಸೇರಿ ಹಲ್ಲುಗಳ ತೋರಿ ಏನನುಸುರುವೆ ಕೃಷ್ಣ ಬುದ್ಧಿ ವಿ- ಹೀನತೆಯನದನೊ ಮಾನಿಸೆನ್ನ ಕಡಪಾನಿಧಿಯೆ ಪವ- ಪಾದ ಪಲ್ಲವ 4 ದ್ವಾರಾವತಿಯೊಳು ಸಂಸಾರಿ ಭಾವವನೆಲ್ಲ ತೋರಿದ ಕಾರಣದಿ ಅಲ್ಲಿಂದ ಭರದೀ ವಾರುಧಿ ಮಾರ್ಗದ ಸ್ವಾರಿಯ ನೆವನದಿ ಪಾರಿವ್ರಾಜರ ಸೇರಿದಿ ತದ್ಭಕ್ತಿಗೊಲಿದಿ ದೂರ ಭಯದಲಿ ವೆಂಕಟಾದ್ರಿಗೆ ಬಾರದಿಹ ಸಜ್ಜನರ ಮೇಲ್ಕರು- ಣಾರಸಾಮೃತ ಸೂಸುತ್ತಿಲ್ಲಿ ಸರೋರುಹಸ್ಮಿತ ಮುಖ ತೋರುವಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಎಂತು ಬಣ್ಣಿಸಲಮ್ಮಯ್ಯಾ ಈ ಗುರುವರರ ಪ ಎಂತು ಬಣ್ಣಿಪೆ ನಾ ನಂತನಾಂಶ ಜಗ - ದಂತರದೊಳಗಾ - ನಂತ ಮಹಿಮರಅ.ಪ ಸುರವರನಗರಸಮ - ವರಮಂತ್ರಸದನ ಜರಿದು ಸ್ಥಿರವಾಗೀ ಪುರದಲ್ಲಿ ಮೆರೆಯುತಲಿಹರನ್ನ 1 ಪೂರ್ವಯುಗದೊಳು ಸಾರ್ವಭೌಮನೆನಿಸಿ ಪಾರ್ವರ ಪೊರೆವದಕ್ಕ ಪೂರ್ವ ಯತಿ ಎನಿಸಿಹರನ್ನ 2 ದಿನ ದಿನದಲ್ಲಿ ಮಹ ಕನಕಾಭೀಷೇಕ ಮಾಳ್ಪ ಧನಿಕರ ತೆಜಿಸಿ ನಿ - ರ್ಧನಿಕ ಗೊಲಿದಿಹರನ್ನ 3 ಕ್ಷೀರಶೇಚನ ನಿತ್ಯ-ಸಾರ ಪಂಚಾಮೃತ ಬಿಟ್ಟು ಕೀರುತಿ ಮಾಳ್ಪಜನರ ಸೇರಿ ಕೊಂಡಿಹರನ್ನ 4 ದಾತರೆನಿಸಿ ಜಗದಿ - ಖ್ಯಾತರಾಗಿ ಗುರುಜಗ ನಾಥ ವಿಠಲನೊಲಿಸಿ ದೂತಜನರ ಪೊರೆವೊರನ್ನ 5
--------------
ಗುರುಜಗನ್ನಾಥದಾಸರು
ಎನ್ನ ಕೈ ಬಿಡಬೇಡವೋ ಪ ರಿನ್ನಾರ ಕಾಣೆನು ಪನ್ನಗಶಯನನೆ ಅ.ಪ ತಂದೆ ಅನಾಥರ ಬಂಧು ಕಾಪಾಡಯ್ಯ 1 ಭುವನವಿಖ್ಯಾತನೆಂದೆನಿಸಿ ಕಾಯ್ದವ ನೀನೆ 2 ಸ್ಥಿರ ಸುಖದೊಳು ಕಾಯ್ದೆ ಕರುಣಿಗಳರಸನೆ 3 ಇಂಬಿಟ್ಟು ಭಕುತನ ಸಂಭ್ರಮದೊಳು ಕಾಯ್ದೆ 4 ಶರಣನ ಸಲಹಿದ ಪರಮ ಪುರುಷ ನೀನೆ 5 ಜೋಕೆಯೊಳ್ ನಿಜದಿ | ಸಾಕಿದೆ ಕರುಣಾಳು 6 ಕೃಪೆಯೊಳವಳಿಗೊಲಿಖಿಲವಸ್ತ್ರವನಿತ್ತೆ 7 ಸಂತೈಸಿ ಮತ್ತೆ ಪಾಂಡವರನ್ನು ಸತ್ಯಾತ್ಮರೆನಿಸಿದೆ 8 ಕುಡುತೆ ದಾಸ ವಿದುರನಿಗೆ ಲೇಸ ಮುಕ್ತಿಯ ಕೊಟ್ಟೆ 9 ವಂದ್ಯನೆಂದೆನಿಸಿದೆ ಇಂದಿರಾ ವರದನೆ 10 ದೃಢಭಕ್ತಿಗೊಲಿದಿತ್ತೆ ತಡೆಯದಿಷ್ಟಾರ್ಥವ 11 ನೀನೇನು ತೋರದೇನು || ಏನು ಗತಿಯೆನಗಿನ್ನು ನೀನೊಲಿಯದಿಲ್ಲಿನ್ನು 12 ಲೀಲೆಯಿಂದನುದಿನ ಸಲಹೊ ಸದಾನಂದ 13
--------------
ಸದಾನಂದರು
ಚಿಂತಿಸು ಮನವೆ ಶ್ರೀಹರಿಯ ನಿ- ಶ್ಚಿಂತೆಯೊಳಗೆ ಪುಲಿಗಿರಿದೊರೆಯ ಪ ಮಾರ ಚತುರ್ಮುಖರಿಗೆ ಪಿತನ ನಾರದ ಶರ್ವ ಪಿತಾಮಹನ ಮದ ವಾರಣಮುಖ ಪ್ರಪಿತಾಮಹನ 1 ನಿಜಶಿರದಿ ಕೀರಿಟವನಿರಿಸಿಹನ ನಿಜಕರುಣದಿ ಭಕ್ತರಿಗೊಲಿದಿಹನ 2 ಮಾಲೆಯ ಕೊರಳೊಳು ಪೊತ್ತಿಹನ ಬಾಲಕ ಸುಕೃತಾನುಗ್ರಹನ ನಿಜ ಲೀಲೆಯೊಳಾಸುರ ನಿಗ್ರಹನ 3 ಅಂಗಜನಿಭ ಸುಂದರನ ಸುರ ಗಂಗೆಯ ಪಡೆದ ಪಾದಾಂಬುಜನ ತುಂಗ ವಿಹಂಗಮ ರಂಗಮನ ಶುಭ ಮಂಗಳ ಗುಣಗಣ ಸಂಗತನ 4 ಸರಸಜಸನ್ನಿಭಲೋಚನನ ನಿಜ ಶರಣರ ಭವಭಯ ಮೋಚನನ ವರದ ವಿಠಲ ವರದಾಯಕನ 5
--------------
ವೆಂಕಟವರದಾರ್ಯರು
ಚಿಂತೆಯಾತಕೆ ಮನವೆ ನಿನಗಿದು ಸತತ ಸಲ್ಲದು ಕಾಣೊ ಪುರಂದರ ದಾಸರನುದಿನ ಇಂತು ಬಗೆಯಲಿ ಪಾಲಿಸೊ ಪ ಅಗ್ರ ಬುದ್ಧಿಯ ತಾಳು ನಿನಗೆ ಸಾ ಮಗ್ರಿ ಆಲೋಚನಿ ಯಾತಕೆ ಸ ಮಗ್ರ ಸೋಪಸ್ಕರವನು ಅನುಗ್ರಹವನು ಮಾಡುತಾ ಉಗ್ರ ಮನುಜರ ಕೂಡಿಸದೆ ಪಾ ಅಂದು ಪೊಗಳಲು ಶೀಘ್ರದಲಿ ನಿಂದಿಹರೊ 1 ಹರಿಗುರುಗಳ ಸಂಕಲ್ಪ ತಪ್ಪದು ಗಿರಿಗಹ್ವರದೊಳಗಿದ್ದರು ಅದು ಬರಿದೆಯಾಗದು ಕೇಳು ಸ್ಮರಿಸಿ ಬಳಲಿ ನಲಿದಾಡಿ ಪರಿದ ಕಾಲಕೆ ಬಿಡದೆ ಅಹಿಕದ ಚರಿತೆ ಅವರಿಗೆ ಗಣಣೇನೊ2 ತೆತ್ತಗಿನ ಸ್ವಭಾವ ಆವದೊ ಎತ್ತಲಟ್ಟಿದರತ್ತ ತೊಲಗದೆ ಹೊತ್ತುಹೊತ್ತಿಗೆ ಪೋಗಿ ಬಾಗಿ ತೊತ್ತಿನಂದದಿ ಪ್ರಯೋಜನ ಹೊತ್ತು ಮೀರದೆ ಮಾಳ್ಪುದು ಧರ್ಮ ಮೊತ್ತವಲ್ಲದೆ ಇನ್ನೊಂದಿಲ್ಲವೊ ಇತ್ತ ಭಾಗ್ಯವಿತ್ತ ನಿರ್ಮಳ ಚಿತ್ತದಲಿ ಅರ್ಪಿಸುತಿರು3 ನೀನು ಮಾಡಿದ ಪುಣ್ಯಗಳಿಗೆ ತಾ ನಡದು ಬರುವುದೇ ಮರುಳೆ ನಾನಾ ಪರಿಯಲಿ ತಿಳಿದು ನೋಡು ಧ್ಯಾನದಿಂದಲಿ ದಿನಪ್ರತಿ ಜ್ಞಾನನಿಧಿ ನಿಜಗುರು ಶಿರೋಮಣಿ ಅನಂತಾನಂತ ಜನುಮದಲೀಗ ಗಾನಮಾಡಿದ ನಿಷ್ಟ ಪುಣ್ಯವು ತಾನೊಲಿದು ಫಲವಿತ್ತದೋ4 ಕಲ್ಲು ಕರಗಿಸಿ ಬೆಣ್ಣಿ ತೆಗುವಂಥ ಬಲ್ಲಿದರು ನಿನ ಗೊಲಿದಿರಲು ಎಲ ಎಲ್ಲಿ ಇಲ್ಲವೆಂಬೊ ಸೊಲ್ಲುಗಳಲ್ಲದೆ ಇದು ಸಲ್ಲದೊ ಸಕಲ ಮನೋಭೀಷ್ಟಾ ತುಲ್ಯ ವಲ್ಲಭ ಮಲ್ಲದಲ್ಲಣ ನಿಲ್ಲದಲೆ ವೊಲಿದಿಹನೊ 5 ನೂನ್ಯಪೂರ್ಣವು ಅವರನ ಕೂಡಿ ತನ್ನ್ಯೋಪಾಯವು ಯಾಕೆ ನಿನಗೆ ಕಣ್ಣೆವೆ ಇಡುವನಿತರೊಳು ಕಾರುಣ್ಯವರುಷಗರೆದು ಬಿಡುವ ದೈನ್ಯವೃತ್ತಿಯ ಬಿಡಿಸಿ ನಿಷ್ಕಾಮ ಪುಣ್ಯವನಧಿಯೊಳಿಡುವರೊ 6 ಊರ್ವಿಗೀರ್ವಾಣರಿಗೆ ಉಣಿಪುದು ಗರ್ವವನು ತಾಳದಲೆ ಚೆನ್ನಾಗಿ ಸರ್ವಬಗೆಯಲಿ ನಾನು ಎಂಬೊ ದುರ್ವಚನಗಳ ನುಡಿಯದೆ ಪೂರ್ವತನೆ ಬಯಸುತಾರಾಧಿಸು ಶರ್ವಸನ್ನುತ ವಿಜಯವಿಠ್ಠಲ ಪೂರ್ವನೆಂತ ಪ್ರಬಲನೆ7
--------------
ವಿಜಯದಾಸ
ಚಿಂತ್ರವೇಲಿನಿಲಯ ಭಾರತಿ ಕಾಂತನೆ ಪಿಡಿಕೈಯಾ ಪ ಅಂತರಂಗದಲಿ ಚಿಂತಿಪರಘುÀಕುಲಧ್ವಾಂತದಿವಾಕರ ಸಂತತ ಸ್ಮರಿಸುವೆಅ.ಪ ಲಂಘಿಸಿ ವಾರಿಧಿಯ ಶ್ರೀರಾಮಾಂಗುಲಿ ಮುದ್ರಿಕೆಯ ಅಂಗನಿಗೆ ಕೊಟ್ಟು ಮಂಗಳಾಂಗ ರಘು ಪುಂಗವಗೆ ಕುಶಲ ಸಂಗತಿ ತಿಳಿಸಿದ 1 ಇಂದು ಕುಲದಿ ಜನಿಸಿ ಕುಂತಿಯ ಕಂದ ಭೀಮನೆನಿಸಿ ನಿಂದು ರಣದಿಕುರು ವೃಂದವ ಮಥಿಶ್ಯಾನಂದ ಸುತನೊಲಿಮೆ ಛಂದದಿ ಪಡೆದಿಹ 2 ಮೇದಿನಿಯೊಳು ಜನಿಸಿ ಬಹುದು ರ್ವಾದಿಗಳನು ಜಯಿಸಿ ಮೋದಮುನಿಯೆನಿಸಿ ಭೇದವ ಬೋಧಿಸಿ ಸಾಧು ಜನಕೆ ಬಲು ಮೋದವ ಗರಿದಿ 3 ಶೇಷದಾಸರಿಗೊಲಿದಿ ಅವರಭಿಲಾಷೆಯ ಪೂರ್ತಿಸಿದಿ ಪೋಷಿಸೆನ್ನ ಕರುಣಾ ಸಮುದ್ರ ಭವ ಕ್ಲೇಶವ ಕಳೆಯಾ ಗಿರೀಶ ಮುಖವಿನುತ4 ಭೀತರನ್ನು ಪೊರಿವಿ ಭಜಕರ ಪಾತಕವನು ಕಳೆವಿ ಖ್ಯಾತ ಕಾರ್ಪರ ಕ್ಷೇತ್ರದಿ ನರಮೃಗ ನಾಥನ ಪರಮ ಪ್ರೀತಿಪಡೆದಿಹ 5
--------------
ಕಾರ್ಪರ ನರಹರಿದಾಸರು
ನಾರಾಯಣನ ನೆನೆ ವರ್ಣಿಸು ಮನ್ನಿಸುಆರಾಧನೆಗಳ ಮಾಡುತ ಪಾಡುತನೀರಾಜನದಿಂದಲರ್ಚಿಸಿ ಮೆಚ್ಚಿಸಿ ವೇದಪಾರಾಯಣಪ್ರಿಯನÀ ಪ. ಅವನ ಶ್ರವಣ ಮನನ ನಿಧಿಧ್ಯಾಸನಶ್ರೀವಿಷ್ಣುವಿನ ಭಕ್ತಿಮಹಾಪ್ರಸಾದಂಗಳುಕೈವಲ್ಯ ಪದಕಿಕ್ಕಿದ ನಿಚ್ಚಣಿಕೆ ಎಂದು ಭಾವಜ್ಞರು ಪೇಳ್ವರೊಜೀವನ ಜವನಬಾಧೆಯ ತಪ್ಪಿಸಿಪಾವನ ವೈಕುಂಠಪುರದೊಳಗೆಂದೆಂದುಆವಾಸವನು ಮಾಡಿ ಸುಖಿಸಬೇಕಾದರೆ ಸೇವಿಸು ವೈಷ್ಣವರ 1 ಲೋಕದಿ ವರಂ ವರಯ ಭದ್ರಂತೆಋತೆ ಕೈವಲ್ಯಮಾತ್ಮನಃಏಕಮೇವೇಶ್ವÀರಸ್ತ ಸಾದ್ಭಗವಾನ್ ವಿಷ್ಣುರವ್ಯಯ ಎಂಬಾಈ ಕಲಿಯುಗದಲಿ ಬೇಕಾದ ಪುರಾಣಾದಿವಾಕುವಿವೇಕವ ಮನದಿ ವಿಚಾರಿಸಿಸ್ವೀಕರಿಸು ವೈಷ್ಣವ ಮತವ ಜೀವ ನಿರಾಕರಿಸನ್ಯಮತವ 2 ದ್ವಾರಾವತಿಯ ಗೋಪಿಚಂದನದಿಂದಶ್ರೀರÀಮಣನ ವರ ನಾಮವ ನೆನೆ-ದೆರಡಾರೂಧ್ರ್ವ ಪುಂಡ್ರಗಳ ಧರಿಸೆಂದೆಂದು ವೀರವೈಷ್ಣವಗುರುವಸೇರಿ ಸಂತಪ್ತ ಸುದರುಶನ ಶಂಖಧಾರಣವನು ಭುಜಯುಗದಲಿ ಮಾಡಿಮುರಾರಿಯ ಮಂತ್ರಗಳವರಿಂದ ಕೇಳುತ ಓರಂತೆ ಜಪಿಸುತ್ತಿರು 3 ಹರಿ ನಿರ್ಮಾಲ್ಯವ ಶಿರದಿ ಧರಿಸುತಿರುಹರಿ ನೈವೇದ್ಯವನೆ ಭುಂಜಿಸುತಿರುಇರುಳು ಹಗಲು ಹರಿಸ್ಮರಣೆಯ ಬಿಡದಿರು ದುರುಳರ ಕೂಡದಿರೊಹರಿಪದ ತೀರ್ಥದ ನೇಮವಬಿಡದಿರುಹರಿಪರದೇವತೆ ಎಂದರುಪುತಲಿರುಗುರುಮುಖದಿಂದ ಸಚ್ಛಾಸ್ತ್ರ ಪುರಾಣವ ನಿರುತದಿ ಕೇಳು 4 ತುಷ್ಟನಹನು ಎಳ್ಳಷ್ಟು ಮುಂದಿಟ್ಟರೆಅಷ್ಟಿಷ್ಟೆನ್ನದೆ ಸಕಲೇಷ್ಟಂಗಳಕೊಟ್ಟುಕಾಯ್ವನು ಶಕ್ರನಿಗೆ ತ್ರಿವಿಷ್ಟಪಪಟ್ಟವ ಕಟ್ಟಿದವದುಷ್ಟರನೊಲ್ಲ ವಿಶಿಷ್ಟರಿಗೊಲಿವ ಅ-ನಿಷ್ಟವ ತರಿದೊಟ್ಟುವ ಜಗಜಟ್ಟಿ ಅರಿಷ್ಟಮುಷ್ಟಿಕಾದ್ಯರÀ ಹುಡಿಗುಟ್ಟಿದ ವಿಠಲ ಬಹು ದಿಟ್ಟ 5 ಕಂದ ಬಾಯೆಂದರೆ ನಂದನಿಗೊಲಿದಿಹಕುಂದುಕೊರತೆ ಬಂದರೆ ನೊಂದುಕೊಳನುಇಂದಿರೆಯರಸ ಮುಕುಂದ ಮುಕುತಿಯ ನಂದನವನೀವ ದೇವಸಂದೇಹವಿಲ್ಲದೆ ಒಂದೆಮನದಿ ಸ-ನಂದನಾದಿಗಳು ಭಜಿಸಲು ಒಲಿವ ಉ-ಪೇಂದ್ರನ ಶುಭಗುಣಸಾಂದ್ರನ ಯದುಕುಲಚಂದ್ರನ ವಂದಿಸಿರೊ 6 ಓಡುವ ಅಡಗುವ ದೇವರೆ ಬಲ್ಲರುಬಾಡುವ ಬೇಡುವ ಮುನಿಗಳೆ ಬಲ್ಲರುನೋಡುವ ಕೂಡುವ ಮುಕುತರೆ ಬಲ್ಲರೊಡನಾಡುವ ರಮೆ ಬಲ್ಲಳುಊಡುವ ಪಾಡುವ ಯಶೋದೆ ಬಲ್ಲಳುಕಾಡುವ ಖಳರ ಮರ್ದಿಸಿ ಹುಡಿಗುಟ್ಟಿದನಾಡೊಳು ಕೇಡುಗಳೆವ [ಕೃಷ್ಣನಿಗೀಡೆಂದಾಡದಿರು] 7 ಆವನ ಪಕ್ಷವದಕೆದುರಿಲ್ಲಆವನ ಕುಕ್ಷಿಯೊಳಕ್ಕು ಜಗತ್ರಯಆವನು ಶಿಕ್ಷಿಪ ರಕ್ಷಿಪನು ಮತ್ತಾವನು ಪಾವನನುಆವನ ಶಿಕ್ಷೆಯ ಮಿಕ್ಕವರಿಲ್ಲ ಕೇ-ಳಾವನುಪೇಕ್ಷೆ ಕುಲಕ್ಷಯವೆನಿಪುದುಆವನುರುಕ್ರಮ ವಿಕ್ರಮನೆನಿಸಿದ ದೇವನಿಗಾವನೆಣೆ 8 ಪತಿ ಆವನ ಚರಣಸೇವಕನಾದಸುರರೊಳಗೀ ಹಯವದನಗಿನ್ನಾರನು ಸರಿಯೆಂದುಸುರುವೆನೊ 9
--------------
ವಾದಿರಾಜ
ನೀನೆ ದಯಾನಿಧಿಯು ಶ್ರೀ ಗುರುರಾಯ ನೀನೆ ದಯಾನಿಧಿಯು ಧ್ರುವ ಕರುಣದಿ ಕುಂತಿಯ ಪುತ್ರರಿಗೆ ಒಲಿದು ಕಾಳ ನಿರ್ಮಿಸಿ ಕೌರವರಳಿದು ಉಳಿಯದೆ ಇಳೆಯೊಳು ವಂಶವ ಸವರಿದ ಶೇಷಶಯನ ಶ್ರೀ ಕೇಶವ ನೀನೆ 1 ನರಗೊಲಿದು ನರಕಾಸುರನ ಮರ್ದಿಸಿ ನಾರಗನೆಂದಜಮಿಳನ ನೀ ತಾರಿಸಿ ನಾರದಗೊಲಿದು ನಾಟ್ಯವನಾಡಿದ ನರಹರಿಯು ನಾರಾಯಣ ನೀನೆ 2 ವೇದವ ಕದ್ದೊಯಿದಸುರನ ಸೀಳಿ ಮಚ್ಛವತಾರದ ರೂಪವ ತಾಳಿ ಮಾವನ ಕೊಂದ ಮಾನ್ಯರ ಮಡುಹಿದ ಮಾಧವ ನೀನೆ 3 ಗೋಕುಲದಲಿ ಪುಟ್ಟಿ ಧರೆಯೊಳು ಬೆರಳಲಿ ಗೋವರ್ಧನ ಗಿರಿಯನೆತ್ತಿ ಗೋಕುಲ ಕಾಯ್ದಿ ಗೋಪಿಯರಿಗೊಲಿದ ಗೋಪಾಲಕೃಷ್ಣ ಗೋವಿಂದನು ನೀನೆ4 ಸೃಷ್ಟಿನೆಲ್ಲ ಬೆನ್ನಿಲಿ ತಾಳಿದ ಶೇಷನ ಸಂ ಕಷ್ಟವ ಪರಿಹರಿಸಿದ ಶಿಷ್ಟ ವಿಭೀಷಣಗೊಲಿದು ಪಟ್ಟವಗಟ್ಟವು ವಿಷ್ಣವು ನೀನೆ 5 ಮದನನೊಲಿದು ಕಾಳಿಂಗನ ತುಳಿದು ಕದನದಲಿ ಬಾಣಾಸುರನಳಿದು ಮೇದಿನಿಯೊಳು ಮರೆ ಇಲ್ಲದೆ ದೈತ್ಯರ ಮರ್ದಿಸಿದ ಮಧುಸೂದನನು ನೀನೆ 6 ತ್ರಿಪುರವನಳಿದು ತ್ರಿಗುಣವ ತಾಳಿದ ತೆತ್ತೀಸ ಕೋಟಿ ದೇವರುಗಳಿಗಾಳಿದ ಅಕ್ರೂರಗೊಲಿದು ಚರಿತ್ರವದೋರಿದ ತ್ರಿಜಗಪತಿ ತ್ರಿವಿಕ್ರಮ ನೀನೆ7 ವಾಲಿಯನಳಿದು ವಾಲ್ಮೀಕಿಗೊಲಿದು ಬಲಿಚಕ್ರನ ಮುನಿಮುಂದಲಿ ಸುಳಿದು ಬ್ರಾಹ್ಮಣನಾಗಿ ದಾನವ ಬೇಡಿದ ಮಾನ್ನವಗೊಲಿದ ಶ್ರೀ ವಾಮನ ನೀನೆ 8 ಸೃಷ್ಟಿನೆಲ್ಲ ನಿರ್ಮಿಸಿ ವಕ್ಷ ಸ್ಥಳದಲಿ ಶ್ರೀ ಮಹಾಲಕ್ಷ್ಮಿಯ ಧರಿಸಿದ ಶ್ರೀನಿಧಿ ಶ್ರೀಪತಿ ಶ್ರೀಗುರುಮೂರುತಿ ಶ್ರೀದೇವಿಗೊಲಿದಿಹ ಶ್ರೀಧರ ನೀನೆ 9 ದಾಸರ ಕ್ಲೇಶಕಿಲ್ಮಿಷಗಳ ತೊಳೆದು ಅಂಬರಿಷ ರುಕ್ಮಾಂಗದಗೊಲಿದು ಶುಕ ಶೌನಕ ಪರಾಶರ ಮುನಿಗಳಿಗೆ ಹರುಷನಿತ್ತ ಹೃಷಿಕೇಶನು ನೀನೆ 10 ಕ್ಷಿತಿಯೊಳು ದೃಢ ಪತಿವ್ರತೆಗೊಲಿದು ಯತಿ ಮುನಿಗಳಿಗಿನ್ನು ಗತಿಗಳನಿತ್ತು ಪತಿತರ ತಾರಿಸಿ ಪಾವನಗೈಸಿದ ಪರಂಜ್ಯೋತಿ ಪದ್ಮನಾಭನು ನೀನೆ 11 ದೇವಕಿಗೊಲಿದು ಸ್ಥಾಪಿಸಿ ಧರೆಯೊಳು ದ್ವಾರಕಿಯಲಿ ನಿಜ ಲೀಲೆಯು ತೋರಿದ ದುರಿತ ವಿಧ್ವಂಸನ ದೇವಕಿ ಪುತ್ರ ದಾಮೋದರ ನೀನೆ 12 ಸಿದ್ದ ಶರಣರಿಗೊಲಿದ ಸದ್ಗತಿ ಸುಖಸಾಧನ ಸಹದೇವಗದೋರಿದ ಸಂಭ್ರಮದಿ ಸುಧಾಮಗ ಒಲಿದು ಸಂತೋಷವನಿತ್ತ ಸಂಕರುಷಣ ನೀನೆ 13 ವಸುಧಿಯೊಳು ಭಸ್ಮಾಸುರನ ಮರ್ದಿಸಿ ಭಾಷೆಯನಿತ್ತು ಭಕ್ತರ ಪಾಲಿಸಿ ಋಷಿ ವೇದವ್ಯಾಸಗೊಲಿದಾತನು ವಸುದೇವಸುತ ವಾಸುದೇವನು ನೀನೆ 14 ವಿದುರುದ್ಧವ ಗರುಡಗೊಲಿದು ಭೃಗುಮುನಿ ಕಪಿಲ ಯೋಗೇಂದ್ರನ ಸಲಹಿದ ಸ್ಥಿರಪದವಿತ್ತರೊಂದು ಮಂದಿಗೆ ಪ್ರಸನ್ನವಾದ ಪ್ರದ್ಯುಮ್ನನು ನೀನೆ 15 ಸೀತಾ ಸುದ್ದಿಯ ತಂದವಗೊಲಿದು ಹತ್ತು ತಲೆಗಳ ಇದ್ದವನಳಿದು ಕದ್ದುಬೆಣ್ಣೆಯ ಮುದ್ದೆಯ ಮೆದ್ದು ಉದ್ದವಗೊಲಿದ ಅನಿರುದ್ಧನು ನೀನೆ 16 ಸೋಕಿಸಿ ಪೂತಣಿಯ ಕಾಯವು ಹೀರಿದ ಭಕ್ತ ಪುಂಡಲೀಕನ ಸಲಹಿದ ಭಕ್ತಿಗೆ ಒಲಿದು ಮುಕ್ತಿಯನಿತ್ತ ಪರಮ ಪರುಷ ಪುರುಷೋತ್ತಮನು ನೀನೆ 17 ಅಕ್ಷಯವೆಂದು ರಕ್ಷಿಸಿ ಸಭೆಯೊಳು ದ್ರೌಪದಿ ಕರುಣಕಟಾಕ್ಷದಿ ಸಲಹಿದ ಭಕ್ತವತ್ಸಲನಾಗಿ ಗಜೇಂದ್ರಗೆ ಅಧೋಕ್ಷಜ ನೀನೆ 18 ನರನಾರಿಯು ನಾಂಟೀಶರನಾಗಿ ನಖಮುಖದಲಿ ಹಿರಣ್ಯಕನ ಸೀಳಿ ಭಕ್ತಪ್ರಹ್ಲಾದಗ ಒಲಿದು ಸ್ತಂಭದಿ ಪ್ರಕಟಿಸಿದ ನರಸಿಂಹನು ನೀನೆ 19 ಅನಿಳ ಸ್ನೇಹಿತ ಅಜಗ್ನಾನಗ ಒಲಿದು ಅಹಲ್ಯಾ ಶಾಪ ವಿಮೋಚನ ಮಾಡಿದ ನೆಚ್ಚಿದ ಧ್ರುವನ ನಿಜ ಭಕ್ತಿಗೆ ಒಲಿದು ಅಚಲ ಪದವಿತ್ತುಚ್ಯುತ ನೀನೆ 20 ಜಗದೊಳು ಭಕ್ತಜನರಿಗೆ ಒಲಿದು ಜಾಹ್ನವಿ ನಿರ್ಮಿಸಿ ಜನಕನ ಸಲಹಿದ ಸಾಧು ಸಜ್ಜನ ಮುನಿ ಸಂಜೀವನ ಜಾನಕೀಪತಿ ಜನಾರ್ಧನನು ನೀನೆ 21 ಅಂಗದಗೊಲಿದಾನಂದವನಿತ್ತು ಕುಂದದೆ ಕರೆದುಪಮನ್ಯುನ ಸಲಹಿದ ದಿನಕರ ಚಂದ್ರ ಕಳಿಯಗಳಿತ್ತು ಇಂದ್ರಗೆ ಒಲಿದ ಉಪೇಂದ್ರನು ನೀನೆ 22 ಧರೆಯೊಳು ಭಕ್ತನ ಜನ್ಮವು ಹರಿಸಿ ಹರಿಶ್ಚಂದ್ರನ ಕ್ಲೇಶವು ಪರಿಹರಿಸಿದ ಸುರಮುನಿಗೊಲಿದ ಶ್ರೀ ಹರಿಯು ನೀನೆ 23 ಕಾಳಿ ಮಥನವು ಮಾಡಿ ಕರುಣದಿ ಸುರರಿಗೆ ಅಮೃತವನಿತ್ತು ಸಲಹಿದ ಕಲ್ಕ್ಯಾವತಾರದ ಲೀಲೆಯ ತೋರಿದ ಕಪಟ ನಾಟಕ ಶ್ರೀ ಕೃಷ್ಣನು ನೀನೆ 24 ಸಂಧ್ಯಾನದ ಸಾಹಾಯವನಿತ್ತು ಕಾಯದಿ ಸದ್ಗತಿ ಸಾಧನದೋರಿದ ನರಕೀಟಕ ಮಹಿಪತಿ ತಾರಕ ಗುರುಮೂರ್ತಿಯ ಪರಮ ದಯಾನಿಧಿಯು ನೀನೆ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರಮಪರುಷನೆ ಕೃಷ್ಣ ಕಣ್ತೆರದು ನೋಡೊ ಪ ಶಿರಿ ಅರಸ ದಯಸಿಂಧು ಶ್ರಾವ್ಯಮಂಗಳ ಕೀರ್ತಿ ಅ.ಪ. ದ್ವಿಜಗಮನ ವೃಜಿನಹರ ಭುಜಗತಲ್ಪನೆ ದೇವ ಅಜತಾತ ಗಜವರದ ಕುಜ ನಿವಾರಣನೆ ಭಜನೆ ಪಾಲಿಸು ಎನ್ನ ವಿಮಲ ಮನದಲಿ ನಿಂತು ಋಜು ಪುಂಗವರ ದೈವ ನಿರ್ಜರರ ಬಾಂಧವನೆ 1 ಒದ್ದವಗೆ ಶಿಕ್ಷಿಸದೆ ಬೈದವಗೆ ಗತಿ ಇತ್ತೆ ನಿರ್ದೋಷ ಗುಣಪೂರ್ಣನೆಂದು ಶ್ರುತಿ ಸಾರುತಿದೆ ನಿದ್ದೆ ಮಾಡುವಗೊಲಿದಿ ಮುಕ್ತಿಯನಿತ್ತೆ ಯುದ್ಧದಲಿ ಶರದಿಂದ ಹೊಡೆದವಗೆ ನೀನೊಲಿದೆ 2 ಶುದ್ಧ ಆನಂದಾಬ್ಧಿ ಜಯೇಶವಿಠಲನೆ ಮಧ್ವ ಮುನಿದೈವ ಸಿದ್ಧರೊಡೆಯ ಉದ್ಧವನ ಗುರು ಸುಧಾಮ ಮಿತ್ರನೆ ಮನ ತಿದ್ದಯ್ಯ ಜ್ಞಾನ ನಿನ್ನಲ್ಲಿ ನಿಲುವಂತೆ 3
--------------
ಜಯೇಶವಿಠಲ
ಪುಲಿಗಿರಿ ಧೊರೆಯ ಪ ಶ್ರೀರಮಣೀ ನಿಜವಲ್ಲಭನ-ಮಾರ ಚತುರ್ಮುಖರಿಗೆ ಪಿತನ ನಾರದ ಶರ್ವ ಪಿತಾಮಹನ-ಮದ- ವಾರಣಮುಖ ಪ್ರಪಿತಾಮಹನ 1 ಕಿರೀಟವ ನಿರಸಿಹನ ಕರದಲ್ಲಿ ಚಕ್ರವ ಪಿಡಿದಿಹನಾ-ನಿಜ-ಕರುಣದಿ ಭಕ್ತರಿಗೊಲಿದಿಹನ2 ಕೊರಳೊಳು ಪೊತ್ತಿಹನ ಬಾಲಕ ಸುಕೃತಾನುಗ್ರಹನ-ನಿಜ ಲೀಲೆಯೊಳಾಸುರ ನಿಗ್ರಹನ 3 ಪಡೆದ ಪಾದಾಂಬುಜನ ವಿಹಂಗ ಗುಣಗಣ ಸಂಗತನ 4 ಭವಭಯ ಮೋಚನನ ವರವ್ಯಾಘ್ರಾಚಲ ನಾಯಕನ-ನಮ್ಮ- ವರದವಿಠಲ ವರದಾಯಕನ5
--------------
ಸರಗೂರು ವೆಂಕಟವರದಾರ್ಯರು
ಬಣ್ಣಿಸಲಳವಲ್ಲ ನಿಮ್ಮ ಪ್ರ ಸನ್ನ ಮೂರುತಿ ಯಲಗೂರ ವಾಸ ಹನುಮಾ ಪ ಅಂಜನಿಯುದರದಲಿ ಜನಿಸೀ ತೇಜ ಪುಂಜ ರಾಮನ ಸೇವೆಯಲಿ ಮನನಿಲಿಸಿ ಕಂಜ ಛವನ ಪಟ್ಟ ಧರಿಸಿ ಬಲು ರಂಜನೆ ಮೆರೆದ ಭಕ್ತಾಗ್ರಣಿಯೆನಿಸಿ 1 ಜ್ಞಾನ ಭಕುತ ವೈರಾಗ್ಯದಲಿ ಸರಿ ಉರಗ ಲೋಕದಲಿ ಮಾನನಿಧಿಯೇ ವಿಕ್ರಮದಲಿ ಚರ ಣಾಗತೆ ರಕ್ಷಕ ನೇಮ ಬರದಿರಲಿ2 ಮೂರವ ತಾರದಿ ಬಂದು ದೀನೋ ದ್ಧಾರಣ ಮಾಡಿದೆ ಸದ್ಬೋಧ ಗರದು ಕಾರುಣಿ ಗುರುವಾಗೆಂದೆಂದು ಸಹ ಕಾರದಿ ಮಹಿಪತಿ ಸುತಗೊಲಿದಿಂದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರಯ್ಯ ಶ್ರೀನಿವಾಸ ಭಕ್ತರ ಬಳಿಗೆ ಪ ತೋರಯ್ಯ ನಿನ್ನ ದಯ ತೋಯಜಾಂಬಕನೆ ಅ.ಪ. ದುರುಳರ ತರಿವಂಥ ವರಚಕ್ರಧಾರಿ ಪರಮಾತ್ಮ ಪರಬೊಮ್ಮ ಪರರಿಗುಪಕಾರಿ1 ಅರಣ್ಯದಿ ಮೊರೆಯಿಟ್ಟು ಕರಿರಾಜಗೊಲಿದಿ ತರಳ ಪ್ರಹ್ಲಾದನ್ನ ವೈರಿಯ ಮುರದಿ 2 ವರ ಷೋಡಶ ಗಿರಿಯಲ್ಲಿ ನಿರುತ ನೀನಿರುವಿ ಹರಿದಾಸರು ಕರೆದರೆ ಎಲ್ಲಿದ್ದರೆ ಬರುವಿ3 ಅನಂತನಾಮನೆ ನಿನ್ನ ಅನಂತ ಸದ್ಗುಣವ ನೆನೆವರಿಗೊಲಿವಂಥ ಪವಮಾನನೀಶಾ 4 ಅಜಭವಾಧಿಪ ನೀನು ವಿಜಯಸಾರಥಿಯೇ ತ್ರಿಜಗವಂದಿತ ಈಶ ವಿಜಯವಿಠ್ಠಲನೇ 5
--------------
ವಿಜಯದಾಸ