ರಾಮ ನಿನ್ನಯ ದಿವ್ಯ ನಾಮವೇ ಗತಿಯೆಂಬೆ
ಪಾಮರನೆಂದೆನ್ನ ಪಾಲಿಸು ತಂದೆ ಪ.
ಸುರರಾಜನಂಗಸಂಗವಗೈದು ಶಿಲೆಯಾದ
ವರಮುನಿ ಗೌತಮನರಸಿಯು ನಿನ್ನ
ಚರಣಾರವಿಂದ ಸಂಸ್ಪರ್ಶಮಾತ್ರದಿ ದಿವ್ಯ
ತರುಣಿಯಾಗಿಹಳೆಂಬ ಪರಿಯ ನಂಬಿದೆನು 1
ಪ್ರಥಮ ವರ್ಣವು ಪಾಪ ತತಿಗಳ ತರಿವುದು
ಜತನ ಮಾಡುವುದನ್ಯ ವರ್ಣವೆಂದೆನುತ
ನಿತ್ಯ ಸಂಸ್ತುತಿಮಾಳ್ಪವದರಿಂದಾ-
ಶ್ರಿತ ಕಲ್ಪತರು ನೀನೆ ಗತಿಯೆಂಬೆ ನಿರತಾ 2
ನಿತ್ಯ ನಿರ್ನಾಮಗೊಳಿಸು
ಪನ್ನಗಾಚಲನಾಥ ಪರಿಪೂರ್ಣ ಕೃಪೆಯಿಂದ
ಮನ್ನಿಸಿ ಮನಸನ್ನು ನಿನ್ನಲ್ಲಿ ಇರಿಸು 3