ಒಟ್ಟು 180 ಕಡೆಗಳಲ್ಲಿ , 50 ದಾಸರು , 157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ನೋಡಿದೆ ನಂದತೀರ್ಥ ಮು - ನೀಂದ್ರವಂದಿತ ಚರಣನಾ ಪ ವಂದಿಸುವ ಭಕುತರಿಗೆ ನಿತ್ಯಾ - ನಂದಫಲದ ಮುಕುಂದನಾಅ.ಪ ತಮನವೈರಿಯ ಮಂದರಧರ ಕಮಠರೂಪವ ಪೊತ್ತನಾ ಕಮಲಸಂಭವಭವನಕಶಿಪು ದಮನ, ವಾಮನಮೂರ್ತಿಯಾ 1 ಭೂಮಿಪರ ಸಂಹಾರಿ, ದಶರಥ ರಾಮನಾಮದಿ ಮೆರೆದನಾ ಸೋಮಪಾಧಿಪಸುತಗೆ ಒಲಿದು ಸಂ - ಗ್ರಾಮದಲಿ ರಕ್ಷಿಸಿದನಾ 2 ಬುದ್ಧರೂಪದಿ ತ್ರಿಪುರಸತಿಯರ ಬುಧ್ಧಿ ಭೇದವ ಮಾಳ್ದನಾ ಬುದ್ಧರಲಿ ಕಲಿಮುಖ್ಯಯವನರ ಗೆದ್ದ ಗಾನವಿಲೋಲನಾ 3 ದೇವಕೀವಸುದೇವತನಯನ ದೇವಗಣ ಸಂಸೇವ್ಯನಾ ಈ ವಸುಂಧರೆಯೊಳಗೆ ಮಧ್ವಸ - ರೋವರದಲಾವಾಸನಾ 4 ಪೋತವೇಷನ ವೀತಶೋಕನ ಪೂತನಾದಿವಿಘಾತನಾ ಮಾತರಿಶ್ವಪ್ರಿಯಾ ಗುರುಜಗ ನ್ನಾಥವಿಠಲರಾಯನಾ 5
--------------
ಗುರುಜಗನ್ನಾಥದಾಸರು
ಇಂದಿಗೆ ಇರುತಿಹ ಮಂದನ ಶÀ್ರಮ ಬಹು ಬಂಧನ ಬಿಡಿಸೊ ಗೋವಿಂದ ಎನ್ನನು ಕಾಯೊ ಮುಕುಂದ ಪ ಹಿಂದಿನ ಕಾಲದೊಳಾದ ಪ್ರತೀಕಾರ ದಿಂದ ಬಾಧಿಪನಿವನೆನ್ನ ಕಾಯ ಬೇಕೈಯ್ಯಾ ನೀ ಎನ್ನ 1 ನಿಂದ್ರಾದೆ ಗ್ರಾಮದಿ ಪೊಂದಾದೆ ಜನರನ್ನು ಕುಂದುತ ಬಂದೆನಾರಣ್ಯ ವಾಸವಮಾಡುತ ಇನ್ನಾ 2 ಇಂದಿರಪತಿಪಾದದ್ವಂದ್ವವು ಮನ್ಮನ ಮಂದಿರದಲಿ ತೋರಿನ್ನಾ ಐದುವೆ ನಿಜಸುಖವನ್ನಾ 3 ಪೊಂದಿಸು ನಿನ್ನಯ ವಂದಿಸುವಾ ಜನ ಸಂದಣಿಯೊಳು ಮುಂದೆನ್ನಾ ಐದುವೆ ನಾ ನಿನ್ನಾ 4 ಇಷ್ಟುಶ್ರಮವ ನಾ ತಪ್ಟಿಸಿ ಪೇಳಿದೆ ಧಿಟ್ಟಗುರುಜಗನ್ನಾಥಾ ವಿಠ್ಠಲ ನಿಜಜನಪ್ರೀತಾ
--------------
ಗುರುಜಗನ್ನಾಥದಾಸರು
ಎಂಥ ಮಹಿಮ ಬಲವಂತ ನಮ್ಮ ್ಹನುಮಂತ ನಿಂತು ನೀ ಸಲಹೋ ನಿರಂತರದಲ್ಲೆನ್ನ ಪ ರಾಮನುಂಗುರ ಸೀತೆಗಿಟ್ಟ ಮರವ ಕಿತ್ತಿಸೂ- ರೆ ಮಾಡ್ಯಕ್ಷಕುಮಾರನ್ನ ಮುರಿದು ರಾವಣೇಶನ ಲಂಕಾದ್ವೀಪಕೆ ದೀಪಗಳ್ಹಚ್ಚಿ ಹಾರಿದ್ವಾರಿಧಿ ವಾರ್ತೆ ಹರಿಗೆ ಬಂದರುಹಿದ 1 ಭೀಮಸೇನವತಾರ ಮಾಡಿ ತಾ ಪಾಂಚಾಲಿ ಕೂಡಿ ಕೊಂಡ್ವನವಾಸ ಚರಿಸಿ ಬಂದು ಕ್ರೂರ ಕುರುಪತಿ ಕುಲಕಂತಕನೆಂದರಸನ ಪಟ್ಟ- ರಾಜ್ಞಿ ದ್ರೌಪದಿಧರ್ಮರಾಜಗ್ವಂದಿಸಿದನು 2 ಮಾಯಾವಾದಿಯ ಮುರಿದೊತ್ತಿದ ತಾ ಮಧ್ವ- ರಾಯರಾಗಿ ರಜತಪೀಠಪುರದಲ್ಲೆ ಭೀಮೇಶ ಕೃಷ್ಣನ್ನ ನಿಲಿಸಿ ಬಂದೀ ಬೊಮ್ಮ ಗ್ರಾಮದಿ ನಿಂತನೆ ಸೀತಾರಾಮರ ಸಹಿತವಾಗಿ3
--------------
ಹರಪನಹಳ್ಳಿಭೀಮವ್ವ
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉಪದೇಶಾತ್ಮಕ ಪದಗಳು ನೀಚವೃತ್ತಿಯ ಬಿಟ್ಟು ಸೋಚಿತ ಕರ್ಮವನೇ ಯೋಚನೆ ಮಾಡುತಾ ಪ ನೀಚ ಜನರುನು ಯಾಚಿಸದೆ ಸವ್ಯ ಸಾಚಿಯ ಸಖನ ಭಜಿಸೋ ಪ್ರಾಣೀ ಸರಸ ಸಲ್ಲಾಪ ಶ್ರೀ ಹರಿಕಥಾ ಶ್ರವಣ ನೀ ಪರಮಭಕ್ತರ ಸಂಗವಾ ನಿರುತದಲಿ ನೀ ಮಾಡಿ ಹರುಷ ಮನವನು ತಾಳಿ ಚರಿಸೊ ಈ ಧರಣಿ ಮಂಡಲಾ ಅರಸಿಗಾದರು ಒಮ್ಮೆ ಶಿರಸುಬಾಗದಲೆ ಶ್ರೀ ಹರಿದಾಸರಾ ಚರಣಕೆ ಎರಗ್ಯವರ ಮನಿದ್ವಾರಪರಿಚರನು ಎಂದೆನಿಸಿ ಭರದಿಂದ ಬಾಳಿ ಬದಕೋ ಇದಕೋ 1 ಅಲ್ಪ ಆಶೆಯ ಮಾಡಿ ಅಲ್ಪ ಮಾನವನಾಗಿ ಕಲ್ಪನೀಯನು ಮಾಡದೆ ಸ್ವಲ್ಪ ಫಲದಲಿ ಮನಸು ಕಲ್ಪಿಸಿ ಪ್ರಿತಿದಿನವ ನಲ್ಪ ಜನರನು ನಿಂದಿಸೀ ಅಲ್ಪನಾರೇರು ಮಾಳ್ಪ ಒಲ್ಪಿಗೆ ಮರುಳಾಗಿ ಪಲ್ಕಿಸಿದು ಬಾಯ್ದೆರೆಯದೆ ಸ್ವಲ್ಪಗಾಲದಲಹಿತಲ್ಪ ಪದಪದುಮಗಳ ಕಿಂ - ಜಲ್ಕ ನೀನಾಸ್ವಾದಿಸೋ ಲೇಸೋ2 ಪೊಡವಿ ಮೊದಲಾದ ಈ ಮಡದಿ ಮಕ್ಕಳು ಗೇಹ ವಡವಿ ವಸನವ ಬಯಸದೆ ಪೊಡವಿಮಂಡಲದಿ ಬಹು ಬಡವ ನಾನೆನುತಲೀ ಪೊಡವಿ ಪಾಲರ ಸೇವೆಯಾ ಧೃಢಮನದಿ ನೀ ಮಾಡೆ ಕೊಡರೊಂದು ದುಗ್ಗಾಣಿ ಕಡುಮೂರ್S ಎಲೊ ಪಾಪಿಯೇ ಬಿಡದೆ ದೈನ್ಯದಿ ನೀನು ಜಡಜನಾಭನ ಪಾದ ಬಿಡದೆ ಸೇವಿಸಲು ಫಲವ ಕೂಡುವಾ 3 ನಾ ಮಾಡೋ ವ್ಯಾಪಾರ ನೀ ಮಾಡಿಸುವಿ ಎಂಬ ಈ ಮಹಾಙÁ್ಞನ ಮಾರ್ಗ ನೇಮವಾಗಿ ತಿಳಿದು ಗ್ರಾಮ ಗ್ರಾಮದಲ್ಲಿದ್ದ ಪಾಮರೋತ್ತಮ ಜನರಿಗೆ ಧಾಮನಾಗಿಹ ನಮ್ಮ ರಾಮದೇವನ ಪಾದ ತಾಮರಸ ಕೊಂಡಾಡುತಾ ಪ್ರೇಮ ಹರುಷಾಮರ್ಷ ಯಾಮಯಾಮಕೆ ಬರಲು ಕಾಮಿಪುದು ನಿನಗೆ ಸಲ್ಲಾ ಖುಲ್ಲಾ 4 ನಗುವ ಜನರಾ ಕಂಡು ನಗುವುದೇ ಲೇಸೆಂದು ಸಿಗದೆ ಜನರೊಳು ತಿರುಗುತಾ ಬಗೆ ಬಗೆಯ ಮಾತುಗಳ ಬೊಗಳುವಾ ಜನರಿಗೆ ಹಗಲಿರಳು ಹರಿ ಕಾಯಲೀ ನಿಗಮ ವಂದಿತನ ಪ್ರತಿ ಮೆಗಳು ಇವು ಎಂದು ತಿಳಿಯೇ ನಗುತ ಹರುಷವ ಕೊಡುವ ಸುಗುಣಪೂರಣ ಗುರು ಜಗನ್ನಾಥವಿಠಲರಾಯಾ ಮರೆಯಾ 5
--------------
ಗುರುಜಗನ್ನಾಥದಾಸರು
---------ದಾನು ಮುಕ್ತಿ ಭಕ್ತಿ --- ಪ -----------ಭಾರತನವು ಬಿಟ್ಟು 1 ಕಮಲ ರಥದಲ್ಲಿ ಧರಿಸಿ ಮೇಲುವಲ್ಲಿ ಹಣೆಯ ಕಟ್ಟಿ ಮೇಲೆ ಪಟ್ಟಿ ನಾಮಗಳಿಟ್ಟೂ 2 ನೀ ----------ದೇಹದಿಯಂಥ ವೇಗದಿಂದ ನಡೆದು ಸಂಸಾರ ಗೃಹಧರ್ಮ ಹಿಡಿದಾನಂತಕಾಲ---------ನೆಂದು 3 ಭಾರಮಾರ್ಗ ಹಿಡಿದು ಅತಿಧೀರನಾಗಿ ಗ್ರಾಮದೊಳಗೆ ಮೂರು ಎರಡು ಮನಿಗಳ ಬಿಟ್ಟು ಮೂರು ಮೂರು ಮನಿಗಳ್ಹಾದಿಲೆ 4 ಸ್ಥಿರಹೊನ್ನ ವಿಠ್ಠಲನ್ನ ದಿವ್ಯ ಚರಣದಲ್ಲಿ ಚಿತ್ತವಿಟ್ಟು ಪರಮ ಹರುಷದಿಂದ ಪಾಡುತ ಭಕ್ತಿ ಸಿದ್ಥಿಯಲ್ಲಿ 5
--------------
ಹೆನ್ನೆರಂಗದಾಸರು
(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
(ಲಿಂಗಸುಗೂರಿನ ಹತ್ತಿರ ಇರುವ ಬಾಗಿಸೋಪಿನ ಗ್ರಾಮದ ಶ್ರೀ ಪ್ರಾಣೇಶನ ಸ್ತೋತ್ರ) ಬಾಗಿ ಸೋಪಿಲಿ ವಾಸವಾಗಿಹ |ಯೋಗಿ ಪ್ರಾಣರಾಯಾ ||ಚಾಗುಮಾಡದೆ ಭಕ್ತರ ದುರಿತವ |ನೀಗಿ ಸಲಹಯ್ಯಾ ಪ ಕಪಿಗಳೆಲ್ಲಾ ಸುಗ್ರೀವನ ಭಯದಿಂ |ತಪಿಸುತಲಿರೆ ಅವರಾ ||ಲಪನ ಕಾಣುತಲೆ ಅಭಯವನಿತ್ತು |ನಿಪೊರೆದೆ ಕಪಿವರಾ 1 ಹಿಂದೆ ಭೂಸುರನು ಚಿಂತಿಸುತಿರಲಾ |ನಂದದಿಂದ ಏನಾ ||ಬಂಧನಾ ಬಿಡಿಸಿದೆ ಬಕನನು ಕೊಂದು |ತಂದೇ ಶ್ರೀಪವನಾ 2 ಈಶನೆ ತಾನೆಂತೆಬುವ ಖಳರಾ ಸೋಸಿನಲ್ಲಿ ಮುರಿದೇ ||ಶ್ರೀಶ ಪ್ರಾಣೇಶ ವಿಠಲರಾಯನೇ |ಪರದೈವವೆಂದೊರದೇ 3
--------------
ಶ್ರೀಶಪ್ರಾಣೇಶವಿಠಲರು
(ಲಿಂಗಸುಗೂರಿನ ಹತ್ತಿರ ಚಿಲಕರಾಗಿ ಗ್ರಾಮದಲ್ಲಿರುವ ಗೇಣರಾಯನೆಂಬ ಪ್ರಾಣದೇವರು) ಗೇಣುರಾಯ ನಿನ್ನಾಮಹಿಮಿಯ |ಸ್ಥಾಣು ಅರಿಯ ಮುನ್ನಾ |ದೀನ ರಕ್ಷಕನೆಂಬೋ ಬಿರುದು ಕೇಳಿತವ |ಧ್ಯಾನವ ಕೊಡು ಎಂದೇ, ತಂದೇ ಪ ರವಿಜನ ಭಯದಿಂದ ಕಪಿಗಳು |ಲಯ ಚಿಂತೆಗಳಿಂದಾ ||ಪವನ ಕುವರ ಕಂಡಾಕ್ಷಣ ಈ ಭಯ |ತವಕನಚ್ಚಿ ಪೊರದೀ, ಮೆರದೇ 1 ಭೂಸುರ ಚಿಂತಿಸೆ ಬರಿದೀ ಈ |ಮೊರಿ ಕೇಳಿ ಆ ಶಿಶುವಿನ ಉಳಾಹಿದೇ ||ಘಾಸಿಗೊಳಿಸುವ ಘಳಬಕನೊರಸಿ |ಭಾಸುರ ಕೀರ್ತನೆಯ ಪೊರದಿ ಇಷ್ಟಾರ್ಥವ ಕರದೀ 2 ಪರಿಯೊಳು ಚಿಲಕರಾಗಿ ಗ್ರಾಮದೊಳು |ಮೆರೆಯುವ ಯತಿಯೋಗೀ ||ಗುರುಶ್ರೀಶ ಪ್ರಾಣೇಶ ವಿಠಲನ |ಚರಣ ಪೊಕ್ಕವರ ಸಲಹುವ ಕರುಣೀ | ಯೇಧಣಿ 3
--------------
ಶ್ರೀಶಪ್ರಾಣೇಶವಿಠಲರು
*ಆರಿಗಾದರು ಪೂರ್ವದ ಕಟ್ಟಳಿಯು ತಪ್ಪುದು ವಿಧಿಬರಹವು ಪ. ಪೊಡವಿಭಾರವ ಪೊತ್ತು ಮೃಡಗೆ ಭೂಷಣನಾಗಿ ಹೆಡೆಯಲ್ಲಿ ಮಾಣಿಕವಯಿಟ್ಟುಕೊಂಡು ಬಿಡದೆ ಶ್ರೀಹರಿಗೆ ಹಾಸಿಗೆ ಆದ ಫಣಿಪಂಗೆ ಅಡವಿಯೊಳಗಣ ಹುತ್ತ ಮನಿಯಾಯಿತೈಯ್ಯಾ 1 ಸುರಪತಿಯಗೆದ್ದು ಸುಧೆಯನೆ ತಂದು ಮತ್ತೆ ಮಾತೆಯ ಸೆರೆಯ ಪರಿಹರಿಸಿ ಬಹುಶಕ್ತನೆನಿಸಿಕೊಂಡ ಹದಿನಾಲ್ಕು ಲೋಕನಾಳುವವನ ಹೊತ್ತು ಇರುವವಗಾಯಿತು ಮನೆಯು ಮರದ ಮೇಲೆ 2 ರಾಮಚಂದ್ರನ ಸೇವೆಮಾಡಿ ಮೆಚ್ಚಿಸಿಕೊಂಡು ರಾವಣನ ಗರ್ವಮುರಿದು ಬಂದೂ ರೋಮರೋಮಕೆ ಕೋಟಿಲಿಂಗಧರಿಸಿದ ಹನುಮಂತಗೆ ಗ್ರಾಮಗಳ ಕಾಯ್ವದಾಯಿತೈಯ್ಯಾ 3 ಮೂರ್ಲೋಕಕಾಧೀಶ ಮುಕ್ಕಣ್ಣ ಶಿವನೆಂದು ಸಾರುತಿದೆ ವೇದ ಸಟೆಯಲ್ಲವಿದು ಪಾರ್ವತಿಗೆ ಪತಿಯಾದ ಕೈಲಾಸವಾಸನಿಗೆ ಊರಹೊರಗಣ ಕಾಡ ಕಾಯ್ವದಾಯಿತೈಯ್ಯಾ 4 ಮೀರಲಳವಲ್ಲಾ ಮುನ್ನಿನಾ ಕರ್ಮವನು ಕಾರಣಕರ್ತನಿಗಲ್ಲದೆ ಮಾರಪಿತ ಹೆಳವನಾಕಟ್ಟೆರಂಗೈಯ್ಯನ ಸೇರದ ಕಾಲವ್ಯರ್ಥವ್ಯಾದಿತೈಯ್ಯಾ 5
--------------
ಹೆಳವನಕಟ್ಟೆ ಗಿರಿಯಮ್ಮ
373ಶಿವನು ನೀನಾದರೆ ಶಿವನ ರಾಣಿ ನಿನಗೇನೊ ಅವಿವೇಕ ಮನುಜ ಈ ಮಾತು | ಈ ಮಾತು ಕೇಳಿದರೆ ಕವಿಜನರು ನಗರೆ ಕೈ ಹೊಡೆದು 1 374ಎಲ್ಲ ಬಂದೇ ಎಂಬ ಖುಲ್ಲ ಮಾನವ ನಿನ್ನ ವಲ್ಲಭೆಯ ಬೆರೆದು ಸಂತಾನ | ಸಂತಾನ ಪಡೆವೇಕೆ ಇಲ್ಲವೇ ಜನನಿ ಭಗಿನೇರು 2 375ಬಿಂಬವೊಂದೆ ಪ್ರತಿಬಿಂಬ ವೊಂದೆಂಬಿ ಈಶು ದ್ಧಾಂಬರದ ನೆರಳು ಕಪ್ಪಾಗೆ | ಕಪ್ಪಾದ ಬಳಿಕ ನೀ ನೆಂಬೊ ಈ ಮಾತು ಪುಸಿಯಲ್ಲಿ 3 376 ಎಲ್ಲ ಒಂದೆ ಎಂಬ ಸೊಲ್ಲು ಖರೆಯೆಂತೆನಲು ಖರೆಯೆಂಬ ಮಾತುಗಳು ಸುಳ್ಳೆನ್ನರೇನೊ ಸುಜನಾರು 4 377 ನಿಮ್ಮ ನಾ ಬೈದರೆ ನಮ್ಮ ನೀವ್ ಬೈದರೆ ಅದ್ವೈತ ಸುಮ್ಮನಿರಬೇಕು ಎಲೊ ಭ್ರಾಂತ 5 378 ಶುದ್ಧ ಬ್ರಹ್ಮನ ಸುಂಗುಣವ ಕದ್ದ ಪ್ರಯುಕ್ತ ಪ್ರ ಸಿದ್ಧ ಚೋರತ್ವ ನಿನ್ನಲ್ಲಿ | ನಿನ್ನಲ್ಲಿ ಪೊದ್ದಿತೊ ಉದ್ಧಾರವೆಲ್ಲೊ ಭವದಿಂದ 6 379 ಮಾಯವಾದಿಯ ಮತವು ಹೇಯವೆಂಬುದು ಸಿದ್ದ ತಾಯಿತಂದೆಗಳು ಸತಿಪುತ್ರ | ಸತಿಪುತ್ರರಗಲಿದರೆ ಬಾಯಿ ಬಿಟ್ಯಾಕೊ ಆಳುತಿದ್ದಿ 7 380 ಸುಳ್ಳಿಗಿಂತಧಿಕ ಮತ್ತಿಲ್ಲವೋ ಮಹಪಾಪ ಸುಳ್ಳು ಕಳ್ಳತನವು ನಿನ್ನಲ್ಲಿ | ನಿನ್ನಲ್ಲಿ ಉಂಟಾಯಿ ತಲ್ಲೊ ಜಾರತ್ವ ಇದರಂತೆ 8 381ಮೇ ಮಾತೆ ವಂಧ್ಯೆಯೆಂಬ ಈ ಮಾತಿನಂತೆ ಮು ಅಪುಸಿಯಿಂಬೀ ಮಾತುಗಳು ಭ್ರಾಮಕವೆ ಖರೆಯೊ ನಿಜವಲ್ಲ 9 382 ಶಶವಿಷಾಣಗಳೆಂದು ಒಪ್ಪುವರೆ ಬಲ್ಲವರು ಮೊಲೆಹಾಲು ಉಂಡಿತೋ ರಿಸೊ ಮಿಥ್ಯೆ ಸತ್ಯವಹುದೇನೊ 10 383ಸತ್ಯವೆಂದರೆ ಖರೆಯು ಮಿಥ್ಯೆಯೆಂದರೆ ಸುಳ್ಳು ನ್ಮತ್ತ ಈ ಮಾತು ನಿಜವೆಲ್ಲಿ 11 384ಭೀತಿ ನಿರ್ಭೀತಿ ಶೀತತಾಪಗಳೊತ್ತಟ್ಟು ನೀತವಾಗಿಹವೆ ಜಗದೊಳು |ಜಗದೊಳಿದ್ದರೆ ತೋರು ಜಾತಿ ಭೇದಗಳು ಇರಲಾಗಿ 12 385 ಜೀವೇಶರೊಂದೆಂಬ ಈ ಮಾತು ಕೇಳ್ವರಿಗೆ ಕೇವಲ ಶ್ರಾವ್ಯವೆಂದೆಂದು | ಎಂದೆಂದು ಬುಧರು ಪಶು ಗಾವಿ ನೀನೆಂದು ಕರೆಯಾರೆ 13 386 ಗುಣವಂತನೆಂಬ ಈ ಮಾತನು ಕೇಳಿ ಸುಖಿಸದವ ಮನುಜ ಪಶುಸಿದ್ಧ ಪುಸಿಯಲ್ಲ | ಪುಸಿಯಲ್ಲ ನಿನ್ನ ಮತ ಗಣನೆ ಮಾಡದಲೆ ಬಯ್ವೋರ 14 387ಮಲದ ಗರ್ತಕೆ ಶುದ್ಧ ಜಲಧಿ ಸಮಯವೆಂತೆಂಬಿ ಕಲುಷವರ್ಜಿತಕೆ ತೃಣಜೀವ | ತೃಣಜೀವ ಸರಿಯೆ ಸಿಂ ಬಳಕ ಗೋಘೃತವು ಸಮವಹುದೆ 15 388 ಐರಾವತಕೆ ಸರಿಯೆ ಕೂರಿಹೇನಿನ ಮರಿಯು ತೋರಿತೊ ನಿನ್ನ ಅಜ್ಞಾನ 16 389 ದ್ವಾಸುಪರ್ಣಾ ಎಂಬ ಈ ಶ್ರುತಿಗಳಲ್ಲಿ ವಿ ಶ್ವಾಸ ಮಾಡದಲೆ ಜೀವೇಶ | ಜೀವೇಶಕೈಕ್ಯೋಪ ದೇಶ ಮಾಡಿದವ ಚಂಡಾಲ 17 390ಅಜರಾಮರಣ ಬ್ರಹ್ಮ ಭುಜಗಭೂಷಣ ಪೂಜ್ಯ ತ್ರಿಜಗ ದೇವೇಶ ಹರಿಯೆತ್ತ | ಹರಿಯೆತ್ತ ನೀನೆತ್ತ ಅಜಗಜನ್ಯಾಯ ಪುಸಿಯಲ್ಲ 18 391 ಪಾಲುಗಡಲೊಳಗಿಪ್ಪ ಶ್ರೀ ಲೋಲ ಹರಿಯೆಲ್ಲಿ ಹೇಲುಚ್ಚೆವೊಳಗೆ ಹೊರಳುವ | ಹೊರಳಾಡಿ ಬಳಲುವ ಖೂಳ ಮಾನವನೆ ನೀನೆಲ್ಲಿ 19 392 ಕ್ಷೀರಾಂಬುಧಿಗೆ ಸರಿಯೆ ಕಾರಿಕೆಯ ಶ್ಲೇಷ್ಮ ಭಾ ಗೀರಥಿಗೆ ಸಮವೆ ಖರಮೂತ್ರ | ಖರಮೂತ್ರ ಜೀವ ಲ ಕ್ಷ್ಮೀರಮಣಗೆಣೆಯೆ ಜಗದೊಳು 20 393ಗುಣಪೂರ್ಣ ಸರ್ವಜ್ಞ ಅಣುಮಹದ್ಗತನ ನಿ ರ್ಗುಣ ಅಲ್ಪನೆನುತಿದ್ದಿ | ಎನುತಿದ್ದಿ ಹರಿಗೆ ದೂ ಷಣೆಯು ಬೇರುಂಟೆ ಇದಕಿಂತ 21 394 ಈಶ ನಾನೆನಲು ಕೀನಾಶನಿಂದಲಿ ದಣಿಪ ದಾಸನೆಂಬುವಗೆ ದಯದಿಂದ | ದಯದಿಂದ ತನ್ನಯಾ ವಾಸದೊಳಿಟ್ಟು ಸಲಹೂವ 22 395ಈಶತ್ವ ವೆಂಬುದು ಲಕುಮೀಶಗಲ್ಲದೆ ಜೀವ ರಾಶಿಗಳಿಗುಂಟೆ ಈ ಶಕ್ತಿ | ಈ ಶಕ್ತಿ ಸತ್ವಗುಣ ಈಶ ಬಿಟ್ಟಿಹನೆ ಜಗದೊಳು 23 396 ಉದ್ಗೀಥಶ್ರೀ ಪ್ರಾಣ ಹೃದ್ಗತನು ಜಗದೇಕ ಸದ್ಗುರುವರೇಣ್ಯನೆನುತಿಪ್ಪ | ಎನುತಿಪ್ಪರಿಗೆ ಯಮ ಗದ್ಗದನೆ ನಡುಗಿ ನಮಿಸುವ 24 397 ಸ್ವಾಮಿ ಭೃತ್ಯನ್ಯಾಯ ಈ ಮಾತಿನೊಳಗುಂಟು ಗ್ರಾಮಧಾಮಗಳು ಇದರಂತೆ | ಇದರಂತೆ ನೋಡಿಕೊ ನೀ ಮಾತ್ರ ನುಡಿಯೆ ಸಾಕೆಂಬೆ 25 398ಈಶ ನಾನೆಂದವನ ಶ್ವಾಸ ಬಿಡಗೊಡದೆ ಯಮ ಸೆಳೆದೊಯಿದು ನರಕದೊಳು ಘಾಸಿಗೊಳಿಸುವನೊ ಬಹುಕಾಲ 26 399 ಮಾತಾ ಪಿತರ ದ್ರೋಹಿ ಬಂಧು ಘಾತಕ ಬ್ರಹ್ಮ ಘಾತಕನು ನೀನು ಪುಸಿಯಲ್ಲ | ಪುಸಿಯಲ್ಲ ಶ್ರೀ ಜಗ ನ್ನಾಥ ವಿಠಲನೆ ನಾನೆಂಬಿ 27
--------------
ಜಗನ್ನಾಥದಾಸರು
ಅಘಟಿತ ಘಟನಾತ್ಮ ಶಕ್ತಿಯ ನಂಬಿದ ರಘುಕುಲವೇನಿರದು ಮಗುವನು ಮಾತೆ ಮಮತೆಯಿಂದ ಪೊರೆವಂತೆ ನಗುತ ರಕ್ಷಿಪ ಬಿರಿದು ಪ. ಶಕ್ರನ ಸಲಹ ಬೇಕೆಂದು ವಾಮನವಾಗಿ ಶುಕ್ರ ಶಿಷ್ಯನ ಯಜ್ಞದಿ ವಕ್ರಮತಿಯ ದಾನವರನೆಲ್ಲ ಸದೆದ ತ್ರಿವಿಕ್ರಮಾಹ್ವಯನೀವನು ಚಕ್ರ ಶಂಕ ಖಡ್ಗ ಗದೆಯ ಧರಿಸಿ ರಿಪು ಚಕ್ರ ಕತ್ತರಿಸುವನು 1 ಪಂಚಪಂಚದ ಮೇಲಿನ್ನೆರಡು ವರುಷ ವನ ಸಂಚರಿಸಿದ ಬಳಿಕ ಪಂಚ ಪಾಂಡವರಿಗೆ ಪಂಚಗ್ರಾಮವನೀವ ಹಂಚಿಕೆ ಸರಿಯೆನುತ ಪಂಚಪಾತಕಿ ಕೌರವೇಂದ್ರನ ಸಭೆಯಲಿ ಪಂಚಾಯಿತನಾಗುತ ವಂಚಿಸಿ ಭಾವಿ ವಿರಿಂಚಗೆ ಸಕಲ ಪ್ರಪಂಚಾಧಿಪತ್ಯವಿತ್ತ 2 ಅನುಗಾಲ ನಿಜಪಾದ ವನಜವೆ ಗತಿಯೆಂಬ ಜನರ ಮನೋರಥವ ಮನಸಿಜಪಿತ ತಾನೆ ನೆನೆಸಿಕೊಂಡಿವುದಕನುಮಾನಿಸನು ಸತತ ಸನಕಾದಿ ವಂದ್ಯ ಶೇಷಾದ್ರಿ ಶಿಖರವಾಸ ಮನೆಗಧಿಪತಿಯೆನುತ ಮನ ವಚನಗಳಿಂದ ಮಾಧವಗರ್ಪಿಸಲನುಕೂಲಿಸುವ ನಗುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಧ್ಯಾಯ ಎರಡು ಪದ:ರಾಗ:ಯರಕಲಕಾಂಬೋದಿ ತಾಳ:ಬಿಲಂದಿ, ಸ್ವರ ಷಡ್ಜ ದೇವಕಿಯಲಿ ಅವತರಿಸಿದ ದೇವಾಧೀಶನ ಕಂಡು ಆ ವಸುದೇವನು ಸ್ತುತಿಸಿದ ಕೇವಲ ಭಕುತಿಯಲಿ | ಲಾವಣ್ಯಾಂಬುಧಿಯನಿಸುವ ಭಯದಿಂದ || 1 ಲೋಕಾಧೀಶನೆ ನಿನ್ನ ಅತೌಕಿಕ ರೂಪಾವು ಕಂಡು ಆ ಕಂಸನ ಭಯದಲ್ಲಿ ನಾ ವ್ಯಾಕುಲಳಾಗಿರುವೆ| ಸಾಕೀಕಾಲಕ ಈ ಅಪ್ರಾಕೃತರೂಪವು ಎÀÀನಲು ಶ್ರೀಕಾಂತನು ಆಕ್ಷಣದಲಿ ಪ್ರಾಕೃತ ಶಿಶುವಾದಾ|| 2 ಆ ಕಾಲದಲ್ಯಾದುರ್ಗಾ ತಾ ಕಾಲವ ಕಳಿಯದಲೆ ಗೋಕುಲದಲ್ಲಿ ಪುರುಷೆಂದಾಕಿಯು ತಿಳಿಯದೆ ನಿದ್ರಿಲಯಲ್ಯಾಕ್ರಾಂತಾದಳು ಹುಟ್ಟಿರುವಾಕಿಯ ಮಹಿಮೆ ಇದು|| 3 ಪಟ್ಟಣದಲಿ ಸರ್ವರು ಭಯಬಿಟ್ಟು ನಡರಾತ್ರಿಯೋಳ್ ತಟ್ಟಲು ಬಹುನಿದ್ರಿ ಸೃತಿಗೆಟ್ಟು ಮಲಗಿರಲು | ಹÀುಟ್ಟಿದ ಬಾಲಕನ ನಾ ಬಚ್ಚಿಟ್ಟು ಬರುವೆನೆಂದ ಥಟ್ಟನೆ ನಡದನು ಕೃಷ್ಣನ ಘಡ್ದ್ಹಡದು ಶೌರಿ|| 4 ಕಾಲೊಳಗಿನ ಬೇಡಿಯು ತತ್ಕಾಲಕ ಕಡದಿತು ಬಾಗಿಲಕೀಲಿಗಳೆಲ್ಲಾ ಸಾಲ್ಹಿಡದಿಂದ್ಗರಂತೆ| ಬೈಲಾದವು ಬಾಗಿಲಗಳಾ ಕಾಲದಿ ಹೀಂಗಾದದ್ದು ಬಾಲಕ ಹರಿ ಬದಿಲಿದ್ದ ಮ್ಯಾಲೇನಾಶ್ಚರ್ಯ 5 ವಾಸದ ವೃಷ್ಟಿಯ ಮಾಡಲು ಶೇಷನು ಬೆನ್ನಿಲೆ ಬಂದು ಸೂಸಿ ಬಾಹುವ ಯಮುನಿ ವಾಸುದೇವನ ಕಂಡು ಘಾಸಿಯು ಮಾಡದೆ ಕೂಟ್ಟಳು ಅಸಮಯಕೆ ಹಾದಿ 6 ಗೋಕುಲಕ್ಹೋಗುತ ಶೌರಿಯು ಶ್ರೀ ಕೃಷ್ಣನ ಅಲ್ಲಿಟ್ಟು ಆ ಕನ್ನಿಕೆಯ ತಂದು ತನ್ನಕಿಯ ಬದಿಲಿಟ್ಟಾ| ಆ ಕಾಲಕ ಆ ಬೇಡಿಯ ತಾಕಾಲಗಳಲ್ಲಿತಟ್ಟು|| ಶ್ರೀ ಕಾಂತನ ಸ್ಮರಿಸುತಲೆ ಏಕಾಂತದಲ್ಲಿರುವಾ|| 7 ಬಾಗಿಲುಗಳು ಎಲ್ಲಾ ಮತ್ಥಾಂಗೆ ಕೀಲಿಗಳ್ಯಲ್ಲಾ ಬ್ಯಾಗನೆ ಆದವು ಮುಂಚಿನ್ಹಾಂಗೆ ತಿಳಿಗೂಡದೆ| ಆಗಾ ಕೂಸಿನ ಧ್ವನಿ ಛಂದಾಗಿ ಕಿವಿಯಲಿ ಬೀಳಲು ಬಾಗಿಲಕಾಯುವ ಭೃತ್ಯರು ಬ್ಯಾಗನೆದ್ದರು ಭಯದಿ|| 8 ಗಡಿಬಿಡಿಯಿಂದಲ್ಯವರು ಯಡವುತ ಮುಗ್ಗುತ ತ್ಯೋಡುತ ನಡಿದರು ನಿಂದಿರದಲೆ ಬಹುಸಡಗರದರಮನಿಗೆ| ಒಡಿಯಾನಂತಾದ್ರೀಶನ ಖಡುದ್ವೇಷ ಆಸವಗೆ ನುಡಿದರು ದೇವಕಿದೇವಿಯು ಹಡಿದಾಳೆಂತೆಂದು|| 9 ಪದ್ಯ ನುಡಿಯ ಕೇಳೀಪರಿಯ ಖಡುಪಾಪಿ ಕಂಸ ಗಡವಡಿಸಿ ಕೊಂಡೆದ್ದು ಭಯ ಬಡುವತಲೆ ಶ್ವಾಸವನು ಬಿಡುವುತಲೆ ಭರದಿಂದ ಎಡವುತಲೆ ಮುಗ್ಗುತಲೆ ನಡದನಾ ದೇವಕಿಗೆ ಕುಡು ಕೂಸು ಎಂತ್ಯಂದು ನುಡಿಕೇಳಿ ಮನದಲ್ಲಿ ಮಿಡುಕುತಲೆ ದೇವಕಿಯು ದೃಢವಾಗಿ ಕೈಯೊಳಗೆ ಹಿಡಿದು ಆಕೂಸಿನಾ ಕುಡದೆ ಕಂಸನ ಮುಂದೆ ನುಡಿದಳೀ ಪರಿಯು|| 1 ಪದ:ರಾಗ:ನೀಲಾಂಬರಿ ತಾಳ:ತ್ರಿವಿಡಿ ಕುಡಲಾರೆ ಕೂಸಿನ್ನನಾ ನಿನಗೆ || ಅಣ್ಣ ಕುಡಲಾರೆ ಒಡ್ಡಿ ಬೇಡುವೆ ಕಡಿ ಹುಟ್ಟ ಹೆಣ್ಣದು|| ಪ ಸೂಸಿಯು ನಿನಗೆ ಈಕಿ ತಿಳಿ ನೀನು | ಮತ್ತು ಹಸಗೂಸು ಎಂಬುವದರಿಯೇನು | ಇಂಥಾ ಶಿಶುವಿನಳಿದಾರೆ ಪಾಪ ಬರದೇನು| ವಸುಧಿ ಒಳಗೆ ಬಹು ಹೆಸರಾದವನೋ ನೀನು|| 1 ಹಿರಿಯಣ್ಣನಲ್ಲೇನೊ ನೀ ಎನಗೆ | ಸ್ವಲ್ಪ ಕರುಣಾವಿಲ್ಲವೋ ಎನ್ನೊಳು ನಿನಗೆ|| ಮಕ್ಕಳಿರಧಾಂಗ ಮಾಡಿದಿ ಮನಿಯೋಳಗೆ ಗುರುತಕ್ಕಿದು ಒಂದು ನೋಡಿ ಮರೆತೆನ್ಹಿಂದಿನ ದುಃಖ|| 2 ನಾ ಏನು ನಿನಗೆ ಮಾಡಿದೆ ಪೇಳು | ಬಹು ಬಾಯಿತಗುವೆ ಕೋಪವು ತಾಳು| ಇಂಥಾ ಮಾಯಾ ಮೋಹತಳಿಗಿ|| 3 ಪದ್ಯ ಅಪ್ಪ ಕುಡಲಾರೆಂದು ತಪ್ಪದಲೆ ಆ ಕೂಸಿನಪ್ಪಿಕೊಂಡಳುವಾಗ ಕಲ್ಲ ಮ್ಯಾಲಪ್ಪಳಿಸಲಾಕೂಸು ತಪ್ಪನ್ಹಾರಿತು ಮ್ಯಾಲೆ ಅಷ್ಟು ಚಿನ್ಹಿಗಳಂದ ಉಟ್ಟ ಪೀತಾಂಬರದಿ ತೊಟ್ಟ ಹೀಂಗೆ ಸ್ಪಷ್ಟಪೇಳಿದಳು| ಪದ ರಾಗ:ತೋಡಿ ತಾಳ ಬಿಲಂದಿ ಮಂದ ಮತಿಯೇ ಕಂದರನ್ನ ಕೂಂದರೇನು ಫಲವೂ| ಇಂದು ಎನ್ನ ಕೂಂದ ವ್ಯೂಲ ಮುಂದೆ ಬರುವದೇನು| 1 ವೈರಿ ಅನ್ಯರಲ್ಲಿ ಇನ್ನ ಬೆಳೆವುತಿಹನೊ| ಮುನ್ನ ಬಂದು ತನ್ನ ಬಲದಿ ನಿನ್ನ ಕೊಲ್ಲುವೊನು 2 ಅಂತಕನ್ನ ನಿಂತು ಕೊಲ್ಲುವ ಭ್ರಾಂತಿ ಬಿಡೆಲೊ ನೀನು| ಅನಂತಾನಂತಾದ್ರೀಶನಂತು ತಿಳುವದೇನೇ|| 3 ಪದ್ಯ ಆ ಮಹಾ ಪಾಪಿ ಗ್ಯಾಡೀ ಮಾತು ದೇವಿ ತಾ ಭೂಮಿಯಲಿ ಬಂದು ಬಹುಗ್ರಾಮದಲೆ ನಿಂತು ಬಹುನಾವು ಉಳ್ಳವಳಾಗಿ ಕಾಮಿತಾರ್ಥಗಳನ್ನೂ ಪ್ರೇಮದಲಿ ಕುಡುತಿಹಳು ನೇಮದಿಂದಾ|| ಆ ಮಾಯಿ ವಚÀನವನು ಪಾಮರನು ತಾ ಕೇಳಿ ರೋಮಾಂಚಗಳು ಉಬ್ಬಿ ನಾ ಮಾಡಿದಲ್ಲೆಂದು ನೇಮದಲಿ ಇಬ್ಬರಿಗೆ ನೇಮಿಸಿದ ಬೇಡಿಯನು ತಾ ಮೋಚನವು ಮಾಡಿ ಪ್ರೇಮದಿ ನುಡದಾ|| 1 ಪದ:ರಾಗ :ಸಾರಂಗ ಅದಿತಾಳ ಸ್ವರ ಮಧ್ಯಮ ಎಲೆ ತಂಗಿಯೆ ಎಲೊ ಶಾಲಕ ಬಲು ಪಾಪಿಯು ನಾನು| ಬಲು ಮಂದಿ ಮಕ್ಕಳನ ಛಲದಿಂದ ಕೊಂದೆ| ತಿಳಿಯದೆ ನಾ ಇಂಥ ಕೆಲಸಕ್ಕೆ ತೊಡಕಿ ಪರಿ ಪಾಪದ ಫಲ ಭೋಗಿಯು ಆದೆ|| 1 ಅಶರೀರದ ವಾಣಿಯು ಹುಸಿ ಅಯಿತು ಇಂದು ವಸುಧಿಯೋಳಿರುವಾ ಮಾನುಷರಾ ಪಾಡೇನು|| ಶಶಿಮುಖಿ ನಾನಿಮ್ಮ ಶಿಶುಗಳ ಕೂಂದೆ||2 ಅಮಿತಾ ಅಪರಾಧಾಯಿತು ಕ್ಷಮಾ ಮಾಡಿರಿ ನೀವು|| ವಿಮಲ ಮನಸಿನಿಂದ ನಮಿಸಿದೆ ನಿಮಗೆ|| ಕಮಲೋದ್ಭವ ಬರದಂಥಾ ಕ್ರಮ ತಪ್ಪದು ಎಂದು ಶ್ರಮಯಾತಕ ಸುಖದುಃಖವ ಸಮಮಾಡಿರಿ ನೀವು|| 3 ತಿಳಗೇಡಿಯು ಆ ಕಂಸ ತಿಳಿಹೇಳಿಪರಿಯು ಸ್ಥಳಬಿಟ್ಟು ತಾ ತನ್ನ ಸ್ಥಳಕ್ಹೋದನು ಬ್ಯಾಗೆ\ ಬ್ಯಳಗಾಗಲು ಎಲ್ಲಾರಿಗೆ ತಿಳಿಸೀದನು ಆಗೆ ಹೊಳುವಾ ದೇವಿಯ ಮಾತುಗಳನೆಲ್ಲ ಬಿಡದೆ || 4 ಖಳರಂದರು ನಾವಿನ್ನ ಇಳಿಯೊಳ್ಹುಟ್ದರುವಾ| ಉಳದಾ ಬಾಲಕೃಷ್ಣಕರನ್ನ ಕೊಲ್ಲು ವುದ ಸತ್ಯಾ| ತಿಳದೀಪರಿ ಅವರನ್ನ ಕಳಸೀದ ಕಂಸಾ ಚಲುವಾನಂತಾದ್ರೀಶನ ಕೊಲ್ಲವೊದು ಎಂದು|| 5 ಪದ್ಯ ಮುಂದ ಗೋಕುಲದಲ್ಲಿ ನಂದಗೋಪನು ತನ್ನ ಕಂದನಾ ಮುಖವನ್ನು ಛಂದದಲಿ ನೋಡಿ ಆನಂದ ಹಿಡಿಸದೆ ತಾನು ಬಂದ ಬಂದವರಿಗ್ಯಾನಂದ ಬಡಸಿದ ಮನಕ ಬಂದದ್ದು ಕೂಟ್ಟು| ನಂದನಂದನನ ವದನೇಂದು ದರ್ಶನಕಾಗಿ ಬಂಧು ಬಾಂಧವರೆಲ್ಲ ಬಂದು ಒದಗಿದರಲ್ಲೆ ದುಂದುಬಿಯು ಮೊದಲಾದ ಛಂದಾದ ವಾದ್ಯಗಳು ಒಂದಾಗಿ ನುಡದÀವಾನಂದದಿಂದಾ| ಗೀತ ಬಲ್ಲವರು ಸಂಗೀತವನು ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ಮಾಡಿದರು ಪ್ರೀತಿಯಲಿ ಪಾಡಿದರು ಶ್ರೋತ್ರಸುಖರಾಗಿ ತಾತನವ ತನ್ನಲ್ಲೆ ಜಾತನಾಥಂಥವಗೆ ಜಾತಕರ್ಮವು ಮಾಡಿ ಪ್ರೀತನಾದಾ| ಪ್ರೀತಗೋಕುಲದಲ್ಲಿ ನೂತನೈಶ್ವರ್ಯಗಳು ಜಾತವಾದವು ಸರ್ವಜಾತಿಗಳಿಗ್ಯಾದರೂ ಯಾತಕ್ಕೂ ಕಡಿಮಿಲ್ಲ ಸೋತಂಥ ದಾರಿದ್ರ್ಯ ಯಾತಕಿರುವದು ರಮಾನಾಥ ಇರಲು|| 1 ಸ್ಥಿರ ಮನಸಿನಿಂದಲ್ಲೆ ಸ್ಥಿರವಾಗಿ ಕುಳಿತು ಈ ಚರಿತವನು ಕೇಳಿದವರ ಪರಿಪರಿಯ ಅಭಿಲಾಷ ಪರಿಪೂರ್ಣವಾಗುವದು ಚರಿಸದಲೆ ಅವರಲ್ಲಿ ಸ್ಥಿರಳಾಗಿ ಇರುವವಳು ವರಮಹಾಲಕ್ಷ್ಮೀ| ಧರಿಯೊಳಗ ಇರುವಂಥ ವರಕವೀಶ್ವರರಂತೆ ಸ್ಥಿರವಲ್ಲ ಗೋಕುಲದಲ್ಲಿ ತ್ವರ ಅವನೇ ಮುಗಿಸಿದಿಲ್ಯರಡು ಅಧ್ಯಾಯಾ|| 2 “ಶ್ರೀ ಕೃಷ್ಣಾರ್ಪಣ ಮಸ್ತು” ಎರಡನೆಯ ಅಧ್ಯಾಯವು ಸಂಪೂರ್ಣವು”
--------------
ಅನಂತಾದ್ರೀಶ - ಕಥನಕಾವ್ಯಗಳು
ಅರುಣೋದಯಕೆ ಮುಂಚೆ ಬಲು ಕತ್ತಲಂತೆ ಪ ಸಿರಿ ಬರುವುದಕೆ ಮುಂಚೆ ಮುಖ ಸುತ್ತು ಜನಕೆ ಅ.ಪ ಹೊಟ್ಟಿ ಹಸಿದರೆ ಅನ್ನ ಬಹಳ ರುಚಿಯಂತೆ ಕೆಟ್ಟು ಬದುಕುವ ಮನುಜ ಬಲು ಘಟ್ಟಿಯಂತೆ ಸಿಟ್ಟು ಮಾಡುವ ಮನುಜ ಕೊನೆಗೆ ಕುರಿಯಂತೆ ಬಿಟ್ಟಿ ಬಯಸುವ ನರನು ಬಲು ಮೋಸವಂತೆ 1 ಸುಳ್ಳು ಹೇಳುವ ನರಗೆ ಪರದಾಟವಂತೆ ಜಳ್ಳುರಾಶಿಯ ನೋಡೆ ದೊಡ್ಡಗಿರಿಯಂತೆ ಕಳ್ಳ ಒಳಗಿರಲಲ್ಲಿ ಶಾಂತಿಯಿಲ್ಲಂತೆ ಕುಳ್ಳ ಹೋರಾಡಿದರೆ ಜಯವಿಲ್ಲವಂತೆ 2 ಭಾರಿ ಮಳೆ ಸುರಿಯಲಿರೆ ಬಹಳ ಬಿಸಿಲಂತೆ ಊರು ಸೇರುವ ಮುನ್ನ ಬಹಳ ದಣಿಯಂತೆ ಕೀರುತಿಯ ಪಡೆಯುವಗೆ ಬಹು ಶತ್ರುವಂತೆ ಮೂರು ಜ್ಞಾನಿಗಳಿರಲು ಭಾರಿ ಸಭೆಯಂತೆ 3 ಮುಳ್ಳಿರುವ ಗಿಡಗಳಲಿ ಬಹು ಪುಷ್ಪವಂತೆ ಹಳ್ಳದಲಿ ಸಿಗುವ ಜಲ ಬಹಳ ರುಚಿಯಂತೆ ಹಳ್ಳಿಗಾರನ ಸತ್ಯ ಬಹಳ ಒರಟಂತೆ ಎಳ್ಳು ಕಾಳುಗಳು ಶನಿಯ ಓಡಿಸುವುದಂತೆ 4 ಮುಟ್ಟಲಾಗದ ನಾಯಿ ದಾಸಾನುದಾಸ ಶ್ರೇಷ್ಠರೆಂದರಿತಿರುವರೆಲ್ಲ ಬಲು ಮೋಸ ಧಟ್ಟನೆ ಹೊಳೆಯುವಗೆ ಬಲು ಮನವಿಕಾಸ ಬಿಟ್ಟಿರುವ ಮನುಜನಿಗೆ ಜಗದಿ ಸುಖವಾಸ 5 ಮುದಿತನವು ಭೂಷಣವು ಸ್ಥಾನವಿರುವವರಿಗೆ ಕುದಿಯುವುದೆ ಭೂಷಣವು ಕ್ಷೀರಜಲದಲ್ಲಿ ಹೆದರುವುದೆ ಭೂಷಣವು ದುಷ್ಟಸಂಗದಲಿ ಗದಗದವೆ ಭೂಷಣವು ಭಕ್ತಿರಸದಲ್ಲಿ 6 ತನ್ನ ತಾ ಶೋಧಿಸಲು ಬಲು ದುಃಖವಂತೆ ಅನ್ಯರನು ಶೋಧಿಸಲು ಸಂತೋಷವಂತೆ ಕನ್ನಡಿಯ ನೋಡದಿರೆ ಬಲು ಚೆಲುವನಂತೆ ಕನ್ನಡಿಯ ನೋಡಿದರೆ ತಾನಳುವನಂತೆ 7 ನಗರ ಸುಂದರಲ್ಲಂತೆ ಬಚ್ಚಿಟ್ಟ ಧನವು ತಾ ಕದ್ದವನಿಗಂತೆ ಸ್ವಚ್ಛ ಬಡತನದವಗೆ ಬಲು ಭಕುತಿಯಂತೆ ಬಿಚ್ಚೊಲೆ ಗಿರಿಜೆಗತಿ ಪ್ರಿಯವಸ್ತುವಂತೆ 8 ಗುಂಡು ಬ್ರಾಹ್ಮಣ ಬರಲು ಅಪಶಕುನವಂತೆ ಹೆಂಡದಾ ಪೀಪಾಯಿ ಬಲು ಶಕುನವಂತೆ ಮಂಡೆ ಬೋಳಿರುವವಳು ಬರಬಾರದಂತೆ ತೊಂಡು ಸೂಳೆಯು ಬರಲು ಬಹಳ ಶಕುನವಂತೆ 9 ಖ್ಯಾತಿ ಬಾರದು ನರಗೆ ಬದುಕಿರುವ ತನಕ ಗೋತ ಹೊಡೆದವನು ಬಲು ಗುಣಶಾಲಿಯಂತೆ ನೀತಿ ಹೇಳುವ ಸ್ಥಳದಲೊಬ್ಬರಿಲ್ಲಂತೆ ಕೋತಿ ಕುಣಿಯುತಿರಲು ನೂರು ಜನರಂತೆ 10 ಬಹು ಧನಿಕ ಬಲು ಬಲಗೆ ಮಕ್ಕಳಿಲ್ಲಂತೆ ದಹಿಸುತಿಹ ದಾರಿದ್ರಗೆ ವರ್ಷಕೊಂದಂತೆ ಅಮೃತ ಸಮವಂತೆ ಸಿಹಿಯಾದ ಕ್ಷೀರ ಮಕ್ಕಳಿಗೆ ಬೇಡಂತೆ 11 ಸಾಲಿಗ್ರಾಮ ತೊಳೆಯಲತಿ ಬೇಸರಂತೆ ಸಾಲು ಎಮ್ಮೆಯ ತೊಳೆಯಲಿ ಉತ್ಸಾಹವಂತೆ ಶೀಲವಾಡುವ ನುಡಿಗೆ ಸಂದೇಹವಂತೆ ಗಾಳಿ ಸುದ್ದಿಗಳೆಲ್ಲ ಬಲು ಸತ್ಯವಂತೆ 12 ಒಳಿತವನು ಜಗದಲ್ಲಿ ತಲೆ ಎತ್ತನಂತೆ ಕಲಿಪುರುಷನಂಥವನು ಬಲು ಮೇಲೆಯಂತೆ ಹುಲಿ ಚಿರತೆ ಕರಡಿಗಳ ಬಲಿಯ ಕೊಡರಂತೆ ಗೆಳತಿ ಮಾರಿಗೆ ಕುರಿಯ ಬಲಿಯೆ ಬೇಕಂತೆ 13 ಅತಿ ಚೆಲುವೆ ಸತಿಯಲ್ಲಿ ಹಿತವಿಲ್ಲವಂತೆ ಗತಿಗೆಟ್ಟ ನಾರಿಯಲಿ ಅತಿ ಮೋಹವಂತೆ ಇತರ ಜನರೇಳಿಗೆಗೆ ಹೊಟ್ಟಿಯುರಿಯಂತೆ ಪ್ರತಿಕ್ಷಣವು ತನಗಾಗಿ ಹಂಬಲಕೆಯಂತೆ 14 ಭೂಮಿ ಎಲ್ಲವು ಇನ್ನು ಉಳುವಾತಗಂತೆ ಭೂಮಿಯೊಡೆಯಗೆ ದೊಡ್ಡನಾಮ ಬಿತ್ತಂತೆ ರಾಮರಾಜ್ಯದಿ ಕಾರು ಓಡಿಸುವವಗಂತೆ ಆ ಮದುವೆ ಕನ್ಯೆಯು ಪುರೋಹಿತಗಂತೆ 15 ಬಕಳಿಸುವ ನಾಯಕರೆ ಸರಕಾರವಂತೆ ಪ್ರಕೃತಿ ನಡೆನುಡಿ ನೀತಿಗೆ ಧಿಕ್ಕಾರವಂತೆ ಸುಖದ ಅನುಭವ ಜನಕೆ ಕುದುರೆ ಕೊಂಬಂತೆ ಮುಖವಿಲ್ಲ ಕಣ್ಣಿಲ್ಲ ಸುಖರಾಜ್ಯವಂತೆ 16 ಚಂದ್ರಲೋಕಕೆ ಪಯಣ ಕಾದಿರುವುದಂತೆ ಮುಂದಲ್ಲಿ ನೆಲಕೆ ಬಲು ಕಟ್ಟು ನಿಟ್ಟಂತೆ ಮುಂದರಿದ ಜನಕಲ್ಲಿ ಸ್ಥಾನವಿಹುದಂತೆ ಹಿಂದುಳಿದ ಗುಂಪಿಗವಕಾಶವಿಲ್ಲಂತೆ 17 ಪುಷ್ಪಾಕ್ಷತೆಯ ಪೂಜೆ ಗೋಮಾತೆಗಂತೆ ಶುಷ್ಕ ತೃಣವನಕೆಲ್ಲ ಮಳೆಗಳ ಕಂತೆ ನಿಷ್ಫಲದ ಗಿಡಬಳ್ಳಿ ತೋಟದಲ್ಲಂತೆ ಪುಷ್ಕಳದ ಫಲ ವೃಕ್ಷಗಳು ಸೌದೆಗಂತೆ 18 ಬರಿಯ ಪಾತ್ರೆಗಳಲಿ ಬಹಳ ಸದ್ದಂತೆ ಅರಿಯುವಜ್ಞಾನಿಗಳು ತಲೆಹರಟೆಯಂತೆ ಅರಿತವನು ನುರಿತನಾದರು ಬೇಡವಂತೆ ಬದಿಯ ಬಹು ದಡ್ಡನಿಗೆ ಮಾರ್ಯಾದೆಯಂತೆ19 ರೈಲು ಉರುಳಿಸೆ ರಾಜ್ಯಕಧಿಕಾರಿಯಂತೆ ಥೈಲಿಯಿದ್ದರೆ ಖೂನಿ ಮಾಡಬಹುದಂತೆ ಶೈಲವೇರುವ ನರನು ಮೇಧಾವಿಯಂತೆ 20 ನರಬಲಿಯ ಕೊಡುವವರು ಹಿರಿಯ ಜನರಂತೆ ಹಿರಿಯ ಮಾರ್ಗದ ಜನರು ಧರೆ ಭಾರವಂತೆ ಗುರುಗಳಿಗೆ ತಿರುಮಂತ್ರ ಹೇಳಬೇಕಂತೆ ಸುರಿಸುವರು ಧನಧಾನ್ಯ ಸುರಿಮಳೆಗಳಂತೆ21 ಮಂತ್ರವಾದಿಯು ನೋಡಿ ಗ್ರಹಭಯವಿದೆಂದ ಯಂತ್ರದಲಿ ನೋಡಿದವ ಹೃದಯರೋಗೆಂದ ಚಿಂತಿಸುತ ಪಂಡಿತನು ಮೋಹಿನಿಯಿದೆಂದ ಅಂತ್ಯದಲಿ ರೋಗಿ ತನಗೊಂದಿಲ್ಲವೆಂದ 22 ಶಿಂಗಪ್ಪ ಕದ್ದು ತಾ ಜೈಲು ಸೇರಿದನು ಕಾಂಗ್ರಪ್ಪ ಜೈಲಿನಿಂದ ಬಂದು ಕುಳತಿಹನು ಹೇಂಗ್ರಪ್ಪ ಬದುಕುವುದು ಎಂದು ಫಲವೇನು ನುಂಗ್ರಪ್ಪ ಸುಖ ದು:ಖಗಳನು ಸಹಿಸುತಲಿ 23 ವೇದಾಂತಿಯಾಗೆನಲು ಹೊಟ್ಟೆಗಿಲ್ಲಂತೆ ಕಾದಾಡಿ ಬದುಕಲನುಭವವಿಲ್ಲವಂತೆ ಓದು ಬದುಕೆಂದರವಕಾಶವಿಲ್ಲಂತೆ ಆದುದಾಯಿತು ಹರಿಗೆ ಶರಣು ಹೊಡಿ ತಮ್ಮ25 ಯಮನು ತಲ್ಲಣಿಸುವನು ಸ್ಥಳವಿಲ್ಲವಂತೆ ಸುಮನಸರು ಆಳುತಿಹರು ಜನವಿಲ್ಲವಂತೆ ಕಮಲೆರಮಣಗೆ ಬಂತು ಪೀಕ್ಲಾಟವಂತೆ ಎಮಗೆಂಥ ಕಷ್ಟವು ಪ್ರಸನ್ನ ಹರಿಯಿರಲು26
--------------
ವಿದ್ಯಾಪ್ರಸನ್ನತೀರ್ಥರು