ಒಟ್ಟು 4 ಕಡೆಗಳಲ್ಲಿ , 3 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಾಡಿಯೆತ್ತಲಿಂದ ಬಂದುದೆ ಮಾತ ನಾಡಲರಿಯದಿಪ್ಪ ಹೊಚ್ಚ ಹೊಸ ಹರೆಯದ ಮುಗುದೆಗೀ ಪ ಬಳುಕೆ ಸಿಂಹಮಧ್ಯ ಬಟ್ಟಮೊಲೆಗಳು ಮರೆ ತೋರವಾದ ಬಳವಿ ಮುಡಿಯೊಳಲರು ಹೊಯ್ಯನಿಳೆಯಲುದುರಲು ಜಲಜಮುಖದಿ ಬೆಮರುದೋರೆ ವಲಯಹಾರ ಉರದಿ ಘಲಿರು ಘಲಿರೆನೆ ಆವಕಡೆಯು ಕುಲುಕಿ ಕುಲುಕಿ ನಡೆವ ಈ 1 ಮಿಸುಪ ಮಂದಹಾಸ ಮುಖದಿ ಮಸಗಿದಂತ ಕಾಂತಲಜ್ಜೆ ಮುಸುಕೆ ಮಿಸುಪ ಕದಪಿನಲ್ಲಿ ಎಸೆವ ಓಲೆ ಢಾಳಿಸಿ ಸಸಿನೆ ತಿದ್ದಿ ಉರದಿ ಜರಿಯ ವಸನವನ್ನು ಸಂತವಿಸುತ ಕುಸುರಿಲಂಗ ದಂದವನ್ನು ಎಸಸಿ ಬಿಡುವ ನಡೆವ 2 ಕರವನೊಯ್ಯಗೊಲಿದು ಉರಗಗಿರಿಯ ಮೇಲೆ ಬಾಲಚಂದ್ರ ನಿರಲು ಸೆರಗ ಮರೆಯಮಾಡಿ ಮರಳಿ ಮರಳಿ ನೋಡುತಾ ಸ್ಮರನತಾತ ಸುರನಗರದೆರೆಯ ವೈಕುಂಠಲಕ್ಷ್ಮಿಯರಸನೊಡನೆ ನೆರೆದ ಪರಿಯ ಸಿರಿಯ ಗರುವ ಗಮನದಾ 3
--------------
ಬೇಲೂರು ವೈಕುಂಠದಾಸರು
ನಲಿದೈತಾರೆಂಬೆ ಹೇ ಜಗದಂಬೆ ನಾಂ ಬೇಡಿಕೊಂಬೆ ಪ. ಒಲಿದೈತರೆ ನೀ ನಲವೇರುತ ನಾ ನಲಿದಾರಾಧಿಪೆ ಎನ್ನೊಲಿದಂಬೇ ಅ.ಪ. ಸಿಂಧುನಂದನೆ ಅರವಿಂದನಯನೆ ಇಂದುಸೋದರಿ ಸಿಂಧುರಗಮನೆ ಸುಗುಣಾಭರಣೆ ವಂದಿಪೆ ಶರದಿಂದುವದನೆ ಸುರ ವಂದಿತಚರಣೆ 1 ಅಂದಿಗೆ ಕಾಲುಂಗುರ ಘಲಿರೆನೆ ಇಂದಿರೆ ತವಪದದ್ವಂದ್ವವ ತೋರಿ ವಂದಿಸುವೆನ್ನೀಮಂದಿರ ಮಧ್ಯದಿ ಎಂದೆಂದಿಗು ನೆಲೆಸಿರು ನಂದಿನೀ ಜನನೀ 2 ಕ್ಷೀರಾಂಬುಧಿ ತನಯೆ ಸೌಭಾಗ್ಯದ ನಿಧಿಯೆ ಕ್ಷೀರಾಬ್ಧಿಶಯನನ ಜಾಯೆ ಸಾರಸನಿಲಯೆ ವಂದಿಪೆ ತಾಯೆ ಬಾರೆಂದು ಕೈಪಿಡಿದೆಮ್ಮನು ಕಾಯಿ 3 ಸರಸಿಜಾಸನೆ ಸ್ಮರಮುಖ ಜನನಿಯೆ ಸುರನರಪೂಜಿತೆ ನಾರದ ಗೇಯೆ ಸಾರಗುಣಭರಿತೆ ಸರಸಿಜಪಾಣಿಯೆ ಶ್ರೀರಮಣೀ ಪರಿಪಾಲಿಸು ಜನನಿ 4 ಸೆರಗೊಡ್ಡಿ ಬೇಡುವೆ ಶ್ರೀನಾರೀ ನಿನ್ನೆಡೆ ಸಾರೀ ಪರತರ ಸುಖ ಸಂಪದವನು ಕೋರೀ ಪೊರೆ ಮೈದೋರಿ 5 ಪರಿಪರಿ ವಿಧದಾ ಸಿರಿಸಂಪತ್ತಿಯೋಳ್ ಗುರುದೈವಂಗಳ ಸೇವಾವೃತ್ತಿಯೋಳಿರೆ ಕರುಣಿಸು ದೃಢತರ ಭಕ್ತಿಯನೆಮಗೀಗಳ್ ವರಶೇಷಗಿರೀಶನ ಮಡದಿಯೆ ಮುದದೋಳ್ 6
--------------
ನಂಜನಗೂಡು ತಿರುಮಲಾಂಬಾ
ಬಟ್ಟ ಮುತ್ತಿನ ಸರವ ಕೊರಳೊಳಿಟ್ಟು ನೋಡುತಪುಟ್ಟ ಪುಟ್ಟ ಪಾದದಿಂದ ದಟ್ಟಡಿಯನಿಕ್ಕುತಅಟ್ಟಟ್ಟು ಕರೆದರೆ ಬಾರದೆ ಅಂಬೆಗಾಲನಿಕ್ಕಿ ಕೊಡವುತತಿಗೂಳುಗುಳೆಂದು ಮುಟ್ಟಿ ನಲಿದಾಡುತ ತಟ್ಟೆಗೆ ಮುಚ್ಚಿಗೆಯೆಂದುತಟ್ಟನೆ ಕೈಯನಿಡುತ ಪುಟ್ಟಮಕ್ಕಳೊಡನೆ ಚಂಡಾಡಿನಲಿದಾಡುವ ದಿಟ್ಟರಂಗಯ್ಯ 1 ರನ್ನ ದುಂಗುರ ಪದಕ ತಾಳಿಯನ್ನು ಹಾಕುವೆಸಣ್ಣ ಮಕ್ಕಳ ಕೂಡೆಲ್ಲಾ ಚಿನ್ನಿಕೋಲನಾಡುತಕನ್ನೆವೆಣ್ಣುಗಳ ಕಂಡು ಕಣ್ಣ ಸನ್ನೆ ಮಾಡುತಕಣ್ಣಮುಚ್ಚಾಲೆ ಆಟವ ಆಡಿ ನಲಿದಾಡುತ ತಾಹೊನ್ನ ಹಿಡಿ ಹೊನ್ನಾಟವನಾಡುತ ಶ್ರೀರಂಗಧಾಮ ಪನ್ನಗಶಯನ 2 ಕಾಲಿನಂದುಗೆ ಘಲಿರೆನೆ ನಳಿತೋಳನಾಡುತಬಾಲೆಯರ ಕೂಡೆ ಬಹು ಲೀಲೆಯ ಮಾತಾಡುತಶಾಲೆಗಳ ಸೆಳದು ಮರದ ಮೇಲೆ ಕುಳಿತು ನೋಡುತಹಾಲು ಬೆಣ್ಣೆ ಕಳ್ಳನೆಂಬ ದೂರುಗಳ ಕೇಳುತಲೋಲಾಕ್ಷಿಯರೊಳನಿಂಥಾ ಜಾಲಿಗಳ ಮಾಡುವ ಬಾಲಗೋಪಾಲ3 ಕಂಡು ನಿನ್ನನು ಪ್ರೇಮದೊಳಪ್ಪಿಕೊಂಡು ನೋಡುವೆಹಿಂಡು ಬೊಗರಿಲಿತ್ತಲಿಗ್ಗೆ ಚಂಡ ಕೊಡುವೆ ಬಾರಯ್ಯಭಂಡಿಯನೊದದ ಪಾದಪದುಮವನ್ನೇ ತಾರಯ್ಯಗುಂಡುವಾನಿಟ್ಟ ನಳಿ ತೋಳನೊಮ್ಮೆ ತೋರಯ್ಯಪುಂಡಲೀಕಾಕ್ಷಿಯರು ನಿನ್ನ ಕಂಡರೆ ಸೇರರೂ ಕೃಷ್ಣ4 ಕರದ ಕಂಕಣ ಝಣರೆನಲು ಮುಂಗುರಳ ತಿದ್ದುತಕರದ ಕಂಬಾಲಿನೆಲ್ಲವ ಸುರಿದು ಸೂರೆ ಮಾಡುತತರುಣಿಯರು ನೋಡಲವರ ಪುರುಷರಂತೆ ತೋರುತಸರಸವಾಕಿನಿಂದಲವರ ಮರುಳು ಮಾಡಿ ಕರವುತಸರಿಯ ಮಕ್ಕಳೊಡನೆ ಜೊಲ್ಲು ಸುರಿಸುತ ಮಾತಾಡುವಂಥಾ ಸರಸಗೋಪಾಲ 5 ಮರುಗ ಮಲ್ಲಿಗೆ ಸಂಪಗೆಯ ಪೂಸರವ ಮುಡಿಸುವೆಕೊರಳ ಮುತ್ತಿನ ಸರವ ನಿನಗೆ ಕರದು ಕೊಡುವೆಬಾರಯ್ಯ ಅರಳೆಲೆ ಮಾಗಾಯನಿಟ್ಟ ಸಿರಿಮುಖವತೋರಯ್ಯ ಪರನಾರಿಯರೊಡನಿಂಪಾಸರ ಛಂದವೇನಯ್ಯಪುರದ ನಾರಿಯರ ಕೂಡೆ ಸರಸವನಾಡು ಉಡುಪಿಪುರದ ಶ್ರೀಕೃಷ್ಣ 6 ಅಂದುಗೆ
--------------
ಕೆಳದಿ ವೆಂಕಣ್ಣ ಕವಿ
ಸಿರಿಯು ಬರುವ ಸೊಬಗ ನೋಡಿರೆ ಭರದಿ ಬನ್ನಿರೆ ಶಿರವಬಾಗಿ ಚರಣಕೆರಗಿ ವರವಬೇಡಿರೆ ಪ. ಕಾಲೊಳಂದಿಗೆ ಗೆಜ್ಜೆ ಪಿಲ್ಲಿ ಘಲಿರುಘಲಿರೆನೆ ಬಾಲೆಯರ ಬಳಿಗೆ ಬರುವಳೊಲಿದಳೆಂಬೆನೇ 1 ಮಾತೆಗೆನಿತೋ ಪ್ರೀತಿಯೆಮ್ಮೊಳಗೈತಂದಳೀದಿನಂ ಪೂತುದರರೆ ಪೂರ್ವಪುಣ್ಯ ತರವಿದೆಂಬೆನಾಂ 2 ಪರಮಪುರುಷ ಶೇಷಶೈಲವರದನರಸಿಯಿಂ- ದರರೆ ಒಲಿದಳೆಮಗೆ ಧರೆಯೊಳರಿದುದಿನ್ನದೇನ್ 3
--------------
ನಂಜನಗೂಡು ತಿರುಮಲಾಂಬಾ