ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ನರಹರಿಯೆ ಸುಕ್ಷೇಮವ ಪ. ಪರಮಪ್ರಿಯರಿಗೆ ಇತ್ತು ವರ ಸೇವೆ ಕೈಕೊಂಡು ನಿರುತದಿ ಪಾಲಿಸೆನ್ನ ಘನ್ನ ಅ.ಪ. ದಾಸ ಗುರುಕುಲತಿಲಕರಿವರಿಗೆ ನೀನೀಗ ಘಾಸಿಗೊಳಿಸುವುದುಚಿತವೆ ದೋಷದೂರನೆ ಎಮ್ಮ ಮನವನರಿತವ ಜನರ ದೂಷಣೆಗೆ ಗುರಿ ಮಾಳ್ಪರೆ ಘಾಸಿಪಡುತಿಹರ ಆಯಾಸಪಡಿಸುವುದು ಬಹು ಲೇಸಲ್ಲ ನಿನಗೆ ಥರವೆ ಶೇಷಶಯನನೆ ಎಮ್ಮ ಮಾತು ಲಾಲಿಸಿ ಈಗ ಪೋಷಿಸಲಿ ಬೇಕೊ ಸ್ವಾಮಿ ಪ್ರೇಮಿ 1 ಕಲ್ಪತರುವಂತಿಹರು ಶಿಷ್ಯವೃಂದಕೆ ಇವರು ಇಪ್ಪರೋ ಚಂದ ಜಗದಿ ತಪ್ಪದಲೆ ಆಯುರಾರೊಗ್ಯ ಕೊಟ್ಟು ನೀ ಸರ್ಪಶಯನನೆ ರಕ್ಷಿಸೊ ಒಪ್ಪದಿಂದಲಿ ಎಮ್ಮ ಸೇವೆ ಸಫಲವಗೊಳಿಸಿ ಅಪ್ಪ ಸಂತಸವಪಡಿಸೊ ಬಪ್ಪ ಪೋಪ ಕೀರ್ತಿ ಅಪಕೀರ್ತಿ ನಿನ್ನಡಿಗೆ ಪುಷ್ಪದಂತರ್ಪಿಸುವೆನೊ ನೃಹರಿ 2 ಮನವಚನ ಕಾಯದಲಿ ಅನ್ಯ ಬಗೆಯದೆ ಎಮ್ಮ ಗುರುಗಳನು ಸೇವಿಸುವೆವೊ ಚಿನುಮಯನೆ ನೀ ಸಾಕ್ಷಿಯೋ ಮನುಜರಿದನೇನ ಬಲ್ಲರು ಕೇಳು ತಂತಮ್ಮ ಮನ ಬಂದ ತೆರ ನುಡಿವರೊ ಎನಗದರ ಗೊಡವೇನು ನೀನಿರಲು ಭಯವೇನು ಘನ ಮಹಿಮ ಪೊರೆಯೊ ಬೇಗ ಸ್ವಾಮಿ 3 ಪಂಚಪ್ರಾಣರು ಇವರು ವಂಚನಿಲ್ಲದೆ ಪೇಳ್ವೆ ಮುಂಚೆ ನೀ ಕಾಪಾಡೆಲೊ ಸಂಚಿತಾಗಾಮಿ ಪ್ರಾರಬ್ಧ ದುಷ್ಕರ್ಮಗಳು ಮಿಂಚಿನಂದದಿ ಮಾಡೆಲೊ ಸಂಚಿತಾಗಾಮಿಗಳ ಶಿಷ್ಯರಿಗೆ ಕಳೆವರಿಗೆ ಕೊಂಚ ಬಾಧೆಯ ಕೊಡದೆಲೊ ಸಂಚಿತಿತ ಪ್ರದನೆ ಎನ್ನ ಮೊರೆ ಲಾಲಿಸು ಅಚಂಚಲದ ಕ್ಷೇಮವೀಯೋ ದೇವ 4 ಪರಿ ಪ್ರಾರ್ಥಿಸುವೆ ಶ್ರೀ ಪತಿಯೆ ದಯವ ಮಾಡೊ ನಾ ಪೇಳ್ವುದಿನ್ನೇನು ನಿನ್ನ ಸೇವಾದಿಗಳು ಕೃಪೆಯಿಂದ ಗುರುಗಳಿಂದ ಪಾಪ ಪರಿಹರನೆ ನೀ ಕೈಕೊಂಡು ಕೀರ್ತಿಯನು ಈ ಪೃಥ್ವಿಯಲ್ಲಿ ನೆಲಸೊ ಗೋಪಾಲಕೃಷ್ಣವಿಠ್ಠಲನೆ ನೀ ಕಾಪಾಡು ಕಾಪಾಡು ಜಗದ್ರಕ್ಷಕ ಹರಿಯೆ 5
--------------
ಅಂಬಾಬಾಯಿ
ಪುಟ್ಟಿಸಿದ್ದೇನು ಕಾರಣವೋ ಸೃಷ್ಟಿಗೋಡೆಯಾ ಪ. ಶ್ರೀಕೃಷ್ಣ ಮೂರುತಿವೊಂದಿಷ್ಟು ತಿಳಿಯದೋ ಮಾಯಾ ಜೀಯಾ ಅ.ಪ. ಆವಾವ ಸಾಧನವಾಗಲಿಲ್ಲಾ ಯನ್ನಿಂದ ಶ್ರೀದೇವಾ ಕರವ ಬಿಡುವುದುಚಿತವೇನು ಮಾಧವಾ ನಿನ್ನ ಮನದಣಿಯ ನೋಡಾದೆ ಹಾಗಾದೆ 1 ಹರಿಮೂರ್ತಿ ನೋಡಲೊಲ್ಲಾದು ಯನ್ನಮನವು ಪರಪುರುಷರ ನೋಡಿತು ಮನಸು ಹೊಲೆಗೆಡಿಸಿತು ಪುರುಷೋತ್ತಮನ ಮರಿತಿತು 2 ಹರಕಥಾ ಶ್ರವಣ ಕೇಳದು ಎನ್ನ ಕರ್ಣಂಗಳು ಪರವಾರ್ತೆಗೆ ಹೊತ್ತು ಸಾಲದು ಸರ್ವೋತ್ತಮನೆ ನಿನ್ನ ಮರೆತೆನು ಉನ್ಮತ್ತಳಾದೆ 3 ಹರಿನಿರ್ಮಾಲ್ಯವ ಕೊಳ್ಳದು ಯನ್ನ ಮೂಗು ಪರಪುರುಷರಾ ಮೈಗಂಧವಾ ಆಘ್ರಾಣಿಸುವುದು ನಿನ್ನ ನಾಮ ಸ್ಮರಣೆಯನು ಮರೆತೆನು 4 ಹರಿಯಾತ್ರೆಯಾ ಮಾಡಲಿಲ್ಲ ಯನ್ನ ಕಾಲು ಜಾರಸ್ತ್ರೀಯರ ಮನೆಮನೆ ತಿರುಗುವೆನು ಪರಿ ನೀಯನ್ನ ಮರೆಯುವುದುಚಿತವೆ 5 ಎನ್ನ ಇಂದ್ರಿಯಗಳು ಈ ಪರಿವ್ಯರ್ಥವಾಯಿತು ಸಾರ್ಥವಾಗಲಿಲ್ಲ ಪಾರ್ಥಸಾರಥಿ ನಿನ್ನ ನೋಡಿ ಪವಿತ್ರಳಾಗಲಿಲ್ಲ ಏಕಿನ್ನ ಈ ಪರಿಯ ಮರುಳು ಮಾಡುವಿದೇವಾ ಧರೆಯೊಳಗೆನ್ನ ತಂದುದಕೆ ಬಂದಕಾರ್ಯವಾಗಲಿಲ್ಲ 6 ಆವಬಾಧೆಯು ನಾನರಿಯೆ ಪರಜಾತಿಯ ಆ ಮನಸು ಪೋಗುವುದು ಕೋತಿಯಂದದಿ ಕುಣಿಸುವರು ಇದು ರೀತಿಯೆ 7 ಭವಸಾಗರದೊಳು ಇದ್ದು ಸೊರಗಲಾರೆನೊ ಘಾಸಿಗೊಳಿಸುವುದು ನಿನಗೆ ಧರ್ಮವೆ ವಾಸುದೇವನೆ ನಿಮ್ಮ ನಾಮವನು ನೆನೆಯದೇ 8 ಇರುಳು ಹಗಲು ಹೀಗೆ ದುರುಳತನದಲಿ ತಿರುಗಿದೆನು ಗುರು ಹಿರಿಯರಂಘ್ರಿಗೆ ಶಿರವ ಬಾಗದೆ 9 ಎಷ್ಟು ಮೊರೆ ಹೊಕ್ಕರೇನು ಒಂದಿಷ್ಟು ದಯಪುಟ್ಟದು ನಾನೀಗ ದ್ವೇಷಿಯೇನೋ ಶೇಷಶಯನನೆ ನಮ್ಮ ಕಾಳೀಮರ್ಧನಕೃಷ್ಣನೆ 10
--------------
ಕಳಸದ ಸುಂದರಮ್ಮ
ಲಕ್ಷ್ಮೀದೇವಿ ದಾಸನಲ್ಲವೇ ನಿನ್ನ ದಾಸನಲ್ಲವೆ ಪ ದಾಸನಾದ ಮೇಲೆ ಎನ್ನ ಘಾಸಿಗೊಳಿಸುವುದುಚಿತವೇನೇ ಘೋಷ ರೂಪನ ಪೆತ್ತ ತಾಯಿ ಅ.ಪ. ಮಾರ ಮುಖ್ಯ ಶರತಾಪವ ಹರಿಸುತ ಮಾನದಿಂದ ಕಾಂiÉಮಾರನ ತಾಯೇ 1 ಶರಧಿ ನಾನು ತಿದ್ದಿ ತೋರೆ ಹೃತ್ಪದ್ಮನಿವಾಸಿಯ ಶಿರಿಪದ್ಮನ ರಮಣಿಯೆ 2 ಭವ ಕಟ್ಟು ಬಿಡಿಸಿ ನೋಡೇ ಯೆಷ್ಟೆಂದು ಪೇಳಲಿ ಗುರುಕೃಷ್ಣನ ಪೆತ್ತ ಶಿಷ್ಟ ಶಿಖಾಮಣಿಯೆ 3 ಸಾರಶಾಸ್ತ್ರ ತೊರೆದೂ ದಿವ್ಯ ಮಾರಶಾಸ್ತ್ರ ಸುರದೂ ಶಾಸ್ತ್ರಾ ಶಾಸ್ತ್ರದ ದಾರಿಯ ತೋರಿಸಿ ಶತ್ರು ನಿವಾರಿಸು 4 ಇಂದು 5
--------------
ಸಿರಿಗುರುತಂದೆವರದವಿಠಲರು