ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾತರ ಸುಖವಯ್ಯಾ ಇದು ಇನ್ಯಾತರ ಸುಖವಯ್ಯಾ ಪ ಶ್ರೀ ತರುಣೀಶನ ಮರೆತು ಸಂಸಾರದಿ ಬಾಳುವುದೆಂತೆನೆ ಅ.ಪ. ಹಣ ಉಳ್ಳ ಮನುಜಂಗೆ ಗುಣವುಳ್ಳ ಸತಿಯಿಲ್ಲ ಗುಣವುಳ್ಳ ಸತಿಯಿರೆ ಗುಣಡೊಂಕುಪತಿಯು ಅನುಕೂಲವಿರೆಎರಡು ತನಯರೊಬ್ಬರು ಇರರು ಗುಣಿಸಿ ನೋಡಲು ಎಲ್ಲು ನ್ಯೂನತೆ ಸರಿಯೈ 1 ವಿತ್ತವಿದ್ದರೆ ಹಿತರು ಬಂಧು ಬಳಗವೆಲ್ಲ ವಿತ್ತವಿಲ್ಲಾದಿರಲು ನಿಂದಿಸಿ ನಗುತಿಹರು ಬತ್ತಲೆ ಬಂದುದು ಬತ್ತಲೆ ಪೋಪುದು ಮತ್ತೆ ಮಮತೆ ಯಾಕೊ ಮಧ್ಯೆ ಮತ್ತಿದ್ದುದಕೆ 2 ಸಂತೆಯತೆರಸರಿ ಸತಿಸುತ ಪರಿಜನ ನಿಂತು ಪೋಪರು ತಮ್ಮಯ ಋಣತೀರೆ ಅಂತ್ಯವಿಲ್ಲ ಸಂಸಾರದ ಶರಧಿಗೆ ಸಂತಸಪ್ರದವೆಂಬ ಭ್ರಾಂತಿಯ ನೀಗಯ್ಯ 3 ಜನನ ಮರಣವೆಂಬ ದುಃಖವೆ ತಾಕಿರೆ ದಿನದಿನ ಪ್ರತಿದಿನ ರೋಗದ ಕಾಟಗಳು ಗುಣಿಸಿ ನೋಡಲು ಮತ್ತೆ ಮನಕೆ ನೆಮ್ಮದಿ ಇಲ್ಲ ಅನಿಲ ಮಂದಿರ ನೊಲಿಸಿ ಗುಣದೂರನಾಗಯ್ಯ 4 ಕಾಲನೆಡೆಗೆ ಜನ ಬೀಳ್ಪುದು ನೋಡಿಯು ಬಾಳು ಸ್ಥಿರವೆಂದು ಕೇಳಿಲಿ ಮುಳುಗುವುದೇ ಬಾಲ ಯೌವ್ವನ ಮತ್ತೆ ಮುಪ್ಪಿಲಿ ಬೀಳುವ ಸ್ಥೂಲ ಶರೀರವೆ ಗೋಳಿನ ಸೆರೆಮನೆಯೈ5 ಊಟ ತಿಂಡಿಗೆ ಮೇಲ್ನೋಟದ ಕೀಟಗೆ ಕರ್ಮ ಮೂಟೆಯ ಘಳಿಸುವರೇ ಭವ ಕಾಟಕ ದಾಟಲು ಘೋಟಕಾಸ್ಯನ ಪದವಾರಿಜ ಪಿಡಿಯೈಯ್ಯ 6 ಮಂದನಾಗದೆ ಬಹು ಮುಂದಿನ ಗತಿ ನೋಡು ವಂದಿಸಿ ಜಯತೀರ್ಥ ವಾಯ್ವಾಂತರ್ಗತ ಪತಿ ಕೃಷ್ಣವಿಠಲನ ಭಜಿಸಲು ಕುಂದುಗಳಿಲ್ಲದೆ ಶಾಶ್ವತಾನಂದವು ಕೇಳಯ್ಯ 7
--------------
ಕೃಷ್ಣವಿಠಲದಾಸರು