ತಾರೊ ನಿನ್ನಯ ಕರವಾರಿಜವನು ಕೃಷ್ಣ
ಸಾರಿ ಬೇಡಿಕೊಂಬೆ ಮುರಾರಿ ದಯಮಾಡಿಪ
ಮಾರಮಣನೆ ಸಂಸಾರ ಶರಧಿಯೊಳೀಸ
ಲಾರದೆ ಬಳಲುತ ಚೀರೂತಲಿರುವೆ ಅ.ಪ
ದಾರಾ ಪುತ್ರರೆನಗೆ ದಾರಿ ತೋರುವರೆಂದು
ಮಾರ ಜನಕನೆ ಕೇಳೊ
ಮೋರೆ ತೋರದೆ ಅವರು ಜಾರಿಕೊಂಡರಯ್ಯ
ಭೂರಿ ಬಳಗದವರ್ಯಾರು ಬಾರರೊ ದೇವ 1
ಧಾರುಣಿ ಧನ ಧಾನ್ಯ ಹೇರಳವಾಗಿದೆ ಜೀವ
ಹಾರಿ ಹೋಗುವಾಗ ಯಾರಿಲ್ಲವಯ್ಯ
ಕೋರಿ ಭಜಿಪೆ ನಿನ್ನ ಬಾರಿ ಬಾರಿಗೆ ನಾನು
ಕ್ಷೀರ ವಾರಿಧಿವಾಸ ವೀರ ಮಾರುತೀಶ 2
ಘೋರಾಂಧಕಾರದಿ ಮೇರೆಯು ಕಾಣದೆ ಮಿತಿ
ಮೀರಿದ ಭಯದಿಂದ ಗಾರು ಪಡುತಿಹೆನೊ
ಕಾರುಣ್ಯನಿಧಿಯೆ ನೀ ಪಾರು ಮಾಡದಿರೆ ಮತ್ತ್ಯಾರು ಕೇಳುವರೆನ್ನ ಶ್ರೀ ರಂಗೇಶವಿಠಲ 3