ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಈ) ಬಾಲಕೃಷ್ಣಲೀಲೆ ಅಣ್ಣ ಬಲರಾಮನ ಸ್ತುತಿ ಚಂದ್ರವಾರಿಧಿಮಣಿ ನಂದನ ರೋಹಿಣಿಸುಂದರ ರವಿ ಸಮಾ ವಂದಿಪೆ ನಿಮಗೆ ಪ ಮೂಲಪುರುಷ ಯದು ಬಾಲಕೃಷ್ಣಗೆ ಹಾರಬಾಲ ಭೂಷಣ ಹರಿ ಬಾಲ ಸೋದರನೆ 1 ಅಂಗದ ಕಪಿವರನಂಗಜ ರಾಘವಅನಂಗಾ ನಾರಿಗಳು ಉತ್ತುಮಾಂಗನ ಸಖನೆ 2 ಈಶ ಮನಸ ದೋಷ ಧೀಶ ಕಳೆದುಇಂದಿರೇಶನಲಯತವ ತೋಷಿಸು ಪ್ರಭುವೆ3
--------------
ಇಂದಿರೇಶರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ಶ್ರೀಮತ್ ತಂದೆವರದಗೋಪಾಲದಾಸ ರಾಯಾವೃಂದದಿಂದಲಿ ನಿಮಗೊಂದಿಸುವೆನೋ ಜೀಯಾ ಪ. ಇಂದಿನವರೆಗೆ ನಾನಿಂದ್ಯ ಜನರೊಳು ಕೂಡಿನಿಂದ್ಯ ಮಾಡುತ ಪರರ ಡಂಭತನದಲಿ ಮೆರೆದೆನೊಕಂದನಾ ಕುಂದುಗಳ ಒಂದನೆಣಿಸದೆ ಗುರುವೇಮಂದಜನ ರಾಶಿಯೊಳು ಬೆಂದುಹೋಗುವುದನು ಕಂಡುಅಂದದಲಿ ನೀ ಹಿಡಿದೆಳೆತಂದೂ 1 ಮುಂದೆ ಪೇಳುವೆ ಕೇಳೋಚಂದ್ರಮೌಳಿಯೆ ನಿನ್ನ ಪ್ರೀತಿಪಾತ್ರನಾದಸುಂದರಾಂಗನ ಮುಖದೀ ನೀನಿಂದು ಅಘವೃಂದಗಳ ಹೊಡೆದೋಡಿಸೀಮಿಂಚಿನಿಂದಕ್ಷ ರ, ಯ, ಮ ಎಂಬಕ್ಷರಗಳ ಕಲ್ಪಿಸಿಎಂದಿಗೂ ಮರೆಯದಂಥ ತಂದೆವರದವಿಠಲನೆಂಬಅಂಕಿತದಿಂದ ಬಂಧನವ ಮಾಡಿ ಭಾವ ಸಂವತ್ಸರಫಾಲ್ಗುಣ ಶುದ್ಧ ತ್ರಯೋದಶಿಚಂದ್ರವಾರ ಅರುಣೋದಯ ಕಾಲದೀಕಡೆಕೋಳ ಶ್ರೀ ವೆಂಕಟೇಶನ ಸನ್ನಿಧಾನದಿಅನುಗ್ರಹಿಸಿದೆಯೋ ಮಹಾರಾಯಾಮಂದಮತಿ ನಾ ನಿಮ್ಮ ಮಹಿಮೆಯನು ಪೇಳಲೆನ್ನಳವೆತವಪಾದಾರವಿಂದದಿ ಅನವರದ ಜ್ಞಾನ ಭಕುತಿವೈರಾಗ್ಯವನಿತ್ತು ರಕ್ಷಿಸಬೇಕೋತಂದೆವರದವಿಠಲದೂತಾ ಮನೋ ನಿಯಾಮಕ ದೊರೆಯೇ
--------------
ಸಿರಿಗುರುತಂದೆವರದವಿಠಲರು
ವ್ಯಾಸೋಕ್ತಿಯನುಸರಿಸಿ ಹತ್ತು ಅವತಾರವನುಶ್ರೀಶ ಮಾಡಿದ ದಿನದ ಕ್ಲಪ್ತಿಯಂ ಬರೆವೆ ಸಂ- |ತೋಷದಿಂ ಕೇಳ್ಪುದೆಲ್ಲರು ಪೊರೆವ ಹರಿಯು ಅಭಿ-ಲಾಷೆ ಪೂರೈಸಿ ಬಿಡದೇ ಪಕೃತಯುಗಪ್ರಭವಮಧು ಶುದ್ಧ ಪ್ರತಿಪದಜಲಧಿಸುತವಾರ ರೇವತೀ ವಿಷ್ಕಂಭ ಹಗಲು ಸಂ-ಯುತ ಹನ್ನೆರಡು ಘಳಿಗೆಗವತರಿಸಿಶ್ರೀ ಮತ್ಸ್ಯ ಹತಮಾಡಿ ತಮನೆಂಬನಾ ||ಚತುರಾಸ್ಯವೈವಸ್ವತರಿಗೊಲಿದು ಮೆರೆದ ನೀಕ್ಷಿತಿಯೊಳಗೆ ಮತ್ತಾಯುಗದಿಕೂರ್ಮರೂಪದಿಂಚ್ಯುತರಹಿತನವತಾರ ಮಾಡಿ ಮಾಡಿದ ಕಾರ್ಯ ಮತಿವಂತರಿಗೆ ಪೇಳೂವೆ 1ವಿಭವಾಬ್ದ ಜ್ಯೇಷ್ಠ ಶುಕ್ಲದ್ವಿತೀಯಬುಧವಾರಶುಭದ ರೋಹಿಣಿ ಋಕ್ಷ ಧೃತಿ ಯೋಗ ದಿವದಲ್ಲಿತ್ರಿಭುವನೇಶ್ವರ ನಾಲ್ಕು ಘಳಿಗೆಗುದಿಸಿಯಮೃತಕೃತುಭುಜರಿಗುಣಿಸಿ ಕರುಣದಿಂ ||ಅಭಯವಿತ್ತನ್ಯರನು ದಣಿಸಿ ಧರಿಸಿದನು ಜಲ-ಜಭವಾಂಡ ಮಂದರಾದ್ರಿಯ ಬೆನ್ನಮ್ಯಾಲಿಂದಸುಭುಜಾಹ್ವಯನ ಚರಿತೆ ಸ್ಮರಿಸೆ ಕ್ಲೇಶಹ ಮತ್ತೆ ನಭಗವಹನಾ ಯುಗದಲಿ 2ಶುಕ್ಲ ಸಂವತ್ಸರದಶುಭಮಾಘ ಮಾಸದಲಿಶುಕ್ಲ ಪಕ್ಷದ ಸಪ್ತಮೀ ಭಾನುವಾರದಲಿಅಕ್ಲೇಶಪ್ರದ ಅಶ್ವಿನೀ ಸಾಧ್ಯಯೋಗದಲಿ ಶುಕ್ಲಶೋಣಿತ ವಿದೂರ ||ಶುಕ್ಲಾಂಬರಧರ ಕಿಟಿರೂಪದಿಂದವತರಿಸಿಹಕ್ಲಾಸುರ ಹಿರಣ್ಯಶನ ತರಿದುತ್ವರತನ್ನಒಕ್ಲಾದವರ ಪೊರೆದ ಹಗಲೆಂಟು ಘಳಿಗೆಯೊಳು ಶುಕ್ಲಾಂಗಆ ಯುಗದಲಿ 3ಆಂಗಿರಸವೆಂಬ ಸಂವತ್ಸರದ ವೈಶಾಖತಿಂಗಳದಿಸಿತಪಕ್ಷಚತುರ್ದಶೀ ಶನಿವಾರತುಂಗಸ್ವಾತಿಪರಿಘದಿವಾಷ್ಟ ವಿಂಶತಿ ಘಳಿಗೆಗಾಂಗೇಯಗರ್ಭನೊರವು ||ಸಂಘಟನೆವಾಗಲಾ ಸಮಯದೊಳು ಸ್ತಂಭದಿಂಸಂಗರಹಿತಹರಿಘುಡಿಘುಡಿಸುತಲಿ ಉದಿಸಿನರಸಿಂಗಾಹ್ವಯದಿಹೇಮಕಶ್ಯಪನ ತರಿದು ತರಳಂಗೆ ಸನ್ಮುದವಿತ್ತನೂ4ತ್ರೇತಾಯುಗದಲದಿತಿ ದೇವಿ ಭಕುತಿಗೆ ಮೆಚ್ಚಿಧಾತಾಬ್ದ ಭಾದ್ರಪದಸಿತಪಕ್ಷದ್ವಾದಶೀಖ್ಯಾತಿ ವಿಷ್ಣುಭ ಶುಕ್ರ ಧೃತಿ ಹತ್ತೈದು ಘಟಗೆಪೋತಭಾವದಿ ದಿವವಲಿ ||ತಾಂ ತಾಳಿ ಅವತಾರವಂ ತ್ರಿವಿಕ್ರಮನಾಗಿಭೂತಲಾಗಸವಳೆದು ವೈರೋಚಿನಿಯ ತುಳಿದುಪ್ರೀತಿಪಡಿಸುತ ಶಕ್ರನಂ ಸ್ವರ್ನದಿಯ ಪಡೆದ ಈತಗೆಣೆಯಾರೊ ಜಗದಿ 5ಅದೆ ಯುಗದಲಿ ಪ್ರಮಾಥಿಯೆಂಬ ಸಂವತ್ಸ-ರದಲಿ ವೈಶಾಖ ಶುದ್ಧ ತೃತೀಯೆ ಸುಕರ್ಮ ಯೋ-ಗದಲಿ ರೋಹಿಣಿಮಂದಹನ್ನೊಂದು ಘಟರಾತ್ರಿಯೊದಗುತಿರೆಭೂಪತಿಗಳಾ ||ವಧೆಗೆ ವಿಪ್ರರ ವೃಂದವನು ಪೋಷಣೆಯ ಮಾಡು-ವದಕೆ, ಜಮದಗ್ನಿಯಿಂದವತರಿಸಿ ರಾಮ ನಾ-ಮದಲಿ ಪರಶುವ ಧರಿಸಿ ಈ ಧಾತ್ರಿಯೊಳು ಬಹು ಮೆರೆದಮತ್ತು ಆ ಯುಗದಲಿ 6ತಾರಣೆಂಬಬ್ಧ ಮಧುಮಾಸ ಶುಕ್ಲ ನವಮಿಯಆರನೇ ತಾಸು ದಿವದಲಿ ಪುನರ್ವಸು ಚಂದ್ರವಾರ ಶೂಲೆಂಬ ಯೋಗದಲಿ ದಶರಥನೃಪತಿಹಾರೈಸಿದುದಕೆ ಒಲಿದು ||ಶ್ರೀರಾಮನಾಮದಿಂದವತರಿಸಿ ದೈತ್ಯ ಪರಿವಾ-ರ ರಾವಣನ ಸಂಹರಿಸಿ ವಿಭೀಷಣಗೊಲಿದುವಾರಿಜೋದ್ಭವಮುಖ ದಿವೌಕಸರಿಗಾನಂದ ತೋರಿಸಿದ ಸೀತಾಪತಿ 7ಮೂರನೇ ಯುಗ ವಿರೋಧೀ ಶ್ರಾವಣವದಿ ಅ-ರ್ಧರಾತ್ರಿಯೊಳಷ್ಟಮೀ ರೋಹಿಣೀವಜ್ರಬುಧವಾರದಲಿ ಅಜನ ಬಿನ್ನಹಕೊಪ್ಪಿ ಕೃಷ್ಣಾವತಾರವನು ತಾಳಿ ಧರೆಗೆ ||ಭಾರವಾಗಿದ್ದ ಕಂಸಾದಿ ಖಲವೃಂದ ಸಂ-ಹಾರಮಂ ಗೈದು ಪಾಂಡವರ ಪೋಷಿಸಿವಿಪ್ರಗೋ ರಕ್ಷಣೆಯ ಮಾಡಿ ಧರ್ಮವಂ ಸ್ಥಾಪಿಸಿದ ಶ್ರೀರಮಣ ಮಧ್ವಸದನ 8ಕಲಿಖರಾಬ್ಧಾಷಾಢ ಶುದ್ಧ ದಶಮಿ ವಿಶಾಖನಳಿನಸಖವಾರ ಶುಕ್ಲಾಹ ಯೋಗ ದಿವಾಷ್ಟಘಳಿಗೆಯೊಳು ಜನನೆಂಬ ದೈತ್ಯನಲ್ಲವತರಿಸಿ ಬಲುದುರ್ಮತಿಯ ಪ್ರೇರಿಸಿ ||ಕಳೆಗೆಡಿಸಿ ಬುದ್ಧಾವತಾರವೆಂದೆನಿಸಿ ಶಿವ-ಗೊಲಿದು ತ್ರಿಪುರವ ಕೆಡಿಸಿ ಸಜ್ಜನರ ಸಂಶಯವಕಳದು, ಕರುಣಾಂಬುಧಿಯ ಮಹಿಮೆಯಂತಿಳಿಯಲಸದಳಮಾವಿಧಿಗೆ ಎಂದಿಗೂ 9ದನುಜಪತಿ ಯುಗ ದುರ್ಮುಖಾ ಮಾರ್ಗಶಿರ ಶುದ್ಧಶನಿವಾರ ದ್ವಿತೀಯೆ ಪೂರ್ವಾಷಾಢ ವೃದ್ಧಿ ಮೂ-ರನೆ ಘಳಿಗೆ ದಿವದ ಕಲ್ಕ್ಯವತಾರದಿಂಮ್ಲೇಂಛರನು ಸದೆದು ಭೂ ದಿವಿಜರಾ ||ಘನಮೋದ ಪಡಿಸಿ ವಾಜಿಯನೇರಿ ಮೆರೆದಾಡಿಅನಿಮಿಷರ ಕೈಯ್ಯ ಪೂ ಮಳೆಯಂಗರಿಸಿಕೊಂ-ಡನಘ ಬಲ್ಲವರಿಗಲ್ಲಲ್ಲೆ ಇರುತಿಹನುಪ್ರಣತಜನಕಾಮಧೇನೂ 10ಈ ಪರಿಯಲಚ್ಯುತನ ಅವತಾರ ಚರಿತೆ ಸಂ-ಕ್ಷೇಪದಿಂ ವಿರಚಿಸಿದೆ ಸದ್ಭಕ್ತಿಯಿಂದಿದನುಪಾಪಿಗಳಿಘೇಳದಲೆ ಕಾಲತ್ರಯದಿ ಪಠಸೆ ತಾಪತ್ರಗಳ ಕಳೆದು ||ಈ ಪೊಡವಿಯೊಳಗೆ ಬಹುಮಾನ ಮಾಡಿಸಿ, ತಂದೆ-ಯೋಪಾದಿ ಕ್ಷಣ ಬಿಡದೆ ಸಲಹಿ ಪ್ರಾಂತಕೆ ತನ್ನಆ ಪರಂಧಾಮ ವೈದಿಸುವನತಿ ಕರುಣಾಳು ಶ್ರೀಪ ಪ್ರಾಣೇಶ ವಿಠಲಾ 11
--------------
ಪ್ರಾಣೇಶದಾಸರು