ಒಟ್ಟು 16 ಕಡೆಗಳಲ್ಲಿ , 12 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ) ಶ್ರೀನಿವಾಸಾಯ ನಮೋ ಪ. ಶ್ರೀನಿವಾಸಾಯ ಶತಭಾನುಪ್ರಕಾಶಾಯ ಶ್ರೀನಿವಾಸಾಯ ನಿಜ ಭಕ್ತಜನಪೋಷಾಯ ಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ. ದೋಷಗಂಧವಿದೂರ ಕೇಶಿಮುಖದಾನವ ವಿ- ನಾಶವಿಧಿಭವಸುಖನಿವಾಸ ವಾಸುಕಿಶಯನ ವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷ ದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ- ಭೂಷ ಭೂತಾತ್ಮ ಭವಪಾಶಹರ ಪರತರ ದ- ಕೇಶವಾಯ ನಮೋನಮಃ 1 ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶ ಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತ ಸನ್ನುತ ಪಾದನೀರರುಹದ್ವಂದ್ವನೆ ಸುರರು ತಿಳಿಯರು ನಿನ್ನ ಭೂರಿಮಹಿಮೆಗಳ ಸಾಕಾರವನು ಬಣ್ಣಿಸುವ ನಾರಾಯಣಾಯ ನಮೋ 2 ವೇದವೇದ್ಯನೆ ದುರಿತಶೋಧನೆ ದೈತ್ಯಗಣ- ಛೇದಕನೆ ಸುರಸುಪ್ರಸಾದಕನೆ ಭಕ್ತಜನ- ಸಮಾನಾಧಿಕ್ಯರಹಿತ ಸತತ ಆದಿತ್ಯ ಶತಕೋಟಿತೇಜೋವಿರಾಜ ಮಹ- ದಾದಿಕಾರಣ ಮಧುವಿರೋಧಿ ಮಂಗಲಸುಖಾಂ- ಮಾಧವಾಯ ನಮೋನಮಃ 3 ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು- ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ- ಸನ್ನುತ ಮಹೇಂದ್ರ ವಂದಾರುಜನತ್ರಿದಶಮಂದಾರ ಕೋಮಲಿತ ವೃಂದಾವನವಿಹಾರ ಕಂದರ್ಪಜನಕ ಬಾ- ತುಭ್ಯಂ ನಮಃ 4 ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷ ಮುಷ್ಟಿಕಾಸುರವೈರಿ ಮುನಿಜನಮನೋಹಾರಿ ಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇ ಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆ ತುಷ್ಟಿಯನು ನೀನಿತ್ತು ಸಲಹೊ ಸಾಮಜವರದ ತುಭ್ಯಂ ನಮೋ 5 ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತ ಬುಧಜನಪ್ರಿಯ ಭೂತಭಾವನ ಜಗನ್ನಾಥ ಮದನಕೋಟಿಸ್ವರೂಪ ವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ- ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸ ಮಧುಸೂದನಾಯ ನಮೋ 6 ಅಕ್ರೂರವರದ ಸದತಿಕ್ರಮರ ಗೆಲಿದ ಹಯ- ವಕ್ತ್ರ ವೈಕುಂಠಾಖ್ಯ ಪುರವಾಸ ಜಗದೀಶ ಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನು ಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ- ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿ ತ್ರಿವಿಕ್ರಮಾಯ ನಮೋನಮಃ 7 ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು- ದಾಮಸಖ ಪರಿಪೂರ್ಣಕಾಮ ಕೈರವದಳ- ಸುಜನಸ್ತೋಮಸುರಕಾಮಧೇನು ಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ- ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ- ಪ್ರಾಜ್ಞ ವಾಮನಾಯ ನಮೋನಮಃ 8 ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ- ರಾಧಭಂಜನ ಭವಾಂಬೋಧಿಕುಂಭಜ ಭಜಕ- ಚತುಷ್ಟಾದ ಪಾವನಚರಿತನೆ ಗಾಧಿಜಾಧ್ವರಪಾಲ ಗರುಡಧ್ವಜ ದಯಾಳು ನಾದಬಿಂದು ಕಲಾತೀತ ರುಕ್ಮಿಣಿನಾಥ ಶ್ರೀಧರಾಯ ನಮೋನಮಃ 9 ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ- ಕಾಶ ಪಾಲಿತನಿಖಿಳಭೂಸುರವ್ರಜ ಮಂದ- ದೂಷಣಾದ್ಯ ಸುರಹರನೆ ಈಶಪತಿಸೇವ್ಯಾಂಬರೀಶನೃಪವರದ ಪರ- ಮೇಶ ಕೋವಳಪೀತವಾಸ ಕರ್ದಮಶುಕಪ- ಹೃಷೀಕೇಶಾಯ ತುಭ್ಯಂ ನಮೋ 10 ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲ ಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ- ಬುದ್ಧ ಬುಧಜನಸುಲಭ ಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇ ತದ್ವೀಪವೈಕುಂಠಮಂದಿರತ್ರಯ ಸಾಧು- ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11 ಸಾಮಗಾನವಿನೋದ ಸಾಧುಜನಸುಖಬೋಧ ಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತ ಸಮರಂಗ ಭೀಮ ನಾಮಧಾರಕರ ಪರಿಣಾಮರೂಪಕ ಸುಜನ- ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣ ದಾಮೋದರಾಯ ನಮೋ 12 ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯ ವೆಂಕಟಾಚಲಸದಾಲಂಕಾರ ಶೇಷಪರಿ- ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗ ಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತ ಓಂಕಾರನಿಧನ ಸಾಮಕಭಕ್ತರಾನೇಕ ಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ 13 ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದು ಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯ ನೀ ಸಲಹೊ ದೇವದೇವ ಭೂ ಸಲಿಲ ಪಾವಕಾಕಾಶಾದಿ ಭೂತಾಧಿ- ವಾಸ ರಾಕ್ಷಸವನಹುತಾಶ ನಾನಾ ರೂಪ- ವಾಸುದೇವಾಯ ನಮೋ 14 ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲ ವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರ ಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನ ರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ- ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ- ಪ್ರದ್ಯುಮ್ನಾಯ ತುಭ್ಯಂ ನಮಃ 15 ಉದ್ಧವಾದಿ ಸಮಸ್ತ ಭಾಗವತಜನಕಮಲ- ಮಧ್ಯಚರರಾಜಹಂಸಾಯ ಮಾನಸದ ಶ್ರೀಹರಿಯೆ ವೈದ್ಯನಾಥವಿಧಾತನೆ ಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ- ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆ ಅನಿರುದ್ಧಾಯ ತುಭ್ಯಂ ನಮಃ 16 ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾ ಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷ ಮಂಗಲರಿತ ಗುರುತಮ ಗುಣಧ್ಯಕ್ಷನೆ ಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದ ಶರಭಂಗ ಮುನಿಪಾಲ ಶಮಿತದಾನವಜಾಲ ಪುರುಷೋತ್ತಮಾಯನ್ನಮೋ 17 ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್- ವಿಶ್ವತೋಮುಖ ವಿಶ್ವತೋಬಾಹು ಕರುಣಾಕ- ದಯಮಾಡು ಶ್ರೀವಕ್ಷಸ್ಥಲನಿವಾಸನೆ ಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ- ಮೋಕ್ಷದಾಯಕ ಯಜ್ಞಮೂರ್ತಿ ರೂಪತ್ರಯ ಮ- ಅಧೋಕ್ಷಜಾಯ ನಮೋನಮಃ 18 ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು- ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ- ಶಿರಪ್ರಕರಧೀರ ಪ್ರಹ್ಲಾದಾಭಿವರದ ಭೂರೀಕರರೂಪ ಭೂಮಕೀರ್ತಿಕಲಾಪ ಸಾರವಜ್ರಸ್ತಂಭದಿಂ ಬಂದ ನಂದ ಸುಕು- ನಾರಸಿಂಹಾಯ ನಮೋ 19 ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತ ಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ- ನಿರ್ಮಿಸುವ ಆಶ್ಚರ್ಯಕೃತ ಸಲೀಲ ಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯ ಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ- ಶ್ರೀಮದಚ್ಯುತಾಯ ನಮೋನಮಃ 20 ಚೈದ್ಯಮಥನ ಮನೋಜ್ಞಶುದ್ಧಾತ್ಮ ಸರ್ವಜ್ಞ ಹೊದ್ದಿಸಿದ ಪಾರ್ಥನಿಂಗೆ ಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ- ವಿದ್ದ ಮಾನಸವ ಪಾದದ್ವಯದೊಳಿರಿಸೈ ದ- ಜನಾರ್ದನಾಯ ನಮೋನಮಃ 21 ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದ ನಂದಗೋಪನ ಕಂದನೆನಿಸಿ ಬಾಲಕತನದ ಸುಂದರೀರಮಣ ಜಯತು ತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ- ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ- ಉಪೇಂದ್ರಾಯ ತುಭ್ಯಂ ನಮಃ 22 ಸ್ಥಿರಚರಾತ್ಮಕ ಧೇನುಚರ ದೇವಕೀಜಠರ- ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥ ದುರಿತದೂರ ಗಭೀರನೆ ನಿರತಿಶಯ ನಿಜನಿರ್ವಿಕಲ್ಪ ಕಲ್ಪಾಂತಸಾ- ಗರದಿ ವಟಪತ್ರಪುಟಶಯನ ಪುಣ್ಯಶ್ರವಣ ಹರಯೇ ನಮೋನಮಸ್ತೇ 23 ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ- ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ- ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾ ದುಷ್ಟ ನರಕಾದಿದಾನವರ ಮರ್ದಿಸಿದ ಜಗ- ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ- ಹರೇ ಕೃಷ್ಣಾಯ ತುಭ್ಯಂ ನಮಃ 24 ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆ ಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ- ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜ ಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು- ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ- ಲಕ್ಷ್ಮೀನಾರಾಯಣಾಯ ನಮೋ 25
--------------
ತುಪಾಕಿ ವೆಂಕಟರಮಣಾಚಾರ್ಯ
ಉಗಾಭೋಗ ವಿಕ್ರಮ ಸಂವತ್ಸರದಲ್ಲಿ ನಿನ್ನ ನಿಜ ದಾಸಕೂಟ ಜನಕೆ ಪ- ರಾಕ್ರಮ ಹೆಚ್ಚಲಿ ಅಚ್ಚುತಾನಂತ ಕೃಷ್ಣ ಶಕ್ರಾನುಜನೆ ನಿನ್ನ ದೂತ ಹನುಮನ ಸೇವೆ ವಕ್ರವಿಲ್ಲದೆ ನಡೆದು ನಿನ್ನ ಕೃಪೆಯಾಗಲಿ ಅಕ್ರೂರವರದ ತಂದೆ ಮುದ್ದುಮೋಹನ್ನರ ವಿಕ್ರಮೌದಾರ್ಯ ದಶ ದಿಕ್ಕುಗಳ ಬೆಳಗಲಿ ಶಕ್ರಾನುಜನೆ ಉದರ ಬಗೆದು ತರಳನ ಕಾಯ್ದ ವಕ್ರನಖನೆ ನಮ್ಮ ನೀತ ಶ್ರೀ ಗುರುಗಳಿಗೆ ವಿಕ್ರಮ ಶಾಂತಿ ಆಯುರಾರೋಗ್ಯ ಭಾಗ್ಯವಿತ್ತು ಚಕ್ರಧರನೆ ನಿನ್ನ ಸೇವೆ ಕೈಕೊಂಡೆಮ್ಮ ಭವ- ಚಕ್ರ ತೊಡಕು ಬಿಡಿಸಿ ದಾಸ ಜನರ ಕಾಯೋ ಉ- ರು ಕ್ರಮದೇವ ಜಗಚ್ಚಕ್ರವರ್ತಿಯೆ ನಮೋ ಶಕ್ತಾದ್ಯಮರ ನುತ ಗೋಪಾಲಕೃಷ್ಣವಿಠಲಾ
--------------
ಅಂಬಾಬಾಯಿ
ಕಂ||ಮಂಗಳವಾರದ ಪೂಜೆಗೆಮಂಗಳ ನೈರುತ್ಯದಲ್ಲಿ ಶಿವನಪ್ಪಣೆುಂಮಂಗಳ ನಾಮವ ಜಪಿಸುತಮಂಗಳವನ್ನೀಯುತೆಮಗೆ ಶೋಭಿಸುತಿಪ್ಪಳ್‍ನಿನ್ನ ಚರಣವ ನಂಬಿ ಭಜಿಸುತಿಹ ಭಕ್ತನಿಗೆ ುನ್ನುಂಟೆ ಗ್ರಹಗತಿಗಳು ಕೃಷ್ಣಾ ಪಉನ್ನತದ ಚಕ್ರವರ್ತಿಯ ಹೊಂದಿ ಬದುಕುವನಿಗನ್ಯರಟ್ಟುಳಿ ಬರುವದೇ ಕೃಷ್ಣಾ ಅ.ಪನೀನೊಬ್ಬನೇ ದೇವನೆಂದು ಪೇಳುತಲಿಹುದುಸಾನುನಯವುಳ್ಳ ಶ್ರುತಿಯು ಕೃಷ್ಣಾಏನೊಂದು ರೂಪಾಗಿ ತೋರಿದರು ಸಕಲವೂನೀನಲ್ಲದನ್ಯವುಂಟೇ ಕೃಷ್ಣಾಏನೆಂಬೆ ಚಿನ್ನ ಹಲವಂದದಾಭರಣದಲಿಕಾಣಿಸಿದರದು ಭೇದವೇ ಕೃಷ್ಣಾನೀನೇ ದೇವಾತ್ಮಕನು ನೀನೆ ಗ್ರಹರೂಪಕನುನೀನೊಲಿದ ನರಗೆ ಭಯವೇ ಕೃಷ್ಣಾ 1ಉತ್ತವನು ಬಿತ್ತುವನು ಬಿತ್ತಿದವನುಂಬವನುಮತ್ತೊಬ್ಬನದಕೆ ಬಹನೇ ಕೃಷ್ಣಾಉತ್ತು ಬಿತ್ತಿದೆ ಮಾಯೆಯೆಂಬ ಕ್ಷೇತ್ರದಿ ನಿನ್ನಚಿತ್ತೊಂದು ಬೀಜವನ್ನು ಕೃಷ್ಣಾಬಿತ್ತು ವೃಕ್ಷಾಕಾರವಾದಂತೆ ಲೋಕವಿದುವಿಸ್ತರದಿ ಬಹುವಾುತು ಕೃಷ್ಣಾಬಿತ್ತಿ ಬೆಳೆದುಂಬಾತನುತ್ತಮನು ನೀನಿರಲುಮತ್ತೊಂದು ಭಯವದೇಕೆ ಕೃಷ್ಣಾ 2ಇಂದ್ರಾದಿ ದಿಕ್ಪಾಲಕರ ರೂಪನಾಗಿರುವೆಚಂದ್ರಾದಿ ಗ್ರಹರೂಪನು ಕೃಷ್ಣಾಇಂದ್ರ ಚಂದ್ರಾದಿತ್ಯ ವರುಣಾದ್ರಿ ಗಗನಾದಿಇಂದ್ರಿಯಾಧೀಶ ನೀನೆ ಕøಷ್ಣಾಇಂದ್ರಿಯಾಧೀನರಾಗಿರುವರರಿಯರು ನಿನ್ನಮಂದಬುದ್ಧಿಯ ಮೂಢರು ಕೃಷ್ಣಾತಂದ್ರಿಯನು ಪರಿಹರಿಸಿ ಹೊಂದಿ ನಿನ್ನನು ಭಜಿಪಛಂದವನು ನೀ ತೋರಿಸು ಕೃಷ್ಣಾ 3ಒಡೆಯನೊಬ್ಬನು ಜಗಕೆ ಬಳಿಕಾತನಾಜ್ಞೆಯಲಿನಡೆವರೆಲ್ಲರು ಮೀರದೆ ಕೃಷ್ಣಾನಡೆಯಲರಿಯದು ಹಲಬರೊಡೆಯರಾಗಲು ನೀತಿಕೆಡುವುದದು ಕದನಮುಖದಿ ಕೃಷ್ಣಾನುಡಿದು ಭೇದವ ನಿತ್ಯ ಕದನವನು ಮಾಡುತಿಹಜಡರ ಮಾತದು ಸತ್ಯವೇ ಕೃಷ್ಣಾಬಿಡಿಸಿ ಭೇದವನೊಬ್ಬನೊಡೆಯನೆಂದುರು ಸಾರ್ವಸಡಗರದ ಶ್ರುತಿ ನಿತ್ಯವು ಕೃಷ್ಣಾ 4ಬಿಡದೆ ನಿನ್ನಂಘ್ರಿಯನು ದೃಢವಾಗಿ ಭಜಿಸುವರುಜಡತೆಯಳಿದ ಮಹಾತ್ಮರು ಕೃಷ್ಣಾಬಿಡುವದವರಿಗೆ ಲೋಕ ನಡೆವ ನಡತೆಯ ಭ್ರಮೆಯುನಡತೆಯದು ನಿನ್ನ ನಿಜವು ಕೃಷ್ಣಾನಡೆದು ಬಳಿಕಾ ಮಾರ್ಗವನು ಹೊಂದಿದವ ನಿಪುಣಬಿಡಬೇಕು ಮೂಢಮತವ ಕೃಷ್ಣಾಪೊಡವಿಯೊಳು ತಿರುಪತಿಯ ವಾಸ ವೆಂಕಟರಮಣಕೊಡು ನಿನ್ನ ಭಜಿಪ ಮತಿಯ ಕೃಷ್ಣಾ 5ಓಂ ಅವ್ಯಕ್ತ ಗೀತಾಮೃತ ಮಹೋದಧಯೇ ನಮಃ
--------------
ತಿಮ್ಮಪ್ಪದಾಸರು
ಕರುಣಾಲವಾಲ ಪ ಸಿರಿಯರಸನೆ ನಿನ್ನ ಚರಣವ ನಂಬಿದೆ ಸುರಗಣ ಸೇವಿತ ಸುರರಾಜಪಾಲ ಅ.ಪ ಇಂದ್ರನಕೂಡಿ ಮುನೀಂದ್ರನ ಸತಿಶಾಪ ದಿಂದರೆಯಾಗಿರಲಂದು ನೀ ದಯದಿ ಸುಂದರ ಚರಣಾರವಿಂದಗಳಿತ್ತ ಧೂಳಿ ಯಿಂದ ಪಾವನಗೈದ ಇಂದಿರೇಶನೆ ನೀ 1 ಚಕ್ರವರ್ತಿಯು ಮರೆಹೊಕ್ಕರೆ ನುತಿಸಿ ರಕ್ಷಿಸಿದಾಪರಿಯಕ್ಕರೆ ತೋರಿಸಿ 2 ಶಿರಸರಿಸಕ್ಕೆ ಗುರಿಯಿಡಲು ನರನ ಶಿರವುಳುಹಿದ ಸಿರಿವರದವಿಠಲ ಹರಿ3
--------------
ವೆಂಕಟವರದಾರ್ಯರು
ದ್ವಾದಶನಾಮ ನಿರ್ವಚನ ಶ್ರೀಕೃಷ್ಣ ನಿನ್ನ ಚರಣಾರವಿಂದಕ್ಕೆರಗಿ ಭಕುತಿಯಿಂ ನಿನ್ನ ಪನ್ನೆರಡು ರೂಪಗಳ ನಾಮ ನಿರ್ವಚನದಿಂ ಕೂಡಿ ನುತಿಸುವೆ ನಾನು ಸರ್ವಸಿದ್ಧಿಯನ್ನಿತ್ತು ಕಾಪಾಡು ಹರಿಯೆ 18 ಸೃಷ್ಟಿಲಯಕಾರಿಗಳು ಬೊಮ್ಮರುದ್ರರು ಇವರೆ ಕೇಶವೆಂಬಕ್ಷರದಿ ಮೆರೆಯುತ್ತಲಿಹರು ವರ್ತನವು ಯಾರಿಂದಲಹುದವನೆ ಪರದೇವ ಕೇಶವಾತ್ಮಕನವನು ಶ್ರೀಕೃಷ್ಣ ದೇವ 19 ನಾರವೆಂದರೆ ದೋಷ ಲೇಶವಿಲ್ಲದ ಗುಣವು ನಾರವೆಂದರೆ ನೀರು ಜೀವನಾಧಾರ ನಾರವಯನವು ಯಾರಿಗವನೆ ನಾರಾಯಣನು ರಜತಪೀಠದ ಪುರದ ಪರದೈವವವನು 20 ಮಾಧವನು ಮಾಲಕುಮಿಗೊಡೆಯನವ ಪರಮಾತ್ಮ ಮಾಯೆಯನು ಎದೆಯಲ್ಲಿ ತಾಳ್ದ ಸಿರಿವರನು ಮಾಯೆಯಿಂದಲಿ ಮಾನವಗೆ ಮುಸುಕನು ಹಾಕಿ ತನ್ನ ರೂಪವನಾರು ನೋಡದಂತಿಹನು 21 ಹಿರಿ ಬೆಟ್ಟವನು ತಾನು ಕಿರಿ ಬೆಟ್ಟಿನಲಿ ಹೊತ್ತು ಗೋವುಗಳ ರಕ್ಷಿಸಿದ ಗೋಪಾಲ ನೀನು ವೇದರಕ್ಷಕನಾಗಿ ಗೋವಿಂದನೆನಿಸಿರುವೆ ಶ್ರೀಕೃಷ್ಣ ನಿನ್ನ ಮಹಿಮೆಯನೇನ ಪೇಳ್ವೆ 22 ಚೇಷ್ಟಕನು ಬಲರೂಪನಾಗಿರುವ ಕಾರಣದಿ ವಿಶ್ವದಲ್ಲೆಲ್ಲು ವ್ಯಾಪಿಸಿರುವುದರಿಂ ವಿಷ್ಣುನಾಮದ ನೀನು ವೈಷ್ಣವರ ಕುಲದೊಡೆಯ ಮಧ್ವಹೃನ್ಮಂದಿರದ ನೆಲೆಯಲ್ಲಿ ಇರುವೆ 23 ಮಧುವೆಂಬ ದೈತ್ಯನನು ಸೃಜಿಸಿಯವನನು ಕೊಂದು ಮಧುಸೂದನನು ಎಂಬ ಬಿರುದು ನೀ ಪೊತ್ತೆ ದುರ್ಜನರ ಸಂಹಾರ ಸಜ್ಜನರ ಉದ್ಧಾರ ಎಂಬೆರಡು ಕಾರ್ಯಗಳಿಗಾಗಿಯವತಾರ 24 ತ್ರೈವಿಕ್ರಮಾವತಾರವ ತಾಳ್ದು ದೇವ ಕಾಲ ತೊಳೆದು ಮೂರು ಲೋಕದ ಭಕುತರಿಗೆ ದರ್ಶನವ ಕೊಟ್ಟು ಭಕ್ತರಕ್ಷಕನಾಗಿ ಮೆರೆದೆ ಸಿರಿವರನೆ25 ವಾಮನನು ನೀನಾಗಿ ವಾಮಪಂಥದಿ ಹೋಗಿ ಬಲಿ ಚಕ್ರವರ್ತಿಯಲಿ ಮೂಹೆಜ್ಜೆ ಬೇಡೆ ಭಕುತಿಯಿಂದವ ಕೊಡಲು ಮುಕುತಿಯನು ಕೊಡಲೆಂದು ಬಲಿಯ ಮನೆಯೂಳಿಗವ ಗೈದೆ ಪರಮಾತ್ಮ26 ಸಿರಿಯನೆದೆಯಲಿ ಪೊತ್ತು ಶ್ರೀಧರನು ನೀನಾಗಿ ಸರ್ವ ಭೂಷಣಗಳಿಂ ಶೋಭಿಸುತಲಿರುವೆ ಅನ್ನದಾತನು ನೀನು ಅನ್ನಭೋಕ್ತøವು ನೀನು ಭುಕ್ತಿ ಮುಕ್ತಿ ಪ್ರದನು ನೀನಿರುವೆ ದೇವ 27 ಇಂದ್ರಿಯಗಳು ಹೃಷೀಕಾಭಿಧಾನದಲಿಹವು ನೀನವುಗಳಿಗೆ ಎಲ್ಲ ಒಡೆಯನಾಗಿರುವೆ ಹೃಷೀಕೇಶ ನಾಮವದು ನಿನಗೊಪ್ಪುವದು ಹರಿಯೆ ನನ್ನ ಮನ ನಿನ್ನಡಿಯೊಳಿರುವಂತೆ ಮಾಡು28 ಸಾಗರವನುದರದಲ್ಲಿರಿಸಿ ನೀನದರಿಂದ ನಾಭಿಯಲಿ ಪದುಮವನು ಸೃಷ್ಟಿಸಿದೆ ದೇವಾ ಪದುಮನಾಭನು ನೀನು ಬೊಮ್ಮಪಿತನಾಗಿರುವೆ ಮಾಯಾ ರೂಪವನೇನಪೇಳ್ವೆ29 ಮೊಸರ ಕುಡಿಕೆಯನೊಡೆದು ತಾಯಿಯಿಂ ಬಂಧಿತನು ದಾಮೋದರನು ಎನಿಸಿ ಉಜಡೆಯನ್ನೊಯ್ದು ಮರಗಳೆಡೆಯಲಿ ಪೊಕ್ಕು ಬೀಳಿಸುತಲವುಗಳನು ಭಕುತರಾ ಶಾಪಮೋಚನೆಯ ನೀ ಮಾಡ್ದೆ30 ಕೇಶವನೆ ಮೊದಲಾದ ಪನ್ನೆರಡು ನಾಮಗಳ ಅರ್ಥವರಿತನವರತ ಪೇಳಲವಗೊಲಿದು ಸಂಸಾರ ಬಂಧನವ ತೊಲಗಿಸಿಯೆ ಪರಮಾತ್ಮ ತನ್ನ ಬಳಿಗೊಯ್ಯುವನು ನಿಜ ಪೇಳ್ವೆ ನಾನು31 ಶ್ವೇತ ರಕ್ತವು ಪೀತ ಕೃಷ್ಣ ವರ್ಣಗಳೆಂಬ ನಾಲ್ಕು ಬಣ್ಣದ ದೇವನೊಬ್ಬನೇ ಇಹನು ಕಲಿಯುಗದ ಕಾಲದಲಿ ಕೃಷ್ಣನೊಬ್ಬನ ನೆನೆದು ನಾಮಜಪ ಮಾಡಿದರೆ ಮುಕ್ತಿಯನು ಕೊಡುವ 32
--------------
ನಿಡಂಬೂರು ರಾಮದಾಸ
ನರ್ತನಶಾಲೆ ಇದೇನಯ್ಯ ವರ್ತುಳವಾದ ಭೂಮಂಡಲವೆಲ್ಲಾ ಪ ಕರ್ತನೀನೇ ಚಕ್ರವರ್ತಿಯಾಗಿರುವೆ ವರ್ತನೆ ಗಡಿಬಿಡಿ ಮಾಡದಿರಯ್ಯ ಅ.ಪ ಕುಂಟರು ಕುರುಡರು ನರ್ತನೆಗೈವರು ನೆಂಟರು ಭಂಟರು ನರ್ತಿಸುತಿರುವರು ಗಂಟನುಂಗುವರೂ ನರ್ತಿಸುತಿಹರೋ1 ವರ್ತಕ ಲಾಭಕೆ ನರ್ತಿಸುತಿಹನು ಆರ್ತ ದರ್ಶನಕಾಗಿ ನರ್ತಿಸುತಿಹನು ನರ್ತನೆ ಮಾಂಗಿರಿಪತಿ ಕೃಪೆಗೈಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನುಳಿಯೆ ರಕ್ಷಕರ ಕಾಣೆನೀ ಜಗದೊಳಗೆ ಶ್ರೀನಿವಾಸ ಜಗನ್ನಿವಾಸ ಪ ದೀನರಕ್ಷಕ ನಿಖಿಲ ಮಾನವರ ಮಾನಾಭಿ ಮಾನದೊಡೆಯನು ನೀನೆಯಲ್ಲದಿಲ್ಲಾ ಅ.ಪ ನಕ್ರಮುಖದಲ್ಲಿ ಸಿಕ್ಕಿ ದುಃಖಿಸುವ ಕರಿರಾಜ ಚಕ್ರವರ್ತಿಯು ಶರಣುಹೊಕ್ಕೆನೆನಲು ಚಕ್ರವನು ಪಿಡಿದು ನೀನಕ್ಕರೆಯೊಳೈತಂದು ನಕ್ರವದನವ ಸೀಳಿ ರಕ್ಷಿಸಿದೆ ಗಜವಾ ದೇವಾ 1 ಹಿಂದೆ ನಾನಾ ನಗರಿಯಿಂದ ಬಹದಾರಿಯೊಳು ಸಂದುಗಳೀಚಲು ಭಂಡಿ ಸಂಜೆಯೊಳಗೆ ಮುಂದಾಗ ಜೊತೆಯೊಳಗೆ ಬಂಧುಜನದಲ್ಲಿ ನೀ ಬಂದು ಬೆಳಕನು ತೋರಿ ಮುಂದೆಗೂಡಿದೆ ಕೃಷ್ಣಾ 2 ಇಂದು ನಿಜಸತಿಯು ನೊಂದಳುಬ್ಬಸರೋಗ ದಿಂದ ಗಾಳಿಯದೀಪದಂದಮಾಗಿ ನಂದಿ ಪೋಗದ ಮುನ್ನ ಬಂದು ನೀಮರೆಯಾಗು ಎಂದು ಮೊರೆಯಿಡಲಾಗ ಬಂದು ಸಲಹಿದೆ ತಂದೆ 3 ಗುರುಸುತನ ಸಂಯಮದೀ ಪುರದಿಂದ ತಂದಿತ್ತೆ ತುರುಗಾಯ್ವರಸುಗಳನು ಮರಳಿ ಪಡೆದೆ ನರಪೌತ್ರನ ಬಾಣದುರಿಯಿಂದ ರಕ್ಷಿಸಿದೆ ಸರಿಯಾರು ನಿನಗೆ ಸುರನರಭುಜಂಗರಲ್ಲಿ 4 ತರಳಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಕರು ವರವಿಭೀಷಣ ತಾಪಸರನು ಪೊರೆದೆ ಶರಣರನು ಪಾಲಿಸುವ ಬಿರುದು ಧರಿಸಿಹ ವ್ಯಾಘ್ರ ಗಿರಿಯೊಳಗೆ ನೆಲೆಸಿರುವ ವರದವಿಠಲರಾಯ 5
--------------
ವೆಂಕಟವರದಾರ್ಯರು
ಪಾದಸೇವೆಯ ಪಾಲಿಸೋ ಪಂಕಜನಾಭ ಪ ಪಾದಸೇವೆಯ ತೋರೋ ವೇದಗೋಚರ ವ್ಯಾಘ್ರ ಭೂಧರ ವಿಹರಣ ಶ್ರೀಧರ ಹರಿ ನಿನ್ನ ಅ.ಪ ಶೇಷವಾಯುಗಳತಿದೋಷವರ್ಜಿಸಿ ತನು ಶೋಷಿಸಿ ತಪನ ವಿಶೇಷವಾಚರಿಸೆ ದೋಷರಹಿತ ಗುಣಭೂಷಾ ಶೇಷನಿಗೊಲಿದು ಶೇಷಪರ್ವತ ಶಿರೋಭೂಷಣನೆನಿಸಿದ 1 ಬಲಿಚಕ್ರವರ್ತಿಯು ಬಲವೈರಿಯನು ಬಲು ಬಳಲಿಸಿ ರಾಜ್ಯವ ಛಲದಿಂದಾಕ್ರಮಿಸೆ ನಲಿದು ವಾಮನನಾಗಿ ಬಲಿಯ ದಾನವ ಬೇಡಿ ನೆಲನ ಈರಡಿ ಮಾಡಿ ಬಲಿಯ ಮೆಟ್ಟಿದ ಧೀರ2 ಪಲಕಾಲ ಶಾಪದಿ ಶಿಲೆಯಾಗಿದ್ದ ಗೌತಮ ಕುಲಸತಿಗೊಲಿದು ನಿರ್ಮಲ ತಪೋವನಕೆ ಸುಳಿದು ಆ ಲಲನೆಯ ಕಲುಷವ ಖಂಡಿಸಿ ಲಲನಾರೂಪವನಿತ್ತು ಸಲಹಿದ ಪಾವನ 3 ತರಣಿತನಯನೆಚ್ಚ ಗರಳಶರವು ಬೇಗ ನರನುತ್ತಮಾಂಗಕೆ ಗುರಿಯಾಗಿ ಬರಲು ಚರಣದುಂಗುಟದಿಂದ ಧರಣೀತಳವನೂರಿ ನರನ ಶಿರವ ಕಾಯ್ದ ನರನಾರಾಯಣ ನಿನ್ನ 4 ಪುಲಿನಾಮದಸುರನು ಛಲದಿ ಮಾಂಡವ್ಯನ ಗಳವಪಿಡಿದು ಬಾಧೆಗೊಳಿಸೆ ವೇಗದಲಿ ಪುಲಿಗೆ ಮೋಕ್ಷವನಿತ್ತು ಪುಲಿಗಿರಿಯಲಿ ಮುನಿ ಕುಲಜ ಮಾಂಡವ್ಯಗೆ ಒಲಿದ ವರದವಿಠಲ ನಾರಾಯಣ5
--------------
ವೆಂಕಟವರದಾರ್ಯರು
ಪ್ರಾಣ ಬಿಟ್ಟು ನಾನಿರಲಾರೆ ಪ ನಿನ್ನ ಪಿಡಿದು ರಘು ರನ್ನದಶಾಸ್ಯ- ನನ್ನೆ ಸವಿದು ದಾನವ ಕುಲಬೇರಾ- ವನ್ನೆ ಕಿತ್ತಿ ಜಾನಕಿಯನೆ ತಂದಾ ನಿನ್ನುಳಿದಿನ್ನುಂಟೆ ಮನ್ನಿಸಿ ಕೇಳ್ವರು ಕುನ್ನಿಯ ಮಾನವರೇನು ಬಲ್ಲರು 1 ವಿಕ್ರಮ ಭೀಮನೆನಿಸಿ ದ್ವಾಪರದಿ ದುರುಳ ಮಲ್ಲರ ಭೂ- ಚಕ್ರಕಪ್ಪಳಿಸಿ ಬಕನನ್ನೇಕ- ಚಕ್ರಾಖ್ಯನಗರದಿ ಹಿಂಡಿ ಬಿಸÀುಟೆ ಕುರು- ಚಕ್ರವರ್ತಿಯ ಕುಲವಳಿದೀ 2 ಶ್ರೀಶಾನುಜ್ಞದಿ ಧರೆಯೋಳವತರಿಸಿ ಈಶಮಧ್ವನೆಂಬಭಿದಾನವ ವಹಿಸಿ ದೋಷೆನಿತಿಲ್ಲದ ಮತವನೆ ಸೃಜಿಸಿ ಈಶ ನಿನ್ನಾಣೆ ಜಗದುದ್ಧಾರ ಮಾಡಿದಿ ದಾಸನಹುದೋ ನೀ ನರಸಿಂಹವಿಠಲನ 3
--------------
ನರಸಿಂಹವಿಠಲರು
ಬಹುತೀರ್ಥ ಸಂಗಮದ ಭಾಗವತಗಂಗೆಯಲಿಬಹುಸ್ನಾನ ದೊರಕಿ ಜೀವನ್ಮುಕ್ತನಾದೆ ಪಶುಭ್ರವರ್ಣದ ಗಂಗೆ ತಾನೆ ನಾರದನಾಗೆಅಭ್ರವರ್ಣದ ಯಮುನೆ ವ್ಯಾಸನಾಗೆಇಬ್ಬರೊಂದಾಗಿ ಪ್ರವ'ಸಿ ಬಂದು ದೋಷಗಳದಬ್ಬುತಿಹ ಪುಣ್ಯ ಪ್ರಯಾಗಿಯಾಗಿರುತಿರುವ 1ಪೂರ್ವಪಶ್ಚಿಮವಾಗಿ ದಕ್ಷಿಣೋತ್ತರವಾಗಿಶರ್ವಾಗ್ನಿ ನೈಋತ್ಯವಾಯು ಮುಖದಿಪರ್ವಕಾಲಗಳೆಂದು ಪ್ರವ'ಸುವ ನದಿಯಲ್ಲಸರ್ವವ್ಯಾಪಕವಾಗಿ ತುಂಬಿ ಸೂಸುತಲಿರುವ 2ನಾರಾಯಣಾದ್ರಿಯಲಿ ಪುಟ್ಟ ಬ್ರಹ್ಮಾಂಡವನುಪೂರೈಸಿ ಪರಮಪಾವನ ಗಂಗೆಯೂಸೇರುವರೆ ತನಗೊಂದು ತೀರ್ಥಬೇಕೆಂದೆನುತಧೀರಶುಕ ಕಾವೇರಿಯಲಿ ಕೂಡಿ ನೆಲಸಿರುವ 3ಕಮಲಸಂಭವನೆಂಬ ಗೋದಾವರಿಯದೆನಿಸಿ'ಮಲಮತಿ ಸೂತ ಶೌನಕ ಸಂಗದಿಭ್ರಮನಿವಾರಣ ತುಂಗಭದ್ರೆಯೆಂದೆನಿಸುವದುರಮೆಯ ರಸನೊಲಿದವರಿಗದು ದೊರಕುತಿಹುದು 4ಈ ನದಿಯ ಕೂಡಿರುವ ತೀರ್ಥಗಳನೆಣಿಸುವರೆನಾನೆಂಬ ಕ' ಯಾರು ಶೇಷ ತೊಡಗಿಸ್ವಾನುಭವ ಸಂಸಿದ್ಧ ನಿಜಭಕ್ತರೆಂದೆನಿಪಜ್ಞಾನಿಗಳ ಮ'ಮೆಗಳ ನದಿಗಳೊಡೆ ಬೆರೆದಿರುವ 5ಶೀತಬಾಧೆಯು ಲೇಶಮಾತ್ರ'ದರೊಳಗಿಲ್ಲವಾತಾದಿ ವ್ಯಾಧಿಗಳ ಕೊಡುವುದಲ್ಲನೂತನದ ಕಾಲದೇಶಗಳ ಬಯಕೆಯದಲ್ಲಆತುಕೊಳದಿದ್ದರೂ ಪಾತಕವ ಪರಿಹರಿಪ 6ಉತ್ತಮ ಪರೀಕ್ಷಿತನೇನು ಮೈತ್ರೇಯ 'ದುರರುಸತ್ಯಸಂಧನು ಕಪಿಲ ದೇವಹೂತಿಮತ್ತೆ ಉತ್ತಾನಪಾದನು ಧ್ರುವನು ಪೃಥು ಚಕ್ರವರ್ತಿಯೆಂಬೀ ತೀರ್ಥವ ತರಿಸಿಕೊಂಡಿರುವ 7ಪುಣ್ಯಾತ್ಮ ಪ್ರಾಚೀನ ಬರ್'ಯಾತ್ಮಜರಾದಸನ್ಮನದ ಮ'ಮರವರೀರೈವರುಇನ್ನಿವಳ ಗರ್ಭದಲಿ ಬಂದ ದಕ್ಷನು ತಾನುಕನ್ನೆಯರನರುವತ್ತ ಪಡೆದ ತೀರ್ಥಗಳಿರುವ 8ಅಪರ ಸೂರ್ಯನ ತೆರದ ಪ್ರಿಯವ್ರತನ ಸಂತತಿಯುತಪದಲನುಪಮ ವೃಷಭದೇವನುದಿಸೀಗುಪಿತ ತೇಜೋಮೂರ್ತಿ ಭರತನವತರಿಸಿರಲುಉಪಮಾನ'ಲ್ಲದೀ ತೀರ್ಥಗಳು ಬೆರೆದಿರುವ 9ದ್ವೀಪವೇಳರ ಸುತ್ತ ವ್ಯಾಪಿಸಿದ ವನಧಿಗಳುದೀಪಿಸುವ ಸೂರ್ಯಾದಿ ಚಕ್ರಗತಿಯೂಈ ಪರಿಯ ತೀರ್ಥಗಳು ಭೂ'ು ಸ್ವರ್ಗಾದಿಗಳವ್ಯಾಪಿಸಿಹ ಮ'ಮ ನದಿಗಳು ಒಂದುಕೂಡಿರುವ 10ನದಿಗಳಿಗೆ ನಿಜರೂಪವಾದ ನಾಮದ ಮ'ಮೆಒದಗಿಯಜ'ುಳನಘವನೊದೆದು ನಿಜದೀಹುದುಗಿಸಿದ ವರ್ಣನೆಯ ತಂಪು ಬಹುರುಚಿಕರವುಸದಮಲಾನಂದ ನಿಧಿಯಾಗಿ ಹುದುಗಿರುತಿರುವ 11ವೃತ್ರ ಚಾರಿತ್ರ ನದಿ ಮತ್ತೀತನಾರೆನಲು ಚಿತ್ರಕೇತುವು ಚಕ್ರವರ್ತಿಯಾಗಿಪುತ್ರ ಸಂತತಿುಂದ ಪ್ರಖ್ಯಾತ 'ಮಗಿರಿಯಪುತ್ರಿಶಾಪವು ಬಂದ ಸಿದ್ಧ ನದಿ ಬೆರೆದಿರುವ 12ನರಹರಿಯ ಚರಣಾರ'ಂದ ಮಕರಂದದಲಿಎರಗಿ ತುಂಬಿಯ ತೆರದಿ ಭಜಿಸುತಿರುವನೆರೆ ಭಕ್ತಪ್ರಹ್ಲಾದ ಗಜರಾಜ ಮನುಚರಿತಪರಮ ಪುಣ್ಯೋದಯದ ನದಿಗಳೊಂದಾಗಿರುವ 13ಕ್ಷೀರಸಾಗರ ಮಥನ ಕೂರ್ಮನಾದನು ಹರಿಯುಶ್ರೀರಮಣಿ ಸುಧೆಯುದಿಸಿದತಿ ಮ'ಮೆಯೂಶ್ರೀರಮಣ ವಟುವಾಗಿ ಬಲಿಯ ಸಲ'ದ ಬಗೆಯುಸಾರತರ ನದಿಗಳಿವು ಸೇರಿಕೊಂಡಿಹವಾಗಿ 14ಉಷ್ಣ 'ಮಕರರಂಶಸಂಭವ ಮಹಾತ್ಮರನುವ್ಣೃ ಸಂತತ್ಯುದ್ಧವಾದಿಗಳನೂ'ಷ್ಣುವಾದರು ಗಣಿಸಲಾರನೀ ತೀರ್ಥಗಳುಕೃಷ್ಣಸಾಗರದಲ್ಲಿ ಸೇರಿ ಪೂರೈಸಿರುವ 15ಯದುಕುಲಾಂಬುಧಿಯಲ್ಲಿ ಮದನಪಿತ ತಾ ಜನಿಸಿಮುದದಿಂದ ಗೋಕುಲದಿ ಬೆಳೆದು ನಲಿದುಚದುರಿಂದ ಗೋವು ಗೋವತ್ಸಪರನೊಡಗೂಡಿಸದದು ದೈತ್ಯರ ನಂದಗಾನಂದ'ತ್ತಾ 16ಬಾಲಕರ ಭೋಜನದ ನೆವದಿ ಬ್ರಹ್ಮನಿಗೊಲಿದುಕಾಳೀಯ ಫಣಗಣಾಗ್ರದಿ ನರ್ತಿಸಿಜ್ವಾಲೆಯನು ನೆರೆನುಂಗಿ ಗೋಕುಲದವರ ಸಲ'ಬಾಲಲೀಲೆಯ ಬಹಳ ಪುಣ್ಯತೀರ್ಥಗಳಿರುವ17ಗೋವಕ್ಕಳೊಡಗೂಡಿ ವನಮಧ್ಯದಲಿ ಚರಿಸಿದೇವತಾ ಯಜ್ಞ ಪತ್ನಿಯರಿಗೊಲಿದೂಗೋವರ್ಧನೋದ್ಧರಣ ಗೋಪಾಂಗನಾ ಜನದಭಾವನೆಯ ಪೂರ್ತಿಗೊಳಿಸಿದ ತೀರ್ಥ'ರುವಾ 18ವರಧನು'ನುದಯ ದರ್ಶನನೆವದಿ ಮಧುರೆಯನುನೆರೆಪೊಕ್ಕು ಕುಬ್ಜೆಗತಿಶಯದ ರೂಪಕರೆದಿತ್ತು ಕುಸುಮವನು ಕೊಟ್ಟವನಿಗೊಲಿದಾಗಪಿರಿದಾಗಿ ಕಂಸನಿಗೆ ತಾನೆ ಮುಕ್ತಿಯ ಕೊಟ್ಟು 19ದ್ವಾರಕಾ ನಿರ್ಮಾಣ ದುರುಳ ಜನಸಂಹರಣನಾರಿಯರ ನೆಂಟನೊಡಗೂಡಿ ಬಳಿಕಾಪಾರಿಜಾತವ ಕಂಡು ಈರೆಂಟು ಸಾಸಿರದನೀರೆಯರ ಸಂಸಾರ ಸಂಪತ್ತಿನತಿಶಯದ20ಮಾಸಿದರುವೆಯ ಭಕ್ತನವಲಕ್ಕಿಯನು ಮೆದ್ದುಲೇಸಾದ ಸಂಪತ್ತನೊಳಗೆ ಕೊಟ್ಟೂ'ುೀಸಲಳಿಯದ ಮ'ಮ ಭಕ್ತಜನಸಂಸಾರಿವಾಸುದೇವನ ಮ'ಮೆ ಜಲನಿಧಿಯ ಕೂಡಿರುವ 21ತತ್ವಸಾರವನು ನವಯೋಗಿಗಳು ನಿ'ುಗೊರೆದುಮತ್ತೆ ನಾರದನು ವಸುದೇವನೆಡೆಗೆಚಿತ್ತಜನ ಜನಕನಭಿಮತದಿಂದವತರಿಸಿಚಿತ್ತವನು ವಸ್ತು'ನೊಳೈಕ್ಯವನು ಮಾಡಿಸಿದ 22ವೇದಾಂತ ನಿಧಿಯಾದ ಉದ್ಧವಗೆ ತತ್ವವನುಮಾಧವನೆ ತಾನೊರೆದು ಧರಣಿಯೊಳಗೆವೇದಾಂತ 'ಸ್ತರಕೆ ನಿಲಿಸಿ ನಿಜಪಾದುಕೆಯವೇದವೇದ್ಯನು ಕೊಟ್ಟು ನಿಜಜನಕೆ ನಿಧಿಯಾದ23ಕಾಲಗತಿಗಳನೊರೆದು ಮತ್ತೆ ಭೂಲೋಕವನುಪಾಲಿಸುವ ದೊರೆಗಳಭಿಮತದ ಗತಿಯೂಮೇಲಾಗಿ ಕಲಿಯುಗದ ಗತಿ'ಸ್ತರವನೆಲ್ಲಲೋಲನೃಪಗೊಲ'ಂದ ಪೇಳ್ದ 'ವರಗಳಿರುವ 24ಪರಮಾತ್ಮನೊಡನಾಡಿ ಪರಮ ಪಾವನರಾಗಿಮೆರೆವ ಗೋಪೀ ರತ್ನ ಮಾಲೆಯೊಡನೆನೆರೆಶಿಖಾಮಣಿಯೆನಿಸಿ ತಿರುಪತಿಯ ವೆಂಕಟನುಧರಣಿಯೊಳು ಸಕಲರನು ನೆರೆ ಸಲಹುತಿಹನೂ25
--------------
ತಿಮ್ಮಪ್ಪದಾಸರು
ಬಿಗಿಯದಿರು ಬಿಗಿಯದಿರು ಎಲೆ ಮಾನವಾಧಿಗಿ ಧಿಗಿ ಧಿಗಿಯೆನುತ ನಿನಗೇಕೆ ಗರ್ವ ಅ ವಿರಕ್ತಿಯಲಿ ಹನುಮನೆ ವಿವೇಕದಲಿ ವಸಿಷ್ಠನೆಶೂರತನದಲಿ ಶಂತನುತನಯನೇನೊಸ್ವರದಲಿ ತುಂಬುರನೆ ಗೀತದಲಿ ನಾರದನೆಪರಾಶರ ಮುನಿಯೆ ವ್ರತತಿ ಪಟ್ಟದಲ್ಲಿ 1 ಚೆಲುವಿನಲಿ ರಾಮನೆ ಸತ್ಯದಿ ಹರಿಶ್ಚÀ್ಚಂದ್ರನೆಛÀಲದಲ್ಲಿ ಋಷಿ ವಿಶ್ವಾಮಿತ್ರನೇನೋಬಲದಲ್ಲಿ ವಾಲಿಯೇ ಹಲಧರನೆ ಹಿರಣ್ಯಕನೆಬಿಲು ವಿದ್ಯದಲಿ ಪರಶುರಾಮನೇ ನೀನು 2 ತ್ಯಾಗದಲಿ ಕರ್ಣನೇ ಭೋಗದಲಿ ಶತಮಖನೆಯೋಗದಲಿ ಶುಕಸನಕ ಜನಕನೇನೋಭಾಗ್ಯದಲಿ ಬಲಿಚಕ್ರವರ್ತಿಯೋ ದಶಶಿರನೊದೀರ್ಘದಲಿ ಮೇರುವೇ ಮಂದರವೆ ನೀನು 3 ಶಕ್ತಿಯಲಿ ಕಾಲನೆ ಭುಕ್ತಿಯಲಗಸ್ತ್ಯನೆಮುಕ್ತಿ ಪಡೆವಲ್ಲಿ ಖಟ್ಟಾಂಗರಾಯನೇನೊ 4 ಶಾಪದಲಿ ಬ್ರಹ್ಮನೆ ತಾಪದಲಿ ಸೂರ್ಯನೆಕೋಪದಲಿ ಮಹೇಶನೇನೋ ನೀನುತಪದಲ್ಲಿ ಹನುಮನೆ ವ್ರತದಿ ರುಕ್ಮಾಂಗದನೆಕೃಪೆಯಲ್ಲಿ ಶ್ರೀ ಕೃಷ್ಣದೇವನೆ ನೀನು 5
--------------
ವ್ಯಾಸರಾಯರು
ರಾಜರಯ್ಯ ನಾವು ನಮ್ಮ ರಾಜೀವಾಕ್ಷನ ಕರುಣವ ಪಡೆದರೆ ಪ ಊಂಛವೃತ್ತಿಯೇ ರಾಜ್ಯಕೋಶ | ನಿಷ್ಟ್ರ- ಪಂಚ ನಡತೆಯೇ ನಮಗೆ ಕಛೇರಿ ಪಂಚೇಂದ್ರಿಯ ಜಯಿಸುವುದು ಮ್ಯಾಜಿಸ್ಟ್ರೇಟ್ ಪಂಚವಿಷಯ ಹಂಚಿಕೆಯೇ ಸಿವಿಲ್‍ಬಾಬು 1 ದೇವಾದಾಯದ ಧನವೇ ರೆವಿನ್ಯೂ ಕಾವನು ಕೊಲ್ವನು ಹರಿಯೆಂಬವುದು ಪಾವನ ಜಡ್ಜ್‍ಮೆಂಟ್ ಕಾಪಿರಿಜಿಸ್ಟರು 2 ದೇವೇಂದ್ರಾದಿಗಳೇ ಕಲೆಕ್ಟರ್ ಸುರರು ತಾಲ್ಲೂಕಾಫೀಸರು ಧರ್ಮನಿಷ್ಠರೆಲ್ಲ ನೌಕರ ಜನಗಳು 3 ದಾನಧರ್ಮವೇ ಡಬ್ಲಿಯು ಎಸ್ಸು ಜ್ಞಾನ ಸಾಧನವೇ ವಸೂಲಿ ಲೆಖ್ಖ ಮಾನವ ವೃತ್ತಿಗಳೆಲ್ಲ ರಿಕಾರ್ಡ್ 4 ಸಪ್ತಾವರ್ಣವೇ ಸಪ್ತಾಂಗದ ಸಭೆ ಸಪ್ತಧರ್ಮವೇ ಕಾರ್ಯಗೌರವವು ಗುರೂಪದೇಶವೇ ಜ್ಞಾನಾರ್ಜನೆಯು 5 ವನಜನಯನ ಗುರುರಾಮವಿಠ್ಠಲನೆ ಸೈನು ಮೊಹರು ಮಹಾ ಚಕ್ರವರ್ತಿಯು 6
--------------
ಗುರುರಾಮವಿಠಲ
ಶ್ರೀ ಧೀರೇಂದ್ರರು ಚಾರು ನಿಮ್ಮಯ ಚರಣತೋರಿಸುದ್ಧರಿಸಬೇಕೊ ಪ. ಆರು ಇವನೆಂದು ನೀವ್ ಗಾರುಮಾಡದಲೆನ್ನ ಸಾನುರಾಗದಿ ಪೊರೆಯಬೇಕೊ ಸ್ವಾಮಿ ಅ.ಪ. ವರದಾ ತೀರದಿ ನಿಂದು ವರ ಕೊಡಿವೀಯೆಂದು ಘನಗರ್ವ ನಿನಗ್ಯಾತಕೊಸುರಪತಿಯ ಬಲದಲ್ಲಿ ಇಹೆನೆಂದು ನೀ ಬಲು ಜರಿದು ನೋಡಲಿ ಬ್ಯಾಡವೊಆರುಗತಿಯಿಲ್ಲವೆಂದೀರ ನಿನ್ನೆಡೆ ಬರಲು ಏರಿ ಕೂಡ್ರುವುದುಚಿತವೇಸಾರಿ ಹೇಳುವೆ ನಿನಗೆ ಚೋರದಾಸನು ನಾನು ಘೋರರೂಪದಿ ಬಂದು ತೋರೋ ಸ್ವಾಮಿ 1 ರಘುಕುಲತಿಲಕನ ಭಕ್ತಿಪಾಶದಿ ಕಟ್ಟಿಚಕ್ರವರ್ತಿಯೆನಿಸಿ ಗೋಕುಲದ ಗೊಲ್ಲನ ಯುಕುತಿಯಲಿ ನೀನೊಲಿಸಿದ್ಯೊಶಕ್ತಿಯಿಂ ಕಲಿಯುಗದಿ ಧೀರೇಂದ್ರ ಪೆಸರಿನಿಂ ದುರಿತಗಳ ಕಳೆಯುವಿಯೊಧಿಃಕರಿಸಿ ವಾದಿಗಳ ದೇಶದೊಳ್ ಚರಿಸಿದ ವಸುಧೀಂದ್ರ ಸಂಜಾತ ಪೊರೆಯೆ ಸ್ವಾಮೀ 2 ಹೆಣ್ಣಿನಾಶೆಗೆ ಬಿದ್ದು ಹೊನ್ನು ಸ್ಥಿರವೆಂದು ನಾ ಮಣ್ಣುಪಾಲಾದೆನೊತನುವು ತನ್ನದು ಎಂಬ ಭಿನ್ನ ಜ್ಞಾನವನೇ ಹೊಡೆದೋಡಿಸೆಮಾನ್ಯವಂತರ ಸಂಗ ಇನ್ನು ಮೇಲಾದರೂ ದಯಪಾಲಿಸೊಘನ್ನ ಮಹಿಮಾ ತಂದೆವರದವಿಠಲನಲ್ಲಿ ಜ್ಞಾನದಿಂ ಭಕ್ತಿ ವ್ಯೆರಾಗ್ಯವನೆ ಈಯೋಸ್ವಾಮಿ 3
--------------
ಸಿರಿಗುರುತಂದೆವರದವಿಠಲರು
ಶ್ರೀನಿವಾಸ ಜಗನ್ನಿವಾಸ ಪ ದೀನ ರಕ್ಷಕ ನಿಖಿಲ ಮಾನವರಮಾನಾಭಿಮಾನ ದೊಡೆಯನು ನೀನೇಯಲ್ಲದಿಲ್ಲಾ ಅ.ಪ. ನಕ್ರಮುಖದಲ್ಲಿ ಸಿಕ್ಕಿ ದುಃಖಿಸುವ ಕರಿರಾಜ ಚಕ್ರವರ್ತಿಯು ಶರಣು ಹೊಕ್ಕೆನನಲು ಚಕ್ರವನು ಪಿಡಿದು ನೀನಕ್ಕರೆಯೊಳೈತಂದು ನಕ್ರವದನವಸೀಳಿ ರಕ್ಷಿಸಿದೆ ಗಜವಾ-ದೇವ 1 ಹಿಂದೆ ನಾನಾನ್ನಗಿರಿಯಿಂದ ಬಹದಾರಿಯೊಳು ಸಂದುಗೆಳೀಚಲು ಭಂಡಿ ಸಂಜೆಯೊಳಗೆ ಮುಂದಾಗ ಜೊತೆಯೊಳಗೆ ಬಂದು ಜನಕೆಲ್ಲಿನೀ ಬಂದು ಬೆಳಕನು ತೋರಿ ಮಂದೆಗೂಡಿದೆ ಕೃಷ್ಣಾ 2 ಇಂದು ನಿಜ ಸತಿಯುನೊಂದಳುಬ್ಬಸರೋಗದಿಂದ ಗಾಳಿಯದೀಪದಂದಮಾಗಿ/ ನಂದಿಪೋಗದ ಮುನ್ನ ಬಂದು ನೀಮರೆಯಾಗು ಎಂದು ಮೊರೆಯಿಡಲೀಗ ಬಂದು ಸಲಹಿದೆ ತಂದೆ 3 ತುರುಗಾಯ್ವರಸುಗಳನು ಮರಳಿಪಡೆದೆ ನರಪೌತ್ರನನು ಬಾಣದುರಿಯಿಂದ ರಕ್ಷಿಸಿದೆ ಸರಿಯಾರು ನಿನಗೆ ಸುರನರಭುಜಂಗರಲ್ಲಿ4 ತರಳಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಕುರು ವರವಿಭೀಷಣ ತಾಪಸರನುಪೊರೆದೆ ಶರಣರನು ಪಾಲಿಸುವ ಬಿರುದು ಧರಿಸಿಹ ವ್ಯಾಘ್ರಗಿರಿಯೊಳಗೆ ನೆಲಸಿರುವ ವರದ ವಿಠಲ ರಾಯ 5
--------------
ಸರಗೂರು ವೆಂಕಟವರದಾರ್ಯರು
(ಕೇಶವಾಯ ನಮಃ ದಿಂದ ಆರಂಭವಾಗುವ ಆಚಮನ ಸ್ತುತಿ)ಶ್ರೀನಿವಾಸಾಯ ನಮೋ ಪ.ಶ್ರೀನಿವಾಸಾಯ ಶತಭಾನುಪ್ರಕಾಶಾಯಶ್ರೀನಿವಾಸಾಯ ನಿಜ ಭಕ್ತಜನಪೋಷಾಯಶ್ರೀನಿವಾಸಾಯ ಪರಮಾನಂದಘೋಷಾಯ ಅ.ಪ.ದೋಷಗಂಧವಿದೂರ ಕೇಶಿಮುಖದಾನವ ವಿ-ನಾಶವಿಧಿಭವಸುಖನಿವಾಸ ವಾಸುಕಿಶಯನವಾಸವಾದ್ಯಮರಗಣಪೋಷ ಪಾವನವೇಷ ಶ್ರೀಶ ನಿರ್ಗತವಿಶೇಷದಾಸಜನಹೃದಯಾಬ್ಧಿಭೇಶ ಕೌಸ್ತುಭಮಣಿವಿ-ಭೂಷ ಭೂತಾತ್ಮ ಭವಪಾಶಹರ ಪರತರ ದ-ಯಾ ಸಮುದ್ರ ವಿನಿದ್ರ ಭೂಶಯನ ಭೂರಿಪ್ರದಕೇಶವಾಯ ನಮೋನಮಃ 1ಕ್ಷೀರಸಾಗರವಾಸ ಶ್ರೀರಮಾಪ್ರಾಣೇಶಸಾರಭೋಕ್ತøಸ್ವತಂತ್ರ ಚಾರುಷಡ್ಗುಣಭರಿತನಾರದಾದಿಮುನೀಂದ್ರವಾರಸನ್ನುತಪಾದನೀರರುಹದ್ವಂದ್ವನೆವಾರಿಜಾಸನಮುಖ್ಯಸುರರುತಿಳಿಯರು ನಿನ್ನಭೂರಿಮಹಿಮೆಗಳ ಸಾಕಾರವನು ಬಣ್ಣಿಸುವಧೀರನಾವನು ಮಹಾ ವೀರ ವಿಶ್ವಾಧಾರನಾರಾಯಣಾಯ ನಮೋ 2ವೇದವೇದ್ಯನೆ ದುರಿತಶೋಧನೆ ದೈತ್ಯಗಣ-ಛೇದಕನೆ ಸುರಸುಪ್ರಸಾದಕನೆ ಭಕ್ತಜನ-ಮೋದದಾಯಕ ಸ್ವಗತ ಭೇದವರ್ಜಿತಸಮಾನಾಧಿಕ್ಯರಹಿತ ಸತತಆದಿತ್ಯ ಶತಕೋಟಿತೇಜೋವಿರಾಜ ಮಹ-ದಾದಿಕಾರಣ ಮಧುವಿರೋಧಿ ಮಂಗಲಸುಖಾಂ-ಬೋಧಿ ಪದ್ಮಾಲಯವಿನೋದಿ ರಾಧಾರಮಣಮಾಧವಾಯ ನಮೋನಮಃ 3ಇಂದಿರಾಹೃದಯಾಬ್ಧಿ ಚಂದ್ರ ಚಾರ್ವಂಗ ಮುಚು-ಕುಂದಾಪ್ತ ಸರ್ವಶ್ರುತಿವೃಂದಪ್ರತಿಪಾದ್ಯ ಸಾ-ನಂದ ಭರಿತ ಕಾಳಿಂದೀರಮಣ ರಾಮಚಂದ್ರಸನ್ನುತಮಹೇಂದ್ರವಂದಾರುಜನತ್ರಿದಶಮಂದಾರ ಕೋಮಲಿತವೃಂದಾವನವಿಹಾರ ಕಂದರ್ಪಜನಕ ಬಾ-ಳೇಂದುಶೇಖರಸಖ ಸನಂದನಾರ್ಚಿತ ಶ್ರೀಗೋವಿಂದಾಯತುಭ್ಯಂ ನಮಃ 4ಜಿಷ್ಣುರಥಸಾರಥಿ ತ್ರಿವಿಷ್ಟಪಸಭಾಧ್ಯಕ್ಷಮುಷ್ಟಿಕಾಸುರವೈರಿ ಮುನಿಜನಮನೋಹಾರಿಮುಟ್ಟಿ ಭಜಿಪರ ಮನೋಭೀಷ್ಟವ ಸಲ್ಲಿಸುವ ಶ್ರೇಷ್ಠ ಪೂರ್ಣಬ್ರಹ್ಮನೇಭ್ರಷ್ಟಸಂಸಾರದೊಳು ನಷ್ಟ ಬುದ್ಧಿಗಳಿಂಗೆತುಷ್ಟಿಯನು ನೀನಿತ್ತು ಸಲಹೊ ಸಾಮಜವರದಬೆಟ್ಟದೊಡೆಯನೆ ಕೃಪಾದೃಷ್ಟಿಯಿಂದಲಿನೋಡುವಿಷ್ಣವೇತುಭ್ಯಂ ನಮೋ 5ವಿಧಿಭವಾದಿ ಸಮಸ್ತ ತ್ರಿದಶಜನಸುಖದಾತಬುಧಜನಪ್ರಿಯ ಭೂತಭಾವನ ಜಗನ್ನಾಥಪದುಮಾಕ್ಷ ಪಾಂಡವಪ್ರತಿಷ್ಠಾಪನಾಚಾರ್ಯಮದನಕೋಟಿಸ್ವರೂಪವಿದುರನಾಲಯದಲ್ಲಿ ಪಾಲುಂಡ ಬ್ರಹ್ಮಾಂಡ-ಕಧಿಪತಿ ಕಲಿಮಲನಾಶ ಕವಿಜನಮನೋಲ್ಲಾಸವಿಧುಮಂಡಲಸ್ಥ ಸದ್‍ಹೃದಯಪಂಕಜವಾಸಮಧುಸೂದನಾಯ ನಮೋ 6ಅಕ್ರೂರವರದ ಸದತಿಕ್ರಮರ ಗೆಲಿದ ಹಯ-ವಕ್ತ್ರವೈಕುಂಠಾಖ್ಯ ಪುರವಾಸ ಜಗದೀಶಶುಕ್ರ ಶಿಷ್ಯರನೆಲ್ಲ ಪರಿಹರಿಸಿ ಪಾಲಿಸಿದೆ ಶಕ್ರಾದಿಸುರಗಣವನುಚಕ್ರ ಶಂಖ ಗದಾಬ್ಜಧರ ಚತುರ್ಭುಜ ದೇವ-ಚಕ್ರವರ್ತಿಯನಂತಕೀರ್ತಿ ಪಾವನಮೂರ್ತಿನಕ್ರಮದಹರನಾದ ಬ್ರಹ್ಮ ಗಂಗಾಪಿತತ್ರಿವಿಕ್ರಮಾಯ ನಮೋನಮಃ 7ರಾಮಣೀಯಕ ವಪು ನಿರಾಮಯ ನಿರಾಶ್ರಯ ಸು-ದಾಮಸಖ ಪರಿಪೂರ್ಣಕಾಮ ಕೈರವದಳ-ಶ್ಯಾಮ ಕಲ್ಯಾಣ ನಿಸ್ಸೀಮ ಮಹಿಮನೆಸುಜನಸ್ತೋಮಸುರಕಾಮಧೇನುಗೋಮಿನೀಪತಿ ಗೋಗಣಾನ್ವಿತನೆ ಗೋಪೀಲ-ಲಾಮ ಗೋವರ್ಧನೋದ್ಧಾರ ಗೋವಿದಾಂಪತಿ ವಿ-ರಾಮ ವಿಷ್ವಕ್ಸೇನ ವಿಶ್ವತೈಜಸಪ್ರಾಜÕವಾಮನಾಯ ನಮೋನಮಃ8ಆದಿಮಧ್ಯಾಂತವಿರಹಿತ ನಿಖಿಲಸಾರ್ಚಿತ ವಿ-ರಾಧಭಂಜನ ಭವಾಂಬೋಧಿಕುಂಭಜ ಭಜಕ-ರಾದವರನುದ್ಧರಿಪ ಬೋಧರೂಪನೆಚತುಷ್ಟಾದ ಪಾವನಚರಿತನೆಗಾಧಿಜಾಧ್ವರಪಾಲ ಗರುಡಧ್ವಜ ದಯಾಳುನಾದಬಿಂದು ಕಲಾತೀತ ರುಕ್ಮಿಣಿನಾಥಬಾದರಾಯಣನೆ ನಿರುಪಾಧಿ ಮಾಯಾತೀತಶ್ರೀಧರಾಯ ನಮೋನಮಃ 9ಪಾಶಧರನುತ ವೆಂಕಟೇಶ ಸರ್ವೇಂದ್ರಿಯಪ್ರ-ಕಾಶ ಪಾಲಿತನಿಖಿಳಭೂಸುರವ್ರಜ ಮಂದ-ಹಾಸಮುಖ ನವಕುಂದಭಾಸರದನವಿರಾಜದೂಷಣಾದ್ಯ ಸುರಹರನೆಈಶಪತಿಸೇವ್ಯಾಂಬರೀಶನೃಪವರದ ಪರ-ಮೇಶ ಕೋವಳಪೀತವಾಸ ಕರ್ದಮಶುಕಪ-ರಾಶರಾದ್ಯಮಿತಯೋಗೀಶರಕ್ಷಕಹೃಷೀಕೇಶಾಯ ತುಭ್ಯಂ ನಮೋ 10ಶುದ್ಧ ತ್ರಿಗುಣಾತೀತ ತ್ರಿವ್ರತ ತ್ರಿಜಗತ್ಪಾಲಪ್ರದ್ಯುಮ್ನ ಪ್ರಥಮಾಂಗದೊಡೆಯ ಪರಮಾತ್ಮ ಸುರ-ಸಿದ್ಧ ಪೂಜ್ಯ ಪುಂಡರೀಕದಳಾಕ್ಷಬುದ್ಧಬುಧಜನಸುಲಭಮಧ್ವವಲ್ಲಭ ಮಂತ್ರಮೂರ್ತಿ ಕ್ಷೀರಾಬ್ಧಿ ಶ್ವೇತದ್ವೀಪವೈಕುಂಠಮಂದಿರತ್ರಯ ಸಾಧು-ಹೃದ್ಯ ಭಕ್ತದ್ವೇಷಭಿದ್ಯ ನಿತ್ಯಾತ್ಮ ಶ್ರೀಪದ್ಮನಾಭಾಯ ನಮಃ11ಸಾಮಗಾನವಿನೋದ ಸಾಧುಜನಸುಖಬೋಧಕಾಮಿತಾರ್ಥಪ್ರದಾತ ಕಪಿಲಋಷಿ ಪ್ರಖ್ಯಾತವ್ಯೋಮಯಾನವರೂಥ ಓಂಕಾರಭರಿತ ರಘುರಾಮಸಮರಂಗ ಭೀಮನಾಮಧಾರಕರ ಪರಿಣಾಮರೂಪಕ ಸುಜನ-ಕ್ಷೇಮಪ್ರಾಪಕ ನೀಲಜೀಮೂತನಿಭವರ್ಣಭೌಮಪುರುಷೋತ್ತಮ ನಿಯಾಮಕನೆ ರಕ್ಷಿಸೈದಾಮೋದರಾಯ ನಮೋ 12ಶಂಕರಾಂತರ್ಯಾಮಿ ಶಾಙ್ರ್ಗಪಾಣಿ ಶರಣ್ಯವೆಂಕಟಾಚಲಸದಾಲಂಕಾರ ಶೇಷಪರಿ-ಯಂಕ ಪ್ರವಿತತನಿಷ್ಕಳಂಕಚಾರಿತ್ರ ಸುಸಂಕುಲಾರ್ಚಿತ ಪದಯುಗಲಂಕಾಧಿಪತ್ಯವ ವಿಭೀಷಣನಿಗೊಲಿದಿತ್ತಓಂಕಾರನಿಧನ ಸಾಮಕಭಕ್ತರಾನೇಕಸಂಕಟವ ಪರಿಹರಿಪ ಸತ್ಯ ಸಂಕಲ್ಪ ಶ್ರೀಸಂಕರ್ಷಣಾಯ ನಮೋ13ಈ ಸಮಸ್ತ ಜಗತ್ತು ನಿನ್ನುದರದೊಳಗಿಹುದುಈ ಸಕಲಜೀವರೊಳಗಿಹ ನಿತ್ಯನಿರ್ಮುಖ್ಯಸೂಸಿಬಹ ಸಂಸಾರಸಾಗರದಿ ಮುಳುಗಿದೆನುನೀ ಸಲಹೊ ದೇವದೇವಭೂಸಲಿಲಪಾವಕಾಕಾಶಾದಿ ಭೂತಾಧಿ-ವಾಸ ರಾಕ್ಷಸವನಹುತಾಶ ನಾನಾ ರೂಪ-ವೇಷಧಾರಕ ನರಾವೇಶ ಪಾಲಿಸು ಎನ್ನವಾಸುದೇವಾಯ ನಮೋ 14ಅದ್ವಿತೀಯನೆಯಮಿತವಿಕ್ರಮನೆ ಗುಣಕಾಲವಿದ್ಯಾಪ್ರವರ್ತಕನೆ ವಿಶ್ವಾದಿ ಸಾಹಸ್ರಸಿದ್ಧನಾಮ ನರನಾರಾಯಣಪರಾಯಣನೆ ಬುದ್ಧಿಪ್ರೇರಕಪ್ರೇರ್ಯನರುದ್ರರೂಪಪ್ರತಾಪ ಋಗ್ಯಜುಸ್ಸಾಮಶ್ರುತಿ-ವೇದ್ಯ ಬ್ರಹ್ಮಾಂಡಕೋಟಿಗಳ ಸಲೆ-ಬದ್ಧಕಮನೀಯರೂಪಸುತಪದುರಾಪಪ್ರದ್ಯುಮ್ನಾಯ ತುಭ್ಯಂ ನಮಃ 15ಉದ್ಧವಾದಿ ಸಮಸ್ತ ಭಾಗವತಜನಕಮಲ-ಮಧ್ಯಚರರಾಜಹಂಸಾಯ ಮಾನಸದಶ್ರದ್ಧೆಯಂ ಕೊಟ್ಟು ರಕ್ಷಿಸು ಧೊರೆಯೆಶ್ರೀಹರಿಯೆ ವೈದ್ಯನಾಥವಿಧಾತನೆಬದ್ಧನಾದೆನು ಕರ್ಮಪಾಶದಿಂದ ದೊರೆ ಸಿಕ್ಕಿ-ಬಿದ್ದೆ ಕೈಪಿಡಿದೆಬ್ಬಿಸೆನ್ನನೆಲೆದೇವ ಮರೆಹೊದ್ದಿದೆನು ಮೈದೋರು ಚಿನುಮಯಾತ್ಮಕನೆಅನಿರುದ್ಧಾಯ ತುಭ್ಯಂ ನಮಃ 16ಕ್ಷರ ಪುರುಷರೆಲ್ಲ ಬ್ರಹ್ಮಾದಿ ಜೀವರು ರಮಾಕ್ಷರಪುರುಷಳೆನಿಸುವಳು ನೀನೆ ಉತ್ತಮ ಪರುಷಪರತರಾವ್ಯಯಲೋಕಭರಿತಮಂಗಲರಿತ ಗುರುತಮ ಗುಣಧ್ಯಕ್ಷನೆಶರಧಿಸೇತುನಿಬದ್ಧ ಶಬರಿ ಹಣ್ಣನು ಮೆದ್ದಶರಭಂಗಮುನಿಪಾಲ ಶಮಿತದಾನವಜಾಲಧುರವಿಜಯ ವಿಜಯಮೈದುನ ಕೃಷ್ಣ ರಕ್ಷಿಸೈಪುರುಷೋತ್ತಮಾಯನ್ನಮೋ 17ಅಕ್ಷಯಾತ್ಮನೆ ವಿಶ್ವರಕ್ಷಕನೆ ವಿಶ್ವಭುಗ್-ವಿಶ್ವತೋಮುಖ ವಿಶ್ವತೋಬಾಹು ಕರುಣಾಕ-ಟಾಕ್ಷದಿಂ ನೋಡೆನ್ನಮ್ಯಾಲೆದಯಮಾಡು ಶ್ರೀವಕ್ಷಸ್ಥಲನಿವಾಸನೆಲಕ್ಷ್ಮಣಾಗ್ರಜನೆ ಸುವಿಲಕ್ಷಣನೆ ಸುಜ್ಞಾನ-ಮೋಕ್ಷದಾಯಕ ಯಜÕಮೂರ್ತಿ ರೂಪತ್ರಯ ಮ-ಹೋಕ್ಷಧ್ವಜನಂ ಮೋಹಿಸಿದ ಮೋಹಕಲ್ಪಅಧೋಕ್ಷಜಾಯ ನಮೋನಮಃ 18ಕ್ರೂರಕರ್ಮಿ ಹಿರಣ್ಯಕಶಿಪುವಂ ಕೊಂದ ದು-ರ್ವಾರದುರಿತಾಬ್ಧಿಬಾಡಬ ಭಕ್ತವತ್ಸಲ ಮ-ಹಾರವಕುಲಿಶ ಶತಕೋಟಿಸದೃಶನಶಿರಪ್ರಕರಧೀರ ಪ್ರಹ್ಲಾದಾಭಿವರದಭೂರೀಕರರೂಪ ಭೂಮಕೀರ್ತಿಕಲಾಪಸಾರವಜ್ರಸ್ತಂಭದಿಂ ಬಂದ ನಂದ ಸುಕು-ಮಾರಮಾರ್ಕಾಂಡೇಯವರದ ಲೋಕಶರಣ್ಯನಾರಸಿಂಹಾಯ ನಮೋ 19ನಿಶ್ಚಲಾತ್ಮ ನಿರೀಹ ನಿರ್ವಿಕಾರಾನಂತಪ್ರೋಚ್ಛ ಸರ್ವಗ ಸದಾನಂದ ಪರಿಪೂರ್ಣ ತ-ನ್ನಿಚ್ಛೆಯಿಂದಲಿ ಜಗವ ಪಾಲಿಸುವನಿರ್ಮಿಸುವ ಆಶ್ಚರ್ಯಕೃತಸಲೀಲಮುಚ್ಚುಮರೆ ಯಾಕಿನ್ನು ಮುಗಿದು ಬೇಡುವೆ ಕೈಯಸ್ವಚ್ಛತರ ಭಕ್ತಿಭಾಗ್ಯವನಿತ್ತು ಸಲಹೊ ಮಹ-ಕಚ್ಛಪನೆ ಕಾಳೀಯಮರ್ದನಮಹಿತಶ್ರೀಮದಚ್ಯುತಾಯ ನಮೋನಮಃ 20ಚೈದ್ಯಮಥನ ಮನೋಜÕಶುದ್ಧಾತ್ಮ ಸರ್ವಜÕಯುದ್ಧದಲಿ ಸೈಂಧವನ ಶಿರವ ಕೆಡಹಿಸಿ ಜಯವಹೊದ್ದಿಸಿದ ಪಾರ್ಥನಿಂಗೆಇದ್ದು ನೀ ಹೃದಯದೊಳು ತಿದ್ದೆನ್ನ ಮತಿಯ ಸ್ಮರ-ವಿದ್ದ ಮಾನಸವ ಪಾದದ್ವಯದೊಳಿರಿಸೈ ದ-ಯಾದ್ರ್ರಚಿತ್ತ ಸ್ವಭಕ್ತಸಂಸಾರಿ ಕಾಯೆಜನಾರ್ದನಾಯ ನಮೋನಮಃ 21ಮಂದಾಕಿನಿಯ ಪಡೆದ ಮಾತೆಯ ಶಿರವ ಕಡಿದನಂದಗೋಪನ ಕಂದನೆನಿಸಿ ಬಾಲಕತನದಚಂದಮಂ ತೋರಿಸಿದ ಕುಬುಜೆಗಂಧಕೆ ಒಲಿದಸುಂದರೀರಮಣ ಜಯತುತಂದೆತಾಯಿಯು ಸರ್ವ ಜೀವರ್ಗೆ ನೀನೆ ನಿಜ-ವೆಂದು ತಿಳಿಯದೆ ಮಾಯೆಯಿಂದ ಮಮಕರಿಸಿ ಪರ-ನಿಂದಾದಿ ದೋಷಗಳ ಮಾಡಿ ಬಳಲುತ್ತಿಹರ್ಉಪೇಂದ್ರಾಯ ತುಭ್ಯಂ ನಮಃ 22ಸ್ಥಿರಚರಾತ್ಮಕ ಧೇನುಚರ ದೇವಕೀಜಠರ-ಶರಧಿಗುರುರಾಜ ಭಾಸ್ಕರಮಂಡಲಾಂತಸ್ಥಪರಮತೇಜೋಮಯ ಪುರಾಣಪುರುಷೇಶ್ವರನೆದುರಿತದೂರ ಗಭೀರನೆನಿರತಿಶಯನಿಜನಿರ್ವಿಕಲ್ಪ ಕಲ್ಪಾಂತಸಾ-ಗರದಿ ವಟಪತ್ರಪುಟಶಯನ ಪುಣ್ಯಶ್ರವಣಪುರುಷನಾಮಕ ಪುಷ್ಕರಾಕ್ಷ ಶ್ರೀಕರನೆ ಜಯಹರಯೇ ನಮೋನಮಸ್ತೇ 23ವೃಷ್ಟಿಕುಲತಿಲಕ ಸರ್ವೇಷ್ಟದಾಯಕ ನಿಮಿತ-ಶಿಷ್ಟಜನಪರಿಪಾಲ ಶಿವಗೌರೀ ಗಣಪಗುಹ-ಸೃಷ್ಟಿಶಕ್ತಿಯನೀವ ಗೋವರ್ಧನಾಚಲವ ಬೆಟ್ಟಿನಿಂದೆತ್ತಿದ ಮಹಾದುಷ್ಟ ನರಕಾದಿದಾನವರ ಮರ್ದಿಸಿದ ಜಗ-ಜಟ್ಟಿ ಜನಿಮೃತಿಭಯವಿದೂರ ವಿಷಮಯಸರ್ಪ-ಶ್ರೇಷ್ಠನಂ ಘಾತಿಸಿದ ರಾಮಾನುಜನೆಹರೇ ಕೃಷ್ಣಾಯ ತುಭ್ಯಂ ನಮಃ 24ಅಕ್ಷೀಣ ಬಲಶಾಲಿಯಾಂಜನೇಯನಿಗಿತ್ತೆಅಕ್ಷಯದ ಬ್ರಹ್ಮಪದವಿಯ ಲೋಕದೊಳಗ್ಯಾವ-ದಕ್ಷಮರ್ದನ ನಿನಗೆ ಸರ್ವತಂತ್ರಸ್ವತಂತ್ರ ಪಕ್ಷೀಂದ್ರಭುಜವಿರಾಜಸಾಕ್ಷಿಚೈತನ್ಯರೂಪನೆ ಕಮಲನಾಭನೆ ಮು-ಮುಕ್ಷುಜನಧ್ಯಾನಗಮ್ಯನೆ ಗದಾಧರ ದನುಜ-ಶಿಕ್ಷಕ ಪರೀಕ್ಷಕನೆ ಪವನವಾಹನಲಕ್ಷ್ಮೀನಾರಾಯಣಾಯ ನಮೋ25
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ