ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತತ್ವಚಿಂತನೆ ಅರಿಯಲಳವೇ ಜ್ಞಾನಿಯ ಹೊರಗಿನ ಬಡರೂಪದಿ ಪ ಧರೆಯು ಉದರದಿ ನೆಲಸಿಹ ಪರಿಪರಿ ವಿಧ ಸಿರಿಯನು ಅರಿವುದು ಬಲುಸುಲಭವೆ ಅ.ಪ ಹುಚ್ಚರಂದಿ ಕಾಂಬೋರು ಜನ ಮೆಚ್ಚಿಗೆಯನು ಬಯಸರು ಅಚ್ಚರಿಯಲಿ ನಡೆವರು ಎಚ್ಚರಿಕೆಯ ಪೊಂದದಂತೆ 1 ಒಡವೆ ವಸನಗಳೆಲ್ಲವ ಸಡಗರವನು ಅರಿಯರು ಕಡು ಬಡತನ ಕ್ಲೇಶಕೆ ನಡುಗಲರಿಯರು ಸುಲಭದಿ 2 ಮೇದಿನಿಯಲಿ ದಿನಗಳ ಮೋದದಿಂದಲಿ ಕಳೆವರು ಮಾಧವನಲಿ ಭಕುತರು ಬೂದಿ ಮುಚ್ಚಿದ ಕೆಂಡದಂತೆ 3 ಮರುಳು ಮೋಸವನರಿಯರು ಸರಳಮನದಲಿ ಇರುವರು ಕೆರಳಿದ ಸುಮದಂದದಿ ತಿರುಳುಗಳನು ಸುಲಭದಿ 4 ಭಕ್ತ ಪ್ರಸನ್ನನೊಳು ಆಸಕ್ತ ಸನ್ಮನ ಯುಕ್ತರು ಯುಕ್ತಿ ಚತುರತೆಯರಿಯರು ಹುತ್ತದೊಳಿಹ ಸರ್ಪದಂತೆ 5
--------------
ವಿದ್ಯಾಪ್ರಸನ್ನತೀರ್ಥರು