ಒಟ್ಟು 11 ಕಡೆಗಳಲ್ಲಿ , 5 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮಿನಿಯರು ನೆರದೊಂದಾಗಿಪ್ರೇಮದಿ ಧವಳಾರವ ಪಾಡಲುಶ್ರೀ ಮಹಾಲಕ್ಷ್ಮಿ ಜಯವೆಂದುಜಯವೆಂದುಶ್ರೀಕೃಷ್ಣರಾಯಗೆಹೇಮದಾರತಿಯ ಬೆಳಗಿರೆ 1 ಸಿಂಧುರಗಮನೆಯರತಿ ಹರುಷದಲಿಚಂದದಿ ನಲಿದಾಡುತ ಪಾಡುತಇಂದಿರಾರಮಣ ಜಯವೆಂದುಜಯವೆಂದುಶ್ರೀ ಮಹಾಲಕ್ಷ್ಮಿಗೆಕುಂದಣದಾರತಿಯ ಬೆಳಗಿರೆ 2 ಕರದ ಕಂಕಣ ಝಣಝಣರೆನಲುಗುರುತು ಚವಲುಗಾಡಲು ಮುತ್ತಿನಕೊರಳಹಾರಗಳು ಹೊಳೆಯಲುಹೊಳೆಯಲುಶ್ರೀಕೃಷ್ಣರಾಯಗೆಕುರುಜಿನಾರತಿಯ ಬೆಳಗಿರಿ3 ಹಾರಪದಕ ಕಂಕಣದವರು ವೈ-ಯ್ಯಾರದ ಹೊಸ ಹರೆಯದಂಗನೆಯರುರಾರಾಜಿಪ ಚಂದ್ರಮುಖಿಯರುಮುಖಿಯರುಶ್ರೀ ಮಹಾಲಕ್ಷ್ಮಿಗೆಕುರುಜಿನಾರತಿಯ ಬೆಳಗಿರೆ 4 ಕಸ್ತೂರಿ ತಿಲಕದ ಸೊಬಗಿಯರು ಸು-ವೃತ್ತಸ್ತನತಟದ ಜವ್ವನೆಯರುಆರ್ತಿಯಿಂ ಪಾಡಿ ಪೊಗಳುತಪೊಗಳುತಶ್ರೀ ಕೃಷ್ಣರಾಯಗೆಮುತ್ತಿನಾರತಿಯ ಬೆಳಗಿರೆ5 ಬೆರಳುಂಗುರ ಥಳ ಥಳಥಳಿಸಿಸಿರಿಮೊಗದೊಳು ಕಿರಿಬೆಮರೊಗೆಯಲುಹರುಷದಿ ಪಾಡಿ ಪೊಗಳುತಪೊಗಳುತಲಿಶ್ರೀ ಮಹಾಲಕ್ಷ್ಮಿಗೇಸರಸಿಜದಾರರತಿಯ ಬೆಳಗಿರೆ 6 ಕನ್ನಡಿಗದಪಿನ ಚದುರೆಯರು ಚೊಕ್ಕಚಿನ್ನದ ಸರಪಣಿಯಿಟ್ಟಂಗನೆಯರುಚೆನ್ನಾಗಿ ಪಾಡಿ ಪೊಗಳುತಪೊಗಳುತಕೆಳದಿಯ ಶ್ರೀ ಕೃಷ್ಣಗೆರನ್ನದಾರತಿಯ ಬೆಳಗಿರೆ 7
--------------
ಕೆಳದಿ ವೆಂಕಣ್ಣ ಕವಿ
ಕೋಲೆಂದು ಪಾಡಿರೆ ಕೋಮಲೆಯರೆಲ್ಲ ಅಮ್ಮಯ್ಯಬಾಲೆಯರು ಅರಿಷಿಣ ಕುಂಕುಮ ಹಚ್ಚಿಹೊಯಿದಾರಮ್ಮಯ್ಯ ಕೋಲ ಹೊಯಿದಾರಮ್ಮಯ್ಯ ಪ. ಹಿಂಡು ನಾರಿಯರೆಲ್ಲ ಕೂಡಿ ದುಂಡು ಗಟ್ಟುತ ಕೊಂಡಾಡಿ ಕೃಷ್ಣನ ಕೋ¯ ಹೊಯಿದಾರಮ್ಮಯ್ಯ 1 ಹಸ್ತ ಕಡಗ ಹರಡಿ ದೋರೆ ಹವಳ ಕಂಕಣಹಸ್ತಿಗಮನೆಯರು ಎತ್ತಿ ಕೋಲ ಹೊಯಿದಾರಮ್ಮಯ್ಯ 2 ವಾಲೆ ಮೂಗುತಿ ಮುದ್ದು ಸುರಿಯುತ್ತಜತ್ತಾಗಿ ಜಾಣೆಯರು ಕೋಲ ಹೊಯಿದಾರಮ್ಮಯ್ಯ 3 ನಳಿನ ಮುಖಿಯರಿಟ್ಟ ಕೋಲ ಹೊಯಿದಾರಮ್ಮಯ್ಯ 4 ಮಲ್ಲಿಗೆ ಸಂಪಿಗೆ ಮುಡಿದ ನಲ್ಲೆಯರೆಲ್ಲರುನಮ್ಮ ಫುಲ್ಲನಾಭನ ಪಾಡಿ ಕೋಲ ಹೊಯಿದಾರಮ್ಮಯ್ಯ5 ಚವರಿ ರಾಗಟೆ ಚಲ್ವಗೊಂಡ್ಯ ಛಂದಾಗಿ ಒಪ್ಪುತಚದುರೆಯರು ಛಂದಾಗಿ ಕೋಲ ಹೊಯಿದಾರಮ್ಮಯ್ಯ 6 ಭಾರ ಧರಿಸುತ ರಘುವೀರನ ಕೊಂಡಾಡಿ ಕೋಲ ಹೊಯಿದಾರಮ್ಮಯ್ಯ 7 ನಡುವಿಗೆ ಒಡ್ಯಾಣವಿಟ್ಟು ನಾರಿಯರೆಲ್ಲರು ತಮ್ಮ ಬಡನಡಬಳುಕುತ ಕೋಲ ಹೊಯಿದಾರಮ್ಮಯ್ಯ8 ಉಟ್ಟ ಪೀತಾಂಬರ ಕಾಲಿಗಿಟ್ಟ ಗೆಜ್ಜೆಯುನಮ್ಮ ಧಿಟ್ಟರಮಿಅರಸನೆಂದು ಕೋಲ ಹೊಯಿದಾರಮ್ಮಯ್ಯ9
--------------
ಗಲಗಲಿಅವ್ವನವರು
ಬಂದರೆ ಭಾಗ್ಯ ಲಕ್ಷ್ಮಿಯರುಮುಯ್ಯವ ಛಂದಾಗಿ ಗೆಲಿಸೆಂದುವಂದಿಸಿ ಹರಿಗೆ ಪ. ಇಂದು ಮುಖಿಯರೆಲ್ಲ ಛಂದಾದ ವಸ್ತಗಳಿಟ್ಟುಚಂದ್ರಗಾವಿಯನುಟ್ಟು ಚಂದ್ರನಂತೆ ಒಪ್ಪುತ 1 ನೀಲ ಮಾಣಿಕದ್ವಸ್ತ್ರಮೇಲುದು ಧರಿಸುತ ನೀಲಾದಿಗಳೆಲ್ಲ 2 ವಸ್ತ ಮುತ್ತಿನ ಇಟ್ಟು ಕಸ್ತೂರಿ ಬೊಟ್ಟಿಟ್ಟುಮಸ್ತಕದಲಿ ಮಾಣಿಕ್ಕಿಟ್ಟು ಭದ್ರಾದಿಗಳು 3 ಹಸ್ತಾಭರಣ ಸಮಸ್ತ ವಸ್ತಗಳಿಟ್ಟುಸ್ವಸ್ತ ಚಿತ್ತದಿಂದ ಮಿತ್ರ ವೃಂದಾರಕಾದಿಗಳು 4 ಕಾಲಿಂದ್ಯಾದಿಗಳೆಲ್ಲ ಬಹಳೆ ವಸ್ತಗಳಿಟ್ಟುವೈಯಾರಿಯರು ಒಲಿಯುತ ವ್ಯಾಲಾಶಯನನ ಬಳಿಗೆ5 ಲಕ್ಷಣಾದಿಗಳೆಲ್ಲ ಲಕ್ಷ ವಸ್ತಗಳಿಟ್ಟುಲಕ್ಷ್ಮಿರಮಣನೆ ಪಂಥ ವೀಕ್ಷಿಸಿಗೆಲಿಸೆಂದು 6 ಜಾಂಬವಂತ್ಯಾದಿಗಳು ತುಂಬಿದೊಸ್ತಗಳಿಟ್ಟುಸಂಭ್ರಮ ಸೂಸುತ ಅಂಬುಜಾಕ್ಷನ ಬಳಿಗೆ7 ಹದಿನಾರು ಸಾವಿರ ಚದುರೆಯರು ವಸ್ತಗಳಿಟ್ಟುಮದನ ಜನಕನ ಮುಯ್ಯ ಮುದದಿಂದ ಗೆಲಿಸೆಂದು8 ವೀರ ರಾಮೇಶ ನಾರಿಯರ ಸೋಲಿಸೋ ಭಾರನಿನ್ನದೆಂದು ನೂರು ಮಂದಿನುಡಿದಾರು 9
--------------
ಗಲಗಲಿಅವ್ವನವರು
ಭಾಳೆ ಗಾಬರಿಗೊಂಡಳು ಇಂದಿರಾದೇವಿಭಾಳೆ ಗಾಬರಿಗೊಂಡಳು ವ್ಯಾಲಾಶಯನನು ಇವಳ ಪೇಳಿದಂತಿರಲುಏನು ಬಾಳು ಯಾತಕೆ ಎಂದಳು ಪ. ಸಂಡಿಗೆ ಹಪ್ಪಳ ಮಂಡಗಿ ಗುಳ್ಳೋರಿಗೆ ದಿಂಡು ಸೂರಣವು ಮೊದಲಾಗಿದಿಂಡು ಸೂರಣವು ಮೊದಲಾಗಿ ಬಡಿಸೋರುದುಂಡು ಮುತ್ತುಗಳು ಉದುರುತ1 ಅಪಾರ ಮಹಿಮಗೆ ರೂಪಸುಂದರಿಯರು ಸೂಪ ಪರಮಾನ್ನ ಮೊದಲಾಗಿಸೂಪÀ ಪರಮಾನ್ನ ಮೊದಲಾಗಿ ಬಡಿಸುವವರಭಾಪುರಿ ಮುತ್ತು ಉದುರುತ 2 ಘೃತ ಘೃತ ಮೊದಲಾಗಿ ಬಡಿಸುವವರತೋರ ಮುತ್ತುಗಳು ಉದುರುತ 3 ನಗಧರನ ಪುರದೊಳಗೆ ಹಗಲು ರಾತ್ರಿಯು ಬಂದೆಝಗ ಝಗಿಸುವ ಮಣಿಯು ಖಚಿತದಝಗ ಝಗಿಸುವ ಮಣಿಯು ಖಚಿತವಾದುದರಿಂದಹಗಲು ರಾತ್ರಿಗಳು ತಿಳಿಯವು4 ಮಂದ ಗಮನೆಯರೆಲ್ಲ ಮಿಂದು ಮಡಿಯುಟ್ಟು ಇಂದಿರಾಪತಿಯ ಸರಿಯಾಗಿಇಂದಿರಾಪತಿಯ ಸರಿಯಾಗಿ ಊಟಕ್ಕೆ ಬಂದುಕುಳಿತವರು ಕಡೆಯಿಲ್ಲ5 ಪುಂಡರಿಕಾಕ್ಷÀನು ಉಂಡು ಕೈತೊಳೆದನು ದುಂಡುಮಲ್ಲಿಗೆಯ ಸೆಳಿಮಂಚದುಂಡು ಮಲ್ಲಿಗೆಯ ಸೆಳಿ ಮಂಚವನೇರಿದ ಪಾಡವಪ್ರಿಯ ಹರುಷದಿ 6 ಹದಿನಾರುಸಾವಿರ ಚದುರೆಯರು ಒಂದಾಗಿಚಲುವ ರಾಮೇಶನ ಉಪಚಾರಚಲುವ ರಾಮೇಶನ ಉಪಚಾರ ಮಾಡುವ ಸುದತೆಯರ ಸುಖಕೆ ಎಣೆಗಾಣೆ7
--------------
ಗಲಗಲಿಅವ್ವನವರು
ಮಂದರ ಧರನೆಂಬೊ ಕೋಲಸುಂದರಾಂಗನೆಂಬೊ ಯಾದವೇಂದ್ರಚಂದ್ರನೆಂಬೊ ಕೋಲ ಪಿಡಿದು ನಿಂತಾರು ಪ. ಹದಿನಾರು ಸಾವಿರ ಮಂದಿಮುದದಿಂದ ಹೆಜ್ಜೆಯನಿಕ್ಕುತ ಚದುರೆಯರು ಕೋಲಾಟಕ್ಕಾಗಿಒದಗಿ ನಿಂತಾರು1 ನೂರು ಮಂದಿ ನಾರಿಯರೆಲ್ಲಹಾರಭಾರ ಅಲಿಯುತಲೆಮುರಾರಿಯ ಮುಂದೆಲ್ಲಸಾಲು ಸಾಲಿಲೆನಿಂತರು 2 ನೀಲ ವರ್ಣನ ಮಡದಿಯರೆಲ್ಲಮೇಲಾದ ಕೋಲಾಟಕ್ಕಾಗಿಬಾಲೆಯರು ಬಂದೆಲ್ಲಸಾಲಾಗಿ ನಿಂತರು3 ಚಕ್ರಧರನ ಮಡದಿಯರೆಲ್ಲಚಕ್ಕನೆ ಕೋಲಾಟಕ್ಕಾಗಿನಕ್ಕು ಮುಗುಳನಗೆಯಸಖ್ಯದಲೆ ನಿಂತರು 4 ಪ್ರೇಮದಿಂದ ನಾರಿಯರೆಲ್ಲಭಾವೆ ರುಕ್ಮಿಣಿಗೆ ಎರಗಿಶ್ರೀಮಂತ ಧೀಮಂತ ನಮ್ಮಸ್ವಾಮಿ ಗೆಲಿಸೆಂದು 5 ಅಂಗನೆಯರು ರಾಮೇಶನ ಮಂಗಳ ಮಹಿಮೆಯಬೆಳದಿಂಗಳ ತುಂಬಿದರುಮೋಹನಾಂಗ ಚಂದ್ರಗೆ 6
--------------
ಗಲಗಲಿಅವ್ವನವರು
ಶ್ರೀದೇವಿಯಂ ಭಕ್ತರೊಡನೆ ಶುಭಕಾಯವೊಲಿದು ಆಡಿದನುಯ್ಯಾಲ ಪ ನೀಲಿಮಾಣಿಕದ ಮಂಟಪವ ಕಟ್ಟಿ ಮುತ್ತಿನ ಸರಪಣಿಗಳನೆ ಬಿಗಿಸಿ ಮೇಲುಕಟ್ಟುಗಳ ಹಾಸಿ ಮಲ್ಲಿಗೆಮಾಲೆಗಳ ಶೃಂಗರಿಸಿ 1 ಪಟಹ ನಿಸ್ಸಾಳ ಭೇರಿ ಕೊಳಲು ತಮಟವಾದ್ಯ ಮೊಳಗುತಿರಲು ಕುಟಿಲಕುಂತಲೆಯರೊಡನೆ ಆದಿಪತಿ ವಿಠಲನಾಡಿದ 2 ಚಂದ್ರಮನ ಪೋಲ್ವ ಮುಖದಿ ಫಣಿಯೊಳು ಶೌನಕಾದಿಗಳು ಸೇರಿ [ಅಂದದಿ] ಸ್ತುತಿಸೆ ಕ್ಷೀರಾಬ್ಧಿಶಯನನಾಡಿದ3 ಭೇರಿ ಶಂಖಗಳ ದ್ವನಿಯ ದುಂದುಭಿಯ ಭೋರಿಡುವ ಜಯರವಗಳ ನಾರಿಯರು ಶೋಭನಗಳ ಪಾಡುತ್ತಿರೆ ಧೀರನಾಡಿದ 4 ವೇದಚೋರನ ತರಿದು ಆದಿಮೂರುತಿ ವರದನ ವಿ- ನೋದದಿ ತೂಗಿದರು ರವಿಸೌಂದರಿಯನಾಡಿದ 5 ನೀಲವೇಣಿಯರು ಪಾಡುತ ತೂಗಿದರು ಗೋಪಾಲನಾಡಿದ 6 ಪರಶುಧರನೆನಿಸಿ ಹರನ ಶ್ರೀರಾಮಚಂದ್ರ ಕರುಣಾ ವಾರಿಧಿ ಕೃಷ್ಣನ ತೂಗಿದರು ವರಸತಿಯರು 7 ಚೋಜಿಗದಮತ್ಪುರದಸತಿಯರನುವೋಜಿಗಲಿಸಿದಭೌದ್ಧನಾ ತೇಜಿವಾಹನಕಲ್ಕ್ಯನಾ ತೂಗಿದರು ರಾಜೀವನೇತ್ರೆಯರು ಪಾಡುತ 8 ಚಿತ್ತಜೌಘ ಮನಮನದ ಚದುರೆಯರು ಮುತ್ತು ಸರಗಳನೆ ಧರಿಸಿ ದತ್ಯಂತ ಮೋಹದಿಂದ ತೂಗಿದರು ಹಸ್ತಿನೀಕಾಮಿನಿಯರು9 ಮತ್ತೆಸಾರಂಗವೆನಲುನಡೆಯುತಲಿವಿಸ್ತರಿಸಿಕುಚಯುಗಳದಿ ಕಸ್ತೂರಿಯ ಗಂಧವೆಸೆಯೆ ತೂಗಿದರು ಚಿತ್ತಿನೀಜಾತದವರು 10 ಕುಂಕುಮಾಂಕಿತ ಚದುರೆಯರಲಂಕರಿಸಿ ಭೂಷಣಗಳ ಶಂಕರನಸಖನ ಪಾಡಿ ತೂಗಿದರು ಶಂಖಿನೀಕಾಮಿನಿಯರು 11 ಕದಪುಗಳ ಕಾಂತಿಹೊಳೆಯೆ ಮೊಗಸಿರಿಯಪದುಮವನು ಪೋಲ್ವಂದ ಯದುವೀರನನು ಪಾಡುತತೂಗಿದರು ಕುಮುದಿನೀಕಾಮಿನಿಯರು 12 ಅಂಗನಮಣಿ ಪಾರ್ವತಿ ಸರಸ್ವತಿಯರು ರಂಗುಮಾಣಿಕರತ್ನದ ಮಂಗಳಾರತಿಯನೆತ್ತಿ ತೂಗಿದರು ಗಂಗೆಯನು ಪಡೆದಯ್ಯನ 13 ಚಿಂತಿತಾರ್ಥವ ಸಲಿಸುವ ಮುದ್ದುವೆಂಕಟೇಶನು ತಾನೆನಿಸುವ ಪಿತ ದೇವಪುರದ ಶ್ರೀಲಕ್ಷ್ಮೀಕಾಂತನಾಡಿದನುಯ್ಯಾಲಾ 14
--------------
ಕವಿ ಲಕ್ಷ್ಮೀಶ
ಉಪ್ಪವಡಿಸಯ್ಯ ಹರಿಯೇಏಳೈ ಹೃಷಿಕೇಶ ಏಳುರವಿ-ಶಶಿನಯನಪ.ಏಳು ಪಶುಗಳ ಕಾಯ್ದು ಪಾಲಿಸಿದೆ ಗೋಕುಲವಏಳು ಸುರವಂದಿತನೆ ಏಳು ಭೂಸತಿರಮಣಉಪ್ಪವಡಿಸಯ್ಯ ಹರಿಯೇ ಅಪಪಚ್ಚೆ ಮುಡಿವಾಳಗಳು ಅಚ್ಚ ಸೇವಂತಿಗೆಯುಬಿಚ್ಚು ಮಲ್ಲಿಗೆ ಜಾಜಿ ಸಂಪಿಗೆಯುಪುನ್ನಾಗಅಚ್ಚರಿಯ ಬಕುಲ ಕೆಂಜಾಜಿ ಕೇತಕಿಕುಸುಮಗುಚ್ಛಗಳಅಚ್ಚ ಜಾಣೆಯರು ಶ್ರೀಗಂಧ ಕಸ್ತೂರಿ ಪುನುಗುಬಿಚ್ಚು ಬಿಳಿಯೆಲೆಯಡಿಕೆ ಪಿಡಿದು ನಿಂತಿಹರಯ್ಯಮುಚ್ಚುತಿವೆ ತಾರೆಗಳು ಹೆಚ್ಚುತಿವೆ ರವಿಕಿರಣ ಅಚ್ಯುತನೆಉಪ್ಪವಡಿಸೊ 1ಚೆನ್ನೆಯರು ಚದುರೆಯರು ಸುಗುಣಸಂಪನ್ನೆಯರುಪನ್ನೀರು ತುಂಬಿರ್ದ ಪೊನ್ನ ತಂಬಿಗೆಗಳನುರನ್ನಗನ್ನಡಿಯನ್ನು ಪಿಡಿದು ನಿಂತಿರುವರೈ ಪನ್ನಂಗಶಯನ ಏಳೈ ||ಮನ್ನಣೆಯ ನಾರದರು ಮೊದಲಾದ ಮುನಿನಿಕರನಿನ್ನ ಮಹಿಮೆಗಳನ್ನು ಪಾಡಿ ನಲಿಯುವರಯ್ಯಇನ್ನು ಏಳೇಳು ಉದಯದ ಸಮಯ ಸಿರಿಯರಸಚೆನ್ನಿಗನೆ ಉಪ್ಪವಡಿಸೊ 2ದೇವದುಂದುಭಿ ಮೊಳಗೆ ದೇವಕನ್ನೆಯರೆಲ್ಲದೇವಾಂಗ ವಸ್ತ್ರವನು ಪಿಡಿದು ನಿಂತಿಹರಯ್ಯದೇವ ದೇವೇಶ ನಿಮ್ಮೋಲಗದ ಸಂಭ್ರಮಕೆ ದೇವತೆಗಳೆಲ್ಲ ಕರೆದು ||ದೇವ ಪ್ರಹ್ಲಾದಬಲಿ ಮುಖ್ಯರನು ಕಾಯ್ದವನೆದೇವ ಬ್ರಹ್ಮನ ಪಡೆದ ದೇವಗಂಗೆಯ ಪಿತನೆದೇವ ದೇವೋತ್ತಮನೆ ದೇವಾಧಿದೇವ ಪುರಂದರವಿಠಲಉಪ್ಪವಡಿಸೊ 3
--------------
ಪುರಂದರದಾಸರು
ಏಳಿ ಮೊಸರ ಕಡೆಯಿರೇಳಿ-ಗೋ-|ಪಾಲ ಚೂಡಾಮಣಿ ಏಳದ ಮುನ್ನ ಪಇಂದುಮುಖಿಯರೆದ್ದು ಮುಖವನೆ ತೊಳೆದು ಶ್ರೀ-|ಗಂಧ-ಕಸ್ತೂರಿ-ಕುಂಕುಮಗಳಿಟ್ಟು ||ಚಂದ್ರಗಾವಿಯ ಸೀರೆಯ ನೀರಿವಿಟ್ಟು ಮು-|ಕುಂದನ ಪಾಡುತ ಚದುರೆಯರೆಲ್ಲ 1ಹೊಂಗೊಡ ಬೆಳಗಿಟ್ಟು ಪೊಸಮೊಸರನೆತುಂಬಿ|ರಂಗನೀಲದ ಕಡೆಗೋಲನಿಟ್ಟು ||ಶೃಂಗಾರವಾದ ರೇಶಿಮೆಯ ನೇಣನೆ ಹಿಡಿದು |ರಂಗನ ಪಾಡುತ ಚದುರೆಯರೆಲ್ಲ 2ಬಡನಡು ಬಳುಕುತ ಕುಚಗಳಲ್ಲಾಡುತ |ಕಡಗ-ಕಂಕಣ ಝಣಝಣರೆನ್ನುತ ||ಮುಡಿದ ಮಲ್ಲಿಗೆ ಹೂವು ಎಡಬಲಕುದುರೆ ಪಾ-|ಲ್ಗಡಲೊಡೆಯನ ಪಾಡುತ ಚದುರೆಯರು 3ಹುಸಿನಿದ್ದೆಯಲಿ ಶ್ರೀಕೃಷ್ಣನು ಮಲಗಿರೆ |ಹಸಿದು ಆಕಳಿಸಿ ಬಾಯಾರುತಲಿ ||ಮುಸುಕಿನೊಳಿದ್ದು ಬೆಣ್ಣೆಯ ಬೇಡುತಲಿರೆ |ಶಶಿವದನನಿಗೆ ಬೆಣ್ಣೆಯ ನೀಡಲೋಸುಗ 4ಏಣಾಂಕಮುಖಿಯರು ಹೊಸ ಬೆಣ್ಣೆಯನು ತೆಗೆದು |ಪ್ರಾಣಪದಕ ಕೃಷ್ಣನಿಗೆ ಕೊಡಲು ||ಚಾಣೂರ ಮಲ್ಲನ ಗೆಲಿದು ಬಾರೆನುತಲಿ ||ಜಾಣ ಪುರಂದರವಿಠಲನಪ್ಪಲುಗೋಪಿ5ದೃಷ್ಟಿಯು ತಾಗೀತೆಂದಿಟ್ಟು ಅಂಗಾರವ |ತಟ್ಟೆಯೊಳಾರತಿಗಳ ಬೆಳಗಿ ||ಥಟ್ಟನೆ ಉಪ್ಪು-ಬೇವುಗಳನಿವಾಳಿಸಿ|ತೊಟ್ಟಿಲೊಳಿಟ್ಟು ಮುದ್ದಾಡುವಳೊ 6ನಮ್ಮಪ್ಪ ರಂಗಯ್ಯ ಅಳಬೇಡವೊ ದೊಡ್ಡ |ಗುಮ್ಮ ಬಂದಿದೆ ಸುಮ್ಮನಿರು ಎನುತ ||ಅಮ್ಮಿಯನೀಯುತ ಅಮರರನಾಳ್ದನ |ರಮ್ಮಿಸಿ ರಮ್ಮಿಸಿ ಮುದ್ದಾಡುವಳೊ 7ಏಸೊ ಬೊಮ್ಮಾಂಡವ ರೋಮದೊಳಿರಿಸಿದ |ವಾಸುದೇವನನೆತ್ತಿ ಕೊಂಬುವಳೊ ||ನಾಶರಹಿತನಾಯುಷ್ಯ ಹೆಚ್ಚಲೆಂದು |ರಾಶಿದೈವಕೆ ತಾ ಬೇಡಿಕೊಂಬುವಳೊ 8ಮಾಧವಬಾ ಮದುಸೂದನ ಬಾ ಬ್ರ-|ಹ್ಮಾದಿವಂದಿತಹರಿಬಾ ಯೆನುತ ||ಆದಿ ಮೂರುತಿ ಶ್ರೀ ಪುರಂದರವಿಠಲನ |ಆದರದಲಿ ಮುದ್ದಾಡುವಳೊ 9
--------------
ಪುರಂದರದಾಸರು
ಕೊಟ್ಟುರಾಯ ಸಂತುಷ್ಟನಾದಕೃಷ್ಣನರಸಿಯರಿಗೆ ಶ್ರೇಷ್ಠದ ಉಚಿತವ ಪ.ನೀಲಮಾಣಿಕದೊಸ್ತ ಸಾಲದೆ ಹಿಡಿದೇಜಿಮೇಲು ಜರತಾರಿಪಟ್ಟಾವಳಿಮೇಲು ಜರತಾರಿಪಟ್ಟಾವಳಿಉಚಿತವನೀಲಾದೇವಿಗೆ ದೊರೆ ಕೊಟ್ಟ 1ಸಾರಾವಳಿಯ ಸೀರೆ ಥೋರ ಮುತ್ತಿನ ವಸ್ತಹಾರಭಾರಗಳು ಹಿಡಿದೇಜಿ ಮೊದಲಾಗಿಹಾರಭಾರಗಳು ಹಿಡಿದೇಜಿ ಚಾಮರವನಾರಿ ಭದ್ರಾಗೆ ದೊರೆಕೊಟ್ಟ 2ಮುತ್ತಿನ ಝಲ್ಲೆ ವಸ್ತ ಮತ್ತೆ ಕುದುರೆಯ ಸಾಲುಛsÀತ್ರಚಾಮರ ದಿವ್ಯಪಟ್ಟಾವಳಿಛsÀತ್ರಚಾಮರ ಉಚಿತವಮಿತ್ರವಿಂದಾಗೆ ದೊರೆ ಕೊಟ್ಟ 3ಬರಿಯ ಮಾಣಿಕದೊಸ್ತ ಜರದಪಟ್ಟಾವಳಿಸೀರೆತುರುಗ ತಂಬಟಿಯು ಮೊದಲಾಗಿತುರಗತಂಬಟಿಯು ಮೊದಲಾಗಿಹೆಗ್ಗಾಳೆಹರದಿಕಾಲಿಂದಿಗೆ ದೊರೆಕೊಟ್ಟ4ಲಕ್ಷ ಮಾಣಿಕದೊಸ್ತ ಪಕ್ಷಿಯಂತೆಹಾರುವಕುದುರೆಲಕ್ಷ ಸೂರ್ಯರ ಬೆಳಕಿಲೆಲಕ್ಷ ಸೂರ್ಯರ ಬೆಳಗುವ ಉಚಿತವಲಕ್ಷಣದೇವಿಗೆ ದೊರೆಕೊಟ್ಟ 5ಪಚ್ಚ ರತ್ನದವಸ್ತ ಅಚ್ಚ ಜರತಾರಿ ಸೀರೆಹೆಚ್ಚಿನ ಧನ ಕುದುರೆ ರಥಗಳುಹೆಚ್ಚಿನ ಧನ ಕುದುರೆ ರಥ ಜಾಂಬವಂತಿಅಚ್ಯುತನ ಮಡದಿಗೆ ದೊರೆಕೊಟ್ಟ 6ಹದಿನಾರು ಸಾವಿರ ಚದುರೆಯರುಅದ್ಭತ ವಸ್ತ ರಥಗಳುಅದ್ಭುತ ವಸ್ತ ರಥಗಳು ರಾಮೇಶನಸುದತೆಯರಿಗೆ ದೊರೆ ಕೊಟ್ಟ 7
--------------
ಗಲಗಲಿಅವ್ವನವರು
ದೊರೆಗಳಿಗೆ ಯದುಪತಿ ಗರವು ಹಮ್ಮನೆ ಬಿಟ್ಟುಬರಬೇಕು ಎಂದು ಹಸೆಮೇಲೆಹಸೆಮೇಲೆ ಹರುಷದಲೆಮುದದಿ ಪಾಂಡವರು ಬರಬೇಕು ಪ.ನೂರು ಸೂರ್ಯನ ಬೆಳಕಿನಥೋರ ಮುತ್ತಿನ ಹಸೆಗೆವೀರಪಾಂಡವರು ಬರಬೇಕುಬರಬೇಕು ಎನುತಲೆನಾರಿ ರುಕ್ಮಿಣಿಯು ಕರೆದಳು 1ಮತ್ತೆ ಸೂರ್ಯನ ಬೆಳಕಿಲಿವಿಸ್ತರಿಸಿದಹಸೆಮ್ಯಾಲೆಚಿತ್ತೈಸಬೇಕು ಐವರುಚಿತ್ತೈಸಬೇಕು ಐವರು ಎನುತಲಿಸತ್ಯಭಾಮೆಯು ಕರೆದಳು 2ಥೋರ ಮುತ್ತಿನ ಹಸೆಗೆಚಾರುರತ್ನವ ರಚಿಸಿವೀರ ಪಾಂಡವರÀ ಕರೆದರುವೀರ ಪಾಂಡವರÀ ಕರೆದರುಆರು ನಾರಿಯರು ಹರುಷದಿ 3ಹದಿನಾರು ಸಾವಿರ ಚದುರೆಯರುಹರುಷದಿ ಅದ್ಬುತವಾಗಿಬೆಳಗೋಹಸೆ ಮೇಲೆಅದ್ಬುತ ಬೆಳಗೊ ಹಸೆಮೇಲೆಮುದದಿ ಪಾಂಡವರ ಕರೆದರು 4ವೀರ ರಾಮೇಶನ ತಂಗಿಯರುಪೋರಬುದ್ಧಿಯಬಿಟ್ಟುನಾರಿಯರು ಬನ್ನಿರಿಹಸೆಮ್ಯಾಲೆಹಸೆಮ್ಯಾಲೆ ಹರುಷದಿನೂರು ನಾರಿಯರು ಕರೆದರು 5
--------------
ಗಲಗಲಿಅವ್ವನವರು
ನಾಳೆ ಬರುವೆನೆಂದು ಹೇಳಿ ಮಧುರೆಗೆ ಪೋದ ಬ-ಹಳದಿನವಾಯಿತಲ್ಲೊ ಉದ್ಧವ ಪ.ಕೇಳಿದ್ಯಾ ನೀಬಾಹವೇಳೆಯಲಿ ಕೃಷ್ಣನಆಲೋಚನೆಯೊಳಿದ್ದೆವೊ ಅ.ಪ.ಪಳ್ಳಿವಾಸಿಗಳು ನಾವು ಪರಿಪರಿ ಅಲಂಕರಿಸಿ ಒಲಿಸಿಕೊಂಬುದನರಿಯೆವೊಗೊಲ್ಲ ಸತಿಯರು ಸದಾ ಗೋರಕ್ಷಕರು ಮೈಯ ಹೊಲೆತೊಳೆಯಲರಿಯೆವೊಬಲ್ಲಿದನ ಸಹವಾಸ ಮಾಡ್ಯವನ ಮಹಿಮೆಯನೆಲ್ಲ ತಿಳುಹಿಸಿಕೊಂಡೆವೊಚಲ್ಲೆಗಂಗಳ ಚಪಲೆಯರು ಮಧುರೆ ನಾರಿಯರ ಒಲಪಿಗೆ ನಾವೆದುರೇನೊ ? 1ಚೊಕ್ಕನಾದನಿತ್ಯತೃಪ್ತನಿಗೆ ಬೆಣ್ಣೆ ಕಳವಿಕ್ಕಿದೆವಲ್ಲವೊಸಿಕ್ಕಿಸಿಕೊಂಡು ರಾಸಕ್ರೀಡೆಯೊಳವಗೆ ಸೊಕ್ಕಿನುಕ್ತಿಯ ನುಡಿದೆವೊಕಕ್ಕುಲಾತಿಲಿ ಕಾಮಾಸಕ್ತರಿಗಿವ ನಮಗೆ ದಕ್ಕಿದನು ಎಂತಿದ್ದೆವೊವಕ್ರಗತಿಯಾಗಿ ಅಕ್ರೂರ ಬಂದ್ಯೆಮ್ಮ ಚಕ್ರಧರನಗಲಿಸಿದನೊ 2ಧೀರಸ್ವರಮಣದೋಷದೂರನ್ನ ಅಲ್ಪ ಬಹುಜಾರನೆಂದರಿತೆವಲ್ಲೊಆರಾರ ಮನಕಿನ್ನು ತೋರದವನ ನಮ್ಮ ಓರಗೆಯವನೆಂದರಿದೆವೊಮುರಾರಿಅಜಪರಿವಾರದೊಡೆಯನ ನಾವು ಪೋರನೆಂದಾಡಿಸಿದೆವೊನಾರಿಯರು ನಾವಲ್ಪ ದಾರಿದ್ರ್ಯ ದಷ್ಟರಿಗೆ ಶ್ರೀರಮಣನೆಂತೊದಗುವನೊ 3ನಿಧಿಯ ಬದಿಲಿದ್ದರು ವಿಧಿಸುವುದನರಿಯದೆ ಮದಡೆಯರಾದೆವೊಮದನನಾಟಕೆ ಮನವಿಕ್ಕಿ ಅವನಿಂದೊಂದು ತತ್ವ ತಿಳಿಯಲಿಲ್ಲೊಚದುರೆಯರು ನಮ್ಮ ಬಿಟ್ಟು ಕದಲನಿವನೆಂತೆಂಬ ಮದದಿ ಮೋಸಹೋದೆವೊಮಧುರೆಯಿಂದೆಮ್ಮ ತಮ್ಮ ಹೃದಯದೊಳಿಪ್ಪನೆಂದುಚದುರ ಪೇಳಿಹನಂತೆಲೊ 4ಮತಿ ತಪ್ಪಿದೆವೊ ನಾವು ಸತಿಯರೆಲ್ಲೊಂದಾಗಿ ರಥವ ನಿಲಿಸದೆ ಹೋದೆವೊಹಿತರಾರು ನಮಗೆಸಾರಥಿನಿನ್ನ ಸಹಾಯ ದೊರೆತರೆತನವ ಮಾಳ್ಪೆವೊಪಥವ ತೋರಿಸೊ ನಮಗೆ ಮುಂದೆಮ್ಮ ಚೆಲ್ವ ಶ್ರೀಪತಿಯು ಬಂದೊದಗುವಂತೆಗತಿಯಾರೊ ಅವನ್ಹೊರತು ಗೋಪಾಲವಿಠಲ ಅಚ್ಯುತನ ಮಹಿಮೆ ಕಾಣೆವೊ 5
--------------
ಗೋಪಾಲದಾಸರು