ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ಮಾನಸಾನಂದಿಸೋ ಶತ ಭಾನುತೇಜನೇ ಪ ಹನ ಚಿತ್ರಭಾನು ದನುಜಾರಿ ಹರಿ ಅ.ಪ ಮಾಡುವೆನಯ್ಯ ಇಂದುವದನಾ ಶ್ರೀ ಪುಲಿಗಿರಿ ಮಂದಿರ ಮಂದರಧರ 1 ದುಷ್ಟಮನುಜರ ಕೂಡಿ ಭ್ರಷ್ಟನಾದೆನು ಇಷ್ಟಫಲ ದಾಯಕ ತ್ರಿವಿಷ್ಟಪಾಧಿಪಾನುಭವ್ಯ ಅಷ್ಟಸಿದ್ಧಿಪ್ರದ ನಿನ್ನ ಗಟ್ಟಿಯಾಗಿ ನಂಬಿದೆನು 2 ಉರಿಹಸ್ತ ಬೇಡಲು ಲೋಕಮೋಹಿನಿಯ ರೂಪು ಸ್ವೀಕರಿಸಿ ಶಿವನಕಾಯ್ದೆ 3 ಕೀರ್ತಿ ನೋಡಿಸೋ ನಿನ್ನಯಮೂರ್ತಿ ಬೇಡಿಸದಿರು ನಿನ್ನ ನಾಡಿನೊಳಗಾಡಿಸೋ ಮುರಾರಿಹರಿ4 ಶುಭ ವೇಷವಿಪುಲ ದುರಿತಗಣ ಶೋಷಣ ಶ್ರೀವರದವಿಠಲ 5
--------------
ಸರಗೂರು ವೆಂಕಟವರದಾರ್ಯರು
ಬಾಗಿ ಭಜಿಸಿರೋ | ಭಾಗಣ್ಣ ದಾಸರನಾ | ನಮಿಪರ ಬೀಷ್ಟದನಾ ಪ ಭೋಗಿ ಭೂಷಣ ಸುತನಾ | ಮನ್ಮಥ ಸದೃಶನನಾ ಅ.ಪ. ಮುರಹರ ನಾಮಕನರಸಿಯುದರದಲ್ಲಿ | ಜನುಮತಾಳಿ ಅಲ್ಲೀಸುರಪುರ ವೈದಲು ತನ್ನ ಪಿತನು ಮುಂದೇ | ಸಂಕಾರ ಪುರಸೇರ್ದೇ | ವರಚಿಂತಲ ವೇಲಿಲಿ ಧ್ಯಾನಕಾಗಿ ನಿಂದು | ಗಾಯಿತ್ರಿ ಜಪಿಸು ತಂದು ವರಮಾರುತಿ ಗುಡಿಯೊಳು ನೆಲಿಸುತ್ತಾ | ವರಪಡೆದೆಯೊ ಜಪಿಸುತ್ತಾ 1 ತ್ರಿಲಿಂಗಪುರಕೇ ಕವಿಯೈತರಲೂ | ಪಂಡಿತರನು ಗೆಲಲೂಬಲುಚಿಂತಿಸಿ ಜನಸಭೆಯ ಸೇರಿ ಆಗ | ತೀರ್ಮಾನಿಸಿ ವೇಗ |ಕಳುಹಿದರವನ ಭಾಗಣ್ಣನ ಬಳಿಗಾಗೀ | ಬಲವನು ತೋರೆನಲಾಗೀ ನಿಲಲಾರದೆ ತೆರಳಿದ ಭೀತಿಯಲೀ | ವರಕವಿ ಮೆರೆದನು ಕೀರ್ತಿಯಲೀ2 ಪರಿ ನಿತ್ಯ ಶ್ರೀ ವೆಂಕಟಕೃಷ್ಣನ ಪಾಡುತ್ತಾ | ನರ್ತನ ಗೈಯ್ಯುತ್ತಾ ಸುತ್ತಿ ಬರುವ ಜನರ ದೃಷ್ಠಾರ್ಥಾ | ಪೇಳುತ ಗಳಿಸಿದೆ ಅರ್ಥಾ 3 ತಿಮ್ಮಣ್ಣ ದಾಸಾರ್ಯರ ಬಳಿಯಲೀ | ಆದವಾನಿಯಲ್ಲೀನೆಮ್ಮದಿಲಿದ್ದಲ್ಲಿಂದಲಿ ತೆರಳಿ | ಕಾಶೀಶನ ಬಳೀಕ್ರಮ್ಮಿಸಿ ದಿನ ಗುರು ಸೇವೆಯಲ್ಲಿ ಬಹಳಾ | ಮೆಚ್ಚಿಸಿ ಗುರುಗಳ | ಹಮ್ಮಿನ ವಿಜಯರಿಂದುಪದೇಶಾ | ಗೋಪಾಲ ವಿಠ್ಠಲದಾಸ 4 ವೆಂಕಟರಾಮಗೆ ರಾತ್ರಿಕಾಲದಲ್ಲೀ | ಆಘ್ರ್ಯವ ಕೊಡುವಲ್ಲೀ ಪಂಕಜಮಿತ್ರನ ತೋರುತಲವರೀಗೆ | ಸಂಶಯ ಕಳೆದವಗೆ | ವೆಂಕಟೇಶನೊಳ್ ಭಕುತಿ ಪುಟ್ಟುವಂತೆ | ಸೇವೆ ವಿಧಿಸಿ ಅಂತೇ ಪಂಕಜನಾಭನ ಕೀರ್ತನಾದಿಗಳನೂ | ಮಾಡಿ ಕಳೆದ ದಿನಗಳನೂ 5 ವೆಂಕಟೇಶನ ಪರೋಕ್ಷಿ ದಾಸರೆಂದು | ಪೇಳೆ ಜನರು ಅಂದು ವೆಂಕಟ ನರಸಿಂಹಾಚಾರ್ಯಾ | ದಾಸರೊಳು ಮಾತ್ಸರ್ಯಾ | ಶಂಕೆಪಟ್ಟು ಭಜನೆಯೊಳಿರುವಂದೂ | ಮುಂದಿನ ಪೀಠದಲೊಂದೂ ಲಂಕೆಯ ಪುರವನು ದಹಿಸಿದನಾ | ಕಂಡರು ಕೋಡಗನಾ 6 ವಾಸುದೇವ ವಿಠಲನ್ನಾ | ಕಾಣುತಲಿ ಮುನ್ನಾ ಅಂಕಿತ ನಾಮದಿ ಪದಪದ್ಯಾ | ರಚಿಸಿ ಮೆರೆದ ನಿರವದ್ಯಾ7 ರೋಗದಿ ಶ್ರೀನಿವಾಸಾಚಾರ್ಯಾ | ಬರಲಾಗ ದಾಸಾರ್ಯ ಜಾಗ ಗುಡಿಯಲಿ ಶುದ್ಧಿ ಮಾಡುತಿರಲು | ಕೇಳಿ ಗೃಹಕೆ ಹೋಗಲು | ವೇಗದಿ ಮಂತ್ರಿತ ರೊಟ್ಟಿ ತಿಂದು ಇನ್ನ | ಕಳೆದ ರೋಗವನ್ನ ನಾಗಶಯನ ಶ್ರೀ ಜಗನ್ನಾಥ ವಿಠಲನ್ನಾ | ತೋರ್ಯರ್ಧಾಯು ಇತ್ತವನ್ನಾ 8 ಮುದದಲಿ ನಿಜಜನರನು ಪೊರೆಯೇ | ಶಾಸ್ತ್ರರ್ಥವ ನೊರೆಯೆ ಪದ ಸುಳಾದಿಯನೆ ಬಲುರಚಿಸೀ | ಭಕುತಿ ಮಾರ್ಗ ಬೆಸಸೀ | ಸುಧೆಸಮವೆನೆ ಹರಿಕಥೆಸಾರ | ರಚಿಸಿ ಜನೋದ್ಧಾರ ಮುದಮುನಿ ಮತಗ್ರಂಥಗಳೊರೆದೇ | ಸಚ್ಛಾಸ್ತ್ರಪೊರೆದೇ 9 ಹತ್ತೆಂಟು ಒಂದು ಮೊಗದ ರೂಪ | ಶ್ರೀ ವಿಶ್ವರೂಪನಿತ್ಯ ಚಿಂತಿಪ ತನ್ನ ಬಿಂಬರೂಪ | ಅಂಶದಿಹನು ಗಣಪಚಿತ್ರಿಸಿರುವ ಚಕ್ರಾಬ್ಜ ವಲಯವನ್ನ | ಧೇನಿಸಿ ವಿಜಯರನ್ನಕೃತ್ಯ ಪೇಳಲೊಶವೆ ಅಪರೋಕ್ಷಿಗಳ | ಮಂದನು ನಾ ಬಹಳ 10 ಚಿತ್ರಮಾರ್ಗದಿ ಭ್ರಾತೃವರ್ಗವನ್ನ | ದೂರಕಳಿಸಿ ಮುನ್ನಚಿತ್ರಭಾನು ಸಂವತ್ಸರದಲ್ಲಿ | ದಶಮಾಸಾಷ್ಟಮಿಲೀ |ಚಿಂತಿಸುತ ಯೋಗಮಾರ್ಗದಲ್ಲಿ | ದಹಿಸಿ ದೇಹವಲ್ಲೀ |ಚಿತ್ರ ಚರಿತ ಗುರುಗೋವಿಂದ ವಿಠ್ಠಲನಾ | ಪದಕಮಲವ ಸೇರಿದನ 11
--------------
ಗುರುಗೋವಿಂದವಿಠಲರು
ಶ್ರೀ ಪ್ರಾಣೇಶದಾಸಾರ್ಯರ ಸ್ತುತಿ ತೆರಳಿದರು ಪರಮ ತೋಷದಲಿ ಹರಿಪರಕೆ |ಹರಿಪ್ರೀಯರಾದ ಪ್ರಾಣೇಶದಾಸರು ತ್ವರದಿ ಪ ನಿರುತದಲಿ ಹರಿಪೂಜೆ |ಮರಿಯದಲಿ ಮಾಡಿ ಬಲು |ಸ್ಥಿರ ಬುದ್ಧಿ ಪೂರ್ವಕದಲಿ |ಗುರುಗಳಲಿ ಸರ್ವಜ್ಞರಾಯರಿಂದಧಿಕ ಮ ||ತ್ತಿರಲುಂಟೆ ಎಂದು ತಿಳುಹಿ |ದುರುಳ ಜನರನುಸರಿಸದಲೆ ಕವಿಗಳೊಡನಾಡಿ |ಚರಿಸಿ ದೇಶಗಳಲ್ಲಿ ಮೆರೆದು ಖ್ಯಾತಿಯ ಪಡದು 1 ಭಾಗವತ ಶ್ರೇಷ್ಟ ಜಗನ್ನಾಥ ದಾಸಾಖ್ಯರಡಿ |ಜಾಗುಮಾಡದಲರ್ಚಿಸಿ |ಭೋಗಿವರ ಶಯನ ಪ್ರಾಣೇಶವಿಠಲಾಂಕಿತವ ||ಆ ಗುರುಗಳಿಂದ ಕೊಂಡು |ರಾಗದ್ವೇಷಗಳೆಂಬ ಅರಿಗಳನು ಸಂಹರಿಸಿ |ರಾಗದಲಿ ಹರಿಕಥನ ಕವನ ರೂಪದಿ ಪೇಳಿ2 ಪ್ರಾಣಮತವನನುಸರಿಸಿ ಆಚರಣಿಯನು ಮಾಡಿ |ಪ್ರಾಣಿಗಳಿಗೆ ತಿಳಿಸದೆ |ಕ್ಷೋಣಿಯೊಳಗಿನ್ನು ಇರಸಾಕೆಂದು ಆ |ಚಿತ್ರಭಾನು ಆಶ್ವಯುಜ ಶುದ್ಧ ಸಪ್ತಮಿಯಲಿ ||ಜ್ಞಾನಪೂರ್ವಕ ಲಯ ಚಿಂತನೆಯ ಮಾಡಿ ಗುರು |ಪ್ರಾಣೇಶ ವಿಠಲನಿದ್ದಾ ಪುರಕೆ ಜವದಿಂದ3
--------------
ಗುರುಪ್ರಾಣೇಶವಿಠಲರು
ಶ್ರೀನಿವಾಸ ನಿನ್ನ ಪಾದಧ್ಯಾನವ ಪಾಲಿಸಿ ಎನ್ನ ಮಾನಸಾನಂದಿಸೋ ಶತಭಾನುತೇಜನೆ ಪ ಸಾನುರಾಗದಿಂದ ನಿನ್ನ ಧ್ಯಾನಿಪಜನರ ಭವ ಕಾನನಾದಹನ ಚಿತ್ರಭಾನು ದನುಜಾರಿಹರಿ ಅ.ಪ ಇಂದಿರಾರಮಣ ನಿನ್ನ ಸುಂದರ ಚರಣಕೆ ನಾಂ ವಂದನೆಯ ಮಾಡುವೆನಯ್ಯಾ ಇಂದುವದನಾ ಇಂದುಧರ ನುತ ಮುಚುಕುಂದವರದನೆ ಗುಣ ಬಂಧುರಾ ಶ್ರೀ ಪುಲಿಗಿರಿ ಮಂದಿರ ಮಂದರಧರ1 ಇಷ್ಟುದಿನ ನಿನ್ನ ಮನಮುಟ್ಟಿ ಭಜಿಸದೆ ಬಲು ದುಷ್ಟಮನುಜರ ಕೂಡಿ ಭ್ರಷ್ಟನಾದೆನು ಇಷ್ಟ ಫಲದಾಯಕ ತ್ರಿವಿಷ್ಣಪಾದಿಪಾನುಬವ್ಯ ಅಷ್ಟಸಿದ್ಧಿಪ್ರದ ನಿನ್ನ ಗಟ್ಟಿಯಾಗಿ ನಂಬಿದೆನು 2 ಲೋಕಪತಿ ಪಿನಾಕೆಯನ್ನು ವೃಕನೆಂಬ ಭೀಕರಾಸುರನು ಉರಿಹಸ್ತ ಬೇಡಲು ಆಕಪಾಲಿಯಿತ್ತು ಅವಿವೇಕದಿಂದ ಲೋಡುತಿರೆ ಲೋಕ ಮೋಹಿನಿಯ ರೂಪ ಸ್ವೀಕರಿಸಿ ಶಿವನಕಾಯ್ದೆ3 ಆಡಿಸೋ ನಿನ್ನವರೊಳು ಪಾಡಿಸೋ ನಿನ್ನಯ ಕೀರ್ತಿ ಮೂರ್ತಿ ಬೇಡಿಸದಿರು ಆಡಿಸದೆ ಭವವೆಂಬ ಕಾಡಿನೋಳ್ಕಟಾಕ್ಷದಿಂದ ನೋಡಿ ನಿನ್ನ ನಾಡಿನೊಳಗಾಡಿಸೋ ಮುರಾರಿಹರಿ4 ವಾಸುಕಿಶಯನ ಪೀತವಸನ ದಿವ್ಯಭೂಷಣ ವಿ ಭೂಷಿತ ಲಲಿತಶುಭ ವೇಷವಿಪುಲ ಭಾಸಮಾನ ವ್ಯಾಘ್ರಶೈಲಾವಾಸ ಶ್ರೀನಿವಾಸ ಭಕ್ತ ಪೋಷಣ ದುರಿತಗಣ ಶೋಷಣ ಶ್ರೀ ವರದವಿಠಲ5
--------------
ವೆಂಕಟವರದಾರ್ಯರು