ಒಟ್ಟು 28 ಕಡೆಗಳಲ್ಲಿ , 18 ದಾಸರು , 26 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದು ಮಧುರೆಗೆ ತಾ ಕೊಂದು ಮಾತುಳನ ಬಂಧನ ರಹಿತವಾಗಲು ಮಾತಾಪಿತರು 1 ಜರೆಯಸುತನ ಬಾಧೆಯು ಘನವಾಗುತಿರಲು ಜಲದೊಳು ದ್ವಾರಕಾಪುರವ ನಿರ್ಮಿಸಿದ 2 ಯದುನಂದನ ತನ್ನಗ್ರಜ ಬಲರಾಮನ ಕೂಡ ಮುದದಿಂದಾವಾಸ ಯಾದವರ ಸಹಿತಾಗಿ3 ಇರುತಿರೆ ರುಕುಮ ತನ್ನನುಜೆ ಸಹಿತಾಗಿ ಚೆಲುವ ಸುಂದರಿಗೆ ಬ್ಯಾಗ್ವಿವಾಹದುತ್ಸವವು 4 ಅಕ್ಕರದನುಜೆ ರುಕ್ಮಿಣೀದೇವಿಗಿನ್ನು ಚಿಕ್ಕ ಚೆನ್ನಿಗನಾದ ತಕ್ಕ ವರನ್ಯಾರು 5 ವಸುಧೆಪಾಲರ ಮಧ್ಯ ಶಿಶುಪಾಲನೀಗಧಿಕ ಕುಸುಮಗಂಧಿನಿಗೆ ನಿಶ್ಚಯವ ಮಾಡಿದರು 6 ಅಗ್ರಜನ್ವಾಕ್ಯವ ಕೇಳಿ ಮನದಲ್ಯೋಚಿಸುತ ಘನಮಹಿಮಗೆ ಓಲೆ ಬರೆದಳು ಲಿಖಿತ 7 ಹರಿ ನೀನೆ ಮುರವೈರಿ ಸರುವಾಂತರಯಾಮಿ ನಿನ್ನ ಸ್ಮರಣೆ ದರುಶನ ಮಾತ್ರಕೆ ಪರಮಲಾಭೆನಗೆ 8 ಎಂದೆಂದಿಗೆನ ಕೂಡಾನಂದವ ಬಟ್ಟು ಇಂದೆ ಕೈಬಿಟ್ಟು ದೂರಿಂದ ನೋಡುವರೆ 9 ಪ್ರಾಣಪತಿ ನೀ ಪಾಣಿಗ್ರಾಣ (ಗ್ರಹಣ?) ಮಾಡದಲೆ ಇರೆ ಪ್ರಾಣ ಉಳಿಯದು ಕೇಳೆನ್ನಾಸೆ ಹುಸಿಯಲ್ಲ 10 ಸರ್ವರ್ವಂದಿತ ನಿನ್ನ ಅರಮನೆದ್ವಾರ ಕಾದಿರುವೋ ಭೃತ್ಯರಿಗೊಪ್ಪಿಸಿಕೊಡದೆ ಕರುಣಾಳು 11 ದೇಶಕಾಲಕೆ ನಾ ನಿನ್ನ ಸಮಳ್ವಾಸುದೇವ ಗುಣಕಸಮಳೆಂದು ಉದಾಸೀನ ಮಾಡಬ್ಯಾಡ 12 ವಕ್ಷಸ್ಥಳದ ವಾಸಿಯ ತುಚ್ಛಮಾಡದಲೆ ಲಕ್ಷೀಲೆ ಕರೆದೊಯ್ಯೊ ಪಕ್ಷಿವಾಹನನೆ 13 ಎನ್ನ ಬಿನ್ನಪ ಕೇಳಿ ಮನ್ನಿಸೊ ಕೃಷ್ಣ ಪನ್ನಂಗಶಯನ ನಿನ್ನ ಪಾದಕ್ಕೆರಗುವೆನು 14 ಪಾದ ಉರಗ ಮೆಟ್ಟಿದ ಪಾದ ನಿನ್ನ ಧ್ವಜವಜ್ರಾಂಕುಶ ಪಾದಕ್ಕೆರಗಿ ನಮಿಸುವೆನು 15 ಬರೆದ ಓಲೆಗೆ ಹಚ್ಚಿ ಅರೆದರಿಷಿಣವ ಕರವ ಜೋಡಿಸಿ ಕೊಟ್ಟು ಕಳುಹೆ ದ್ವಾರಕೆಗೆ16 ಜಗದೀಶಗೆ ಪತ್ರವ ಜಾಣೆ ತಾ ಬರೆದು ದ್ವಿಜನ ಕೈಯಲಿ ಕೊಟ್ಟು ಕಳುಹೆ ದ್ವಾರಕೆಗೆ 17 ವ್ಯಾಳ್ಯ ಮೀರುವುದೆಂದು ಎದ್ದಾಗ ರುಕುಮ ಭೇರಿ ತಾಡನ ಮಾಡಿಸೆ ಭೋರೆಂಬೊ ರಭಸ 18 ಎರೆದು ಮುಡಿಯನ್ಹಿಕ್ಕಿ ಜಡೆಯಬಂಗಾರ ಚೌರಿ ರಾಗಟೆ ಗೊಂಡ್ಯ ಧರೆಗೆ ಮುಟ್ಟುತಿರೆ 19 ಅಚ್ಚ ಜರತಾರಿ ಹೊಳೆವಷ್ಟಪತ್ರಿಕೆಯು ಮ್ಯಾಲೊಪ್ಪುವೊ ಪಟ್ಟೀನೊಡ್ಯಾಣ ಸರಿಸಿಟ್ಟು 20 ಕಂಕಣ ಚೂಡ್ಯ ದ್ವಾರ್ಯ ್ಹರಡಿ ಕೈಕಟ್ಟು ಮ್ಯಾ- ಕಂಚುಕ ತೊಟ್ಟು 21 ಹರಳು ಮಾಣಿಕ್ಯದ್ವಾಲೆ ಬುಗುಡಿ ಬಾವುಲಿಯು ಹೊಳೆವೊ ಮುತ್ತಿನ ಮೂಗುತಿ ಥಳಥಳಸುತಲಿ 22 ಹಾರ ಪದಕದ ಮಧ್ಯ ಮೇಲಾದೇಕಾವಳಿಯು ತೋರ ಮುತ್ತಿನ ದಂಡೆ ಲೋಲ್ಯಾಡುತಿರಲು 23 ಕನ್ನಡ್ಯಂದದಿ ಗಲ್ಲ ಕಳೆಯ ಸುರಿಸುತಲಿ ಸಣ್ಣಮುತ್ತಿನ ಗೊಂಚಲು ಸರಗಳಲೆಯುತಲಿ 24 ಝಗಝಗಿಸುತ ಬಂದಳು ಜಗದ ಮೋಹಿನಿಯು ಮುಗುಳು ನಗೆಯಿಂದ ಮೂರ್ಜಗವ ಮೋಹಿಸುತ 25 25 ಗೆಜ್ಜೆ ಸರಪಳಿ ಅಂದಿಗೆ ಹೆಜ್ಜೆಸರಿಸಿಡುತ ನಿರ್ಜರೇಶನ ಮಾರ್ಗದ ನಿರೀಕ್ಷಣದಿಂದ 26 ಸುತ್ತ ಮುತ್ತೈದೇರು ಕತ್ತಿಕೈ ಭಟರು ತುತ್ತೂರಿ ವಾದ್ಯ ಭೇರಿ ತಮ್ಮಟೆ ಕಾ(ಕಹ?) ಳೆ 27 ನಡೆದು ರುಕ್ಮಿಣಿ ಹೊಕ್ಕಳು ಗುಡಿಯ ಮಹಾದ್ವಾರ ಮೃಡನರಸಿಯ ಪೂಜಿಸಿ ದೃಢಭಕ್ತಿಯಲಾಗ 28 ಹಿರಿಯ ಮುತ್ತೈದೇರಿಗೆ ಮರದ ಬಾಗಿನವ ಅರೆದರಿಷಿಣ ಕುಂಕುಮ ಕರದಲ್ಲಿ ಗಂಧ 29 ಕಡಲೆ ಕಬ್ಬು ಕಾಯಿ ಉಡಿಯ ತುಂಬುತಲಿ ಕಡಲಶಯನನ ಮಾರ್ಗವ ಬಿಡದೆ ನೋಡುತಲಿ 30 ಮಂಗಳಗೌರಿಯೆದುರಿಗೆ ಮುತ್ತೈದೇರು ಅಂಗನೆ ಭೈಷ್ಮಿ ಪೀಠದಲಿ ಕುಳ್ಳಿರಿಸಿ 31 ಮಂಗಳಾಂಗನು ನಿನ್ನ ಪತಿಯಾಗಲೆಂದು ಮಂಗಳಸೂತ್ರ ಬಂಧನ ಮಾಡಲು ನಗುತ 32 ಮಾರನಯ್ಯನ ಮೋರೆ ನೋಡಿದಾಕ್ಷಣದಿ ಮಹಾ- ದ್ವಾರದಿ ಮುತ್ತು ಸೂರ್ಯಾಡೇನೀಕ್ಷಣದಿ 33 ಹರನ್ವಲ್ಲಭೆ ತೋರೆ ಮುರಹರನ ಕರಿವರನ ಭಯ- ಹರನ ಶ್ರೀಧರನ ಕೊಡುವೆನೀ ದೇವರನು 34 ಮಚ್ಛಲೋಚನೆ ಧ್ಯಾನ ಅಚ್ಚ್ಯುತನಲ್ಲೇ ಇಡೆ ಭಕ್ತ- ವತ್ಸಲ ಬಂದನೆಂದೆಚ್ಚರಿಸಿದರು35 ಹತವಾದ ಪ್ರಾಣ ಬರಲತಿ ಹರುಷವ್ಹ್ಯಾಗೋ ರಥವ ಕಾಣುತ ರುಕ್ಮಿಣಿ ಕೃತಕೃತ್ಯಳಾಗ 36 ಸೃಗಾಲದ ಮಧ್ಯ ಒಂದು ಸಿಂಹ ಹೊಕ್ಕಂತೆ ಶ್ರೀನಾಥ ರುಕ್ಮಿಣಿಯ ಸ್ವೀಕಾರ ಮಾಡಿದನು 37 ರಥವು ಮುಂದಕೆ ಸಾಗೆ ಪಥವು ತೋರದಲೆ ಅಲೆ ಬಾಯ ಬಿಡುತ ಶ್ರೀಪತಿಯ ಬೆನ್ನ ್ಹತ್ತಿ 38 ಬಂದ ರುಕುಮನ ಗಡ್ಡ ಮಂಡಿ ಸವರುತಲಿ ಬಂಧನ ರಥಕೆ ಮಾಡಿದ ನಂದಸುತನು 39 ವಾರೆನೋಟದಿ ನೋಡಿ ಮೋರೆ ತಗ್ಗಿಸಿದ ನಾರಿ ರುಕ್ಮಿಣಿಯ ಮುಖ ನೋಡಿ ಶ್ರೀಕೃಷ್ಣ 40 ಕರುಣವಿರಲಿಕ್ಕೆ ನೀ ಬರೆದ್ಯಾತಕೆ ಓಲೆ ತಿಳಿಯಲಿಲ್ಲವೆ ಎಂದೀಪರಿ ಹಾಸ್ಯದಿ ನುಡಿದ41 ಒಡಹುಟ್ಟಿದವನಲ್ಲಿ ಕಡು ಮೋಹವಿನ್ನೂ ಹಿಡಿಯದೆನ್ನೊಳು ಕೋಪ ಬಿಡುರುಕ್ಮಿಣಿ ಎಂದ 42 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
(ಉ) ಲೋಕನೀತಿ ಕುರಿತ ಕೀರ್ತನೆಗಳು ಏಳಿಸು ನಂಜನನೂ ಬೇಗದೊಳೇಳಿಸು ನಂಜನನೂ ಬಾಳುವ ಮಗನನು ಕೋಳುವಿಡಿದುದು ಯಮನ ನಾಳಿದೊಡೆಯ ವೇಲಾಪುರದರಸಾ ಪ ಪತಿಯನು ನೀಗಿದ ಸತಿಮಾದಮ್ಮನು ಸುತನಿಂ ಬದುಕುವೆನೆಂದೀ ಊರೊಳು ಅತಿ ತಿರಿತಂದೋವುತಲಿದ್ದಳು ಸುತ ಅಚ್ಯುತ ಸಲಹಯ್ಯಾ 1 ಉರಿಯೊಳು ಬಿದ್ದಂತೊರಲಿ ಪೊರಲಿ ವೋ ಹರಿ ಹರಿ ಹರಿ ಯೆಂದುರುಳಿ ಬಡಿದುಕೊಳ್ಳೇ ದುರಿಯಶ ವೊಡೆಯಗೆ ಬರುವುದೆಂದು ನರ ಹರಿ ರಕ್ಷಿಪನೆಂದೊರೆದೆನು ಹರಿಯೆ 2 ಸತ್ತಮಗನ ನೀ ತಂದಿತ್ತುದಿಲ್ಲವೇ ಹೇ ಕತರ್ುೃವೆ ಸಾಂದೀಪೋತ್ತಮನಿಗೆ ಅಂದು ಉತ್ತರೆಯೊಡಲೊಳು ಅತ್ತು ಶಿಶುವು ಸಾ ವುತ್ತಿರಲುಳುಹಿದೆ ಚಿತ್ತಜನಯ್ಯಾ 3 ಇರಿದಪಮೃತ್ಯು ಪೊತ್ತಿರಿದಪವಾದವು ಉರುಳಿದೆ ನೋಡುತ್ತಿರುವರೆ ಸುಮ್ಮನೆ ಅರಿಯದಂತಿರ್ದಡೆ ಪರಿಪಾಲಿಪರಾರು ವರಮೃತ್ಯುಂಜಯ ಕರುಣಾಕರನೇ 4 ಮರಣವನೈದಿದ ತರಳ ನಂಜುಂಡನ ಕರುಣಿಸದಿರ್ದಡೆ ಶಿರವನರಿದು ನಾ ಚರಣದೊಳಿಡುವೆನು ದುರಿತಬಾಹುದು ನಿನ ಗರಿಯದೆ ವೈಕುಂಠವಿಠಲ ಚೆನ್ನಿಗನೇ 5
--------------
ಬೇಲೂರು ವೈಕುಂಠದಾಸರು
(ಉ) ವಿಶೇಷ ಸಂದರ್ಭದ ಹಾಡುಗಳು 486 (1) ಹೆಜ್ಜಾಜಿಕೇಶವಸುಪ್ರಭಾತ ಏಳಯ್ಯ ಜಾಜಿಪುರೀಶ ಕೇಶವರಾಯ ಬೆಳಗಾಯಿತೇಳಯ್ಯ ಎದ್ದುರುಳಯ್ಯ ಪ ಕೋಟೆ ಚನ್ನಿಗನೆಂದು ಹೆಸರಾದವನೆ ಪೇಟೆ ಚನ್ನಿಗನಾಗಿ ನೆಲೆಸಿರುವವನೆ ಏಳಯ್ಯ ಬೆಳಗಾಯಿತು 1 ಗರುಡ ವಾಹನನಾಗಿ ಕಣ್ಗಾವಲಾಗಿಹನೆ ಕು- ದುರೆ ವಾಹನನಾಗಿ ಊರೆಲ್ಲ ಕಾಯುವನೆ ಏಳಯ್ಯ ಬೆಳಗಾಯಿತು 2 ಶ್ರೀದೇವಿ ಭೂದೇವಿಯರ ನಡುವೆ ಅರಸಾಗಿ ಬಾಧೆಹೊತ್ತಾಜನರ ಹಾರೈಸುತಿರುವನೆ ಏಳಯ್ಯ ಬೆಳಗಾಯಿತು 3 ನಾರದರು ತುಂಬುರರು ದೇವತೆಗಳೆಲ್ಲ ಎ- ದುರಲಿ ನಿಂದು ವಂದಿಸುತಿಹರಲ್ಲ ಏಳಯ್ಯ ಬೆಳಗಾಯಿತು 4 ವಂದಿ ಮಾಗಧರು ಜಯಘೋಷ ಮಾಡುತ್ತ ಮಂದಿ ಮಂದಿಯೆ ನಿಂತು ನುತಿಸುತ್ತಿಹರು ಏಳಯ್ಯ ಬೆಳಗಾಯಿತು 5 ಭಂಟರು ಬಂದು ಮಂಗಳರವದಿಂದ ಗಂಟೆ ಜಾಗಟೆಗಳ ನುಡಿಸುತಲಿಹರು ಏಳಯ್ಯ ಬೆಳಗಾಯಿತು 6 ಮುನ್ನಿನ ರವಿಯು ಉದಯಿಸುತಿರುವನು ಹೊನ್ನಿನ ಕಿರಣಗಳ ಪಸರಿಸುತಿರಿವನು ಏಳಯ್ಯ ಬೆಳಗಾಯಿತು 7 ಬೀದಿಯ ಜನರೆಲ್ಲ ಬೇಗ ಬೇಗನೆ ಎದ್ದು ಹಾದಿಯ ಸಿಂಗರಿಸಿ ಕಾಯುತಲಿರುವರು ಏಳಯ್ಯ ಬೆಳಗಾಯಿತು 8 ಪೇಟೆ ಚೆನ್ನಿಗನ ಕಡೆಯಿಂದ ದಂಡೊಂದು ಭ ರಾಟೆ ವಾದ್ಯಗಳ ನುಡಿಸುತ್ತ ಬರುತಿಹುದು ಏಳಯ್ಯ ಬೆಳಗಾಯಿತು 9 ಕೊಂಬು ಕಹಳೆಗಳ ಊದುವರು ಕೆಲವರು ತುಂಬು ಮಂತ್ರಗಳ ಹೇಳುವರು ವೈಷ್ಣವರು ಏಳಯ್ಯ ಬೆಳಗಾಯಿತು 10 ಸುಮಂಗಲೆಯರು ಕಳಸ ಹೊತ್ತಿಹರು ಸುಮ್ಮಾನದಿ ಭಕುತರು ಕುಣಿಯುತಲಿಹರು ಏಳಯ್ಯ ಬೆಳಗಾಯಿತು 11 ಅಭಯ ಹಸ್ತನೆ ಏಳ ಕಮಲವದನನೆ ಏಳು ಉಭಯ ಜನರುಗಳೆಲ್ಲ ದರುಶನಕೆ ಕಾದಿಹರು ಏಳಯ್ಯ ಬೆಳಗಾಯಿತು 12 ನಿನ್ನ ಭಕ್ತರು ನಿಂತು ಧ್ಯಾನ ಮಾಡುತಲಿಹರು ಎನ್ನರಸ ಜಾಜಿಪುರ ವರದ ಕೇಶವರಾಯ ಏಳಯ್ಯ ಬೆಳಗಾಯಿತು 13
--------------
ನಾರಾಯಣಶರ್ಮರು
ಒಲವಿಲ್ಲವೆನ್ನಬಹುದೇ ನೀರೆ ನಿನ್ನಲ್ಲಿ ಚೆಲುವ ವೇಲಾಪುರದ ಚೆನ್ನಿಗನಿರವ ನೋಡಿ ಪ ತರಳೆ ನಿನ್ನಯ ಮೋಹ ವಿರಹದಿರವದ ಬಗೆಯ ಸ್ಮರನರಳ ಸರಳುಗಳ ಉರವಣಿಯ ಘನವಾ ಪರೆಯದಿಂ ಮೋದಕದಿ ಬಿಂದುಗಳು ಮೊಳಗೆ ಕ ಸ್ತುರಿ ತಿಲಕ ಮಸುಳಿಸಲು ಬಂದ ಗುಣಮಣಿಯೇ 1 ನೀಲಜೀಮೂತಸನ್ನಿಭದೋರೆದುರುಬಿನ ಮೇಲೆ ಸುತ್ತಿದ ಬೆಂಮುರಿ ಜಾರೆಗುರುಳೂ ಭಾಳದಿಂ ಪರೆಯೆ ಕಡುತವಕದಿಂದೆನ್ನ ನುಡಿ ಗೇಳುತಲೆ ಬಂದನಿದೆ ನೋಡೆ ಗುಣಮಣಿಯೇ 2 ಸೋಗೆ ಮುಡಿಯಳೆ ನಿನ್ನ ಕಾಂಬೆನೆಂದರ್ಥಿಯಲಿ ರಾಗ ಮಿಗೆ ವೈಕುಂಠ ವಿಠಲನಾಥ ತಾನಾದ ಬೇಗದಿಂ ನೆರೆದು ಸುಖಿಯಾಗು ಪೆಣ್ಮಣಿಯೆ 3
--------------
ಬೇಲೂರು ವೈಕುಂಠದಾಸರು
ಕಂಡೆ ಕಮಲನಾಭನ ಕಣ್ಣಾರೆ ಪುಂಡರೀಕನ ಪಾಲಿನ ಪಂಡರಿವಾಸನ ಸಕಲ - ಬೊ ಮ್ಮಾಂಡವ ಧರಿಸಿದನಾ ಪ ಸುಲಭ ದೇವರ ದೇವ ನಾನಾ - ಪರಿ ಮಳ ತುಲಸಿಗೆ ವಲಿವನ ಕಲಿಕಾಲ ಸಲಹುವನ ಭವದ - ಸಂ ಕಲೆ ಪರಿಹರಿಸುವನ 1 ಲಿಂಗ ಸಂಗವನೀವನ ಜಗದಂತರಂಗ ಮೋಹನರಾಯನ ಮಂಗಳ ದೇವೇಶನ ಸಿರಿಪಾಂಡು ರಂಗ ನೆನಸಿಕೊಂಬನ2 ಜಗದ ಸದ್ಭರಿತ ನಾನಾ ವನದಿ ಬಿಗಿದ ಪರಾಕ್ರಮನಾ ನಗವನೆತ್ತಿದ ಧೀರನಾ ತನ್ನನು ಪೊಗಳಲು ಹಿಗ್ಗುವನಾ 3 ಯಾದÀವ ಶಿರೋರನ್ನನ ಕೊಳಲು ಊದುವ ಚೆನ್ನಿಗನಾ ವೇದ ನಿಕರಮಯನಾ 4 ಇಟ್ಟಿಗೆಯಲಿ ನಿಂದನ ವರಂಗಳ ಕೊಟ್ಟರೆ ತಪ್ಪದವನ ಅಟ್ಟಿ ಖಳನ ಕೊಂದನಾ ವಿಜಯ ವಿಠ್ಠಲ ಜಗದೀಶನಾ 5
--------------
ವಿಜಯದಾಸ
ಕೆಟ್ಟು ಹೋಗಬೇಡ ಮನುಜ ಸಾರಿ ಹೇಳುವೆ ಮನವ ಮುಟ್ಟಿ ಭಜಿಸೋ ಹರಿಯ ಶ್ರೀ ಕೃಷ್ಣ ಕಾಯುತಾನೆ ಪ ಆನೆಯಂತೆ ಹರಿವುದೊಂದು ಹೀನ ಮನವ ಹರಿಯಬಿಟ್ಟು ನೀನು ವಿಷಯವನ್ನು ಬಯಸಿ ನಾನಾನರಕದಲ್ಲಿ ಬಿದ್ದು 1 ದಾನ ಧರ್ಮಗಳನು ಬಿಟ್ಟು ಬರಿಯ ತನುವದಂಡಿಸುತ್ತ ಪುಣ್ಯ ತೀರ್ಥಸ್ನಾನಬಿಟ್ಟು ವಿಷ್ಣು ಮೂರ್ತಿಧ್ಯಾನ ತೊರೆದು 2 ಗಂಟು ಗಡಿಗೆ ಇರಲುನಿನಗೆ ನೆಂಟರಿಷ್ಟರೆಂದು ಬಂದು ಪಂಟಿಯನ್ನು ತೆಗೆವರೆಲ್ಲ ಅಂಟಿ ಬೆನ್ನಬರುವರಿಲ್ಲ 3 ಪಂಡಧರನ ದಂಡು ಬಂದು ದಂಡೆಗೆ ದಂಡೆ ಬಿಗಿದು ಕಟ್ಟಿ ಮಕ್ಕಳು ಬರುವನೋ 4 ನಿನ್ನ ನೀನೆ ತಿಳಿದುಕೊಂಡು ಚೆನ್ನಿಗನ ಕೂಟದಲ್ಲಿ ಚಿನ್ಮಯಾತ್ಮಕ ಲಕ್ಷ್ಮೀಪತಿಯ ಮುನ್ನಭಜಿಸೋ ಜನ್ಮವಿಲ್ಲ 5
--------------
ಕವಿ ಪರಮದೇವದಾಸರು
ಗುಮ್ಮ ಬಂದನೆಲೊ ದುರ್ಜನ ಬೇಡಸುಮ್ಮನಿರೆಲೊ ರಂಗಯ್ಯ ಪ ನಿತ್ಯ 1 ಕಡಗ ಕಂಕಣ ಬಾಹುಪುರಿ ಭುಜಕೀರ್ತಿಯುಉರದಲ್ಲಿ ಧರಿಸಿದ ರುಂಡಮಾಲೆಯು ತನ್ನಸಿರದ ಜಟಾಜೂಟೆಯು ತಾಂ ಧರಿಸಿದ ಉರಗನಾ-ಭರಣಗಳು ಪರಮ ಮೂರುತಿ ನಿಮ್ಮ ಚರಣಸೇವೆಗೆ ನಿತ್ಯ2 ಕಾಮನ ರೂಪಕ್ಕೆ ಜರಿವಾ ಚೆನ್ನಿಗನಾಗಿಕೋಮಲಾಂಗೇರು ಭಿಕ್ಷವ ನೀಡಲು ಪ್ರೇಮದಿಂದವರಿಗೆಲ್ಲಮುಕ್ತಿಯನೀವ ಸೋಮಶೇಖರನ ಚೆಲ್ವರಾಮನಾ ಭಾವ ಮೃದುವಾಕ್ಯವಿದು ಮುದ್ದು 3 ಕೋಟಿ ಸೂರ್ಯರ ಕಾಂತಿ ನೇಟಾದ ತನುವಿನಪೂಸಿದ ಭಸ್ಮವು ನೊಸಲ ಮುಕ್ಕಣ್ಣಿನ ನೋಟದಕಿಡಿಯುದುರೆ ಭೂತಗಣಂಗಳು ಕುಟಕಿಚ್ಛಕ ಬೆದರೆನಾಟ್ಯವನಾಡುತ ನಗುತ ಮೋಹನ ಮುದ್ದು 4 ನಿಮ್ಮ ಚರಣ ಸೇವೆಗೆ ನಿತ್ಯಾ5
--------------
ಶ್ರೀಪಾದರಾಜರು
ಜೋಜೋ ಕಂದÀರ್ಪಕೋಟಿ ಲಾವಣ್ಯಜೋಜೋ ವೃಂದಾರಕ ಶಿರೋರನ್ನ ಪ . ಜೋಜೋ ನಂದನ ಸುಕೃತದ ಫಲವೆಜೋಜೋ ಮುನಿಮನಮಧುಪ ಕಮಲವೆಅ.ಪ. ಪೊನ್ನ ತೊಟ್ಟಿಲ ಮೇಲೆ ಮಣಿಮಯವಾದ ವಿತಾನ್ನವ ಕಟ್ಟ್ಟಿ ಪಟ್ಟೆಯ ಮೇಲ್ವಾಸಿನಲಿಚಿನ್ನ ಶ್ರೀಕೃಷ್ಣನ ಮಲಗಿಸಿ ಗೋಕುಲದಕನ್ನೆಯರೆಲ್ಲ ತೂಗುತ ಪಾಡಿದರೆ 1 ಶಶಿಯ ಚೆಲುವ ಪೋಲ್ವ ಮೊಗದ ಚೆನ್ನಿಗನೆಎಸೆವ ಕಿರುಡೊಳ್ಳಿನ ಸೊಬಗ ಬಾಲಕನೆಪೊಸಕೆಂದಾವರೆಯಂದದಿ ಮೃದುಪದನೆಬಿಸರುಹನಯನ ಬಿಡದಿರೆಮ್ಮ ಕಂದ 2 ಪೂತನಿ ಅಸುವನೀಂಟಿದ ಪೋತ ಶಿಶುವೆವಾತದೈತ್ಯನ ಗೆಲಿದದುಭುತ ಬಾಲಭೂತಗಳನಂಜಿಸುವರ್ಭಕನೆಓತೆಮ್ಮ ಶಿಶುಗಳ ಸಲಹೊ ಶ್ರೀಹರಿಯೆ 3 ಅಮೃತವನೂಡಿ ಸುರರ ಬೆಳೆಸಿದನೆಭ್ರಮಿತನಾದ ಕರಿವರನ ಕಾಯ್ದವನೆಸುಮುಖತನದಿ ಪರೀಕ್ಷಿತನ ಪೊರೆದನೆಮಮತೆಯಿಂದೆಮ್ಮ ಶಿಶುಗಳ ನೀ ಸಲಹೊ 4 ಪೊಳೆÀವ ಮೂಲರೂಪದಿ ತೋರಿದೆ ನೀ-ನುಳಿದ ಶಿಶುಗಳಂತೆ ಶಿಶುವೆನ್ನಬಹುದೆಲಲನೆ ಬೇಡಿಕೊಳ್ಳೆ ತನ್ನ ತಾನೆ ಶಿಶು-ಗಳ ಭಾವವಿಡಿದೆಯೆಂದೆಂಬರು ನಿನ್ನ5 ಈ ಮಹಿಯೊಳು ಹರಿ ಶಿಶುವಾಗೆ ತನ್ನ ಮ-ಹಿಮೆಯ ತುತಿಸುವ ಶ್ರುತಿವನಿತೆಯರುವ್ಯಾಮೋಹದಿ ಬಂದು ಲಲನೆಯರಾದರುಆ ಮುಗ್ಧೆಯರು ಪಾಡುತ ತೂಗಿದರೆ 6 ನೀ. ಶಿಶುವಾದರೆ ನಿನ್ನುದರದೊಳಿರ್ದ ಶ್ರುತಿಮುಕ್ತರು ಶಿಶುಗಳೆಂತಾಹರೊವೇಷಧರನಾಗಿ ಶಿಶುಗಳ ವಾಸಿನೊಲಿದೆವಾಸುದೇವ ನಮ್ಮ ಬಿಡದಿರು ಶ್ರೀ ಕೃಷ್ಣ 7 ಆವಳಿಸಲು ನಿನ್ನ ಗರ್ಭದೊಳಗೆ ಭುವ-ನಾವಳಿ ಗೋಪಗೋಪಿಯರನ್ನು ತೋರಿದೆಶ್ರೀವರ ನೀನೆಲ್ಲರ ತಂದೆಯಲ್ಲದೆಭಾವಜ್ಞರ ಮತದಿ ಶಿಶುವೆಂತಪ್ಪೆ 8 ಹಯವದನನಾಗಿ ವೇದವÀ ತಂದುಪ್ರಿಯಸುತ ಚತುರಮುಖಗೆ ಪೇಳಿದಖಿಳ ವಿ-ದ್ಯೆಯ ಖನಿ ನೀನೀಗಳೇನೆಂದು ನುಡಿಯಲ-ರಿಯದ ಬಾಲಕನಾದ ಬಗೆ ಪೊಸತಯ್ಯ
--------------
ವಾದಿರಾಜ
ದೇವನ ನೆರೆನಂಬಿರೊ ಶ್ರೀವರ ವೇಲಾಪುರಿಯ ಚೆನ್ನಿಗನ ಪ ಕರೆಯರಿಗೊರಳಭವನ ಕೃಪೆಯಿಂದ ದಶಗ್ರೀವ ನೆರೆಭಾಗ್ಯಪಡೆದು ಗರ್ವದೊಳಿರಲು ಅರೆಯಟ್ಟಿ ಶಿರಗಳ ಕುಟ್ಟಿಹಾಕಿ ತನ್ನ ಮೊರೆಹೊಕ್ಕ ವಿಭೀಷಣಗೆ ಪಟ್ಟಗಟ್ಟಿದ 1 ಭಾಗೀರಥಿಯ ತಾಳ್ದ ಮಹೇಶನ ತಲೆ ವಾಗಿಲ ಕಾಯಿಸಿಕೊಂಡಿಹ ಬಾಣನ ತಾಗಿ ತೋಳಕಡಿದ ಸುರನ ಕುಮಾರತಿಗೆ ಭೋಗಿಸುವಂತೆ ತಮ್ಮಗೆ ಕೈವರ್ತಿಸಿ ಕೊಟ್ಟ2 ಲೋಕದೊಳಜಭವಾದಿಗಳಿಂದ ಉಬ್ಬಿದ ಅ- ನೇಕ ರಕ್ಕಸರನೊಟ್ಟಿಗೆ ತಾಹೆನು- ತಾ ಕೊಟ್ಟ ವರವನೆ ಶಿರಮುಟ್ಟಿ ಕೊಂಡಾ ಕರು ಣಾಕರ ವರ ವೇಲಾಪುರಿಯ ಚೆನ್ನಿಗನ 3
--------------
ಬೇಲೂರು ವೈಕುಂಠದಾಸರು
ನೋಡಲುಬೇಕೇ ಎನ್ನೊಡೆಯನನೂ ನೋಡಿದಿರೇ ತಾಳಪಾಕಂ ಚಿಣ್ಣೈಯಾ ಪ ದಿಕ್ಕುಗಳನು ಬೆಳಗುವ ಸುಕೀರಿಟವ ನಿಕ್ಕಿಹ ಮಾಣಿಕದೋಲೆಯನೂ ಚೊಕ್ಕಟ ಮೂಗುತಿಯಿಂದೊಪ್ಪುವನ್ನ ಜ ಗಕ್ಕೆ ಪತಿಯೆನ್ನೆರೆಯ ಚೆನ್ನಿಗನಾ 1 ಕಂಬು ಚಕ್ರಗದೆ ಪದುಮವ ಪಿಡಿದು ಪೀ ತಾಂಬರದಂಗಿಯ ಧರಿಸಿಕೊಂಡೂ ತುಂಬಿದ ವಕ್ಷದಿ ರಮೆ ಕೌಸ್ತುಭದಿಂ ಗಂಭೀರಾರ್ಣವನಾದ ಚೆನ್ನಿಗನ 2 ಸುರರೆಲ್ಲರು ಪೂಜಿಸುವ ಚರಣದೊಳು ಕಿರುಗೆಜ್ಜೆ ಪೆಂಡೆಯವಿಟ್ಟವನಾ ವರವೈಕುಂಠ ವೇಲಾಪುರದರಸನ ಶರಣ ವತ್ಸಲನಾದ ಕರುಣಾಂಬುಧಿಯಾ 3
--------------
ಬೇಲೂರು ವೈಕುಂಠದಾಸರು
ಪುಣ್ಯ ಪೂರ್ವಾರ್ಜಿತವಿದು ಸುರ ಮಾನ್ಯ ಶ್ರೀ ನಿಲಯನ ದರುಶನ ಪ ಚೆನ್ನಿಗನೀತನು ಸುಜನರ ಪೊರೆಯಲು ಪನ್ನಗಾಚಲದಿ ಬಂದಿರುವುದು ಬಲು ಅ.ಪ ರಾಜ್ಯವಿವಗೆ ಹದಿನಾಲ್ಕು ಲೋಕಗಳು ಭೋಜ್ಯ ಚರಾಚರಜಗವೆಲ್ಲ ರಾಜೀವಾಲಯನಾಥನಿವನು ಬಲು ಸೋಜಿಗದಲಿ ಬಂದಿಹ ನೋಡಿ ಪೂಜ್ಯಚರಣ ಗುರುವ್ಯಾಸರಾಜ ಯತಿರಾಜ ರಚಿತ ದ್ವಿಕ್ಷಡಬ್ಧದ ಪೂಜೆಯ 1 ಸೌಂದರ್ಯದ ಗಣಿ ಇವನು ಎಲ್ಲರನು ತಂದೆಯಂತೆ ಸಲಹುವ ಸತತ ಒಂದೊಂದೆಡೆಯಲು ವ್ಯಾಪ್ತನಿವನು ತಾ ನೊಂದೆಡೆಯಲು ಸುಲಭದಿ ಸಿಗನು ನಂದತೀರ್ಥ ಪರಿವಾರ ಜನರು ಇವರೆಂದು ಹರುಷದಲಿ ಮುಂದೆ ನಿಂತಿಹುದು 2 ಪದ್ಮಾವತಿ ವಲ್ಲಭನಿವ ಮುನಿಜನ ಹೃದ್ಗತ ಪ್ರಕಟಾಮಿತ ಚರಿತ ಮುಗ್ಧಜನರು ಪರಮಾದರ ತೋರಲು ಸ್ನಿಗ್ಧನಾಗುವನು ಹರುಷದಲಿ ಛದ್ಮಕೆ ದೂರನು ಭಕ್ತ ಪ್ರಸನ್ನನು ಉದ್ಧರಿಸಲು ಈ ಸದ್ಮಕೆ ಬಂದಿಹ 3
--------------
ವಿದ್ಯಾಪ್ರಸನ್ನತೀರ್ಥರು
ಬಿದಿಗೆಯ ದಿವಸ (ಹನುಮಂತನನ್ನು ಕುರಿತು) ರಂಭೆ : ಕಮಲದಳಾಕ್ಷಿ ಪೇಳೆಲೆ ಈತನ್ಯಾರೆ ಸಮನಸನಾಗಿ ತೋರುವನಲ್ಲೆ ನೀರೆಪ. ಧನ್ಯನಾಗಿರುವ ದೊರೆಯ ಧರಿಸುತ್ತ ಚೆನ್ನಿಗನಾಗಿ ತೋರುವನಲ್ಲೆ ಈತ1 ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವ ಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2 ಸೋಮಾರ್ಕಶಿಖಿಯಂತಿರುವುದು ತ್ರಿನಾಮ ರಾಮಣೀಯಕ ಮನೋಹರ ಪೂರ್ಣಕಾಮ3 ವೀರವೈಷ್ಣವ ಮುದ್ದು ಮೋಹನಕಾಯ ಭೂರಿಭೂಷಣಭುಜಬಲ ಹರಿಪ್ರಿಯ4 ರೂಪ ನೋಡಲು ಕಾಮರೂಪನಂತಿರುವ ಚಾಪಲ ಪ್ರೌಢ ಚಿದ್ರೂಪನಂತಿರುವ 5 ಬಾಲವ ನೆಗಹಿ ಕಾಲೂರಿ ಶೋಭಿಸುವ ನೀಲದುಂಗುರದ ಹಸ್ತವ ನೀಡಿ ಮೆರೆವ 6 ಗೆಜ್ಜೆ ಕಾಲುಂಗರ ಪದಕ ಕಟ್ಟಾಣಿ ಸಜ್ಜನನಾಗಿ ತೋರುವನು ನಿಧಾನಿ 7 ಊರ್ವಶಿ : ತರುಣಿ ಕೇಳೀತನೆ ದೊರೆ ಮುಖ್ಯಪ್ರಾಣ ವರ ನಿಗಮಾಗಮ ಶಾಸ್ತ್ರಪ್ರವೀಣ 1 ಮಾಯವಾದಿಗಳ ಮಾರ್ಗವ ಖಂಡಿಸಿದ ರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆ ಚಟುಳ ಹನುಮನ ಉತ್ಕಟರೂಪ ಕಾಣೆ 1 ವಾಮನನಾದ ಕಾರಣವೇನೆ ಪೇಳೆ ನಾ ಮನಸೋತೆ ಎಂತುಂಟೊ ಹರಿಲೀಲೆ 2 ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳು ಸಾಗಿತು ಸೇವೆಯೆಂಬುದು ಮನಸಿನೊಳು1 ವಾದವ ಮಾಡಿ ವಿನೋದದಿ ಹರಿಯ ಪಾದಸೇವೆಗೆ ಮನನಾದ ಕೇಳಿದೆಯೊ2 ವೀರ ವೇಷವನಿದ ಕಂಡು ಶ್ರೀಹರಿಯ ದೂರವಾದನೋ ಎಂದು ಮನದೊಳು ನಿಜವು3 ಭೂರಿಭೂಷಣ ಸುಂದರ ರೂಪವಾಂತ4 ಇಂದಿನ ಸೇವೆಯೆನ್ನಿಂದತಿ ದಯದಿ ಮಂದರಧರಿಸಿಕೊಳ್ವುದು ಎಂದು ಭರದಿ5 ಒಯ್ಯನೆ ಪೇಳುತ್ತ ವಯ್ಯಾರದಿಂದ ಕೈಯನು ನೀಡಿ ಸಾನಂದದಿ ಬಂದ6 ಕಂತುಪಿತನು ಹನುಮಂತ ಮಾನಸಕೆ ಸಂತಸ ತಾಳಿ ಆನಂತನು ದಿಟಕೆ7 ಭೂರಿ ವೈಭವದಿ ಸ್ವಾರಿಯು ಪೊರಟ ಸಾಕಾರವ ಮುದದಿ8 ತೋರಿಸಿ ಭಕ್ತರ ಘೋರ ದುರಿತವ ಸೂರೆಗೊಳ್ಳುವನು ವಿಚಾರಿಸಿ ನಿಜವ9 ಹದನವಿದೀಗೆಲೆ ಬಿದಿಗೆಯ ದಿನದಿ ಮದನಜನಕನು ಮೈದೋರುವ ಮುದದಿ10 ಪ್ರತಿದಿನದಂತೆ ಶ್ರೀಪತಿ ದಯದಿಂದ ಅತಿಶಯ ಮಂಟಪದೊಳು ನಲವಿಂದ11 ಎಂತು ನಾ ವರ್ಣಿಪೆ ಕಂತುಜನಕನ ಅಂತ್ಯರಹಿತ ಗುಣಾನಂಮಹಿಮನ12 ಏಕಾಂತದಿ ಲೋಕೈಕನಾಯಕನು ಶ್ರೀಕರವಾಗಿ ನಿಂದನು ನಿತ್ಯಸುಖನು13 * * * ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾಪ. ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆ ತವಕದಿ ಬರುವತ್ತಿತ್ತವರನ್ನು ನೋಡದೆ 1 ಅಂದಣವೇರಿ ಮತ್ತೊಂದ ತಾ ನೋಡದೆ ಒಂದೇ ಮನದಿ ಬೇಗ ಮುಂದೆ ಬರುವನಮ್ಮಾ2 ಬಾಲಬ್ರಹ್ಮಚಾರಿ ಶಿಲೆಯಂತಿರುವನು ಅಲೋಚಿಸಲಿವ ಮೂಲಪುರುಷನಮ್ಮಾ3 ಪುಟ್ಟನಾದರು ಜಗಜಟ್ಟಿಯಂತಿರುವನು ದಿಟ್ಟನಿವನವನ ಮುಟ್ಟಿ ನೋಡಮ್ಮ 4 ಊರ್ವಶಿ : ನಾರೀ ಇವನೀಗ ಹೊಂತಕಾರಿ ಲೋಕಕ್ಕಾಧಾರಿ ಪ. ಕೊಬ್ಬಿದ ದೈತ್ಯರಿಗೀತನೆ ಕಾಲ ಹಬ್ಬುವದಾತ್ಮಕ್ಕೀತನೆ ಮೂಲ ಉಬ್ಬುವ ಹರಿಯೆಂದರೆ ಮೈಯೆಲ್ಲ ಒಬ್ಬನಿಗಾದರೂ ಬಗ್ಗುವನಲ್ಲ1 ಎಲ್ಲಿರುವನು ಹರಿ ಅಲ್ಲಿಹನೀತ ಬಲ್ಲಿದ ನಾರಾಯಣಗಿವ ದೂತ ಖುಲ್ಲರ ಮನಕತಿ ಝಲ್ಲೆನುವಾತ ಸುಲ್ಲಭನೆಯಿವ ಮುಂದಿನ ಧಾತ2 ಭೇದವಿಲ್ಲೆಂಬುದವರಿಗೆಯಿವ ತುಂಟ ಮೇದಿನಿ ಬಾಧಕರಿಗೆ ಯಿವ ಕಂಟ ಆದಿ ಮೂರುತಿ ಕೇಶವನಿಗೆ ಬಂಟ ಮಾಧವಭಕ್ತರಿಗೀತನೆ ನೆಂಟ 3 ದುರಿತಾರಣ್ಯದಹನ ನಿರ್ಲೇಪ ವರ ವೆಂಕಟಪತಿಯಿದಿರೊಳಗಿಪ್ಪ ಪರಮಾತ್ಮನ ಪರತತ್ತ್ವ ಸ್ವರೂಪ ಮರೆಮಾತೇನಿವ ದೊರೆ ಹನುಮಪ್ಪ4
--------------
ತುಪಾಕಿ ವೆಂಕಟರಮಣಾಚಾರ್ಯ
ಬೇಲೂರು ಬೇಲೂರ ಚೆನ್ನಿಗನ ನೋಡುವ ಬನ್ನಿ ಬಾಲಾರ್ಕತೇಜನ ಪಾಡುವ ಬನ್ನಿ ಪ ಮೇಲಾದ ವರಗಳ ಬೇಡುವ ಬನ್ನಿ ನೀಲಾಂಗನಿಗೆ ಪೂಜೆ ಮಾಡುವ ಬನ್ನಿ ಅ.ಪ ಕ್ಷೀರಸಮುದ್ರದಿ ಮೀಯುವ ಬನ್ನಿ ಇಲ್ಲಿ ದ್ವಾರದೇಶದಿ ನಿಂತು ಕಾಯುವ ಬನ್ನಿ ಚಾರುಸುಗಂಧವ ತೇಯುವ ಬನ್ನಿ ನಮ್ಮ ಕಾರುಣ್ಯದಿಂದವ ಕಾಯುವ ಬನ್ನೀ1 ಸುತ್ತು ಪ್ರದಕ್ಷಿಣೆ ಮಾಡುವ ಬನ್ನಿ ಅಲ್ಲಿ ಚಿತ್ತಾಕರ್ಷಕ ಚಿತ್ರ ನೋಡುವ ಬನ್ನಿ ಅತ್ತಿತ್ತ ವಂದನೆ ಮಾಡುವ ಬನ್ನಿ ಎಲ್ಲ ಮತ್ತೆ ಕೈ ಜೋಡಿಸಿ ಪಾಡುವ ಬನ್ನಿ 2 ಎಂಥ ಚೆಲುವ ಚೆನ್ನನಿವನಬ್ಬ ಮ ತ್ತಿಂಥ ಚೆಲುವನಿಲ್ಲ ಇನ್ನೊಬ್ಬ ಎಂಥ ಲಾವಣ್ಯವಿದಬ್ಬಬ್ಬ ಮ ತ್ತಿಂಥಾವ ಮಾಂಗಿರಿ ರಂಗನೊಬ್ಬ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಗುವ ತಡೆಯಬಾರದೆ ಮಾನಿನಿಯರುಸುಗುಣ ಚೆನ್ನಿಗನೆಂಬ ಸೊಬಗುಳ್ಳ ಮಗುವ ಪ ನೀರೊಳಗೆ ಪೊಕ್ಕು ತಾ ಬೀರುತಿದೆ ಮಾತುಗಳಧರಣಿಧರ ತಳಕಿಳಿದು ಬಾರದಿದೆಕೊಘೋರ ಪಾತಕವೆಂಬ ಬೇರ ಮೆಲ್ಲುತಲಿದೆಕೊಬಾರಯ್ಯ ಎನೆ ಕೋಪವೇರುತಿಹ ಮಗುವ 1 ಬೇಡುತಿದೆ ದಾನವನು ನೀಡುತಿದೆ ಪಾದವನುರೂಢಿಪಾಲರ ಕಂಡು ಕೊಲ್ಲುತಿದೆಕೊಓಡುತಿದೆ ಮೃಗದೊಡನೆ ಆಡುತಿದೆ ಕಪಿಗಳೊಳುನೋಡಲ್ಕರಿನಾಗರ ಹಾವ ತುಳಿಯುತಿದೆಕೊ 2 ಇತ್ತ ಬಾರೆಂದೆನಲು ಬತ್ತಲೆ ನಿಲ್ಲುತಿದೆಕೊಮತ್ತೆ ತೇಜಿಯನೇರಿ ನಲಿಯುತಿದೆಕೊಹತ್ತೆ ಬಂದವರಿಗೆ ಅರ್ತಿಯನು ನೀಡುತಿಹನಿತ್ಯ ವೈಕುಂಠದಲಿ ನಲಿವ ಮಗುವ 3
--------------
ಕನಕದಾಸ
ವಿತ್ತ ವನಿತಾದಿ ವಿಷಯವೆಂಬಕನಸಿನ ಸಿರಿಯ ನೆಚ್ಚಿ ತೊನೆದುಕೊಂಬರಲ್ಲದೆ 1ಪೊಲೆಯ ಬೊಂಬೆಯೊಳು ತುಂಬಿದ ಕೀವುಮಲಮೂತ್ರಸಂದೋಹ ತೊಗಲು ರೋಮಎಲು ಮಜ್ಜೆ ಮಾಂಸದವ್ಯೂಹ ಎಷ್ಟು ತೊಳೆದರೂಹೊಲಸು ನಾರುವ ಚೋಹ ಮತ್ತಿದಕೊಂದುಕುಲಗೋತ್ರ ನಾಮರೂಪು ಚಲುವ ಚೆನ್ನಿಗನಿವ ಸಲೆ ಜಾಣನೆಂದು ಮೂಢರುಗಳಹಿಕೊಂಬರಲ್ಲದೆ 2ಮಡದಿಯಾದರಿಲ್ಲ ಮಕ್ಕಳು ಮಕ್ಕಳಾದರೆಒಡಮೆಲ್ಲವದು ಬರಲು ಸತಿಸುತರುಮಡಿದು ಹೋಗುವ ದುಃಖಂಗಳು ಗಳಿಸಿದರ್ಥಕೆಡುವಾ ಸಂಕ್ಲೇಶಂಗಳು ತನಗೆ ಮುಂಚಿಅಡಸಿ ಬರುವದೊ ಮೃತಿ ಜಡರು ಈ ಬದುಕನೆಚ್ಚಿಸಡಗರ ಬಡುತ ಹಿಗ್ಗಿ ಕೊಡಹಿಕೊಂಬರಲ್ಲದೆ 3ಬಾಲಕನಾಗ್ಯೊಂದು ಕ್ಷಣವು ಪ್ರಾಯದಿ ಕಾಮಲೋಲುಪನಾಗ್ಯೊಂದು ಕ್ಷಣವು ಧನಾಢ್ಯನೆಂಬಮೂಳ ಹೆಮ್ಮೆ ಒಂದು ಕ್ಷಣವು ದಾರಿದ್ರ್ಯ ಮುಪ್ಪುಜೋಲುವ ತನುವೊಂದು ಕ್ಷಣವು ನಾನಾವೇಷದಾಳಿದ ನಟನಂತಾಡಿ ಕಾಲನ ಬಾುಗೈದುವಬಾಳುವೆಗೆ ಖೂಳಜನರು ವೋಲಾಡಿಕೊಂಬರಲ್ಲದೆ 4ನೆರೆ ಭೋಗಕೆ ರೋಗಭಯ ಸುತ ಸಂಬಂಧಿನೆರವಿಗೆ ವಿಯೋಗ ಭಯ ದ್ರವ್ಯಕ್ಕೆ ಭೂಪರ ಭಯವು ಚೋರ ಭಯ ಕಾಯಕೆ ಭಯಂಕರನಾದ ಕೃತಾಂತ ಭಯ ತಾಪತ್ರಯವೀಪರಿಯನೇಕ ಚಿಂತೆಯಲ್ಲಿ ಕೊರಗುತುರಿವ ಮನೆಯೊಳಗಿರುವೆ ಸುಖದಲೆಂಬರು ಮೂಕೊರೆಯಮೊಂಡರಲ್ಲದೆ * 5
--------------
ಗೋಪಾಲಾರ್ಯರು