ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀನೆನಗೆರವೆ ನಾನಿನ್ನೆಂತಗಲುವೆಬಾ ನನ್ನ ತನುವೆ ಸದ್ಗುರುವಿಗೊಂದಿಸುವರೆ ಪಮೊದಲಿಗಮಿತ ದುಷ್ಟತನುಗಳ ಸಂಗದಿಕುದಿದು ಸಂಸಾರಾಗ್ನಿಯೊಳು ಬಳಲಿದೆನುಅದರಿಂದ ನಿನ್ನ ನಿಗ್ರಹಿಸಿದೆನಲ್ಲದೆಪದರದಿರೆನ್ನೊಳು ಪಡೆಯೆ ನಿನ್ನೊಂದನೂ 1ಗುರುಸೇವೆಗಲಸದೆ ಛಳಿಮಳೆಯೆನ್ನದೆಬರಿಯ ಬಯಲ ಸಂಸಾರ ಭೋಗದಲಿಎರಗದಿರೆನ್ನ ದಾರಿಗೆ ಬಾ ನಿನ್ನಾರೈಕೆುರಲೆನ್ನೊಳಿನ್ನು ತಪಿಸಿ ಕಂಗೆಡಿಪುದಿಲ್ಲ 2ಶ್ರವಣ ಸುಖದಿ ನನ್ನ ಬೆರೆದು ಬೇರಾಗದೆಭವಶರಧಿಯ ದಾಂಟುನಂತೆ ನೀ ಮಾಡುವಿವರಿಸಿ ಹರಿಗುಣ ಕಥೆಗಳನೆಮ್ಮೊಳುಕವಿದಿಪ್ಪ ತಮವ ತೊಲಗಿಸಿಕೊಂಬ ನಾವಿನ್ನು 3ನಿನ್ನಿಂದ ಸಂಸಾರ ವಿಷಯ ಸುಖದ ಲಾಭನಿನ್ನಿಂದ ಕೃಛ್ರಾದಿ ತಪಸಿನ ಲಾಭನಿನ್ನಿಂದ ಸತ್ಕರ್ಮತೀರ್ಥಯಾತ್ರೆಯ ಲಾಭನಿನ್ನಿಂದ ವೈರಾಗ್ಯ ಭಾಗ್ಯದ ಲಾಭ 4ನಿನ್ನೊಳಗಿರುವಿಂದ್ರಿಯಂಗಳಿಂದ್ರಿಯಗಳೊಳುಣ್ಣುವ ಮನ ಮನದೊಳು ಕೂಡ್ವ ಜೀವಎನ್ನುವರೆನ್ನನೆನ್ನಿರವನರಿಯೆನಿದನಿನ್ನಿಂದ ಗುರುಕೃಪೆವಡೆದು ತಿಳಿಯಬೇಕೂ 5ನೆವವಿಲ್ಲದುಪಕಾರಗೈವೆ ನೀನೆನಗಾಗಿವಿವಿಧ ಭೋಗದ ಸುಖವೆನಗೆ ನಿನ್ನಿಂದವಿವರಿಸೆ ನಿನಗೆ ಉಂಟು ಲಾಭವು ಮತ್ತೆನವೆವೆಯಲ್ಲದೆ ವೃದ್ಧಿಯಾಗುವೆಯಾ ಪೇಳು 6ನಿನ್ನಿಂದ ಸುಖಬಟ್ಟು ನಿನ್ನ ಬಾಳಿಸಲಾರದೆನ್ನನುಳುಹುವದೆಂತನ್ಯಾಯ ಸುಖವುಉಣ್ಣುವರಾರಿದನುಂಡು ಬದುಕಿರುವಅಣ್ಣನ ತಿಳಿಯಲು ಗುರುವೆ ಗತಿ ಕಂಡ್ಯಾ 7ವಂದಿಸಿಯೂಳಿಗಗೈವಲ್ಲಿಯಲಸದೆದಂದುಗ ಸುಖಕಾಗಿ ದಾರಿದೆಗೆಯದೆಒಂದಾಗಿ ಯೆನ್ನೊಳಿದ್ದರೆ ನನ್ನ ಸುಖವ ನಾಹೊಂದಲು ನಿನಗಾನಂದವಪ್ಪುದೆ ಕೇಳು 8ಮರುಗಿ ಮನದಿ ನಮ್ಮ ಮರವೆಯಾಟವ ಕಂಡುತಿರುಪತಿ ವೆಂಕಟರಮಣನು ತಾನೆಗುರುವಾಸುದೇವಾರ್ಯನಾಗಿಹನಾತನಚರಣವ ಮರೆಯೊಕ್ಕು ಬದುಕುವ ನಡೆಬೇಗ 9ಕಂ||ಜೀವನ ನುಡಿಯನು ಲಾಲಿಸಿಭಾವದಿ ಸರಿಬಂದ ಬಗೆಯ ಕಾಣದೆ ಗರ್ವದಿತಾವೊಲಿವರೆ ಮನಬಾರದುನೀವೊಬ್ಬನೆ ಸಾಧಿಸೆನೆ ಮನ ಕೆರಳಿ ನುಡಿದುದೂ
--------------
ತಿಮ್ಮಪ್ಪದಾಸರು
ಸನ್ಮಾರ್ಗ ಸನ್ಮಾರ್ಗಯಿದು ಪ ಮನ್ಮಥ ಜನಕನ ಮನದಿ ಭಜಿಸುವುದು ಅ.ಪ ಕರ್ತ ನೀನು ಹರಿಭೃತ್ಯನಾನು ಯೆಂ- ದತ್ಯಂತ ಮನೋಹರುಷದಿ ಕುಣಿವದು 1 ಪದುಮ ನಾಭನಿಗೆ ಪೂಜೆಯೆಂದರಿವುದು 2 ಛಳಿಮಳೆಗಾಳಿ ಬಿಸಿಲುಗಳೊಳಗೆ ಶ್ರೀ ವಿಭೂತಿ ತಿಳಿಯುವುದು 3 ಕರೆಕರೆ ಸಂಸಾರದ ಭಾರದೆ ತಾ ಮರೆಯದೆ ನಿರತವು ಹರಿಗರ್ಪಿಸುವುದು 4 ಪಾಮರಜನದೊಳು ಸೇರದೆ ಶ್ರೀಗುರು- ರಾಮ ವಿಠ್ಠಲನ ನಾಮ ಜಪಿಸುವುದು 5
--------------
ಗುರುರಾಮವಿಠಲ
ಹರಷದಿ ತಾ ಸಖಿ ತ್ವರದಿ ಆರುತಿಯ ದ್ವಿರದ ವರದ ಶಿರಿನರಹರಿಗೆ ಪ ನಿಗಮ ತಂದವಗೆ ನಗಧರ ಕ್ರೋಢಗೆ ಮಗುವಿನ ಸಲಹಿ ಜಗವ್ಯಾಪಿಸಿದಗೆ ಭೃಗುಜಾ, ರಘುಜಾ ವ್ರಜಜಾರ್ತಿ ಹರಣ ವಿಗತವಸನ ತುರುಗನೇರಿದಗೆ 1 ಗರುಡ ಗಮನಗೆ ಶರಧಿಶಯನಗೆ ಸುರನದಿ ಪಿತ ಭೂಸುರ ಪ್ರಿಯಗೆ ಅರುಣಾ, ಚರಣಾ ಕರುಣಾಕರಮಂ- ದರಧರ ಶರಣರ ಪೊರೆವ ಸಿರಿವರಗೆ 2 ಛಳಿಮಳೆ ಸಹಿಸುತ ಛಲದಲಿಧೇನಿಪ ಬಲುವಿಧ ಭಕ್ತಾವಳಿ ಹೃನ್ಮಧ್ಯದಿ ಪೊಳೆವಾ, ನಲಿವಾ ಕಳೆವಾಘವ ಭೂ-ವಲಯದಿ ಕಾರ್ಪರ ನಿಲಯ ನರಹರಿಗೆ 3
--------------
ಕಾರ್ಪರ ನರಹರಿದಾಸರು