ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸನ್ಮಾರ್ಗ ಸನ್ಮಾರ್ಗಯಿದು ಪ ಮನ್ಮಥ ಜನಕನ ಮನದಿ ಭಜಿಸುವುದು ಅ.ಪ ಕರ್ತ ನೀನು ಹರಿಭೃತ್ಯನಾನು ಯೆಂ- ದತ್ಯಂತ ಮನೋಹರುಷದಿ ಕುಣಿವದು 1 ಪದುಮ ನಾಭನಿಗೆ ಪೂಜೆಯೆಂದರಿವುದು 2 ಛಳಿಮಳೆಗಾಳಿ ಬಿಸಿಲುಗಳೊಳಗೆ ಶ್ರೀ ವಿಭೂತಿ ತಿಳಿಯುವುದು 3 ಕರೆಕರೆ ಸಂಸಾರದ ಭಾರದೆ ತಾ ಮರೆಯದೆ ನಿರತವು ಹರಿಗರ್ಪಿಸುವುದು 4 ಪಾಮರಜನದೊಳು ಸೇರದೆ ಶ್ರೀಗುರು- ರಾಮ ವಿಠ್ಠಲನ ನಾಮ ಜಪಿಸುವುದು 5
--------------
ಗುರುರಾಮವಿಠಲ