ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಡಿಯಬೇಕು ಶ್ರೀ ಕೃಷ್ಣನ ತುಡುಗತನವ ಧ್ರುವ ಕಡಿಯಗುಡದೆ ವೈವನು ಕೆನಿಮೊಸರ ತುಡುಗತನವನು ಮಾಡುವ ಬಲು ಹೆಸರ ಅಡಗಿಹ ಠಾವನೆ ತಾನುಸರ ಮಾಡಿ ತಾ ಕುಸರ 1 ಬಿಡಬಾರದು ಕಣ್ಣಿಲೆ ಕಟ್ಟಿ ಬಿಡಿಸಿಕೊಂಬುವ ಇವ ಬಲು ಜಗಜೆಟ್ಟಿ ಅಡಗಿಸಿಕೊಬೇಕು ಘಟ್ಟಿವಿಡಿದು ಮನಮುಟ್ಟಿ 2 ಸಾಧಿಸಿ ಸದ್ಗುರುದಯ ಕರುಣದಲಿ ಭೇದಿಸಿ ಹಿಡಿಯೊ ಮಹಿಪತಿ ಸುಮನದಲಿ ಒದಗಿಟ್ಟುಕೊ ನೀ ಹೃದಯದಲಿ ಇದೇ ನೋಡನುದಿನಲಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು