ಒಟ್ಟು 16 ಕಡೆಗಳಲ್ಲಿ , 14 ದಾಸರು , 16 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಉಡುಪಿಯ ಅನಂತೇಶ್ವರ) ಚಿಂತಾಂಬುಧಿ ನಿ:ಶೇಷ ವಿಶೇಷಾನಂತೇಶ್ವರ ಕರುಣಾಂಬುಧಿಯೇ ಮನದಿರವೆಂತಿಹುದೆನಗೆಂಬುದ ದೊರೆಯೆ ಪ. ಸಂತತ ಸಂಸ್ಕøತಿ ಚಕ್ರದಿ ತಿರುಗುವ ಭ್ರಾಂತ ಜನರಿಗೀ ಜಗದಲ್ಲಿ ಸಂತತಿ ಸಂಪತ್ಪ್ರಮುಖ ಸುಖಾಶಾ ತಂತುಬಂಧ ಬಿಟ್ಟಿಹುದೆಲ್ಲಿ ಅಂತರಂಗ ಭಕ್ತರ ತಾನಾಗಿಯೆ ಸಂತೈಸುವ ಮಹ ಬಿರುದೆಲ್ಲಿ ಮನೋಗತವೆಂತಿಹುದೆಂಬುದ ನೀ ಬಲ್ಲಿ 1 ನಿನ್ನೊಲುಮೆಯಲೀ ಪರಿಪೂರಿಸಿಕೊಂಡಿಹ ಕಥೆಗಳನು ತೋರಿದಂತೆ ಪೇಳಿರುವುದನು ತೋರು ತಡೆಯದಿರು ತತ್ವವನು2 ಸಾಂದ್ರಸುಧಾಕರ ಸೇಚನದಿ ಸಾಂದ್ರ ನಿನ್ನ ಕರುಣಾರಸದಿ ಸಕಲೇಂದ್ರಿಯ ತೃಪ್ತಿಯಬಡಿಸುತಲಿ ಧರೇಶ ನೀ ತ್ವರಿತದಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅರುಣೋದಯಕೆ ಮುಂಚೆ ಬಲು ಕತ್ತಲಂತೆ ಪ ಸಿರಿ ಬರುವುದಕೆ ಮುಂಚೆ ಮುಖ ಸುತ್ತು ಜನಕೆ ಅ.ಪ ಹೊಟ್ಟಿ ಹಸಿದರೆ ಅನ್ನ ಬಹಳ ರುಚಿಯಂತೆ ಕೆಟ್ಟು ಬದುಕುವ ಮನುಜ ಬಲು ಘಟ್ಟಿಯಂತೆ ಸಿಟ್ಟು ಮಾಡುವ ಮನುಜ ಕೊನೆಗೆ ಕುರಿಯಂತೆ ಬಿಟ್ಟಿ ಬಯಸುವ ನರನು ಬಲು ಮೋಸವಂತೆ 1 ಸುಳ್ಳು ಹೇಳುವ ನರಗೆ ಪರದಾಟವಂತೆ ಜಳ್ಳುರಾಶಿಯ ನೋಡೆ ದೊಡ್ಡಗಿರಿಯಂತೆ ಕಳ್ಳ ಒಳಗಿರಲಲ್ಲಿ ಶಾಂತಿಯಿಲ್ಲಂತೆ ಕುಳ್ಳ ಹೋರಾಡಿದರೆ ಜಯವಿಲ್ಲವಂತೆ 2 ಭಾರಿ ಮಳೆ ಸುರಿಯಲಿರೆ ಬಹಳ ಬಿಸಿಲಂತೆ ಊರು ಸೇರುವ ಮುನ್ನ ಬಹಳ ದಣಿಯಂತೆ ಕೀರುತಿಯ ಪಡೆಯುವಗೆ ಬಹು ಶತ್ರುವಂತೆ ಮೂರು ಜ್ಞಾನಿಗಳಿರಲು ಭಾರಿ ಸಭೆಯಂತೆ 3 ಮುಳ್ಳಿರುವ ಗಿಡಗಳಲಿ ಬಹು ಪುಷ್ಪವಂತೆ ಹಳ್ಳದಲಿ ಸಿಗುವ ಜಲ ಬಹಳ ರುಚಿಯಂತೆ ಹಳ್ಳಿಗಾರನ ಸತ್ಯ ಬಹಳ ಒರಟಂತೆ ಎಳ್ಳು ಕಾಳುಗಳು ಶನಿಯ ಓಡಿಸುವುದಂತೆ 4 ಮುಟ್ಟಲಾಗದ ನಾಯಿ ದಾಸಾನುದಾಸ ಶ್ರೇಷ್ಠರೆಂದರಿತಿರುವರೆಲ್ಲ ಬಲು ಮೋಸ ಧಟ್ಟನೆ ಹೊಳೆಯುವಗೆ ಬಲು ಮನವಿಕಾಸ ಬಿಟ್ಟಿರುವ ಮನುಜನಿಗೆ ಜಗದಿ ಸುಖವಾಸ 5 ಮುದಿತನವು ಭೂಷಣವು ಸ್ಥಾನವಿರುವವರಿಗೆ ಕುದಿಯುವುದೆ ಭೂಷಣವು ಕ್ಷೀರಜಲದಲ್ಲಿ ಹೆದರುವುದೆ ಭೂಷಣವು ದುಷ್ಟಸಂಗದಲಿ ಗದಗದವೆ ಭೂಷಣವು ಭಕ್ತಿರಸದಲ್ಲಿ 6 ತನ್ನ ತಾ ಶೋಧಿಸಲು ಬಲು ದುಃಖವಂತೆ ಅನ್ಯರನು ಶೋಧಿಸಲು ಸಂತೋಷವಂತೆ ಕನ್ನಡಿಯ ನೋಡದಿರೆ ಬಲು ಚೆಲುವನಂತೆ ಕನ್ನಡಿಯ ನೋಡಿದರೆ ತಾನಳುವನಂತೆ 7 ನಗರ ಸುಂದರಲ್ಲಂತೆ ಬಚ್ಚಿಟ್ಟ ಧನವು ತಾ ಕದ್ದವನಿಗಂತೆ ಸ್ವಚ್ಛ ಬಡತನದವಗೆ ಬಲು ಭಕುತಿಯಂತೆ ಬಿಚ್ಚೊಲೆ ಗಿರಿಜೆಗತಿ ಪ್ರಿಯವಸ್ತುವಂತೆ 8 ಗುಂಡು ಬ್ರಾಹ್ಮಣ ಬರಲು ಅಪಶಕುನವಂತೆ ಹೆಂಡದಾ ಪೀಪಾಯಿ ಬಲು ಶಕುನವಂತೆ ಮಂಡೆ ಬೋಳಿರುವವಳು ಬರಬಾರದಂತೆ ತೊಂಡು ಸೂಳೆಯು ಬರಲು ಬಹಳ ಶಕುನವಂತೆ 9 ಖ್ಯಾತಿ ಬಾರದು ನರಗೆ ಬದುಕಿರುವ ತನಕ ಗೋತ ಹೊಡೆದವನು ಬಲು ಗುಣಶಾಲಿಯಂತೆ ನೀತಿ ಹೇಳುವ ಸ್ಥಳದಲೊಬ್ಬರಿಲ್ಲಂತೆ ಕೋತಿ ಕುಣಿಯುತಿರಲು ನೂರು ಜನರಂತೆ 10 ಬಹು ಧನಿಕ ಬಲು ಬಲಗೆ ಮಕ್ಕಳಿಲ್ಲಂತೆ ದಹಿಸುತಿಹ ದಾರಿದ್ರಗೆ ವರ್ಷಕೊಂದಂತೆ ಅಮೃತ ಸಮವಂತೆ ಸಿಹಿಯಾದ ಕ್ಷೀರ ಮಕ್ಕಳಿಗೆ ಬೇಡಂತೆ 11 ಸಾಲಿಗ್ರಾಮ ತೊಳೆಯಲತಿ ಬೇಸರಂತೆ ಸಾಲು ಎಮ್ಮೆಯ ತೊಳೆಯಲಿ ಉತ್ಸಾಹವಂತೆ ಶೀಲವಾಡುವ ನುಡಿಗೆ ಸಂದೇಹವಂತೆ ಗಾಳಿ ಸುದ್ದಿಗಳೆಲ್ಲ ಬಲು ಸತ್ಯವಂತೆ 12 ಒಳಿತವನು ಜಗದಲ್ಲಿ ತಲೆ ಎತ್ತನಂತೆ ಕಲಿಪುರುಷನಂಥವನು ಬಲು ಮೇಲೆಯಂತೆ ಹುಲಿ ಚಿರತೆ ಕರಡಿಗಳ ಬಲಿಯ ಕೊಡರಂತೆ ಗೆಳತಿ ಮಾರಿಗೆ ಕುರಿಯ ಬಲಿಯೆ ಬೇಕಂತೆ 13 ಅತಿ ಚೆಲುವೆ ಸತಿಯಲ್ಲಿ ಹಿತವಿಲ್ಲವಂತೆ ಗತಿಗೆಟ್ಟ ನಾರಿಯಲಿ ಅತಿ ಮೋಹವಂತೆ ಇತರ ಜನರೇಳಿಗೆಗೆ ಹೊಟ್ಟಿಯುರಿಯಂತೆ ಪ್ರತಿಕ್ಷಣವು ತನಗಾಗಿ ಹಂಬಲಕೆಯಂತೆ 14 ಭೂಮಿ ಎಲ್ಲವು ಇನ್ನು ಉಳುವಾತಗಂತೆ ಭೂಮಿಯೊಡೆಯಗೆ ದೊಡ್ಡನಾಮ ಬಿತ್ತಂತೆ ರಾಮರಾಜ್ಯದಿ ಕಾರು ಓಡಿಸುವವಗಂತೆ ಆ ಮದುವೆ ಕನ್ಯೆಯು ಪುರೋಹಿತಗಂತೆ 15 ಬಕಳಿಸುವ ನಾಯಕರೆ ಸರಕಾರವಂತೆ ಪ್ರಕೃತಿ ನಡೆನುಡಿ ನೀತಿಗೆ ಧಿಕ್ಕಾರವಂತೆ ಸುಖದ ಅನುಭವ ಜನಕೆ ಕುದುರೆ ಕೊಂಬಂತೆ ಮುಖವಿಲ್ಲ ಕಣ್ಣಿಲ್ಲ ಸುಖರಾಜ್ಯವಂತೆ 16 ಚಂದ್ರಲೋಕಕೆ ಪಯಣ ಕಾದಿರುವುದಂತೆ ಮುಂದಲ್ಲಿ ನೆಲಕೆ ಬಲು ಕಟ್ಟು ನಿಟ್ಟಂತೆ ಮುಂದರಿದ ಜನಕಲ್ಲಿ ಸ್ಥಾನವಿಹುದಂತೆ ಹಿಂದುಳಿದ ಗುಂಪಿಗವಕಾಶವಿಲ್ಲಂತೆ 17 ಪುಷ್ಪಾಕ್ಷತೆಯ ಪೂಜೆ ಗೋಮಾತೆಗಂತೆ ಶುಷ್ಕ ತೃಣವನಕೆಲ್ಲ ಮಳೆಗಳ ಕಂತೆ ನಿಷ್ಫಲದ ಗಿಡಬಳ್ಳಿ ತೋಟದಲ್ಲಂತೆ ಪುಷ್ಕಳದ ಫಲ ವೃಕ್ಷಗಳು ಸೌದೆಗಂತೆ 18 ಬರಿಯ ಪಾತ್ರೆಗಳಲಿ ಬಹಳ ಸದ್ದಂತೆ ಅರಿಯುವಜ್ಞಾನಿಗಳು ತಲೆಹರಟೆಯಂತೆ ಅರಿತವನು ನುರಿತನಾದರು ಬೇಡವಂತೆ ಬದಿಯ ಬಹು ದಡ್ಡನಿಗೆ ಮಾರ್ಯಾದೆಯಂತೆ19 ರೈಲು ಉರುಳಿಸೆ ರಾಜ್ಯಕಧಿಕಾರಿಯಂತೆ ಥೈಲಿಯಿದ್ದರೆ ಖೂನಿ ಮಾಡಬಹುದಂತೆ ಶೈಲವೇರುವ ನರನು ಮೇಧಾವಿಯಂತೆ 20 ನರಬಲಿಯ ಕೊಡುವವರು ಹಿರಿಯ ಜನರಂತೆ ಹಿರಿಯ ಮಾರ್ಗದ ಜನರು ಧರೆ ಭಾರವಂತೆ ಗುರುಗಳಿಗೆ ತಿರುಮಂತ್ರ ಹೇಳಬೇಕಂತೆ ಸುರಿಸುವರು ಧನಧಾನ್ಯ ಸುರಿಮಳೆಗಳಂತೆ21 ಮಂತ್ರವಾದಿಯು ನೋಡಿ ಗ್ರಹಭಯವಿದೆಂದ ಯಂತ್ರದಲಿ ನೋಡಿದವ ಹೃದಯರೋಗೆಂದ ಚಿಂತಿಸುತ ಪಂಡಿತನು ಮೋಹಿನಿಯಿದೆಂದ ಅಂತ್ಯದಲಿ ರೋಗಿ ತನಗೊಂದಿಲ್ಲವೆಂದ 22 ಶಿಂಗಪ್ಪ ಕದ್ದು ತಾ ಜೈಲು ಸೇರಿದನು ಕಾಂಗ್ರಪ್ಪ ಜೈಲಿನಿಂದ ಬಂದು ಕುಳತಿಹನು ಹೇಂಗ್ರಪ್ಪ ಬದುಕುವುದು ಎಂದು ಫಲವೇನು ನುಂಗ್ರಪ್ಪ ಸುಖ ದು:ಖಗಳನು ಸಹಿಸುತಲಿ 23 ವೇದಾಂತಿಯಾಗೆನಲು ಹೊಟ್ಟೆಗಿಲ್ಲಂತೆ ಕಾದಾಡಿ ಬದುಕಲನುಭವವಿಲ್ಲವಂತೆ ಓದು ಬದುಕೆಂದರವಕಾಶವಿಲ್ಲಂತೆ ಆದುದಾಯಿತು ಹರಿಗೆ ಶರಣು ಹೊಡಿ ತಮ್ಮ25 ಯಮನು ತಲ್ಲಣಿಸುವನು ಸ್ಥಳವಿಲ್ಲವಂತೆ ಸುಮನಸರು ಆಳುತಿಹರು ಜನವಿಲ್ಲವಂತೆ ಕಮಲೆರಮಣಗೆ ಬಂತು ಪೀಕ್ಲಾಟವಂತೆ ಎಮಗೆಂಥ ಕಷ್ಟವು ಪ್ರಸನ್ನ ಹರಿಯಿರಲು26
--------------
ವಿದ್ಯಾಪ್ರಸನ್ನತೀರ್ಥರು
ಇದೇ ಭಕ್ತವರ್ಯನ ಲಕ್ಷಣ ಪಾವನವಿದು ಕಾಣಾ ಪರಮಾತ್ಮನ ರೂಪ ಚರಾಚರದ ಜಗದಲ್ಲಿ 1 ಇದೇ ಪರಿಯಲಿ ಸ್ವರೂಪದಲ್ಲಿ ಜಗವೆಲ್ಲಾ ಕಾಂಬಾ ಆತ್ಮರೂಪ ಭಗವಂತನೆ ಸತ್ಯ ಮಿಕ್ಕವೆಲ್ಲಾ ಮೀಥ್ಯ ಲಕ್ಷ್ಯವೆಲ್ಲಾ ತನ್ನೋಳ ತಿರುಗಿಸಿ ಆನಂದವ ಪಡೆವ ಕಾಣುವನಿವ ಪರಮಾತ್ಮ ಸರ್ವಾತ್ಮ 2 ಸಂಸಾರದಲಿ ವಿಷಯದ ಭೋಗ ಪ್ರಾರಬುಧದಲಿಪಡೆ ಮಾಯೆಮಾತ್ರವಿದು ಎನ್ನುತ ತಿಳಿವಾ 3 ನಿಜಾಸಕ್ತಿ ಪಡೆಯದಲೇ ನಿರುತ ತನ್ನಯ ಹೃದಯಾಂತ ಪರಮಾತ್ಮನ ನೆನೆವ ದೇಹಾದಿಗಳ ಈ ಪರಿಣಾಮಗಳಿಗೇ ಮೋಹಗೊಳಲಾರ ಕಾಮನೆಯಾ ಬೀಜಾಂಕುರವೆಂದೂ ನಾಟದು ಇವನಲ್ಲೀ ಕಾಣುವನಿವ ಪರಮಾತ್ಮ ಸರ್ವಾತ್ಮ ಪ್ರಭೂಶಂಕರನ ರೂಪಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಈ ಸಾಧನೆಯ ಈ ಧರ್ಮಗಳ ಗುರಿಯೊಂದÉ ಕೇಳಿರಿ ಇಂದೇ ಪರಮಾತ್ಮಪ್ರಾಪ್ತಿ ಇದರಿಂದೇ ಪ ನಿಷ್ಕಾಮ ಕರ್ಮವ ಮಾಡುವನು ನಿಷ್ಕಾಮ ಬಕುತಿಯ ಮಾಡುವದು ಆ ವೈರಾಗ್ಯ ಆ ಸುವಿವೇಕ ಮನದಲ್ಲಿ ಮೂಡುವದಿಂದೇ ಪರಮಾತ್ಮಪ್ರಾಪ್ತಿ 1 ವಿಷಯಾಭಿಲಾಷಾ ಬಿಡುವುದಕೆ ಮನದಲ್ಲಿ ಸ್ಥಿರತೆಯು ನಿಲುವುದಕೆ ಗುರು ಬೋಧೆಯಲಿ ಮನ ರಮಿಸುತಲಿ ಜಿಜ್ಞಾಸೆ ಮೂಡುವದಿಂದೇ ಪರಮಾತ್ಮಪ್ರಾಪ್ತಿ 2 ಹಗುರಾದ ಸಾಧನವಿದಕೆಲ್ಲ ಜಗದಲ್ಲಿ ಇರುವ ಜನಕೆಲ್ಲ ಅಘನಾಶಕ ಶ್ರೀಶಿವಶಂಕರನೋಳ್ ಘನಪ್ರೇಮ ಬಕುತಿಯಿದೋಂದೇ ಪರಮಾತ್ಮಪ್ರಾಪ್ತಿ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಎಸಳುಗಂಗಳ ಕಾಂತಿ ಹೊಳೆವ ಮುಖದ ಢಾಳಶಶಿಮುಖಿ ಚೆಲುವಿಕೆಯ ಪ ಕುಸುಮನಾಭನ ಕೂಡೆನೆಂಬೋ ಭರದಿಂದಬಿಸಿ ಹಾಲನೆ ಹೊತ್ತಳು ಅ ಮಾನಿನಿ ರನ್ನೆಕೇಳೀದ್ದು ಕೊಡುವೆನೆಂದ 1 ಕಮ್ಮನೆ ಕಾದಿಹ ಎಮ್ಮೆಯ ಹಾಲಿಗೆಒಮ್ಮನ ಹೊನ್ನೆಂದಳುಬೆಣ್ಣೆಗಳ್ಳ ಕೃಷ್ಣ ಕಣ್ಣು ಸನ್ನೆಯ ಮಾಡಿನಿನ್ನ ಮೋಹಿಪೆನೆನ್ನಲು 2 ಕೆಟ್ಟೆ ಕೆಟ್ಟೆನೊ ಕೃಷ್ಣ ಇತ್ತಲೇತಕೆ ಬಂದೆಅತ್ತೆ ಮಾವಂದಿರುಂಟುಥಟ್ಟನೆ ಕಂಡರೆ ಬಿಟ್ಟು ಬಿಡರು ನಿನ್ನಮುಟ್ಟದಿರೆಂದಳಾಕೆ3 ಎಂದ ಮಾತಿಗೆ ನಾನಂಜುವನಲ್ಲವೆಇಂದಿನ ದಿನದೊಳಗೆಮಂದಿರದೊಳಗಿದ್ದು ಮರುದಿನ ಪೋಗೆಂದುಮುಂಗೈಯ ಪಿಡಿದುಕೊಂಡ4 ಗಂಡನುಳ್ಳವಳ ಮುಂಗೈಯ ಪಿಡಿವಂಥಪುಂಡುತನವು ಸರಿಯೆಪುಂಡರೀಕಾಕ್ಷಿ ಕೇಳ್ ದುಂಡುಮಲ್ಲಿಗೆ ಹುವ್ವಕಂಡರೆ ಬಿಡುವರೇನೆ 5 ಬಾಳುವ ಹೆಣ್ಣಿನ ತೋಳನೆ ಪಿಡಿವುದುನ್ಯಾಯವೇನೋ ನಿನಗೆಫುಲ್ಲನಯನೆ ಕೇಳೆ ಆಯ್ದ ಮಲ್ಲಿಗೆ ಹುವ್ವಬಲ್ಲವರು ಬಿಡುವರೇನೆ6 ಬೈಗಾಯಿತು ಬೈದಾರು ಮನೆಯಲ್ಲಿಬಿಡು ಬಿಡು ಎಲೊ ಗೋವಳಐಗಾರ ನಾ ಕಾಣೆ ಜಗದಲ್ಲಿ ಜೀವರಹಿಡಿದು ಬಿಡುವನಲ್ಲವೆ 7 ಸಕ್ಕರೆ ಚಿಲಿಪಾಲು ಅರ್ಥಿ ಆಯಿತೆಂದುಎತ್ತಿಕೊಂಡು ಕುಡಿದಅಕ್ಕರೆಯಿಂದಲಿ ಬೇಡು ನೀ ಕೇಳಿದವಸ್ತುವ ಕೊಡುವೆನೆಂದ8 ವಸ್ತುವೇತಕೆ ಪರವಸ್ತುವೆ ನಾ ನಿನ್ನಮೆಚ್ಚಿ ಬಂದೇನೆಂದಳುಭಕ್ತರ ಸಿರಿಕೃಷ್ಣ ಕುಕ್ಷಿಯೊಳಗೆ ಇಟ್ಟುರಕ್ಷಿಸು ಎಂದಳಾಕೆ 9
--------------
ವ್ಯಾಸರಾಯರು
ಏನಿದ್ದರೇನು ಈ ಮಾನವನಿಗೆ ಜಗದಲ್ಲಿ ದಾನವಾಂತಕನ ಗುಣಜ್ಞಾನವನು ಪೊಂದದಲೆ ಪ ಕಾನನದಿ ಬೆಳಗುತಿಹ ಬೆಳದಿಂಗಳಂದದಲಿ ಜ್ಞಾನ ಹೀನನಿಗೆ ಈ ಮಾನವನ ಜನುಮ ಅ.ಪ ದಾನ ಮಾಡಿದರೇನು ಧರ್ಮ ಮಾಡಿದರೇನು ಸ್ನಾನ ಮಾಡಿದರೇನು ನದಿನದದಲಿ ಜ್ಞಾನವಿಲ್ಲದ ಕರ್ಮಗಳ ರಚಿಸಲೇನುಂಟು ವಾನರಗೆ ಕರದೊಳಿಹ ಮಣಿಗಳಿಂದೇನು ಫಲ 1 ಯಾತ್ರೆ ಮಾಡಿದರೇನು ಕಾಶಿ ರಾಮೇಶ್ವರದ ಕ್ಷೇತ್ರಗಳ ವಾಸದಿಂದೇನು ಫಲವು ಚಿತ್ರ ಚರಿತನಲಿ ದೃಢಭಕುತಿಯನು ಪೊಂದದಿರೆ ನೇತ್ರರಹಿತನಿಗುಂಟೆ ಚಿತ್ರಗಳ ಫಲವು 2 ಹೊನ್ನಿನ ಮದದಿಂದ ಹೆಮ್ಮೆಗೋಸುಗ ಬಹಳ ಅನ್ನಛತ್ರಗಳ ರಚಿಸಿದರೇನು ಫಲವು ತನ್ನವರ ದೃಢಭಕುತಿಯನ್ನರಿವ ಸತತ ಪ್ರ ಸನ್ನ ಹರಿದಾಸರಿಗೆ ಇನ್ನೇನು ಬೇಕು 3
--------------
ವಿದ್ಯಾಪ್ರಸನ್ನತೀರ್ಥರು
ಕಣ್ಮುಟ್ಟ ನೋಡಿರಯ್ಯಾ ಈ ಜಗದಲ್ಲಿ ಮನ್ಮಥ ಪಿತÀ ರಂಗನ ಪ ಶಂಖ ಚಕ್ರಗಳನ್ನು ಕೈಯೊಳಿರಿಸಿಕೊಂಡು ಬಿಂಕÀದಿ ಮೆರೆವ ಗೋವಳರಾಯ ಹರಿಯ ಪಂಕಜ ಲೋಚನ ಪರಮ ಪುರುಷ ನಿಃ ಶಂಕದಿ ಭಕ್ತರ ಪೊರೆವ ಮಾಧವನ 1 ಮಂದರಧರ ಮಧುಸೂದನಾಚ್ಯುತನ ಕಂದನ ಸಲಹಿದ ನರಸಿಂಹ ಹರಿಯ ನಂದಗೋಕುಲದಲ್ಲಿ ಮೆರೆದ ಶ್ರೀಲೋಲನ ಅಂದದಿ ದಾಸರ ಪೊರೆವ ಶ್ರೀಧರನ 2 ಪೂರ್ವದಿ ಶರಣರ ಪೊರೆದ ಶ್ರೀ ಕೃಷ್ಣನ ಗರ್ವರಹಿತನಾಗಿ ಬೆಳಗುವ ಹರಿಯ ಸರ್ವೇಶ ತಾನಿದ್ದು ಭಜಕರ ಸಲಹಲು ದೂರ್ವಾಪುರದಿ ನಿತ್ತ ಚನ್ನಕೇಶವನ 3
--------------
ಕರ್ಕಿ ಕೇಶವದಾಸ
ಕೂಗಿದರು ಒಳಗೇ ಕದವ ತೆಗೆಯಂದು ಪ ಸತಿಯರು ತಾವು ಆಗ ಆನು- ನಿನ್ನ ನಾವು ಬಲ್ಲೆವು 1 ಮೆಲ್ಲನÉ ಬಾರೆ ನೀ ನಿಜವ ಮಾಡೀಗ 2 ಮನೆಯೊಳಿರಲು ' ಮಾರಜನಕನೆಂಬೊದು ಬಲ್ಲೆನೆ 3 ಇನ್ನು ನೀರೆ ನಿನ್ನ ಗಂಡನೆ ನಾನು ಓಯನ್ನ ಪ್ರಾಣಸಖಿ ಬೇಗ ಬಂದು ಕದವ ತೆಗೆ ಈಗ 4 ಎಲ್ಲಿಯವನು ಭಂಡತನ ಬಿಡುಇನ್ನು 'ಓಹೆನ್ನೆ ವಿಠಲ’ ಮಾಡುವದು ಇದು ರೀತಿಯಲ್ಲವು 5 ಚಂಡಿನಾಟ ಬಾ ಸಭಯದಿ ಓಯನ್ನ ಪ್ರಾಣಸಖಿ ಚಲುವೆ ಹೊರಗೆ ಬಾರದಿರುವೇ 6 ಅಷ್ಟು ಜಗದಲ್ಲಿ ಬಲ್ಲಿ 'ಓಹೆನ್ನೆ ವಿಠಲ’ ಚೇಷ್ಟಿಮಾಡದಲೆ ನಡಿಯಯ್ಯಾ 7 ದೇವರನ್ನು ಕೂಡಿತೆ ಓಯನ್ನ ಪ್ರಾಣಸಖಿ ಈಗ ಆಣಿ ಮಾಡಿಸಿ ಕೇಳು 8 ಅತ್ತಿಯನ್ನು ಕೂಡಿದವನೆ ಉತ್ತಮನೆ ನೀನು ಇನ್ನು ಎತ್ತಲ ಆಣೆಯು ನಿನಗೇ 'ಓ ಹೆನ್ನೆ ವಿಠಲ’ ಸತ್ಯವಂತನಾಗಿ ಹೇಳುವಿ 9 ಕಾಕು ಹೆಣ್ಣು ನಿನಗೆ ಥರವೆ ಓಯನ್ನ ಪ್ರಾಣಸಖಿ ಕಣ್ಣಿಲೆ ನೋಡದೆ ಕರಿಯೆ 10 ಪರಮ ಪರುಷನುಳ್ಳವರು ಪರಮಪುರುಷನ ಪಡೆವಂಥ ದೂರನಡಿಯೆ ಇಲ್ಲಿ ಎನಯ್ಯ 11 ಇನ್ನು ಸ್ವಲ್ಪ ನಿನಗೆ ತಿಳಿಯದೆ ಓಯನ್ನ ಪ್ರಾಣಸಖಿ ಸಾಗಿ ಬಂದು ನೋಡೆ ಬೇಗನೆ 12 ಏನು ಆಶ್ವರ್ಯವು ನಿನಗೆ ನಡಿಯಯ್ಯಾ 13 ಇನ್ನು ನಿನಗೆ ಇನ್ನಾದರೆ ಮನಸಿಗೆ ತಾರ 14 ನಿನಗೆ ಅರುವು ಇರಲು ಸೋಗು ಮಾಡಿನಡಿಯಯ್ಯಾ 15 ತಿಳಿಸುವೆನು ಮನಸು ಇಟ್ಟು ಮನ್ನಿಸೆನ್ನನು ಓಯನ್ನ ಪ್ರಾಣಸಖಿ ಮಾಡಬೇಡ ಹೀಗೆಯನ್ನನು 16 ಮರ್ಮವು ತಿಳಿಯದೆ 'ಒಹೆನ್ನೆವಿಠಲ’ ಮೋಸಮಾಡ ಬಂದಿ ನಡಿಯಯ್ಯಾ 17 ಹೇಳಿ ಎಲ್ಲರು ಹಿಗ್ಗುವ ವೇಳ್ಯೆದಿ 'ಓ ಯನ್ನ ಪ್ರಾಣಸಖಿಕೇಳಿದ ಮಾತನು ಹೇಳುವೆ 18 ಬಂದು ವಾಸವಾಗಿ ಹೇಸದೆ ಏನೆಂದು ಬಂದೆ 19 ಮಾನ ಪತಿಯೆಂಬ ಮಾರ್ಯದೆ ಓಯನ್ನ ಪ್ರಾಣಸಖಿ ಮನಸಿನಲ್ಲಿ ಏನು ಇಲ್ಲವು 20 ಮುನಿವಳಗೇ ಮಾನಪತಿ ಪುರುಷನೇನಯ್ಯಾ 21 ಮಾಡಿಕೊಳ್ಳದವನಿಗೆ ಧೈರ್ಯ ವಿಲ್ಲವೆ 22 ಅಂಜಿಕೆ ಏನಯ್ಯಾ 'ಓಹೆನ್ನೆ ವಿಠಲ’ ಧೈರ್ಯವು ಯಾಕೆ ನಿನಗಯ್ಯ 23 ಬಂದು ಇಷ್ಟು ತಡ ನಿನ್ನ ಗಂಡನೆನಾನು24
--------------
ಹೆನ್ನೆರಂಗದಾಸರು
ಖೋಡಿಗುಣ ಜಗದಲ್ಲಿ ಹೂಡಿ ನೀ ನಲಿವಾಗ ನಾಡೆದ್ದು ಕುಣಿಯುವದೊ ನಾಸ್ತಿಕಾದಲ್ಲಿ ಪ ಮಾಡಿ ದುಪ್ಕ್ರಿಯ ಜಾಲ ಮತಿಭ್ರಷ್ಟತನದಲ್ಲಿ ನೋಡರೂ ಸನ್ಮಾರ್ಗ ಗಾಡಿಕಾರನೆ ಹರಿಯೆ ಅ.ಪ ಗತಿಸಿದಾ ತನುಗಳಲಿ ರತಿವಿಷಯಗಳ ಮಾಡಿ ಮತಿ ಮನಸು ದುರ್ಭಾವಗಳಲಿ ನೆಯದು ಮತ್ರ್ಯರನು ನೋಡಲತಿ ಭೀತಿ ಆಹುದೊ ಮನಕೆ 1 ನಾನಾಭಾವವ ಪೊಂದಿ ಹಾನಿವಶರಾಗಿಹರು ಜ್ಞಾನನಿಧಿ ತವಕರುಣಕೆರವಾಗಿ ನಡೆದು ನಾನಾ ದುಃಖದಿ ನರಳಿ ನರಕ ಯಾತನೆಗೊಂಬ ಜ್ಞಾನಹೀನರ ನೋಡಿ ನಡುಗುವೆನೊ ಹರಿಕಾಯೊ 2 ಕ್ವಚಿತು ಸಜ್ಜನ ತಾವು ಶುಚಿ ಮನದಿ ನಿನ್ನಲ್ಲಿ ರುಚಿಗೊಳಲು ಎತ್ತೆನಿಸೆ ಎದೆ ಬಿಚ್ಚುವಂತೆ ಹೆಚ್ಚಿ ಆದಿವ್ಯಾಧಿ ನುಚ್ಚು ಮಾಳ್ಪದೊ ಮನಸು ಸಚ್ಚಿದಾನಂದ ಹರಿ ಸಜ್ಜನಾಧಾರಿ ಧೊರಿ3 ವಿಧಿ ಲಕ್ಷ್ಮಿ ಸನ್ನತ ಮಹಿಮ ಬಂದ ಭಯಗಳು ನಿನ್ನ ಇಚ್ಛೆಯಿಂದ ಬಂದದಲ್ಲದೆ ಬೇರೆ ಒಂದು ಕಾರಣ ಕಾಣೆ ಸಿಂಧು ಕೊಡುವವ ನೀನೆ4 ತಾಮಸರ ವಿಕಾರ ದುಃಖರಸÀ ಸೃಜಿಸುವುದು ಸೌಮ್ಯ ಜನ ಸದ್ಭಾವ ಸುಖಸಾರ ಸೃಷ್ಟಿ ಕಾಮಧೇನು ಜಯೇಶವಿಠಲಯ್ಯ ನಿನ್ನ ಮಹ ನೇಮ ಇಂಥಾದ್ದೆ ಪತಿತ ಪಾವನ ಪಾಹಿ 5
--------------
ಜಯೇಶವಿಠಲ
ಭವ ಕಾಮಹರ ನಿನ್ನಂಘ್ರಿ ತಾಮರಸಯುಗಳ ಭಜಿಸುವೆ | ಭಜಿಸಿ ಬಿನ್ನೈಸುವೆ ಶ್ರೀ ಮನೋಹರನ ತೋರಯ್ಯ 1 ಕೃತ್ತಿವಾಸನೆ ಎನ್ನ ಚಿತ್ತದಲಿ ಹರಿಯಪದ ನಿತ್ಯದಲಿ ಭಜಿಪ ಮತಿ ನೀಡೊ | ಮತಿ ನೀಡೊ ಪಾರ್ವತಿ ಚಿತ್ತದೊಲ್ಲಭನೆ ನಮಿಸುವೆ 2 ಸುವರ್ಣಮುಖರಿಯ ತೀರದಲಿ ನೆಲಸಿರುವೆ ಶ್ರೀ ವರಾಹನಂಘ್ರಿ ಭಜಿಸುತ್ತ | ಭಜಿಸುತ್ತ ನೆಲಸಿರುವ ಪಾವನರೂಪ ಸಲಹಯ್ಯ 3 ಕಾಳಸ್ತಿನಿಲಯನೆ ಪೇಳಲಿನ್ನೇನು ನಾ ತಾಳಲಾರೆನು ಈ ಭವಬಂಧ | ಭವಬಂಧ ಬಿಡಿಸುವ ವ್ಯಾಳ ಶಯನನ್ನ ತೋರೈಯ್ಯ 4 ಭಕ್ತರಿಗೊಲಿದು ಅಪಮೃತ್ಯು ಪರಿಹರಿಸಿದೆ ಸತ್ಯ ಸಂಕಲ್ಪ ನಿನ್ನಂಘ್ರಿ | ನಿನ್ನಂಘ್ರಿ ಕಮಲಗಳ ಚಿತ್ತದಲಿ ತೋರಿ ಸಂತೈಸು 5 ಮನಕೆ ಗುರು ನೀನಹುದು ಮನವ ಹರಿಯಲಿ ನೆಲಸೊ ವೈರಿ ಮಮತೆಯಿಂ | ಮಮತೆಯಿಂದಲಿ ನಿತ್ಯ ಮನಶುದ್ಧಿಗೈದು ಕಾಯಯ್ಯ 6 ಶಂಖಚಕ್ರವ ಪಿಡಿದ ಸಂಕರ್ಷಣನ ರೂಪ ನಿತ್ಯ ಭಜಿಸುವೆ | ಭಜಿಸುವೆ ಕೈಲಾಸ ಅಂಕದಲಿ ನೆಲಸಿ ಹರುಷದಿ 7 ನರಸಿಂಹ ರೂಪವನು ಸ್ಮರಿಸುತ್ತ ಮೈಮರೆವೆ ಉರುತರ ಭಾವ ಭಕ್ತಿಯಲಿ | ಭಕ್ತಿಯಲಿ ಭಜಿಪ ನಿನ್ನ ಸ್ಮರಿಸುವರ ಭಯವ ಹರಿಸುವೆ 8 ಶ್ರೀ ರಾಮನಾಮವನು ಪ್ರೇಮದಿಂದುಮೆಗರುಹಿ ಆರಾರು ಅರಿಯದಾನಂದ | ಆನಂದವಿತ್ತೆ ಭವ ತಾರಕವೆಂದು ಕರುಣಾಳೂ 9 ಅಜನ ಭ್ರೂಮಧ್ಯದಲಿ ಜನಿಸಿದೆಯೊ ಜಗದಲ್ಲಿ ಭಂಜನ | ಭಂಜನಗೊಳಿಸಿದೆ ತ್ರಿಜಗದಲಿ ನಿನಗೆ ಸರಿಯುಂಟೆ 10 ಶೇಷ ಪರ್ಯಂಕನಿಗೆ ಹಾಸಿಗೆಯಾಗಲು ತೋಷದಲಿ ತಪವಾಚರಿಸಿದೆ | ಚರಿಸಿ ಸಾಧಿಸಿದೆ ನೀ ಶೇಷ ಪದವಿಯನು ತ್ರಿನೇತ್ರ 11 ಶರಧಿ ಮಥಿಸಲು ಗರಳ ಉದ್ಭವಿಸಿ ಭಯವಾಗೆ | ಭಯವಾಗಿ ಪರಿಹರಿಸಿ ಗರಳವನೆ ಕುಡಿದೆ ಶ್ರೀ ಕಂಠ 12 ಅಸುರರ ವಂಚಿಸಿದ ವಶವಲ್ಲದ ಹೆಣ್ಣು ವಶವಾಗಲೆಂದು ಹಾರೈಸಿ | ಹಾರೈಸಿ ಬಳಲುತಿರೆ ಬಿಸಜಾಕ್ಷ ನಿನ್ನ ಸಲಹಿದ 13 ತಾರಕಾಸುರನಿಂದ ಘೋರಪಡುತಿರೆ ಜಗವು ಮಾರ ಪೂಅಸ್ತ್ರ ಎಸೆಯಲು | ಎಸೆಯಲು ದಹಿಸಿ ಕು- ಮಾರನನು ಪಡೆದೆ ಗಿರಿಜೇಶ 14 ಸ್ತುತಿಪ್ರಿಯ ನಿನ್ನ ನಾ ಸ್ತುತಿಸಲಾಪೆನೆ ಮಂದ ಮತಿ ಎಂದು ನೀನೆ ಸಂತೈಸೊ | ಸಂತೈಸಬೇಕಿನ್ನು ಮತಿಯಿತ್ತು ಹರಿಯ ಪದದಲ್ಲಿ 15 ಶಿರದಲ್ಲಿ ಗಂಗೆ ಚಂದ್ರನ ಮೆರೆಯುವ ಉರಗ ಭೂಷಣನೆ ಕೇಳಿನ್ನು | ಕೇಳಿನ್ನು ಎನ್ನ ಮನ ಮರೆಯದೆ ಹರಿಯ ನೆನೆಯಲಿ 16 ವಿಷ್ಣು ಭಕ್ತರೊಳಗೆ ಶ್ರೇಷ್ಠ ನೀನಹುದಯ್ಯ ಜಿಷ್ಣುವಿಗೆ ಮೆಚ್ಚಿ ಧನುವಿತ್ತೆ | ಧನುವಿತ್ತೆ ಗೋಪಾಲ- ಕೃಷ್ಣವಿಠ್ಠಲನ ತೋರಯ್ಯ 17
--------------
ಅಂಬಾಬಾಯಿ
ಮೂರ್ತಿ ಸತ್ಯ ಸಂಧರ ಕೀರ್ತಿ ಜಗದಲ್ಲಿ ಉದ್ಧರರ ಪ. ಪದ್ಮನಾಭ ಮಾಧವ ಮಾಧವ ಅಕ್ಷೋಭ್ಯರ ಚರಣವವಿದ್ಯುಕ್ತದಿಂದ ಬಲಗೊಂಬೆ ರನ್ನದ 1 ಪಾದ ಪದ್ಮವ ಮೊದಲೆ ಬಲಗೊಂಬೆ ರನ್ನದ 2 ರಘುನಾಥ ರಘುವರ್ಯ ರಘೋತ್ತಮ ತೀರ್ಥರ ವೇದವ್ಯಾಸ ವಿದ್ಯಾಧೀಶರೆ ರನ್ನದ ವೇದವ್ಯಾಸ ವಿದ್ಯಾಧೀಶರ ಚರಣವ ಜಗದ ಗುರುಗಳನು ಬಲಗೊಂಬೆ3 ಉತ್ತಮ ವೇದನಿಧಿ ಸತ್ಯವೃತ ತೀರ್ಥರ ಸತ್ಯನಿಧಿ ಸತ್ಯನಾಥರ ರನ್ನದ ಸತ್ಯನಾಥರ ಚರಣವ ಭಕ್ತಿಂದ ಮೊದಲ ಬಲಗೊಂಬೆ 4 ಸತ್ಯಾಭಿನವ ತೀರ್ಥ ಸತ್ಯಪೂರ್ಣ ತೀರ್ಥರಸತ್ಯವಿಜಯ ಸತ್ಯಪ್ರಿಯರ ರನ್ನದ ಸತ್ಯಪ್ರಿಯರ ಚರಣವ ಅತ್ಯಂತವಾಗಿ ಬಲಗೊಂಬೆ 5 ಸತ್ಯಬೋಧ ಸತ್ಯಸಂಧ ಸತ್ಯವರಚಿತ್ತಶುದ್ಧಿಯಲೆ ಬಲಗೊಂಬೆಚಿತ್ತಶುದ್ಧಿಯಲೆ ಸಭೆಯೊಳುಸತ್ಯವಾಕ್ಯಗಳ ನುಡಿಸಲು ರನ್ನದ6 ಸತ್ಯವರ್ಯರೆಂಬ ಉತ್ತಮ ಗುರುಗಳ ಹಸ್ತಕಮಲದಲೆ ನಮಿಸುವೆ ರನ್ನದ ಹಸ್ತಕಮಲದಲೆ ನಮಿಸುವೆ ಜಗದೊಳುಮೆರೆವ ಸತ್ಯಧರ್ಮರನು ಬಲಗೊಂಬೆ 7 ಪಾದ ಪೊಂದಿದ್ದ ಗುರುಗಳು ವಿದ್ಯುಕ್ತದಿಂದ ಬಲಗೊಂಬೆ ರನ್ನದ ವಿದ್ಯುಕ್ತದಿಂದ ಬಲಗೊಂಬೆ ಅತ್ತಿಗೆಯರ ಗೆದ್ದು ದುಂಧುಭಿಯ ಹೊಯಿಸೇವ ರನ್ನದ 8 ಯತಿ ಮುನಿರಾಯರು ಅತಿ ಭಕ್ತರಾಗಿದ್ದಅತಿಪ್ರಿಯರಾದ ಗುರುಗÀಳು ಅತಿ ಪ್ರಿಯರಾದ ರಾಮೇಶನ ಅತಿ ಭಕ್ತರ ಮೊದಲ ಬಲಗೊಂಬೆ ರನ್ನದ 9
--------------
ಗಲಗಲಿಅವ್ವನವರು
ವಿಷ್ಣುಶತಕ ಶಿರಿದೇವಿ ಹೃತ್ಕುಮುದ ಚಂದ್ರಮನೆ ಕರುಣಾರ್ಣವಾಗಣಿತ ಸದ್ಗುಣನೇ ಭಂಜನ ಮುರಾಂತಕನೇ ಪರಮಾತ್ಮ ಪಾಲಿಸು ಪರಾತ್ಪರನೇ 1 ಕಮಲಾಸನಾದ್ರಿಜೆ ಮನೋಹರ ಮು ಖ್ಯಮರಾಳಿಯಂ ಭಕುತಿಯಿಂ ಬಲಗೊಂಡು ಮ- ಹಾತ್ಮರಾದ ಗುರುಪಾದಕೆ ನಾಂ ನಮಿಸೀ ಪ್ರಬಂಧವನು ಹೇಳುತಿಹೇಂ2 ನೂರಾದ ಪದ್ಯಗಳೊಳಾಂ ಸಕಲಂ ಧಾರಾಳವಾಗಿ ತವ ಸನ್ನಿದಿಯೋಳ್ ಸಾರಂಗಳಂ ಗ್ರಹಿಸಿ ಬಿನ್ನಯಿಪೇಂ ಶ್ರಿರಾಮನೀಂ ದಯದಿ ಲಾಲಿಸಿ ಕೇಳ್ 3 ಕವಿತಾ ಧುರೀಣತೆಯು ಬಂದುದು ನಿ_ ನವ ಯುಕ್ತಿ ಚತುರತೆಗಳೊಂದರಿಯೇಂ 4 ಜೀವಕ್ಕೆ ನೀನು ಮಿಗೆ ಚಿತ್ತದಿ ಶ್ರೀ ದೇವೀ ಮನೀಷದೊಳು ಬ್ರಹ್ಮನಿಹಂ ಯಾ ವಿಶ್ವನಾಥ ಸಹ ರುದ್ರ ಮನೋ ಭಾವಂಗಳಿಂಗೊಡೆಯನಾಗಿರುವಂ 5 ಸಲೆ ಹಮ್ಮಿಗಾ ತ್ರಿಪುರ ಸಂಹರನೇ ಉಳಿದಿಂದ್ರಿಯಗಳಿಗೆ ಜಿಷ್ಣುಮುಖರ್ ಒಳಗಿದ್ದು ಒಳ್ಳಿದನು ಕೆಟ್ಟುದನೂ ಬಲವಿತ್ತು ಮಾಡಿಸುವರೈ ಹರಿಯೆ 6 ಜಲಜಾತ್ಮಜಾಭಿಮತ ಬಂಧು ಪಥಂ ಗಳು ಮೂರು ಬಗೆಯು ನೋಡಿದರೆ 7 ಮಿಗೆ ಕರ್ಮಕರ್ಮವು ವಿಕರ್ಮಗಳೂ ಜಗದಲ್ಲಿ ಎಲ್ಲರಿಗು ಮೂಲವಿದೂ ತ್ರಿಗುಣ ಪ್ರಬದ್ಧರಹ ಜೀವಗಣಾ ಖಗರಾಜ ವಾಹನನೆ ಸಾಕ್ಷಿಯು ನೀಂ 8 ಸದಸದ್ವಿವೇಕಾವನು ಕಾಣದೆ ಸ ಚಿದಚಿದ್ವಿಲಕ್ಷಣನು ನೀನೆನದೇ ಮದಗರ್ವದಿಂದ ಮೆರೆದಾಂ ಕೆಡುವೇಂ 9 ಕುಹುಕಾತ್ಮರಾದವರ ಸಂಗದಿ ಬಂ- ದಿಹ ನೋವು ನಾನಕಟ ಬಣ್ಣಿಸೇಂ10 ಅಂತವರ್ಗವಾರ್ವರು ಶರೀರದೊಳಿ ದುರ್‍ವೃತ್ತಿ ಪುಟ್ಟಿಸುತ ಕೊಲ್ಲುತಿಹರ್ ಪರಮಾತ್ಮ ನಿನ್ನವರ ಸೇರಿರುವೇಂ 11 ಮಲಮೂತ್ರ ಕೂಪವಹ ದೇಹವಿದು ಜಲಗುಳ್ಳೆ ಎಂದರಿತಡಂ ಬರಿದೇ ಕಲುಷಾತ್ಮನಾದೆ ಕರಿರಾಜವರದಾ 12 ಹಸನಾಗಿ ತೋರುತಿಹ ದುರ್ವಿಷಯಂ ಬಿಸಿನೀರು ತುಂಬಿರುವ ಬಾವಿಯಿದುಂ ಕುಸುಮಾಸ್ತ್ರನೆಂಬ ಕಡುಗಳ್ಳನು ತಾ ನೆಸಗೀ ಪ್ರವಾಹದಲಿ ನೂಕುತಿಹಂ13 ಪಾದ ಪದ್ಮಂಗಳ ನಂಬಿದೆ ವೆಂ- ಮ್ಮವಮಾನ ಮಾನಗಳು ನಿನ್ನದುದೆಂ- ದ್ವ್ಯವಸಾಯವಂತರೆ ಮಹಾತ್ಮಕರೂ 14 ಜನುಮಗಳನೆತ್ತುತಲಿ ಜೀವರು ನಿಂ ನನು ಕಾಂಬ ಯೋಚನೆ ತಿರಸ್ಕರಿಸೀ ಘನ ಕಾಮಭೋಗಗಳಪೇಕ್ಷಿಸಿತಾಂ ಧನಕಾಗಿ ದುರ್ಜನರ ಸೇವಿಸುವರು 15 ಹಿತದಿಂದ ಎಲ್ಲರಿಗೆ ನೀನೆ ಇದಂ ಮತಿಹೀನರಾದವರು ಬಾಹ್ಯರ ನಂ- ಬುತ ದುಃಖದಿಂದಲವಿವೇಕರಹರ್ 16 ಗುಣಶೂನ್ಯ ನೀನೆನುತ ಕೊಂಚ ಜನಂ ಗಣಿಸಲ್ಕಸಾಧ್ಯವಹ ವಾದಗಳಿಂ ಘನ ತರ್ಕದಿಂದ ಅನುವಾದಿಸಿ ದುರ್ ಜನ ಮುಖ್ಯರೆನಿಸುತಿಹರ್ ಭುವಿಯೊಳ್ 17 ಅನುಮಾನವೇ ತಮಗೆ ಮುಖ್ಯವೆನು- ತನುಸಾರಿ ರಾಜಸದಿ ತಾಂ ಮುಳುಗೀ ವನಜಾಕ್ಷ ಕೋರಿಕೆಗಳಿಂ ಭಜಿಪರ್ 18 ಉದರ ಪ್ರಯುಕ್ತ ಪರರಾಶ್ರಯಿಸಿ ಪದ್ಯ ಪದ್ಯ ಪೇಳಿ ಬಹುನೀಚನು ನಾ- ನುದಯಾಸಮುದ್ರರೆಲೆ ನೀವೆನುತೇ ಸುದುರಾತ್ಮರಂ ಪೊಗಳಿ ಕೆಟ್ಟೆನು 19 ಹಿತತತ್ವ ಭಾವದಲಿ ದುರ್ಜನರು ಮತಿವಂತರಂತೆ ಬಹಿಯೋಳ್ ನಟಿಸಿ ಸತಿ ಪುತ್ರ ವಿತ್ತಗಳ ಮೋಹದಲೀ ವ್ಯಥೆಪಟ್ಟು ಬಾಯ್ಬಿಡುತ ನೋಯುತಿಹರ್20 ಮೊದಲಾಗಿ ಎಲ್ಲರನು ಮಾಯದಿ ನಿ- ನ್ನುದ ರಾಖ್ಯ ವಾರಿನಿಧಿಯಿಂದಲಿ ತಾವ್ ಉದಿಸಿರ್ಪರೆಂದುಸುರುಗುಂ ಶ್ರುತಿಗಳ್ 21 ಅನುಮಾನವುಳ್ಳ ಜನಕೆಂದಿಗು ಪಾ- ಮೂರ್ತಿ ನಿನ್ನ ಘನ ಜ್ಞಾನ ಸುಖಂ ತೃಣ ಮಾತ್ರವೂ ಬರದು ಸ್ವಪ್ನದೊಳು ಜನದಲ್ಲಿ ಕೀರ್ತಿ ಬಹಿಯೊಳ್ ಬರಿದೆ 22 ಗುರುಸೇವೆಯಿಂದ ತನುದಂಡಿಸಿ ತಾ ನಿರುತಂ ಸುಶಾಸ್ತ್ರಗಳ ನೋಡುತಲಿ ಸ್ಥಿರ ಚಿತ್ತನಾಗಿ ಶ್ರವಣಾದಿಗಳಿಂ ಹರಿಭಕ್ತರಿಂದ ಕಡೆಸೇರುತಿಹಂ 23 ಕವಿಯಾದವರ್ ನಿರುತವುಂ ಮಿಗೆ ಭಾ- ಗವತಾದಿ ಗ್ರಂಥಗಳ ಸಜ್ಜನರಿಂ ಕಿವಿಯಿಂದ ಕೇಳುವುದಕಂ ಬಹು ಜ- ನ್ಮವು ಪಕ್ವವಾಗಿ ಸಲೆ ಪ್ರಾಪ್ತಿಸುಗುಂ 24 ಹರಿಕೃಷ್ಣ ಕೇಶವ ಮುಕುಂದ ನೃಕೇ- ಸರಿ ವಿಷ್ಣುವಾಮನ ತ್ರಿವಿಕ್ರಮ ಶ್ರೀ ಪದ್ಮನಾಭ ಮಧುಸೂದನ ಹೇ ಪುರಷೋತ್ತಮೌಚ್ಯುತ ಜನಾರ್ದನನೇ 25 ವಸುದೇವ ನಂದನ ಮುರಾಂತಕನೇ ಹೃಷಿಕೇಶ ನಾರೇಯಣ ಮಾಧವನೇ ಪರಿ ಪಾ- ಲಿಸುಪೇಂದ್ರ ಭಕ್ತರ ಅಧೋಕ್ಷಜನೇ 26 ಪರಮಾತ್ಮ ನೀನೆಮಗೆ ಎನ್ನುತನಂ- ಬರು ನಿನ್ನ ತಾಮಸರು ಸತ್ಯವಿದು ನೆರೆ ನೋವಿನಿಂಬಳಲಿ ತಾವ್ ಮಿಗೆ ಸಂ- ಸರಣ ಪ್ರವಾಹದೊಳು ಬೀಳುತಿಹರ್ 27 ದ್ಗುಣದಲ್ಲಿ ದುರ್ಗುಣಗಳೇ ಗಣಿಸಿ ಘನ ಮೋಹ ದುಃಖದೊಳು ಸತತ ನಿ- ನ್ನನು ಕಾಂಬ ಯೋಚನೆಯ ಬಿಟ್ಟಿರುವರ್ 28 ನ್ನನು ನಂಬಿ ನಂಬಿದಲೆ ತಾವ್ ನಿರತಂ- ಘನ ಕಾಮ ಕ್ರೋಧ ಮದ ಮತ್ಸರದಿಂ ಜನದಿಂದ ಯತ್ನವನು ಮಾಡುತಿಹರ್ 29 ದೇವಾದಿದೇವ ದಿವಿ ಭೂಮಿಗಳೋಳ್ ಭಾವ ಪ್ರಭೇದದಲಿ ಧ್ಯಾನಿಪರಿಂ- ಗೀ ವೇಷ್ಟಸಿದ್ಧಿಗಳ ನೀನೆ ಸದಾ 30 ಯೋಗಿ ಜನವಂದಿತ ಸ- ಜ್ಜನಕಲ್ಪವೃಕ್ಷ ಜಗದೇಕ ವಿಭೋ ವನಜಾಕ್ಷ ಇಂದಿರೆಯ ವಲ್ಲಭ ಬ್ರಾ- ಹ್ಮಣ ಪ್ರೀಯ ಭಕ್ತಸುಖದಾಯಕನೇ 31 ರವಿಕೋಟಿತೇಜ ರಮಣೀಯ ಕಥಾ- ತವನಾಮ ಕೀರ್ತನೆಯ ಮಾಳ್ಪರ ಪಾ- ಪವ ನೀನೆ ಓಡಿಸುವುದೇನರಿದೈ 32 ವರಾಹ ನೃಕೇ- ಸರಿ ವಾಮನಾವನಿ ಸುರೋತ್ತಮ ಭಾ- ಸ್ಕರ ವಂಶ ಚಂದ್ರವಸುದೇವಜ ಭಾ ಬುದ್ಧ ಕಲ್ಕ ವಪುಷೇ ನಮಃ 33 ಮುನಿಕರ್ದಮಂಗುದಿಸಿ ತಾಯಿಗೆ ಪಾ ವನ ರಾಜಯೋಗವನು ಬೋಧಿಸಿದೈ ಘನಯೋಗಿವರ್ಯ ಕಪಿಲಾಖ್ಯನೆನಿ- ನ್ನನು ನಂಬಿ ಪ್ರಾರ್ಥಿಸುವೆನಾನನಿಶಂ 34 ರ್ಜುನ ಕಾರ್ತವೀರ್ಯಗುಪದೇಶಿಸಿದೇ ಘನಯೋಗ ಬೋಧೆಯನು ಹೈಹಯರ್ ತಾ ವನುವಾದ ಶಿಷ್ಯರೆಲೆದತ್ತವಿಭೋ 35 ಋಷಭಾಖ್ಯನಾಗಿ ಸುತರಿಂಗೆ ಮಹಾ ಋಷಿಚರ್ಯ ಬೋಧಿಸಲವರ್ ತಿಳಿದು ದಶಯೋಗಿವಂದಧಿಕ ಎಂಬತ್ತು ಭೂ- ಮಿಸುರಕ್ರಿವೃತ್ತಿಯಲಿ ಶೋಭಿಸಿದರ್ 36 ಜಂಭ್ವಾಖ್ಯ ದ್ವೀಪದೊಳು ಖಂಡಗಳಿಂ ಅಂಭೋಜನಾಭ ತವನೇಮದಲೀ 37 ಹರಿ ನೀನೆ ಪುಟ್ಟಿಯದು ಸ್ಥಾಪಿಸಿ ದು ರ್ನರರನ್ನು ಕೊಂದು ಶರಣಾಗತರಂ ಪರಿಪಾಲಿಸುತ್ತಿರುವೆ ಸಂತತವುಂ 38 ಕಲಿಕಾಲವೀಗ ಖಳರೆಲ್ಲರು ಸ- ತ್ಕುಲದಲೆ ಪುಟ್ಟಿ ನೆರೆ ಸಾಧುಗಳಂ ಬಲುಬಾಧಿಸುತ್ತ ದುರಿತಂ ಘಳಿಸೇ ನರಕಂಗಳಲ್ಲಿ ನೆರೆಯಾಗುತಿಹರ್ 39 ಪರಮಾತ್ಮ ತತ್ವದಲಿಯೇ ಮರವು ದುರ್ವಿದ್ಯವಭ್ಯಸಿಪುದಕೆ ಮನವು 40 ಪರರನ್ನು ನೋಡಿಯವರಂತೆ ತಾ ವಿರಬೇಕೆನ್ನುತ್ತಲನಿಶಂ ಬಳಲೀ ಗುರುಯತ್ನಮಾಡಿ ವಿಫಲಾಗಲು ಶ್ರೀ ಹರಿ ನಿನ್ನದೂರುತಿರುವರ್ ದುರುಳರ್41 ಕರ್ಣ ಮುಖರಿಂದಲಿ ಸಂ ಗರದಲ್ಲಿ ಕಾದಿ ಮಡಿದಂ ಬರಿದೇ42 ಜಮದಗ್ನಿ ಪುತ್ರನಿಗೆ ಶಿಷ್ಯನು ಭೀ ಷ್ಮಮಹಾ ಪರಾಕ್ರಮಿಯು ದ್ರೋಣನುತಾಂ ಕಮಲಾಪ್ತಪುತ್ರ ಕಲಿ ಶಲ್ಯ ಮುಖ್ಯರ್ ಭ್ರಮೆಯಿಂದಲನ್ನಕಸುಗಳ್ ತೊರೆದರ್ 43 ಯಮಜಂ ವೃಕೋದರನು ಫಲ್ಗುಣನೂ ಯಮಳರ್ ತವಾಂಫ್ರಿಸ್ಮøತಿಯೇ ಬಲವಾ- ಗಿ ಮಹಾಪದಂಗಳನು ದಾಂಟಿದರೈ ಸುಮಬಾಣನಯ್ಯನೆ ಮಹಾತ್ಮರವರ್ 44 ಹರಿ ನಿನ್ನ ಡಿಂಗರಿಗರಿಗಾಶ್ರಯವೇ ವರಭಾಗ್ಯ ನಿತ್ಯಸುಖವೆನ್ನುತಲೀ ಅರಿದುತ್ತಮರ್ ಬಯಸರೆಂದಿಗು ಪಾ- ಮರರಂತೆ ತುಚ್ಛಗಳ ಸ್ವಪ್ನದೊಳು 45 ಸಲೆ ಚಿನ್ನ ಬೆಳ್ಳಿ ಬೆಲೆ ಹೆಚ್ಚು ಪಟ ಗಳ ಗೃಹಕ್ಷೇತ್ರ ಸುತದಾರ ಧನ- ಗಳ ನಿತ್ಯವೆಂದರಿದು ಲೆಕ್ಕಿಸದೇ ಜಲಜಾಕ್ಷ ನಿನ್ನ ಭಜಿಪರ್ ಸುಜನರ್ 46 ಸುಜನಾಬ್ಧಿ ಚಂದ್ರ ಸುಗುಣಾರ್ಣವ ನೀ ನಿತ್ಯ ನಿರವದ್ಯ ಸ್ವಭಾ ವಜ ಕರ್ಮದಿಂ ಸಕಲ ಪ್ರಾಣಿಗಳೂ ನಿಜಯೋಗ್ಯತೆಯಂತೆ ವರ್ತಿಪುದು 47 ಕರುಣಾನಿಧೇ ಕಮಲಲೋಚನನೆ ಸು- ರರಾಜ ಸೋದರನೆ ಭಾವಜನೈ ಯರಮಾಧಿನಾಥ ಯದುವಂಶ ಭೂ ರಥಾಂಗ ಪಾಣಿಯೆ ಜನಾರ್ದನನೇ 48 ರಘುವಂಶಕೇತು ರವಿಮಂಡಲದೋಳ್ ಭಗವನ್ನಿರಂತರದಿ ನೀನಿರುತೆ ಜಗಕೆಲ್ಲ ಕಾಲದನುಸಾರದಿ ನೀ ನಘನಾಳಿಯಿಂದ ಮಳೆಯಂ ಕೊಡುವೇ 49 ವಿಭುದಾಗ್ರಗಣ್ಯರಹ ಜ್ಞಾನಿಗಳೂ ಶುಭವನ್ನು ಲೋಕಕೆ ಸದಾಚರಿಸಿ ನಭ ಭೂಮಿ ಮಧ್ಯದಲಿ ಕೀರ್ತಿ ಸೌ- ರಭವಾಗಿ ಸ್ಥಾಪಿಸಿ ವಿಮುಕ್ತರಹರ್ 50 ಯೋಗ ಪ್ರವರ್ತನೆಯಲೇ ಸುಖಿಸಿ ರೋಗಾದ್ಯುಪದ್ರಗಳು ಇಲ್ಲದಲೇ ರಾಗಾದಿ ದೋಷಗಳ ಸುಟ್ಟಿರುವರ್ 51 ಮನವಾಕ್ಕು ಕಾಯಗಳೊಳೊಂದೆ ವಿಧಂ ಋಣಮುಖ್ಯ ಸೂತಕಗಳಿಲ್ಲದೆಲೇ ಗುಣವಂತರೆನ್ನಿಸಿಯೇ ಶೋಭಿಸುತಾ ಜನದಲ್ಲಿ ಮೌನದಲಿ ವರ್ತಿಸುವರ್ 52 ನರರೊಳ್ ದಿವೌಕಸರು ಪುಟ್ಟುತಲೀ ಹರಿಭಕ್ತಿಯುಕ್ತರೆನಿಸುತ್ತಲಿಸ- ತ್ವರದಿಂದ ಸಾಧನವ ಮಾಡುತಲೀ<
--------------
ಗುರುರಾಮವಿಠಲ
ವೈದಿಕ ಧರ್ಮಧ್ವಜ ಫಡಫಡಿಸಲ ಗಗನದೊಳೆತ್ತರದಿವೈದಿಕ ತತ್ವಜ್ಞಾನ ಪ್ರಕಾಶವು ಪಸರಿಸಲೀ ಜಗದಿ 1ಜ್ಞಾನ ಭಕ್ತಿ ವೈರಾಗ್ಯ ಧೈರ್ಯ ಔದಾರ್ಯ ತಪಶ್ಚರ್ಯದಿನ ದಿನ ಬೆಳೆಯಲಿ ದಾನಧರ್ಮಗಳು ದಯಾ ಸತ್ಯ ಶೌರ್ಯ 2ದುಷ್ಟ ಶತ್ರುಗಳ ಸದ್ದು ಅಡಗಲಿ ಜಗನಿರ್ಭಯ'ರಲಿಭ್ರಷ್ಟಾಚಾರವು ನಿರ್ಮೂಲಾಗಲಿ ಸತ್ಯಕ್ಕೆ ಜಯ'ರಲಿ 3ವರ್ಣಾಶ್ರಮಗಳ ಧರ್ಮದ ಮರ್ಮವು ತಿಳಿಯಲಿ ಜಗಕೆಲ್ಲಾಕರ್ಮಾ ಕರ್ಮ 'ಕರ್ಮ ಮರ್ಮವನು ಅರಿಯಲಿ ಜನರೆಲ್ಲಾ 4ಜಯ ಜಗದೀಶ್ವರರೆಂಬ ನಿನಾದವು ತುಂಬಲಿ ಜಗದಲ್ಲಿಜಯ ಭೂಪತಿ'ಠ್ಠಲ ಸರ್ವೋತ್ತಮ ಜಯಹರಿ ಎಂದೆನಲಿ 5
--------------
ಭೂಪತಿ ವಿಠಲರು
ಸರಾಗದಿಂದೆನ್ನ ನೀಕ್ಷಿಸೈ ಪರಾಪರೇಶನೆ ಪರಾತ್ವರನೆ ನೀ-ಪರಾಕು ಮಾಡದೆ ಪಾಲಿಸೈ ಪ ವಿರಾಜಮಾನ ಸುವೀರಾಜವಾಹನ ವಿರಾಟ್ಪುರುಷ ವಿಶ್ವಂಭರ ಕರಾರವಿಂದದಿ ಕರಾದಿಗಳ ಪಿಡಿದರಾತಿ ಮರ್ದನ ಧುರಂಧರ 1 ಧರಾಧರಣಿಪಟು ಧರಾಧರಾಧಿಪ ಧುರಾವಹನ ದುರ್ಧರ್ಷಣ ಧರಾಮರರ ಬಹು ಪರಾಭವವ ಬಲು ಸರಾಗದಲಿ ನಿರ್ವಾಪಣ 2 ಜರಾಮರಣಗಳ ನಿರಾಕರಿಸಿ ವಸುಂಧರಾ ಭರಣ ಗುಣಭೂಷಣ ಸುರಾರಿ ಮರ್ದನ ಶರಾಸನಾಂಚಿತ ಕರಾನಿಹಿತ ಮಣಿಕಂಕಣ 3 ಶಿರೀಷ ಕುಸುಮದ ಸರೀಸುಕೋಮಲ ಶರೀರ ನಿನ್ನದು ಈಪರಿ ಪರಿಯದೆಂತುಟೋ ಕೇಳ್ಹರಿ 4 ಧಯಾನಿಧಿಯೇಧರ್ಮಾತ್ಮನೆ ನಿಯಾಮಿಸುವ ನಿರ್ಮಾಯನೆ 5 ವರೇಣ್ಯಸಜ್ಜನ ಶರಣ್ಯಪುಲಿಗಿರಿಯರಣ್ಯಮಧ್ಯ ವಿರಾಜಿತ ಹಿರಣ್ಯಯಾಂಬರ ಹಿರಣ್ಯಕಾಂತಕ ಹಿರಣ್ಯಗರ್ಭಸುಪೂಜಿತ6 ವ್ಯಾಘ್ರನೆಂಬುವತ್ಯುಗ್ರದೈತ್ಯನಂ ನಿಗ್ರಹಗೈದ ಮಹಾತ್ಮನೆ ಶೀಘ್ರದಿ ಭಕ್ತಾನುಗ್ರಹಮಾಳ್ಪಸುರಾಗ್ರಗಣ್ಯ ಪುಣ್ಯಾತ್ಮನೆ 7 ನಿರುತವು ಸನ್ನುತಿಗೈವರೆ ಪರಿಪರಿ ನಿನ್ನನೆ ಪೊಗಳ್ವರೆ 8 ನೀಜಗದಲ್ಲಿ ಒಲಿದಿರ್ಪೆಯ ನೀ ಕೈಗೊಂಬೆಯ 9 ನಿಜಪರದೊಲುನೀ ನಜಭವಮುಖಸುರವ್ರಜ- ಗೋಚರನಾಗಿಲ್ಲವೈ ತ್ರಿಜಗಕ್ಕೆ ಗೋಚರನಾಗಿಹೈ 10 ನಿತ್ಯತೃಪ್ತನೀನತ್ಯುತ್ತಮ ನಿಜ ಭೃತ್ಯನಮತ್ರ್ಯನು ಮೋದದಿ ನಿತ್ಯದಿ ನಿನ್ನತ್ಯುತ್ತಮ ಪದದೊಳು ಭಕ್ತಿಯ ಪಾಲಿಸು ನೇಮದಿ 11 ಫಣಿಭೂಧರದೊಳು ನಿರುತವು ಭಕ್ತರ ಕರುಣದಿ ಪೊರೆಯುವ ಧೊರೆ ಸಿರಿವಲ್ಲಭವರದ ವಿಠಲ ಕರುಣಾಕರ 12
--------------
ಸರಗೂರು ವೆಂಕಟವರದಾರ್ಯರು
ಜೋ ಜೋ ಜೋ ಅಂಜನಿ ಕಂದಾ ಜೋ ಜೋಸಂಜೀವನ ತಂದಾ | ಜೋ ಜೋ ಸಾಧುಸಜ್ಜನ ವೃಂದಾ | ಜೋ ಜೋ ವಾಯು ಬಾಲಮುಕುಂದಾ ಜೋ ಜೋಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಭೂತೈದೆಂಬೊ ಕನ್ನಡಿ ಮಂಟಪದೊಳಗೆ |ಜ್ಯೋತಿ ದೀಪದ ಭಾಸ ಉನ್ಮನಿಯೊಳಗೆ |ಪ್ರೀತಿಂದ ಪ್ರಣವೆಂಬ ಮೇಲ್ಕಟ್ಟ ಕೆಳಗೆ ರಕ್ತಶ್ವೇತಶ್ಯಾಮನೀಲಖಿಡಕಿಯೊಳಗೆ ಜೋ ಜೋ1ಪಂಚ ಭೂತವೆಂಬ ಮಂಚವ ನಿಲಿಸಿ |ಪಂಚವಿಂಶತಿ ತತ್ತ್ವ ನವಾರ ಬಿಗಿಸಿ | ಪಂಚಕರಣವೆಂಬೋ ಹಾಸೀಗಿ ಹಾಸಿ | ಪಂಚ ಪ್ರಾಣವೆಂಬೋಲೇಪ ತೀವಿಸಿ ಜೋ ಜೋ2ಆರು ಚಕ್ರ ಮೀರಿದ ಸ್ಥಾನದಲ್ಲಿ |ಘೋರಘೋರಘೋಷ ಉನ್ಮನಿಯಲ್ಲಿ |ತುರ್ಯಾತೀತ ಶಂಕರ ತಾನೇ ಅಲ್ಲಿ |ಸೂರ್ಯಚಂದ್ರ ಅಗ್ನಿ ಮೂಜಗದಲ್ಲಿ ಜೋ ಜೋ3
--------------
ಜಕ್ಕಪ್ಪಯ್ಯನವರು