ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ. ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1 ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2 ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3 ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4 ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5 ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6 ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7 ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8 ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9 ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10 ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11
--------------
ಗುರುಗೋವಿಂದವಿಠಲರು
ಶ್ರೀ ಪ್ರಣವನಾರಾಯಣ ಕೃಷ್ಣ ಆಗಮನ ಸ್ತೋತ್ರ45ಬಾರೋ ಬಂದಿರೋ ಶ್ರೀಶ | ಶ್ರೀಧರಾ ಸಮೇತ ಬಂದಿರೋ ಈಶ ||ವಿಭುವೇ ಗುಣಾರ್ಣವ ಅಮಿತ ಪೌರುಷ ಸ್ವವಶ | ಅಮಿತಾರ್ಕ ಕಾಶ ||ಸರಸಿಜಾಸನ ಶಿವ ವಿಷಾದಿ ಅಮರವಂದ್ಯನೆಪರಮಭಾಗವತೇಷ್ಟ ಚಿಂತಾಮಣಿಯೇ ಜಯ ಜಯಶರಣು ಪಾಲಿಪ ಪ್ರಭುವೇ ನಾರಾಯಣನೇ ಕೃಷ್ಣನೇ || ಬಾರೋ|| ಪಪ್ರಣವಾಷ್ಠಾಕ್ಷರ ದಿವ್ಯ | ಆರುಅಕ್ಷರಮಂತ್ರ ಸುಪ್ರತಿಪಾದ್ಯವಿಶ್ವಾದಿ ಎಂಟು ರೂಪಚಿನ್ಮಯಕಾಯ|ಅರಿದರಧೃತಹಸ್ತಹಸ್ತವರದಅಭಯ| ಜಯ ಜಯತುಜೀಯಶ್ರೀಧರಾ ಸಮೇತನಾಗಿಹ ಪ್ರೋದ್ಯ ಪೂಷ ಸ್ವಕಾಂತಿ ತೇಜನೇಕೃದ್ಧವೀರ ಮಹಾದ್ಯುಸಹಸ್ರ ಉಲ್ಕ ನಿಜ ಸಚ್ಛಕ್ತ ಲೀಲೆಯಿಂಸರ್ವದಾ ಸರ್ವತ್ರ ಸರ್ವರೋಳ್ ಇದ್ದು ನಿಯಮಿಪ ವಿಭುವೇ ಪರತರ|ಕೃಷ್ಣರಾಮ ನೃಸಿಂಹ ವರಹನೇ ವಿಷ್ಣುವೇ ಪರಂಜ್ಯೋತಿ ಪರಂಬ್ರಹ್ಮ |ವಾಸುದೇವನೆ ಏಕದಶ ಶತಾನಂತರೂಪನಿರ್ದೋಷಗುಣನಿಧೇ |ಎನ್ನ ಪಾಲಿಪ ಪ್ರಭುವೇ ಶ್ರೀಶನೇ ವೇದಹನುಮಶಿವಾದಿ ವಂದ್ಯನೇ || ಬಾರೋ 1ಪ್ರಚುರಅಮಿತ ಆನಂದ ಅವಿಕಾರ ಚಿನ್ಮಯ ಸರ್ವಚೇಷ್ಟಕಕರ್ತಚೇತನಾಚರ ಸರ್ವವಶಿ ಜಗದ್ಭರ್ತಾ ಸೌಂದರ್ಯಸಾರನೆಇಂದ್ರಮಣಿ ದ್ಯುತಿವಂತ ಸೌಭಾಗ್ಯದಾತ |ಚಕ್ರಧರವರ ಅಭಯಹಸ್ತನೇ ಅಜಿತಅಜಜಗದೇಕವಂದ್ಯನೆಉರುದಯಾನಿಧೆ ಭೈಷ್ಮೀ ಸತ್ಯಾರೊಡನೆ ಬಂದು ನಿಂತಿದ್ದಿಲ್ಲಿಪರಮಲಾಭವು ಎನಗೆ ಸುಹೃದನೆ ಭೀಮದ್ರೌಪದಿ ಪಾಂಡವ ಪ್ರಿಯವಿದುರಗೊಲಿದನೆ ದೇವಕೀಸುತ ಸರ್ವಾಭೀಷ್ಟಪ್ರದ ಉದಾರನೆಉತ್ತರಾಸುಧಾಮಉದ್ಧವಗೋಪಿಜನ ಅಕ್ರೂರ ವರದನೇಹಲಧರಾನುಜ ಸುಭದ್ರೆ ಅಣ್ಣ ಷಣ್ಮಹಿಷಿರಮಣನೆ ಶರಣು ಸಂತತ || ಬಾರೋ 2ಸ್ವಾಮಿವೇಂಕಟರಮಣ | ಕುಲದೇವ ಸರ್ವೋತ್ತಮನೆ ಭಕ್ತಪ್ರಸನ್ನಪದ್ಮಾವತೀಶ ಕರುಣಿ ಪಾಲಿಸೋ ಎನ್ನ | ಶ್ರೀವತ್ಸ ಅರಿದರಾಅಭಯವರಕರ ಘನ್ನ | ಅಮಲೇಂದು ವದನಂ ||ಮುಗುಳುನಗೆ ಕಾರುಣ್ಯ ನೋಟವು ಜಗವನಳೆದ ತೀರ್ಥಪದಯುಗತಿರುಮಲೇಶ ಮದ್ಗೇಹನಿಲಯನೆ ರಂಗ ವರದ | ಲಕ್ಷ್ಮೀನೃಸಿಂಹನೆಪೂರ್ಣ ಪ್ರಮತಿಗಳಿಂದ ಪೂಜಿತ ಬೆಣ್ಣೆ ನರ್ತನ ಕೃಷ್ಣರಾಮನೇಇನನಿಗಮಿತ ಸ್ವಕಾಂತಿ ತೇಜನೇ ಕರ್ಣಕುಂಡಲೋಜ್ವಲ ಕಿರೀಟಿಯೆ |ಅನ್ನವಾಹನತಾತಪ್ರಸನ್ನ ಶ್ರೀನಿವಾಸನೆ ಪೂರ್ಣಕಾಮನೇ |ಘನದಯಾಂಬುಧೇ ದೇವ ದೇವಶಿಖಾಮಣಿಯೆ ಬಾ ||ಬಾರೋ ಬಂದಿರೋ ಶ್ರೀಶ|| 3
--------------
ಪ್ರಸನ್ನ ಶ್ರೀನಿವಾಸದಾಸರು