ಒಟ್ಟು 42 ಕಡೆಗಳಲ್ಲಿ , 27 ದಾಸರು , 42 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಈ) ಲೋಕನೀತಿಯನ್ನು ಕುರಿತ ಕೃತಿಗಳು ಏನಯ್ಯ ದೊರೆಯೆ ನಿನಗಾನಂದವೆ ದೊರೆಯೆ ಪ ಮಾನಿತ ಜನರವಮಾನವ ನೋಡದೆ ಹೀನ ಜನರ ನುಡಿ ನೀನಿಲಿದಾಲಿಪುದು ಅ.ಪ ಜಾತಿಧರ್ಮವಿಲ್ಲಾ ಶಾಸ್ತ್ರದ ರೀತಿ ನಡತೆಯಿಲ್ಲ ಮಾತಿದು ಪುಸಿಯಲ್ಲಾ ಮಾನದ ಭೀತಿಯು ಮೊದಲಿಲ್ಲಾ ನೀತಿಯನರಿಯದ ಕೋತಿಗಳಂದದ ಜಾತಿಯ ಜನರೊಳು ಮಾತಿನವಾಶಿಯಿಲ್ಲ 1 ದುರ್ಜನರು ಬೆರೆದು ದೋಷ ವಿವರ್ಜಿತರನ್ನು ಜರಿದು ಲಜ್ಜೆಯ ನೆರೆತೊರೆದು ಗರ್ವದಿ ಗರ್ಜಿಸಿ ಮೊರೆದು ಈ ಜಗದೊಳಗಿಹ ಸಜ್ಜನರಗಿಎ ಕುಲ ಕಜ್ಜಳರವಮತಿಗುಜ್ಜುಗಿಸುತ್ತಿಹ 2 ಗಂಡಬಿಟ್ಟಿಹರು ಗರತಿಯ ಕಂಡು ನಗುತಿಹರು ಮಿಂಡರ ಬೆರೆದಿಹರು ಮೇಲತಿ ದಿಂಡೆಯರಾಗಿಹರು ಭಂಡತನದಿ ಪರಗಂಡಸರೊಳು ಸಮ- ದಂಡೆಯೆನಿಸಿ ಬಲು ಚಂಡಿಸುತಿರ್ಪರೋ 3 ಕೇಳು ಹಂದೆಯಾಳು ಕ್ಲೇಶವ ಪೇಳಲು ಮತಿತಾಳು ಕೀಳುಜನರ ಬಾಳು ಕಿವಿಯಲ್ಲಿ ಕೇಳಬಹುದೆ ಪೇಳು ಕಾಳಮೂಳಿಯರ ಮೇಳದಿ ಹಿಗ್ಗುವ ಬಾಳುಗೇಡಿ ಜನರೊಳಿಗ ಬಲುಘನ 4 ಧರೆಯೊಳಧಿಕವಾದ ಶ್ರೀಪುಲಿಗಿರಿಯೊಳು ನೆಲೆಯಾದ ಸಿರಿವರ ನಿಜಪಾದ ಸೇವೆಯ ಕರುಣಿಸು ಬಹುಮೋದ ಶರಣಾಭರಣ ನಿಜಕರುಣವ ತೋರಿಸು ವರದವಿಠಲ ದೊರೆ ವರದದಯಾನಿಧೆ 5
--------------
ವೆಂಕಟವರದಾರ್ಯರು
ಅಧ್ಯಾಯ ಮೂರು ಜನ್ಮನಾಕಾಶನಂದಾ ವಸುಧಾನಾಗ್ರಜಾ ನಿಜಾನ್ ಪದ್ಮಾವತೀ ಪದ್ಮಭವಾ ವನಕ್ರೀಡಾರತ್ಯಾವತಾತ್ ವಚನ ಸಂದರ್ಶನಾದದ್ದು ತಂದೆಯ ಕಥೆಸ್ಮøತಿಗೆ ತಂದು ಅದು ವಿಸ್ತಾರದಿಂದ ಪೇಳುವೆನು ಸುಧರ್ಮನೆಂದು ಇರವನು ಅವಗೆ ಮುಂದೆ ಇಬ್ಬರು ಸುತರು ಚಂದದಲಿ ಆಕಾಶನೆಂದು ತೊಂಡಮಾನಸೆನಿಸುವನು 1 ವ್ಯಾಕುಲದಿ ಹೀಗೆ ಇಲ್ಲೆಂದು ಶೋಕದಲಿ ಕಣ್ಣೀರು ಹಾಕಿ ಸ್ಮರಿಸಿದ ದೇವಲೋಕ ಗುರುವ ಯಾಕೆ ಸ್ಮರಿಸಿದೆ ಎನ್ನನೀಕಾಲದಲಿ ಏನುಬೇಕು ಬೇಡಲೋನೀನು ನಾ ಶೋಕವನು ನುಡಿದಾ2 ಪಾಪಿಷ್ಠ ಏನು ಇದ್ದೇನು ನಾನು ಮಾಡಿದ ಪೇಳೋ ಹೀನಬುದ್ಧಿ ಕೊಲಿಸಿದೆನೇನು ಏನು ಕಾರಣ ಸಂತಾನ ಕಣ್ಣಿಲಿ ಕಾಣೆ ನಾನು ಅಯ್ಯಯ್ಯೊ 3 ಮಕ್ಕಳಾಡಿದರೆ ಬಹಳಕ್ಕರತೆ ಜೀವಕ್ಕೆ ಮಕ್ಕಳಿಲ್ಲದೆ ಮತ್ತೆ ಮಿಕ್ಕರಸ ಮಕ್ಕಳಿÀಂದಲೆ ಹಬ್ಬ ಹುಣ್ಣಿಮೆಯು ಉಲ್ಲಾಸ ಮಕ್ಕಳಿಂದಲೆ ಮುಂಜಿ ಮದುವೆಯ ಧರೆಯೊಳಗಿಲ್ಲ ಮಕ್ಕಳಿಂದಲೆ ಇಹವು ಮಕ್ಕಳಿಂದಲೆ ಪರವು ಮಕ್ಕಳಿಲ್ಲೆನ್ನ ಭಾಗ್ಯಕ್ಕೆ ಅಯ್ಯಯ್ಯ 4 ನೋಡಿಲ್ಲ ಮಕ್ಕಳಾಡಿದ ಮಾತು ನಕ್ಕು ಕೇಳಿಲ್ಲ ನಾ ಮಕ್ಕಳಿಂದಲೆ ಕೂಡಿ ಅಕ್ಕರದಿ ಉಣಲಿಲ್ಲ ಮಕ್ಕಳನು ಎತ್ತಿ ಮುದ್ದಿಕ್ಕಿದವನಲ್ಲ ಮಕ್ಕಳಿಲ್ಲದ ಮನುಜ ಲೆಕ್ಕದಾವದರೊಳಗೆ ಬೆಕ್ಕು ಮೊದಲಾದಂಥ ಮಿಕ್ಕ ಪ್ರಾಣಿಗಳೆಲ್ಲ ಮಕ್ಕಳಾಡಿದ ಬಹಳ ಚಕ್ಕಂದವನು ನೋಡಿ ಸೌಖ್ಯ ಪಡುತಿಹದಯ್ಯ ಧಿಕ್ಕರಿಸು ಎನ ಜನ್ಮ ಅದಕ್ಕಿಂತ ವ್ಯರ್ಥ 5 ಮುನ್ನ ನಮ್ಮೊಳಗಾರು ಉಣ್ಣದಲೆ ಈ ಬದುಕು ಮಣ್ಣು ಪಾಲಾಗುವದು ಘನ್ನ ಈ ಚಿಂತಿಯಲಿ ಬಣ್ಣಗೆಟ್ಟೆನು ಕುದ್ದು ಸುಣ್ಣಾದೆನಯ್ಯ ಉಭಯಕುಲ ತಾರಿಸುವಂಥ ನಾನು ಅಣ್ಣತಮ್ಮರ ಒಳಗೆ ಪುಣ್ಯ ಇಲ್ಲೊಬ್ಬನಲಿ ಪುಣ್ಯಗುರುವೆ 6 ರಾಗ:ಶಂಕರಾಭರಣ ಆದಿತಾಳ ಇಂಥ ಮಾತಿಗೆ ಜೀಯ ಹೀಗಂತ ನುಡಿದನು ಚಿಂತೆ ಮಾಡಬೇಡ ಭೂಕಾಂತ ಎಂದನು 1 ಪುತ್ರ ಕಾಮೇಷ್ಟಿಮಾಡು ಭಕ್ತಿಯಿಂದಲಿ ಪುತ್ರನಾಗುವನು ನಿಮಗೆ ಸತ್ಯ ನೀ ತಿಳಿ 2 ಗುರುವಿನ ಮಾತುಕೇಳಿ ಪರಮ ಹರುಷದಿಂದಲಿ ಅರಸ ಬ್ರಾಹ್ಮಣರನೆಲ್ಲ ಕರೆಸಿದಾಗಲೇ 3 ಮುಂದೆ ಯಜ್ಞ ಮಾಡಬೇಕು ಎಂದÀು ತ್ವರದಲಿ ಒಂದು ಭೂಮಿ ಶೋಧಿಸಿದನು ಚಂದದಲಿ 4 ಚಲುವ ನೇಗಿಲ ಜಗ್ಗಿ ಎಳೆವ ಕಾಲಕೆ ಹೊಳೆವ ಪದ್ಮ ಬಂತು ಅಲ್ಲಿ ಸುಳಿದು ಮೇಲಕೆ 5 ಇರುವಳೊಬ್ಬಳಲ್ಲಿ ಮತ್ತೆ ಪರಮಸುಂದರಿ ಅರಸನೋಡಿ ಬೆರಗಿನಿಂತ ಸ್ಮರಿಸಿ ಪರಿಪರಿ 6 ಕಾಣಿಸಿದಲೆ ಗಗನದಲಿ ವಾಣಿಯಾಯಿತು ಕಾಣದಿದ್ದರೂ ಈಗ ಸಕಲಪ್ರಾಣಿ ಕೇಳಿತೊ 7 ಇನ್ನು ಚಿಂತೆ ಮಾಡಬೇಡ ಧನ್ಯ ಅರಸ ನೀ ನಿನ್ನ ಮಗಳು ಎಂದು ಚೆನ್ನಾಗಿ ತಿಳಿಯೋ ನೀ8 ಕ್ಲೇಶ ಹಿಂದೆ ಬಿಡುವಿಯೊ ಮುಂದೆ ಮುಂದಕಿನ್ನು ಆನಂದ ಬಡವಿಯೊ9 ಗಗನ ವಾಣಿಯನ್ನು ಕೇಳಿ ಅರಸ ಬಗೆಯಲಿ ಮಗಳ ನೆತ್ತಿಕೊಂಡನಾಗ ಮುಗಳು ನಗೆಯಲಿ 10 ತಂದೆ ಮಗಳ ಜನ್ಮ ಪದ್ಮದಿಂದ ತಿಳಿದನು ಮುಂದೆ ಪದ್ಮಾವತಿಯೆಂದು ಕರೆದನು11 ಮಗಳಕಾಲಗುಣದಿ ಮುಂದೆ ಮಗನು ಆದನು ಅವನ ಕರೆದ ವಸುಧಾನನೆಂದು ಗಗನರಾಜನು 12 ತಕ್ಕವಾಗಿ ಅರಸಗ್ಹೀಗೆ ಮಕ್ಕಳಾದರು ಸೌಖ್ಯದಿಂದ ಮುಂದೆ ದಿನದಿನಕ್ಕೆ ಬೆಳೆದರು13 ಬಂತು ಯೌವನವು ಭೂಕಾಂತ ಪುತ್ರಿಗೆ ಬಂತು ಆಗ ಮತ್ತೆ ಬಹಳ ಚಿಂತೆ ಅರಸಗೆ 14 ಇಂಥ ಮಗಳಿಗಿನ್ನು ತಕ್ಕಂಥ ಪುರುಷನು ಪ್ರಾಂತದೊಳಗೆ ಇಲ್ಲದಿವ್ಯ ಕಾಂತಿ ಮಂತನು 15 ಎಂತು ನೋಡಲಿನ್ನು ಹುಡುಕಿ ಶ್ರಾಂತನಾದೆನು ಚಿಂತೆಯೊಳಗೆ ಬಿದ್ದು ಮುಂದೆ ಪ್ರಾಂತಗಾಣೇನು 16 ಅಂತರಂಗದೊಳಗೆ ಹೀಗಂತ ಅನುದಿನ ಚಿಂತಿಸಿದನು ಮರೆತು ಅನಂತಾದ್ರೀಶನ17 ವಚನ ಚಂದಾದ ಕುಸುಮಗಳ ಕೂಡಿ ಮುಂದೆ ಇಂದು ಮುಖಿಯು ನೋಡುತಲೆ ಮುಂದೆ ತೆಗೆದು ತ್ವರದಿಂದ ಆಭರಣಗಳ ಮುಂದೆ ತರಿಸಿದಳು1 ಕೆತ್ತಿಸಿದ ರಾಗುಟಿಯ ಒತ್ತಿ ಮೊದಲ್ಹಾಕಿ ಹತ್ತೊತ್ತಿದಳು ಸಾಲ್ಹಿಡಿದು ಇತ್ತಿತ್ತು ಮತ್ತೆ ತುದಿಗೆ ಅತ್ತಿತ್ತ ಮತ್ತ ಮೇಲರಿಸಿನವ ಚಿತ್ತಗೊಟ್ಟಚ್ಚಿದಳು ಚಿತ್ತಾರ ಬರೆದಂತೆ ಮತ್ತ ಗಜಗಮನೆ 2 ಥಳಥಳನೆ ಜಾತಿಯಿಂದ್ಹೊಳೆವ ಮುತ್ತಿನ ಭವ್ಯ ಎಳೆಯ ಇಮ್ಮಡಿ ಮಾಡಿ ನಳಿನಾಕ್ಷಿ ಬೈತಲಗೆ ಅಳತೆಯಿಂದ್ಹಾಕಿದಳು ತಳಪಿನಲಿ ಎಡಬಲಕೆ ಎಳೆದು ಕಟ್ಟಿದಳ್ಹಿಂದೆ ಹೆರಳಿಗ್ಹಾಕಿ ತೊಳೆದ ಮುತ್ತಿನ ಬುಗಡಿ ಪೊಳೆವ ಮೀನ್ಬಾವಲಿಯು ಝಳಿ ಝಳಿತವಾಗಿರುವ ಗಿಳಿಗಂಟಿ ಚಳತುಂಬುಗಳ ನಿಟ್ಟು ಕರ್ಣದಲಿ ಉಳಿದ ದ್ರಾಕ್ಷಾಲತೆಯ ಎಳೆದು ಬಿಗಿದಳು ಮೇಲೆ ಸುಳಿಗುರಳಿನಲ್ಲಿ 3 ಇದ್ದ ಮುತ್ತುಗಳ್ಹಚ್ಚಿ ತಿದ್ದಿ ಮಾಡಿದ ನತ್ತು ಉದ್ರೇಕದಿಂದಿಡಲು ಮುದ್ದು ಸುರಿವುತ ಮುಂಚೆ ಇದ್ದ ಮುಖ ಮತ್ತೆ ಎದ್ದು ಕಾಣಿಸಿತು ಪ್ರದ್ಯುಮ್ನ ಚಾಪದಂತೆರಡÀು ಹುಬ್ಬುಗಳ ಮಧ್ಯೆ ನೊಸಲಿನ ಮೇಲೆ ಶುದ್ಧ ಕಸ್ತೂರಿಯನ್ನು ತಿದ್ದಿ ತಿಲಕವನಿಟ್ಟು ತಿದ್ದಿದಳು ಕಾಡಿಗೆಯ ಪದ್ಮಲೋಚನಗಳಿಗೆ ಪದ್ಮಜಾತೆ 4 ಚಂದ್ರಗಾವಿಯನ್ನುಟ್ಟು ಚಂದಾದ ಕುಪ್ಪಸವ ಮುಂದೆ ಬಿಗಿ ಬಿಗಿತೊಟ್ಟು ಮುಂದಲೆಗೆ ಶೋಭಿಸುವ ಚಂದ್ರಸೂರ್ಯರನಿಟ್ಟು ಚೆಂದಾಗಿ ಬೈತಲೆಗೆ ಚಂದಿರವ ಸುರಿದಳು ಚಂದ್ರಮುಖಿಯು ಪರಿ ಗೀರು ಗಂಧವನು ಕೈಗ್ಹಚ್ಚಿ ಮುಂದೆ ಕೊರಳಿಗೆ ಒರಿಸಿ ಚಂದ್ರಸರ ಮುಂದೆ ಹಾಕಿದಳು 5 ಮೇಲಿಟ್ಟು ಚಿಂತಾಕವನು ಕಟ್ಟಿ ತಾಯತ ಬಟ್ಟಕುಚಗಳ ಏಕಾವಳಿಯ ಇಟ್ಟು ಪುತ್ಥಳಿ ಸರವು ಅಷ್ಟು ಸರಗಳನೆಲ್ಲ ಮೆಟ್ಟಿ ಮೇಲ್ಮೆರೆವಂಥ ಶ್ರೇಷ್ಠ ಸರಿಗಿಯತರಿಸಿ ಇಟ್ಟಳಾಕೆ6 ಟೊಂಕದಲಿ ಒಡ್ಯಾಣ ಮುಂದಲಂಕರಿಸಿದಳು ಪೊಂಕದಿಂದಿಟ್ಟು ಅಕಳಂಕ ಕೊಂಕವನು ಮಾಡುತಲೆÉ ಕಿಂಕಿಣಿಪೈಜಣ ಇಟ್ಟಳಾಕೆ7 ಪಿಲ್ಲೆ ಮೇಲಾದ ಮುಸುಕಿಕ್ಕಿ ಬಹು ಬಾಲೆಯರು ಕೊಟ್ಟ ಕೂಡಿ ಭಾಳ ಹರುಷದಿ ಹೊರಟಳಾಕಾಲದಲ್ಲಿ. 8 ವಚನ ಪರಿ ಗಜಗಮನದಿಂದಾ ವನ ಮದನ ಸತಿಯಂತಿಪ್ಪ ತರುಣಿರೂಪವ ತಾಳಿ ವನಮಧ್ಯದಲ್ಲಿ ತಾಂ ಬೆಸಗೊಂಡಳು ಯಾರಲೆ ಬಾಲೆ ನೀ ಬಾಲಚಂದ್ರ ಲಲಾಟೆ ಕಾಳಾಹಿ ವೇಣೀ ನೀ ಜಾತೆಯರ ಕೂಡಿ ಬಳಗವು ಕಾಂತನ್ಯಾರು ಪೇಳೆಂದು 1 ಧ್ವನಿ ಕೇಳೆ ಕುಸುಮಕ್ಕೆ ನಾ ಬಂದೆ ತಿಳಿಯೆ ಮಾತಿನರಗಿಳಿಯೆ 1 ಅಸಮ ತೋಂಡಮಾನನೆಂಬುವನು ನಮ್ಮ ಕಕ್ಕನು 2 ನಾ ಖೂನವನು ಪೇಳಿದೆ ಸಾರಿ ಪೇಳಿದೆ &ಟಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಆಡಿನ ಮರಿಯೆತ್ತಂಬುಧಿಯೊಳಾಡುವ ಕರಿಯೆತ್ತ ಮಾನವ ಮಾಡದಿರಚ್ಚುತ ನಾನೆಂಬ ಮನವಪ. ಯಾಡಮೂಢನೊಬ್ಬ ಎಲ್ಲಾ ಜಗದೊಳು ಗೂಢನಾಗಿ ನೋಡುತಿಹ ಸುಖಿಯೊಬ್ಬ ಗಡ ನಾಡರಿಯೆ ದುಃಖಿಯೊಬ್ಬ ಸುಖದಲ್ಲಿ ಲೋ- ಲಾಡುತಿಹ ನಿರನಿಷ್ಟನೊಬ್ಬ ಗಡ1 ಕಡಲ ಕಡೆದು ಸುಧೆಯ ನೋಡಿ ತ- ನ್ನೊಡಲ ಧಣಿಯಉಂಡವನೊಬ್ಬ ಹೆ- ಣ್ಣುಡಿಗೆಯನ್ನುಟ್ಟು ಅಸುರರ ಬಾಯ ಹೊಡೆದು ಬಡಿಸಿದವನೊಬ್ಬ ಗಡ 2 ಆಡುತಲಬ್ಧಿಯೊಳಡಗಿದದ್ರಿಯ ಕೋಡುಗಲ್ಲನೆತ್ತಿ ಹೂಡಲು ಬಲ್ಲೆಯ ಓಡುತಲೊಬ್ಬನೊರಗಿದ್ದನ ಕಣ್ಣೊಳೊಡದು ಮೂಡಿದÀಗ್ನಿಯಿಂದ ಸುಡುವೆಯ3 ಮಂದ ನೀನೊಬ್ಬನೆ ಮಾಡುವೆಯ ಲೆಕ್ಕವಿಲ್ಲದೆ ಮಕ್ಕಳ ಕೂಡಿದನ ಬಹಳ ಕೋಟಿಧನಂಗಳ ಕೂಡಿರ್ದಗೆ ಕೊಟ್ಟು ನೋಡಿ ಸುಖಿಪೆಯ 4 ದೃಢವಾಗಿ ನಿನ್ನುಂಗುಟ ನಖದಿಂ ದೊಡಲನಾದರು ಒಡೆಯಲಾಪೆಯ ಮೃಡಪ್ರಿಯ ಹಯವದನನಂತೆ ಮೂಢಜಾತಿಯಾಗಿ ವೇದ ಓದುವೆಯ 5
--------------
ವಾದಿರಾಜ
ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಇನ್ನೇನಿನ್ನೇನು ಎನಗಿನ್ನು ಇನ್ನೇನಿನ್ನೇನು ಧ್ರುವ ಎನ್ನೊಳು ಗುರು ತನ್ನ ಮರ್ಮವು ತೋರಿದ ಇನ್ನೇನಿನ್ನೇನು 1 ಮುನ್ನಿನ ಕರ್ಮವು ನಿರ್ಮೂಲವಾಯಿತು ಇನ್ನೇನಿನ್ನೇನು 2 ಎನ್ನೊಳು ಘನಬ್ರಹ್ಮವಸ್ತು ತಾನಾಯಿತು ಇನ್ನೇನಿನ್ನೇನು 3 ನಾನು ನಾನೆಂಬುದು ನೆಲಿಯು ತಾನಾಯಿತು ಇನ್ನೇನಿನ್ನೇನು 4 ಏನೆಂದು ತಿಳಿಯದ ಅನುಮಾನ ಗಳೆಯಿತು ಇನ್ನೇನಿನ್ನೇನು 5 ಪರಮ ತತ್ವದ ಗತಿ ನೆಲೆ ನಿಭ ತೋರಿತು ಇನ್ನೇನಿನ್ನೇನು 6 ಎನ್ನೊಳಾತ್ಮ ಖೂನ ಕುರುಹವು ತಿಳಿಯಿತು ಇನ್ನೇನಿನ್ನೇನು 7 ಕನಸು ಮನಸು ಎಲ್ಲ ನಿನ್ನ ಸೇವೆ ಆಯಿತು ಇನ್ನೇನಿನ್ನೇನು 8 ಹಗಲಿರುಳೆಂಬುದು ಹಗರಣವಾಯಿತು ಇನ್ನೇನಿನ್ನೇನು 9 ಅರಹು ಮರಹಿನ ಇರುವು ತಿಳಿಯುತು ಇನ್ನೇನಿನ್ನೇನು 10 ಭಾವದ ಬಂiÀiಲಾಟ ನಿಜವಾಗಿ ದೋರಿತು ಇನ್ನೇನಿನ್ನೇನು 11 ಜೀವಶಿವನ ಗತಿ ಸೋಹ್ಯವು ತಿಳಿಯಿತು ಇನ್ನೇನಿನ್ನೇನು 12 ಆಯವು ದಾಯವು ಸಾಹ್ಯವು ದೋರಿತು ಇನ್ನೇನಿನ್ನೇನು 13 ಜೀವನ್ನ ಜಾತಿಯ ಕೀಲವು ತಿಳಿಯಿತು ಇನ್ನೇನಿನ್ನೇನು 14 ಜನ್ಮ ಮರಣದಾ ಜಂತ್ರವು ಮುರಿಯಿತು ಇನ್ನೇನಿನ್ನೇನು 15 ಸಂದೇಹ್ಯ ಸಂಕಲ್ಪ ಸೂಕ್ಷ್ಮವು ಹರಿಯಿತು ಇನ್ನೇನಿನ್ನೇನು 16 ಮರಣದ ಗತಿಗಳ ಮಂತ್ರವು ತಿಳಿಯಿತು ಇನ್ನೇನಿನ್ನೇನು 17 ಸುಷಮ್ನ ನಾಳದ ಸೂಕ್ಷ್ಮವು ದೋರಿತು ಇನ್ನೇನಿನ್ನೇನು 18 ಇಮ್ಮನವಿದ್ದದು ಒಮ್ಮನವಾಯಿತು ಇನ್ನೇನಿನ್ನೇನು 19 ಆಧಾರಚಕ್ರದ ಹಾದಿಯು ತಿಳಿಯಿತು ಇನ್ನೇನಿನ್ನೇನು 20 ಸದ್ಗುರು ಕೃಪೆಯಾದಾ ಸಾಧನವಾಯಿತು ಇನ್ನೇನಿನ್ನೇನು 21 ಇನ್ನೇನಿನ್ನೇನು 22 ಅಂತರಾತ್ಮನ ಸೂತ್ರಾಂತ್ರವು ತಿಳಿಯಿತು ಇನ್ನೇನಿನ್ನೇನು 23 ಇನ್ನೇನಿನ್ನೇನು 24 ಎನ್ನೊಳು ಭಾಸ್ಕರ ಗುರು ತಾನೆಯಾದನು ಇನ್ನೇನಿನ್ನೇನು 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಏನಯ್ಯ ಧೊರೆಯೆ-ನಿನಗಾನಂದವೆ ಧೊರೆಯೇ ಪ ನುಡಿನೀನೊಲಿದಾಲಿಪುದುಅ.ಪ. ಜಾತಿಧರ್ಮವಿಲ್ಲಾ-ಶಾಸ್ತ್ರದರೀತಿನಡತೆಯಿಲ್ಲ ಮಾತಿದುಪುಸಿಯಲ್ಲಾ-ಮಾನದ-ಭೀತಿಯುಮೊದಲಿಲ್ಲಾ ನೀತಿಯನರಿಯದ-ಕೋತಿಗಳಂದವ ಜಾತಿಯ ಜನರೊಳು ಮಾತಿನವಾಶಿಯಿಲ್ಲ 1 ದುರ್ಜನರು ಬೆರೆದು-ದೋಷವಿ ವರ್ಜಿತರನ್ನು ಜರಿದು ಲಜ್ಜೆಯನೆರೆತೊರೆದು ಗರ್ವದಿ ಗರ್ಜಿಸಿ ಮೊರೆದು ಈ ಜಗದೊಳಗಿಹ ಸಜ್ಜನರಿಗೆ ಕುಲಕಜ್ಜಳರವ ಮತಿ ಗುಜ್ಜುಗಿಸುತ್ತಿಹ 2 ಗಂಡನ ಬಿಟ್ಟಿಹರು-ಗರತಿಯ-ಕಂಡು ನಗುತ್ತಿಹರು ಮಿಂಡರ ಬೆರೆದಿಹರು-ಮೇಲತಿ-ದಿಂಡೆಯರಾಗಿಹರು ಚಂಡಿಸುತಿರ್ಪರೋ 3 ಕೇಳುಹಂದೆಯಾಳು-ಕ್ಲೇಶವ ಪೇಳಲು ಮತಿತಾಳು ಕೀಳು ಜನರ ಬಾಳು ಕಿವಿಯಲ್ಲಿ ಕೇಳಬಹುದೆ ಪೇಳು ಜನರೂಳಿಗ ಬಲುಘನ 4 ಧರೆಯೊಳಧಿಕವಾದ ಶ್ರೀ ಪುಲಿ-ಗಿರಿಯೊಳು ನೆಲೆಯಾದ ಸಿರಿವರ ನಿಜಪಾದ-ಸೇವೆಯ-ಕರುಣಿಸು ಬಹುಮೋದ ಶರಣಾಭರಣ ನಿಜ ಕರುಣವ ತೋರಿಸು ವರದ ವಿಠಲಧೊರೆ ವರದದಯಾನಿಧೆ 5
--------------
ಸರಗೂರು ವೆಂಕಟವರದಾರ್ಯರು
ಕುತ್ಸ್ಸಿತರೊಲ್ಲದ ಮತ್ಸರವಿಲ್ಲದ ಸತ್ಸಭೆ ಕೇಳಲೀ ಕೃತಿಯ ಪ. ಈ ಯುಗದವರಿಗೆ ಕಲಹ ಮಂಡಿಸಿದಗೆ ಆ ಯುಗದವರುಕ್ತಿ ಬೇಕು ನ್ಯಾಯದವರ ಕೇಳು ಪೂರ್ವಶಾಸನ ಸಾಕ್ಷಿ ಹೇಯವೆಂದಾರು ಪೇಳುವರು1 ನಿಮ್ಮವರಾಗಮ ನಮ್ಮವರಿಗೆ ಸಲ್ಲ ನಮ್ಮೋಕ್ತಿ ನಿಮಗೆ ಮೆಚ್ಚಲ್ಲ ಇಮ್ಮನದವರಿಗೆ ಇನ್ನೊಬ್ಬ ಹಿರಿಯರ ಸಮ್ಮತಿ ಬೇಕು ನಿರ್ಣಯಕೆ2 ಯುಕ್ತಿ ಮಾತ್ರವ ನಂಬಿ ನಡೆವುದುಚಿತವಲ್ಲ ಯುಕ್ತಿ ಸರ್ವತ್ರ ಬಂದಿಹುದು ಕುತ್ಸಿತ ದೇಹಬಂಧವ ಬಿಡಿಸುವ ನರ- ರುತ್ತಮರೆಂದರೇನೆಂಬೆ 3 ಹಿಂಸೆ ಸಲ್ಲದು ಗಡ ಕರದ ಚಿಮುಟಿಯಿಂದ ಏಸು ಕೂದಲ ಕೀಳುತಿರಲು ಏಸೋ ಜೀವಗೆ ನೋವು ಅದು ಹಿಂಸೆ ದೋಷದ ಒಂದಂಶಕ್ಕೆ ಸರಿ ಬಂದಿಹುದೆ 4 ಕೇಶ ಆಚ್ಛಾದನ ಸಂಕಟದಿಂದೆಂದ ಕ್ಲೇಶ ಸೂಸುವ ನಯನಾಂಬುಧಾರೆ ಆ ಸಮಯದಿ ಪರಮಸುಖವೆಂಬ ಮಾತು ಸತ್ಯವ್ರತಕೆ ಎಂತೊಪ್ಪಿಹುದೊ 5 ವೇದಶಾಸ್ತ್ರವ ಬಲ್ಲ ಹಾರವನಲ್ಲ ಹು- ಟ್ಟಿದ ದಿವಸ ಮೊದಲಾಗಿ ಪಾತಕಿ ತಮ್ಮೊ - ಳಾದನೆಂಬುದು ಬಲು ಚೋದ್ಯ6 ಪಾಪ ಸಲ್ಲದು ಗಡ ಪರನಿಂದೆಯಿಂದಾದ ಪಾಪವೆ ತಾವು ಶುದ್ಧರೆಂಬ ಪರಿ ಆತ್ಮಸ್ತುತಿಯಿಂದೊಂದಾ ಪಾಪ ಲೇಪಿಸದಿಹುದೆ ತಮ್ಮವರ 7 ಸ್ಥಾವರಜೀವರ ಸಾವಿರ ಕೋಟಿಯ ಆವಾಗ ಕೊಂದು ತತ್ತನುವ ಜೀವಿಪೆನೆಂದು ಬೇಯಿಸಿ ತಿಂಬ ಪಾಪವ ಆವ ನಿಮಗೆ ಅಹುದೆಂದ 8 ಇಂದ್ರಿಯಹತ್ತಿಲ್ಲದವರ ಕೊಲ್ಲುವುದಕ್ಕೂ ಹಾ- ಗೆಂದ ಗುರುವ ನಾನೇನೆಂಬೆ ಅಂದಚೆಂದಗಳ ಮೂಕರ ಪಕ್ಷ್ಷಿಯಂಡದ ನಿಂದ್ಯ ಹಿಂಸೆಯ ಸಲಿಸುವರೆ 9 ಸಂಗೀತಶ್ರವಣದಿ ಧೂಪಾಘ್ರಾಣದಿ ಮೂಲ ಹಿಂಗೂಡಿದುದಕ ಸ್ವಾದನಾದಿ ಅಂಗನೆ ಈಕ್ಷಣ ಸ್ಪರ್ಶನದಿಂ ಸ್ಥಾವ- ರಂಗಳು ಜಂಗಮದಂತೆ 10 ತಮ್ಮ ಕರ್ಮದಿ ತಾವೆ ಸಾವರೆಂಬ ಮತದಿ ಕಮ್ಮಿಯಾದ ವ್ರಣಕ್ಕೆ ಮದ್ದನಿಕ್ಕಲು ನಿರ್ಮಾಯನದೊಳಗೇಸೊ ಹಿಂಸೆ 11 ಅಕ್ಕಿಯ ಕುಟ್ಟಲು ಬಕ್ಕು ಜೀವರ ಹಿಂಸೆ ಮಕ್ಕಳುಂಬುದು ಮಾಂಸ ಪ್ರಿಯಳ ಚೆಂದುಟಿ ಮಾಂಸ ಇಕ್ಕು ಬಾಯೊಳು ದಂತದೆಲುವೆ 12 ಕರದ ತುಂಬವಿದೇನು ಕೊರಳ ಹಾರವಿದೇನು ಚರಣದ ನಖಪಂಕ್ತಿಯಿದೇನು ಖರ ಭೂತಪಂಚಕ ಅನ್ನ ಮಾಂಸಗಳೊಳು ಬರಿದೆ ನಿಂದಿಸಲೇಕೆ ಪರರ 13 ಉಪ್ಪಿನೊಳಗೆ ತೋರ್ಪ ಚಿಪ್ಪ ನೋಡದೆ ಪರ- ರಲ್ಪ ದೋಷಗಳರಸುವರೆ ಒಪ್ಪುವುದೆಂತೊ ಶತ್ರುಗಳ ನಿಂದನೆ ಕೊಲು- ತಿಪ್ಪ ನೃಪಗೆ ಜಿನಮಾರ್ಗ 14 ಬಸ್ತಿಯ ಕಟ್ಟಲು ಭೂಸ್ಥ ಜೀವರ ಹಿಂಸೆ ಸುತ್ತ ಯಾತ್ರೆಯ ಮಾಡಲೇಸೊ ತತ್ತಜ್ಜೀವರ ಹಿಂಸೆ ತೈಲಸ್ನಾನದಿ ಹಿಂಸೆ ವಸ್ತ್ರ ಒಗೆಯಲೇಸೋ ಹಿಂಸೆ 15 ಸಲ್ಲದ ಹಿಂಸೆಯ ಸಲಿಸಿದರೆಂಬರ ಬಲ್ಲವಿಕೆಯ ನಾನೇನೆಂಬೆ ಬಲ್ಲಿದ ಹಿಂಸೆಗೆ ಒಳಗಾದರು ಎಲ್ಲ ತಾ- ಕೈವಲ್ಯ ಸಾಧಕರು 16 **** ತೊಳೆಯದ ಬಲುಹಿರಿಯರ ನಾತಕ್ಕೆ ಸೋತು ಬೆಂಬಿಡದೆ ಆತುರದಿಂ ಬಪ್ಪನೊಣಗಳ ಗೀತವ- ನೋತು ಕೇಳುವ ಶಿಷ್ಯ ಧನ್ಯ 17 ಮೂತ್ರ ದ್ವಾರದ ಮಲ ಶ್ರೋತ್ರನೇತ್ರದ ಮಲ ಗಾತ್ರ ನಾಸಿಕದ ಮಲ ಯಾತ್ರೆಯ ಮಾಡುವರಕ್ಷಿಗೆ ಕೌತುಕ ಪಾತ್ರವಾಯಿತು ಬಲು ಚಿತ್ರ 18 ******************* 19 ಏಕ ಭಾಗದೊಳು ಸ್ತ್ರೀ ವಾಸ ಏಕಾಂತದಿಪ್ಪುದು ಲೋಕಸಲ್ಲದೆಂಬರ ಈ ಕಾಮನೆಂತು ಬಿಟ್ಟಿಹನು 20 ಬಸ್ತಿಯ ಪ್ರತಿಮೆಯಲಿಪ್ಪ ದೇವನದಾರು ಮುಕ್ತರಿಗೀಭೋಗ ಸಲ್ಲ ಮುಕ್ತರÀಲ್ಲದ ಜೀವ ದೇವರೆಂತಹರೆಂದು ವ್ಯರ್ಥವಾಯಿತು ನಿನ್ನುತ್ಸಾಹ 21 ನೋಡುವ ನಯನಕ್ಕೆ ಮಾಡುವ ಪೂಜೆಗೆ ಕೂಡಿದ ಬಹುವಿತ್ತ ವ್ಯಯಕ್ಕೆ ಈಡಾಯಿತಂಶ ಕೇವಲ ಬೊಂಬೆ ಶಿವಶಿವ ಆಡುವ ಶಿಶುಗಳ್ಪೇಳಿದರೆ 22 ಹೆಂಡಿರೆ ಸಂಸಾರವಾದರೆ ಹಸಿತೃಷೆ ಉಂಡು ಮಲಗುವುದು ಮುಕ್ತರಿಗೆ ಮಂಡೆಯ ಬೋಳಿಸಿ ದೇಹದಂಡನೆ ಮಾಡಿ ಕೈ- ಕೊಂಡ ಮಾತ್ರದಿ ಮುಕ್ತರಹರೆ 23 ಮತ್ರ್ಯ ದೇಹವಿರಲು ಮುಕ್ತರೊಬ್ಬರು ಅಲ್ಲ ಸತ್ತಮೇಲೇನಾದರೆಂತೊ ಅತ್ತು ಕಾಡುವ ಶಿಷ್ಯರೆಂತರು ಕಾಂಬರು ಸರ್ವ- ಕರ್ತೃ ಶ್ರೀಹರಿ ತಾನೆ ಬಲ್ಲ 24 ದುಃಖವೆ ಸಂಸಾರ ದುಃಖವಿಲ್ಲದ ಸುಖ ಮುಕ್ತಿಯೆಂಬುದು ಬುಧರ್ಗೆ ಮಾತ್ರ ಮಿಕ್ಕದೆ ದುಃಖವಿತ್ತರೆ ಭವವೆನಿಪುದು ದುಃಖವೆ ದೂರ ಮುಕ್ತರಿಗೆ 25 ಪುನರ್ಭವವೆÉನ್ನೆ ಶ್ರುತಿ ಅಮೃತವುಂಡರೆ ಮೋಕ್ಷ ಜನನ ಮರಣವಿಲ್ಲದಖಿಳ ಜನರ ದುಃಖವನವತರಿಸಿ ಕಳೆವ ನಾರಾ- ಯಣನೆ ನಿರ್ದೋಷ ನಿತ್ಯಸುಖಿ 26 ಪಾತಕ ವ್ರತವ ಕೈಗೊಂಡ ಸ್ತ್ರೀ- ಜಾತಿಯ ಮುಟ್ಟಲ್ಲೆಂಬುವನು ಖ್ಯಾತ ಶ್ರೀಹರಿಗೆ ಪಾತಕಮುಟ್ಟದೆಂಬರ ಮಾತನದೇಕೆ ಮನ್ನಿಸನು 27 ಕೆಸರ ತೊಳೆದ ನೀರು ಕೆಸರ ಬಾಧಿಪುದೆ ತಾ- ವೈರಿ ಸೂರ್ಯನೊಳು ತಮವೆ ವಿಷಹರ ಗರುಡಗೆ ವಿಷ ಲೇಪಿಸುವುದೆ ಕ- ಲುಷ ಮುಟ್ಟುವುದೆ ಪಾಪಾಂತಕನ 28 ಸುಡುವಗ್ನಿ ಕಡಿವಸ್ತ್ರ ಕಡುಕೋಪಿ ಸರ್ಪನ ತಡೆಯಬಲ್ಲರೆ ತುಡುಕುವರೆ ಬಿಡು ಮನಭ್ರಾಂತಿಯ ಹಯವದನನೆ ಜಗ- ದೊಡೆಯ ಸರ್ವತ್ರ ನಿರ್ದೊಷ 29
--------------
ವಾದಿರಾಜ
ಕೂಸಿನಲ್ಲಿ ಬಾಲಕೃಷ್ಣ ಕೇಶವಾರ್ಯ ಪುತ್ರನಲ್ಲಿವಾಸಮಾಡಿ ಸತತ ಮನವ ಪೋಷಿಸೂವನು 1 ತರುಣಿಯಲ್ಲಿ ಮಾಧವವಿರುವ ಶರಣರೊಳಗೆ ವಸುದೇವನರಿತು ತೋಷಿಸುವುದು ಸತತ ಹರುಷದಿಂದಲೀ 2 ವಾಸುದೇವ ಖಗವರೇಣ್ಯನು 3 ದಿವಿಜ ನಾರಾಯಣನು ವಸ್ತಿ ಮಾಡಿಹನು4 ಸುರಭಿಯಲ್ಲಿ ವಿಷ್ಣುರೂಪಿ ತುರಗದಲ್ಲಿ ವಾಮನಾತ್ಮಇರುವ ಸಂಕರ್ಷಣಾಖ್ಯ ಚರಮ ಜಾತಿಯಲೀ 5 ನಿತ್ಯ ವೈಶ್ಯ ಪ್ರದ್ಯುಮ್ನಭೃತ್ಯರಲ್ಲಿ ಮಹಿದ್ರಾಸ ಕೃತ್ಯ ನಡೆಸುವಾ 6 ಮಹಿಷಿಯಲ್ಲಿ ಉಪೇಂದ್ರ ಗಜದಲ್ಲಿ ಚಕ್ರಪಾಣಿಬೆಕ್ಕಿನಲ್ಲಿ ವಿಶ್ವರೂಪ ಸತತ ತಿಳಿವುದೂ 7 ಶುನಕ ಭೂತ ಭಾವನಸರ್ವರೊಳಗೆ ಅನಂತರೂಪ ಹರಿ ನಿವಾಸಿಪ 8 ನಿತ್ಯದಲ್ಲಿ ಹರಿಯು ಹೀಗೆ ಚಿತ್ತವಿಟ್ಟು ಲಕ್ಷಣೀಯುವರ್ತಿಸುತಲಿ ಯದುವರೇಣ್ಯನ ಪತ್ನಿಯಾದಳು 9 ಪರಮಪುರುಷನಮಲ ರೂಪ ಸ್ಮರಿಸುತಲೆ ಪೋಷ್ಯರಲ್ಲಿತೊರೆದು ಕರ್ಮಲೇಪ ಶಿರಿಯ ಹೋದುವಾ 10 ನಂದಸುತನ ತಿಳಿದು ಪೋಷ್ಯ ವೃಂದದಲ್ಲಿ ಭೋಗ ನೀಡಿಇಂದಿರೇಶ ನಮಗೆ ಮೋಕ್ಷಾನಂದ ಕೊಡುವನು 11
--------------
ಇಂದಿರೇಶರು
ಗಣಾಧೀಶ ಗೌರೀಶ್ ವಾಗೀಶ ಶ್ರೀಶಾನ'ುಸಿ ಬೇಡುವ ಪ್ರಸಾದವನು ಜಗದೀಶಾನೆಲಸಿ ಹೃದಯದಿ ಬಂದು ನುಡಿಸು ದಯದಿಂದಾನೀ ನುಡಿಸಿದಂತೆ ನುಡಿಯುವೆ ಸ್ಪೂರ್ತಿುಂದಾ 1ದೇಹ ದೇವಾಲಯವು ದೇವರೊಳಗಿಹನುಮನದ ಗರ್ಭಾಲಯದಿ ಮಲಗಿಕೊಂಡಿಹನುನಾಲಿಗೆಯ ನಾಮಗರ್ಜನೆಯ ಬಲದಿಂದಾಮನದ ಕದ ತೆಗೆಯೆ ಕಾಣುನನು ಗೋ'ಂದಾ 2ಮನವೆ ಕಾರಣವು ಬಂಧಮೋಕ್ಷಗಳಿಗೆಮನವೆ ಕಾರಣ'ಲ್ಲಿ ಸುಖದುಃಖಗಳಿಗೆಮನಸು ಬಿಗಿ'ಡಿದ್ಹಿಡಿದು 'ಷಯಗಳ ತ್ಯಜಿಸುಮನತು ನಾಮಸ್ಮರಣೆಯೊಳು ಸದಾ ಇರಿಸು 3ಯಾವಾಗಲೂ ರಾಮ ನಿನ್ನೊಳಗೆ ಇರುವಾಭಾವದಿಂದಲಿ ಕರೆಯೆ 'ಒ' ಎಂದು ಬರುವಾದೇವರನು ನಂಬಿದರೆ ಸರ್ವದಾ ಕಾವಾಯಾವ ಅಂಜಿಕೆಯು ನಿನಗಿಲ್ಲ ತಿಳಿ ಜೀವಾ 4ನಿನ್ನೊಳಗೆ ನೀ ನಿನ್ನ ರಾಮನನು ನೋಡುನಿನ್ನ ಬೇಡಿಕೆಗಳನು ರಾಮನಲಿ ಬೇಡುಅನ್ಯರನು ಅಲಕ್ಷಿಸದೆ ಭಜನೆಯನು ಮಾಡುಪುಣ್ಯವಂತರ ಸಂಗದೊಳು ಸದಾ ಕೂಡು 5ಶ್ರವಣ ಭಕ್ತಿಯು ಬೇಕು ಮೊದಲು ಚೆನ್ನಾಗಿಶ್ರವಣವಾಗುವವರೆಗೆ ನಾದತಾನಾಗಿಭವ ಸಮುದ್ರವನು ದಾಟುವಡೆ ಸುಖವಾಗಿಶ್ರವಣವೇ ಮುಖ್ಯ ಸಾಧನವು ನಿಜವಾಗಿ 6ನಾದ ಹುಟ್ಟಿದ ಮೇಲೆ ನಾಮ ಕೀರ್ತನವುನಾಮ ಕೀರ್ತನದಿ ಅಸ್ಪಷ್ಟ ದರುಶನವುನೇಮ ಹೆಚ್ಚಾದಂತೆ ಸ್ಮರಣೆ ಶಾಶ್ವತವುಸ್ಮರಣೆಯೊಳು ಸಂಪೂರ್ಣ ವಸ್ತುದರುಶನವು 7ಅನನ್ಯ ಭಕ್ತಿಯ ಬಲವ ಬಣ್ಣಿಸುವದೇನುಕಣ್ಮುಂದೆ ಸರ್ವದಾ ಹರಿಯು ಕುಣಿಯುವನುಕಣ್ಣು ಮುಚ್ಚಣಿಕೆಯಾಟವನು ಆಡುವನುಅಣುರೇಣು ಪರಿಪೂರ್ಣನಾಗಿ ತೋರುವನು 8ಕುಣಿಯುವನು ಕುಣಿಸುವನು ನಗುತ ನಲಿಸುವನುದಣಿಯುವನು ದಣಿಸುವನು ಉಣುತ ಉಣಿಸುವನುಜನರಿಗದ್ಭುತ ಚಮತ್ಕಾರ ತೋರುವನುಕ್ಷಣ ಬಿಡದೆ ಕೆಳಗಿಳಿಯದಂತೆ ಕಾಯುವನು 9ದೇವರನು ನಂಬಿ ಕೆಡಕಾದವರು ಇಲ್ಲಜದೇವರನು ಬಿಟ್ಟು ಸುಖಹೊಂದಿದವರಿಲ್ಲಾದೇವರನು ಒಲಿಸುವೆಡೆ ಭಾವ'ರಬೇಕುಭಾವ'ಲ್ಲದ ಢೋಂಗಿನರ್ಚನೆಯು ಸಾಕು 10ಚಿನ್ನ ಬೆಳ್ಳಿಗಳ ಮಂಚಪವು ಬೇಕಿಲ್ಲಾಸಣ್ಣಕ್ಕಿ ಅನ್ನ ಪಕ್ವಾನ್ನ ಬೇಕಿಲ್ಲಮಣ್ಣು ಕುಳ್ಳಿಯೊಳು ಒಣ ಅಂಬಲಿಯು ಸಾಕುಘನ್ನ ಮ'ಮನಿಗೆ ನಿರ್ಮಲ ಭಕುತಿ ಬೇಕು 11ಶ್ರವಣ ಭಕ್ತಿಯ ದಾಟದವನು 'ಸಾಧಕ' ನುಪಾದಸೇವನದಿಂದ 'ಸಾಧು' ಆಗುವನುದಾಸ್ಯ ಭಕ್ತಿಯ ಮುಂದೆ 'ಸಿದ್ಧ' ನಾಗುವನುಸಖ್ಯಭಕ್ತಿಯ ಮುಂದೆ 'ಗುರು'ವು ಆಗುವನು 12ಭಕ್ತಿ ಮಾರ್ಗವು ಬಹಳ ಸುಲಭ ಸಾಧನವುಭಕ್ತಿ ಸರ್ವರಿಗೆ 'ಷಯದೊಳು ಪರಿಚಿತವು'ಷಯದೊಳಗಿನ ಪ್ರೀತಿ ಎಳೆದೆಳೆದು ತೆಗೆದುಪರಮಾತ್ಮನೊಳು ಇಡಲು ಭಕ್ತಿಯಾಗುವದು 13ಉಂಡದ್ದು ಶ್ರೀ ಹರಿಗೆ ನೈವೇದ್ಯವೆನ್ನುಕಂಡದ್ದು ಶ್ರೀ ಹರಿಯ ಪ್ರತಿರೂಪವೆನ್ನುಮಲಗಿದ್ದು ಶ್ರೀ ಹರಿಗೆ ಸಾಷ್ಟಾಂಗವೆನ್ನುಸುಲಭ ಪೂಜೆಯ ಮರ್ಮವೆನು ತಿಳಿದು ನೀನು 14ಸಾಲವನು ಮಾಡಿ ಹೋಳಿಗೆ ಹೊಡಿಯಬೇಡಾಜೇಲಿಗಂಜುತ ದೇಶಕಾರ್ಯ ಬಿಡಬೇಡಾಆಲಸ್ಯದಲಿ ಕಾಲವನು ಕಳಿಯಬೇಡಾಕೆಲಸದಲಿ ಕೀಳು ಮೇಲೆಂದು ಅನಬೇಡಾ 15ಸ್ವಚ್ಛ'ರಬೇಕು ಮನಬುದ್ಧಿ ದೇಹದೊಳುಅಚ್ಚುಕಟ್ಟಿರಬೇಕು ಸರ್ವಕಾರ್ಯದೊಳುಎಚ್ಚರಿರಬೇಕು ಜನಪಾತ್ರೆ ರಾತ್ರಿಯೊಳುಬಿಚ್ಚು ಮನ'ರಬೇಕು ಸ್ವಜನ 'ುತ್ರರೊಳು 16ಬಡತನವು ಬಂದಾಗ ಧೈರ್ಯ ಬಿಡಬೇಡ'ಡಿದು ನೆಂಟರ ಮನೆಯ ನೀ ಕೂಡಬೇಡದುಡಿದು ತಿನ್ನಲು ಸ್ವಲ್ಪ ಸಹ ನಾಚಬೇಡಮಡದಿ ಹುಟ್ಟಿದ ಮನೆಯ ನೀ ಸೇರಬೇಡಾ 17ಗಾಜಕಾರಣದೊಳು ' ಮುಚ್ಚುಮನ' ಬೇಕುಧರ್ಮಕಾರಣದೊಳಗೆ 'ಸ್ವಚ್ಛಮನ' ಬೇಕುಅರ್ಥಕಾರಣದೊಳಗೆ ' ಮೆಚ್ಚುಮನ'' ಬೇಕುಕಚ್ಚೆಕೈಗಳು ಸದಾ ಸ್ವಚ್ಛ'ರಬೇಕು 18ಸಂಸಾರ ಮಾಡುವಡೆ ಧನವ ಸಂಗ್ರ'ಸುಸನ್ಯಾಸಿಯಾಗುವೆಡೆ ವೈರಾಗ್ಯ ಬೆಳೆಸುಸರ್ವಕರ್ಮಗಳಲ್ಲಿ ಶ್ರೀಹರಿಯ ಸ್ಮರಿಸುಸರ್ವದಾ ಸಂತ ಸಂಗದೊಳು ಸಂಚರಿಸು19ಸಂತ ಸಂಗದೊಳು ಸಂಚರಿಸುವುದು ಸ್ನಾನಾಸಂತ ವಚನಾಮ್ರತದ ಪಾನವೇ ಸ್ನಾನಾಸಂತರನು ಸಂತೋಷಪಡಿಸುವುದು ಸ್ನಾನಾಶಾಂತಮನದಿಂ ಹರಿಯ ಚಿಂತಿಪುದ ಸ್ನಾನಾ 20ಬಾಲ್ಯದಲಿ ಬ್ರಹ್ಮಚರ್ಯದಿ ಬಲವ ಬೆಳೆಸುತಾರುಣ್ಯದಲಿ ದುಡಿದು ಧನವ ನೀ ಗಳಿಸುವೃದ್ಧಾಪ್ಯದೊಳು ಸದಾ ಶ್ರೀಹರಿಯ ಸ್ಮರಿಸುಶ್ರೀಹರಿಯ ಸ್ಮರಣೆಯೊಳು ಆಯುಷ್ಯ ಸವೆಸು 21ಮೊದಲು ನಿನ್ನ ಪ್ರಯತ್ನ ತಪ್ಪದೆಲೆ ಮಾಡುಅದು ನೀಗದಿರೆ ಮುಂದೆ ದೈವವನು ನೋಡುಮದುವೆಯಾಗುವ ಮೊದಲು ತಿಳಿತಿಳಿದು ನೋಡುದುಡಿದು ಧನ ಗಳಿಸಿ ಸುಖದಿಂದ ಬಾಳುವೆ ಮಡು 22ಧನ'ಲ್ಲದವನ ಸಂಸಾರ ಸುಖವಲ್ಲಾಮನೆಯೊಳಗೆ ನಿತ್ಯ ಕಿರಿಕಿರಿಯು ತರವಲ್ಲಾದನದಂತೆ ಹೆಣ್ಣು ನುಡಿಯುವುದು ಸರಿಯಲ್ಲಾಎಣಿಕೆುಲ್ಲದೆ ಮಕ್ಕಳಾಗುವುದು ಸಲ್ಲಾ23ನೆಂಟರೊಳು ಬಹುದಿನ ಕೆಳಗಿರಬೇಡಾ'ಫ್ರಂಟಸೀಟಿ'ನ ಮೇಲೆ ನೀ ಕೂಡಬೇಡಾಒಂಟಿಯಲಿ ಹೆಂಡತಿಯ ಬಿಟ್ಟು ಇರಬೇಡಾಗಂಟು ಒಬ್ಬರ ಕೈಗೆ ಕೊಟ್ಟು ಆಳಬೇಡಾ 24ನಿನ್ನಂತೆ ತಿಳಿ ಪರರ ಸುಖ ದುಃಖಗಳನುಅನ್ಯಥಾ ನೋಡದಿರು ಅಣ್ಣ ತಮ್ಮರನುಸರ್ವಥಾ ಸ'ಸದಿರು ಅನ್ಯಾಯಗಳನುತಿಳಿಯದೇ ಹಳಿಯದಿರು ಭಿನ್ನ ಮತಗಳನು 25ಅತಿ ಮತುಗಳು ಬೇಡ ಅತಿ ಮೌನ ಬೇಡಾಅತಿ ತಿನಸು ಬೇಡ ಅತಿ ಉಪವಾಸ ಬೇಡಾಅತಿ 'ಹಾರವು ಬೇಡ ಅತಿ 'ನಯ ಬೇಡಾಅತಿ ಉದಾರತೆ ಬೇಡ ಜೀನತನ ಬೇಡಾ 26ಭೂ'ುಂಗೆ ಭಾರವಾಗುತ ತಿರುಗಬೇಡಾಕೂಳಿಂಗೆ ಕಾಳಾಗಿ ನೀ ಕೂಡಬೇಡಸಾಲ ಸಿಗುವಾಗ ಸಂತೋಷ ಪಡಬೇಡಾಸಾಲವೇ ಶೂಲವೆಂಬುದು ಮರೆಯಬೇಡಾ 27ಹನಿಗೆ ಹನಿ ಕೂಡಿದರೆ ಹಳ್ಳದಾಗುವುದುತೆನಿಗೆ ತೆನಿ ಕೂಡಿದರೆ ರಾಶಿಯಾಗುವುದುಕ್ಷಣಬಿಡದೆ ಕಂಡಲ್ಲಿ 'ದ್ಯೆಯನು ಗಳಿಸುಕಣಬಿಡದೆ ಧನ ಧಾನ್ಯಗಳನು ಸಂಗ್ರ'ಸು 28ಮಾತು ಕೃತಿಗಳಿಗೆ ಬಲು ಮೇಳ'ರಬೇಕುನೀತಿಯೊಳು ತನ್ನ ಮನಸಾಕ್ಷಿ ಇರಬೇಕುಮಾತು ಬಲು ಸ'ುದ್ದು ಸತ್ಯ'ರಬೇಕುಸತ್ಯ'ಲ್ಲದ ಸುಳ್ಳು ಸ' ಮಾತು ಸಾಕು 29ಐಕ್ಯ'ದ್ದರೆ ಸೌಖ್ಯ ಭೇದದೊಳು ಬೇದಾಐಕ್ಯ'ದ್ದರೆ ಬಲವು ಕ್ಷಯಬೇನೆ ಭೇದಾಐಕ್ಯ'ದ್ದರೆ 'ಗ್ಗು ಭೇದದೊಳು ಕುಗ್ಗುಐಕ್ಯದಿಂದ ಸ್ವಾತಂತ್ರ್ಯ ರಥವನ್ನು ಜಗ್ಗು 30ತನ್ನ ಅಭಿಮಾನ ತನ್ನವರ ಅಭಿಮಾನತನ್ನ ಕುಲಗೋತ್ರ ಜಾತಿಯ ಸ್ವಾಭಿಮಾನತನ್ನ ಭಾಷಾರಾಷ್ಟ್ರ ಧರ್ಮಾಭಿಮಾನಮಾನವನಿಗಿರಬೇಕು ಇಲ್ಲದವ 'ಶ್ವಾನಾ' 31ತನ್ನತನ ಬಿಡಬೇಕು ತನ್ನವರಿಗಾಗಿತನ್ನವರ ಕುಲಗೋತ್ರ ಜಾತಿಗಳಿಗಾಗಿ ಕುಲಗೋತ್ರ ಜಾತಿಗಳ ತಾಯ್ನಾಡಿಗಾಗಿತಾಯ್ನಾಡು ನುಡಿಧರ್ಮ ಪರಮಾತ್ಮಗಾಗಿ 32ತನ್ನ ಉದ್ಯೋಗ ಮನಮುಟ್ಟಿ ಮಾಡುವರುಉಣಲು ಅಧಿಕಾರ ಆಮೇಲೆ ದೊರಕುವದುಉಣುವಾಗ ಶ್ರೀಹರಿಯ ಸ್ಮರಣೆ ಮಾಡುವದುಮನೆಯೊಳಗೆ ಶಿಸ್ತು ಶಾಂತಿಗಳ ಕಾಯುವದು33ಹರಿಕಥಾ ಕೀರ್ತನ ಪುರಾಣ ಪಠಿಸುವದುಸರಸ ವಾಙ್ಮಯದ ಅಭ್ಯಾಸ ಮಡುವದುತರು ಬರುವ ತನ್ನ ವ್ಯವಹಾರ ನೋಡುವದುಪರ ಪರಿಸ್ಥಿತಿಗಳನು ತೂಗಿ ನೋಡುವದು 34'ಶ್ರಾಂತಿ ಅಭ್ಯಾಸಿ ಸರಸ ಸಲ್ಲಾಪನಿಶ್ಚಿಂತೆುಂದ ನಿದ್ರೆಯು ಸೌಖ್ಯರೂಪನಿತ್ಯ ಮಾನವನ ದಿನಚರಿಯ ಈ ರೂಫನಿಶ್ರೇಯಸಕೆ ಸುಲಭ ಸಾಧನವು ಭೂಪಾ 35ಸ್ವಚ್ಛ ಹವೆ ನೀರು ವ್ಯಾಯಾಮ 'ಶ್ರಾಂತಿಸಾತ್ವಿಕ ಸಸತ್ವಾನ್ನ ಪಾನಗಳ ಪ್ರೀತಿಉಚ್ಚತಮ ಧ್ಯೇಯ ಆಚರಣೆಗಳ ರೀತಿಮೋಕ್ಷಕ್ಕೆ ಸಾಧನವು ಇಹದಿ ಸಂತೃಪ್ತಿ 36ದೇಹ ಬಿದ್ದರೆ 'ಂದೆ ಕೀರ್ತಿುರಬೇಕುಕೀರ್ತಿ ಬರುವಂಥ ಕಾರ್ಯವ ಮಾಡಬೇಕುಕಾರ್ಯದೊಳು ಕುಶಲತನ ದಕ್ಷತೆಯು ಇರಬೇಕುಫಲವು ಪರಮಾತ್ಮನಾಧೀನವೆನಬೇಕು 37ಸರ್ವದಾ ಸುಖವೆ ಇದ್ದವರು ಯಾರುಂಟುಅವರವರ ಕರ್ಮ ಫಲವೇ ಅವರ ಗಂಟುಬೆಳತು ಕತ್ತಲೆಯಂತೆ ಚಕ್ರ ಆರುಗುವದುಸುಖ ದುಃಖ ಬರುವಾಗ ಬಂದು ಹೋಗುವುದು 38ಅನುಭವದಿ ಹೆಚ್ಚು ಸಾಧನ ಬೆಳೆಯಬೇಕುಅನುಭವದ ಮಾತುಗಳು ಬಚ್ಚಿಡಲು ಬೇಕುಅನುಭವವು ಬಂತೆಂದು ಗರ್ವ ಪಡಬೇಡಾಗರ್ವದಿಂದಲಿ ಮತ್ತೆ ಕೆಳಗಿಳಿಯ ಬೇಡಾ 39ಅಡಗಿ ಅಂಬಲಿ ಅರ' ಅಂಚಡಿಯ ಕಡೆಗೆಹುಡುಗರ ಬಲಾರೋಗ್ಯ ನಡೆನುಡಿಯ ಕಡೆಗೆಕಡು ಚಾಣ್ಮೆುಂದ ನೋಡುವದು ಸತಿ ಪತಿ ಕೆಲಸಾ 40ಪತಿುಂದಲೇ ಸತಿಯು ಸತಿುಂದ ಪತಿಯುಸತಿಪತಿಯ ಪ್ರೇಮದಿಂದಾತ್ಮದುನ್ನತಿಯುಪತಿಯ ಕೋಪದಿ ಕಲ್ಲು ಆಗುವಳು ಸತಿಯುಸತಿಯ ಶಾಪದಿ ಕತ್ತೆಯಾಗುವನು ಪತಿಯು 41ಸಾ'ಗಂಜಲು ಬೇಡ ಸಾ'ಗಳಬೇಡಾಸಾವು ಅಂದರೆ ಭಯಂಕರ ತಿಳಿಯಬೇಡಾದೇಹಕ್ಕೆ ಬಾಲ್ಯ ಯೌವನ ಮುಪ್ಪಿನಂತೆದೇಹಾಂತರ ಪ್ರಾಪ್ತಿಯೇ ಮರಣಗೀತೆ 42'ದ್ಯಾರ್ಥಿ ಬಡವನಿದ್ದರೆ ಭಿಕ್ಷೆನೀಡುಅಶನಾರ್ಥಿ ಟೊಣಪನಿದ್ದರೆ ದೂರ ಮಾಡುಹಸಿವೆ ಚೆನ್ನಾಗಿ ಇದ್ದರೆ ಊಟ ಮಾಡುಹಸಿಯು ಸಾಕಷ್ಟು ಇದ್ದರೆ ಬಿತ್ತಿನೋಡು43ಶುದ್ಧ ಆಚರೆಣೆುದ್ದರೆ ಮಾತನಾಡುಬುದ್ಧಿ ಬಲು ಚುರುಕು ಇದ್ದರೆ ವಾದ ಮಡುದುಡ್ಡು ರಗಡಿದ್ದರೆ ಘಡಾಮೋಡ ಮಾಡುಜಡ್ಡು ಇದ್ದರೆ ಪಥ್ಯದುಪವಾಸ ಮಾಡು 44ಹಾಳುಹರಟೆಯ ಬಿಟ್ಟು ಶ್ರೀ ಹರಿಯ ಸ್ಮರಿಸುಕಾಲುವನು ನೋಡಿ ಸತ್ಕರ್ಮ ಆಚರಿಸುನಾಳೆ ಮಾಡುವೆನೆಂಬ ಮಾತು ದೂರಿರಿಸುನಾಳೆ ಮಾಡುವ ಧರ್ಮ ಇಂದು ನೀ ಮುಗಿಸು 45ಮನ ಮುಟ್ಟಿ ಸ್ಮರಣೆ ಸಂತತ ಮಾಡಬೇಕುಮನಸು ಓಡಲು ಮತ್ತೆ ಜಗ್ಗಿ ತರಬೇಕುಅನುಭವವು ಬಂದಂತೆ ಮನಸು ಕರಗುವದುಮನಸು ಕರಗಿದರೆ ವಾಸನೆಯು ಅಳಿಯುವದು 46ಎಲ್ಲ ಕಡೆಯಲಿ ಇರುವನೊಬ್ಬನೇ ದೇವಎಲ್ಲ ನಾಮಗಳಿಂದಲೂ ಕರೆಸಿಕೊಳುವಾಯಾವ ಬೇಕಾದ ಹೆಸರಿನ ದೇವರನ್ನುಭಕ್ತಿುಂ ಭಜಿಸಿದರೆ ಬಂದು ಪೊರೆಯುವನು47ಧನಕನಕದಾಶೆಯನು ತೊರೆದವನು ಸಂತವನಿತೆಯರ ಬಲೆಯೊಳಗೆ ಸಿಗದವನು ಸಂತಮನದಿ ಮಹಾದೇವನನು ಕಂಡವನು ಸಂತಜನರೊಳು ಜನಾರ್ಧನನ ನೋಡುವನು ಸಂತ 48ಘೋರ ಯುದ್ಧದಿ ನರನ ರಥವ ನಡೆಸಿಹನುಸೀರೆಯಾಗುತ ಸತಿಯ ಮಾನ ಉಳಿಸಿದನುನೀರಿನವನಾಗಿ ಎಂಜಲವ ಬಳಿದಿಹನುಪರಮ ಪುರುಷನ ಕರುಣೆಗೆಣಿಯು ಉಂಟೇನು 49ಹೃದಯ ದೊಳಗಿದ್ದ ಶ್ರೀಹರಿಯ ಮರೇತುಕಡುದ್ಯೆನ್ಯ ಬಿಡಬೇಡ 'ಷಯದೊಳು ಬೆರೆತುಕಾಮಧೇನು'ನ ಕೆಚ್ಚಲೊಳಿದ್ದ ನೀನುಅಮೃತವನು ಬಿಟ್ಟು ರತ್ನವನು ಕುಡಿವೆಯೇನು 50ಸರ್ವ ದುಃಖಗಳು ನಿರ್ಮೂಲವಾಗುವದುಸಂಸಾರ ಪರಮಾರ್ಥ ಕೂಡಿ ನಡೆಯುವವುಪ್ರಭು ರಾಮಚಂದ್ರನ ಪ್ರಸಾದ ಮ'ಮೆಯನುಪಠಿಸಿ ಆಚರಿಸಿದರೆ ಸುಖದಿ ಬಾಳುವನು 51ಜಯಜಯತು ಆರ್ಯ ಭೂಮತೆ 'ಖ್ಯಾತೆಜಯತು ಭಾರತಮಾತೆ ಸರ್ವಜನ ತ್ರಾತೆಜಯಜಯತು ಜಯ'ಂದ ಜನನಿ ಕಡು ಕರುಣಿಜಯ ಜಯತು ಸರ್ವ ಸಂಸ್ಕøತಿಯ ಮುಕುಟಮಣಿ 52ಅತಿಥಿ ಬಂದರೆ ಮನ ದೊಡ್ಡದಿರಲಿಒಣಹೆಮ್ಮೆ ಬೇಡ ಆದರದ ಮಾತಿರಲಿಮಾತು ಕೃತಿ ನಿಜ ಪ್ರೇಮ ತುಂಬಿರಲಿಊಟ ಉಪಚಾರದಿಂದ ಸಂತೋಷಗೊಳಲಿ 53ಗುಡಿಯೇಕೆ ಬೇಕು ಮನದೊಳಗೆ ಹರಿಯುಂಟುಅದರ ಕದ ತೆಗೆಯ ಪ್ರತಿಬಂಧವೇನುಂಟುಗುಡಿಯೊಳಗೆ ಹೊಗಿಸಬೇಕೆಂಬುವುದು ಛಲವುಛಲ 'ದ್ದರೇನದಕೆ ಆಧ್ಯಾತ್ಮ ಬೆಲೆಯು54ಮನ ಪ'ತ್ರ'ದ್ದರೆ ದೇವ ಒಲಿವಾಮನಸು ಅಪ'ತ್ರ'ದ್ದರೆ ದೇವ ಕುದಿವಾಮನ ಸುಪ್ರಸನ್ನ'ದ್ದರೆ ದೇವ ಒಲಿವಾಮನಸು ಧುಸುಮುಸು ಇದ್ದರೆ ದೇವ ಕುದಿವಾ 55ಮನಸು ನಿರ್ಭಯ'ದ್ದರಾ ದೇವ ಒಲಿವಾಮನಸು ನಿರ್ಮಲ'ದ್ದರಾ ದೇವ ಒಲಿವಾಮನಸು ನಿರಹಂಕಾರವಾದಾಗ ಬರುವಾಮನಸು ನಿಷ್ಕಪಟವಾದರೆ ಬಂದು ಪೊರೆವಾ 56ಅನ್ಯರಿಗೆ ನಿನ್ನ ಭಾರವ ಹಾಕಬೇಢನಿನ್ನ ಯೋಗ್ಯತೆ'ುೀರಿ ಭಾರ ಹೊರಬೇಡನಿನ್ನ ಮನೆತನದ ಜಗಳ ಬೈಲಿಗಿಡಬೇಡಹೆಣ್ಣು ಮಕ್ಕಳ ಮೇಲೆ ಕ್ಕೆ-ಎತ್ತಬೇಡ 57ನಿನ್ನ 'ರಿಮೆಯನು ನೀ ಹೇಳಬೇಡಅನ್ಯರನು ಕೀಳೆಣಿಸಿ ಮಾತಾಡಬೇಡಕಣ್ಮುಚ್ಚಿ ಇನ್ನೊಬ್ಬರನುಕರಣೆ ಬೇಡನಿನ್ನ ಸಂಸ್ಕøತಿಯ ವೈಶಿಷ್ಟ್ಯ ಬಿಡಬೇಡ 58ಸು'ಚಾರದಿಂದ ಧ್ಯೇಯವ ಗೊತ್ತುಪಡಿಸುಗೊತ್ತುಪಡಿಸಿದ ಧ್ಯೇಯವನ್ನು ನಿತ್ಯಸ್ಮರಿಸುಮುಟ್ಟಲಾ ಧ್ಯೇಯವನು ಶಕ್ತಿ ಸಂಗ್ರ'ಸುಶಕ್ತಿಯನು ಚಾತುರ್ಯದಿಂದ ನೀ ಬಳಿಸು 59ಸಮಯ ಪ್ರತಿಕೂಲ'ರೆ ವೈರಿಗಳ ನ'ುಸುನ'ುಸಿ ಒಳಹೊಕ್ಕವರ ಬಲವ ಹದಗೆಡಿಸುಶ್ರಮಪಟ್ಟು ಅ'ುತಬಲ ಗುಪಿತದಿಂ ಬೆಳಿಸುಸಮಯ ಸಾಧಿಸಿ ದುಷ್ಟಜನರನು ಸಂಹರಿಸು60ದೇಹದೊಳು ನೀನುಂಟು ದೇಹ ನೀನಲ್ಲನಾ ಎಂಬ ಜ್ಞಾನ ನಿನಗುಂಟು ಆದಕಿಲ್ಲನೀನು ಈ ದೇಹದಿಂದ ಹೊರಬೀಳಲಾಗಹೆಣವೆಂದು ಕರೆಯುವರು ದೇಹವನು ಬೇಗ 61ಹುಟ್ಟುವವ ನೀನಲ್ಲ ಹುಟ್ಟುವದು ದೇಹಬೆಳೆಯುವವ ನೀನಲ್ಲ ಬೆಳೆಯುವದು ದೇಹಸಾಯುವವ ನೀನಲ್ಲ ಸಾಯುವದು ದೇಹರೂಢಿಯೊಳು ನಿನಗಿದನು ಹಚ್ಚುವದು ಮೋಹ62ಖೋಡಿ ಮನವನು 'ಡಿದು ಸಾಧು ಮಡುವದುಸಾಧು ಮಾಡುತ ನಾಮ - ಘೋಷ ಹಚ್ಚುವದುಓಡಿ ಹೋಗಲು ಮತ್ತೆ ಎಳೆದೆಳೆದು ತಂದುಬೋಧಿಸುತ ನಾಮ ಜಪದೊಳು ಸೇರಿಸೆಂದು 63ಒಮ್ಮೆ ಹರಿನಾಮದೊಳು ಮನಸು ಸೇರಿದರೆಅದಕೆ ಆಗುವ ಸುಖವು ಆ ರುಚಿಯು ಬೇರೆಆ ರುಚಿಯ ಆ ಸುಖವು ಹತ್ತಿದರೆ ಮನಕೆತಿರುಗಿ ಎಂದಿಗೂ ಅದು ಹೋಗದದು 'ಷಯಸುಖಕೆ64ಚಿತ್ತ ಸ್ಥಿರ'ಲ್ಲದಿರೆ ಬುದ್ಧಿ ಸ್ಥಿರ'ಲ್ಲಬುದ್ಧಿ ಸ್ಥಿರ'ಲ್ಲದಿರೆ ಭಾವನೆಯು ಇಲ್ಲಭಾವನೆಯು ಇಲ್ಲದಿದ್ದರೆ ಶಾಂತಿುಲ್ಲ ಶಾಂತಿಯೇ ಇಲ್ಲದವ ಸುಖವೇನು ಬಲ್ಲ 65ಅನುಕೂಲ ಮತ ಮಾತ್ರ ನೀ ಎಣಿಸಬೇಡಪ್ರತಿಕೂಲ ಮತ ಉಪೇಕ್ಷೆಯ ಮಾಡಬೇಡಅನುಕೂಲ ಪ್ರತಿಕೂಲಗಳನು ತಿಳಿ ತಿಳಿದುಏನಾದರೊಂದು ಸಾಹಸ ಕಾರ್ಯ ಮಾಡು 66ಉದ್ಯೋಗದೊಳು ಸದಾ ಆನಂದ ಉಂಟುಉದ್ಯೋಗದೊಳಗೆ ಲಕ್ಷ್ಮಿಯ ವಾಸವುಂಟುಉದ್ಯೋಗವನು ಮಾಡಿ ದೇವರನು ಬೇಡುಉದ್ಯೋಗ ಬಿಟ್ಟು ಕುಳಿತರೆ ನಿನಗೆ ಕೇಡು 67ದೀರ್ಘ ಯೋಚನೆಯ ಮಾಡುತ ನೀ ಕೂಡಬೇಡಯೋಗ್ಯ ಮುಂಬೆಳಕು ಇಲ್ಲದೆ ಧುಮುಕಬೇಡ'ಗ್ಗಿ ಮೈಮರೆಯದಿರು ದೈವ ತೆರೆದಾಗಕುಗ್ಗಿ ಎದೆ ಒಡೆಯದಿರು 'ಧಿ ಕಾಡುವಾಗ 68ದೈವವನಕೂಲ'ದ್ದಾಗ ಎಚ್ಚರಿಕೆಗರ್ವ ಸೇರುವದು ತಿಳಿಯದಲೆ ಎಚ್ಚರಿಕೆಗರ್ವದಿ ಸ್ಮøತಿಗೆ ಸಮ್ಮೋಹವೆಚ್ಚರಿಕೆಸಮ್ಮೋಹದಿಂದ ಸರ್ವನಾಶ ಎಚ್ಚರಿಕೆ 69ದೈವ ಯತ್ನಗಳ ಗತಿ ಗಹನವಾಗಿಹುದುಒಬ್ಬೊಬ್ಬರನುಭವವು ಒಂದೊಂದು ಇಹುದುವಾದದಿಂ ಬಗೆಹರಿಯದಂಥ 'ಷಯ'ದುಇದರ ಹದ ತಿಳಿದು ಯತ್ನವಂ ಮಾಡುವದು 70ಜೋಲು ಮೋರೆಯ ಹಾಕಿ ನೀ ಕೂಡಬೇಡಕಾಲು ಅಪ್ಪಳಿಸಿ ಕೆಲಸಕೆ ಹತ್ತಬೇಡಸ್ಟೈಲು ಉಡುಗೆಯ ಉಟ್ಟುಕೊಂಡೋಡಬೇಡಮೈಲಿಗೆಯ ಮನದಿಂದ ಜಪ-ಮಾಡಬೇಡ 71ಕಾರ್ಯ ಮಾಡುವ ಜನಕೆ ಮರ್ಯಾದೆ ಮಡುಬಾಯಬಡುಕ ಜನರ ಕೃತಿಯನು ತಿಳಿದು ನೋಡುಧೈರ್ಯದಿಂ ದುರ್ಜನರ ಕೂಡ ಹೋರಾಡುಆರ್ಯ ಸಂಸ್ಕøತಿಯ ಸಂರಕ್ಷಣೆಯ ಮಾತು 72ಗುಣ ಕರ್ಮಗಳ ನೋಡಿ ಮಾನವನು ಮಾಡುಒಣ ಜನ್ಮ ಜಾತಿ ತುಸು ದುರ್ಲಕ್ಷ ಮಾಡುಗುಣ ಕರ್ಮದಿಂದ ಅತಿ ನೀಚನಾದವನುಜನುಮ ಮಾತ್ರದಿ ಹೇಗೆ ಶ್ರೇಷ್ಠನಾಗುವನು73ತಪ್ಪು ಇಲ್ಲದೆ ಕ್ಷಮೆಯ ಬೇಡುವವ ಮೂರ್ಖತಪ್ಪಿದರು ಒಪ್ಪಿದವನು ಕಡುಮೂರ್ಖತಪ್ಪು ಆಗುವದು ಮಾನವನ ಸಹಜಗುಣತಪ್ಪು ಒಪ್ಪುತ ತಿದ್ದಿಕೊಳ್ಳುವದು ಸುಗುಣ 74ನಿನ್ನ ಬಂಧುಗಳೆ ನಿನಗಾಗುವರು ಕೊನರೆಗೆಅನ್ಯರಿಗೆ ಆ ಕರುಳು ಬರುವದು ಹೇಗೆನಿನ್ನ ಬಂಧುಗಳೆಲ್ಲ ಮೂರ್ಖರೆನಬೇಡಅನ್ಯರಿಂದ ನೀ ಮೂರ್ಖನೆನಿಸಿಕೊಳಬೇಡ 75ಜನರ ಮನೆಗಳು ಬಹಳ ದಿವಸ ಇರಬೇಡಇರುವದೇ ಆದರವರಿಗೆ ಭಾರ ಬೇಡಅರಿತವರ ಕೆಲಸಗಳ ಮನೆಯಂತೆಮಡುಗೃಹದ ರೀತಿರಿವಾಜು ಕೆಡದಂತೆ ನೋಡು 76ದುಡ್ಡು ಇದ್ದಾಗ ಎಲ್ಲರ ಪ್ರೀತಿಯುಂಟುದುಡ್ಡು ಕಳಕೊಂಡು ಹೋದರೆ ಮೋರೆಗಂಟುದುಡ್ಡಿನಿಂದಲೆ ಜನರ ಬೆಲೆ ಕಟ್ಟಬೇಡದೊಡ್ಡ ಗುಣಗಳನರಿತು ನ'ುಸದಿರಬೇಡ 77ಧನದ 'ಷಯದಿ ಖಂಡ ತುಂಡ ಇರಬೇಕುಮನಬಿಚ್ಚಿ ಮೊದಲಿಗೆ ಮಾತಾಡಬೇಕುಒಣ ಮಬ್ಬುತನ ಮನದಮಂಡಿಗೆಯು ಬೇಡಕೊನೆಗೆ ಗುಣಗುಟ್ಟುತಲಿ ಹಳಹಳಿಸಬೇಡ 78ಯಂತ್ರಮಯ ಜೀವನದ ಯುಗವು ನಡೆದಿಹುದುಸ್ವಾತಂತ್ರ್ಯವೆಲ್ಲಿ ಬಡವರಿಗೆ ಉಳಿದಿಹುದುದ್ರವ್ಯಮಯವಾದ ವ್ಯವಹರ ಸಾಗಿಹುದುದೇವ ಧರ್ಮಕೆ ಅರ್ಧಚಂದ್ರ ಬಂದಿಹುದು 79ತಾಯ್ತನದ ಸುಖಕೆ ಸರಿಯಾದ ಸುಖ'ಲ್ಲತಾಯ್ತನದ ಕರುಳಿಂಗೆ ಬೆಲೆಯಂಬುದಿಲ್ಲತಾುಗಿಂದಧಿಕ ದೈವತವು ಬೇರಿಲ್ಲತಾಯ್ - ಸೇವೆಗಿಂದಧಿಕ ಪುಣ್ಯಾವೆ ಇಲ್ಲ 80ಚನ್ನಾಗಿ ಸಂಸಾರ ಮಾಡಬಲ್ಲವನುಸುಲಭದಿಂ ಪರಮಾರ್ಥವನು ಸಾಧಿಸುವನುಸಂಸಾರದೊಳಗಿದ್ದು ಸನ್ಯಾಸಿಯೆನಿಸುಸನ್ಯಾಸಿಯಾಗಿ ಸಂಸಾರದೊಳು ಈಸು81ಮನೆಯಲ್ಲಿಯೇ ಸ್ವರ್ಗ ಮನೆಯಲ್ಲಿಯೇ ನರಕಜಾಣರಿಗೆ ತಿಳಿಯುವದು ನೋಡಿದರೆ ಗಮಕಜಾಣ ಪ್ರೇಮಳ ಪತಿಯಮನೆ ಸತಿಗೆ ಸ್ವರ್ಗಕೋಣ ಕರ್ದಮ ಕಟುಕ ಪತಿುರಲು ನರಕ 82ಪತಿಯ ಮನ ಒಲಿಸಿ ಕೋತಿಯ ತೆರದಿ ಕುಣಿಸಿಅತ್ತೆ ಮಾವರು ಬಂಧುಬಳಗವನು ಹೊರನುಗಿಸಿಸ್ವೇಚ್ಛೆುಂ ಎದೆಮೆಟ್ಟಿ ಬೇರಿರುವ ಸೊಸೆಸೊಸೆಯಲ್ಲ ರಕ್ಕಸಿಯು ಕಿ'ಹೊಕ್ಕ ತೊಣಸಿ83ಸರ್ವದಾ ಸತ್ವಗುಣಿ ಶಾಂತ ನಿರುತಿಹನುರಾಜಸನ ಶಾಂತಿುಂ ಧಡಪಡಿಸುತಿಹನುಕಿರಿಕಿರಿಯು ತಾಮಸಿಗೆ ಬಿಟ್ಟುರುವದಿಲ್ಲಾತ್ರಿಗುಣಗಳ ದಾಟದಿದ್ದರೆ ಮೋಕ್ಷ'ಲ್ಲಾ 84ಅನ್ನದೊಳು ಮುಖ್ಯ ಸಾತ್ವಿಕ ಗುಣವು ಬೇಕುಸಂಪಾದನೆಯ ಮಾರ್ಗ ಸರಳ'ರಬೇಕುಸಂಸರ್ಗ ಸಂಸ್ಕಾರ ಸುಷ್ಟ'ರಬೇಕುಸಾತ್ವಿಕಾನಂದ ಮನದಿಂದ ಉಣಬೇಕು 85ಮೂಲ ಮನ'ಹುದು ಮೂರರೊಳೊಂದು ಪಾಲುಸನ್ನಿವೇಶಗಳಿಂದ ಮತ್ತೊಂದು ಪಾಲುತಿನ್ನುವಾ ಅನ್ನದಿಂದ ಉಳಿದೊಂದು ಪಾಲುಮೂರು ಕೂಡಿದ ಮನವೆ ನಿನಗೆ ಹರಿಗೋಲು86ಪ್ರಾರಬ್ಧವನುಭ'ಸಿ ತೀರಿಸಲು ಬೇಕುಅಪರೋಕ್ಷದಿಂದ ಸಂಚಿತ ಕಳಿಯಬೇಕುಸರ್ವದಾ ನಿರಪೇಕ್ಷ ಸತ್ಕರ್ಮ ಬೇಕುನಿರಭಿಮಾನದಿ ಕರ್ಮದ ಬೀಜ ಸುಡಬೇಕು87ದಯೆಯು ಧರ್ಮದಮೂಲ ದಯವಂತನಾಗುಭಯವು ದುಃಖದಮೂಲ ನಿರ್ಭಯನು ಆಗುಲೋಭ ಪಾಪದ ಮೂಲ ನಿರ್ಲೋಭಿಯಾಗುತ್ಯಾಗ ಪುಣ್ಯದ ಮೂಲ ತ್ಯಾಗಿ ನೀನಾಗು 88ನಿನ್ನ ಉದ್ಧಾರವನು ನೀ ಮೊದಲ ಮಾಡುಮನೆತನದ ಉನ್ನತಿಯಕಡೆಗೆ ನೀ ನೋಡುನಿನ್ನ ನೆರೆಹೊರೆ ಜನರ ಕಲ್ಯಾಣಮಾಡುಆಮೇಲೆ 'ಶ್ವದದ್ಧಾರ ಮಾತಾಡು 89ಹಳೆಯದಿದ್ದರೆ ಎಲ್ಲ ಒಳಿತು ಎನಬೇಡಹೊಸದೆಂಬ ಮಾತ್ರದಿಂದಲೆ ಹಳಿಯಬೇಡಒಳಿತು ಕೆಡಕುಗಳು ಎಲ್ಲದರಲ್ಲಿ ಇಹವುತಿಳಿದು ಉಪಯೋಗಿಸಿದರದು ಜಾಣತನವು 90ಕಾಲಮ'ಮೆಯ ಕಷ್ಟ ಬಂದಿತೆನಬೇಡಕಾಲಕ್ಕೆ ಹೆಚ್ಚಿನ ಮಹತ್ವ ಕೊಡಬೇಡಕಾಲ ನಿರ್ಮಾಣ 'ರಿಯರ ಕೈಯ್ಯೊಳಿಹುದುಎಂಥ 'ರಿಯರು ಅಂಥ ಕಾಲ ಬರುತಿಹುದು 91'ರಿಯರಾಚರಣಿಯಂ ಮನೆತನದ ಬೆಳಕು'ರಿಯರಾಚರಣೆುಂ ಮನೆತನಕೆ ಹುಳುಕು'ರಿಯರೇ ಕಾರಣರು ಮನೆಯ ಸುಸ್ಥಿತಿಗೆ'ರಿಯರೇ ಕಾರಣರು ಮನೆಯ ದುಸ್ಥಿತಿಗೆ 92ದೇಹವೇ ರಥವು ಸಾರಥಿಯು ಪರಮಾತ್ಮಜೀವ ಅರ್ಜುನ ಧರ್ಮ ಸಮ್ಮೂಡ ಆತ್ಮಸರ್ವ ಭಾವದಿ ಶರಣುಹೊಗು ಸಾರಥಿಗೆಸಾರಧಿಯು ಮುಟ್ಟಿಸುವ ನಿನ್ನ ಸದ್ಗತಿಗೆ 93ಜ್ಞಾನಪೂರ್ವಕ ''ತ ಕರ್ಮಗಳ ಮಾಡುಚಿತ್ತಶುದ್ಧಿಗೆ ಕರ್ಮಸಾಧನವು ನೋಡುಉದ್ದೇಶ ಪರಿಣಾಮಗಳ ತೂಕ ಮಾಡುಮೂಢತನ ರೂಢಿಗಳನರಿತು ಬಿಟ್ಟುಬಿಡು 94ಬಾಲಭಾವದಿ ದೇವರೊಳು ಹಟವಮಾಡುಬಾಲಭಾವದಿ ದೇವರೊಳು ಮಮತೆಮಾಡುಬಾಲಭಾವದಿ ದೇವರಿಗೆ ಬೇಡಿಕಾಡುಬಾಲಭಾವದಿ ನಿನ್ನ ಸರ್ವಸ್ವ ನೀಡು 95ಮಾತೃಭಾವದಿ ಅವನ ತೊಡೆಯ ಮೇಲಾಡುಮಾತೃಭಾವದಿ ನೀನು ವಾತ್ಸಲ್ಯ ಮಾಡುಮತೃಭಾವದಿ ತೂಗಿ ತೊಟ್ಟಿ ಮುದ್ದಾಡುಮಾತೃಭಾವದಿ ಬಿದ್ದು ಕಿರಿಕಿರಿಯಮಾಡು 96ಸಖ್ಯಭಾವದಿ ಹಾಲು ಮೊಸರೆರೆಯ ಬೇಕುಸಖ್ಯಭಾವದಿ ಬೆಣ್ಣೆ ಬಾಯ್ತುಂಬ ಬೇಕುಸಖ್ಯಭಾವದಿ ಕೊಳಲಿನೊಳು ಕುಣಿಯಬೇಕುಸಖನೆಂದು ಗೋಪಿಯಂದದಿ ಕುಣಿಸಬೇಕು 97ನಿನ್ನೊಳಗೆ ಆತನನು ನೀ ನೋಡಬೇಕುಅವನೊಳಗೆ ಸರ್ವವನು ನೀ ಕಾಣಬೇಕುತನ್ನತನ ಮರೆತು ಅವನೊಳು ಬೆರೆಯಬೇಕುಅವನ ಸೂತ್ರದ ಬೊಂಬೆ ನೀನಾಗಬೇಕು 98'ುೀನನಾದರೆ ಅವನ ಕಣ್ಣು ನೀನಾಗು ಕೂರ್ಮನಾದಾಗವನ ಬೆನ್ನು ನೀನಾಗುವರಾಹರೂಪದ ಹರಿಯ ಕೋರೆ ನೀನಾಗುನರಹರಿಗೆ ನೀ ಹದನವಾದ ನಖವಾಗು 100ವಟುವಾಮನಗೆ ಪಾದರಕ್ಷೆ ನೀನಾಗುದುಷ್ಟ ಸಂಹಾರಕನ ಪರಶು ನೀನಾಗುಅಟ'ವಾಸಗೆ ಬಿಲ್ಲುಬಾಣ ನೀನಾಗುದಿಟ್ಟ ಗೊಲ್ಲನ ಕರೆದ ಕೊಳಲು ನೀ ನಾಗು 101ಬುದ್ಧನಾದರೆ ಬುದ್ಧಿವಂತ ನೀನಾಗುಕಲ್ಕಿಯಾದರೆ ಚಲುವ ಕುದುರೆ ನೀನಾಗುಎಲ್ಲಿದ್ದರೂ ಅವನ ನೆರಳು ನೀನಾಗುಪ್ರಹ್ಲಾದ ದ್ರುವ ಅಂಬರೀಷ ನೀನಾಗು 102ಧನದೊಳಗೆ ಧನ ತವೋಧನನು ನೀನಾಗುಭಾಗ್ಯದೊಳು ವೈರಾಗ್ಯ ಭಾಗ್ಯವಂತನಾಗುಇಂದ್ರಿಯಂಗಳ ಜಯದಿ ನೀ ಶೂರನಾಗುಪಂಡಿತನು ತತ್ವದಾಚರಣೆಯೊಳು ಆಗು103ಸ್ವಾತಂತ್ರವೇ ಸ್ವರ್ಗ ಪರತಂತ್ರ ನರಕಮಾತೃಭೂ'ುಯ ಸೇವೆ ಮಡದವ ಶುನಕಪತಿತರುದ್ಧಾರ ಮಾಡುವದು ಸದ್ಧರ್ಮಪತಿತರನು ತುಳಿಯುವದು ಸೈತಾನಕರ್ಮ 104ಸಂಸಾರ ಸಾಗರವ ದಾಟಿಸಲು
--------------
ಭೂಪತಿ ವಿಠಲರು
ಗುರುರಾಯನಾ ಮನಿಯಾ ನಾಯಿ ನಾನು ಪ ಗುರು ಗುರು ಎನುತಲಿ ಇರುವೆ ಬಾಗಿಲದೊಳು | ಗುರುವಿನೆಂಜಲ ನುಂಡು ಸುಖಿಸುವೆ ನಮ್ಮಯ್ಯನಾ 1 ಹರಿ ಶರಣರ ಕಂಡು ಗರುವಿಸಿ ಕೆಲಿಯೆನು | ದುರುಳರ ಬೆನ್ನಟ್ಟಿ ಹೋಗೆನಾ ನಮ್ಮಯ್ಯನಾ 2 ಒಡೆಯನ ಮುಂದೆ ಯನ್ನಾ ಒಡಲವ ತೋರುವೆ | ಬಿಡದೆ ಅಂಗಣದೊಳು ಹೊರಳುವೆ ನಮ್ಮಯ್ಯ ನಾ3 ಹರಿನಾಮದಿಂದ ಭೋಂಕರಿಸಿ ವದರುವೆ | ಬರಗುಡೆ ಹಮ್ಮ ಸ್ವಜಾತಿಯ ನಮ್ಮಯ್ಯ ನಾ 4 ತಂದೆ ಮಹಿಪತಿ ಸ್ವಾಮಿ ಬಂದು ಮೈಯ್ಯಾದಡವಿ | ನಿಂದು ತನ್ನ ಬಿರುದಕ ಹಾಕಿದ ನಮ್ಮಯ್ಯನ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವಿನ ಚರಣವ ನೆನೆವುತಲನುದಿನ ಪರದೊಳು ದೈವದ ನೆಲೆ ನೋಡು ಪ ಗುರುವಿನ ಕರುಣಕಟಾಕ್ಷವದಲ್ಲದೆ ನರರಿಗೆ ದೊರಕದು ಪರಸುಖವು ಹಿರಿಯರ ಅಭಿಮತವಿಲ್ಲದ ಗೃಹದೊಳು ಕರೆಕರೆಯಾಗಿದೆ ಕೌತುಕವು 1 ಸ್ಥಿರವಾಗಿ ನಿಲ್ಲದ ಮನವು ಭ್ರಮೆಯೊಳು ನೆರೆವುದು ತನ್ನೊಳು ಘಾತಕವು ಸೆರೆವಿಡಿಯಲು ಹರಿವಿಡಿದಿಹನಾತನ ತೊರೆವುದು ಭವಭಯ ಸೂತಕವು 2 ಯೋಗಿಯ ಹೃದಯದಿ ಸಕಲಾಗಮ ಸಮ ನಾಗಿಯೆ ತೋರ್ಪುದು ಧೃಢವಾಗಿ ಸಾಗರ ಸುತ್ತಿದ ಭೂಭಾಗದ ಸರಿ ಯೋಗಿಯ ದೃಷ್ಟಿಯೆ ಘನವಾಗಿ 3 ಬಾಗಿದ ಕಬ್ಬಿನ ಕೋಲೊಳು ರುಚಿಕರ ವಾಗಿಯೆ ತೋರುವ ಪರಿಯಾಗಿ ರಾಗಿಯ ಶಿಲೆ ತಾ ಬಳಲಿದೆನೆನುತಲೆ ಭಾಗೆಯ ಕೊಂಬುದೆ ಸಮವಾಗಿ 4 ನಂಬದಿರಂಬರ ವಾದಿಯ ಅಂಶಕ ತುಂಬಿದ ಕುಂಭ ದೃಢದಿಂದ ಅಂಬರದೊಳಗಣ ಮೇಘಕೆ ವಾಯುವು ಬೆಂಬಲವಾಗಿಹ ದಯದಿಂದ 5 ಸಂಭ್ರಮದಿಂದಲಿ ಗರ್ಜಿಸಿ ನಾಲ್ದೆಸೆ ಅಂಬಿಸಿ ಪೋಗುವ ಪರಿಯಿಂದ ಅಂಬುಜಭವ ಬರೆದಕ್ಷರ ಮಾಸಲು ಅಂಬರ ಬಯಲಹ ತೆರದಿಂದ 6 ಶುದ್ಧವಶುದ್ಧವು ಆಗಿಹ ಪೃಥಿವಿಯ ಬದ್ಧವಾಗಿಯೆ ತೊಳೆದವರಾರು ಅಬ್ಧಿಯ ಮಧ್ಯದಿ ಎದ್ದ ವಾರಿಗಳನು ತಿದ್ದಿಯೆ ಪಸರಿಸುವವರಾರು 7 ಇದ್ದರೆ ಸರ್ವರ ಭವನದೊಳಗ್ನಿಯ ಮೆದ್ದವ ಶುದ್ದವೆಂಬವರಾರು ಹೊದ್ದಿದ ಮೂರುತಿ ನಾಲ್ದೆಸೆಯೊಳಗಿರೆ ಬದ್ಧವಾಗಿಯೆ ಕಟ್ಟಿಕೊಳಲ್ಯಾರು 8 ಬಯಲೊಳಗಿರುತಿಹ ಬಹು ಝೇಂಕಾರವ ನಯದೊಳು ನೋಡಿದರೇನುಂಟು ಬಯಲೊಳು ಮೂರಕ್ಷರವನೆ ಬಿತ್ತಲು ಮೈಲಿಗೆ ತಳಿಸುವ ಬೆಳೆಯುಂಟು 9 ಸಿರಿ ಸೊಬಗನು ಜಯಿಸುವ ಹಯವನು ಏರುವ ಬಗೆಯುಂಟು ದಯದೊಳು ಶ್ರೀ ಗುರು ವಿರಚಿಸಿಯಿತ್ತರೆ ಕ್ರಮವಿಕ್ರಯದೊಳು ಫಲವುಂಟು 10 ಬೇಡನು ಸಲಹಿದ ಆಡು ತಾ ಯಾಗಕೆ ಬೇಡವೆಂಬವರಾರು ಶಾಸ್ತ್ರದಲಿ ಕಾಡಿನೊಳಿರುತಿಹ ಮೃಗವಾಲದ ಸಿರಿ ನೋಡು ನೀ ನಿತ್ಯದಿರಾಸ್ತ್ರದಲಿ 11 ಕೋಡಗನಾದರು ನೋಡಿಯೆ ಭಜಿಸಲು ಕೂಡುಗು ಹರಿಯ ಪರತ್ರದಲಿ ಕೂಡಿಕೊಂಡರೆ ಪರಬೊಮ್ಮನ ಮನದಲಿ ಆಡದು ಮಾಯದ ಸೂತ್ರದಲಿ 12 ಮೃಗ ಗೋರೋಚನ ಸಹ ಉತ್ತಮವಾಗಿಹ ಮುತ್ತುಗಳು ನಿತ್ಯದಿ ಕ್ರಯಗಟ್ಟಿ ಉಣ್ಣದೆ ಹುಲ್ಲನು ಕಿತ್ತು ಮೆದ್ದಾಡುವ ಅವಸ್ಥೆಗಳು13 ಮೃತ್ಯುವ ಕಾಣದೆ ಬೊಮ್ಮವನಡಗಿಸಿ ಎತ್ತಲಾದರು ಪೋದ ವಸ್ತುಗಳು ಭಕ್ತರಿಗಲ್ಲದೆ ಮನವಪರೋಕ್ಷದ ವಸ್ತುವ ಕಾಣದು ನಿತ್ಯದೊಳು 14 ಜ್ಯೋತಿರ್ಮಯವಾಗಿಹ ವಸ್ತುವಿನೊಳು ಸೂತಕ ಹೊದ್ದುವುದೇನುಂಟು ಜಾತಿವಿಜಾತಿಯೊಳೊಲಿದಿಹ ಶಿವನವ ದೂತರ ನಂ[ಬ]1ದರಾರುಂಟು 15 ಓತು ಆಶುದ್ದವನುಂಡರು ಕವಿಲೆಯೊ ಳ್ಮಾತಿನ ವಾಸಿಯದೇನುಂಟು ನೀತಿ ವಿಹೀನರೊಳುದಿಸಿದ ಲವಣದ ಧಾತು ಕೂಡದೆ ಸವಿಯೇನುಂಟು 16 ಧಾರುಣಿ ಭಾರವ ಮಿತಿಗಟ್ಟಿ ತಕ್ಕಡಿ ಗೇರಿಸಿ ತೂಗಲು ಬಹುದೀಗ ವಾರಿಧಿಯನು ಮುಕ್ಕುಳಿಸಿಯೆ ಬತ್ತಿಸಿ ತೋರಿಸಲಪ್ಪುದು ಬಹು ಬೇಗ 17 ಧಾರುಣಿಯೊಳು ಗುರುಕರುಣದ ಅಳತೆ ಮು ರಾರಿಗು ಸಿಲುಕದು ಅದು ಈಗ ತೋರಿತು ಅಲ್ಲಿ ವರಾಹತಿಮ್ಮಪ್ಪ ಕು ಮಾರರು ವಾಜಿಯ ತಡೆದಾಗ 18
--------------
ವರಹತಿಮ್ಮಪ್ಪ
ತಾನಾರು ತನುವು ಆರು ತಿಳಿದು ನೋಡಿ ಧ್ರುವ ತಾನಾರು ತನುವಾರು ತನ್ನೊಳೂ ತಾನೆ ತಿಳಿದು ನೋಡಿ ಘನ ಬ್ರಹ್ಮದೊಳು ಮನ ಬೆರೆದಾತ ಶರಣನು 1 ಕಾಯದೊಳಿಹ್ಯ ಕಳವಳಗಳೆದು ಮಾಯ ಮೋಹದ ಮಲಗಳ ತೊಳೆದು ದೇಹ ವಿದೇಹವಾದಾತ ಶರಣನು 2 ಭ್ರಾಂತಿಯ ಅಭಾವಗಡಿದು ನೀತಿ ಸುಪಥದ ಮಾರ್ಗವ ಹಿಡಿದು ಜ್ಯೋತಿ ಸ್ವರೂಪವ ಕಂಡಾತ ಶರಣನು 3 ಭಾವ ಭಕ್ತಿಯ ಕೀಲವ ತಿಳಿದು ಹ್ಯಾವ ಹೆಮ್ಮೆಯ ಮೂಲವನಳಿದು ಜೀವ ಶಿಶುವು ತಿಳಿದಾತ ಶರಣನು4 ಜಾತಿಯ ಕುಲಗಳ ಭೇದವ ತಿಳಿದು ಯಾತನೆ ದೇಹದ ಸಂಗವನಳಿದು ಮಾತಿನ ಮೂಲವ ತಿಳಿದಾತ ಶರಣನು 5 ಸೋಹ್ಯ ಸೊನ್ನೆಯ ಸೂತ್ರವಿಡಿದು ಲಯ ಲಕ್ಷಿಯ ಮುದ್ರೆಯ ಜಡಿದು ದ್ಯೇಯ ಧ್ಯಾತವ ತಿಳಿದಾತ ಶರಣನು 6 ನಾದದಿಂದ ಕಳೆಯ ಮುಟ್ಟಿ ಸಾಧಿಸಿ ಉನ್ಮನ ಮುದ್ರೆಯ ಮೆಟ್ಟಿ ಆದಿತತ್ವದ ಗತಿ ತಿಳಿದಾತ ಶರಣನು 7 ಆಧಾರ ದೃಢದಿಂದ ಅರಹುತನಾಗಿ ಮಧ್ಯ ಮುಪ್ಪರದಲಿ ಸ್ಥಿತಿವಾಗಿ ಊಧ್ರ್ವ ಮಂಡಲಗತಿ ಬೆರೆದಾತ ಶರಣನು 8 ಬಾಹ್ಯಾಂತ್ರ ಪರಿಪೂರ್ಣ ಘನಮಯಗಂಡು ಸಾಯೋಜ್ಯ ಸದ್ಗತಿ ಸವಿಸುಖನುಂಡು ಮಹಿಪತಿ ಗುರುಮನಗಂಡಾತ ಶರಣನು 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾಮರಸ ನೆರೆ ನಂಬಿದೆ ಪ ಕಾಮಕ್ರೋಧವ ಕಳೆದು ನಿನ್ನ ನಾಮಾಮೃತವ ಪ್ರೇಮದಲಿ ಎನಗುಣಿಸೋ ಸ್ವಾಮಿ ಅ.ಪ. ಉಪರಾಗ ದಶಮಿ ದ್ವಾದಶಿ ದಿವಸ ಮೊದಲಾದ ಉಪೇಕ್ಷೆ ಮಾಡಿ ಕಳೆದೆ ಉಪಕಾರಯೆಂದು ನಿಜ ಉಕ್ತಿ ಪೇಳಿದರೆನಗೆ ಅಪಕಾರ ಕಾಣುತಿದೆಕೋ ನಿಪುಣನೆನಿಸುವೆನೆಂದು ಅಜ್ಞಾನಿಗಳ ಮುಂದೆ ತಪ ವೃದ್ಧರನ್ನು ಹಳಿವೆ ಸ್ವಪನದೊಳಗಾದರೊ ವೈರಾಗ್ಯ ಬಯಸದಲೆ ಕಪಟ ಮನುಜರೊಳಾಡಿ ನಿನ್ನ ಮರೆದೆ ಸ್ವಾಮೀ 1 ಮಾರನ ಉಪಟಳಾಕಾರದಲಿ ನಾ ಬಲು ಪೋರ ಬುದ್ಧಿಯನು ಮಾಡಿ ಆರು ಇಲ್ಲದ ಸಮಯದೊಳವಳು ಕಣ್ಣು ಸನ್ನೆಯ ಮಾಡಿ ಕೋರಿದ್ದು ಇತ್ತು ನೀಡಿ ಕ್ರೂರಮಾನವರೊಳಗೆ ಆಡಿ ವಾರಿಜನಾಭ ನಿನ್ನ ಆರಾಧನೆಯ ಮರೆದು ಧಾರಿಣೀ ಭಾರದೆ ಪರಲೋಕ ಮರೆದೆ 2 ಭೂಸುರರು ಚಂಡಾಲ ಜಾತಿಯೆನ್ನದೆ ಬಲು ಹೇಸಿಕಿಲ್ಲದೆ ತಿರುಗುವೆ ಪರಿ ವೇಷವನು ಧರಿಸಿ ಮೆರೆದೇ ಆಶೆಯುಳ್ಳ ಮಹಪಿಶಾಚಿಗೊಳಗಾಗಿ ಹರಿ ದಾಸ ಸಹವಾಸ ಜರೆದೆ ವಾಸುಕೀಶಯನ ವಸುದೇವತನಯನೆ ನಿನ್ನ ದಾಸನೆನ್ನಿಸದೆ ಅಪಹಾಸ ಮಾನವನಾದೆ 3 ಹರಿದಾಸರ ಬಳಿ ಅರಘಳಿಗೆ ಕೂತರೆ ಶಿರವ್ಯಾಧಿಯೆಂದೇಳುವೇ ದುರುಳ ದುರ್ವಾರ್ತೆಗಳ ಪೇಳಲು ಹಸಿವು ತೃಷೆ ಮರೆದು ಲಾಲಿಸಿ ಕೇಳುವೆ ತರುಣಿ ಮಕ್ಕಳು ಎನ್ನ ಪರಿಪರಿ ಬೈದರೆ ಪರಮ ಹರುಷವ ತಾಳುವೆ ಗುರುಹಿರಿಯರೊಂದುತ್ತರವನಾಡಲು ಕೇಳಿ ಧರಿಸಲಾರದೆ ನಾನು ಮತ್ಸರಿಪೆನವರೊಡನೇ 4 ನಾ ಮಾಡಿದಪರಾಧ ಎಣಿಸಿ ಬರೆದರೆ ಈ ಭೂಮಂಡಲವು ಸಾಲದಿಹುದೊ ಕ್ಷಮೆಯೊಳಗುಳ್ಳ ದುರ್ಮತಿ ಕೂಡಿಡಲು ಈ ಮತಿಯ ಅದು ಪೋಲದು ಹೋಮ ಜಪತಪಗಳನು ಎಷ್ಟು ಮಾಡಲು ಪಾಪ ಸ್ತೋಮ ಎಂದಿಗು ಪೋಗದೊ ಸಾಮಜವರದ ಜಗನ್ನಾಥ ವಿಠಲ ನಿನ್ನ ಕಾಣಿ 5
--------------
ಜಗನ್ನಾಥದಾಸರು
ದೇಹ ಭಾವವು ಹೋಗಿ ದೇವನೇ ತಾನಾಗಿದೇಹಗುಣವೆಲ್ಲಿಯದೋ ಮುಕ್ತ ಪ ಗರುಡನ ಮನೆಯೊಳಗೆ ನಾಗರ ಜಾತಿಯಪರಿ ನಡೆವುದೇನೋ ಮುಕ್ತಶರೀರ ಸಹಿತದ ಬ್ರಹ್ಮಾಗಿ ತಾನಿರೆಹರಿವವೆ ಪ್ರಾಣಗಳು ಮುಕ್ತ1 ಉರಿಯದು ಉರಿಯಲು ಉರಿಯಲಿಅರಗದು ಇಹುದೇನೋ ಮುಕ್ತಕರುವಿಟ್ಟೆರಕದಿ ಥಳಥಳ ಹೊಳೆಯದೆಇರುವುದೇ ಈ ಇಂದ್ರಿಯಗಳು ಮುಕ್ತ2 ರವಿಯದು ಬೆಳಗಿರೆ ಕಿರಣ ಕಾಂತಿಯಿಂಗೂಗೆಗಳೆಲ್ಲ ತಿರುಗುವವೋ ಮುಕ್ತಖವ ಖವ ಖವಿಸುತ ಪರವಶವಿರೆವಿವರಿಸೆ ಮನವೆಲ್ಲೊ ಮುಕ್ತ 3 ಈಶನ ಕಣ್ಣುರಿ ಭುಗು ಭುಗು ಭುಗಿಲೆನೆಏಸು ಉಳಿವುದು ಕಾದು ಮುಕ್ತಿಸೂಸುವ ಮುಖದಲಿ ತೃಪ್ತಿಯೆ ತುಂಬಿರೆವಾಸನೆ ಎಲ್ಲಿಹುದೋ ಮುಕ್ತ 4 ಪರಮಾತ್ಮನು ತಾ ಪರಿಪೂರ್ಣನಾನಿರೆಮೆರೆವುದು ಅವಿದ್ಯೆ ಮುಕ್ತಗುರು ಚಿದಾನಂದ ಸಹಜದಿ ತಾನಿರೆಇರುವುದೆ ಜೀವತ್ವ ಮುಕ್ತ 5
--------------
ಚಿದಾನಂದ ಅವಧೂತರು