ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ಸಂಸಾರವನು ಮಾಡಿ ಸಕಲ ಜನರೂ ಪ ಕಂಸಾರಿ ಶ್ರೀಕೃಷ್ಣ ಕೈಪಿಡಿದು ಸಲಹುವನು ಅ.ಪ. ಬುದ್ಧಿಯೆಂದೆಂಬ ಕನ್ನಿಕೆಯ ಮದುವೆಯ ಮಾಡಿಸದ್ಧರ್ಮದಭಿಮಾನದಿಂದ ಬೆಳಸೀ ||ಶುದ್ಧ ಭಕ್ತಿಗಳೆಂಬ ಮಕ್ಕಳನು ಪಡೆದು ಬಹುಅದ್ಭುತ ಭವಾಬ್ಧಿಯನು ದಾಟಿರಯ್ಯಾ 1 ಚಾರು ಸುಜ್ಞಾನವೆಂಬುವ ಮುದ್ದು ಮಗನ್ಹಡೆದುವೈರಾಗ್ಯವೆಂಬ ಭಾಗ್ಯವನೆ ಬೇಡೀ ||ಸಾರ ಹರಿನಾಮಗಳ ರಸ ಪದಾರ್ಥಗಳುಣಿಸಿಕಾರುಣ್ಯದಲಿ ಬೆಳೆಸಿರಯ್ಯ ಮಕ್ಕಳನೂ 2 ಯಮ ನಿಯಮ ಅಷ್ಟಾಂಗ ಅಣಿಮಾದಿಗಳುಕ್ಷಮೆ ದಮಾದಿಗಳೆಂಬ ಬಂಧು ಬಳಗಾ ||ಮಮತೆ ಪೆರ್ಚಿಸಿಕೊಂಡು ಬೀಗತನ ಮೊದಲಾದಅಮರಿಕೆಯ ಸಂಬಂಧವನೆ ಮಾಡಿರಯ್ಯಾ 3 ಶೀಲ ಸನಕಾದಿಗಳು ಮುನಿ ದೇವತಾದಿಗಳುತಾಳಿ ತಮ್ಮೊಳಗೆ ಸಮ ವಿಷಯರಾಗಿ ||ಆಲಂಪಟಗಳ್ಹಚ್ಚಿಕೊಂಡು ಭವನಿಧಿ ದಾಟಿಸಾಲೋಕ್ಯ ಮೊದಲಾದ ಮುಕ್ತಿಗೈದಿದರೂ 4 ಸತಿ ಸುತರು ಭಾಗ್ಯವೆ ನಿಮಗೆಹರಿಯಿತ್ತ ಕಾಲಕ್ಕು ಹೃದಯದೊಳಗೇ ||ಮರೆಯಲಾಗದು ಹಿಂದೆ ಸಂಸಾರದಾ ಬಾಧೆ ದುರಿತಾರಿ ವ್ಯಾಸ ವಿಠ್ಠಲ ಬ್ಯಾಗ ಒಲಿವಾ 5
--------------
ವ್ಯಾಸವಿಠ್ಠಲರು