ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಖೋಡಿಗುಣ ಜಗದಲ್ಲಿ ಹೂಡಿ ನೀ ನಲಿವಾಗ ನಾಡೆದ್ದು ಕುಣಿಯುವದೊ ನಾಸ್ತಿಕಾದಲ್ಲಿ ಪ ಮಾಡಿ ದುಪ್ಕ್ರಿಯ ಜಾಲ ಮತಿಭ್ರಷ್ಟತನದಲ್ಲಿ ನೋಡರೂ ಸನ್ಮಾರ್ಗ ಗಾಡಿಕಾರನೆ ಹರಿಯೆ ಅ.ಪ ಗತಿಸಿದಾ ತನುಗಳಲಿ ರತಿವಿಷಯಗಳ ಮಾಡಿ ಮತಿ ಮನಸು ದುರ್ಭಾವಗಳಲಿ ನೆಯದು ಮತ್ರ್ಯರನು ನೋಡಲತಿ ಭೀತಿ ಆಹುದೊ ಮನಕೆ 1 ನಾನಾಭಾವವ ಪೊಂದಿ ಹಾನಿವಶರಾಗಿಹರು ಜ್ಞಾನನಿಧಿ ತವಕರುಣಕೆರವಾಗಿ ನಡೆದು ನಾನಾ ದುಃಖದಿ ನರಳಿ ನರಕ ಯಾತನೆಗೊಂಬ ಜ್ಞಾನಹೀನರ ನೋಡಿ ನಡುಗುವೆನೊ ಹರಿಕಾಯೊ 2 ಕ್ವಚಿತು ಸಜ್ಜನ ತಾವು ಶುಚಿ ಮನದಿ ನಿನ್ನಲ್ಲಿ ರುಚಿಗೊಳಲು ಎತ್ತೆನಿಸೆ ಎದೆ ಬಿಚ್ಚುವಂತೆ ಹೆಚ್ಚಿ ಆದಿವ್ಯಾಧಿ ನುಚ್ಚು ಮಾಳ್ಪದೊ ಮನಸು ಸಚ್ಚಿದಾನಂದ ಹರಿ ಸಜ್ಜನಾಧಾರಿ ಧೊರಿ3 ವಿಧಿ ಲಕ್ಷ್ಮಿ ಸನ್ನತ ಮಹಿಮ ಬಂದ ಭಯಗಳು ನಿನ್ನ ಇಚ್ಛೆಯಿಂದ ಬಂದದಲ್ಲದೆ ಬೇರೆ ಒಂದು ಕಾರಣ ಕಾಣೆ ಸಿಂಧು ಕೊಡುವವ ನೀನೆ4 ತಾಮಸರ ವಿಕಾರ ದುಃಖರಸÀ ಸೃಜಿಸುವುದು ಸೌಮ್ಯ ಜನ ಸದ್ಭಾವ ಸುಖಸಾರ ಸೃಷ್ಟಿ ಕಾಮಧೇನು ಜಯೇಶವಿಠಲಯ್ಯ ನಿನ್ನ ಮಹ ನೇಮ ಇಂಥಾದ್ದೆ ಪತಿತ ಪಾವನ ಪಾಹಿ 5
--------------
ಜಯೇಶವಿಠಲ
ಪಾಮರ ಜನರಿಗೆಲ್ಲ ಪ ಕಾಮಮದ ಮತ್ಸರಗಳಿಂದಲಿ ತಾಮಸೌಘಕೆಅ.ಪ ಸ್ನಾನ ಮೌನ ಜಪತಪಗಳನರಿಯದೆ ಸ್ವಾಮಿ ನಿನ್ನನು ಮುಟ್ಟಿ ಪೂಜಿಸದೆ ಸೀಮೆಯರಿಯದ ಕಾಮಕರ್ಮದಿ ನೇಮವಿಲ್ಲದ ಕ್ಷುದ್ರಸ್ವಾರ್ಥದಿ ತಾಮಸರ ಸಂಸರ್ಗದಿಂದ ವಿ ರಾಮವರಿಯದ ಜನರ ಪಾಲಿಗೆ 1 ಜ್ಞಾನ ಭಕ್ತಿ ವೈರಾಗ್ಯಗಳರಿಯದೆ ಜ್ಞಾನಿಜನರ ಸಂಗವ ಬಯಸದೆ ಹೀನದುಷ್ಕರ್ಮಗಳ ಮಾಡುತ ನಾನು ತಾನೆಂಬ ಕೊಬ್ಬಿಲಿ ಜಾನಕೀಪತಿ ನಿನ್ನ ಮಹಿಮೆಯ ಕಾಣದಿಹ ದುಷ್ಕರ್ಮಿಜನರಿಗೆ 2 ಶ್ರೀನಿಧಿ ನೀ ಕರುಣಿಸಿ ರಕ್ಷಿಸದಿರೆ ದೀನಜನರ ಪಾಲಿಪರಾರೋ ಸಾನುರಾಗದಿ ಬೇಡಲರಿಯದ ಜ್ಞಾನಹೀನರ ತಪ್ಪನೆಣಿಸದೆ ನೀನೆ ಕೈಪಿಡಿದೆತ್ತಿ ರಕ್ಷಿಸು ಮಾನನಿಧಿ ರಘುರಾಮವಿಠಲ 3
--------------
ರಘುರಾಮವಿಠಲದಾಸರು
ಶಿಶುಗಳಪರಾಧಕೆ ಶಿಕ್ಷೆ ಕಣ್ಣೀಲಲ್ಲದೇ ಯಶವ ಬಡಿಗೋಲವನು ಎತ್ತುವರೇ ರಂಗಾ ಪ ಇಲಿಗೆ ಹೆಬ್ಬುಲಿಯಾಕೆ|ಮೊಲಕೆ ಮದಗಜವ್ಯಾಕೆ| ಕಳೆತ ಹಣ್ಣಿಗೆ ಮತ್ತೆ ಕರಗಸ್ಯಾಕೆ| ಕಲೆ ಬಿದ್ದ ಕನ್ನಡಿಗೆ ಗುದ್ದಲಿಯ ತರಲೇಕೆ| ಗುಳಲಿ ಕಾಯಿಗೆ ಹೊತ್ತಗಲ್ಲ ವ್ಯಾಕೆ 1 ಹಳ್ಳಗೆ ಹಡಗವ್ಯಾಕೆ|ಕೊಳ್ಳಿಗೆ ಕೊಡ ಜಲವ್ಯಾಕೆ| ಮುಳ್ಳು ಮುರಿದುದಕ ಮೊನೆ ಹಾರಿ ಯಾಕೆ| ಮಲ್ಲಿಗೆ ಹೋವಿಗೆ ಬಂಧ ಹಗ್ಗದಲ್ಯಾಕೆ| ಹಲ್ಲಿ ಬೆದರಿಸೆ ಹೊಡೆವ ಭೇರಿಯಾಕೆ 2 ಜ್ಞಾನಹೀನರ ನಮ್ಮ ತಪ್ಪನೆಣಿಸಿದುರಿತ| ಮೊನೆಗಾಣಿಸುತ ಬನ್ನಿ ಬಡಿಸುವುದುಚಿತವೇ| ದೀನವತ್ಸಲ ತಂದೆ ಮಹಿಪತಿ ಸುತ ಪ್ರಭುವೇ| ನ್ಯೂನಾರಿಸದೇ ನಿನ್ನವನೆಂದು ಸಲಹೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು