ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಜ್ಞಾನಿ ನೀನೀಗ ಕೇಳು ಸುಜ್ಞಾನಿಗಳನು ನೀ ನಿಂದಿಸುವೆಭಗ್ನವಾಗುವೆ ನೀನು ಯಮನ ಕೈಯಿಂದಪ ವಿಷಯದೊಳಗೆ ಹುಟ್ಟಿ ಬೆಳೆದುವಿಷಯದೊಳಗೆ ಮುಳುಗಿ ತೇಲಿವಶವಲ್ಲದ ಮಾತುಗಳ ನುಡಿವೆ ನೀನು ಕೇಳೋ ಅಜ್ಞಾನಿ 1 ಅಸಮ ಗುಣಗಳ ನೋಡೆ ಋಷಿಗಳ ಅನುಭವಗಳನು ಹಳಿವೆದುಷ್ಮಾನ ನೀನು ಕೇಳೋ ಅಜ್ಞಾನಿ2 ಒಂದು ನಿನಗ್ಹೋಗಲಿಲ್ಲ ಒಂದು ನುಡಿನಯವಿಲ್ಲಇಂದು ಅನುಭವಿ ತಾನು ಎಂಬೆಯಲ್ಲೊ ಕೇಳೋ ಅಜ್ಞಾನಿ3 ಸುಂದರ ಸಾಕ್ಷಿಯ ನಲಿಯದೆ ನೀನೀಗಇಂದೀಗ ನಾನೆಂದು ಕಂಡೆಯಲ್ಲೋಚಂದ ಚಿದಾನಂದ ನೀನಾಗಿಹೆ ಕೇಳುಮಂದ ಮತಿಯ ಬಿಡು ನೀನು ಕೇಳೋ ಅಜ್ಞಾನಿ 4
--------------
ಚಿದಾನಂದ ಅವಧೂತರು
ಡಂಕವ ಸಾರಿದನೋ ಯಮ ತನ್ನ ನಗರದಿ ಘಂಟೆಯ ನುಡಿಸಿದನು ಪ ಡಂಕಸಾರಿದ ತನ್ನ ತುಂಟದೂತರಿಗ್ವೊ ಯ್ಕುಂಠನ ದಾಸರ ತಂಟೆಯು ಬೇಡೆಂದು ಅ.ಪ ಕಾಲಕಾಲದಿ ಹರಿಯಕಥೆ ಕೀರ್ತ ನಾಲಿಸುವರ ನೆರೆಯು ತಾಳದಮ್ಮಡಿ ಸಮ್ಮೇಳದೊಡನೆ ಆ ನೀಲಶ್ಯಾಮನ ಭಜಿಪರಾಳಿನಾಳನುಕಂಡು ಕಾಲನಾಲುಗಳೆಂದ್ಹೇಳದೆ ಬನ್ನಿರೆಂದು 1 ಮಂದಿರಂಗಳದಿ ವೃಂದಾವನ ದಂದ ಕಂಡಾಕ್ಷಣದಿ ಸಿಂಧುಶಯನ ಬಂಧುಭಕ್ತರ ಮಂದಿರವಿದೆಂದು ಹಿಂದಕ್ಕೆ ನೋಡದೆ ಸಂದ್ಹಿಡಿದೋಡಿ ಪುರ ಬಂದು ಸೇರಿರೆಂದು 2 ಪರರಂಗನೆಯರ ಸ್ಮರಿಸುವ ಪರಮ ನೀಚರನ್ನು ನರಹರಿ ಸ್ಮರಣೆಯ ಅರಿಯದ ಆಧಮರ ಕರುಣಿಸದೆ ತುಸುಮುರಿದು ಮುಸುಕಿಕಟ್ಟಿ ದರದರನೆಳೆತಂದು ಉರಿಯೊಳ್ಪೊಯಿರೆಂದು 3 ಪರದ್ರವ್ಯವಪಹರಿಸಿ ಲಂಚದಿಂದ ಸರುವ ತನ್ನದೆನಿಸಿ ನಿರುತ ಮಡದಿಮಕ್ಕಳೊರೆವ ದುರಾತ್ಮನರ ಗುರುತಳನೆಳತಂದು ಕರಿಗಿದಸೀಸಬಾಯೊಳ್ ವೆರಸಿ ಜನಕಕೊಂಡದುರುಳಿಸಿಬಿಡಿರೆಂದು 4 ವೇಣು ಕರದಿ ಪಿಡಿದು ಬಾಣಾರಿ ಧ್ಯಾನದೊಳಗೆ ಬರೆದು ಜಾನಕೀಶನ ಲೀಲೆ ಗಾನದಿಂ ಪಾಡುತ ಆನಂದಿಪ ಮಹಜ್ಞಾನಿಗಳನು ಕಂಡು ಕಾಣದಂತೆ ಸಿಕ್ಕ ಜಾಣ್ಣುಡಿದೋಡಿರೆಂದು 5 ಇಂದಿರೇಶನದಿನದಿ ಅನ್ನವನು ತಿಂದ ಮೂಢರ ಭರದಿ ತಂದು ಒದೆದು ಮಹಗಂಧಮದು ರ್ಗಂಧನಾರುವ ಮಲತಿಂದು ಬದುಕಿರೆಲೊ ಎಂದು ಮನೆಹೊರಗಿನ ಮಂದಿರದಿಡಿರೆಂದು 6 ವಿಮಲ ತುಳಸೀಮಣಿಯ ಧರಿಸಿ ಅಮಿತ ಮಹಿಮನ ಚರಿಯ ವಿಮಲಮನಸರಾಗಿ ಕ್ರಮದಿ ಬರುವ ಶ್ರೀ ರಾಮದಾಸರ ಪಾದಕಮಲಗಳನು ಕಂಡು ಯಮದೂತರೆನ್ನದೆ ನಮಿಸಿ ಬನ್ನಿರೆಂದು 7
--------------
ರಾಮದಾಸರು
ನಿತ್ಯ ಸ್ಮರಿಸಿ ಕೃತಕೃತ್ಯನು ನೀನಾಗೊ ಪ ಕರ ಕಂ- ಜೋತ್ಥರಾದ ಗುರು ಅ.ಪ ಸುತ್ತಲು ಬಿಡದೆ ಧರಿತ್ರಿಯೊಳಗೆ ಸುಕ್ಷೇತ್ರಗಳಲಿ ಚರಿಸಿ ಹಸ್ತಿ ಗಣಕೆ ಪಂಚ ವಕ್ತ್ರರೆಂದು ಕರಿಸಿ ಛಾತ್ರ ವರ್ಗ ಸಂಯುಕ್ತರಾಗಿ ಸುಖತೀರ್ಥರ ಸುಮತಕೆ ಸಂಸ್ಥಾಪಕ ಗುರು 1 ಏನು ಕರುಣವೊ ಜ್ಞಾನಿಗಳನು ಧನದಾನದಿ ದಣಿಸುತಲಿ ಕ್ಷೋಣಿ ವಿಬುಧರಿಗೆ ನ್ಯಾಯ ಸುಧಾರಸ ಪಾನ ಮಾಡಿಸುತಲಿ ದೀನ ಜನಕೆ ಸುರಧೇನು ಎನಿಸಿದ ಮಹಾನುಭಾವರೆಂದು ಸಾನುರಾಗದಲಿ 2 ಶ್ರೀರಾಮನ ಪದಪದುಮ ನೋಳ್ಪಜನರ ಜನುಮ ಧೀಮಜ್ಜನರಿಗೆ ಕಾಮಿತ ಗರಿಯುವ3 ತರಣಿಯೋಳ್ಪಗಲಿರುಳು ಭವಶರಧಿಯ ದಾಟಿಸಲು ವಸನದಲಿ ಪರಿಶೋಭಿತ ತನು 4 ದುರಿತ ತಮಕೆ ದಿನಕರ ಸಮರೆನಿಸುತಲಿ ಸಿರಿ ಕಾರ್ಪರ ನರಹರಿಯ ಚರಣಯುಗ್ಮ ಸ್ಮರಿಸುತ ಹರುಷದಲಿ ಧರೆಯೊಳು ಪಂಢರ ಪುರ ಸುಕ್ಷೇತ್ರದಿವರತನುವಿರಿಸಿದ ಪರಮ ಮಹಿಮ ಗುರು 5
--------------
ಕಾರ್ಪರ ನರಹರಿದಾಸರು
ಮಾನವ ನಿನ್ನಾ | ಪಡೆದು ಕೊ ಸದ್ಗತಿಯನು ಪ ತಡಿಯದೇ ಸದ್ಗುರು ಅಡಿಗಳ ಪೂಜಿಸಿ | ಒಡನೆ ಭವಾಂಭವಾಂಬುಧಿ ಥಡಿಯವ ಸಾರೆಲೋ ಅ.ಪ ಪತ್ರೇಂದ್ರವಾಹನನು | ಮಣಿಗಣ ಸೂತ್ರದಂದದಿ ಜೀವನು | ಚಿತ್ರ ವಿಚಿತ್ರದಲಿ ಅಡಿಸುವ | ಗು | ಣತ್ರಯ ವಾದಲಿ | ಕಳತ್ರ ಸುಮಿತ್ರ ಸಮಂಧ | ಧತ್ರಿಲಿ ಮಾಯ ಚರಿತ್ರವಿದೆಂದು 1 ತಾನಾರು ತನುವಾರದು ತನುವಿನ | ತಾನೀ ಸಂಮಂಧವಾರದು | ಜ್ಞಾನಿಗಳನು ಮತದಿ ತಿಳಿದು ನೋಡು | ಸ್ವಾನುಭವದ ಬೋಧದೀ | ಹಾನಿ ಯಶ _ ಸುಖ ಮಾನಾಪಮಾನವು | ಮಾನವರಿಗೆ ಪ್ರಾಚೀನ ಫಲೆಂದು 2 ಹಿಂದಾದ ನೆನಹಿಸದೇ ವಾಸನೆಗಳ | ಮುಂದೇನು ಕಾಮಿಸದೇ | ಕ | ನಸಿನಾನಂದ ವಿದೆಂದು ಭಾವಿಸೀ | ತಂದೆ ಮಹಿಪತಿ ಕಂದಗ ಸಾರಿದ | ದ್ವಂದ್ವಗೆಲಿದು ಗೋವಿಂದ ನೆನೆಯುತ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು