ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯ ಮಂಗಳಜಯ ಮಂಗಳ ಶುದ್ಧಾದೈತನಿಗೆ ಪ ಅಗಣಿತ ಮಹಿಮಗೆ ಅಕ್ಷಯರೂಪಗೆಅಖಂಡ ಸಹಜಾನಂದನಿಗೆಝಗಿ ಝಗಿತಾತ್ಮಗೆ ಝಳುಕಿಸಿ ಕರ್ಣದಿಝಣನಾದವ ಕೇಳ್ವನಿಗೆಸೊಗಯಿಸಿ ಚಂದ್ರನ ಶತಕೋಟಿಯಪ್ರಭೆ ಸಾರವ ಸವಿಸವಿದುಣ್ಣುವಗೆಬಗೆ ಆನಂದದಿ ಸುಖಿಸುವ ದೇವಗೆಭಾಸ್ಕರ ತೇಜಃಪುಂಜನಿಗೆ1 ನಿತ್ಯಾನಂದಗೆ ನಿರ್ಮಲರೂಪಗೆನಿಶ್ಚಲ ಪರಬ್ರಹ್ಮಾತ್ಮನಿಗೆನಿತ್ಯಶುದ್ಧಗೆ ನಿಜನಿರ್ಮಾಯಗೆನಿಜಬೋಧ ಜ್ಞಾನೈಕ್ಯನಿಗೆಪ್ರತ್ಯಗಾತ್ಮಗೆ ಪೂರ್ಣಬ್ರಹ್ಮನಿಗೆಪರಮ ಪರತರ ಪಂಡಿತಗೆನಿತ್ಯತೃಪ್ತಗೆ ನಿಗಮಾಗಮನಿಗೆನಿಶ್ಚಿಂತಾತ್ಮ ನಿಸ್ಪøಹಗೆ 2 ಕೈಯಲಿ ಪಿಡಿದಿಹ ಜಪಮಾಲೆಯಸರ ಕರ್ಣಕುಂಡಲವಿಟ್ಟಿಹಗೆಮೈಯೊಳು ಪೊದ್ಹಿಹ ಕಾಷಾಯಂಬರಮಿರುಪಿನ ಕೌಪೀನವುಟ್ಟಿಹಗೆಮೈಯೊಲೆದಾಡುವ ಸ್ವಾತ್ಮಾನಂದದಿನಲಿವ ಸದ್ಗುಣ ಶಾಂತನಿಗೆಮೈಯನೆ ಸದ್ಗತಿ ಭಕ್ತರಿಗೀಯುವವ್ಯಾಪಿತ ಜೀವನ್ಮುಕ್ತನಿಗೆ3 ಆರವಸ್ಥೆಯ ಧರಿಸಿಯೆ ಜಗದಲಿಅನಂತರೂಪ ತಾನಾಗಿಹಗೆಮೀರಿಯೆ ಸದ್ಗುಣ ನಿರ್ಗುಣ ರೂಪವಮೆರೆದಿಹ ಮುಮುಕ್ಷಾಂಗನಿಗೆತೋರುವ ತ್ವಂಪದ ತತ್ತ್ವಮಸಿಪದತೋರಿ ವಿರಾಜಿಪ ತುಷ್ಟನಿಗೆಧೀರೋದ್ಧಾರಗೆ ದೀನರನಾಥಗೆದೃಶ್ಯಾದೃಶ್ಯ ವಿದೂರನಿಗೆ 4 ನಿರುಪಮ ನಿರಮಯ ನಿಜ ನಿರ್ಲಿಪ್ತಗೆನಿರ್ಭಯ ನಿರ್ವಿಕಲ್ಪನಿಗೆಪರಮಪುರುಷಗೆ ನಿಗಮೋದರನಿಗೆಪರಮಾರೂಢಾ ಮಾರ್ಗನಿಗೆಗುರುಚಿದಾನಂದ ಅವಧೂತಾತ್ಮಗೆಗುಣನಿಧಿ ತುರಿಯಾತೀತನಿಗೆಸ್ಥಿರಸಿದ್ಧ ಪರ್ವತದಾಸ ಶ್ರೀಪುರುಷಗೆಬಗಳಾ ಶ್ರೀಗುರು ರೂಪನಿಗೆ 5
--------------
ಚಿದಾನಂದ ಅವಧೂತರು