ಗುರುರಾಜ ಕರುಣದಿ ನೋಡಯ್ಯ ಪ
ಸುರಗಣ ಒಡೆಯನೆ ಕರವೆತ್ತಿ ಮುಗಿಯುವೆ
ಕರೆಕರೆ ಮಾಡದೆ ಚರಣವ ತೋರಿಸು ಅ.ಪ.
ಭವ ಮೋಚಕನ ಬಿಟ್ಟು
ಭವಣೇಗಳನೆಪಟ್ಟು ನಾ ಒದ್ದಾಡುವೆ ಇಂದು
ಅವನಿಯ ಜನರೊಳು ಅವಗುಣ ಪ್ರತಿಮೆಯ
ತವಕದಿ ಪೊರೆಯದೆ ಜವನಡಿಕಳಿಸೊದೇ 1
ಅನುದಿನದೀ ನಾನು ಅನುಮಾನದಿಂದಲಿ ನೊಂದೆ
ಅನಿಲನ ಹಾದಿಯ ಬಿಟ್ಟು ಅನ್ಯರಾನಂಬೀ ಕೆಟ್ಟೆ
ತನುಮನ ನಿನ್ನಡಿ ಅರ್ಪಿಸಿನಂಬಿದೆ
ದಿನದಿನ ದಯದಿಂ ನಿನ್ನವರೊಳು ಸೇರಿಸೊ 2
ಕಾಮಕೇಳಿಯಲಿ ಮುಳುಗಿ ಕಾಮಿನಿಯರ ಬರೆದೆ
ಕಾಮಜನಕನ ಮರೆತೆ ಸೋಮಶೇಖರ ಪ್ರಿಯನೆ
ಶಮದಮಪಾಲಿಸಿ ತಾಮಸ ಓಡಿಸಿ
ಸಾಮಜವರದನ ಪ್ರೇಮವ ಕೊಡಿಸೋ 3
ಜ್ಞಾನಶೂನ್ಯನು ಆಗಿ ಶ್ವಾನಂದದಿ ಇರುವೆ
ಮಾನಾಭಿಮಾನವನ್ನು ನಿನಗೆ ಅರ್ಪಿಸಿದೆನೊ
ಅನಿಲನಶಾಸ್ತ್ರದಿ ಜ್ಞಾನವ ನೀ ನೀಡಿ
ಮನದಲಿ ನಲಿನಲಿ ಮುನಿಗಳ ಒಡೆಯಾ 4
ವಿಧವಿಧ ಟೀಕೆಗಳನು ಮುದದಿಂದಲಿ ಮಾಡಿ
ಮೋದವಂತದ ತತ್ವಗಳ ಮುಂದಕ್ಕೆ ತಂದೆಯೋ
ಸದಯದಿ ಜಯಮುನಿ ವಾಯ್ವಾಂತರ್ಗತ
ಮಾಧವ ಕೃಷ್ಣವಿಠಲನ ತೋರುತ 5