ಏನಾದರೇನಲ್ಲಿ ಇರಕೂಡದು ಹೋಗಿ
ಆನಂದ ಕಾನನದೊಳಿರೆ ಸುಖವದು ಪ
ನರಮನುಜರೊಳಗಿಲ್ಲಿ ಜನಿಸಿಭೂತಳಕೆಲ್ಲ
ದೊರೆಯೆನಿಸಿ ಭೋಗ ಪಡಿಸುವುದರಿಂದಲು
ಮಣಿ ಕರ್ಣಿಕೆಯ
ಸರಸಿಯೊಳು ಚರಿಸಿ ಮಡಿದರೆ ಮುಕ್ತಿಯಹುದು 1
ಕೊಕ್ಕದಲಿ ವನಿತೆ ಮನೆಮಕ್ಕಳಲಿ ಪಶುಗಳಲಿ
ಹೆಕ್ಕಳದೊಳಿಲ್ಲಿ ಸಾವುದರಿಂದಲು
ಹೊಕ್ಕು ಮನೆ ಮನೆ ಬಿಡದೆ ಕಾಶಿಯಲಿ ತಿರಿದುಂಡು
ಡೊಕ್ಕೆಯನು ಬಿಡೆ ಮೋಕ್ಷ ಪದವಿಯಹುದು 2
ಹರಿ ಸುತನ ಕೋಣೆ ಲಕ್ಷ್ಮೀಪತಿಯ ಪಾದ
ಸರಸಿರುಹದಲಿ ಜನಿಸಿರ್ದ ಜಾಹ್ನವಿಯಲಿ
ನರ ಮುಳುಗಿ ಕಾಶಿ ವಿಶ್ವೇಶ್ವರನ ಸನ್ನಿಧಿಯೊಳೊರಗಿದರೆ
ಮರಳೆ ಜನ್ಮಕೆ ಬಾರೆನೋ 3