ಮಾನಸ ಪೂಜೆಯನು ಮಾಡು |
ಧ್ಯಾನ ಪೂರ್ವದಿಂದ ಕುಳಿತು ಪ
ಜ್ಞಾನ ಭಕುತಿಯ ವಿಡಿದು ಲಕುಮಿ |
ಪ್ರಾಣನಾಥನ ಪ್ರೇರಣೆಯಿಂದ ಅ.ಪ
ಕಾಮ ಕ್ರೋಧವ ಹಳಿದು ವಿಷಾದವೆಂಬೋ |
ಸ್ತೋಮಗಳನು ತೊರೆದು ರಜೋ ಮೊದಲಾದ ||
ತಾಮಸದ ಬುದ್ಧಿ ಬಿಟ್ಟು ನೇಮನಿತ್ಯ ತೀರಿಸಿಕೊಂಡು |
ಈ ಮನಸ್ಸು ಇಟ್ಟು 1
ಹೃದಯ ಪದುಮದೊಳಗೆ ಹರಿಯ ಪದುಮ ಪದಗಳಿಟ್ಟು |
ದೇಹ ಕದಲದಂತೆ ಇದ್ದು ಜ್ಞಾನ ಉದಿತವಾದ ದೃಷ್ಟಿಯ ||
ಹದುಳದಿಂದ ತಿಳಿದು ಅಂತರವೆಲ್ಲವನು ನೋಡಿ |
ಕದವ ತೆರೆದು ಕೊಟ್ಟ ಮುದದಿ ದೃಢವ ಸಂಪಾದಿಸಿ2
ನೀಲ ರತುನದಂತೆ ಹೊಳೆವ ಪಾಲಸಾಗರತನುಜೆ |
ಮೇಲು ಮಂಗಳರಮಣನಾದ ಮೇಲುಗಿರಿಯ ತಿಮ್ಮನ ||
ತವಕ ಬೀಳದಲೆ ಪೂಜೆ ವಿಧಾ |
ಸಾಲುಗಳನು ತಿಳಿದು ವಿಶಾಲ ಬುದ್ಧಿ ಯುಕುತಿಯಿಂದ 3
ವೇದ ಮಂತ್ರಗಳನು ಪೇಳಿ ಆದಿಯಲ್ಲಿ ಪೀಠಪೂಜೆ- |
ಯಾದ ತರುವಾಯ ವಿನೋದದಿಂದಲಾವರಣ ||
ಆದರಣೆಯಿಂದ ಬಳಿಕ ಮಾಧÀವರಿಗೆ ಸಕಲ ಭೂಷ- |
ಣಾದಿಗಳನು ರಚಿಸಿ ಪುಣ್ಯಹಾದಿಯನು ತಪ್ಪದೆ 4
ದೋಷರಾಶಿಗೆ ದ್ವೇಷನಾಗಿ ಈ ಶರೀರವÀ ಘಾಸಿಮಾಡದೆ |
ಪಾದ ||
ಲೇಸಿನಿಂದ ಭಜನೆಗೈದು ವಾಸವಾಗು ಪದದಲ್ಲಿ |
ಶ್ರೀಶ ವಿಜಯವಿಠ್ಠಲರನ್ನ ದಾಸ-ದಾಸರ ದಾಸನೆಂದು5