ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಹಸುಖ ಮೊದಲೇಯಿಲ್ಲ | ಕೃಷ್ಣ ಅಹಹ ಪರಸುಖವಾಗುವುದ್ಹ್ಯಾಗೊ ಪ ಸಾಹಸಿನಾನೆನುತ ಜನರ ಮೆಚ್ಚಿಸುವೊಡೆ ಕುಹಕ ಮಾತುಗಳ ಕೂಗಿ ಬಾಯಾರಿದೆ ಅ.ಪ ಶ್ರವಣ ಮನನ ನಿಧಿ ಧ್ಯಾಸನ ವೊಂ- ದೆವೆ ಮಾತ್ರವು ನಿಜವಾಗಿ ಕಾಣೆನುನಾ ಬವನಾಶಿ ಧರಿಸಿ ದಾಸನೆಂದು ನಾ ಬರಿದೆ ದೇಶಗಳ ತಿರುಗಿ ಬೆಂಡಾದೆನು 1 ಯಮನಿಯಮಾಸನ ಯೋಗ | ಗಳ ಭ್ರಮೆಯ ಪಡುತ ಬಳಲುವೆಯಾವಾಗ ಮಮಯೆಂಬುದರಿಂ ಬಂದಿತು ರೋಗ 2 ಶಂಕರ ಮುಖ ಸುರವಂದ್ಯ | ಅರಿ ಶಂಖ ಗದಾಧರ ಶ್ರೀಶ ಮುಕುಂದ ಸಂಕಟ ಬಂದಾಗ ವೆಂಕಟರಮಣೆಂದು ಮಂಕುಜನರು ಪೇಳ್ವಗಾದೆಯಂತಾಯಿತು 3 ಕಾಸಿಗೆ ತಿರುಗಿದೆನಲ್ಲದೆ | ದಿವ್ಯ ಕಾಶಿಗಯಾಯಾತ್ರೆಯ ಮಾಡಿದೆನೇ ಘಾಶಿಪಟ್ಟಿ ಸಾಕು ಸಾಕಿದರ ಗೊಡವೇ 4 ಕೊಟ್ಟದ್ದರೆ ಹರಿಕೊಡುವ | ಯಂ ಕೊಟ್ಟರುವದಕು ಕೊಡದಿರುವದಕೂ ಕೃಷ್ಣ ನೀನರಿಯದೆ ನಾನು ಸ್ವತಂತ್ರನೇ 5 ಕಣ್ಣಿಲ್ಲದ ಚಿಂತೆವಂದು | ಸದಾ ಬನ್ನ ಬಡುವದು ಯೋಚನೆಯೆರಡು ನಿನ್ನವನೆನಿಸೀ ಕಷ್ಟ ಬಿಡಿಸಿ ಒಳ- ಕಣ್ಣು ಕೊಟ್ಟು ನಿನ್ನ ಸೇವೆಯ ಪಾಲಿಸೋ 6 ಛಳಿ ಜ್ವರದ ಯಾತನೆ ಪಡುವೆ | ನಿನ್ನ ಕರೆಕರೆ ಪಡಿಸುವುದು ನಿನಗೆ ತರವೇ 7 ಆರು ಜನರ ಸೇವೆ ಕೊಡಿಸೋ | ಯೀ ಆರು ಜನರ ಸಂಘವ ಪರಿಹರಿಸೋ ಮೂರು ಜನದ ಕೂಟ ಮೊದಲೇ ಬಿಡಿಸೋ ತಾಳಲಾರೆಯಿವರು ಬಲು ಕ್ರೂರಾತ್ಮರು 8 ಆಸೆಯ ಪರಿಹರಿಸಯ್ಯಾ | ನಿಜ ದಾಸನೆನಿಸಿ ನೀ ಪಿಡಿಯೆನ್ನ ಕೈಯ್ಯಾ ಈಸಲಾರೆ ಗುರುರಾಮ ವಿಠ್ಠಲ ಜೀಯಾ 9
--------------
ಗುರುರಾಮವಿಠಲ
ಮಾಧವಮಧುಸೂದನೆನಿಪಪಾದಭಜನೆಯಮಾಡುವೇ ಸಾಧು ಶಿಖರನೆ ಸರ್ವತಂತ್ರನೇ ಬೋಧಿಸೆನುತಾ ಬೇಡುವೇ ಪ ವಾರಿಧಿಶಯನ ಪಾರಮಹಿಮ ಪರಾತ್ಪರ ಪಾಪವಿದೂರನೇ ಅ.ಪ ಆತೊಡರ್ಚಿತುವೋತಡಂತಿಸೂ ಭೂತಪಕ್ಷದಯಾನಿಧೆ ಭೀತಿಗೊಳಿಸದಿರೆನ್ನ ನೀನೆ ಅನಾಥರಕ್ಷ ಕೃಪಾನಿಧೇ 1 ನೀನೆ ಕಲುಷವಿಖಂಡ ನಿಶ್ಚಲ ನೀನೆ ವೇದಾಂತಾರ್ಯನೂ ಶ್ರೀನಿವಾಸದಯಾನಿಧೆ ಜಗದಾನುಭವತತ್ತೂರ್ಯನೂ 2 ದೇಶಿಕನೆ ತ್ವದ್ದಾಸನಾಡೆಯ ಆಶೆಯಳಿದೀಗೆರಿನನೂ ಪಾಶರಹಿತನ ಮಾಡೊಯೆನುತಲಿ ಪಾಡುವೆನಾ ನಿನಗೆನ್ನನೂ 3 ನಿತ್ಯಪೂರ್ಣನೆ ಸತ್ವಗುಣಮಣಿ ಚಿತ್ಸುಖಾಂಶ ಚಿದಂಬರಾ ತತ್ವಮೆನಗೆ ಪ್ರಸಾದಿಸಿದ ಶ್ರೀತುಲಶಿರಾಮ ದಿಗಂಬರಾ 4
--------------
ಚನ್ನಪಟ್ಟಣದ ಅಹೋಬಲದಾಸರು
ವೆಂಕಟಾ ಹರಿವಿಠಲ | ಪಂಕಕಳೆದಿವನಾ ಪ ಪಂಕಜಾಕ್ಷನೆ ದೇವ | ಕಾಪಾಡ ಬೇಕೋ ಅ.ಪ. ಅಂಧಕಾರದಲಿಪ್ಪ | ಮಂದಮತಿಯುದ್ಧರವಮಂದರೋದ್ಧಾರಿ ಹರಿ | ಮಾಡಿ ಪೊರೆಯಿವನಾ |ನಂದಮುನಿ ಮತ ತಿಳಿಸಿ | ಸಂದೇಹಗಳ ಕಳೆದುಸಂದೋಹ ಸಂಸ್ಥಿತನ | ಉದ್ಧರಿಸೊ ಬೇಕೋ 1 ಸೃಷ್ಟ್ಯಾದಿ ತವ ಮಹಿಮೆ | ನಿಷ್ಠೆಯಿಂದಲಿ ಭಜಿಪಸುಷ್ಠುಮನವನೆಯಿತ್ತು | ಕಾಪಾಡೊ ಹರಿಯೇಕೃಷ್ಣಮಾರುತಿ ಇವನ | ಕಷ್ಟ ಸಂಚಯ ಕಳೆದುಶ್ರೇಷ್ಠ ತವದಾಸ್ಯದಲಿ | ಇಟ್ಟು ಪೊರೆ ಇವನಾ 2 ಸತ್ಸಂಗ ಸದ್ವ್ಯಸನ | ಸನ್ಮಾರ್ಗದಲಿ ಇಟ್ಟುಕುತ್ಸಿತರ ಸಂಗವನು | ದೊರಗೈ ಹರಿಯೇ ಮತ್ಸ ಕೇತನ ಜನಕ | ಭಕ್ತವತ್ಸಲನಾಗಿವತ್ಸನ್ನ ಪೊರೆವವರು | ಮತ್ತಾರು ಇಹರೋ 3 ಹರಿಗುರುಗಳಾ ಸೇವಾ | ಪರಮ ಪ್ರೀತಿಲಿ ಮಾಳ್ವವರಮತಿಯನೇ ಕೊಟ್ಟು | ಪೊರೆಯ ಬೇಕಿವನಾ |ಹರಿಯ ನಾಮಾಮೃತವ | ನಿರುತದಲಿ ಸವಿದುಂಬಪರಮ ಸೌಭಾಗ್ಯವನೆ | ಕರುಣಿಸೋ ಹರಿಯೇ 4 ಸರ್ವಜ್ಞ ಸರ್ವೇಶ | ಸರ್ವ ಸ್ವಾತಂತ್ರನೇಭವವನದಿ ಉತ್ತರಿಸಿ | ಪೊರೆಯ ಬೇಕಿವನಾ |ದುರ್ವಿಭಾವ್ಯನೆ ಗುರು | ಗೋವಿಂದ ವಿಠಲನೇದರ್ವಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು
ನೀನೇಗತಿಮಾಧವಾ ದೇವರದೇವನೀನೇ ಗತಿಯು ನಮ್ಮ ಮಾನಾಭಿಮಾನವಹಾನಿಗೊಳಿಸದನುಮಾನವಿಲ್ಲದೆ ಕಾಯೋ ಪಸಾಕಾರ ಸೌಭಾಗ್ಯವೂ ಸರ್ವವೂ ಸರ್ವಶೋಕಕ್ಕೆ ಕಾರಣವೂಬೇಕಾದ ಕಡುರಸ ಶಾಕಪಾಕದ ರೂಪಿಶ್ರೀಕೃಷ್ಣ ನಿನ್ನಯ ನಾಮದಿಂದಧಿಕನೆ 1ಸಕಲ ಸಂಭ್ರಮವು ನೀನೇ ನಿನ್ನನು ಎನ್ನಸಖನೆಂದು ನಂಬಿದೆನುಸಕಲ ಚರಾಚರ ಪ್ರಾಣಿಗಳಿಗೆ ಸರ್ವಸುಖದುಃಖವುಣಿಸುವ ಸಕಲ ತಂತ್ರನೇ 2ಆದಿಮೂರುತಿಯು ನೀನೇ ಧರ್ಮಾಧರ್ಮಶೋಧಿಸುವವನು ನೀನೇವೇದಗಮ್ಯನೆ ಯೆನ್ನ ಖೇದಮೋದವ ನಿನ್ನಲ್ಲಿಪಾದಕರ್ಪಿಸಿದೆ ಗೋವಿಂದದಾಸನೆ ಕಾಯೊ 3
--------------
ಗೋವಿಂದದಾಸ
ಮಲಗಯ್ಯ ಜಲಜನಾಭ ಪಆದಿಶೇಷ್ಟನು ಬಂದು ಹಾಸಿಗೆಯಾಗಿಹವೇದವಿನುತ ಜಗದಾದಿ ಪುರುಷ ಕೇಳೊ 1ಸಿರಿ ಭೂ ದುರ್ಗೆಯರು ತರುಣಿಯರು ಮೂವರುಚರಣವೊತ್ತಲಿಕೆ ಕೈಕಟ್ಟಿ ನಿಂತಿಹರು 2ಸರುವಜÕ ಮುನಿವಂದ್ಯ ಸರುವ ಸ್ವತಂತ್ರನೇಪರಮ ಸುಂದರ ಪುರಂದರವಿಠಲರಾಯಾ3
--------------
ಪುರಂದರದಾಸರು