ಒಟ್ಟು 7 ಕಡೆಗಳಲ್ಲಿ , 6 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋಪಾಲ ಹರಿ ವಿಠಲ ನೀ ಪಾಲಿಸಿವಳಾ ಪ ಪಾಪೌಘಗಳ ಕಳೆದು ಸುಪವಿತ್ರಳನೆ ಮಾಡಿಕೈ ಪಿಡಿದು ಪೊರೆಯಿವಳ | ಗೋಪಾಲ ಬಾಲ ಅ.ಪ. ನಿನ್ನ ಸೇವಿಸೆ ದಾಸ | ಘನ್ನ ದೀಕ್ಷೆಯ ಮನದಿಕನ್ಯೆ ಬಹು ಭಕ್ತಿಯಲಿ | ಬಿನ್ನವಿಸಿ ಇಹಳೊಮನ್ಯು ಸೂಕ್ತೋದಿತನೆ | ಚೆನ್ನ ತೈಜಸನಾಗಿಇನ್ನು ಪೇಳ್ದಂಕಿತವ | ಕನ್ಯೆ ಗಿತ್ತಿಹನೋ 1 ಪತಿಸೇವೆ ದೊರಕಿಸುತ | ಪತಿವ್ರತೆಯಳೆಂದೆನಿಸಿಅತುಳ ವೈಭವ ತೋರಿ | ಹಿತದಿಂದ ಪೊರೆಯೋವ್ರತತಿ ಜಾಸನ ಪಿತನೆ | ಗತಿಗೋತ್ರ ನೀನೆನಿಸಿಸುತೆಸಮಳ ಪೊರೆವುದಕೆ | ಮತಿ ಮಾಡೊ ಹರಿಯೇ 2 ತಾರತಮ್ಯ ಜ್ಞಾನ ಮೂರೆರಡು ಭೇದಗಳಸಾರತತ್ವಗಳುರುಹಿ | ಸಾರತಮ ನಿನ್ನಾಪಾರುಗಾಣದ ಮಹಿಮೆ | ಚಾರುಕೀರ್ತಿಸುವಂತೆತೋರೊ ಸನ್ಮಾರ್ಗವನು | ವಾರಿನಿಧಿ ಶಯ್ಯಾ 3 ಹರಿಗುರೂ ಸದ್ಭಕ್ತಿ | ಹಿರಿಯರಲಿ ಆಸಕ್ತಿಸರ್ವ ಕಾರ್ಯವು ಹರಿಯ ವರಸೇವೆಯೆಂಬಾವರಮತಿಯ ಕರುಣಿಸುತ | ಹರಿಯು ತಾನಿತ್ತುದನಹರುಷದಲಿ ಉಂಬಂಥ | ಅರಿವು ಕೊಡು ಸತತ 4 ಭಾವಜಾರಿಯ ತಾತ | ಪಾವಮಾನಿಯ ಪ್ರೀತಕೇವಲಾನಂದಮಯ | ಜೀವ ಪರತಂತ್ರಾಈ ವಿಧವು ಇರಲಾಗಿ | ನೀವೊಲಿಯಲಿನ್ಯಾರುಕಾವರನು ಕಾಣೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನೋಡಿದ್ಯ ರಂಗೈಯನ ನೋಡಿದ್ಯ ಪ ನೋಡಿದ್ಯ ಮನವೆ ನೀನಿಂದು ಕೊಂ- ಡಾಡಿದ್ಯ ಎದುರಲ್ಲಿ ನಿಂದು ಆಹ ಮಾ- ತಾಡಿದ್ಯ ವರಗಳ ಬೇಡಿದ್ಯ ನಿನ್ನೊಳು ಕೂಡಿ ನಲಿನಲಿದಾಡುವ ಶ್ರೀ ರೂಪ ಅ.ಪ. ಚರಣತಳದಲ್ಲಿ ಕೆಂಪು- ಶುದ್ದ ಅರವಿಂದ ಧ್ವಜ ವಜ್ರಸೊಂಪು- ಸ್ತುತಿ ಪÀರಿಗೆ ಸುರಂಘ್ರಿಪ ತಂಪು- ನೋಡ- ಲರಸಿ ಕಾಣದೊ ವೇದಗುಂಪು, ಆಹ ಹರಡಿ ಹಿಂಬಳೆ ಸಾಲ್ಬೆರಳೈದರ ಮೇಲೆ ಸುರುಚಿರ ರೇಖೆ ಚಂದ್ರಮನ ಸೋಲಿಪ ನಖ1 ಸರಸ ನೂಪುರ ಗೆಜ್ಜೆ ಪೆಂಡ್ಯ - ಹೊನ್ನ ಸರಪಳಿ ಪಾಡಗ ಕಂಡ್ಯ - ಹಿಂದೆ ಧರೆಗೆ ಮುಟ್ಟಿದ ಜಡೆಗೊಂಡ್ಯ - ಇದು ತರುಣಿ ಎನ್ನದಿರು ಕಂಡ್ಯ - ಆಹ ಬೆರಳಲ್ಲಿ ಇಟ್ಟ ಸುಂದರ ಪಿಲ್ಲಿಮೆಂಟಿಕೆ ಕಿರಿಪಿಲ್ಲಿ ಅಡಿಮೆಟ್ಟು ಮೆರೆವ ಕಾಲುಂಗರ2 ಝಣ ಝಣ ಗೆಜ್ಜೆನಾದ - ವನ್ನು ಎಣಿಸಲಾರದು ನೋಡಿ ವೇದಾ - ನಂತ - ಮೋದ - ಇದು ಅಣುರೇಣು ತೃಣಕಾಷ್ಠ ಭೇದ, ಆಹ ಪ್ರಣತಾರ್ತಿ ಹರವಾದ ಮಿನುಗುವ ಜಾನುದ - ರ್ಪಣ ನಾಚಿಪ ಜಂಘೆ ಎಣೆಗಾಣೆ ಸ್ತ್ರೀರೂಪ 3 ಊರುದ್ವಯಂಗಳು ರಂಭಾ - ಸ್ತಂಭ ಚಾರು ಪೊಕ್ಕುಳ ಸುಳಿಗುಂಭ - ತಂತ್ರಾ - ಸಾರೋಕ್ತದಿ ಪೂಜೆಗೊಂಬ - ವಿ ಸ್ತಾರ ಮಹಿಮೆ ಗುಣತುಂಬ, ಆಹ ನಾರಿ ಲಾವಣ್ಯದ ಪಾರ ಮೀರಿದ ಕಾಂತಿ ಆರಾರ ಮನಸಿಗೆ ತೋರದ ಪೆಣ್ಣಿನ4 ಉದಯರಾಗದ ದಿವ್ಯವಸನ - ಮೇಲೆ ಉದರ ತ್ರಿವಳಿ ಬಂದಿ ಹಸನ - ಕೇಳು ಮುದದಿಂದ ವಡ್ಯಾಣ ಬೆಸನ - ನೋಡು ಯದುಕುಲ ಜಾತ ಮಾನಿಸನ, ಆಹ ಮದಕರಿಯಂದದಿ ವಲಿದೊಲಿದಾಡಲು ಮದನಾರಿ ಮರುಳಾದ ಅದುಭುತ ಚರಿಯನ್ನ 5 ದೋರ್ಯ ಹರಡಿ ಕೈಕಟ್ಟು - ಚೂಡ್ಯ ಈರೈದುಂಗುರವುಳ್ಳ ಬೆಟ್ಟು - ಬಂ - ಗೀರು ಗಂಧವು ಗಂಬೂರ ಕರ್ಪೂರ ಕ- ಸ್ತೂರಿ ಲೇಪನ ಶೃಂಗಾರ ತ್ರಿವಳಿಯ 6 ತಾಯಿತು ಮುತ್ತ ಕಟ್ಟಾಣಿ - ತೋಳ ಮಣಿ - ವಂಕಿ ಕೇಯೂರ ಪಲ್ಲವ ಪಾಣಿ - ಉ ಪಾಯದಲ್ಲಿ ಘಟ್ಟಿ ಕಾಣಿ, ಆಹ ನೋಯದೆ ಸುರರಿಗೆ ಪೀಯೂಷ ವುಣಿಸಿ ದೈ- ತೇಯರ ಮಡುಹಿದ ಮಾಯದ ಕನ್ನಿಕೆ 7 ಸರಿಗೆ ಮುತ್ತಿನ ಚಿಂತಾಕ - ಕುಚ- ಕಂಚುಕ - ತೊಟ್ಟ ಭರದಿ ತೂಗುವ ಪಚ್ಚೆಪದಕ - ಕೆಳಗೆ ಹರಿ ನಡುಕಿಂಕಿಣಿ ಕನಕ, ಆಹ ಹರಳು ಕೆತ್ತಿದ ಚಿತ್ತರ ಮಾಟ ಕಟಿಸೂತ್ರ ಧರೆಗೆ ಶೋಭಿಪ ಸೀರೆ ನೆರೆಯ ವೈಭವವನು 8 ರನ್ನ ಪವಳ ಸರ ಥಳಕು - ಜೋಡು ಕನ್ನಡಿ ಹಾಕಿದ ಮಲಕು - ನೋಡು ಅನ್ನಂತ ಸೂರ್ಯರ ಝಳಕು - ಲೋಕ ಚನ್ನಾಗಿ ತುಂಬಿದ ಬೆಳಕು ಹೇಮ ಸಣ್ಣ ಮುತ್ತಿನ ಮೋ ಹನ್ನ ಏಕಾವಳಿ ಚಿನ್ನದ ಸರಗಳು 9 ಸಿರಿವತ್ಸ ಕೌಸ್ತಭ ಹಾರ-ವೊಪ್ಪೆ ವೈಜಯಂತಿ ಮಂದಾರ - ಮೇಲೆ ತರುಣ ತುಲಸಿ ಜನಿವಾರ - ಇಟ್ಟು ವರಭುಜಕೀರ್ತಿ ಕುಂಜರ, ಆಹ ಕರದಂತೆರಡು ತೋಳು ಎರಡೊಂದಾರು ಸಾ- ವಿರ ರೂಪನಾಗಿ ಶರೀರದೊಳಿಪ್ಪನ 10 ಕೂರ್ಮ ಕದಪು - ಕಣ್ಣಿ- ಗಿಕ್ಕಿದ ಸೊಬಗಿನ ಕಪ್ಪು - ತಲೆ - ಹಿಕ್ಕಿ ಬಾಚಿದ ಕೇಶ ಥಳಪು - ಸರ್ವ ಲಕ್ಕುಮಿ ದೇವಿಯ ಲೆಕ್ಕಿಸದೇ ಮಗನ ಪೊಕ್ಕುಳಿಂದಲಿ ವೆತ್ತ ಅಕ್ಕಜದಬಲೆಯ11 ಸೂಸುವ ದಾಡಿಯ ದಂತ - ಪಙÂ್ತ- ನಾಸ ಮೂಗುತಿಯಿಟ್ಟ ಶಾಂತ - ಸುಖ ಲೇಸು ಹಾಸ ಜಗದಂತ - ರಂಗ ಭಾಸ ಮಿಗಿಲು ಚಂದ್ರಕಾಂತ, ಆಹ ಸುಷುಪ್ತಿಯಲ್ಲಿ ಭೂಶ್ವಾಸ ಬಿಡುವರನ್ನು ಲೇಸಾಗಿ ಸಲಹುವ ದೋಷನಾಶನ ರೂಪ12 ಎಸೆವ ಪಂಜರದೋಲೆ ಕಿವಿಯ-ಹೊನ್ನ ಕುಸುಮ ಕೂಡಿದ ಬಾವಲಿಯ - ತಿದ್ದಿ ಕುಸುರಿಯಿಕ್ಕಿದ ಸರಪಣಿಯ - ಚಿನ್ನ ಸೋಸಲು ಕುಂಕುಮ ರ್ಯಾಕಟೆಯ, ಆಹ ಎಸಳು ಕೇದಿಗೆ ಬಹು ಕುಸುಮವ ಮುಡಿದದ್ದು ವಶವಲ್ಲ ಚೌರಿ ಅರಸಿನ ಪೂಸಿದ ಹೆಣ್ಣ13 ಕಪೋಲ - ಪೊಸ- ಮೌಳಿ ಕೈಯಲ್ಲಿ ಕಡೆÀಗೋಲ - ನೇಣು ಪಾಲಯ ಪಿಡಿದ ಸುಶೀಲ - ಧರೆಯ - ಶೂಲಿಯ ನೆಲೆಸಿದ ಖೂಳನ ಸದೆದು ಹಿ- ಯ್ಯಾಳಿಸಿ ಮೆರೆದ ಗೋಪಾಲನೆಂಬ ಹೆಣ್ಣ14 ರಜತ ಪೀಠ ಪುರಾಧೀಶ - ನಂದ ವ್ರಜದೊಳಾಡಿದ ಸರ್ವೇಶ - ನಮ್ಮ ವಿಜಯವಿಠ್ಠಲ ನಾರಿವೇಷ - ತನ್ನ ನಿಜಭಕ್ತ ಮಧ್ವಮುನೀಶ, ಆಹ ತ್ರಿಜಗ ಮಧ್ಯದಲಿ ನಿಜ ಪದವಿಯನಿತ್ತು ಸುಜನರಿಗೊಲಿದನ್ನ15
--------------
ವಿಜಯದಾಸ
ಬ್ರಹ್ಮಣ್ಯ ತೀರ್ಥ ಗುರು ರಾಜಾ | ನಿನ್ನನಮ್ಮಿದೆನೊ ಭಾಸ್ಕರ ಸುತೇಜಾ | ಭಾವಿಬೊಮ್ಮ ಮತವರುಹಿ ಮಹೋಜಾ | ಸಲಹೊಪ್ರಮ್ಮೇಯಂಗಳ ನಿಧಿಯ ಸಹೋಜಾ ಪ ಓದ್ದಾಡುತಿಹೆನೊ ಈ ಭವದೀ | ಸುಖಗದ್ದುಗೆಯನೇರ್ವಂಥ ಹಾದೀ | ತೋರಿಉದ್ಧರಿಸೊ ಬಲು ಕೃಪಾಜಲಧೀ | ಗುರುವೆಶುದ್ಧ ಬುದ್ಧಿಯ ನೀಯೊ ಮುದದೀ 1 ಯಾತ್ರೆಗಳ ಮಾಡ್ದೆನೆಂಬ | ಬಿಂಕದ್ವಾರ್ತೆಯೊಂದಲ್ಲದಲೆ ಇಂಬ | ಕಾಣೆಕ್ಷೇತ್ರ ಮೂರ್ತಿಯ ಕಾಂಬನೆಂಬ | ಆಶೆಪೂರ್ತಿ ಮಾಡೆನ್ನ ಗುರು ಬಿಂಬ 2 ಧನವನಿತೆ ವಿಷಯದಲ್ಲೀ | ಬಹಳ ಮನ ಮಾಡಿ ನೊಂದೆನಲ್ಲೀ | ಹರಿಯಮನ ಮುಟ್ಟೊ ಭಜಿಸು ಎಂಬಲ್ಲೀ | ಇನ್ನುಘನ ಜ್ಞಾನ ಭಕುತಿ ಇಲ್ಲಲ್ಲೀ 3 ಜೀವಗೆಲ್ಲಿಯ ಸ್ವತಂತ್ರಾ | ಹರಿಗುರುತಾವಲ್ಲಿ ಮಾಡುತಿಹ ತಂತ್ರ | ದಿಟವಿದುಜೀವನೇ ಮಾಳ್ಪುನೆಂಬುದೆ ಕುತಂತ್ರ | ತಿಳಿಸೊಭಾವ ಜಾನಯ್ಯನ ಸ್ವತಂತ್ರ 4 ಸಾರ ವ್ರಾತ | ತಿಳಿಸೊಜ್ಞಾನ ನಿಧಿ ಪುರುಷೋತ್ಮ ತಂತ್ರ 5 ಕಾರಕ ಕ್ರಿಯ ದ್ರವ್ಯವೆನಿಪ | ಭ್ರಮವುಮೂರರಿಂದಲಿ ದೂರ ಮಾಳ್ಪ | ಮಾರ್ಗತೋರಿಸಲಹುವುದು ಯತಿ ಭೂಪ | ತವಪದವಾರಿ ಜತೆ ಈ ನೀಚ ಬೀಳ್ಪ 6 ತ್ರ್ಯಕ್ಷಾಂಶ ಭೂತರಾದ | ಸನ್ಯಾಸಿಅಕ್ಷೋಭ್ಯ ಕರಜರಾದ | ಅಜೇಯಇಕ್ಷುಚಾಪನ್ನ ಗೆಲಿದ | ಜಯಾರ್ಯಭಿಕ್ಷುವಿನ ಮಾರ್ಗರಾದ7 ಮೋದ | ಪಡೆವದಾಯ ತೋರಿದಿ ನಿರ್ವಿವಾದ | ಇನ್ನುಗಾಯನದಿ ಮಹಿಮೆ ಅಗಾಧ | ಪೇಳ್ವಆಯತವ ನೀಯೋ ಸುಭೋಧ 8 ಬೃಹತೀ ಸಹಸ್ರ ಮಂತ್ರ | ಜಪಿಪಮಹಯೋಗದಾತ ಮಹಾಂತ | ಬೇಡ್ವೆಬೃಹತಿನಾಮಕನು ಎಂಬಂಥ | ಹರಿಯಮಹ ಮಹಿಮೆ ಕಂಡು ಹಿಗ್ವಂಥ 9 ಸೃಷ್ಟ್ಯಾದಿ ಅಷ್ಟಕಗಳ | ಗೈವಕೃಷ್ಣನ್ನ ಮಹಿಮೆಗಳ | ಕೇಳಿಹೃಷ್ಟರಾಗುವ ಜನಗಳ | ಸಂಗಕೊಟ್ಟುದ್ಧರಿಸೊ ನಮ್ಮಗಳ 10 ಸದನ 11
--------------
ಗುರುಗೋವಿಂದವಿಠಲರು
ಭಜರೇ ಧೀಮಂತಂ ಮಾನಸ ಪ ಭಜ ಹನುಮಂತಂ ನಿರುಪಮ ಶಾಂತಂ ಮ ಹಿಜಾನಾಯಕ ಸೇವಾಸಕ್ತಂ ಅ.ಪ ಪವನ ಕುಮಾರಂ ವಾನರವೀರಂ ತವ ಭಯಂಕರಂ ಅಕ್ಷ ಸಂಹಾರಂ ರಾವಣಗರ್ವವಿಭಂಜನ ಶೂರ ಅ ಭವ ಸಹೋದರ ಪ್ರಾಣ ದಾತಾರಂ 1 ಸಕಲ ಮಂತ್ರ ತಂತ್ರಾಗಮ ನಿಪುಣಂ ಸಕಲ ಕಲಾ ಸದ್ಗುಣ ಗಣ ಪೂರ್ಣಂ ರಾಮಾಯಣ ಮಹಾಮಾಲಾಭರಣಂ ಶ್ರೀ ಮರಕತಮಕುಟ ವಿರಾಜಿತಕರಂ 2 ಪಾಪವಿದೂರಂ ವಜ್ರಶರೀರಂ ಸೀತಾ ಮಾನಸಾನಂದ ಸಮೀರಂ ತಾರಕ ಮಂತ್ರೋಪಾಸನ ಚತುರಂ ಮಾಂಗಿರಿರಂಗ ಸೇವಾಪರಮಮರಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮರುಳು ಜೀವ ಏನು ಕಾಣುವೆ ಕೊನೆಗೆ ಪ ಸರ್ವಸಮರ್ಪಣೆ ಮಾಡದೆ ಇದರೊಳು ಅ.ಪ ಯಮನವರೆಳೆಯದೆ ಬಿಡುವರೆ ಛೀ ಹುಚ್ಚಾ 1 ಇಂದ್ರಿಯಂಗಳು ನಿನ್ನಾಧೀನವಲ್ಲ ಬಂದಮಾರ್ಗ ಸುಖ ಮರೆತು ಹೋದೆಯಲ್ಲ ಮುಂದಿನ ಗತಿ ಗೋತ್ರ ಮೊದಲಿಗೆ ಇಲ್ಲ ಮುಪ್ಪುತನವು ಹತ್ತಿರೇ ಬಂದಿತಲ್ಲ 2 ಕರ್ಮವೆಂಬುವುದೊಂದು ಅನಾದಿಯಾಗಿ ಧರ್ಮವ ಗಳಿಸುವವನೆ ಪರಮತ್ಯಾಗಿ ನಿರ್ಮಲ ಮನದಿ ದುರಾಶೆಯ ನೀಗಿ ಮರ್ಮವನರಿತುಕೊಂಡವನೇ ಮಹಾಯೋಗಿ3 ಭೋಗದಾಸೆಯ ಬಿಡು ಮೂರುದಿನದ ಬಾಳು ಕೂಗುತಿಹವು ಶೃತಿ ಸ್ಮøತಿಪುರಾಣಗಳು 4 ಸತಿಸುತರನು ನಾನೆ ಸಾಕುವೆನೆಂದು ಮತಿಗೆಟ್ಟು ಭ್ರಾಂತಿ ಹೊಂದುವೆ ನೀ ಮುಂದು ಮಿತಿಯ ಬರಹ ತಪ್ಪುವುದಿಲ್ಲ ಎಂದು ಪತಿ ಗುಣಸಿಂಧು 5 ಆಹಾರ ನಿದ್ರೆಯಲ್ಲವೆ ನಿನ್ನ ಆಟ ಸಾಹಸ ನೋಡೆ ಮಾಳಿಗೆಯ ಓಡ್ಯಾಟ ಮೋಹದಿಂದಲಿ ಮುಂದೆ ಬರುವುದು ಗೂಟ ಮೂಜಗದೊಳಗೆಲ್ಲಾ ಇದು ಗೊಂಬೆ ಆಟ 6 ಕಾಮಕ್ರೋಧಗಳು ಬಿಡಲಾರೆಯೇನೊ ಪಾಮರ ಜೀವ ಅಸ್ವಾತಂತ್ರಾ ನೀನೊ ಯಾಮಯಾಮಕೆ ಗುರುರಾಮವಿಠಲನಂಘ್ರಿ ನೇಮದಿಂದಲಿ ಭಜಿಸಿ ಸುಖವಾಗುವುದು ಕಾಣೊ7
--------------
ಗುರುರಾಮವಿಠಲ
ರಾಮಾಯನ್ನಮ:ರಾಮ ಸದಾ ಓಂ ರಾಮಾಯನ್ನಮ:ರಾಮ ಪ ವೇದಾದಿ ರಾಮ ವೇದಾಂತರಾಮ ವೇದಾಂತ ವೇದಾದಿಗಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 1 ವೇದಮಯ ರಾಮ ವೇದ ನಿರ್ಮಯ ರಾಮ ವೇದ ವೇದಾತೀತಕಾದಿ ರಾಮ ಮಹ ದಾದಿಗಾದಿರಾಮ ( ಸದಾ) ಓಂ ಮಹ ದಾದಿಗಾದಿ ರಾಮ 2 ನಾದಯುತಾದಿ ರಾಮ ನಾದರಹಿತಾದಿ ರಾಮ ನಾದಾತೀತಾದ್ಯನಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 3 ಆದಿಗಾದಿರಾಮ ಅ ನಾದಿಗಾದಿರಾಮ ಆದಿ ಅನಾದಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 4 ಸತ್ಪಥದಾದಿರಾಮ ¸ À ಚ್ಚಿತ್ತದಾದಿರಾಮ ಉತ್ಪತ್ತಿ ಸ್ಥಿತಿಲಯಕಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 5 ಸ್ವರ್ಗ ಭೋಗಾದಿ ರಾಮ ಧೀರ್ಘಕ್ಕೆ ದೀರ್ಘಾದಿಗಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 6 ಜಪತಪದಾದಿ ರಾಮ ಗುಪಿತ ಗುಪ್ತಾದಿ ರಾಮ ಅಪರೋಕ್ಷ ಪರೋಕ್ಷಾದಿಗಾದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 7 ಮಂತ್ರಮಯಾದಿ ರಾಮ ಮಂತ್ರ ತಂತ್ರಾದಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 8 ಮಾಯಮಯಾದಿ ರಾಮ ಮಾಯ ನಿರ್ಮಯ ರಾಮ ಮಾಯ ಮಾಯಾದಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 9 ಕಾಲಕಾಲದಿ ರಾಮ ಕಾಲಮೂಲಾದಿ ರಾಮ ಕಾಲಕಾಲನಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 10 ದಶರಥರಾಮ ದಶರಥಗಾದಿ ರಾಮ ದಶವಿಧೌತಾರದಾದಿಗಾದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 11 ದಿವ್ಯಮಹಿಮಾದಿ ರಾಮ ಭವ್ಯಚರಿತಾದಿ ರಾಮ ದಿವ್ಯ ದೇವರ ದೇವರಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 12 ಬ್ರಹ್ಮನೆಯಾದಿ ರಾಮ ನಿರ್ಮಲಾತ್ಮಾದಿ ರಾಮ ಬ್ರಹ್ಮ ಬ್ರಹ್ಮಾದಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 13 ಸತ್ಯ ಸತ್ಯಾದಿ ರಾಮ ನಿತ್ಯ ನಿತ್ಯಾದಿ ರಾಮ ತತ್ವ ಪಂಚದಾದಿಗಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 14 ಭುವಿತ್ರಯದಾದಿ ರಾಮ ಭವಭವದಾದಿ ರಾಮ ದಿವನಿಶಿಗಳಿಗಾದಿ ಆದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 15 ಬೋಧಾದಿಮಯ ರಾಮ ಬೋಧಾದಿಗಾದಿ ರಾಮ ಸ ಸಾಧನ ಸಿದ್ಧಿಯಾದಿಗಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 16 ನಿರ್ನಾಮ ರಾಮ ನಿರ್ಗುಣ ನಿರಂಜನಾದಿಗಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 17 ಭಕ್ತಭಿರಾಮ ಮುಕ್ತೀಶ ರಾಮ ನಿತ್ಯ ನಿರ್ಮಲ ಜಗದಾದಿರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 18 ಚಿನುಮಯ ರಾಮ ಚಿದ್ರೂಪ ರಾಮ ಜನನಮರಣ ಹರಣಾದಿ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 19 ರಮಾಧವ ರಾಮ ಕ್ಷಮೆಯುತ ರಾಮ ಸುಮನಸ ಭಕ್ತಾಧೀನ ರಾಮ ಮಹ ದಾದಿಗಾದಿ ರಾಮ ಸದಾ ಓಂ ಮಹ ದಾದಿಗಾದಿ ರಾಮ 20 ಜಯ ಜಯ ರಾಮ ಜಯ ಶ್ರೀರಾಮ ಜಯವೆಂದು ನೂರೆಂಟು ಪೊಗಳಲೀ ನಾಮ ದಯದೀಯ್ವಮುಕ್ತಿ ರಾಮ ಸದಾ ಓಂ ಮಹ ದಾದಿಗಾದಿ ರಾಮ21
--------------
ರಾಮದಾಸರು
ಪಂಚಭೇದತಿಳಿವದು ಪ್ರತಿದಿನದಲೀ |ಮುಂಚಿನಜ ಮಧ್ವಮುನಿ ಮತವನುಸರಿಸಿದವರೂ ಪಜೀವೇಶರಿಗೆ ಭೇದ ಜೀವ ಜೀವಕೆ ಭೇದ |ದೇವರಿಗು ಜಡಕು, ಜಡಕೆ ಜಡ ಭೇದಾ ||ಆವಾಗಜೀವರಿಗೆ ಜಡಗಳಿಗೆ ಭೇದುಂಟು |ಈ ವಿವರವ ಪೇಳ್ವೆ ಯನ್ನಾಪನಿತು ಕೇಳುವದೂ 1ಈಶನಿತ್ಯಅನಾದಿಸ್ವರತಸರ್ವಗ ಸ್ವಪ್ರ- |ಕಾಶ ಸರ್ವಜÕವಿಶ್ವವಿಲಕ್ಷಣಾ ||ಮೇಶ ಅಪರಿಚ್ಛಿನ್ನಮೂರ್ತಿಪ್ರಾಣಿಗಳಿಂದ |ತಾ ಸಾಕ್ಷಿಯಾಗಿ ಬಹು ಕರ್ಮಗಳ ಮಾಡಿಸುವ 2ಶ್ರೀ ಮುಖ ಜಗತ್ಯಕುತ್ಪತ್ಯಾದಿ ಕಾರಣ ಮ- |ಹಾ ಮಹಿಮ ಸರ್ವತಂತ್ರ ಸ್ವತಂತ್ರಾ ||ಆಮಯವಿದೂರ ಜ್ಞಾನಾನಂದ ಬಲ ಪೂರ್ಣ |ಸೀಮೆಯಿಲ್ಲದ ಸುಗುಣ ಕ್ರಿಯಾತ್ಮಕ ಸ್ವರೂಪ 3ಸುಖ ದುಃಖಭೋಗಿಜೀವನು ಅಸ್ವತಂತ್ರ ಬಹು |ಕಕುಲಾತಿಉಳ್ಳವನು ದುರ್ವಿಷಯದೀ ||ಲಕುಮೀಶನಲ್ಲಿ ಭಕ್ತಿ ವಿವರ್ಜಿತನುಪ್ರತಿಕ್ಷ- |ಣಕೆ ಅನಂತ ಅಪರಾಧಿ ಜನ್ಮ ಮೃತಿ ಉಳ್ಳವನು 4ಆದಿ ವ್ಯಾಧಿಗಳಿಂದ ಪೀಡಿತನು ಅಜ್ಞಾನಿ |ಮಾಧವನ ಬಂಧಕ ಶಕುತಿಯೊಳಗಿಹ್ಯಾ ||ತಾ ಧರಿಸಿಹನುಪ್ರಾಕೃತಪ್ರಾಕೃತಾವರಣ |ಭೇದವೆ ಸಿದ್ಧ ಯಿಂಥ ಜೀವಗೂ ಹರಿಗ್ಯೂ 5ಒಂದಲ್ಲ ಸರ್ವ ಜೀವರು ಸತ್ವ ರಜ ತಮರು |ಯಂದು ಭೇದಗಳುಂಟವರ ಲಕ್ಷಣಾ ||ಮುಂದಿನ ಪದದಿ ಪೇಳ್ವೆ ಸಜ್ಜನರು ಕೇಳಿಯಾ- |ನಂದ ಬಡಲೆಂದು ವಿನಯದಲಿ ಬಿನ್ನೈಸುವೆನು 6ಛಿನ್ನ ಭಕ್ತರು ಯನಿಪರೆಲ್ಲ ದೇವತಿಗಳ |ಚ್ಛಿನ್ನ ಭಕ್ತರು ವಿಧೀರವರ್ಹೆಂಡರೂ ||ಚನ್ನಾಗಿ ಮುದದಿ ಈ ನಿರ್ಜರರ ತರತಮ್ಯ |ವನ್ನು ಕೇಳಿಕೊಬೇಕು ಜ್ಞಾನಿಗಳ ಮುಖದಿಂದ 7ವಿಧಿಮೊದಲು ತೃಣ ಜೀವಪರಿಯಂತಸಾತ್ವಿಕರು |ಇದರೊಳಗೆ ದೇವ, ಋಷಿ, ಪಿತೃಪ, ನರರೂ ||ಸುಧಿಗೆ ಯೋಗ್ಯ ರಜಾದಿಗೀರ್ವಾಣಗಂಧರ್ವ |ತುದಿಯಾಗಿ ಸಾಂಶರು ನಿರಂಶರುಳಿದವರೆಲ್ಲ 8ಇವರಿಂದ ಭಿನ್ನ ರಾಜಸರು ಗೋ ಭೂ ನರಕ |ತ್ರಿವಿಧಗತಿಉಳ್ಳವರು ಪಂಚಭೇದಾ ||ವಿವರ ತರತಮ ದೇವರ ಮಹತ್ಮಿಯನು ಅರಿಯ |ದವರು ಲಿಂಗಕಳಿಯರುಧಾಮತ್ರಯಪೊಗದವರೂ 9ಸಂಸಾರಿಗಳಿಗೆ ಭಿನ್ನರು ತಮೋಗುಣದವರು |ಕಂಸಾರಿಯಲಿ ದ್ವೇಷವರ ಸ್ವಭಾವಾ ||ಆ ಸುರಾರಿಗಳು ನಾಲ್ಕು ಪ್ರಕಾರ ದೈತ್ಯ ರಾ |ಕ್ಷಸರು, ಪಿಶಾಚರವರನುಗರು, ನರಾಧಮರು 10ಈ ನಾಲ್ಕು ಬಗೆಯ ಸುರರಿಗೆ ಅರಸು ಕಲಿಯವನಾ |ಹೀನತನವೆಷ್ಟುಚ್ಚರಿಸಲಿ ಮಿಥ್ಯಾ ||ಜ್ಞಾನಿಭೇದವನರಿಯ ಪಂಚ ಮಹಾಪಾತಕಿ ಪು- |ರಾಣ ವೇದಗಳಿಗೆ ವಿರುದ್ಧಾರ್ಥ ಕಲ್ಪಿಸುವಾ 11ಸುಜನರಾಚರಣೆ ನಡಿಯಗುಡ ದುಃಖ ಬಡಿಸುವ |ಕುಜನರಿಗನೇಕ ಬಗೆ ಸಹಯವಹನೂ ||ಪ್ರಜಗಳನ ರೋಗನಾ ವೃಷ್ಟಿಯಿಂ ದಣಿಸುವನು |ವೃಜನವನ ವಪು ತಾಯಿ ತಂಗಿಯಂಬರನರಿಯ 12ಬವರಬಂಗಾರ ದ್ಯೂತಾ ಪೇಯಅನೃತನಟ |ಯುವತಿಯೀಯಾರು ಸ್ಥಳ ನಿಲಯವವರಿಗೆ ||ನವವಿಧ ದ್ವೇಷಿಗಳಿಗಾಕಾರನೆನಿಸುವನು |ಅವನ ಸಮ ಪಾಪಿಗಳು ಮೂರು ಲೋಕದಲಿಲ್ಲ 13ಆ ನೀಚನ ಮಲಮೂತ್ರ ವಿಸರ್ಜನದಿಘೋರ|ಕಾನನದಿ ಕತ್ತಲಿಯೊಳಗೆ ಸ್ಮರಿಪುದೂ ||ಕ್ಷೋಣಿಯೊಳವನ ನಿಂದೆ ನಿರುತದಲಿ ಮಾಡುವದೆ |ಶ್ರೀನಾಥನರ್ಚನೆ ಮಹಾಯಜÕವೆನಿಸುವದು 14ಈ ವಿಧದಿ ಮೂರು ಗುಣದಿಂದ ಪರಸ್ಪರ ಜೀವ |ಜೀವರಿಗೆ ಭೇದ ಯೋಗ್ಯತಿ ಪ್ರಕಾರಾ ||ಮೂವರಿಗೆ ಪಾಪಮಿಶ್ರಿತಕರ್ಮಪುಣ್ಯ ಬಹು |ನೋವು ಸ್ವರ್ಗ ನರಕ ಸುಮೋಕ್ಷಾದಿಗತಿಉಂಟು 15ಈ ಜೀವರಿಗೆ ಉಳ್ಳನುಭವ ಜಡಗಳಿಗಿಲ್ಲ |ನೈಜವಾಯಿತು ಭೇದ ಜೀವ ಜಡಕೇ ||ಆ ಜಡ ತ್ರಿ, ನಿತ್ಯಾ ಅನಿತ್ಯನಿತ್ಯಾ,ನಿತ್ಯ|ಮಾಜದವು ಅವ್ಯಾಕೃತ ನಭಶೃತಿ ವರ್ಣಗಳೂ 16ಪ್ರಾಕೃತವಿಕೃತ ವೈಕೃತತ್ರಯ ಅಸ್ಥಿರ ಜಡವು |ಪ್ರಾಕೃತವಜಾಂಡ ಧೊರ ಆವರಣವೂ ||ಸ್ವೀಕೃತೈವತ್ತು ಕೋಟ್ಯೋಜನ ಸುವರ್ಣಾತ್ಮ |ಕಾಕ್ರಮಿಸಿಹದಜಾಂಡಕಿದು ವಿಕೃತ ಜಡವೆಂದು 17ಸರಸಿಜಭವಾಂಡದೊಳಿಹ ನೆಲಜಲಧಿಗಿರಿಗಳು |ಎರಡೇಳುಭುವನವೈಕೃತ ಜಡವಿದೂ ||ಸ್ಥಿರ ಅಸ್ಥಿರ ಜಡತ್ರಯ ವಿಧ ಪುರಾಣಗಳರ್ಥ |ಇರುತಿಹವು ಅಚಲಾಗಿ ಶಬ್ದಗಳ ನಿತ್ಯಾ 18ಮೂಲ ಪ್ರಕೃತಿಗತ ತ್ರಿವಿಧಾನಂತ ಪರಮಾಣು |ಜಾಲಕಾರಣತ ಸುಸ್ಥಿರವೆನಿಪವೂ ||ಮ್ಯಾಲೆ ಅದರಿಂದಾದ ತತ್ವಗಳನಿತ್ಯಮಹ |ಕಾಲವೆಂದಿಗ್ಯುನಿತ್ಯಅಣುಕಾಲಗಳ ನಿತ್ಯಾ19ಹೀಗೆ ಮೂರು ವಿಧ ಜಡ ಒಂದೊಂದೆ ಮೂರು ಮೂ- |ರಾಗಿರಲು ಜಡ ಜಡಕೆ ಭೇದ ಸಿದ್ಧಾ ||ಭಾಗಾರ ಮಾಡಿ ಗುಣರೂಪ ಕ್ರಯದಿ ನೋಡೆ |ನಾಗಾರಿವಹಗೆ ಜಡಗಳಿಗೆ ಭೇದವೇ ಸತ್ಯಾ20ಈ ಕಮಲಜಾಂಡವು ಅನಿತ್ಯವಿದರೊಳಗೆ ಎಂ- |ದೂ ಕೆಡದೆ ಸುಖಕಾಂತಿ ಯುಕ್ತವಾದಾ ||ಶ್ರೀಕಳತ್ರನ ತ್ರಿಧಾಮಗಳು ಕುಕಲಿಗೆ ತಕ್ಕ |ಶೋಕಪೂರಿತವಾದನಿತ್ಯನರಕಗಳಿಹವು 21ಈಪಂಚಭೇದಜ್ಞಾನಿಲ್ಲದವ ಶ್ರೀ ಮುದ್ರಿ |ಗೋಪಿಚಂದನ ಧರಿಸಿದರು ಫಲವೇನೂ ||ಈ ಪೊಡವಿಯೊಳು ವೇಷಧಾರಿಗಳು ಜೀವಿಸರೆ |ಆ ಪರಿಯ ಭಾಸ ವೈಷ್ಣವನೆಂದರಿಯಬೇಕೂ 22ಹರಿಗುರುಗಳ ದಯ ಪಡೆವರಿಗೆರುಚಿತೋರ್ವದಿತ |ರರಿಗೆ ಈ ಕೃತಿಯುಕರ್ಣಕಠೋರವೂ ||ತರಣಿಬರೆ ಸರ್ವರಿಗೆ ಘೂಕಗಾದಂತೆ ಇದು |ಬರಿಯ ಮಾತಲ್ಲ ಶಾಸ್ತ್ರಕೆ ಸಮ್ಮತಾಗಿಹದು 23ಹೀನರೊಳು ಬೆರಿಯದಲೆ ಪಂಚಭೇದವ ತಿಳಿದು |ಸಾನುರಾಗದಲಿಹರಿಸರ್ವೋತ್ತುಮಾ ||ಪ್ರಾಣದೇವರೆ ಗುರುಗಳೆಂದರಿತು ಭಜಿಸುವರು |ಕಾಣರು ಕು ಸಂಸಾರ ಧಾಮತ್ರ ವೈದುವರು 24ಇಪ್ಪತ್ತೈದು ಪದಗಳಿಂದ ಸಂಗತಿಯಾಗಿ |ಒಪ್ಪುತಿಹ ಈ ಪಂಚಭೇದವನ್ನೂ ||ತಪ್ಪದಲೆನಿತ್ಯಪಠಿಸುವರ ಪೊರವವನು ಬೊಮ್ಮ- |ನಪ್ಪ ಶ್ರೀ ಪ್ರಾಣೇಶ ವಿಠಲನಿಹಪರದಲ್ಲಿ 25
--------------
ಪ್ರಾಣೇಶದಾಸರು