ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡಿರೆ ಬಗಳಾಶ್ಚರ್ಯವ ಕಂಡಿರೇ ಬಗಳಾಶ್ಚರ್ಯವದಿಂಡೆಯರಾದವರನ್ನೆಲ್ಲ ತುಂಡು ಮಾಡಿಶುಂಭ ನಿಶುಂಭರಸುವ ಕೊಂಡವಳ ಪ ಕ್ರೂರ ಧೂಮ್ರಾಕ್ಷ ಶುಂಭರಾಜನ ನೇಮದಿಂದಸಾರಿ ದೇವಿಯನ್ನು ಮುಂದಲೆ ಹಿಡಿದು ಎಳೆವೆನೆನಲುವೀರಳೀಗ ಕೇಳಿ ಅವಡುಗಚ್ಚಿ ಕಣ್ಣು ತೆರೆಯೆಹಾರಿದನು ಧೂಮ್ರಾಕ್ಷನುರಿದು ಭಸ್ಮವಾದನು1 ಚಂಡ ಮುಂಡಗಪ್ಪಣೆಯನುದ್ದಂಡ ಶುಂಭನೀಗ ಕೊಡಲುಖಂಡೆಯವನೆ ಹಿರಿದು ಮುಂಕೊಂಡು ದೇವಿ ಬಲಕೆ ನಿಂದುಗುಂಡೆಯರ ಕೂದಲು ಹಿಡಿದು ತುಂಡು ಮಾಡಿಯೆ ತಿಂದುಚಂಡ ಮುಂಡರ ತಲೆಯ ಖಂಡಿಸಿದ ವೀರಳ 2 ರಕ್ತ ಬೀಜನ ರಕ್ತದಿಂದ ರಕ್ತಬೀಜರಾಗೆರಕ್ತನಯನಿ ಹಾಸಿದಳು ನಾಲಿಗೆಯ ಭೂಮಿಗೆರಕ್ತ ಬೀಜರನ್ನು ಕಡಿದು ನುಣ್ಣಗೆ ನುಂಗಿ ಆದಿ-ರಕ್ತ ಬೀಜನನ್ನು ಶೂಲದಿಂದ ತಿವಿದು ತಿಂದಳು 3 ಅಂಬನ ಮೇಲೆ ನಿಶುಂಭನೆರಡು ಹಸ್ತ ಹೋಗಿಎಂಬೆನೇನು ಒದಯಲಾಗ ಅಂಬುಜಾಕ್ಷಿ ತೊಡೆಯ ಕಡಿಯೆತುಂಬಿ ಕೋಪದಿಂದಲವನು ತಿಂಬೆನೆಂದು ಮುಂದೆ ಬರಲುಅಂಬಿನಿಂದ ತಲೆಯ ಕಳೆದಳಂಬರದಲುಘೇ ಎನಲು 4 ತಕ್ಕೆಯಲ್ಲಿ ಬಿದ್ದು ದೆಕ್ಕಬುಕ್ಕಿಯಾಡೆ ಶುಂಭನನ್ನುನಕ್ಕು ಶಿವನ ಶೂಲದಿಂದಲಿಕ್ಕಿದಳು ಖಳನ ಎದೆಯಉಕ್ಕಿ ಹರುಷ ದೇವತೆಗಳು ಓಲಗವನೆ ಮಾಡಿದರುದುಃಖಾತೀತ ಚಿದಾನಂದ ತಾನಾದ ಬಗಳೆಗೇ5
--------------
ಚಿದಾನಂದ ಅವಧೂತರು