ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕೆ ಕೆಡುವಿರಿ ಸಂಸಾರವು ಸ್ವಪ್ನವೆಂದು ತಿಳಿಯಬಾರದೇಏಕ ಬ್ರಹ್ಮಾಸ್ತ್ರ ದೇವತೆಯ ಹೊಂದಿ ಜನ್ಮ ಕಳೆಯಬಾರದೆ ಪ ಬಿಸಿಲೊಳು ಬಳಲುವರ ಕಂಡು ನೆರಳಿಗೆ ಕರೆಯಬಾರದೆತೃಷೆಯಿಂದ ನಾಲಗೆ ಒಣಗುತಲಿರೆ ನೀರನೆರೆಯಬಾರದೆಹಸಿದು ಬಂದವರಿಗೆ ಇದ್ದದ್ದರೊಳಗೆ ಅನ್ನವ ನೀಡಬಾರದೆಹುಸಿನುಡಿಯ ಬಿಟ್ಟು ಸತ್ಯವಾಕ್ಯವನೀಗ ಆಡಬಾರದೆ1 ಸತಿ ಸುತರು ಸ್ವಾರ್ಥ ಮರೆತು ಮುಕ್ತ ಮನದಿ ಧರ್ಮ ಮಾಡಬಾರದೆಹಿತದವರು ಒಬ್ಬರಾದರೂ ಹಿಂದೆ ಬರುವರೇ ನೀನೇ ನೋಡಬಾರದೆಮತ ಅಭಿಮಾನ ಮರೆತು ಆತ್ಮಾಭಿಮಾನವ ಮರೆಯಬಾರದೆ 2 ನಂಟರ ಮೇಲೆ ಚಿಂತೆಯಿದ್ದಂತೆ ಗುರುವಿನ ಮೇಲೆ ಇರಬಾರದೆಕುಂಠಿಣಿ ಮನೆಗೆ ಹೋಗುವಂತೆ ಮಠಕೆ ಹೋಗಬಾರದೆಒಂಟೆಯಂದದ ಮೋರೆಯನೀಗ ಹಿರಿಯರ ಕಂಡು ತಗ್ಗಿಸಬಾರದೆ 3 ಸಾಧುಗಳು ಕಾಣೆ ಭಕ್ತಿಯಲೆದ್ದು ಚರಣಕೆ ಎರಗಬಾರದೇವ್ಯರ್ಥವಾದದ ಮಾತನು ಬಿಟ್ಟು ಸುಮ್ಮನೆ ತಾನಿರಬಾರದೆಕ್ರೋಧದ ಬೇರನು ಮೊಳಕೆಯಸಹಿತ ಕೀಳಬಾರದೆಮಾರ್ಗದಿ ಕಲ್ಲುಮುಳ್ಳುಗಳಿರೆ ಕಡೆಗೆ ತೆಗೆದೆಸೆಯಬಾರದೆ4 ನಾನಾರು ಎಂದು ವೇದಾಂತ ವಾಕ್ಯದಲಿ ನಿನ್ನ ಅರಿಯಬಾರದೆವಾದವ ಬಿಟ್ಟು ಚಿದಾನಂದನ ಚರಣದಿ ಹೊರಳಬಾರದೆಮೇದಿನಿ ಪೂರ್ಣ ಸರ್ವಬ್ರಹ್ಮವೆಂದು ತಾನು ಅರಿಯಬಾರದೆಭೇದಾ ಭೇದಕೆ ಹೊರಗಾದ ಬಗಳೆಯ ಕೂಡಬಾರದೆ 5
--------------
ಚಿದಾನಂದ ಅವಧೂತರು