ಲಾಲಿಸೆನ್ನ ವೃತ್ತಾಂತ ಲಕ್ಷುಮಿಯ ಕಾಂತ
ಬಾಲನೊಳಿಂಥಾ ಪಾಂಥ ಬ್ಯಾಡ ಭೃಂಗಾಳ ಕಾಂತ ಪ.
ಮಾನವ ನೀನೆ ಕೊಡರೆ ತಡವರು
ಸೃಷ್ಟಿಯ ಒಳಗಾರು ಶ್ರೀ ರಮಣ
ವಿಠಲ ನಿನಗಿನ್ನು ವಿವರಿಸಿ ಪೇಳ್ವದೇನು
ಭ್ರಷ್ಟಗೊಳಿಸದಿರು ಭಯಹರ ಬೇರಿನ್ನಾರು 1
ಏಸು ತಪ್ಪಿದ್ದರೂ ದಾಸ ಬಿಡನೆಂಬ
ಲೇಸಿನ ಬಿರುದೆಂತು ಮಾನುವದು
ಈ ಸಮಯದೀ ಕರುಣಾ ಸಮುದ್ರನೆ ಎನ್ನ
ಘಾಸಿ ಮಾಡದೆ ಗರುಡಾಸನ ಕೃಪೆದೋರು2
ನಡಿಯುವದಳವಲ್ಲ ತಡೆಯುವರೊಶವಲ್ಲ
ನಡಿವ ಕಾರ್ಯಗಳೆಲ್ಲ ನುಗ್ಗಿತಲ್ಲ
ಬಿಡದೆ ಮಾಡುವ ದಾನ ಧರ್ಮಗಳಿಗೆ ಇಂಥ
ತೊಡಕು ಬಂದರೆ ಮುಂದೆ ತಾಳುವದೆಂತೋ ತಂದೆ 3
ಮಾನವರೊಳಗೊಬ್ಬ ಮರುಳುಗೊಂಡಾದರು
ತಾನಿಟ್ಟ ತರುವನು ತೆಗಿಯನೆಂಬ
ಮಾನಿತ ನುಡಿಯಿದ್ದು ಮೊದಲಿನಿಂದ ನೀನು ಕಾದು
ದೀನನ ಬಿಡದಿಂದು ದಯದೋರು ಕೃಪಾಸಿಂಧು 4
ತೋರುವದಿಲ್ಲುಪಾಯ ಭೋರೆನುತಿದೆ ಮಾಯ
ಕಾಯ ಕರ ಕರಿಯಾ
ಹಾರಿಸು ಹಲಧರನನು ವೆಂಕಟರಾಯ
ದೂರು ನಿನ್ನ ಪದಕೆ ಬಾರದಂದದಿ ಜೀಯ 5