ಒಟ್ಟು 14 ಕಡೆಗಳಲ್ಲಿ , 7 ದಾಸರು , 14 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂಥಾ ಗುರುಗಳ ಕಾಣೆನೋ ಈ ಜಗದೊಳು ನಾ ಪ ಇಂಥಾ ಗುರುಗಳನೆಂದು ಕಾಣೆನಾ ನಂತ ಚೇತನರಂತರ ಬಹಿರದಿ ನಿಂತು ಕರ್ಮವವರಂತೆ ಮಾಳ್ಪಾ - ನಂತ ಮಹಿಮಾನಂತನಾಂಶಜರಿಂಥಾಅ.ಪ ತುಂಗಾತೀರದಿ ನಿವಾಸಾ ಮಂತ್ರಾಲಯಕೀಶ ತುಂಗ ವಿಕÀ್ರಮ ಜಗದೀಶಾ ಶ್ರೀಹರಿ ದಾಸಾ ಮಂಗಲ್ಮಾತಕ ವೃಂದಾವನ ದೇಶಾ ಸಾರಿದ ವ್ರತೀಶಾ ಮಂಗಲ ಮಹಿಮ ರಂಗನ ಕರುಣಾಪಾಂಗ ಪಡೆದ ಕೃ - ಪಾಂಗ ಯತಿಕುಲೋತ್ತುಂಗ ಮಾಯಿ ಮಾ - ತಂಗ ಸಂಘಕೆ ಸಿಂಗ ದುಷ್ಟ ಭು - ವಿಹಂಗ ಸ್ವಮತೋ - ಭೃಂಗ ಮನ್ಮನೋ - ರಂಗ ಬಿಂಬನ ಇಂಗಿತಙ್ಞರ ಸಂಗ ನೀಡಿ ಕಂಗಳಿಗೆ ತಾವು ಕಂಗೊಳಿಪರಿಂಥಾ 1 ಮೇದಿನಿ ತಳದಲಿ ಜನಿಸೀ ಸುಖತಿರ್ಥರ ಭಜಿಸೀ ಭೇಧಮತವನೆ ಸಾಧಿಸೀ ವಾದದಿ ಜೈಸಿ ಮಾಧವನೆ ಸರ್ವೋತ್ತಮನೆನಿಸಿ ಸ್ವಮತವ ಸ್ಥಾಪಿಸಿ ಭೋಧಿಸಿ ತತ್ತ್ವವ ಭೇಧಿಸಿ ಪರಮತ ಛೇಧಿಸಿ ಕುಮತಿಯ ಶೋಧಿಸಿ ತತ್ತ್ವದ ಹಾದಿಯ ಹಿಡಿಸಿ - ಮೋದಕೊಡುವ ಪಂಚ ಭೇದವ ತಿಳಿಸೀ ಸಾದರ ತನ್ನಯ ಪಾದಸೇವೆಯ ಮೋದವ ನೀಡುವ ಮೇದಿನೀ ದಿವಿಜಾರಾಧಿತ ಪದಯುಗ ಶೋಧಿಸಿ ಜನಮನೋ ಖೇದಗೊಳಿಪ ಭ - ವೋಧಧಿ ದಾಟಿಸಿ ಶ್ರೀದÀನ ತೆರದಲಿ ಮೇದಿನಿಯಾಳುವರಿಂಥಾ 2 ಧಿಟ್ಟ ಗುರು ಜಗನ್ನಾಥ ವಿಠಲದೂತಾ ಸೃಷ್ಟಯೊಳಗತಿ ವಿಖ್ಯಾತಾನೆನಿಸಿದ ಯತಿನಾಥಾ ಕುಷ್ಟಾದಿ ರೋಗದ ಘಾತಾ ಮಾಡುವೊದಾತಾ ಇಷ್ಟಾರ್ಥವಾ ತಾ ಸೃಷ್ಠಿಗೆ ಬೀರುವ ಶಿಷ್ಟಜನರನುತ್ನøಷ್ಟದಿ ಪಾಲಿಪ ಎಷ್ಟು ಪೇಳುವುದೋ ಉತ್ಕøಷ್ಟನ ಗುಣಗಳ ಭ್ರಷ್ಟರರಿಯರೆಲೆ ಶಿಷ್ಟರು ಬಲ್ಲರು ಇಷ್ಟೇ ಅಲ್ಲವೀತನ ವಿಶಿಷ್ಟ ಮಹಿಮೆಗ - ಳೆಷ್ಟು ಪೇಳಲವಶಿಷ್ಟವೆನಿಪವೋ ದೃಷ್ಟಿಹೀನರಿಗೆ ದೃಷ್ಟಿ ನೀಡುವ ದೃಷ್ಟಿ ಮಾತ್ರದಿ ತುಷ್ಟಿಬಡಿಸುವೊರಿಂಥಾ 3
--------------
ಗುರುಜಗನ್ನಾಥದಾಸರು
ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು
ಏನಿದು ಮಹದಪರಾಧ ಮಾಡಿದೆ ನಾನು ನಿನ್ನವರನೆ ನಿಂದಿಸಿದೆ ತಿಳಿಯದಭವ ದೇವ ಪ ಜ್ಞಾನವಿಡಿದಿ ನೋಡದೆ ತುಸು ಏನುಕಾಣದೆ ನಾನಾಪರಿಯಲಿ ಶ್ವಾನನಂದದಿ ಚೀರುತ್ಹಾರುತ ಹೀನವಾಚಗಳ್ವಾಚಿಸಿದೆನೋ ಅ.ಪ ತತ್ತ್ವದರ್ಥಕರಾಗಿ ಗುಪ್ತದಿಂದಿರ್ವವರ ನರ್ತುನೋಡದೆ ಅನರ್ಥವಾಡಿದೆನೋ ಪ್ರಭೋ ಮತ್ರ್ಯಗುಣಗಳ ಮರ್ತುಬಿಡದೆ ನಿರ್ತಮಾನಿಸರ ಗುರ್ತುತಿಳಿಯದೆ ಕತ್ತೆಯಂತೊದರುತ್ತ ಸತ್ಯರ ಕೃತ್ತಿಮರೆಂದೆನುತ ಜರಿದೆ 1 ಮೀನು ಜಿಹ್ವೆಯ ರುಚಿಗಾ ಗೇನು ತಿಳಿಯದೆ ಪೋಗಿ ಗಾಣ ಸೆಳೆದುನುಂಗಿ ಪ್ರಾಣಕೊಟ್ಟಂತೆ ಹರಿಯೆ ಗಾನಲೋಲನ ಮನದೊಳಿಟ್ಟು ಧ್ಯಾನಿಪ ಕೋವಿದಸುಜನರ ಖೂನವಿಲ್ಲದೆ ಮನಕೆ ಬಂದಂತೆ ಕಾಣದಂಧಕನಂತೆ ಜರಿದೆ 2 ನಿನ್ನಿಂದೆ ನಾ ಬಂದೆ ನೀನೆನ್ನ ತಂದೆ ಮುಂ ದಿನ್ನಿಂಥ ದುರ್ಮತಿಯನ್ನು ಕೊಡದಿರೊ ರಂಗ ನಿನ್ನ ದಾಸರೊಳಿಟ್ಟು ಅನುದಿನ ಭಿನ್ನವಿಲ್ಲದೆ ರಕ್ಷಿಸಯ್ಯ ನಿನ್ನ ಚರಣದಾಸರ ನಾಮ ಪನ್ನಂಗಶಾಯಿ ವರ ಶ್ರೀರಾಮ 3
--------------
ರಾಮದಾಸರು
ಜಯತೀರ್ಥ ಮುನಿವರ್ಯ ಪ ದಯತೋರಿ ಪೊರೆಯಯ್ಯ ವಿಜಯಸಾರಥಿಪ್ರಿಯ ಅ.ಪ ಶ್ರೀಶಶಯನಾವೇಶ ಮಹೇಶ ಪ್ರತಿಬಿಂಬ ಸು ರೇಶ ಯತಿಕುಲಾಧೀಶ ಪಾಲಿಸಯ್ಯ ಏಸು ನಿನ್ನಯ ಕರುಣರಾಶಿ ಎಂತಿಹುದಯ್ಯ ಆಸೆ ಸಲಿಸಲು ಮನೆಗೆ ಲೇಸಾಗಿ ನೀ ಬಂದೆ 1 ಪಶುಪತಿಯ ಮತ ದಹಿಸಿ ಅಸುಪತಿಯ ಮತ ಮೆರೆದೆ ವಸುಮತಿಯ ಸುರನಾಗಿ ಬಂದು ನಿಂದೆ ಪಶುಪ್ರಾಯನೆಂದೆನ್ನ ಉದ್ಧರಿಸಲೋಸುಗದಿ ಬಿಸಜತವಪಾದ ಪಾಂಸವನಿತ್ತೆ 2 ಜಯಗುರುವೆ ಶ್ರೀ ವಿಜಯದಾಸರಲ್ಲೆನ್ನ ಮನೋ ಜಯವು ಪುಟ್ಟಿಸಿದ ನಿನ್ನ ಕರುಣವೆಂತೊ ಸೃಜಿಸಿ ತೋರಿದ ಸ್ವಪ್ನ ನಿಜವು ಆಗಲಿ ಎಂದು ಬಿಜಯ ಮಾಡಿದೆ ನಿನ್ನ ನಿಜದಾಸರೊಡನೆ 3 ಜಯಗುರುವೆ ನಿಮ್ಮ ಹುದ್ಗುಹದಲಿ ನಲಿಯುತಿಹ ವಾಯುವಂತರ್ಗತ ಕೃಷ್ಣನ ತೋರೋ ಜಯತು ಶ್ರೀ ವೇಣುಗೋಪಾಲ ಮೂರ್ತೇ ಜಯತು ಶ್ರೀ ವೇಣುಗೋಪಾಲನೆಂದೆನಿಸಿಯ್ಯ 4 ಸೃಷ್ಟಿಗೆ ಬಂದು ನಾನೆಷ್ಟು ಜನ್ಮವ ಕಳೆದೆ ಪುಟ್ಟಿದೆನೋ ನಾನೀಗ ಈ ಜನ್ಮದಿ ಪುಟ್ಟಲಿಲ್ಲವೋ ಜ್ಞಾನ ಹರಿ ಗುರುಸ್ಮರಣೆಗೆ ಇಟ್ಟಕಡೆಗಣ್ಣÂನೋಳಿಷ್ಟು ನೋಡಯ್ಯ5 ವಾದಿಮಸ್ತಕ ಭೇದಿ ಮೋದತೀರ್ಥರ ತತ್ತ್ವ ಛೇದಿಸಿ ವಾಕ್ ಯುದ್ದ ಯೂಥಪಗಳನೆಲ್ಲ ಗೆದ್ದು ಸತ್ತತ್ತ್ವದಾ ಸಿಂಹನಾದವ ಮಾಡ್ದೆ 6 ಮಧ್ವರಾಯರಿಗೆ ನೀ ಮುದ್ದುಮೊಮ್ಮಗನಯ್ಯ ಸದ್ವಿದ್ವದ್ಗ್ರಂಥ ಭಾರವನೆ ವಹಿಸಿ ಮುದ್ದು ತೊತ್ತೆನಿಸಿ ಎತ್ತಾಗಿ ಸೇವಿಸಿ ಯತಿಯಾಗಿ ನಿಂದ ತತ್ತ್ವಮುತ್ತಿನ ಖಣಿಯೆ 7 ಇಳೆಯೊಳಗೆ ನಿನ್ನಂಥ ಕರುಣಾಳುಗಳ ಕಾಣೆ ಅಳವಲ್ಲ ವರ್ಣಿಸಲು ನಿನ್ನ ಗುಣಗಳನು ಮಳಖೇಡವಾಸ ಯತಿಕುಲಾಧೀಶಾ 8 ಗುರುವೆ ನಿನ್ನಯ ಕರುಣಕವಚ ತೊಟ್ಟವರ ಚರಣಕಮಲದೊಳಿಹ ಮಧುಪನೆಂದೆನಿಸೋ ನಿರುತ ದೃಢಭಕುತಿ ಶ್ರೀ ವೇಂಕಟೇಶನೊಳಿಟ್ಟುಪೊರೆಯೊ ಶ್ರೀ ಗುರುವರಾಗ್ರಣಿಯೆ ನಮೋ ಎಂಬೆ9
--------------
ಉರಗಾದ್ರಿವಾಸವಿಠಲದಾಸರು
ಜೋ ಜೋ ಜೋ ಜೋ ಜೋ ಎನ್ನ ಗುರುವೆ ಜೋ ಜೋ ಜೋ ನಿಜ ಕಲ್ಪತರುವೆ ಜೋ ಜೋ ಎಂದು ಜನ್ಮಕ್ಕೆ ಬರುವೆ | ಜೋ ಜೋ ನಿಮ್ಮ ಚರಣದಲ್ಲಿರುವೆ ಜೋ ಜೋ ಪ ಅಷ್ಟ ಸಿದ್ಧಿಗಳೆಲ್ಲ ಬಡ್ಡಿಯ ಕೊರೆಸಿ | ಗಟ್ಟ್ಯಾಗಿ ವೇದದ ಕಾಲವ ನಿಲ್ಲಿಸಿ ಅಷ್ಟತತ್ತ್ವದ ಹುರಿ ಹೆಣಿಕಿಲಿ ಬಿಗಿಸಿ | ತೊಟ್ಟಿಲೊಳರುವಿನ ಹಾಸಿಗೆ ಹಾಸೀ || ಜೋ ಜೋ 1 ಸಾಧನ ನಾಲ್ಕೆಂಬೋ ಹಗ್ಗವ ಹೊಸೆದು | ಬೋಧದ ಗಂಟು ತುದಿಯಲ್ಲಿ ಬಿಗಿದು | ನಾದ ಅನಾಹತ ಗಂಟೆಯ ಹೊಡೆದು | ಆದಿ ಗುರುವಿನ ಮಲಗಲಿ ಕರೆದು || ಜೋ ಜೋ || 2 ಕಾಲಿಗೆ ಯೋಗದ ಪಾಶವ ಕಟ್ಟಿ | ಮೂಲೈದು ಬ್ರಹ್ಮರಂಧ್ರಕ್ಕೆ ಮುಟ್ಟಿ | ಮೇಲಿನ ಜೋತೆಗೆ ಭಾಸದ ಬುಟ್ಟಿ | ಲೀಲೆಯಿಂದಲಿ ನೋಡು ಗುರುವಿನ ದೃಷ್ಟಿ || ಜೋ ಜೋ 3 ಮನಸೀಗೆ ಬಾರದ ಮಾತುಗಳಾಡಿ |ನೆನೆಹಿಗೆ ನಿಲ್ಕದ ನಿತ್ಯನ ಕೂಡಿ | ಕನಸು ಎಚ್ಚರದ ಗಾಢವ ನೋಡಿ |ಉನ್ಮನಿ ಬೆಳಗುವ ಮೂರ್ತಿಯ ಪಾಡಿ || ಜೋ ಜೋ 4 ಭಕ್ತಿ ವಿರಕ್ತಿಗೆ ಸಿಲ್ಕುವನೀತಾ | ಸತ್ಯ ಶರಣ್ಯ ಸದ್ಗುರು ನಾಥಾ | ಕರ್ತೃತ್ವ ಇಟ್ಟನು ಮೌನದಲ್ಲೀತಾ | ವೃತ್ತಿ ವಿರಹಿತ ಗಿರಿ ಪಾಲಿಸು ಗುರುತಾ || ಜೋ ಜೋ 5
--------------
ಭೀಮಾಶಂಕರ
ತಿಳಿಸುವ ಮಾತಲ್ಲಾ | ತಿಳಿಸದೆ ತಿಳಿಯುವ ಮಾತಲ್ಲಾ | ತಿಳಿಸದೆ ತಿಳಿಯದು | ತಿಳಿಯದು ನಿನಗದು | ತಿಳಿಸದೆ ತಿಳಿಯದು | ತಿಳಿಯದೆ ಹೊಳೆಯದು ಪ ಎಚ್ಚರ ನೀ ಮರೆತಿ ಮದ ಮತ್ಸರದಲೀ ಬೆರತೀ | ಅಚ್ಚ ಹೇಸಿಕೀ ದೇಹ ಮುಚ್ಚಿದ ಚರ್ಮಕ್ಕೆ | ನಿಶ್ಚಯವೆಂದರಿವೆ ಛೇಕರವೇ 1 ಭೇದವಳಿಯಲು ಬೇಕೊ ಮನದ ವಿವಾದ ಕಳೆಯಲು ಬೇಕೊ | ಸಾಧುಸಂತರ ಸಂಗ ಸೇವಿಸಿ ತತ್ತ್ವದ್ಹಾದಿ ಹಿಡಿಯ ಬೇಕೊ |ನೀನೆ ಹೀಗ್ಯಾಕೊ 2 ಬೋಧ ಮುಕ್ತಿ |ಆದಿಮೂರ್ತಿ ಭವತಾರಕ ದೇವ ಪಾದವಪೂಜಿಸಿ ನೀವ್ | ತಿಳಿದೆ ಭಜಿಸದಲೇ 3
--------------
ಭಾವತರಕರು
ದಾಸನಾಗೋ ಪ್ರಾಣಿ ಬರಿದೆ ಕಾಣಿ ಪ ದಾಸನಾಗು ರಮೇಶನ ಪಾದ ಹೇಸಿಮನಸಿನ ಕ್ಲೇಶವ ನೀಗಿ ಅ.ಪ ಹಮ್ಮು ಬಿಟ್ಟುಬಿಡೋ ಈಶತ್ವ ಸುಮ್ಮನಲ್ಲ ನೋಡೋ ಸಮ್ಮತ್ಹೇಳಬೇಡೋ ಮಹವಾಕ್ಯ ಮರ್ಮಶೋಧ ಮಾಡೋ ಹಮ್ಮು ಅಹಂಕಾರ ದೂಡಿ ನಿರ್ಮಲಮತಿಗೂಡಿ ಒಮ್ಮನದಿಂ ಪರಬ್ರಹ್ಮನ ಪಾಡಿ 1 ಶಂಕೆಯನೀಡ್ಯಾಡೋ ಚಿತ್ತದ ಕ ಲಂಕ ದೂರ ಮಾಡೋ ಓಂಕಾರರ್ಥ ಮಾಡೋ ಬ್ರಹ್ಮದ ಅಂಕಿತಿಟ್ಟು ಪಾಡೋ ಕಿಂಕರನಾಗದೆ ಶಂಕರ ನಿನಗೆಲ್ಲಿ ಮಂಕುತವನವ ಬಿಟ್ಟು ಸಂಕರುಷಣನ 2 ಹಾಳು ವಾಸನೆ ತೂರಿ ನಿಜವಾದ ಶೀಲಜನರ ಸೇರಿ ಮೂಲತತ್ತ್ವದಾರಿ ಅನುಭವ ಕೀಲಿ ತಿಳಿದು ಭೇರಿ ತಾಳನಿಕ್ಕುತ ಮಮಶೀಲ ಶ್ರೀರಾಮನ ಮೇಲೆಂದು ನಂಬಿ ಭವಮಾಲೆ ಗೆಲಿದು ನಿಜ 3
--------------
ರಾಮದಾಸರು
ನಂಬು ನಂಬೆಲೆ ಮನ ಗಿರಿಧರನ ನಿನ ಗಿಂಬುಗೊಡುವ ಭಕ್ತ ಸಂಜೀವನ ಪ ಕತ್ತೆಯಂತೆ ಕೂಗಿ ಕೆಡಬೇಡ ಪರ ಮಾರ್ಥತತ್ತ್ವದ ಹಾದಿ ತಿಳಿ ಮೂಢ ಸತ್ಯರ ಪಾದದಿ ಮನನೀಡೋ ನಿತ್ಯ ಉತ್ತಮರೊಳಗಾಡಿ ನಿಜ ನೋಡೋ 1 ಕೋತಿಯಂತೆ ಕುಣಿಯಲುಬೇಡೋ ಮಹ ನೀತಿವಚನ ಮೀರಿ ನಡಿಬೇಡೋ ಮಾತುಮಾತಿನ ಸಂಶಯಬೇಡೋ ಮುಂದೆ ಪಾತಕದೊಳು ಬಿದ್ದು ಕೆಡಬೇಡೋ 2 ಸಾರಸಂಸಾರ ಮಿಥ್ಯವೆಂದು ತಿಳಕೋ ನೀನು ಧೀರ ಶ್ರೀರಾಮನ ಅಡಿಗ್ಹೊಂದಿಕೋ ಗಂ ಭೀರ ಮೋಕ್ಷಪದವನೆ ಪಡಕೋ 3
--------------
ರಾಮದಾಸರು
ಭಾರತೀಪತಿ ಮೂರುತಿ ಮಾರುತಿ ಕಾಯೊ ಪ ಘೋರದುರಿತೌಘ ಪರಿಹಾರ ಸುಸಮೀರ ಧೀರಾ ಅ.ಪ ಸತ್ತ್ವ್ವ ಸತ್ತ್ವಾತ್ಮಕ ತತ್ತ್ವದೇವತೆಗಳ ನಿತ್ಯ ನಿಯಾಮಕ ಗುರು 1 ಪಟುತರಾಂಗನೆ ಧೂರ್ಜಟಿಯ ಸೇವೆಗೆ ಮಚ್ಚಿ ಪರಮೇಷ್ಠಿ ಪದ 2 ನಂಜಯನಾಗ್ರಜನೆ ಮೂರ್ಜಗ ಗುರು 3 ಶ್ರೇಷ್ಠಮೂರುತಿ ಜಗಚ್ಚೇಷ್ಟಾಪ್ರದಾಯಕ ಪ್ರವಿಷ್ಠ ಸರ್ವಸೃಷ್ಟಿಕಾರ್ಯ ತೊಟ್ಟಿರುವೆ4 ಮುಖ್ಯವಾಚ್ಯನು ದೇವ ಅಮುಖ್ಯವಾಚ್ಯನು ನೀನು ಮುಖ್ಯ ಜೀವಕೋಟಿಯೊಳು ಪ್ರಮುಖನಯ್ಯ ಮುಖ್ಯಪ್ರಾಣ5 ಶ್ವಾಸನಿಯಾಮಕ ನಿಶೆಯೊಳು ನಿದ್ರೆಯೊಳು ಅಸುರಾದಿ ಜೀವರೊಳು ಶ್ವಾಸಭೂರ್ಭುವನೆನಿಸುವೆ 6 ಸರ್ವನಿಯಾಮಕ ಶರ್ವರೊಂದಿತಪಾದ ಸರ್ವೋತ್ತಮ ಶ್ರೀ ವೇಂಕಟೇಶನೋರ್ವನೆ ಮುಖ್ಯನೆಂದೆ7
--------------
ಉರಗಾದ್ರಿವಾಸವಿಠಲದಾಸರು
ಮಾಡೋ ಪರಮೇಶ್ವರ ಗುರುಧ್ಯಾನಾ ಬಿಡದಿರುವದು ಭಜನಾ ||ನೋಡೋ ನಿನ್ನೊಳು ನಿಜ ಖೂನಾ | ಪೂರ್ಣೈಕ್ಯದ ಜ್ಞಾನಾ ಪ ಅಪರೂಪದ ನಿಜ ತನುವಿದು ನೋಡೋ ಸೆಡಗರದೀ ಪಾಡೋ ||ಅಪಹಾಸ್ಯವ ಮಾಡದೆ ನೀ ಕೂಡೋ ಘನ ಚಿನ್ಮಯ ಗೂಡೋ 1 ಆಜ್ಞಾ ಚಕ್ರದ ಬಳಿಯಲ್ಲೀ | ಎರಡೂ ಕಮಲದಲ್ಲೀ |ಪ್ರಾಜ್ಞಾ ಝಗ ಝಗಿಸುವ ಬೆಳಕಲ್ಲೀ | ತಿಳಿ ನಿನ್ನೊಳಗಿಲ್ಲೀ 2 ಮೇಲಿನ ಸ್ಥಾನದ ಸಹಸ್ರಾರ | ಗುರುತತ್ತ್ವದ ಸಾರಾ ||ಪೇಳಲಳವಲ್ಲವು ಸುಖ ಪೂರಾ | ಶಂಕರ ಪದವಿವರಾ | ಭೀಮಾ ಶಂಕರ ಪದವಿವರಾ 3
--------------
ಭೀಮಾಶಂಕರ
ಶ್ರೀರಾಘವೇಂದ್ರರು ಸಂತಜನರ ಪ್ರಿಯ ಸಂತತಕರುಣಿಸು ಮಂತ್ರಾಲಯ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ ಪ ಬಾಗಿವಂದಿಪೆ ದಯಾಸಾಗರ ನಿಜಯತಿ ರಾಘವೇಂದ್ರ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 1 ಜ್ಞಾನಕವಚ ತೊಟ್ಟು ಕ್ಷೋಣಿಯೊಳ್ ಅವತರಿಸಿದಿ ಜ್ಞಾನಶರಧಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 2 ಮೇದಿನ್ಯುದ್ಧರಿಸಿದಿ ವೇದವೇದಾಂತದ ಸ್ವಾದವರಿದು ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 3 ವಾದಿಮತರ ಕುವಾದ ಮುರಿದು ಸು ಮಂತ್ರಮೂರ್ತಿ ಗುರುನಾಥ 4 ಜಗದೊಳಗನುಪಮ ಭಗವದ್ಭಕ್ತಿ ಘನ ಮಿಗಿಲೆನಿಸಿದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 5 ನಿತ್ಯ ನೆನಿಪ ನಿಜ ತತ್ತ್ವದಾದಿ ಜಗ ಕುತ್ತರಿಸಿದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 6 ಸತ್ಯವಾದ ಪರಮಾರ್ಥಪಥದಿ ನಿಂತು ನಿತ್ಯದಾಡಿದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 7 ಪೃಥ್ವಿಯೊಳು ನಿಮ್ಮ ಭಕ್ತಜನರ ಬಿಡ ಗುರುನಾಥ 8 ಕೂಡಿಸಿ ದ್ವಿಜವೃಂದಾಡುತಲನುದಿನ ಮಂತ್ರಮೂರ್ತಿ ಗುರುನಾಥ 9 ನಿರುತ ಭೂಸುರಗಣಕ್ಹರುಷವಿತ್ತು ಸದಾ ಮಂತ್ರಮೂರ್ತಿ ಗುರುನಾಥ 10 ಬೇಡಿದವರಿಗೆ ಬೇಡಿದ ವರಗಳ ಮಂತ್ರಮೂರ್ತಿ ಗುರುನಾಥ 11 ಗಾಢಮಹಿಮೆ ತೋರಿ ರೂಢಿಜನರ ಕಾ ಪಾಡ್ಹಿದ್ಹಿತದಿ ಸುಖದಾತ ನಮೋ ಮಂತ್ರಮೂರ್ತಿ ಗುರುನಾಥ 12 ಧರೆಯೊಳು ನರಹರಿ ಶರಣಜನರ ಕೂಡಿ ಮಂತ್ರಮೂರ್ತಿ ಗುರುನಾಥ 13 ಮುಳುಗಿರ್ದ ಪುಣ್ಯಮಯದಿಳೆಯನು ನಿಮ್ಮೊಳು ಗುರುನಾಥ 14 ಧರ್ಮಗೆಟ್ಟಿಳಗೆ ಸದ್ಧರ್ಮ ಬಿತ್ತಿದಿ ಸ್ಥಿರ ಮಂತ್ರಮೂರ್ತಿ ಗುರುನಾಥ 15 ಸಾಧಿಸಿ ಮಹ ತಪದಾದಿ ಮೂರ್ತಿಯಿಂ ಮಂತ್ರಮೂರ್ತಿ ಗುರುನಾಥ 16 ನಿಗಮಾತೀತನೊಳ್ ಬಗೆಬಗೆಯಾಟವ ಮಂತ್ರಮೂರ್ತಿ ಗುರುನಾಥ 17 ಮಂಗಳಮೂರ್ತಿಯ ಕಂಗಳಿಂದ ಕಂಡು ಭವ ಮಂತ್ರಮೂರ್ತಿ ಗುರುನಾಥ 18 ತುಂಗನಿವಾಸ ಮಹ ಮಂಗಳಾಂಗ ಸುಜ ಮಂತ್ರಮೂರ್ತಿ ಗುರುನಾಥ 19 ನಿತ್ಯ ನಿಮ್ಮಪಾದ ಭಕ್ತಿಯಿಂ ಭಜಿಸಲು ಮಂತ್ರಮೂರ್ತಿ ಗುರುನಾಥ 20 ಮುಕ್ತಿದಾಯಕ ಜಗದಾಪ್ತ ಶ್ರೀರಾಮನಂ ಮಂತ್ರಮೂರ್ತಿ ಗುರುನಾಥ 21
--------------
ರಾಮದಾಸರು
ಶ್ರೀಶನ ಚರಣದಾಸನಾಗಿರ್ದರೆ ಆಶಾಪಾಶ ನೀಗಿರಬೇಕು ಪ ಈಶನರಿತ ಗುರು ಶಿಷ್ಯನಾಗಿರ್ದರೆ ದೂಷಣ ಭೂಷಣ್ಹೋಗಿರಬೇಕು ಅ.ಪ ಹರಿಸರ್ಮಣಾಮೃತ ಸುರಿವನಾಗಿರ್ದರೆ ಧರೆಯ ಭೋಗ ಮೀರಿರಬೇಕು ಪರತತ್ತ್ವದ ಮೂಲರಿತವನಾದರೆ ಮರವೆ ಮಾಯ ಹಾರಿರಬೇಕು 1 ವೇದ ವೇದಾಂತವ ಸಾಧಕನಾದರೆ ವಾದ ವಾಂಛಲ್ಯವ ತೊಡೆದಿರಬೇಕು ಬೋಧ ಪಡೆದು ನಿಜ ಸಾಧುವಾದರೆ ನಾದಶಬ್ದವಡಗಿರಬೇಕು 2 ಮಾನಸಪೂಜೆಯ ಖೂನ ಬಲ್ಲ್ಯಾದರೆ ತಾನು ತನ್ನನು ಅರಿತಿರಬೇಕು ಧ್ಯಾನವಿಡಿದು ನಿಜಜ್ಞಾನಿಯಾದರೆ ಮಾನಭಿಮಾನಕ್ಹೊರತಿರಬೇಕು 3 ಬೋಗದ್ವಾಸನ್ಹಿಂಗಿ ಭಾಗವತನಾದರೆ ಕೂಗಿನ ನೆಲೆ ತಿಳಿದಿರಬೇಕು ಯೋಗ ಬಲಿಸಿ ಮಹಯೋಗಿಯಾದರೆ ರಾಗರಹಿತನಾಗಿರಬೇಕು 4 ಲಿಂಗವ ಧರಿಸಿ ಜಂಗಮನಾದರೆ ಸಂಗರಹಿತನಾಗಿರಬೇಕು ಅಂಗ ಮೂರು ನೀಗಿ ಲಿಂಗ ತಾನಾದರೆ ಲಿಂಗಾಂಗ ಸಮರಸ ತೋರಬೇಕು 5 ಸತ್ಯವರಿತು ಸತ್ಪುರುಷನಾದರೆ ಸತ್ತಂತೆ ಜಗದೊಳಿರಬೇಕು ಮೃತ್ಯುಗೆಲಿದು ಪರಮಾರ್ಥಿಕನಾದರೆ ಮತ್ರ್ಯರ ಗುಣ ಮರ್ತಿರಬೇಕು 6 ಘೋರ ಭವಾಂಬುಧಿ ಪಾರುಗಂಡಿರ್ದರೆ ಪಾರ ಹಾರೈಕೆ ಅಳೆದಿರಬೇಕು ಸಾರಮೋಕ್ಷ ತನ್ನ ಸೇರಬೇಕಾದರೆ ಧೀರ ಶ್ರೀರಾಮನೊಲಿಸಿರಬೇಕು 7
--------------
ರಾಮದಾಸರು
ಸರ್ವಾಂತರ್ಯಾಮಿ ಸರ್ವೇಶ ಬಾರೊ ಸರ್ವಸ್ವತಂತ್ರನೆ ಸರ್ವಭಯನಾಶ ಪ ಸರ್ವತಂತ್ರನೆ ಸರ್ವವೇದದಿ ಸರ್ವತತ್ತ್ವದಿ ಸರ್ವಸಾಕ್ಷಿ ನೀ ಸರ್ವವ್ಯಾಪಕ ಸರ್ವದೇವರ ಸಾರ್ವಭೌಮ ಅ.ಪ ಜಡಬೊಂಬೆ ನಾಟಕರಚಿಸಿ ಎಡಬಿಡದೆ ಕುಣಿಸ್ಯಾಡುವಿ ಕಡುಮೋಹಗೊಳಿಸಿ ಕಡುಗೌಪ್ಯದದರೊಳು ನೆಲೆಸಿ ನೀನೆ ಅಗಣಿತ ಕಲ್ಪನೆವೆರಸಿ ಜಡಕೆ ಜಡವಾದ ತೊಡರಿನಾಟದ ಕೆಡಕು ತಪ್ಪಿಸಿ ಪಿಡಿದು ಎನ್ನನು ಒಡೆಯ ನಿನ್ನಡಿ ಭಕ್ತರಾವಾಸ ದಿಡು ಎಂದೆರಗುವೆ ಪಾಲಿಸಭಯ 1 ನಾನಾವಿಧದ ಸೃಷ್ಟಿಗಳ ಸೃಜಿಸಿ ಪೋಣಿಸಿ ಮಾಡಿಟ್ಟ ಭವವೆಂಬ ಮಾಲೆ ಏಳು ಮೋಹವ ತುಂಬಿದೆಲ ಪುಸಿ ಕಾಣದಂತೊಗೆದಿ ಮಹಾಮಾಯದ ಜಾಲ ನಾನು ನೀನೆಂಬ ಜಾಣರೆಲ್ಲ ಬಿದ್ದು ಏನುಕಾಣದೆ ತ್ರಾಣಗೆಟ್ಟರು ಹೀನಮತಿ ನಾನೇನು ಬಲ್ಲೆನು ನೀನೆ ಸಲಹೆನ್ನ ದೀನರಕ್ಷಕ 2 ಪಾವನ ಪರಮಪ್ರಕಾಶ ದೇವ ಭಾವಜನಯ್ಯ ನಿಜಭಾವಿಗಳರಸ ಕೇವಲಸುಗುಣಾಂತರ್ವಾಸ ನಿನ್ನ ಸೇವಕನೆನಿಸೆನ್ನ ಕಾಯೊ ನುತಪೋಷ ಜೀವಜೀವರಜೀವ ಚೈತ್ಯನದೇವ ದೇವರ ದೇವ ನಂಬಿದೆ ಜಾವ ಜಾವಕೆ ಒದಗುತಿಹ್ಯ ಮಹ ನೋವು ಗೆಲಿಸೆನ್ನಯ್ಯ ಶ್ರೀರಾಮ 3
--------------
ರಾಮದಾಸರು
199ಒಂದೆ ಮನದಲಿ ಭಜಿಸು ವಾಗ್ದೇವಿಯ |ಇಂದುಮತಿಕೊಡುವಳು ಶ್ರೀಹರಿಯ ಧ್ಯಾನದೊಳುಪಹಿಂದೆ ಪ್ರಹ್ಲಾದನು ಕಮಲಜನ ಸತಿಗೆರಗಿ |ಬಂದು ಆರಂಭಿಸಲುಹರಿವಿಶ್ವಮಯನೆಂದು ||ಬಂದವಿಪ್ಲವಕಳೆದು ಭಾವಶುದ್ಧಿಯನಿತ್ತು |ಹೊಂದಿಸಿದಳು ಶ್ರೀ ಹರಿಯ ಚರಣವನು || 1ಅಂದು ದಶಮುಖನನುಜ ವಂದಿಸದೆ ವಾಣಿಯನು |ಬಂದು ತಪವನು ಗೈಯೆ ಬಹುಕಾಲಕೆ ||ಅಂದದಿಂದ ಮೆಚ್ಚಿ ವರವಧಿಕ ಬೇಡೆನಲು |ಬಂದು ಜಿಹ್ವೆಯಲಿ ನಿದ್ರೆಯನು ಬೇಡಿಸಿದಳು 2ಅರಿತು ಭಜಿಸಲು ಬಿಡದೆ ಅಜನರಸಿಯ ನಿತ್ಯ|ಉರುತರವಾದ ವಾಕ್ ಶುದ್ಧಿಯನಿತ್ತು ||ನಿರುತ ಶ್ರೀಪುರಂದರವಿಠಲನ ಸೇವೆಯೊಳು |ಪರತತ್ತ್ವದ ಕಥಾಮೃತವನುಣಿಸಿದಳು 3
--------------
ಪುರಂದರದಾಸರು