ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ಹೊಂದಿದವನೀಗ ಎಂದಿಗೂ ಕೆಡನುಮರಳಿ ಹುಟ್ಟಿದರೇನು ಗುರುವು ಕಾಯುವನು ಪ ಗುರು ಹೇಳಿದಂತಿರದೆ ಗುರು ಆಜ್ಞೆಯಂತಿರದೆಬರಿಯ ಪ್ರಾಪಂಚದ ನಡೆಯನೆ ನಡೆದುಮರೆತೆಯಾದರೇನು ಗುರು ಕರುಣ ತಾನದುವೆನರಕಕ್ಕೆ ಕಳುಹದೋ ಯಮನ ಸೇರಿಸದೋ 1 ತನ್ನ ಅವಗುಣದಿ ಜನ್ಮಗಳ ಸೇರಿದರೇನುಅನ್ಯಕೆ ಎಳಸದದು ಸೋಂಕಿನಲಿ ಮನವುಚೆನ್ನಾಗಿಯೇ ಗುರುದ್ವಾರವನು ಕಾದಿಹನುಭಿನ್ನಿಸದೆ ಪರತತ್ವ ಬೋಧೆ ಹೇಳುವನು 2 ಭ್ರಷ್ಟತ್ವದಿಂ ತನ್ನ ಪಾಪವನು ಉಣುತಲಿಹುಟ್ಟುತಿಹ ಹಂದಿ ಪಶುವಾಗಿ ತಾನುಘಟ್ಯಾಗಿ ನರಜನ್ಮ ಧರಿಸುತ್ತ ಕಡೆಯಲಿಶಿಷ್ಟ ಚಿದಾನಂದ ಬಗಳೆಯನು ಕೂಡುವನು 3
--------------
ಚಿದಾನಂದ ಅವಧೂತರು
ಶ್ರವಣಮನನ ನಿಧಿ ಧ್ಯಾನವು ಯೋಗಕ್ಕೆಸಮನಿಸೆ ಸಾಧಕಂಗೇತಕೆ ಈ ಮೂರುಪನಿತ್ಯಗುರುಮುಖದಿಂದ ನಿಜವೇದಾಂತ ಸಾರವ-ನಿತ್ಯಕಾಲದಲ್ಲಿ ಕೇಳುತಲಿ ಇದ್ದುನಿತ್ಯಜೀವರಪರಮನಿಲುಗಡೆಗಳ ತಿಳಿದುಸತ್ಯತಾನೆಂದು ಕಂಡು ನಿಶ್ಚೈಸಿದುದೆ ಶ್ರವಣ1ವಾಸನೆಹರವಾಗಿ ಬಲಿದು ಆತ್ಮಾನಂದಕೆಸೂಸದೆ ಮನವನು ನಿಲ್ಲಿಸುತದೇಶಿಕೋತ್ತಮನಿಂದ ತನಗಾವ ಉಪದೇಶಬೇಸರಿಸದೆ ಮತ್ತೆ ಮತ್ತೆ ನೆನೆವುದೆ ಮನನ2ದಧಿಮಥನವ ಮಾಡೆನವನೀತತೇಲುವೊಲುಉದಧಿಮಥಿಸೆ ಅಮೃತ ತಾ ಬಂದಂತೆಮಥಿಸೆ ಕಾಷ್ಟಕ್ಕೆಕಾಷ್ಠಅಗ್ನಿ ತಾ ಪುಟಿದಂತೆವಿಧಿಸೆ ಈ ತೆರದಲಿ ತಾನದುವೆ ನಿಧಿಧ್ಯಾಸ3ಈ ಮೂರು ಸಾಧನಗಳಿರಬೇಕು ಯೋಗಕ್ಕೆಈ ಮೂರು ಸಾಧಿಸಲು ರಾಜಯೋಗಿ ತಾನುಇವರೊಳು ಒಂದು ಕಡಿಮೆಯಾದರು ಯೋಗಿಯಾಗನುಇಂತಿಲ್ಲದಿರೆ ನಿಜಮುಕ್ತಿ ದೊರಕದು4ಶ್ರವಣವೆಂಬುದು ಅದು ಸರ್ವಸಾಧನವಯ್ಯಶ್ರವಣ ಮನನವಾಗೆ ಶ್ರಮ ಪರಿಹಾರವುಶ್ರವಣ ಮನನ ನಿಧಿಧ್ಯಾಸ ಮೂರಾಗೆಶಿವನೆ ಆತನು ಚಿದಾನಂದ ದೇವನವನು5
--------------
ಚಿದಾನಂದ ಅವಧೂತರು