ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಹೊಳೆವುತದೆ ಸುಚಿನ್ಹಬೋಧ ತಂದಿ ಕಂಡೆವೇನೊ ಸದ್ಗುರು ಶ್ರೀಪಾದ ಧ್ರುವ ಪ್ರಾಣದೊಡಿಯ ಬಾವ್ಹಾಂಗನೇನೊ ಪೂರ್ಣಕ್ಷಣಕೊಮ್ಮಾಗುತದೆ ಸುಶಕುನ ಕಣ್ಹುಬ್ಬಾರುತದೆ ಬಲದೆನ್ನ ಚೆನ್ನಾಗ್ಯಾಗಮ್ಮ ತಾನೇನೊ ಸುಪ್ರಸನ್ನ 1 ತೋಳಭುಜಹಾರುತದೆ ಬಲುಬಹಳ ವ್ಯಾಳ್ಯಕೊದಗಿಬಂದೆನೇನೊ ದಯಾಳ ಸುಳವುದೋರುತದೆ ನಿಶ್ಚಳ ಸುಳಿದೊಮ್ಮೆ ಬಂದನೇನೊ ಕೃಪಾಳ 2 ಬುದ್ಧಿ ಮನಸಿಗಾಗುತದೆ ವಿಕಾಸ ಸಿದ್ಧಿಸೋರುವ್ಹಾಗಾದೆ ಪ್ರಕಾಶ ಸದ್ಯ ಹೃದಯವಾಗುತದೆ ಉಲ್ಹಾಸ ಸಾಧ್ಯವಾಗುವ್ಹಾಂಗ್ಹಾನೇನೊ ತಾ ಸರ್ವೇಶ 3 ಪ್ರೇಮ ಉಕ್ಕಿಬರುದೆನ್ನೊಳಗೆ ಸ್ವಾಮಿದರುಷಣಾದೀತೇನೊ ತಾ ಈಗ ರೋಮರೋಮವು ಬಿಡದೆ ಎನಗೆ ಬ್ರಹ್ಮಾನಂದ ಭಾಸುತದೇನೊ ಬ್ಯಾಗ 4 ಖೂನದೋರಿಬರುತದೆನಗೊಂದು ಭಾನುಕೋಟಿ ತೇಜ ತಾ ಬಾವ್ಹಾಂಗಿಂದು ದೀನ ಮಹಿಪತಿಗುರು ಕೃಪಾಸಿಂಧುಮನೋಹರ ಮಾಡುವ್ಹಾಂಗ್ಹಾನೆ ಬಂದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಂದೊದಗಿತು ಪುಣ್ಯಫಲವು ಮುಚುಕುಂದವರದ ವಾಸುದೇವಾರ್ಯರೊಲವು ಪಸಂಚಿತಾಗಾಮಿಪ್ರಾರಬ್ಧವೆಂಬ ಕಂಚುಕಿಯಾದ ಕರ್ಮದ ಬಹುಬದ್ದದಂಚುಗಾಣುವುದಾವ ಸಿದ್ಧ ಇದು ಕಿಂಚಿದಾದುದು ಗುರುಚರಣರೇಣಿಂದ 1ಏನು ಸುಕೃತವ ಮಾಡಿದೆನೊ ನಿನಗಾನತ ನಾನಾದ ಬಗೆಯು ತಾನೇನೊನೀನೆ ಕರುಣವಿತ್ತುದೇನೊ ನಾನು ಜ್ಞಾನವೆಂತೆಂಬ ಸ್ವರೂಪವನರಿಯೆನೊ 2ಪರಿಹರಿಸಿತು ಜನ್ಮ ಮರಣ ದುಃಖ ದುರವಣೆ ದಹಿಸಿತು ಲಕ್ಷ್ಮಿಯರಮಣತಿರುಪತಿ ವೆಂಕಟರಮಣ ನೀನೆ ಗುರು ವಾಸುದೇವರೂಪಿನಲಿತ್ತೆ ಕರುಣ3ಓಂ ನರನಾರಾಯಣಾತ್ಮಕಾಯ ನಮಃಕಂ||ಭೃಗುವಾರದರ್ಚನೆಯನಿದನಿಗಮಾಗಮವೇದ್ಯ ಗ್ರಹಿಸಿ ಸಿರಿ ಧರಣಿಯು ಸಹಭಗವಂತ ನಿನ್ನ ಭಕ್ತರೊಳಗಲದೆ ನಾನಿಹುದ ಮಾಡು ವೆಂಕಟರಮಣಾ
--------------
ತಿಮ್ಮಪ್ಪದಾಸರು