ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೈದಿಕ ಧರ್ಮಧ್ವಜ ಫಡಫಡಿಸಲ ಗಗನದೊಳೆತ್ತರದಿವೈದಿಕ ತತ್ವಜ್ಞಾನ ಪ್ರಕಾಶವು ಪಸರಿಸಲೀ ಜಗದಿ 1ಜ್ಞಾನ ಭಕ್ತಿ ವೈರಾಗ್ಯ ಧೈರ್ಯ ಔದಾರ್ಯ ತಪಶ್ಚರ್ಯದಿನ ದಿನ ಬೆಳೆಯಲಿ ದಾನಧರ್ಮಗಳು ದಯಾ ಸತ್ಯ ಶೌರ್ಯ 2ದುಷ್ಟ ಶತ್ರುಗಳ ಸದ್ದು ಅಡಗಲಿ ಜಗನಿರ್ಭಯ'ರಲಿಭ್ರಷ್ಟಾಚಾರವು ನಿರ್ಮೂಲಾಗಲಿ ಸತ್ಯಕ್ಕೆ ಜಯ'ರಲಿ 3ವರ್ಣಾಶ್ರಮಗಳ ಧರ್ಮದ ಮರ್ಮವು ತಿಳಿಯಲಿ ಜಗಕೆಲ್ಲಾಕರ್ಮಾ ಕರ್ಮ 'ಕರ್ಮ ಮರ್ಮವನು ಅರಿಯಲಿ ಜನರೆಲ್ಲಾ 4ಜಯ ಜಗದೀಶ್ವರರೆಂಬ ನಿನಾದವು ತುಂಬಲಿ ಜಗದಲ್ಲಿಜಯ ಭೂಪತಿ'ಠ್ಠಲ ಸರ್ವೋತ್ತಮ ಜಯಹರಿ ಎಂದೆನಲಿ 5
--------------
ಭೂಪತಿ ವಿಠಲರು
ಹರಿಮಣಿವರ್ಣ ವಿಠ್ಠಲಾ ನಿನ್ನವನೊ ಪರಮ ಪ್ರೀತಿಯಿಂದ ಪಾಲಿಸ ಬಾರಯ್ಯ ಪ ಪಂಕಜ ದಳ ಕೂಡಿತು ನೋಡು ಮುದರಿಕೊಂಡವು ಕುಮುದವೆಂಬೊ ಕಣ್ಣು ಪದುಮನಾಭನೆ ನಿನ್ನ ನಖವೆಂಬೊ ರವಿ ವದನವೆಂಬೊ ಚಂದ್ರÀಮಾ ಉದಿಸಲಿ 1 ಬಿರಿದಾಗಿ ಕಿವಿ ಎಂಬೊ ಮನೆ ಇಪ್ಪವು ಸ್ಪರಿಶ ಮಾಡುವೆನೆಂದು ಕಲಿ ಸುಳಿದಾ ಕರ್ಣ ಮಂದಿರವೆ ತುಂಬಲಿ ಕಲಿ ಅಡಗಿ ಪೋಪಾ 2 ನಾಸಾ ದುರ್ವಾಸನೆಗೆ ಇಚ್ಛೆ ಮಾಡಿತು ಹೇಸಿಗೆ ರಸಗಳಿಗೆ ಜಿವ್ವೆ ಪೋಗುದದು ಪೂಸಿದಾ ಗಂಧ ದಿವ್ಯವಾಸನೆ ಬರಲಿ ಲೇಸು ನಿನ್ನ ನಾಮರಸ ಸುರಿಸುವಂತೆ ಮಾಡು3 ನೀನಲ್ಲದೆ ತುಲಾ ಕಾವೇರಿಯೊಳಗೆ ಸ್ನಾನ ಜಪ ತಪಗಳು ಮಾಡುವದೇಕೆ ಸಿರಿ ಪ್ರಾಣರಿಗೆ ಪ್ರಾಣನಾದ ಬಲು ಮೋಹನಾ 4 ಈ ಕ್ರೋಧನಾಬ್ಧ್ದ ಆಶ್ವಿಜ ನಿನ್ನ ಪಕ್ಷದ ಏಕಾದಶಿ ರಾತ್ರಿಯೊಳು ಬಾ ಹೃದಯದೊಳಗೆ ಯಾಕೆ ಕೂಡದಯ್ಯ ಜೀಯಾ ಪೇಳೊ ಎನ್ನೊಡಿಯ ಲೋಕ ಚರಿಸುವದೇನು ನಿನ್ನ ಪೋಗಾಡಿ 5 ಧವಳಗಂಗಿಯೊಳಂದು ಬಿದ್ದು ಬಂದಾಗ ಕವಿ ವಾದಿರಾಜಗೊಲಿದು ಬರಲಿಲ್ಲವೇ ಅವರ ದಾಸಾನುದಾಸನು ಸತತ ನಾನು ತವಕದಿಂದಲಿ ಬಾರೊ ಭಕ್ತವತ್ಸಲಾ6 ಅರ್ಚಿಸಬಲ್ಲನೆ ದೇವ ನಿನ್ನನುದಿನಾ ಗಚ್ಚರಿತವಂದಲ್ಲವೆ ಮತ್ತಾವದರಿಯೆ ಅಚ್ಯುತದಾಸರ ಪ್ರೀಯ ವಿಜಯವಿಠ್ಠಲ ಬೆಚ್ಚಿಸಿದೋಪಾದಿಯಲ್ಲಿ ಪೊಂದಿ ಬಾರಯ್ಯ 7
--------------
ವಿಜಯದಾಸ