ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಷ್ಟು ಸುಸ್ವರ ಊದುತಿಹನಮ್ಮ ಶ್ರೀಕೃಷ್ಣ ಕೊಳಲನ ಪ ಎಷ್ಟು ಸುಸ್ವರ ಊದುತಿಹನೋ ಗೋಷ್ಠಿಯೊಳು ಗೋವುಗಳಕಿವಿಗಳು ನೆಟ್ಟನಿಲ್ಲಿಗೆ ಕೇಳಿ ಮೋದದಿ ಕಟ್ಟಿದೆಲೆ ಕಣ್ಣಿಗಳಹರಿವವೊಅ.ಪ ತರಣಿ ತನುಜನ ತೀರದಲ್ಲಿಹನೆ ಕೊರಳೊಳಗೆ ಕೌಸ್ತುಭಹರಳಿನಿಂದ ಜಗವ ಬೆಳಗುವನೆ ಕುರುಳು ಕುಣಿಸುತಬಾಲಬಿಂಬದಿಕರ್ಣಕುಂಡಲ ಗಂಡ ಸುಪ್ರಭ ಮರುಳು ಮಾಡುತಮೂರು ಲೋಕವಸಿರಿಯ ಮೋಹಿಪ ಪರಮ ಪುರುಷನು1 ನಗ ಮುರಿಗೆ ತೋಡೆ ಸುಹಾರಭೂಷಿತಉರದಿ ಕುಳಿತಿಹ ಸಿರಿಯ ಮೋಹಿಪ 2 ಅರಗೀಮನೆ ಬಾಂಧವರು ಬೇಕೆ ನಿಜ ಪತಿಗಳೆಮ್ಮನುಮೀರಿ ಪೋದರು ಅಂದರೆನಲೇಕೆ ಮಾರನಯ್ಯನ ಮುರಲಿಸುಸ್ವರಸಾರಿ ಮನಸಪಹಾರ ಮಾಡಿತು ನಾರಿ ಮಣಿಯರೆ ಕ್ಷಣವುತಡೆಯದೆವಾರಿಜಾಸನ ವನಕೆ ತೆರಳಿರೆ 3 ಎಷ್ಟು ಜನ್ಮದ ಪುಣ್ಯವಿರುತಿಹದೆ ಈ ಮುರಲಿ ಬಾಲನಪುಟ್ಟತುಟಿಯಲಿ ಸುಧೆಯ ಸುರಿಸುವದೇಸೃಷ್ಟಿರವ ಬಳ್ಳಿಮನದಲಿ ವೃಷ್ಟಿಹಿಡಿಸದೆ ಕುಸುಮಫಲಗಳುವೃಷ್ಟಿಯಿಂದಲೆ ಹೊರಗೆ ಚೆಲ್ಲುತ ಅಭೀಷ್ಠೆ ಸುರಿಸುತಪೇಳುತಿಹವೊ 4 ಅರುಣನಂದಧಿ ಅದರ ಸೌಭಗವೊ ವನ ನಿಲಯ ಮೃಗಗಳುತೊರೆದು ವೈರವ ಸುತ್ತು ನಿಂತಿಹವೋ ಹರುಷದಲೆ ಮನತೊರೆದು ನಿಲ್ಲಲು ಇಂದಿರೇಶನ ತರುಣಿಯರು ಪೋಗೋಣ ನಡೆಯಿರಿ 5
--------------
ಇಂದಿರೇಶರು
ಗಿರಿವರ ತನಯೆ ಮುರರಿಪು ಸಿರಿಯೆ ಪ ಶರಣು ಬಂದವರನ್ನು ಮರೆವುದು ಥರವೆ ಅ.ಪ. ತುಟಿಯಲಿ ಸೌಭಾಗ್ಯ ಹಣದಿ ಗೆಲಿಯೆ ಸದಾಪಠಿಸಿ ಭುಂಜಿಸಿದೆಯೇ 1 ಯಕ್ಷ ಪೋಗಲು ಅವಸಾಕ್ಷಿ ಬರಲು ಸಹಈಕ್ಷಿಸಿ ಹರಿಯ ಸ್ತುತಿಸಿ ಶಿಕ್ಷೆ ನೀಡಿದೆಯೇ 2 ಆ ಸುಮುಖಗೆ ಹರ ಭೂಷಿತ ಶ್ರುತಿ ಸ್ಮøತಿರಾಶಿ ಗ್ರಂಥವ ಪೇಳಿ ನೀ ಸುಖಿಸಿದೆಯೇ ಇಂದಿರೇಶನಸೊಸೆಯೇ 3
--------------
ಇಂದಿರೇಶರು