ಒಟ್ಟು 12 ಕಡೆಗಳಲ್ಲಿ , 12 ದಾಸರು , 12 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಜಯ ವಾಯು ಹನುಮಂತ ಜಯ ಭೀಮ ಬಲವಂತ ಪ ಜಯಪೂರ್ಣ ಮತಿವಂತ ಜಯ ಸಲಹೊ ಸಂತ ಅ.ಪ. ಅಂಜನೆಯಲಿ ಹುಟ್ಟಿ ಅಂದು ರಾಮನ ಸೇವೆನಂದದಿಂದಲಿ ಮಾಡಿ ಕಪಿ ಬಲವ ಕೂಡಿಸಿಂದು ಲಂಘಿಸಿ ಖಳರ ವನ ಭಂಗಿಸಿ ಸೀತೆ-ಗುಂಗುರವ ಕೊಟ್ಟೆ ಲಂಕಾಪುರವ ಸುಟ್ಟೆ 1 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಅರಿಬಲವ ಕುಟ್ಟಿಉರಗ ಬಂಧನದಿಂದ ಕಪಿವರರು ಮೈಮರೆಯೆಗಿರಿಯ ಸಂಜೀವನವ ತಂದು ಬದುಕಿಸಿದೆ 2 ದ್ವಾಪರಾಂತ್ಯದಿ ಪಾಂಡು ಭೂಪನಾತ್ಮಜನೆನಿಸಿಶ್ರೀ ಪಾರ್ಥಸಾರಥಿಯ ಭಜಕ ನೀನಾದೆಪಾಪಿ ಮಾಗಧ ಬಕ ಕೀಚಕ ಹಿಡಿಂಬಕರಕೋಪದಿಂದಲಿ ತರಿದೆ ಮೂಜ್ಜಗದಿ ಮೆರೆದೆ 3 ಧsÀುರದಲಿ ದುರ್ಯೋಧನನ ಬಲವನು ತರಿದೆಅರಿತು ದುಶ್ಶಾಸನನ ಒಡಲನ್ನು ಬಗೆದೆಉರವ ತಪ್ಪಿಸಿ ಕೌರವನ್ನ ತೊಡೆಗಳ ಮುರಿದೆಹರಿಯ ಕಿಂಕರ ಧುರಂಧರಗಾರು ಸರಿಯೆ ಕಲಿಯುಗದಲಿ ಕಳ್ಳರುದಿಸಿ ದುರ್ಮತಗಳನುಬಲಿಸಿ ಶ್ರೀಹರಿಯ ಗುಣಗಳನು ಮರೆಸಿಕಲಿಯನನುಸರಿಸಲು ಗುರುವಾಗಿ ಅವತರಿಸಿಖಳರ ದುರ್ಮತ ಮುರಿದೆ ಶ್ರೀಕೃಷ್ಣಪರನೆಂದೆ
--------------
ವ್ಯಾಸರಾಯರು
ನೀಲವರ್ಣ ಗೋಪಾಲನು ಎಲ್ಲೆ ಕಾಣಿರೇನೇ ವ್ರಜದ ಒಳಗೆ ಲೀಲಿ(ಲೆ ಇ?) ದೇನೆ ನಮ್ಮ ಸಂಗಡ ಹೇಳೇ ಗೋಪ್ಯಮ್ಮ 1 ಚಿಣ್ಣಿಕೋಲು ಚೆಂಡು ಬುಗುರಿ ವೇಣುಕೊಳಲಧ್ವನಿಯ ಆಲಿಸಿ ಓಣಿ ಓಣಿ ಹುಡುಕಲು ನಂದ- ಸೂನು ಎಲ್ಲಿಹನೆ 2 ಗೋಪಿ ಗೋಪಾಲ ಕೂಡಿ ಧಾಳಿ ಮಾಡ್ವುದು ದಾರಿಗೆ ತರವೆ ಗೂಳಿಮಾಡಿದಿ ಗೋಕುಲದೊಳು ನಿನ- ಗ್ಹೇಳುವುದಿನ್ನೇನೆ 3 ನವನೀತ ದಧಿ ಘೃತ ಸುರಿದೋಡಲು ನೀ ಸುಮ್ಮನೆ ಬಿಟ್ಟು ಯಾತಕೆ ಹಿಡಿತಾರದೆ ದೂರ್ಹೇಳುವಿ ಈ ಮಾತು ನಿರ್ಧಾರವೇನೆ 4 ಹೆತ್ತತಾಯಿ ನೀ ಬಳಲುವಿ ಎಂದು ಸಿಕ್ಕೊರಳಿಗೆ ಕಟ್ಟಿಸಿ ಕೊಂಡೆಳೆದು ಸಿಕ್ಕುವುದುಂಟೇನೆ 5 ವಜ್ರದ್ಹಾರ ಪದಕ ಹÉೂನ್ನರಳೆಲೆ ಗೆಜ್ಜೆ ಕಾಲಂದಿಗೆ ಝಳಿ ಝಳಿಸುತ ಮೂರ್ಜಗದೊಳು ಮುದ್ದಿರಲೀಕೂಸ್ಹೊರ- ಗ್ಹೆಜ್ಜೆನಿಡುವುದೇನೆ 6 ಶಿಶುವೇನೇ ಅಸುವ್ಹೀರಿ ಪೂತನಿ ಕೇಶಿ ಧೇನು ತೃಣಾವರ್ತ ಶಗಟಾಸುರ ಬಕನ ಕೊಂದವಗೆಂತು ನೀ ಅರ್ಭಕ- ನೆಂತಾಡುವಿಯೆ 7 ಹೆಡೆಯ ತುಳಿದ ಕಾಳಿಂಗನ ಮಡುವ ಕಲಕಿದ ಕಡುವಿಷಕಂಜದೆ ಹುಡುಗರ ಕಾರ್ಯವಿದೇನೆ ಬಿಡು ನಿನ್ನ ಬಡಿವಾರವು ಸಾಕೆ 8 ಕಾಡುಕಿಚ್ಚನು ನುಂಗಿದ ನಿನಸುತ ಬೇಡಿಯಜ್ಞದೊಳುಂಡನ್ನವನು ಸಾಲದೆ ಇಂದ್ರನ ಪುರವುಂಡ್ಹೊಟ್ಟೆ ಗಿ- ನ್ನೀಡೆಲ್ಲಿಹುದ್ಹೇಳೆ 9 ಶಕÀ್ರನ ಬಲಿ ಅನ್ನವ ದಕ್ಕಿಸಲವ ಸಿಟ್ಟಲಿ ಸಪ್ತದಿನ ಮಳೆಕರೆಯೆ ಎತ್ತಿ(ದ) ಗೋವರ್ಧನಗಿರಿ ನಮ್ಮದಾರಿ- ಚ್ಚೆಗೆ(?) ಸಲಹುವನೆ 10 ಕಾತ್ಯಾಯಿನಿ ವ್ರತಮಾಡೋ ಸ್ತ್ರೀಯರ ವಸ್ತ್ರಗಳನೆ ಕದ್ದು ಮರನೇರಿದ ಬತ್ತಲೆ ಚಪ್ಪಾಳಿಕ್ಕುತ ತಿರುಗಲಿನ್ನೆ- ಷ್ಟಂತ್ಹೇಳುವೋಣೆ 11 ಚೋರತನವೊಂದಲ್ಲದೆ ಕಲಿತಿಹ ಜಾರತನ ಕೇಳರಿಯೆ ಯಶೋದ ನೀರುತಿದ್ದುವ ಎಲ್ಲರ ಒಗತನಕಿವ ಪಾರುಗಾಂಬುವುದ್ಹ್ಯಾಗೆ 12 ಗಂಡರುಳ್ಳ ಗರತಿಯೇರೆನ್ನದೆ ಪುಂಡೆಬ್ಬಿಸಿ ಬೃಂದಾವನದೊಳಗೆ ಬಂದಮ್ಮನ ಹಿಂದಡಗಲು ನಿನಗೆ ಮುದ್ದಿನ್ಯಾರಿಗೆ ಹೇಳೆ 13 ಮಾಧವ ತಾ ಕೊಳಲೂದು- ತಿರೆ ನಾವು ಮೋಹಿತರಾಗಿ ಹೋದ ಸುದ್ದಿಗಳೊಂದ್ಹೇಳೆ ಲಜ್ಜೆ ಬಾ- ಹೋದೆ ನಮಗಿನ್ನು 14 ಬಳೆ ಬಾಪುರಿ ಕಂಕಣ ಚೂಡ್ಯ ಗಳನು ತೊಡೆಗÉೀರಿಸಿ ಕಾಲಂದಿಗೆ ಕರದಿ ಕಾಲುಂಗುರ ಕಿವಿಗಿಟ್ಟು ಬಾವುಲಿ ಪಾದದಿ ರಚಿಸಿದೆವೆ 15 ಹೊನ್ವಾಲೆ ಹೊಸಕೊಪ್ಪು ಮೂಗುತಿ ಚಿನ್ನದ ಒಡ್ಯಾಣದ ನಡುವಿಟ್ಟು ಕಣ್ಣಿಗೆ ಕಸ್ತೂರಿಬಟ್ಟು ಕುಂಕುಮ ಕಾಡಿಗೆ ನೊಸಲಿಗೆ ರಚಿಸಿ 16 ಬಿಟ್ಟಮಂದೆ ಕಟ್ಟದೆ ಕರುಗಳ ತೊಟ್ಟಿಲೊಳಗಿಟ್ಟು ಶಿಶುವಿಗೆ ಕಣ್ಣ ್ಹ(ಣ್ಣಿ ಹ?)ಚ್ಚಿ ನಾವೆಚ್ಚರಿಕಿಲ್ಲದೆ ಪೋದೆವೆ ಅಚ್ಚುತನಿದ್ದೆಡೆಗೆ 17 ಬಂದವರನೆ ಮನ್ನಿಸದೆ ನಿನಸುತ ಅ- ಲ್ಲಿಂದೊಬ್ಬಳ ಹೆಗಲೇರಿಸಿ ಪೋಗೆ ಹಿಂದಾಲ್ಪರಿದ್ವನವನಿತೆಯರ್ಕೂಡಿ ಬಂದೆವ್ಯಮುನೆ ದಡಕೆ18 ಇಬ್ಬರಿಬ್ಬರ ನಡುವೆ ನಿನಸುತ ಒಬ್ಬನಾಗಿ ಜಲದ ಒಳಗೆ ಅಬ್ಬರದಿಂದಾಡಲು ಜಲಕ್ರೀಡೆ ಕ- ಣ್ಗ ್ಹಬ್ಬವಾಗಿರೆ ಜನಕÉ 19 ಗೋಪಿ ಗೀತವಿದೆಂದು ನಿನಸುತ ಖ್ಯಾತಿ ಮಾಡಿದ ಜಗದ ಒಳಗೆ ಯಾತಕೆ ಕೂಸೆಂದಾಡುವೆ ತಿಳಿ ನಿನ್ನ ಪ್ರೀತಿ ಮೋಹಗಳೆಂದು 20 ಅಂಕದಲ್ಯಾರೋಪಿತನಾಗೆ ಶÀಂಕಿಲ್ಲದೆ ಹಾರ ಭಾರವನೆ ತಾಳಿದೆ ಬಿಂಕವ ಬಿಡು ಮಗನೆಂದಾಡುವುದು ಈ ಮಂಕು ಬುದ್ಧಿಗಳಿನ್ನು 21 ಮಗುವೇನೆ ಹೃದಯದೊಳ್ಹದಿನಾಲ್ಕು ಜಗವ ಕಂಡು ನೀ ತೆಗೆಯದೆ ನೇತ್ರ ಜಗಜಗಿಸುವ ಚಂದ್ರಮನಂಗೈಯಲಿ ಈ ಬಗೆ ನಿನಗರಿಕಿಲ್ಲೆ 22 ಗೋಪಾಂಗನೆಯರಾಡುವ ಮಾತು ಕೋಪದಿ ಕೇಳುತಲೆಶೋದೆ ಗೋಪಾಲಕೃಷ್ಣ ನಿನ್ನೆಲ್ಲಿ ಕಳುಹಲೆಂದಳು 23 ದುಷ್ಟ ಕಾಲನೇಮಿ ಕಂಸನು ನಿನ್ನ ಕರೆಯಕಳುಹಲು ಕರಕರೆಯಾಕೋ ನಾರಾಯಣ ನಿನ್ನಟ್ಟುವೆ(ವು) ಮಧುರೆಗೆ ನಾವೆಲ್ಲರು ಕೂಡಿ 24 ದುಷ್ಟತನವ ಬಿಡೋ ಭೀಮೇಶ- <ಈಔಓಖಿ s
--------------
ಹರಪನಹಳ್ಳಿಭೀಮವ್ವ
ಪ್ರಾಣಕ್ಕೆ ಕಡೆಗಾಲ ಬಂದಿತೋ ಶಿವ ಶಿವ ಇನ್ನೇನಿನ್ನೇನು ಬೋಣನ ಸಗದ್ದೆಯೊಳಿರುತಿದೆ ನಾಡಿನಲಿನ್ನೇನಿನ್ನೇನು ಪ ಬಂತು ಇನ್ನೇನಿನ್ನೇನು ಮನೆಯೊಳು ಸಿಕ್ಕಿದೆ ಜಾರಲಿ ಕಣಿಯಿಲ್ಲವಿನ್ನೇನಿನ್ನೇನು ದನ ಕರುಗಳ ನೊಂದ ನುಳಿಸದೆ ವೈದ್ಯರು ಇನ್ನೇನಿನ್ನೇನು ಜನರೆಲ್ಲ ಕೈಸೆರೆಯನು ಸಿಕ್ಕಿ ಹೋಯಿತು ಇನ್ನೇನಿನ್ನೇನು 1 ಅಂಗಳದೊಳು ಪಾದವಿಕ್ಕೀತು ಜನರಿಗೆ ಇನ್ನೇನಿನ್ನೇನು ಭಂಗಾರವ ತನ್ನಿರೆಂದು ಝಂಕಿಸಿದರು ಇನ್ನೇನಿನ್ನೇನು ಭಂಗಪಡುವ ಕಾಲಬಂತು ಮಾನವರಿಗೆ ಇನ್ನೇನಿನ್ನೇನು ಅಂಗನೆಯ ಹಿಡಿದೆಳೆದು ಸುಲಿದರು ಇನ್ನೇನಿನ್ನೇನು2 ಉಡಿಗೆ ತೊಡಿಗೆಯನ್ನು ಸೆಳೆದರು ಸತಿಯರ ಇನ್ನೇನಿನ್ನೇನು ಕಡಿದರು ಕೆಲರ ತೋಳ್ ತೊಡೆಗಳ ಶಿರಗಳ ಇನ್ನೇನಿನ್ನೇನು ಕಡಲಿಟ್ಟು ಹರಿದುದು ರಕ್ತ ಪ್ರವಾಹವು ಇನ್ನೇನಿನ್ನೇನು ಕಡುಪಿಂದೆ ಕಾಲ್‍ಕೈಗೆ ಮುರವಾಳವಿಕ್ಕಿದರಿನ್ನೇನಿನ್ನೇನು 3 ಸುಲಿದರು ಚಿನ್ನ ಚಿಗುರು ಬೆಳ್ಳಿ ವಸ್ತುವ ನಿನ್ನೇನಿನ್ನೇನು ಹೊಳಲಿಗೆ ಬೆಂಕಿಯ ನಿಕ್ಕಿದರಲ್ಲಲ್ಲಿ ಇನ್ನೇನಿನ್ನೇನು ಉಳಿದೆನು ಇನ್ನೇನಿನ್ನೇನು ಜಲಜಾಕ್ಷ ನಿನ್ನಯ ಕರುಣ ಕಟಾಕ್ಷದಲಿನ್ನೇನಿನ್ನೇನು 4 ಹಿಂದಂಬರೀಶ ಗಜೇಂದ್ರನ ಕಾಯ್ದಂತೆ ಇನ್ನೇನಿನ್ನೇನು ಇಂದಿನ ದುರಿತವ ಪರಿಹರಿಸಿದೆ ನೀನು ಇನ್ನೇನಿನ್ನೇನು ಬಂಧಿಸಿ ಹೊಡೆದ ಗೋಕುಲವನು ತಂದಿತ್ತೆ ಇನ್ನೇನಿನ್ನೇನು ಮಂದ ಮಾರುತ ನಣುಗನ ಕೋಣೆ ಲಕ್ಷ್ಮೀಶ ಇನ್ನೇನಿನ್ನೇನು 5
--------------
ಕವಿ ಪರಮದೇವದಾಸರು
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬರುತಲಿಹರು ನೋಡಿ ಗುರುವರೇಣ್ಯ ಸುಖತೀರ್ಥ ಯತಿವರರು ಪ ಹರಿದು ಬರುವ ಸುರನದಿಯ ಪ್ರವಾಹದ ತೆರದಲಿ ಪರಿಪರಿ ಪರಿವಾರ ಸಹಿತ ಅ.ಪ ಕರದಲಿ ಪಿಡಿದಿಹ ದಂಡ ಕಮಂಡಲ ಕೊರಳೊಳು ತುಳಸಿಯ ಚಿಗುರಿನ ಮಾಲೆಯು ಅರಿವಾರಿಜ ಲಾಂಛನಗಳಿಂದೊಪ್ಪುವ ವರ ದ್ವಾದಶ ನಾಮಗಳನು ಧರಿಸುತ 1 ಯತಿಗಳು ಗೃಹಿಗಳು ಬ್ರಹ್ಮಚಾರಿಗಳು ಶತಶತ ಸಂಖ್ಯೆಗಳಲಿ ಸೇರಿಹರು ಅತಿ ಸಂಭ್ರಮದಲಿ ನೋಡಲು ಪುರುಷ ರತುನವು ಮಾರ್ಗದ ಖತಿಪರಿಹರಿಸುತ 2 ಅವನಿಸುರರು ಮುಂಬದಿಯಲಿ ತಮ್ಮಯ ಕವಿತೆಗಳಲಿ ಗೋವಿಂದನ ಗುಣಗಳ ನವ ನವ ಸ್ವರದಲಿ ಪಾಡುತ ಕುಣಿಯಲು ಶ್ರವಣ ನಯನಕಾನಂದವ ಬೀರುತ 3 ತ್ವರೆಯಲಿ ಸರಿದು ತಾ ಬರುತಿರೆ ಯುವ ಕೇ- ಸರಿಯ ಧಿಕ್ಕರಿಸುವ ಸಂಭ್ರಮ ಗಮನ ಚರಣಯುಗಳ ಕಾಂತಿಯ ಪಸರಿಸುತಲಿ ಧರಣಿಯ ಪಾವನ ಮಾಡುವ ಬಗೆಯಲಿ 4 ಏನಿರಬಹುದೆಂದು ನೋಡುವರಿಗೆ ಕಾಣಿಸುವುದು ತೇಜದ ಪುಂಜ ಭೂನಿಲಯವ ಬೆಳಗಲು ಅತಿ ನೂತನ ಭಾನು ಉದಯಿಸಿದ ತೆರದಲಿ ಪೊಳೆಯುತ 5 ಪದುಮರಾಗ ಕಾಂತಿಯ ಮೀರಿದ ನಖ ಕೂರ್ಮ ಪ್ರಪದಗಳು ವಿಧಿಭವಮುಖ ಸುರಸೇವಿತ ಜಂಘವು ಮದಗಜ ಕರವನು ಪೋಲುವ ತೊಡೆಗಳು 6 ಪುಷ್ಪ ನಿತಂಬಗಳಲಿ ಪೊಳೆಯುತಲಿಹ ರೇಷ್ಮೆಯ ವಸ್ತ್ರವ ಧರಿಸಿಹರು ಕುಕ್ಷಿಲಲಾಟ ಶಿರೋಧರಗಳಲತಿ ಶ್ರೇಷ್ಠದ ತ್ರಿವಳಿಗಳಿಂದ ರಾಜಿಸುತ7 ಕೆಚ್ಚಿನ ವಕ್ಷಸ್ಥಳವತಿ ಸುಂದರ ಉಚ್ಚ ಪೀವರದ ಸ್ಕಂಧಯುಗಳವು ಸ್ವಚ್ಛದ ಕೆಂಬಣ್ಣದ ಕರತಲದಲಿ ಬಿಚ್ಚಿ ಹಾರುತಿಹ ಧ್ವಜಲಾಂಛನದಿ 8 ಚಂದಿರ ಬಿಂಬವಿದೋ ಪ್ರೇಕ್ಷಕರಾ ನಂದತರಂಗವ ಉಕ್ಕಿಸುತಿಹುದು ಒಂದು ಕಳಂಕವು ಕಾಣದಿರುವ ಅತಿ ಸುಂದರ ಪುರುಷವರೇಣ್ಯರು ಸೊಗಸಿಲಿ 9 ಸುಂದರ ಮಂದಸ್ಮಿತದಿಂ ಶೋಭಿಪ ಕುಸುಮ ತೆರದಲಿ ದಂತಗಳು ಮಂದಿಗಳಿಗೆ ಬಲು ಹರುಷವಿತ್ತು ಅರ ವಿಂದ ನಯನ ಆನಂದತೀರ್ಥ ಮುನಿ 10 ಕಿವಿಯಲಿ ಪೊಳೆಯುವ ತುಳಸಿಯದಳಗಳು ಅವಿರಳ ತೇಜದಿ ಹೊಳೆಯುವ ಕಪೋಲ ಭುವನತ್ರಯಗಳಭೀಷ್ಟವ ನೀಡುವ ಸುವಿಮಲ ಸುಂದರ ಭ್ರಕುಟಿ ವಿಲಾಸದಿ 11 ಅಕಲಂಕ ಶರೀರರು ಬರುತಿಹುದನು ಸಕಲ ಕಲಾಕುಶಲರು ನೋಡಿ ಶಕುತಿಗೆ ಮೀರಿದ ಮಾದರಿಯೆಂದರು ಪ್ರಕೃತಿ ಮಧುರ ಸರ್ವಾಂಗ ಸುಂದರರು 12 ಕಾಂತಿ ಸುಧೆಯ ಪಾನವ ಮಾಡಿರಿ ಸುಖ ಶಾಂತಿ ನಿಲಯರಾಶ್ರಯದಲಿ ಬಾಳಿರಿ ಚಿಂತೆ ಸಂತಾಪಗಳೆಲ್ಲವ ತೊಳೆಯಿರಿ ಸಂತತ ಹರಿದಾಸ್ಯದಲಿ ಪ್ರಸನ್ನರು 13
--------------
ವಿದ್ಯಾಪ್ರಸನ್ನತೀರ್ಥರು
ಮಂಗಳಂ ಶ್ರೀರಂಗಗ ಮಂಗಳಂ ಇಂಗಿತ ಭಕ್ತರ ಅಂಗಸಂಗಾದವಗ ಪ ಸಿರಿತಳಕ ಮಂಗಳ ಕಾಲಿಯ ವರದನಾ ವರನಖಮಂಗಳ ಗಂಗೆ ಪಡಿದನಾ ಚರಣ ಕಮಂಗಳ ಅಹಿಲ್ಯ ಉದ್ಧಾರಗ ನೆರೆಜಂಘಗೆ ಮಂಗಳೆ ಶೊದಾನಂದನಾ 1 ತೊಡೆಗಳಿಗೆ ಮಂಗಳ ಗರುಡ ವಾಹನನಾ ನಡುವಿಗೆ ಮಂಗಳ ಧೃವ ಗೊಲಿದನ ಒಡಲ ಕಮಂಗಳ ಜಗವಳ ಕೊಂಬನಾ ಧೃಡ ನಾಭಿಗೆ ಮಂಗಳ ಬ್ರಹ್ಮ ಪಿತನಾ 2 ಉರ ಸಕ ಮಂಗಳ ಉಪಮನ್ಯು ಪ್ರೀಯನಾ ಸಿರಿವಕ್ಷಕ ಮಂಗಳ ಭೃಗು ರಕ್ಷನಾ ಕರಗಳಿಗೆ ಮಂಗಳ ಕರಿರಾಜ ವರದನಾ ಕೊರಳಿಗೆ ಮಂಗಳ ತುಳಸಿ ಧರನಾ 3 ಇದು ಶೃತಿಗೆ ಮಂಗಳ ಹನುಮನೇ ಕಾಂತನಾ ವದನಕ ಮಂಗಳ ವಿದುರ ಗೊಲಿದನಾ ಅದೇ ಫ್ರಾಣಕೆ ಮಂಗಳ ಪ್ರಲ್ಹಾದ ವತ್ಸಲನಾ ಮದನ ಮೋಹನನಾ 4 ಸಿರಸಕ ಮಂಗಳ ಫಣಿರಾಜಶಯನನಾ ದೊರೆತನಕ ಮಂಗಳ ಶ್ರೀ ಭೂರಮಣನಾ ಗುರುತನಕ ಮಂಗಳ ಉದ್ಬವತಾರಕನಾ ಕರುಣಿಗೆ ಮಂಗಳಾರ್ಜುನ ಬೋಧನಾ 5 ಪ್ರಭುಗೆ ಮಂಗಳ ಬಲಿ ವಿಭೀಷಣರ ಸ್ಥಾಪನಾ ಅಭಯಕ ಮಂಗಳಾಜಮೀಳ ಪಾಲನಾ ಅಭಿಮಾನಿಗೆ ಮಂಗಳಾ ಪಾಂಚಾಲಿಕಾಯಿದನಾ ಪ್ರಭೆಗೆ ಮಂಗಳಾ ರವಿ ಸೋಮಾತ್ಮಕನಾ 6 ಸಿರಿನಾಮಕ ಮಂಗಳ ನಾರದ ಪ್ರೀಯನಾ ಕ ಮಂಗಲ ಶಿವ ವಂದ್ಯನಾ ಗುರುವರ ಮಹಿಪತಿ ನಂದನಸಾರಥಿ ಬಿರದಿಗೆ ಮಂಗಳಾಂಬರೀಷ ನೊಡಿಯನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಮಪದಸರಸೀರುಹಭೃಂಗರೋಮಕೋಟಿಲಿಂಗ ಅಸುರಮದಭಂಗ ಪ ಒಂದು ನಿಮಿಷಕೆ ಪೋಗಿ ಸಂಜೀವನವ ತಂದೆÀಂದುಗೊರಳನ ಭಜಕ ನಂದನನ ನೀ ಕೊಂದೆಇಂದ್ರಸೂನುವಿನ ಭಕುತಿಗೆ ರಥಾಗ್ರದಿ ನಿಂದೆಮಂದರಧರನ ಮುಂದೆ ಸುರ-ವೃಂದವರಿಯೆ ಪುರವ ಹೋಮಗೈದು ಬಂದೆ 1 ಉರುಗದೆಯಿಂದ ಕೌರವನ ತೊಡೆಗಳ ತರಿದೆಧುರದಲ್ಲಿ ಮಾಗಧನ ಮರ್ಮಸ್ಥಳ ಮುರಿದೆದುರುಳ ದುಶ್ಶಾಸನನ ಕರುಳುಗಳನೆ ಹಿರಿದೆಕರವೆತ್ತಿ ಬಲವೆರಡ ಕರೆದೆಗುರು ಮಧ್ವಮುನಿಯಾಗಿ ಶಾಸ್ತ್ರ್ರಗಳನೊರೆದೆ 2 ಧರೆಯೊಳತ್ಯಧಿಕ ಸೋದೆಪುರನಿವಾಸಸಿರಿ ಹಯವದನನ ಪರಮಪ್ರಿಯ ದಾಸನೆರೆನಿನ್ನ ನಂಬಿರ್ದ ಭಕ್ತರಿಗೆ ಕೊಡು ಲೇಸಕರುಣವಾರಿಧಿ ಪುಣ್ಯವಾಸ ಜಗಕೆಗುರುವೆನಿಸಿ ಮೆರೆದೆ ಮುಖ್ಯಪ್ರಾಣೇಶ 3
--------------
ವಾದಿರಾಜ
ವಾಯುದೇವರ ಸ್ತೋತ್ರ ಕೇಳಿರೀತನ ಗಾಥ ಚರಿತೆಯ ಚಲ್ವ ಜಾಲಿಕಾಪುರದಿದ್ದ ಧೊರೆಯಾ ಪ ಕಾಳಾಹಿ ವೇಣಿಯಳು ದ್ರುಪದಜೆಶಾಲೆ ಸೆಳಿಯುತ ಖೂಳ ಸಭೆಯೊಳುಗೋಳಿಸಿದ ದುರ್ಯೋಧನನ ಕುಲಹಾಳು ಮಾಡಿದ ಬಹಳ ಬಗೆಯಲಿಅ.ಪ ಕಟಕೆಲ್ಲ ಕುರುಕ್ಷೇತ್ರದಲ್ಲೀ ಬಹುಳ-ದ್ಧಟಿತವಾಗಿ ನೆರದಿತಲ್ಲೀಕುಟಿಲ ದುಶ್ಶಾಸಿದ್ದನಲ್ಲೀ ಭೀಮಾ-ರ್ಭಟಿಸುತಲವನ ಕಾಣುತಲಿಕಟಕಟನೆ ಪಲ್ಗಡಿದು ಅಸುರನ ಪಟಪಟನೆ ಕರುಳನ್ನು ಹರಿಯುತಪುಟಿ ಪುಟಿದ ಹಾರುತಲಿ ರಣದೊಳು ಛಟ ಛಟಾ ಛಟಿಲೆಂದು ಸೀಳಿದ 1 ಗಡಬಡಿಸುತ ಭೀಮನಾಗೇ ಎದ್ದು ನಡೆದನು ತುಡುಗರ ಬಳಿಗೇ ತಡ ಮಾಡದಲೆ ಬಹು ಬ್ಯಾಗೆ ದೊಡ್ಡಗಿಡ ಕಿತ್ತಿ ಪಿಡಿದ ಕೈಯೊಳಗೇಘುಡು ಘುಡಿಸಿ ರೋಷದಲಿ ಅಸುರರಬಡಿ ಬಡಿದು ಮಕುಟವನೆ ಕಿತ್ತುತ ಕಡಿ ಕಡಿದು ರಥಗಳನೆ ತರಿವುತಧಡ ಧಡಾ ಧಡಲೆಂದು ಕೆಡಹಿ 2 ಪೂಶರ ಜನಕ ತಾನೊಲಿದು ಉಪ-ದೇಶ ಕೊಟ್ಟನು ಭೀಮಗೊಂದುದ್ವೇಷಿ ದುರ್ಯೋಧನನ ಹಿಡಿದು ತೊಡೆ ನಾಶ ಮಾಡಲೊ ಎಂದು ನುಡಿದುರೋಷದಲಿ ಬೊಬ್ಬಿರಿದು ಅವನಾ-ಕಾಶಕೊಗೆಯುತ ಭಾಪುರೇ ಗದೆಬೀಸಿ ಬಡಿಯುತ ಕಡಿದೆ ತೊಡೆಗಳಕೇಶವ ವಿಠಲೇಶನಾಜ್ಞದಿ 3
--------------
ಕೇಶವವಿಠ್ಠಲರು
ಶ್ರೀರಂಗವಿಠಲನ ಶ್ರೀ ಮಕುಟಕೆ ಶರಣು ಪ ಶಿರದಲ್ಲೊಪ್ಪುವ ನೀಲಕುಂತಳಕೆ ಶರಣುಸಿರಿಸಹೋದರನರ್ಧದವಳಿಗೆ ಶರಣು ಅ.ಪ. ಕುಸುಮ ಸಮನಾಸಿಕಕೆ ಶರಣುಗುಂಪುರತ್ನದ ಕರ್ಣಕುಂಡಲಗಳಿಗೆ ಶರಣುಇಂಪುದರ್ಪಣನಿಭ ಕಪೋಲಗಳಿಗೆ ಶರಣು 1 ಕುಂದಕುಟ್ಮಲ ಪೋಲ್ವ ದಂತಪಂಕ್ತಿಗೆ ಶರಣುಅಂದವಾಗಿರುವ ಬಿಂಬೋಷ್ಠಕೆ ಶರಣುಚಂದ್ರಿಕಾನಿಭ ಮುದ್ದುಮಂದಹಾಸಕೆ ಶರಣುನಂದಗೋಪನ ಮುದ್ದು ಕಂದನಿಗೆ ಶರಣು2 ಕಂಬು ಕಂಠಕೆ ಶರಣುಅಬ್ಜಮುಖಿಯಿರುವ ವಕ್ಷಸ್ಥಳಕೆ ಶರಣುಕುಬ್ಜೆಯನು ಡೊಂಕ ತಿದ್ದಿದ ಭುಜಗಳಿಗೆ ಶರಣುಅಬ್ಜಜಾಸನನ ಪೆತ್ತ ನಾಭಿಗೆ ಶರಣು3 ರನ್ನಗಂಟೆಗಳಿರುವ ನಿನ್ನ ಕಟಿಗೆ ಶರಣುಪೊನ್ನ ಕದಳೀಪೋಲ್ವ ತೊಡೆಗಳಿಗೆ ಶರಣುಪುನ್ನಾಗಕರಗೆತ್ತ ದ್ವಯನಿತಂಬಕೆ ಶರಣುಚೆನ್ನಾಗಿ ಕುಣಿವ ಸಮಜಾನುವಿಗೆ ಶರಣು 4 ಮಂಗಳ ವೈಭೋಗಂಗಳ ಅಂಘ್ರಿದ್ವಯಕೆ ಶರಣುತುಂಗ ಕುಚಗಳ ಪಿಡಿದ ಕರಗಳಿಗೆ ಶರಣುಪೊಂಗೊಳಲನೂದುವಾ ಅಂಗುಲಿಗಳಿಗೆ ಶರಣು ರಂಗವಿಠಲನ ಸರ್ವಾಂಗಕೆ ಶರಣು 5
--------------
ಶ್ರೀಪಾದರಾಜರು
ಹರಿಯೆನ್ನ ನರಜನ್ಮ ವ್ಯರ್ಥವಾಯ್ತು ಪರಮ ಭಕ್ತಿಯೊಳಿನ್ನು ಭಜಿಸುವೆನು ಕಾಯೋ ಪ ತೊಡೆಯ ಮೇಲಾಡುತಿಹ ಶಿಶುವಿನಾನುಡಿ ಕೇಳಿ ಕಡು ಮೂರ್ಖತನದಿಂದ ಭ್ರಮೆಗೊಂಡೆನೋ ಸಡಗರದಿ ಕಿವಿಗೊಟ್ಟು ಕಿಂಕಿಣಿಯ ದ್ವನಿಗಳನು ಎಡಬಿಡದೆ ಕೇಳುತಿಹ ಹರಿಣನಂತಾದೇ 1 ತೊಡೆಗÀುಹ್ಯ ಕುಚಗಳಿಗೆ ಅನುದಿನವು ನಲಿಯುತ್ತ ಮಡದಿಯರ ಅಂಗ ಸಂಗದ ನಂಬುತಾ ಒಡಲ ಶಾಂತಿಯಗೊಳಿಸೆ ಬಡಿಗೋಲು ಕೆಡಹಿಕೊಂ ದಡಗುತಿಹ ಮೂಷಕನ ತೆರದಲ್ಲಿ ಕಳೆದೇ 2 ನಿರುತದಿಂ ಪರಸತಿಯ ಲಾವಣ್ಯವನು ನೋಡಿ ಚರಿಸಿತೆನ್ನಯ ಮನವು ಅವಳ ಕೂಟಕ್ಕೇ ಉರಿವ ದೀಪವ ಕಂಡು ಕನಕ ಮಣಿಯೇಯೆಂದ ಎರಗುತಿಹ ಹುಳದಂತೆ ಹಾಳಾದೆ ಬರಿದೇ 3 ಜರಿದು ನಿಜವೃತ್ತಿಯನು ಪರದಾಸ್ಯದಲಿ ಮುಳುಗಿ ಪೊರದೆ ಹೊಟ್ಟೆಯನಾ ಪರಾನ್ನ ಭಕ್ಷದಲೀ ಹರುಷದಿಂ ಬಲೆಯತುದಿ ಮಾಂಸಕ್ಕೆ ಮೆಚ್ಚಿದಾ ಮರುಳಾ ಮೀನಿನ ಗತಿಯು ಯನಗಾಯ್ತು ನಿಜದೀ4 ನಾರಿಯರ ಜಾಲಕ್ಕೆ ಪ್ರತಿದಿನವು ಸಿಲುಕುತ್ತ ಮಾರಿಯರ ಸಾಕಿ ನಾ ಫಲವ ತಿಂದೆ ಭ್ರಮರ ಸಂಪಿಗೆಯಸಳ ಸಾರಿ ಕೊಡಲೆ ಮೃತ್ಯುವಶವಾಗುವಂತೇ 5 ಮೂರಾರು ಶತ್ರುಗಳು ತರಿದೆನ್ನ ಮನವನ್ನು ಗಾರು ಮಾಡುತಲಿಹವು ತಿಳಿಯದಾ ಹರಿಯೇ ನರಸಿಂಹನೇ ಐದು ಇಂದ್ರಿಯವ ಗೆಲಲಾರೆ ಭೂರಿ ಭಕ್ತಿಯೊಳೆರಗಿ ಮರೆಹೊಕ್ಕೆ ಕಾಯೋ 6 ಪನ್ನಗಶಯನ ಶ್ರೀ ವೇಣುಗೋಪಾಲನೆ ಚನ್ನಿಗಕೇಶವನೇ ದೂರ್ವೇಶನೇ ನಿಂನನಾ ಬಿಡಲಾರೆ ಮಾರಮಣ ಪೊರೆಯಂನ ಯೋನಿ ಜನ್ಮಕೆ ಮುಂದೆ ಬರದಂತೆ ಮಾಡೋ 7
--------------
ಕರ್ಕಿ ಕೇಶವದಾಸ
ಆ ರಣಾಗ್ರದಿ ಭೀಮಗಡ್ಡಯಿಪರಾರು? |ವಾರಿಧಿಮೇರೆದಪ್ಪಲು ನಿಲ್ಲಿಸುವವರಾರು?ಪನಾನಾ ದೇಶದ ಭೂನಾಯಕರಿದ್ದರಲ್ಲವೆತಾನು ದುಶ್ಯಾಸನನ ತತ್ತರಿವಾಗ ||ಮೌನಗೊಂಡರಲ್ಲದೆ ಮುಂಕೊಂಡು ಬಿಡಿಸಿದರೆಆನೆಯ ಕೈಯ ಕಬ್ಬಿಗೆ ಅಂಗಯಿಸುವರಾರು? 1ಘುಡುಘುಡಿಸುತ ರಾಯ ಕುರುಪತಿಯನು ಕೆಡಹಿತೊಡೆಗಳನು ಗದೆಯಿಂದ ತುಂಡಿಸುವಾಗ ||ಕಡುಕೋಪದವ ಹಲಧರನೇನ ಮಾಡಿದ?ಬಡವನ ಕೋಪ ದವಡೆಗೆ ಮೃತ್ಯುವಲ್ಲವೆ? 2ಸಂದಿಗೆ ಸಾವಿರ ಸಿಂಹಸತ್ತ್ವದ ಕೀಚಕನಕೊಂದು ಬಿಸುಡುವಾಗ ಮುಂಕೊಂಡರುಂಟೆ? ||ಚೆಂದದಿಪುರಂದರವಿಠಲದಾಸರು ಮನದಂದಕೆ ಬಂದಂತೆ ನಡೆದುದೆಮಾರ್ಗ3
--------------
ಪುರಂದರದಾಸರು