ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸಿವುದು ರಘುನಂದನನ ಪ ನಿರುತದಿ ಬೆಳಗಿನೊಳೆದ್ದು ಭಕುತಿಯಲಿ ಅ.ಪ. ಜನಪತಿ ದಶರಥನುದರದಿ ಜನಿಸಿದವನಿತೆ ಅಹಲ್ಯೆಯ ತಾನುದ್ಧರಿಸಿದಘನ ಶಂಕರ ಧನುವ ಭಂಗಿಸಿದಜನಕ ಸುತೆಯ ವರಿಸಿದ ಶ್ರೀರಾಮನ 1 ತಾಯಿ ಕೈಕೇಯಿಯ ಮಾತು ನಡೆಸಿದನೋಯದೆ ವನವನು ಸತಿಸಹ ಸೇರಿದಮಾಯಾಮೃಗದಾಶೆಗೆ ಸತಿಯನಗಲಿದರಾಯ ಲಕ್ಷ್ಮಣನಣ್ಣ ಶ್ರೀರಾಮನ 2 ದಂಡಕದೊಳು ಸತಿಯನು ಶೋಧಿಸಿದಚಂಡ ಹನುಮಗೆ ತಾ ದೊರೆಯಾದಪುಂಡ ಜಲಧಿಯ ದಾಟಿಸಿದಹೆಂಡತಿ ಇರವನು ತಿಳಿದ ಶ್ರೀರಾಮನ 3 ಜಲಧಿಗೆ ಸೇತುವೆ ನಿಂತು ಬಿಗಿಸಿದಖಲ ರಾವಣನ ರಣದೊಳು ಕೆಡಹಿದಒಲಿದು ವಿಭೀಷಣನನು ತಾ ಪೊರೆದನೆಲದೊಳು ಸುಖ ಬೀರಿದ ಶ್ರೀರಾಮನ 4 ಧರುಮವ ನೆಲಸಲು ದುಷ್ಟರ ತರಿದಾ ಧರೆಯೊಳು ಶಿಷ್ಟರ ಪೊರೆಯಲು ಬಯಸಿದಸಿರಿಪತಿ ಗದುಗಿನ ವೀರನಾರಾಯಣನರನಾಗವತರಿಸಿದ ಶ್ರೀ ರಾಮ 5
--------------
ವೀರನಾರಾಯಣ