ರುದ್ರದೇವರು
ಇಂದು ಶೇಖರ ಶಿವ ನಂದಿವಾಹನ ಶೂಲಿ
ಸ್ಕಂಧಗಣಪರ ತಾತ ದಂದಶೂಕಕಲಾಪ
ಪುರಂದರ ಮುಖಸುರ
ವೃಂದವಿನುತ ಪಾದಾದಿಂದ ಶೋಭಿತ ದೇವ
ಕಂದು ಕಂಧರ ತ್ರಿಪುರ ಸಂದೋಹಹರ ಹರ
ವಂದಿಸಿ ಬೇಡುವೆ ಫಲ ಸಂದೇಹಮಾಡದಲಿತ್ತು
ನಂದ ನೀಡುವಿ ನೀನೆಂದು ನಿನ್ನಯ ಬಳಿಗೆ
ಇಂದು ಪೂರ್ತಿಸೋ ಗುರೋ
ಗಂಧವಾಹನ ತನಯಾ ಇಂದಿರಪತಿ ಗುರುಜಗನ್ನಾಥವಿಠಲಾ
ನಂದಾ ಬಡುವನಿದಕೆ ಸಂದೇಹ ಇನಿತಿಲ್ಲಾ