ಸಂಸಾರ ಚಿಂತೆ ನಮ್ಮ ಸ್ವಾಮಿ ಶ್ರೀ ಹರಿಗುಂಟು
ಸಂಸಾರಿ ಕೃಷ್ಣ ಕರುಣಿಸುವ ಇದರಿಟ್ಟು ಧ್ರುವ
ತುತ್ತಾಯತವ ಮಾಡಿ ಹೊತ್ತು ನಡೆಸುವ ಒಡಿಯ
ಮತ್ತೆ ಚಿಂತಿಸಲ್ಯಾಕೆ ಹತ್ತು ಕಡೆಯ
ಭಕ್ತವತ್ಸಲ ಸ್ವಾಮಿ ಚಿಂತ್ಯಾಕೆನ್ನೊಡಿಯ
ಗ್ರಾಸ ಭಕ್ತರೊಡಿಯ 1
ಅನೆ ಮೊದಲಿರುವೆ ಕಡೆ ತಾಂ ನಡೆಸುತಿರಲಿಕ್ಕೆ
ಜನಕೊಡ್ಡಿ ಕೈಯ ನಾ ದಣಿಯಲೇಕೆ
ಅನುದಿನ ಹರಿವಾಕ್ಯ ಅನುಭವಿಸುತಿರಲಿಕ್ಕೆ
ಅನುಮಾನವಿಡಿದು ನಾ ಹೆಣಗಲ್ಯಾಕೆ 2
ಭಾರ ವಹಿಸಿ ಕೊಂಡಿರಲು ಮಾರಪಿತ ಪರಿಪೂರ್ಣ
ಸಾರಾಂಶ ವಿತ್ತು ವರಕೃಪೆಯ ಙÁ್ಞನ
ಆರ್ಹಂಗವೆನಗ್ಯಾಕೆ ತೋರುತಿದೆ ನಿಧಾನ
ತರಳ ಮಹಿಪತಿ ಹೊರೆವ ಗುರು ಕರುಣ 3