ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವ ಪಾಶದಲಿ ನಾನು ಹರಿಯೆ ಕಿಲಿಕಿಲಿ ನಗುವರೆ ಸಲಹುವದು ದೊರೆಯೆ ಪ ಕೆಲರ ಮಾತಿಗೆ ಪೋಗಿ ಬಲವಾಗಿ ಅವರ ಕೆಲಸ ಮಾಡುವೆ ನಿಜ ಕೆಲಸವ ಮರೆದೆ ನಾ 1 ಧರಣಿಯ ಪತಿಯೇವೆ ಶರಣೆಂದು ತಿಳಿದು ಪಾದ ಸಿರಿಯ ರಮಣನೆ2 ಉದರಗೋಸುವಾಗಿ ಮರೆದವರ ವಶದಿ ಹದನವ ಕಳಕೊಂಡು ಮದಡ ನಾನಾದೆನೊ 3 ಉಣವೆನೊ ಪರರನ್ನ ದಣಿವೆನೊ ಅದಕ್ಕೆ ಕುಣಿವೆನೊ ಅವರಂತೆ ಗುಣವೇನು ಎನಗೆ 4 ಈಸು ಪರಿಯಲೆನ್ನ ಶ್ರೀಶ ದಾಸರ ವಶದಿ ವಾಸವಿತ್ತು ಬದುಕಿಸೊ ವಾಸುದೇವವಿಠಲ 5
--------------
ವ್ಯಾಸತತ್ವಜ್ಞದಾಸರು
ಎಂದಪ್ಪಿಕೊಂಬೆ - ರಂಗಯ್ಯ ನಿನ್ನ |ಎಂದಪ್ಪಿಕೊಂಬೆ........................... ಪಎಂದಪ್ಪಿಕೊಂಬೆ ನಾನೆಂದು ಮುದ್ದಾಡುವೆ |ಎಂದಿಗೆ ಸವಿಮಾತನಾಡಿ ನಾ ದಣಿವೆನೊ ಅ.ಪಅರಳೆಲೆಮಾಗಾಯಿ ಕೊರಳ ಪದಕ ಸರ |ತರಳರನೊಡಗೂಡಿ ಬೆಣ್ಣೆಯ ಮೆಲುವನ............... 1ಅಂದುಗೆಪಾಯ್ವಟ್ಟು ಗೆಜ್ಜೆ ಘಿಲುಘಿಲು ಕೆನೆ |ಚೆಂದದಿ ಕುಣಿವ ಮುಕುಂದನ ಚರಣವ................ 2ಹೊನ್ನಿನ ಉಡುದಾರ ರನ್ನದ ಚೌಕುಳಿ |ಚಿನ್ನದುಂಗುರವಿಟ್ಟಜಾಹ್ನವಿಜನಕನ.......................3ಅಪ್ಪಣ್ಣ ಭಾಗವತನ ರೂಪವು ತಾನಾಗಿ |ತುಪ್ಪದ ಬಿಂದಿಗೆ ತಂದ ವಿಠಲನ...................... 4ಪರಿಪರಿ ಭಕುತರ ಮರೆಯದೆ ಸಲಹುವ |ಪುರಂದರವಿಠಲನ ಸಿರಿಪಾದ ಪದುಮನ 5
--------------
ಪುರಂದರದಾಸರು