ಮಂದಾನ ಬಾಧೆಗೆ ಮನಿ ಮಂದಿ ನಾವು ಸಹಿತ
ಬೆಂದು ಬೇಸರ ಗೊಂಡು ಬಳಲು ತೇವು ಹರಿ
ತಂದಿ ಬೇಗದಿ ಬಂದು ದಯಮಾಡಿ ಸಲಹೋ
ಗೋವಿಂದಾ ಕೃಪಾಳು ಶ್ರೀ ಕರುಣಾಂಬುಧಿಯೆ ಪ
ಕೃಷ್ಣಾ ರೌದ್ರಾಂತಕನ ಕ್ರೂರದೃಷ್ಟಿ ಮುಖ ಹಲಾ
ತ್ಕøಷ್ಠವಾಗಿ ಎನ್ನ ಕಾಡುತಿರಲು
ನಿಷ್ಠೆ ನೇಮಗಳೆಲ್ಲ ಜರಿದು ಮತಿ ಭೃಷ್ಟನಾಗಿ
ಕಷ್ಟಕ್ಕೆ ಒಳಗಾದೆ ಕಡೆಹಾಯಿಸೊ ಧೊರಿಯೆ
ಇಷ್ಟದಾಯಕ ನಿನ್ನಲ್ಲಿನ ಮಾಯವೆ ಆಡುದು (ಅಹುದು)
ಕೃಷ್ಣಮೂರುತಿ ಬೇಗ ಕೈಹಿಡಿ ಇನ್ನಾ
ಸೃಷ್ಟಿಗೊಡೆಯ ಶ್ರೀನಿವಾಸಕೇಶವ ಎನ್ನ
ಕಷ್ಟವು ಪರಿಹರಿಸಿ ಕಾಯೋ ಸಂಪೂರ್ಣ 1
ಸೂರ್ಯಾನ ಪುತ್ರನ ಕಾರ್ಯಾವು ಎಮ್ಮ ಮೇಲೆ
ಭಾರಿ ಕಾಣುತಲಿದೆ ಪರಮಾತ್ಮನೆ -------
ಘಟಗಳಿಗುಪದ್ರಕಾರನಾಗಿ ವ್ಯಾಧಿ ಖಂಡಿಸೋ ವೇಳೆ
ಆರು ಈ ಗ್ರಹಕರ್ತರಾಗಿರಲು ದೇವರಿನ್ನು
ಧಾರುಣಿಯೊಳು ಹರಿ ದನುಜಾಂತಕಾ
ವಾರಿಜಾನಾಭಾ ಶ್ರೀ ವೈದೇಹಿ ಪತಿರಾಮಾ
ಸಾರನೆ ಗಡ ಬಂದು ಸಲಹೋ ತಂದೆ 2
ಗರ್ಭಾದಿ ಮುದನಿಂ ಸುಖಭ್ರೂಣ ಭಯವೆಂಬ
ದೆಬ್ಬಿಗೆ ತಾಳದೆ ತಲ್ಲಣಿಸುವೆ
ಅರ್ಭಕ ನಾನೊಂದು ಅರಿತು ಅರಿಯೆ ದೇವ
ಸಭ್ಯಾ ನೀ ನಂದ ಸರ್ವೋತ್ತುಮಾ
ನಿರ್ಭಯನನು ಮಾಡಿ ನೀನೆ ರಕ್ಷಿಸದಿರೆ
ದಾರು ಮನಸು----ಳಗೆ
ದರ್ಭಶಯನ ರಾಮನ-----'ಹೊನ್ನ ವಿಠ್ಠಲ’
ಸಾಕಾರ ನೀ ಎನ್ನ ತ್ವರದಿ ಪೊರೆಯೊ 3