ಒಟ್ಟು 1908 ಕಡೆಗಳಲ್ಲಿ , 102 ದಾಸರು , 1280 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನ್ಯವನರಿಯೆನು ಮತ್ತೆಂದು ಅನ್ಯವ ಅರಿಯೆನುನಿನ್ನ ಕಾಂಬೆ ಕಂಡದನೆಲ್ಲ ನಿರ್ವಿಕಾರ ಬಗಳೆ ಕೇಳು ಪ ತನ್ನ ಹೆಂಡತಿಯನೀಗ ತನ್ನ ಸುತನು ರಮಿಸುತಿರಲುಭಿನ್ನದಿಂದ ಕಂಡೆನಾದರೆ ಮೆಚ್ಚಬೇಡಎನ್ನಲಿ ಇಚ್ಚೆ ಬೇಡ ಹೊನ್ನುರನ್ನವು ಮುಂದೆ ಇರಲು ಹರಿದುದಾದರೆಎನ್ನ ಚಿತ್ತ ನಿನ್ನ ಮೇಲೆ ಎನಗೆ ಆಣೆ ಸತ್ಯ-ವೆನ್ನು ಇದು ತಪ್ಪದೆನ್ನು 1 ಪಡೆದ ತಾಯಿ ತಾನು ಹೋಗಿಕಂಡವನ ಕೂಡುತಿರಲುಮಿಡುಕು ಹುಟ್ಟಿತಾದರೆ ನಾನು ಸತ್ಯ ಬಿಟ್ಟೆ-ನಾದರೆ ನೀನು ದೊರೆವುದೆಂತು ನಿನ್ನ ಕರುಣವೆಂತು2 ತಂದೆ ಕೆಡಹಿ ಕೊರಳನೀಗ ನಂದನನನು ಕೊರೆಯುತಿರಲುಎಂದೆನಾದರೆ ಮನದಿ ಇವನ ಜ್ಞಾನಿಯಲ್ಲವು ನಾನು ಏನು ಅಲ್ಲವುಸುಂದರವ ಚಿದಾನಂದ ಬಗಳೆ ಎಂದು ಕಾಣದಿರಲುಎಂದು ಎಂದಿಗೆ ನಿನ್ನ ಚರಣ ಭಕ್ತನಲ್ಲವುನಾನು ಮುಕ್ತನಲ್ಲವು 3
--------------
ಚಿದಾನಂದ ಅವಧೂತರು
ಅರಿಯೆನೋ ನಿನ್ಮಾಯ | ಸದ್ವಪುಷ ಚಿನ್ಮಯ ಪ ಪತಿ ಪರಿ ಮಿಗಿಲು ಇಲ್ಲವೊಚೆಲ್ವ ಹಯವೇರುತ್ತ ಮ್ಲೇಂಛರ ಸದೆವವನೆ ಅ.ಪ. ಪರಿ | ಪಂಥಿ ಬಾಧಕಕಂತುಹರ ಸಖ ಸೃಷ್ಟಿಕರ್ತನೆ | ಪ್ರಾಂತಗಾಣದ ಶಿರಿಸ್ತವನ ಕೊಂದನೆ 1 ಅಮಿತ ಮಹಿಮೋಪೇತ್ ಶಿರಿಹರಿ |ಸುಮತಿ ಸುಜನಾಂಬೋಧಿ ಚಂದಿರ | ಪ್ರಮಿತ ಜಗ ಸತ್ಕರ್ತ ಪ್ರಾಣನೇ 2 ಹರಿಯೆ ನಿನ್ನಯ ರೂಪ | ನೋಡುವುದಕೆ ಇರುವುದವು ಅಪರೂಪ |ದೇವಾದಿ ವರ್ಣಿಸೆ | ಇರುತಿರುವೆ ಬಹುರೂಪ | ಆರು ಅರಿಯದ ರೂಪ ನೀರೊಳಿರುತಿಹೆ | ಭಾರಪೊತ್ತಿಹೆ | ಕೋರೆದಂತನೆ ನಾರಸಿಂಹನೇ ಪೋರ ವಟುವೆ | ವೀರರಾಮನೆ | ಕ್ರೂರ ಖಳಹನ ನಾರಿಯರ ವ್ರತವಳಿದು ತೇಜಿಯನೇರ್ದ ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಆವ ಭಯ ಎನಗಿಲ್ಲ | ದೇವ ನಿನ್ನಯ ಪಾದ ಸೇವೆ ಮಂತ್ರವು ಎನ್ನ | ಭಾವದೊಳಿರಲು ಪ ಸಾವಿಗಂಜುವನಲ್ಲ | ನೋವಿಗಂಜುವನಲ್ಲ ಜೀವಕೋಟಿಯನೆಲ್ಲ | ಕಾವನೀನಿರಲಾಗಿ ಅ.ಪ ವರದಾತ ನೀನಿರಲು | ನರಕ ಭಯ ಎನಗುಂಟೆ ಪರಮ ಪುರುಷಾರ್ಥಗಳ | ಕರವೆತ್ತಿ ಕೊಡುವ ಧರಣೀಶ ಮಾಂಗಿರಿಯ | ಸಿರಿರಂಗಪತಿ ನಿನ್ನ ಸ್ಮರಣೆ ವಂದನೆ ಎನ್ನ ಮನದೊಳಿರಲು1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇಂದು ನಾನು ಕರುಣಿಸೊ ಎನ್ನೊಡೆಯನೆ ಪ. ಕೌಸ್ತುಭ ಭೂಷಣಮೆಟ್ಟಿದ ನವರತ್ನದ್ಹಾವಿಗೆಇಟ್ಟ ಕಸ್ತೂರಿ ತಿಲಕವ 1 ಮಂದಹಾಸವು ದಂತಪಂಙÉ್ತಯುಉಂದದ ಕಡೆಗಣ್ಣ ನೋಟವುಅಂದವಾದ ಕುರುಳುಗೂದಲುಮುದ್ದು ಸುರಿವೋ ಮುಖವ ನಾ 2 ಮೊಲ್ಲೆ ಮಲ್ಲಿಗೆ ದಂಡೆ ಕೊರಳಲಿಚೆಲ್ವ ಕಂಕಣ ಕೈಯಲಿಗೊಲ್ಲಸತಿಯರ ಕುಚಗಳಲ್ಲಿ[ಅಲ್ಲಳಿ] ಮಾಡಿ ನಗುವನ3 ವೃಷ್ಟಿ ಕರೆಯಲು ಅ-ಸುರರೆಲ್ಲರು ಓಡಲುಕ್ರೂರ ಕಾಳಿಯ ಫಣಗಳಲ್ಲಿಧೀರ ಕುಣಿಕುಣಿದಾಡಿದ 4 ಎನ್ನ ಬಂಧನ ತರಿಸಿದನೆಎನ್ನ ಪಾಪವು ಓಡಿತುಅನ್ಯದೈವವ ಭಜಿಸಲ್ಯಾತಕೆಮನ್ನಿಸೊ ಹಯವದನನೆ5
--------------
ವಾದಿರಾಜ
ಇನ್ನಿವನು ಈಗ ಬರಲಿದಕೆ ಬಗೆಯೇನುಚೆನ್ನಾಗಿ ಪೇಳೆ ರಮಣಿ ಪ ಮನ್ನಿಸಿ ಮಮತೆಯಲಿ ಮನವ ಸೆಳಕೊಂಡೊಯ್ದುಅನ್ಯರನು ಕೂಡುವನೆ ಕೆಳದಿ ಅ.ಪ. ಬಣ್ಣದ ಗಿಣಿ ಬರೆದ ಸಣ್ಣ ಕುಪ್ಪಸವುಳ್ಳಚಿನ್ನದ ಶ್ರೀರೇಖೆ ಸೀರೆಬಿನ್ನಣವುಳ್ಳ ಬಿಳಿಯೆಲೆ ಅಡಿಕೆ ಕೆನೆಸುಣ್ಣಕರ್ಪೂರ ಕಾಚಿನುಂಡೆಕಣ್ಣಿಗಿಂಪಾದ ಕಡು ಚೆಲ್ವ ಮಲ್ಲಿಗೆ ಮೊಗ್ಗೆ ಉನ್ನತವಾದ ದಂಡೆಇನ್ನು ಈ ಪರಿಮಳವು ಬಗೆಬಗೆಯ ಆಭರಣರನ್ನ ಕೆತ್ತಿಸಿದ ಗೊಂಡೆಮುನ್ನ ಸಿಂಗರ ಮಾಡಿ ಎದೆಹಿಡಿದು ಬಿಗಿಯಪ್ಪಿನಿನ್ನ ಈ ವೇಳೆ ಕೂಡಿದೆ ದೃಢದೆ 1 ಈಗಾಗು ಬಾಹನೆಂತಿರುವೆ ತಾನೂರಿದ್ದಉಗುರು ಗುರುತನು ನೋಡುತಸೋಗೆಗಣ್ಣಿನ ಕಾಡಿಗೆಯ ಕಲಕಿದನೆಂದುಬೇಗ ನಟನೆಯ ಮಾಡುತರಾಗದಿಂದದಲಿ ರವಿಕೆ ನೆರಿಯನು ಬದಲುಟ್ಟುಭೋಗಕ್ಕೆ ಅನುವಾಗುತಹಿಂಗೆ ಸಿಂಗರಿಸಿಕೊಂಡಿಷ್ಟು ಹೊತ್ತನು ಕಳೆದೆಹೇಗೇ ಸೈರಿಪೆ ಕೂಡದೆ ಮುಂದೆ 2 ಇಂದಲ್ಲದಿರೆ ನಾಳೆ ಬಹನೆಂದು ಇದ್ದರೆಕಂದರ್ಪ ಕಾಡುತಿಹನೆತಂದು ತೋರಿಸು ತನ್ನ ತಂದೆಯನೆಂದು ಪೂ-ವಿಂದ ಬಾಣವ ಎಸೆವನೆಇಂದುಬಿಂಬವು ಮಂದ ಮಾರುತವು ಸುಮದ ಮಳೆ-ಯಿಂದ ಸೆಕೆಗಾನಾರೆನೆಒಂದು ನಿಮಿಷದಲಿ ಶ್ರೀರಂಗ ವಿಠ್ಠಲನನ್ನುಹೊಂದಿಸೆನ್ನಗಲದಂತೆ ಕಾಂತೆ 3
--------------
ಶ್ರೀಪಾದರಾಜರು
ಎಂಥಾ ದಯಾಕರನು ನೋಡೆ ಸದ್ಗುರುರಾಯಎಂಥಾ ದಯಾಕರನು ನೋಡೆ ಅಂತರಂಗದ ತಾಪವ ಹರಿಸಿ ಅಂತರಾತ್ಮನ ತೋರಿದ ಪ ಹಸಿವು ತೃಷೆ ಪರಿಹರಿಸಿ ನಾನಾಬಗೆವಿಷಯವೆಲ್ಲವ ತೊರೆಸಿಮುಸುಕ ನುಗಿದು ಮಾಯೆಯಪರಂಜ್ಯೋತಿಯ ಬೆಳಗಿಸಿದನು ನೋಡೆ 1 ಸಂಸಾರದ ಬಹು ದುಃಖವ ಹರಿಸಿಶಿಂಶುಮಾರ ಚಕ್ರವ ಹಂಸೋಹಂಸೋಹಮೆಂದೆನ್ನನೇರಿಸಿಸಂಶಯ ಹರಿಸಿದನೆ2 ನಿರುಪಮ ನೀನೆ ಎಂದು ನಿರ್ಗುಣಪರಮ ಪುರುಷನೆ ಬಂದುಗುರು ಚಿದಾನಂದ ಸಾಕ್ಷಾತ್ಕಾರ ನೀನೆಂದುಗುರು ನೀನೆ ನಿಜವೆಂದನೆ 3
--------------
ಚಿದಾನಂದ ಅವಧೂತರು
ಎನ್ನ ಗುರುವು ಬಂದನೆ ಏನಂತ ಅಂದನೆನಿನ್ನ ನೀನು ತಿಳಿದು ನೋಡೆನೀನೆ ನಾನು ಎಂದನೆ ಪ ಒತ್ತು ಮಡವನೆಂದನೆ ವಾಯು ಪೀಕೆಂದನೆಎತ್ತು ಸ್ವರವನೆಂದನೆ ಏರು ಮಾಳಿಗೆಂದನೆ 1 ಕೆರೆಯ ಮುಳುಗು ಎಂದನೆ ಕಾಣುಜ್ಯೋತಿ ಎಂದನೆಸುರಿವ ಸುಖವು ಎಂದನೆ ಸೂರೆ ಪ್ರಪಂಚೆಂದನೆ2 ಹಗರಣದಿಂದಂದನೆ ಹಮ್ಮಿನಿಂದಂದನೆಬಗೆಬಗೆಯಿಂ ಚಿದಾನಂದ ನೀನೇ ಬ್ರಹ್ಮ ಎಂದನೆ 3
--------------
ಚಿದಾನಂದ ಅವಧೂತರು
ಎಲ್ಲ್ಯಾಡಿಲ್ಲಿಗೆ ಬಂದನೆ ಈತನು ಕೌ- ಸಲ್ಯಾದೇವಿಯ ಕಂದನೆ ಎಲ್ಲ್ಯಾಡಿಲ್ಲಿಗೆ ಬಂದ ಚೆಲ್ವೆ ಕೌಸಲ್ಯೆ ಕಂದ ಫÀುಲ್ಲಲೋಚನೆ ಜಾನಕಿ ಲಕ್ಷ್ಮಣರನೆ ಕೂಡಿ ಪ ಸನಕಾದಿ ಸುರರ್ವಂದಿತ ಮಾಣಿಕ್ಯ ರತ್ನ ಪದಕ ಪಚ್ಛದಿ ಭೂಷಿತ ಜನಕ ಜಾನ್ಹವಿ ಜಾನಕಿ ರಾಮರಿಬ್ಬರು ವನಕೆ ಬಂದ್ವಾರಿಧಿ ಕಟ್ಟಿ ವಾನರನ ಕೂಡೆಲ್ಯಾಡಿಲ್ಲಿಗೆ ಬಂದನೆ 1 ನಾಸಿಕ ಭಂಗ ಮಾಡಿ ಮಾರೀಚನ್ವಧೆ ಮಂಡೋದರೀಪತಿ ಮರ್ದಕನಾಗಿದ್ದ ಬಂದಯೋಧ್ಯವನಾಳಿ ಭಕ್ತರ ಸಲಹೊ ದಾತ್ಯೆಲ್ಲ್ಯಾಡಿಲ್ಲಿಗೆ ಬಂದನೆ 2 ಬಿಲ್ಲುಪಿಡಿದು ನಿಂತನೆ ಭೀಮೇಶಕೃಷ್ಣ ಬಲ್ಲಿದ ಬಲವಂತನೆ ಕಲ್ಲ್ಹೆಣ್ಣು ಮಾಡಿದ ಕರುಣಕೃಪಾಳೋ ಕೈ- ವಲ್ಯದಾಯಕ ಸೀತಾವಲ್ಲಭೆಂದೆನಿಸುವೋನೆಲ್ಲಾಡಿಲ್ಲಿಗೆ ಬಂದನೆ 3
--------------
ಹರಪನಹಳ್ಳಿಭೀಮವ್ವ
ಗೆಲಿಯಬಲ್ಲವರಾರು ಮೂಜಗದಿ ಪಣೆಯ ಬರಹ ಗೆಲಿಯಬಲ್ಲವರಾರು ಮೂಜಗದಿ ಪ ಗೆಲಿಯಬಲ್ಲವರಾರು ಮೂಜಗದೊಳಗೆ ಬಲ್ಲಿದರೆಂಬರೆಲ್ಲರು ಜಲಜಪೀಠನ ಲಿಪಿಗೆ ಸಿಲ್ಕಿ ತೊಳಲಿ ಬಲಳಿದರ್ಹಲವು ಪರಿಯಲಿ ಅ.ಪ ಒಂದೇ ಧರ್ಮದಿಗೂಡಿ ತಾ ನಡೆದ ವಿಕ್ರಮನೆಂಬುವ ಒಂದೆ ಕೊಡೆಲಿಡೀಭುವನವಾಳಿದ ಸದ್ಧರ್ಮ ತನದಿಂ ದೊಂದೆ ಆ ಸುಮರೂಪ ಪ್ರಜರ ಪಾಲಿಸಿದ ಉದ್ದಂಡನೆನಿಸಿದ ಒಂದು ಪಾಪಾಚರಣೆಗೈಯದೆ ಒಂದು ಬಿಡಿದಖಿಲ್ವಿದ್ಯವರಿದ ಒಂದು ಅರಿಯದೆ ತನ್ನ ಕೈಕಾಲು ಒಂದೇ ಮಾತಿಗೆ ಕಳೆದುಕೊಂಡ 1 ಎರಡುಹೊತ್ತು ಸತ್ಯಮಂ ಬಿಡದ ಸುಚಿಂತದಿರುವ ಎರಡನೇ ಗುಣ ಸ್ವಪ್ನದರಿಯದ ನಳಚಕ್ರವರ್ತಿ ಎರಡು ತಿಳಿಯದೆ ಜೂಜನಾಡಿದ ಮಹವಿಪಿನಕೈದಿದ ಎರಡು ಮಕ್ಕಳ ವನದಿ ಅಗಲಿದ ಎರಡನರಿಯದೆ ಮಲಗಿದರಸಿಯ ಎರಡನೆಬಗೆದಡವಿಯಲಿ ಬಿಟ್ಟು ಎರಡನೇರಾಯನಶ್ವ ತಿರುವಿದ 2 ಮೂರು ಜಗ ಅರೆಲವದಿ ತಿರುಗುವ ದಿನದಿನವುಬಿಡದೆ ಮೂರುಮೂರ್ತಿದರ್ಶನವ ಪಡೆಯುವ ಆ ಪರಮಪಾವನ ಮೂರು ಕಾಲದ ಜ್ಞಾನ ಬಲ್ಲವ ನಾರದನೆಂಬುವ ಮೂರುಮಂದಿ ಶಕ್ತಿಯರಿಗೆ ಮೂರು ಬಟ್ಟೆಯ ಸುದ್ದಿ ಪೇಳಿ ಮೂರು ಮೂರ್ತಿಗಳುಪಾಯನರಿಯದೆ ಮೂರಿಪ್ಪತ್ತು ಮಕ್ಕಳ್ಹಡದ 3 ನಾಲ್ಕುಯುಗ ಪ್ರಮಾಣಗಳ ತಿಳಿದ ಬ್ರಹ್ಮನುಬಿಡದೆ ನಾಲ್ಕುವೇದಗಳ್ಹಸ್ತದೋಳ್ಪಿಡಿದು ವಿಧವಿಧದಿ ಎಂಭತ್ತು ನಾಲ್ಕುಲಕ್ಷಜೀವರಾಶಿಗಳ ಬರಿದೆ ಉತ್ಪತ್ತಿಗೈದು ನಾಲ್ಕುಭುಜನ ಸುರನೆಂದೆನಿಸಿ ನಾಲ್ಕು ವಿಧ ಮತಿವಂತನಾದವ ನಾಲ್ಕು ಒಂದು ಮುಖ ಮೊದಲಿಗಿರ್ದನು ನಾಲ್ಕೆ ಮುಖದವನೆನಿಸಿಕೊಂಡು 4 ಐದುಬಾಣನಪಿತನಸಖನಾದ ಉರಿನೇತ್ರ ಬಿಟ್ಟು ಐದುಬಾಣನ ಭಸ್ಮ ಮಾಡಿದ ಅಪಾರ ಶಂಭೋ ಐದು ಒಂದು ಮುಖದವನ ತಾ ಪಡೆದ ಹರಿಕರುಣದಿಂದ ಐದು ಒಂದು ಮುಖದವನಿಂ ತಾರಕ ನೈದುವಂದುದಲ್ಲೆ ಸೀಳಿಸಿ ದೈದುತತ್ವಕಾಲಯೆನಿಸಿದ ಐದುಮುಖಸ್ಮಶಾನ ಸೇರಿದ 5 ಆರು ಎರಡೈಶ್ವರ್ಯಗಳಲೊಳ ವೈಕುಂಠನಾಯಕ ಆರು ಎಂಟುಲೋಕಗಳ ಪರಿಪಾಲ ಬಿಡದೇಳು ಇಪ್ಪತ್ತು ಆರುಕೋಟಿ ಅಮರಾದಿಗಳ ಮೂಲ ಮಹಮಂತ್ರ ಜಾಲ ಆರುನಾಲ್ಕು ಭುಜನ ಮೊರೆ ಕೇ ಳಾರುನಾಲ್ಕು ಶಿರನ ವಧಿಸಿದ ಆರುನಾಲ್ಕರಗಧಿಕನೆನಿಸಿ ಆರುನಾಲ್ಕವತಾರ ತಾಳಿದ 6 ಆರಿಗಾದರು ಬಿಡದೀ ಬರವಣಿಗೆ ಬಿದ್ದಂತೆ ಫಲಿಸಿತು ತೀರಲಿಲ್ಲದಂತಂಥ ಹಿರಿಯರಿಗೆ ಸಾಧ್ಯದಪ್ಪಿ ಮಹ ಘೋರ ಬಡಿಸಿತು ಸರ್ವ ಶಕ್ತರಿಗೆ ಬ್ರಹ್ಮನಸುಡಗಿ ವಾರಿಜನು ಬರೆದ ಬರೆಹ ಮೀರಿ ನಡೆದೇನೆಂದರಿನ್ನು ಸಾರಮೋಕ್ಷಕ್ಕಧಿಪ ನಮ್ಮ ಧೀರಪ್ರಭು ಶ್ರೀರಾಮ ಬಲ್ಲ 7
--------------
ರಾಮದಾಸರು
ಗೆಳೆತನ ಹಿಡಿದನೆ ಬಗಳೆಯ ಕೂಡೆಗೆಳೆತನ ಆರಿಗೂ ದೊರಕದತನಯ ಸತಿಯು ಧನವೆಂಬುದ ಸೇರದಜನನ ಮರಣಕೆ ಹೊರತಾದ ಪ ಎನ್ನ ಕಾಲು ಬಗಳೆ ಕಾಲಾಗಿಎನ್ನ ಹಸ್ತ ಬಗಳೆ ಹಸ್ತವಾಗಿಎನ್ನ ಬುಜ ಬಗಳೆ ಬುಜವಾಗಿಎನ್ನ ಕಣ್ಣೇ ಬಗಳೆ ಕಣ್ಣಾಗಿ 1 ಎನ್ನ ದೇಹವು ಬಗಳೆ ದೇಹವಾಗಿಎನ್ನ ಇಂದ್ರಿಯ ಬಗಳೆ ಇಂದ್ರಿಯವಾಗಿಎನ್ನ ಮನವು ಬಗಳೆ ಮನವಾಗಿಎನ್ನ ಜೀವ ಬಗಳೆ ಜೀವವಾಗಿ 2 ನಾನೇ ಬಗಳೆಯಾಗಿ ಬಗಳೆಯೇ ನಾನಾಗಿನಾನು ನೀನು ಎಂಬೆರಡುಳಿದುಜ್ಞಾನ ಚಿದಾನಂದ ಬ್ರಹ್ಮಾಸ್ತ್ರ ತಾನಾಗಿತಾನೇ ತಾನಾದ ಗೆಳೆತನವ 3
--------------
ಚಿದಾನಂದ ಅವಧೂತರು
ಘಾಸಿ ತಿಮಿರದಿನಪ ಪ ಈಶನ ವರಸುತ ದಾಸ ಜನರ ಹಿತ ಪಾಶಾಂಕುಶ ಹಸ್ತ ಅ.ಪ ವಿದ್ಯೆ ಪ್ರದಾಯಕ ಬುದ್ಧಿ ಪ್ರಬೋಧಕ ಸಿದ್ಧಿದ ಶ್ರೀ ಬೆನಕ ಹೊದ್ದಿ ನೆನೆವ ಭಕ್ತರುದ್ಧರಿಸುವ ಶಕ್ತ ಮುದ್ದು ಮುಖವ ತೋರಿತ್ತ 1 ಗಿರಿಜೆ ಸತ್ಕುವರನೆ ದ್ವಿರದ ಸುವದನನೆ ಶರಣರ ಪಾಲಿಪನೆ ಪೊರೆಯನ್ನ ಸದ್ದಯದಿ 2 ಕಿಂಕರ ಶಂಕರ ಶತ್ರುಭಯಂಕರ ಶಂಖಚಕ್ರಾಬ್ಜಧರ ಪಂಕಜ ಮುಖವ ತೋರ 3 ರಕ್ತ ವಸ್ತ್ರಾನ್ವಿತ ರಕ್ತ ಗಂಧಾಕ್ಷತ ರಕ್ತ ಮಾಲಾದಿಧೃತ ಭಕ್ತ ಜನಾವನ ಶಕ್ತನೆ ನೀ ಎನ್ನ ಚಿತ್ತದಿ ಪೊಳೆಯೊ ಘನ್ನ 4 ವೇದನಿಕರ ಸುಗೀಯ ಸಾಧು ಸಜ್ಜನ ಸಮ್ಮತ 5 ಇಂಬಿಟ್ಟಿಯೆಂದು ನಿನ್ನ ಅಂಬರೊ ಸುಗುಣಸಿಂಧು 6 ವಕ್ರವ ತುಂಡಿಪ ಕತದಿಂದಲಪ್ಪ ವಕ್ರತುಂಡನು ನೀನಪ್ಪ ಶಕ್ರ ಪೂಜಿಸಿದನು ವೃತ್ರನ ವಧೆಗಿನ್ನುಪಕ್ರಮದಲೆ ತಾನಿನ್ನು 7 ಪರಿವಾರಸಹಿತ ಘನ್ನ ಧುರದಲ್ಲಿ ಬಿದ್ದನು ವರ ಧರ್ಮ ಗೆದ್ದನು ಎರಗಿ ಅರ್ಚಿಸಿ ನಿನ್ನನು 8 ದುರಳ ದಶಾನನ ಸರಕುಮಾಡದೆ ನಿನ್ನ ಗರುವದಿಂದಿರಲವನ ಪರಿಭವ ಕಾರಣವಾದುದೆಂಬರು ಕಣ ಶರಣಜನಾಭರಣ 9 ನೇಮದಿರುತಿದ್ದು ಹೇ ಮಹಿಮ ಖರ ದಶಶಿರನನ್ನು ಧುರದಲ್ಲಿಗೆದ್ದನು ಕರುಣೆಯೆ ಒರೆಯಲೇನು 10 ಕೋರಲು ಸಿದ್ಧಿ ಅಂದು ತೋರಿದೆ ಕರುಣವ ಚಾರುಕರದಿ ಅವನಾರೈಸಿ ಕರುಣಾರ್ಣವ 11 ಮುಪ್ಪುರ ಗೆದ್ದನು ಮುಕ್ಕಣ್ಣ ನಿನ್ನನು ತಪ್ಪದೆ ನೆನೆದವನು ಅಪ್ಪನೆ ನಿನ್ನಯ ಗೊಪ್ಪ ಚರಿತ್ರೆಯ ಇಪ್ಪಂತೆ ಪೇಳಿಸಯ್ಯ 12 ಸೃಷ್ಟಿಕರ್ತನು ತನ್ನ ಸೃಷ್ಟಿಗೈಯ್ಯಲು ಮುನ್ನ ಮುಟ್ಟಿಭಜಿಸಿದ ನಿನ್ನ ಎಷ್ಟೆಂತ ಪೇಳಲಿ ಶ್ರೇಷ್ಠಗುಣಾವಳಿ ಅಷ್ಟೆಲ್ಲ ನೀನೆ ಬಲ್ಲಿ 13 ಮಾಧವ ಪೊಂದಿದ ನಿನ್ನನವ ದ್ವಂದ ವಿವಾಹಾದುದು 14 ಭಾರತ ಬರೆಯಲು ಆಕಾರ ನೋಡಲು ತೋರದೆ ಇರುತಿರಲು ಶೂರನೆ ನಿನ್ನನು ಅರಿಸಿ ವ್ಯಾಸನು ಬೀರಿದ ಮಹಿಮೆಯನು 15 ಏನು ಕರುಣವಯ್ಯ ಶ್ರೀನಿಕೇತನಿಗೈಯ್ಯಾ ತಾನೆ ಇತ್ತಿಹನಯ್ಯ ಆನತಿಸಲು ಇಷ್ಟ ಮಾಣಲು ಸಂಕಟ ನೀನು ಕೊಡೆನುತದಟ 16 ಭಜಿಪರ ಭಾಗ್ಯದ ಯಜಿಪರಭೀಷ್ಟದ ತ್ಯಜಿಪರ ಸಂಕಟದ ಪಡಿ 17 ಜಯ ಜಯ ಕಾಪಿಲನೆ ಫಾಲ ಜಯ ಗಜಮುಖನೆ 18 ದ್ವಾದಶ ನಾಮವ ಆದರದಿಂದಾವ ಓದುವ ಕೇಳುವವ ಆದಿ ಪೂಜಿತನೊಲಿವ 20 ವಿದ್ಯಾರಂಭದಿ ಮುದ್ದು ವಿವಾದÀದಿ ಪೊದ್ದಲ್ಲಿ ನಿರ್ಗಮದಿ ಯುದ್ಧದಿ ನಿನ್ನನು ಬದ್ಧದಿ ನೆನೆವನು ಗೆದ್ದಪನೈ ಅವನು 21 ಏಕವಿಂಶತಿಪದ ಕೋಕನಪುಷ್ಪದ ಶ್ರೀಕರ ಮಾಲೆ ಇದ ಶ್ರೀಕಾಂತ ವರಭಕ್ತ ನೀ ಕರುಣಿಸೆಂದಿತ್ತ ಸ್ವೀಕರಿಸೈ ಮಹಂತ 22 ಬೆಂಗಳೂರಿನಲಿ ತುಂಗರೂಪದಲ್ಲಿ ಕಂಗೊಳಿಸುತಲಿಲ್ಲಿ ಹಿಂಗದೆ ಪೊರೆವೆನೆಂದ 23 ಬಾಲಕೃಷ್ಣಾರ್ಯರ ಬಾಲ ಲಕ್ಷ್ಮೀನಾರಾಯಣನೆಂಬ ಸತ್ಪೆಸರ ತಾಳಿದ ಶರಣನು ಮೇಳೈಸೀನುತಿಯನು ಓಲಗಿಸಿದ ನಿನ್ನನು 24 ಪೊಂದುವ ಮೋದವನು ಇಂದುಧರನ ಸುತನಂದದಿ ಸದ್ಭಕ್ತವೃಂದ ರಕ್ಷಿಪ ಸಂತತ 25 ನಮೋ ಸಾಕುವ ಮಹಿಮ ನಮೋ ಭೀಕರ ಬಿಡಿಸೆನ್ನ ನೀ ಕರುಣಿಸು ಮುನ್ನ ಶ್ರೀಕಾಂತ ಭಕ್ತಿಘನ್ನ 26 ಮಂಗಳ ಸದ್ವಿದ್ಯಾಬುದ್ಧಿದ ಜಯ ಜಯ ಮುಂಗಳ ಸಿದ್ಧದನೆ ಮಂಗಳ ವರ್ಧಿತನೆ 27
--------------
ಲಕ್ಷ್ಮೀನಾರಯಣರಾಯರು
ನಿಖಿಳ ಗುಣಗಣ ಪೂರ್ಣ ಪ ಅಂಬುಜಾಸನ ಜನಕ ನರಹರಿ ಅಂಭ್ರಣೀ ಜಗನ್ನಾಥ ನಾಯಕ ಬಿಂಬ ವಿಷ್ಣುವೆ ನಿಖಿಳವಿಶ್ವಕೆ ತುಂಬಿ ಭಕ್ತಿಯ ಕಾಯೋ ಕರುಣಿ ಯೇ ಅ.ಪ. ತಂದೆಕಾರಣ ಭವದೀ- ನೀ ಎನ್ನ ಬಂದೆನಲ್ಲದೆ ನಿಜದೀ- ಸುಖಪೂರ್ಣ ನಿಂದು ನಡೆಸದೆ ಭವದೀ- ದಾಟಿನ್ನ ಎಂದಿಗಾದರು ಗೆಲ್ಲುವೆನೆ ಘನ್ನ ಬಂಧನಪ್ರದ ನೀ ಬಂಧಮೋಚಕ ತಂದ ವಿಷ್ಣುವೆ ಮೂಲಕಾರಣ ವೆಂದು ಶೃತಿಗಳವೃಂದ ನುಡಿವುವು ಬಂದು ನಿನಗಿಂತಧಿಕರಾರೈ ನಿಂದು ಹೃದಯದಿ ಸರ್ವಕಾಲದಿ ತಂದು ಉಣಿಸುವೆ ಸಕಲ ವಿಷಯವ ಬಂಧಿ ನಾನಿಹೆ ಜಡವೆ ನೀ ಬಿಡೆ ಮುಂದಿನಾಗತಿ ಬೇಗ ತೋರೈ ಇಂದಿರೇಶ ಮಹೇಂದ್ರ ಸುಖಮಯ ಕಂದರಾಶ್ರಯ ಬ್ರಹ್ಮಮಂದಿರ ನಂದಿವಾಹನ ತಾತ ವಿಭುವರ ಚಂದಗೋಚರ ಸಾರ್ವಭೌಮನೆ ಕೂಂದುನಕ್ರನ ಗಜವ ಸಲಹಿದೆ ನಂದನೀಡಿದೆ ಪಾರ್ಥಮಡದಿಗೆ ತಿಂದು ಎಂಜಲ ಕಾಯ್ದೆ ಶಬರಿಯ ಗಂಧ ಕೊಳ್ಳುತ ಕಾಯ್ದೆ ಕುಬ್ಜೆಯ ಕಂದ ಕೂಗಲ್ ಬಂದೆ ಕಂಭದಿ ಇಂದ್ರ ಗೋಸುಗ ಬಲಿಯ ಬೇಡದೆ ಮಂದರಾದ್ರಿಯ ಪೊತ್ತೆ ಸುರರಡೆ ಸುಂದರಾಂಗಿಯುಆದೆ ಹಾಗೆಯೆ ಹಿಂದೆ ಈತೆರ ನಿತ್ಯತೃಪ್ತನೆ ಬಂದು ಸಲಹಿದ ಭಕ್ತವೃಂದವ ಮಂದನಾದರು ಶರಣುಬಿದ್ದವ ನೆಂದು ಸಲಹೈ ಪೂರ್ಣಕರುಣಿಯೇ1 ಕೂಡಿಸುತ ಮನ ವಿಷಯ ಬಲೆಯಲ್ಲೀ ಮಾಡಿಸುವೆ ಮಾಡಿದ್ದ ದಿನದಿನದೀ ಗೂಢ ನಿನ್ನಯ ಭಕ್ತಿ ಕೊಡಲೊಲ್ಲೀ ಕೇಡುಮೋಹ ಸಜಾಡ್ಯ ಹರಿಸಿಲ್ಲೀ ಓಡಿಓಡಿಸೆ ಜಗವು ನಡೆವುದು ನೋಡಿನೋಡಿಸೆ ನಾವು ನೋಳ್ಪೆವು ಮಾಡಿಮಾಡಿಸೆ ಕರ್ಮವಾಹುದು ಪ್ರೌಢ ನಿನ್ನಯ ಬಲದ ವಿಶ್ವಕೆ ಕಾಡಿಕಾಡಿಪ ವಿಷಯ ಬಿಡಿಸುತ ಹಾಡಿಹಾಡಿಸಿ ನಿಮ್ಮ ಕೀರ್ತನೆ ಆಡಿಆಡಿಸಿ ಸಾಧುಸಂಗದ ಜಾಡುತೋರಿಸೊ ಭಕ್ತಿ ಮಾರ್ಗದ ಕ್ರೋಢನರಹರಿ ಮತ್ಸ್ಯವಾಮನ ಪ್ರೌಢ ಭಾರ್ಗವ ರಾಮಕೃಷ್ಣನೆ ಗಾಡಿಕಾರ ಪರೇಶ ಬುದ್ಧನೆ ದೂಡು ಕಲಿಯನು ಕಲ್ಕಿದೇವನೆ ಕೂಡು ಮನದಲಿ ಬಾದರಾಯಣ ನೀಡು ಜ್ಞಾನವ ಜೀಯ ಹಯಮುಖ ಮಾಡು ದತ್ತಾತ್ರೇಯ ಕೃಪೆಯನು ಈಡುಕಾಣದು ಕಪಿಲಮೂರ್ತಿಯೆ ಬೀಡುಗೈದಿಹ ಬೀಜ ನಿದ್ರೆಯು ನೋಡಗೊಡದೈ ನಿನ್ನತುರ್ಯನೆ ನಾಡುದೈವಗಳನ್ನು ಭಜಿಸಲು ಓಡದದು ಎಂದೆಂದು ಸತ್ಯವು ಮಾಡುತಲಿ ಸಾಷ್ಟಾಂಗ ನತಿಗಳ ಜೋಡಿಸಿಹೆ ಶಿರ ಪಾದಪದ್ಮದಿ ಗಾಢಪ್ರೇಮದಿ ಸಲಹು ಭೂಮನೆ ಮೂಡಿಸುತನಿಜ ಭಕ್ತಿ ಜ್ಞಾನವ 2 ಎನ್ನ ಯೋಗ್ಯತೆ ನೋಡೆ ಫಲವಿಲ್ಲ ನಿನ್ನಕೃಪೆ ತೋರದಿರೆ ಗತಿಯಿಲ್ಲ ಅನ್ಯ ಹಾದಿಯು ಯಾವುದೆನಗಿಲ್ಲ ಘನ್ನಚಿತ್ತಕೆ ಬರಲು ತಡಿಯಿಲ್ಲ _ ಹೇನಲ್ಲ ಪೂರ್ಣಜ್ಞಾನಾನಂದ ಶಾಶ್ವತ ಪೂರ್ಣ ಚಿನ್ಮಯ ಪೂರ್ಣ ಮೂಲದಿ ಪೂರ್ಣ ನಂದದಿ ಪೂರ್ಣ ಅವಯವಿ ಪೂರ್ಣಶಕ್ತನೆ ಪೂರ್ಣಬೋಧ ಮುನೀಂದ್ರ ವಂದಿತ ಶರಧಿ ದೇವನೆ ಪೂರ್ಣನಿತ್ಯಾನಂದ ದಾಯಕ ಪೂರ್ಣಮಾಡೈ ಬಯಕೆ ತೂರ್ಣದಿ ನೀನೆ ಸರ್ವಾಧಾರ ಪ್ರೇರಕ ನೀನೆ ರಕ್ಷಕ ಸರ್ವಶಿಕ್ಷಕ ನೀನೆ ಸೀಮಾಶೂನ್ಯ ನಿಶ್ಚಯ ನೀನೆಪೊಗಳಿತನಿಖಿಳವೇದದಿ ನೀನೆ ವಾಚ್ಯನು ಸರ್ವಶಬ್ದದಿ ನೀನೆ ಮುಕ್ತಾಯಕ್ತ ಸೇವಿತ ನೀನೆ ದೋಷವಿದೂರ ಸ್ಥಾಣುವು ನೀನೆ ಸೃಷ್ಟಾ ದ್ಯಷ್ಟಕರ್ತೃವು ನಿನ್ನಸಮ ಉತ್ಕøಷ್ಟರಿಲ್ಲವು ನಿನ್ನ ದಾಸರು ಸರ್ವಜೀವರು ಭಿನ್ನರೈ ಸರ್ವತ್ರ ಸರ್ವರು ನಿನ್ನ ದಾಸರ ಭಾಗ್ಯಬೇಡುವೆ ಜನ್ಮಜನ್ಮಕು ಇದನೆ ಬಯಸುವೆ ನಿನ್ನ ನಂಬಿಹೆ ನಿನ್ನನಂಬಿಹೆ ಸಿರಿಪತಿ ಕೃಷ್ಣವಿಠಲನೇ 3
--------------
ಕೃಷ್ಣವಿಠಲದಾಸರು
ಪಾಹಿ ಕೃಷ್ಣ ಮಹಿಪತಿ ಮಧುರೆಗೆ ಪೋಗೋದೇನೊ ಕಾರಣ ಯದುಕುಲನಾಥ ಪಾಹಿ ಕೃಷ್ಣ ಮಹಿಪತಿ ಪ ಮಧುವೈರಿ ತಾ ಬ್ಯಾಗ ಮಧುರಾಪಟ್ಟಣದಾರಿ ಹಿಡಿದಿರೆ1 ದಧಿ ಮಥನವ ಮಾಡಿ ಕದವ ತೆಗೆದು ಕಂಡರು ಬ್ಯಾಗ 2 ಮಿಂಚಿನಂತ್ಹೊಳೆವೊ ವಿರಿಂಚನಯ್ಯನ ರಥ ಚಂಚಲಾಕ್ಷಿಯರು ನೋಡುತಲಾಗ 3 ಬನ್ನಿರೆ ಬನ್ನಿರೇ ಪನ್ನಂಗಶಯನನ ಬೆನ್ನ್ಹತ್ತಿ ನಾವು ಹೋಗುವೊಣೀಗ 4 ಫುಲ್ಲನಾಭನೆ ಮತ್ತೆಲ್ಲಿಗೆ ಪಯಣವೊ ಎಲ್ಲ ವಾರ್ತೆಗಳ್ಹೇಳೊ ನಮಮುಂದೆ 5 ನಂದಗೋಪನ ಬುದ್ಧಿ ಮಂದವಾಯಿತೇನೊ ವೃಂದಾವನವ ಬಿಟ್ಟು ಕಳಿಸುವ 6 ಕೂಸೆಂದು ನಿನ್ನ ಮುದ್ದಿಸುವೊ ಮೋಹಗಳೆಲ್ಲ ಬ್ಯಾಸರಿಕ್ಯಾಯ್ತೇನೆಶೋದೆಗೆ 7 ಸಾಧುಗೋವ್ಗಳನೆಲ್ಲ ಕಾದುಕೊಂಡಿರುವೋದು ಶ್ರೀಧರ ನೀದಾರಿಗ್ಹೇಳಿದ್ಯೊ 8 ವತ್ಸಕಾಯ್ದುದು ಮನಕಿಚ್ಛಿಲ್ಲದಿರಲು ಶ್ರೀ- ವತ್ಸಧರನೆ ಸುಮ್ಮನಿರೊ ನೀನು 9 ನಮ್ಮನೆಯಲಿ ಪಾಲ್ ಬೆಣ್ಣೆ ಕದ್ದನೆಂದು ನಿಮ್ಮಮ್ಮನಲ್ಲಿ ದೂರಿದೆವೇನೊ 10 ಕ್ಷೀರಗಡಿಗೆ ಒಡೆದೋಡಿ ಪೋದನೆಂದು ದೂರಿಕೊಂಡವರಲ್ಲೋ ನಿನ್ನನು 11 ಊರೊಳಗೊಬ್ಬಳು ದೂರಿಕೊಂಡರೆ ನಾವು ಭಾರಿ ಶಿಕ್ಷೆಯ ಮಾಡಿ ಬಂದೆವೊ 12 ಎಂದಾದರೊಂ(ದು) ದಿನ ಅಂದ ಮಾತುಗಳೆಲ್ಲ ಇಂದೆ ತಪ್ಪಿ ್ಹಡಿಯದೆ ಕ್ಷಮಿಸಯ್ಯ 13 ಕದವ ತೆಗೆಯದ ಮುಂಚೆ ಸದನದ್ವಾರದಿ ಬಂದು ಯದುನಾಥ ಎದುರೆ ನಿಂತಿರುವ್ಯಲ್ಲೊ 14 ಕಂಗಳಿಂದಲಿ ನೋಡ್ಯಾಲಿಂಗನೆ ಮಾಡುತ ಸಂಗಸುಖದಿ ಬೆಳೆದಿದ್ದೇವೊ 15 ನಿನ್ನ ನೋಡದ ಕಂಗಳಿನ್ನ್ಯಾತಕಿರಲು ಕೇ(ಗೇ?) ರೆಣ್ಣೆಯ ತೀಡಿಕೊಂಬುವೋಣೇನೊ 16 ಮಾರನಾಟಕೆ ಮನಸೋತು ನಿನ್ನನೆ ನಾವು ಜಾರಪುರುಷನೆಂದು ತಿಳಿಯದೆ 17 ಇರುಳೇಯೆ ಮನೆಯಲ್ಲಿ ಕೊಳಲೂದೋ ಕಾಲಕ್ಕೆ ನಳಿನಾಕ್ಷ ನಾವ್ಹ್ಯಾಗೆ ಬಂದೆವೊ 18 ಕಾಲಿಗಿಡುವ ವಸ್ತು ಕರದಲಿಟ್ಟುಕೊಂಡು ವಾಲೆ ಮೂಗುತಿ ಹೆರಳಿಗೆ ಚುಚ್ಚಿ 19 ಹರಡಿ ಕಂಕಣ ಪಾದದ್ಹರಡಿನ ಮ್ಯಾಲಿಟ್ಟು ಮುಡಿವ ಮಲ್ಲಿಗೆ ಕಿವಿಯಲಿ ಸುತ್ತಿ 20 ಹಾರ ಪದಕವ ಟೊಂಕಕೆ ಕಟ್ಟಿ ನಾವು ಉಟ್ಟ ಸೀರೆ ಕುಪ್ಪುಸ ಪಾರವಿ(ಪರಿವೆಯಿ?)ಲ್ಲದೆ 21 ಗಂಡಮಕ್ಕಳಿಗುಣಬಡಿಸಿ ಮಂಡಿಯ ಮ್ಯಾಲೆ ಸಂಡಿಗ್ಹುಳಿಯನ್ಹಾಕಿ ಬಂದೆವೊ 22 ಎಲೆಯ ಮ್ಯಾಲ್ಹಾಕೋ ಪದಾರ್ಥವೆಚ್ಚರವಿಲ್ಲ ತಲೆಯ ಮ್ಯಾಲ್ಹಾಕಿ ಬಂದೆವು ನೋಡೊ 23 ಬೆಣ್ಣೆ ಚೆಟ್ಟಿಗೆಯ ಬೆಕ್ಕಿನ ಮುಂದೆ ಸರಿಸೇವೊ ಸಣ್ಣ ಕೂಸಿನ ನೆಲವಿನೊಳಿಟ್ಟು 24 ಅಳುವೊ ಮಕ್ಕಳನೆ ಆಕಳ ಕಣ್ಣಿಗೆ ಕಟ್ಟಿ ಕರು- ಗಳ ತೊಟ್ಟಿಲೊಳಗೆ ಇಟ್ಟು 25 ಬಂಗಾರದ್ಹಾರ ಪದಕನ್ಹಾಕಿ 26 ಅಚ್ಛದಿಂದೆತ್ತಿ ಮುದ್ದಿಡುತಿರೆ ನಮ ಗಲ್ಲ ಕಿ- ತ್ತಿ ಚಿವರಿಕೊಂಡ್ಹೋಯಿತು 27 ಬಂಗಾರ ಕಳಕೊಂಡು ಮಂಗನಂತಾದೆವೊ ಮಂಗಳಾಂಗನೆ ಇಷ್ಟು ಮರುಳಾಗಿ 28 ವ್ಯತ್ಯಾಸದಿಂದ್ವಸ್ತ್ರ ಇಟ್ಟು ಬಂದೆವೊ ನಾವು ಬಿಟ್ಟೊ ್ಹೀದನೆಂಬೊ ಸಿಟ್ಟಿಲ್ಲವೊ 29 ಅಡಅಡವಿಲಿ ನಿನ್ನ ಹುಡುಕುತ ತಿರುಗೇವೊ ಕಡಲಶಯನ ಕರುಣದಿ ಬಂದ್ಯೊ 30 ರಾಸಕ್ರೀಡೆ ಜಲಕ್ರೀಡೆನಾಡಿದ ವಾರ್ತೆ ರಾ(ರಹ?)ಸ್ಯ ಒಬ್ಬರಿಗೆ ನಾವ್ ತಿಳಿಸದೆ31 ಅತ್ತೆಮಾವಂದಿರೀ ವರ್ತಮಾನವ ಕೇಳಿ ನೆತ್ತಿಮ್ಯಾಲ್ಹೊಡದ್ಹೊರಗ್ಹಾಕೋರೊ 32 ಪತಿಗಳು ನಮ್ಮನ್ನು ಬಿಟ್ಟರೂ ಬಿಡಲೊ ಶ್ರೀ- ಪತಿ ನಿನ್ನ ಬಿಟ್ಟು ಪೋಗುವರಲ್ಲ 33 ಮನೆ ಧನ ಧಾನ್ಯ ಮಕ್ಕಳು ಪತಿಗಳು ಬ್ಯಾ- ಡ ನಮಗೊಂದು ಸ್ಥಾನ ತೋರಿಸೊ ನೀನು 34 ಕುಸುಮ ಮಲ್ಲಿಗೆ ಒಣಗಿದ ದಾರ ಮತ್ಯಾವ ಕೆಲಸಕ್ಕೆ ಬರುವುದೊ 35 ಎಲ್ಲಿ ಬಿಲ್ಲ ್ಹಬ್ಬ ಮತ್ತೆಲ್ಲಿ ಸೋದರಮಾವ ಎಲ್ಲಿಂದ ಕರೆಯ ಬಂದನು ಈತ 36 ಕ್ರೂರನೆನ್ನದಲೆ ಅಕ್ರೂರನೆಂಬುವೋ ಹೆ- ಸರ್ಯಾರಿಟ್ಟರ್ಹೇಳೊ ಈ ಪುರುಷಗೆ 37 ನಮ್ಮ ನಿಮ್ಮನು ಅಗಲಿಸುವೋನು ನಮ್ಮಂಥ ಹೆ- ಣ್ಣು ಮಕ್ಕುಳು ಇವಗಿಲ್ಲವೆ 38 ಇಳಿಯಿಳಿ ಇಳೆಯಲ್ಲೀಳಿಗೆಯ ಕೊಟ್ಟೇವೊ ನಮ್ಮ ಕೊ- ರಳ ಕೊಯ್ದು ಮುಂದಕ್ಹೋಗೋ ನೀ 39 ವಾಸುದೇವನೆ ನಿನ್ನ ರಥದ ಗಾಲಿಗೆ ನಾವು ಹಾಸಿಕ್ಯಾಗಿ ಅಡ್ಡಬಿದ್ದೆವೊ 40 ಮಧುರಾಪಟ್ಟಣದಲ್ಲಿ ಇದ್ದ ಸತಿಯರೆಲ್ಲ ಮದನಮೋಹನ ನಿನ್ನ ಬಿಡುವೋರೆ 41
--------------
ಹರಪನಹಳ್ಳಿಭೀಮವ್ವ
ಬಂದಿಯಾತಕೋ ಈ ಭವದೊಳು | ನೊಂದಿಯಾತಕೋ ನೀನೊಂದನರಿಯೆ || ಬಂದಿಯಾತನು ನೀ ಮತಿಮಂದನಾಗದೆ | ಗತಿ ಮುಂದೇನೆಂದು ತಿಳಿಯದಲೆ ಪ ನಾ ನಾ ಎನುತಲಿ ನಾನಾ ಯೋನಿಯೊಳು | ಜನಿಸಿ ಬಂದು ನೀ ಹೀನನೆನಿಸಿಕೊಂಡು || ಅಜ್ಞಾನದೊಳಗೆ ಬೆರೆತು ನೀ - | ನಾರೆಂಬದನರಿಯಲಿಲ್ಲವು ಗುರುತು | ಜ್ಞಾನಿ ಪುರುಷರ ಕೇಳುವದನೆ ಮರೆತು | ಇನ್ನು ಸದ್ಗತಿಗೆ ಆದಿಯೊ ಹೊರತು | ನೀ ಇದನರಿತು 1 ಆರರೊಳಗೆ ಬಿದ್ದು ಆರನು ನೋಡದೆ | ಆರು ಚಕ್ರದ ಮೇಲೆ ಏರಿ ಮ್ಯಾಲಕಿನ್ನು | ತೋರುತಿಹುದು ನೋಡು ರೂಪವಲ್ಲೀ | ಧಾರುಣಿಯೊಳಗೆಲ್ಲ ಅದರ ವ್ಯಾಪವು | ತೋರಿದಾಕ್ಷಣ ಅಳಿದ್ಹೋಯ್ತು ಪಾಪ | ಇದನು ಬಿಟ್ಟು ಮೂರ ನೆನಿಸಿ ಕೆಟ್ಟೀ | ಬಯಸಿ ನೊಂದೀ 2 ನರ ತನು ದೊರೆಕೋದು ಬರಿದೇನೊ | ಎರಡಿನ್ನು ಸರಿಯಾಗೊ ತನಕ | ಬರುವದೇನೊ ಸುಮ್ಮನೆ ಮರುಳಾಗ ಬ್ಯಾಡ || ಸರಿಸು ಅಸ್ಥಿರವೆಂದು ನೀ ಬೇಗದಲಿ | ಸಂಚಿತವೆಲ್ಲ ಕೂಡಿ ಬಂದಿತಿನ್ನೇನು | ಗುರು ಭವತಾರಕನ ಭಜಿಸು ನಿನ್ನ | ಮನಸಿನಿಂದಲಿ 3
--------------
ಭಾವತರಕರು
ಬಂದು ಮಧುರೆಗೆ ತಾ ಕೊಂದು ಮಾತುಳನ ಬಂಧನ ರಹಿತವಾಗಲು ಮಾತಾಪಿತರು 1 ಜರೆಯಸುತನ ಬಾಧೆಯು ಘನವಾಗುತಿರಲು ಜಲದೊಳು ದ್ವಾರಕಾಪುರವ ನಿರ್ಮಿಸಿದ 2 ಯದುನಂದನ ತನ್ನಗ್ರಜ ಬಲರಾಮನ ಕೂಡ ಮುದದಿಂದಾವಾಸ ಯಾದವರ ಸಹಿತಾಗಿ3 ಇರುತಿರೆ ರುಕುಮ ತನ್ನನುಜೆ ಸಹಿತಾಗಿ ಚೆಲುವ ಸುಂದರಿಗೆ ಬ್ಯಾಗ್ವಿವಾಹದುತ್ಸವವು 4 ಅಕ್ಕರದನುಜೆ ರುಕ್ಮಿಣೀದೇವಿಗಿನ್ನು ಚಿಕ್ಕ ಚೆನ್ನಿಗನಾದ ತಕ್ಕ ವರನ್ಯಾರು 5 ವಸುಧೆಪಾಲರ ಮಧ್ಯ ಶಿಶುಪಾಲನೀಗಧಿಕ ಕುಸುಮಗಂಧಿನಿಗೆ ನಿಶ್ಚಯವ ಮಾಡಿದರು 6 ಅಗ್ರಜನ್ವಾಕ್ಯವ ಕೇಳಿ ಮನದಲ್ಯೋಚಿಸುತ ಘನಮಹಿಮಗೆ ಓಲೆ ಬರೆದಳು ಲಿಖಿತ 7 ಹರಿ ನೀನೆ ಮುರವೈರಿ ಸರುವಾಂತರಯಾಮಿ ನಿನ್ನ ಸ್ಮರಣೆ ದರುಶನ ಮಾತ್ರಕೆ ಪರಮಲಾಭೆನಗೆ 8 ಎಂದೆಂದಿಗೆನ ಕೂಡಾನಂದವ ಬಟ್ಟು ಇಂದೆ ಕೈಬಿಟ್ಟು ದೂರಿಂದ ನೋಡುವರೆ 9 ಪ್ರಾಣಪತಿ ನೀ ಪಾಣಿಗ್ರಾಣ (ಗ್ರಹಣ?) ಮಾಡದಲೆ ಇರೆ ಪ್ರಾಣ ಉಳಿಯದು ಕೇಳೆನ್ನಾಸೆ ಹುಸಿಯಲ್ಲ 10 ಸರ್ವರ್ವಂದಿತ ನಿನ್ನ ಅರಮನೆದ್ವಾರ ಕಾದಿರುವೋ ಭೃತ್ಯರಿಗೊಪ್ಪಿಸಿಕೊಡದೆ ಕರುಣಾಳು 11 ದೇಶಕಾಲಕೆ ನಾ ನಿನ್ನ ಸಮಳ್ವಾಸುದೇವ ಗುಣಕಸಮಳೆಂದು ಉದಾಸೀನ ಮಾಡಬ್ಯಾಡ 12 ವಕ್ಷಸ್ಥಳದ ವಾಸಿಯ ತುಚ್ಛಮಾಡದಲೆ ಲಕ್ಷೀಲೆ ಕರೆದೊಯ್ಯೊ ಪಕ್ಷಿವಾಹನನೆ 13 ಎನ್ನ ಬಿನ್ನಪ ಕೇಳಿ ಮನ್ನಿಸೊ ಕೃಷ್ಣ ಪನ್ನಂಗಶಯನ ನಿನ್ನ ಪಾದಕ್ಕೆರಗುವೆನು 14 ಪಾದ ಉರಗ ಮೆಟ್ಟಿದ ಪಾದ ನಿನ್ನ ಧ್ವಜವಜ್ರಾಂಕುಶ ಪಾದಕ್ಕೆರಗಿ ನಮಿಸುವೆನು 15 ಬರೆದ ಓಲೆಗೆ ಹಚ್ಚಿ ಅರೆದರಿಷಿಣವ ಕರವ ಜೋಡಿಸಿ ಕೊಟ್ಟು ಕಳುಹೆ ದ್ವಾರಕೆಗೆ16 ಜಗದೀಶಗೆ ಪತ್ರವ ಜಾಣೆ ತಾ ಬರೆದು ದ್ವಿಜನ ಕೈಯಲಿ ಕೊಟ್ಟು ಕಳುಹೆ ದ್ವಾರಕೆಗೆ 17 ವ್ಯಾಳ್ಯ ಮೀರುವುದೆಂದು ಎದ್ದಾಗ ರುಕುಮ ಭೇರಿ ತಾಡನ ಮಾಡಿಸೆ ಭೋರೆಂಬೊ ರಭಸ 18 ಎರೆದು ಮುಡಿಯನ್ಹಿಕ್ಕಿ ಜಡೆಯಬಂಗಾರ ಚೌರಿ ರಾಗಟೆ ಗೊಂಡ್ಯ ಧರೆಗೆ ಮುಟ್ಟುತಿರೆ 19 ಅಚ್ಚ ಜರತಾರಿ ಹೊಳೆವಷ್ಟಪತ್ರಿಕೆಯು ಮ್ಯಾಲೊಪ್ಪುವೊ ಪಟ್ಟೀನೊಡ್ಯಾಣ ಸರಿಸಿಟ್ಟು 20 ಕಂಕಣ ಚೂಡ್ಯ ದ್ವಾರ್ಯ ್ಹರಡಿ ಕೈಕಟ್ಟು ಮ್ಯಾ- ಕಂಚುಕ ತೊಟ್ಟು 21 ಹರಳು ಮಾಣಿಕ್ಯದ್ವಾಲೆ ಬುಗುಡಿ ಬಾವುಲಿಯು ಹೊಳೆವೊ ಮುತ್ತಿನ ಮೂಗುತಿ ಥಳಥಳಸುತಲಿ 22 ಹಾರ ಪದಕದ ಮಧ್ಯ ಮೇಲಾದೇಕಾವಳಿಯು ತೋರ ಮುತ್ತಿನ ದಂಡೆ ಲೋಲ್ಯಾಡುತಿರಲು 23 ಕನ್ನಡ್ಯಂದದಿ ಗಲ್ಲ ಕಳೆಯ ಸುರಿಸುತಲಿ ಸಣ್ಣಮುತ್ತಿನ ಗೊಂಚಲು ಸರಗಳಲೆಯುತಲಿ 24 ಝಗಝಗಿಸುತ ಬಂದಳು ಜಗದ ಮೋಹಿನಿಯು ಮುಗುಳು ನಗೆಯಿಂದ ಮೂರ್ಜಗವ ಮೋಹಿಸುತ 25 25 ಗೆಜ್ಜೆ ಸರಪಳಿ ಅಂದಿಗೆ ಹೆಜ್ಜೆಸರಿಸಿಡುತ ನಿರ್ಜರೇಶನ ಮಾರ್ಗದ ನಿರೀಕ್ಷಣದಿಂದ 26 ಸುತ್ತ ಮುತ್ತೈದೇರು ಕತ್ತಿಕೈ ಭಟರು ತುತ್ತೂರಿ ವಾದ್ಯ ಭೇರಿ ತಮ್ಮಟೆ ಕಾ(ಕಹ?) ಳೆ 27 ನಡೆದು ರುಕ್ಮಿಣಿ ಹೊಕ್ಕಳು ಗುಡಿಯ ಮಹಾದ್ವಾರ ಮೃಡನರಸಿಯ ಪೂಜಿಸಿ ದೃಢಭಕ್ತಿಯಲಾಗ 28 ಹಿರಿಯ ಮುತ್ತೈದೇರಿಗೆ ಮರದ ಬಾಗಿನವ ಅರೆದರಿಷಿಣ ಕುಂಕುಮ ಕರದಲ್ಲಿ ಗಂಧ 29 ಕಡಲೆ ಕಬ್ಬು ಕಾಯಿ ಉಡಿಯ ತುಂಬುತಲಿ ಕಡಲಶಯನನ ಮಾರ್ಗವ ಬಿಡದೆ ನೋಡುತಲಿ 30 ಮಂಗಳಗೌರಿಯೆದುರಿಗೆ ಮುತ್ತೈದೇರು ಅಂಗನೆ ಭೈಷ್ಮಿ ಪೀಠದಲಿ ಕುಳ್ಳಿರಿಸಿ 31 ಮಂಗಳಾಂಗನು ನಿನ್ನ ಪತಿಯಾಗಲೆಂದು ಮಂಗಳಸೂತ್ರ ಬಂಧನ ಮಾಡಲು ನಗುತ 32 ಮಾರನಯ್ಯನ ಮೋರೆ ನೋಡಿದಾಕ್ಷಣದಿ ಮಹಾ- ದ್ವಾರದಿ ಮುತ್ತು ಸೂರ್ಯಾಡೇನೀಕ್ಷಣದಿ 33 ಹರನ್ವಲ್ಲಭೆ ತೋರೆ ಮುರಹರನ ಕರಿವರನ ಭಯ- ಹರನ ಶ್ರೀಧರನ ಕೊಡುವೆನೀ ದೇವರನು 34 ಮಚ್ಛಲೋಚನೆ ಧ್ಯಾನ ಅಚ್ಚ್ಯುತನಲ್ಲೇ ಇಡೆ ಭಕ್ತ- ವತ್ಸಲ ಬಂದನೆಂದೆಚ್ಚರಿಸಿದರು35 ಹತವಾದ ಪ್ರಾಣ ಬರಲತಿ ಹರುಷವ್ಹ್ಯಾಗೋ ರಥವ ಕಾಣುತ ರುಕ್ಮಿಣಿ ಕೃತಕೃತ್ಯಳಾಗ 36 ಸೃಗಾಲದ ಮಧ್ಯ ಒಂದು ಸಿಂಹ ಹೊಕ್ಕಂತೆ ಶ್ರೀನಾಥ ರುಕ್ಮಿಣಿಯ ಸ್ವೀಕಾರ ಮಾಡಿದನು 37 ರಥವು ಮುಂದಕೆ ಸಾಗೆ ಪಥವು ತೋರದಲೆ ಅಲೆ ಬಾಯ ಬಿಡುತ ಶ್ರೀಪತಿಯ ಬೆನ್ನ ್ಹತ್ತಿ 38 ಬಂದ ರುಕುಮನ ಗಡ್ಡ ಮಂಡಿ ಸವರುತಲಿ ಬಂಧನ ರಥಕೆ ಮಾಡಿದ ನಂದಸುತನು 39 ವಾರೆನೋಟದಿ ನೋಡಿ ಮೋರೆ ತಗ್ಗಿಸಿದ ನಾರಿ ರುಕ್ಮಿಣಿಯ ಮುಖ ನೋಡಿ ಶ್ರೀಕೃಷ್ಣ 40 ಕರುಣವಿರಲಿಕ್ಕೆ ನೀ ಬರೆದ್ಯಾತಕೆ ಓಲೆ ತಿಳಿಯಲಿಲ್ಲವೆ ಎಂದೀಪರಿ ಹಾಸ್ಯದಿ ನುಡಿದ41 ಒಡಹುಟ್ಟಿದವನಲ್ಲಿ ಕಡು ಮೋಹವಿನ್ನೂ ಹಿಡಿಯದೆನ್ನೊಳು ಕೋಪ ಬಿಡುರುಕ್ಮಿಣಿ ಎಂದ 42 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ