ಒಟ್ಟು 9 ಕಡೆಗಳಲ್ಲಿ , 7 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ಸರ್ವೋತ್ತಮಳೆ ಸಕಲ ಜನಕಾಧಾರೆ ಕಾಮಿತಾರ್ಥವನೀವ ಕರುಣಿ ಭೂದೇವಿ ಪ ಹರಿಯ ಪಾದದಲುದಿಸಿ ಹರಿಗೆ ವಧುವೆನಿಸಿ ಹರಿಗೆ ಸುತೆಯನು ಇತ್ತು ಹಿರಿಯಳಾದೆ ಹರಿನಾಮ ಕೀರ್ತನೆಯ ಹೊರೆವ ಧಾರುಣಿ ನಿನ್ನ ಮೊರೆಹೊಕ್ಕೆ ಮರೆಯದಿರು ಕರುಣದೋರೆನಗೆ 1 ಕ್ಷಮೆ ದಮೆಯು ಶಾಂತ ಸದ್ಗುಣವೊಪ್ಪುವಳೆ ನಿನಗೆ ಭ್ರಮೆಬಟ್ಟು ಭೂಭುಜರು ಕಡಿದುಕೊಳುತಿಹರು ಅಮಿತ ಮಹಿಳೆ ನಿನ್ನ ನಿಜವ ಬಲ್ಲವರಾರು ತಮಗೆ ಋಣವಿದ್ದುದನು ಕೊಂಡೊಯ್ವರಲ್ಲದೆ 2 ಚಿನ್ನ ಭಂಡಾರಗಳು ನಿನ್ನೊಡಲೊಳೊಪ್ಪಿದವು ಉನ್ನಂತ ರತುನಗಳು ನಿನ್ನೊಳಡಗಿಹವು ಅನ್ನ ಪಾನಂಗಳಿಗೆ ಬೀಜ ಮೂಲವೆ ನೀನು ನಿನ್ನ ಮರೆತಿಹ ಜನಕೆ ಮುನ್ನ ಸುಖವುಂಟೆ 3 ಒಬ್ಬ ರಾಯನ ಗೆಲುವೆ ಒಬ್ಬ ರಾಯನಿಗೊಲಿವೆ ಒಬ್ಬನಿಗೆ ಮೈಯ ನೀನು ಕೊಡುವೆ ಒಬ್ಬರಾದರು ನಿನ್ನ ನಿಜದಿ ಬಾಳ್ದಪರಿಲ್ಲ ಗರ್ಭಜಾತನ ಹರಿಯ ಕೈಯ ಕೊಲಿಸಿದೆಲಾ 4 ಅಂಬುಧಿಯೆ ವಸನಗಳು ಕುಂಭ ಕುಚಗಳೆ ಗಿರಿಯು ಸಂಭ್ರಮದ ನದಿ ಕಾಲುವೆ ನಿನ್ನ ಬೆವರುಗಳು ಎಂಭತ್ತನಾಲ್ಕು ಲಕ್ಷ ಜೀವರಾಶಿಗಳೆಲ್ಲ ತುಂಬಿಕೊಂಡಿರುತಿಹುದು ಅಂಗೋಪಾಂಗದಲಿ 5 ಮೂಢನಾದೆನು ನಿನ್ನ ಬೇಡಿಕೊಂಬರೆ ಮನದಿ ರೂಢಿ ದೇವತೆಯೆ ಮಾಡು ದಯವನು ನೀನು ಮನದಭೀಷ್ಟವನೆಲ್ಲ ಪಾಡು ಪಂಥವು ಬೇಡ ಪಡೆದ ಮಗನೊಡನೆ 6 ನಂಬಿದೆನು ನಾ ನಿನ್ನ ಕುಂಭಿನಿಯೆ ಕೈವಿಡಿದು ಇಂಬಾದ ಪದವಿಯನು ಸಂಭ್ರಮದಿ ಕೊಡುತ ಬೆಂಬಡದೆ ವರಾಹತಿಮ್ಮಪ್ಪ ಕರುಣದಲಿ ಹಂಬಲಿಪ ತೆರದಿಂದ ಸಲಹುವುದು ಜಗದಿ 7
--------------
ವರಹತಿಮ್ಮಪ್ಪ
ಇಂದು ಸ್ತವನ ಮಾಡಿರೊ | ನಿತ್ಯ ಪ ವೈರಿ | ದಿನಾಂತ ವೃಷಭನೇರಿ | ಲಾಲಿಪ ಮಹಿಮ 1 ಸುರಜನತೆ ಪ್ರೀತ ಸರ್ವದ | ಅಸುರ ವೈರಿಯು ನೇಮದಿಂದ | ದಶರುದ್ರರೊಳು ಬಲು ಗುಣವಂತ 2 ದಕ್ಷ ಪ್ರಜೇಶ್ವರನಧ್ವರ | ರಕ್ಷಣೆ ಮಾಡಿದ ದಕ್ಷಮೂರ್ತಿ | ಮೋಕ್ಷಕೆ ಮನಸು ಕೊಡುವ | ನಿಟಲೇಕ್ಷವಂತ ಶಾಂತ 3 ಡಮರುಗ ಪಾಣಿ | ಶರಗದ್ದುಗೆ ಸುಮೇರುವೇದಾ | ತುರಗವಾಗಿರಲಂದು ಅಂದದಿ4 ಓಡಿಸಿ ಭಕುತಿಯಿಂದಲಿ | ಶಮೆ ದಮೆಯಿಂದ ಪೂಜಿಪ ಧೀರ 5
--------------
ವಿಜಯದಾಸ
ಇದುವೇ ಸಾಧಕ ವೃತ್ತಿಗಳು | ಇದೇ ಅಬಾಧಕ ಯುಕ್ತಿಗಳು ಪ ಸದ್ಗುರು ಪಾದಕ ಸದ್ಭಾವದಿ ನಂಬಿ | ಹೃದ್ಗತ ಗುಜವನು ಪಡೆದಿಹನು | ಸದ್ಗತಿಕಾಂಕ್ಷಿತ ಹರಿ ಕೀರ್ತನೆಗಳ | ಉದ್ಗಾರ ಪ್ರೇಮದ ಮಾಡುವನು 1 ಬಲ್ಲವನು ಕಂಡೆರಗಿ ಸಿದ್ಧಾಂತದಾ | ಉಳ್ಳಸದ್ಭೋಧವ ಕೇಳುವನು | ಮೆಲ್ಲನೆ ಮನನದಿ ಧ್ಯಾಸವು ಬಲಿಯುತ | ಕ್ಷುಲ್ಲರ ಮಾತಿಗೆ ಮನ-ವಿದನು 2 ಅನ್ಯರ ಸದ್ಗುಣ ವಾರಿಸಿ ಕೊಳುತಲಿ | ತನ್ನವಗುಣಗಳ ಜರಿಸಿದವನು | ಸನ್ನುಡಿ ಬಿರುನುಡಿಗಳಕದೆ ಕುಜನರ | ಮನ್ನಿಸಿ ಶಾಂತಿಯನು ಜಡಿದಿಹನು 3 ಬುದ್ಧಿಯ ಹೇಳಿದರೆ ನೀ ಹಿತ ಬಗೆಯದೆ | ತಿದ್ದುದರಂದದಿ ತಿದ್ದುವನು | ಇದ್ದಷ್ಟರೊಳಗೆ ಸಾರ್ಥಕದಲಿ ದಿನ | ಗದ್ದಿರ ಹೊರಿಯಲು ಉದರವನು 4 ಸರ್ವರೊಳಗೆ ಬಾಗಿ ಶಮೆ ದಮೆಯಿಂದಲಿ | ಗರ್ವವ ತ್ಯಜಿಸಿಹ ಜನರೊಳಗೆ | ಸರ್ವಭಾವದಿ ಗುರು ಮಹಿಪತಿ ಸ್ವಾಮಿಯು | ಅರ್ವವ ಜಗಸನ್ಮತನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬರಿದೆ ಬಯಸಲು ಬರುವುದೇನೆಲೆ ಮರುಳು ಯೋಚನೆ ಬಿಡೆಲೆ ಮನಸೆ ಪ ಹರಿಯ ಬಳಿಯಲಿ ಪಡೆದಷ್ಟಲ್ಲದೆ ದೊರಕದೆಂದಿಗೆ ಬೇರೆ ತಾನು ಅ.ಪ ಶಾಂತಿತಾಳತಿಭ್ರಾಂತಿ ನೀಗಿ ಸಂತಜನ ಕೃಪಾಪಾತ್ರನಾಗಿ ಕರು ಣಾಂತರಂಗ ಸಿರಿಕಾಂತನಂಘ್ರಿಯ ಅಂತರಂಗದಿ ಭಜಿಸದೆ 1 ಶಮೆಯಗೂಡಿಹ್ಯ ಭ್ರಮೆಯನಳಿದು ಸುಮನದೋಳಿರ್ದು ಕ್ರಮದಿ ಅನುದಿನ ವಿಮಲ ಹರಿಕಥೆ ಶ್ರವಣದಿಂ ರಮಾರಮಣನಂಘ್ರಿಗೆ ನಮಿಸದೆ 2 ದಮೆಯ ಪಡೆದು ದಾಸನಾಗಿ ವಿಮಲನಾಮದ ಬಲವಗಳಿಸಿ ಅಮಿತಮಹಿಮ ಶ್ರೀರಾಮನಂಘ್ರಿ ಕಮಲವೊಲಿಸಿ ಭವತುಳಿಯದೆ 3
--------------
ರಾಮದಾಸರು
ಮಂತ್ರಾಲಯನಿವಾಸ ಉತ್ತಮ ಹಂಸ | ಸಂತಾಪ ಪರಿಹರಿಸ ಕೊಡು ಎನಗೆ ಲೇಸÀ ಪ ಯತಿಗಳ ಶಿರೋರನ್ನ ಯೋಗಸಂಪನ್ನ | ಕ್ಷಿತಿಯೊಳಗೆ ನಿನಗೆ ಸರಿಗಾಣೆನೊ || ನುತಿಸುವೆ ಭಕ್ತಿಯಲಿ ಬಿಡದೆ | ಮುಕುತಿಯಲಿ ಸತತಾನಂದದಲಿಪ್ಪ 1 ಕಪಿಲ ತೀರ್ಥದಲಿ ಶರಣ ಶುದ್ಧಿಯಲ್ಲಿ | ತÀಪವ ಮಾಡುವ ಜ್ಞಾನಿ ಸೌಮ್ಯಜ್ಞಾನಿ || ಕೃಪೆಮಾಡಿ ಕೊಡು ಗುರುವೆ ಶಿಷ್ಯಸುರತÀರುವೆ 2 ತಮೋಗುಣ ಕಾರ್ಯ ಪೋಗಲಾಡು ವ್ಯಾಪ್ತಿಯಾ | ಶಮೆದಮೆಯಲ್ಲಿ ಉಳ್ಳ ಮಹಿಮೆಯಾ || ನಮಗೆ ಪೇಳುವೆ ವೇದಬಲ್ಲ ವಿನೋದ | ಸುಮನ ಸುಗುಣವ ಮೆಚ್ಚೆ ದುರ್ಮತಕೆ ಕಿಚ್ಚೆ 3 ಕಾಶಿ ಸೇತುವೆ ಮಧ್ಯೆ ಮೆರೆವೇ ಜನರಲ್ಲಿ | ಭೇದ ವಿದ್ಯಾ ಸಜ್ಜನಕೆ ತಿಳಿಸು ಮನಸು ನಿಲ್ಲಿಪೆ || ಪೋಷಿಸುವೆ ಅವರ ಅಟ್ಟುವ ಮಹದುರ | ದೋಷವ ಕಳೆವಂಥ ವಿಮಲ ಶಾಂತ4 ವರಹಜ ತೀರದಲ್ಲಿದ್ದ ಸುಪ್ರಸಿದ್ದ | ಮರುತ ಮತಾಂಬುಧಿ ಸೋಮ ನಿಸ್ಸೀಮ || ನರಸಿಜಾಪತಿ ನಮ್ಮ ವಿಜಯವಿಠ್ಠಲನಂಘ್ರಿ | ಸ್ಮರಿಸುವ ಸುಧೀಂದ್ರ ಸುತ ರಾಘವೇಂದ್ರ 5
--------------
ವಿಜಯದಾಸ
ವ್ಯಾಪಾರ ಉದ್ಯೋಗವನು ಮಾಡುವೆ | ಭೂಪಾಶದೊಳಗೆ ಎಲ್ಲರಿಗೆ ಬಲ್ಲಿದನಾಗಿ ಪ ಮುರಾರಿ ನಾಮವೆಂಬೊ ಮುಂಡಾಸವನೆ ಸುತ್ತಿ | ಅರವಿಂದನಾಭವೆಂಬೊ ಅಂಗಿಯ ತೊಟ್ಟು || ನರಹರಿನಾಮವೆಂಬೊ ನಡುಕಟ್ಟನೆ ಸುತ್ತಿ | ಕರುಣಾಸಾಗರನೆಂಬೊ ಕಠಾರಿಯನು ಸಿಕ್ಕಿಸಿ 1 ಕಮಲನಾಭವೆಂಬೊ ಕಮಲದಾನಿ ಪಿಡಿದು | ತಿಮಿರದೋಷವೆಂಬೊ ಪಾಯಿಪೋಸು ಮೆಟ್ಟಿ || ಶಮೆದಮೆಯೆಂಬೊ ಪರಿಚಾರಕರ ಒಡಗೊಂಡು ಗಮಿಸಿದ್ದೆನೊ ಹರಿದಾಸರಿದ್ದ ಚಾವಡಿಗೆ 2 ಪೋಗಿ ನಮಸ್ಕಾರವೆಂದು ತಲೆಬಾಗಿ ನಿಲ್ಲಲು | ಭಾಗವತರು ಕರೆದು ಇಂಬನಿತ್ತು || ಯೋಗಕ್ಷೇಮವೆಲ್ಲ ವಿಚಾರಿಸಿ ಪ್ರೀತಿಯಲಿ | ಈಗಳೆ ಕುಳಿತ ಅಚ್ಯುತನ ತೋರಿದರು 3 ಕಂಡು ಕರವನು ಮುಗಿಯೆ ಕರುಣಾಸಾಗರನೆಂಬೊ | ಮಂಡಲಾಧಿಪನು ಕರೆದು ಮನ್ನಿಸಿ || ಗಂಡುಗಲಿಯಾಗೆಂದು ಸಂಚುಗಾರಿಕೆ ತುಲಸಿ | ದಂಡೆ ಕೊರಳಿಗೆ ಹಾಕಿ ದಾಸರೊಳಗಿರಿಸಿದನು 4 ಘನವಾದ ಉದ್ಯೋಗ ದೊರಕಿತು ನನಗಿನ್ನು | ಅನುಮಾನವಿಲ್ಲವು ಎಂದೆಂದಿಗೂ || ದಿನದಿನಕೆ ಹರಿನಾಮವೆಂಬೊ ಲೆಖ್ಖ-| ವನು ಬರೆದು ತ್ರಿಲೋಕದರಸನಿಗೆ ಒಪ್ಪಿಸಿದೆ || 5 ಬರೆದು ಲೆಖ್ಖವ ನೋಡಿ ದಯಾಪಯೋವಾರಿಧಿ | ಹರುಷದಿಂದಲಿ ಎನಗೆ ಸಂಬಳಕ್ಕೆ || ಬರೆಸಿ ಕೊಟ್ಟನು ಸನದು ಕೇಶವಾದಿಯಂಬೊ | ವರಹಗಳು ಎಂದಿಗಾದರು ಅಳಿವಿಲ್ಲದೆ || 6 ಈಸು ದಿನ ಉದ್ಯೋಗ ಹೀನನಾಗಿ ನೊಂದೆ | ದಾಸರಾ ದಯದಿಂದ ದೊರೆಕಿತಿಂದು || ಸಂಚಿತ ಕರ್ಮ ಓಡಿಸಿ |ಶ್ರೀಶ ವಿಜಯವಿಠ್ಠಲನಲ್ಲಿ ಬಾಳಿದೆನೊ || 7
--------------
ವಿಜಯದಾಸ
ಷೋಡಶೋಪಚಾರ ಪೂಜೆಪೂಜಿಸುವೆನನವರತ ಪರಮ ಪುರುಷನನುನೈಜ ಮೂರ್ತಿಯನೀಗಲಭಿಮುಖಿಸಿ ನಿರ್ಗುಣದಿ ಪಹೃದಯಕಾಶಿಯಲಿಪ್ಪ ಜ್ಞಾನಗಂಗೆಯ ಮಿಂದುಮೃದುತರದ ಸತ್ವಗುಣವೆಂಬ ನಿತ್ಯಕರ್ಮವ ಮಾಡಿಒದಗಿ ಶಮೆದಮೆಯೆಂಬ ನಿತ್ಯಕರ್ಮವ ಮಾಡಿಮುದದಿಂದ ಪರಮಾತ್ಮನಿಹ ಮಂದಿರಕೆ ಬಂದು1ಧ್ಯಾನಪ್ರಣವ ಮಂಟಪದಲ್ಲಿ ಕನಕಮಯ ಪೀಠವನುತನುಕರಣಮನಃಪ್ರಕೃತಿ ಯೆಂಬ ನೆಲೆಗಳನುಅನುಕೂಲದಿಂ ರಚಿಸಿ ಸಚ್ಚಿದಾನಂದನನುಮನದಲ್ಲಿ ಧ್ಯಾನವನು ಬಳಿಕೀಗ ಮಾಡುವೆನು2ಆವಾಹನ-ಆಸನ-ಪಾದ್ಯದೇಶಕಾಲಾತೀತ ಪರಿಪೂರ್ಣನಾಗಿರುವವಾಸುದೇವನನೊಮ್ಮೆಯಾವಾಹಿಸುವೆನುಆಸನವನೀವೆ ಸರ್ವಾಧಾರವಸ್ತುವಿಗೆದೋಷರಹಿತನ ಪಾದಗಳ ತೊಳೆವೆನೊಲವಿನಲಿ 3ಅಘ್ರ್ಯ-ಆಚಮನ-ಮಧುಪರ್ಕಬೆಲೆರಹಿತಗಘ್ರ್ಯವನು ನೆರೆಕೊಟ್ಟು ಕರಗಳಿಗೆಸಲಿಲದಿಂ ಶುದ್ಧನಿಗೆ ಶುದ್ದಾಚಮನವಸಲಿಸಿ ಮಧುಪರ್ಕವನು ಕ್ಷೀರಸಾಗರಗಿತ್ತುವಿಲಯಾದಿ ಪಂಚಪದಗೆರೆದು ಪಂಚಾಮೃತವ 5ಸ್ನಾನ-ವಸ್ತ್ರಸ್ಮರಿಸಿದರೆ ಸಂಸಾರಮಲವಳಿವ ಮಹಿಮನಿಗೆಸುರನದಿಯ ಪಡೆದವನಿಗಭಿಷೇಕಗೊಳಿಸಿನಿರತ ದಿಗ್ವಸ್ತ್ರನಿಗೆ ವರದುಕೂಲವನುಡಿಸಿಕರಣ ಪ್ರೇರಕನಿಗುಪವೀತದುಪಚಾರದಲಿ 5ಆಭರಣಅಷ್ಟವಿಧಗಂಧವನು ಅಷ್ಟಮದ ರಹಿತನಿಗೆನಿಷ್ಠೆುಂ ಭಕ್ತಿರಸದಿಂದ ಹದಗೊಳಿಸಿಅಷ್ಟ ವಿಧಮೂರುತಿಗೆ ಮುಟ್ಟ ಲೇಪವ ಮಾಡಿದುಷ್ಟಮದವನು ಕುಟ್ಟಿ ದಿವ್ಯ ಕುಂಕುಮವಿಟ್ಟು 7ಪುಷ್ಪ-ಧೂಪ-ದೀಪ-ನೈವೇದ್ಯ-ತಾಂಬೂಲಪರಿಪರಿಯ ಪುಷ್ಪಗಳ ನಿರ್ವಾಸನಗೆ ತಿಮಿರಹರಪ್ರಭಗೆ ಧೂಪದೀಪಂಗಳನು ಬೆಳಗಿಪರಿಪೂರ್ಣಕಾಮನಿಗೆ ಷಡುರಸಾನ್ನವನಿತ್ತುಪರಮ ಮಂಗಳಗೆ ತಾಂಬೂಲದುಪಚಾರದಲಿ 8ಕೋಟಿಸೂರ್ಯಪ್ರಭಗೆ ಕೋಟಿವರ್ತಿಗಳುಳ್ಳಮೀಟಾದ ಮಂಗಳಾರತಿಯ ಪಿಡಿದೆತ್ತಿಕೋಟಿ ಮೂವನ್ಮೂವರೂರ ಪುಷ್ಪವ ಚಂದ್ರಜೂಟಸಖ ತಿರುಪತಿಯ ವೆಂಕಟನ ಪದಕಿತ್ತು 9ಓಂ ಶ್ರೀಶಾಯ ನಮಃ
--------------
ತಿಮ್ಮಪ್ಪದಾಸರು
ನಮಿಸೊ ಗಂಧವಹಗೆ ಪ್ರತಿದಿನ ನಿನ್ನ |ಶ್ರಮವ ಕಳೆದು ಅಭೀಷ್ಟಿಯ ಕೊಡುವ ಮನುಜ ಪಹರಿಕರುಣಿಸದಿರೆಗುರುಕರುಣಿಸುವನು |ಗುರುಕರುಣಿಸದಿರೆಹರಿಜರೆವ ||ಧರೆಯೊಳು ವಾತಪ್ರಸಾದ ಸಂಪಾದಿಸಿ |ಶಿರಿವಲ್ಲಭಗೆ ಬೇಕಾದವರ ಕೇಳು ಮನುಜ 1ಹನುಮನೊಲಿದನೆಂದು ಒಲಿದ ಸುಗ್ರೀವಗೆ |ಮನಸಿಜಪಿತನು ತನ್ನಯಚರಣ|ಘನವಾಹ ಸುತ ಭಜಿಸಿದರಿನ್ನವಗೆ ಪ್ರಭಂ |ಜನನೊಲಿಯದಕೆ ಕೊಂದನು ಕೇಳೆಲೊ ಮನುಜ 2ದುರ್ಜನಾಂತಕಗೆ ಬೇಕಾದ ಕಾರಣದಿಂದ |ಅರ್ಜುನಾದಿಗಳು ಸುಖವ ಬಿಟ್ಟರು ||ಅಬ್ಜಾಪ್ತಸುತ ಅಸಮರ್ಥನೆ ರಣದೊಳು |ನಿರ್ಜಿತನಾಗಲು ತಿಳಕೊ ಇದು ಮನುಜ 3ಸುರರೆಲ್ಲ ಕೂಡಿ ನ್ಯಾಯವ ಮಾಡಿ ನೋಡಲು |ಸರಿಯಾಗಲಿಲ್ಲವು ಮಾರುತಗೆ ||ಗಳವುದ್ಭವಿಸಲುಮಥನಕಾಲದಿ ಆದಿತ್ಯರ |ಮೊರೆಕೇಳಿಪ್ರಾಶನ ಮಾಡಿದ ಮನುಜ 4ಶಮೆಯಲ್ಲಿ ದಮೆಯಲ್ಲಿ ಸರ್ವಗುಣದಲ್ಲಿ |ಪವಮಾನಗೆ ಸರಿಯುಂಟಾವನು ಜಗದಿ ||ಅಮಲ ಪ್ರಾಣೇಶ ವಿಠಲಗಲ್ಲದವನು |ಯಮ ಸದನಕೆ ಯೋಗ್ಯ ಯಮಗಲ್ಲೆಂಬ ಮನುಜ 5
--------------
ಪ್ರಾಣೇಶದಾಸರು
ಬಹಳ ಸಂತೋಷಿ ಭಕ್ತರು ಬಹಳ ಸಂತೋಷಿಬಹಳ ಸಂತೋಷಿ ಬಗಳ ಬಹಳ ಸಂತೋಷಿಪಕಾಂತಿಯೆಂಬ ಸತಿಯು ದೊರಕಲಿ ಬಹಳ ಸಂತೋಷಿಕಾಂತಿ ಎಂಬ ಕುಲಕುಡಿಬೆಳೆಯಲಿ ಬಹಳ ಸಂತೋಷಿ1ಕ್ಷಮೆಯು ಎಂಬ ಕ್ಷೇಮವು ಬೆಳೆಯಲಿ ಬಹಳ ಸಂತೋಷಿದಮೆಯು ಎಂಬ ದನಕರು ಹೆಚ್ಚಲಿ ಬಹಳ ಸಂತೋಷಿ2ಆತ್ಮ ಸಂತೋಷದಾ ಅಂಗಡಿ ನಡೆಯಲಿ ಬಹಳ ಸಂತೋಷಿಸ್ವಾತ್ಮಾನುಸುಖ ಸಾಮ್ರಾಜ್ಯ ದೊರೆಯಲಿ ಬಹಳ ಸಂತೋಷಿ3ಭೂತ ದಯೆಯ ಅಂಗಿಯ ತೊಡಿರಿ ಬಹಳ ಸಂತೋಷಿಖ್ಯಾತಿ ಎಂಬ ಕುಪ್ಪಸ ಹಾಕಿರಿ ಬಹಳ ಸಂತೋಷಿ4ಸೂಸಲಿ ಚಿದಾನಂದ ಕೃಪೆಯಿಂದಿಗೆ ಬಹಳ ಸಂತೋಷಿವಾಸವಮಾಡಲಿ ನಮ್ಮಲ್ಲಿ ಬಗಳೆ ಬಹಳ ಸಂತೋಷಿ5
--------------
ಚಿದಾನಂದ ಅವಧೂತರು