ಒಟ್ಟು 5 ಕಡೆಗಳಲ್ಲಿ , 3 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಮೂಲ್ಕಿಯ ನರಸಿಂಹ ದೇವರು) ರಕ್ಷಿಸು ಮನದಾಪೇಕ್ಷೆಯ ಸಲಿಸುತ ಲಕ್ಷ್ಮೀನರಹರಿ ರಾಕ್ಷಸವೈರಿ ಪ. ಅಕ್ಷಮ ದುಶ್ಯೀಲ ದುವ್ರ್ಯಾಪಾರದಿ ಕುಕ್ಷಿಂಭರನೆಂದುಪೇಕ್ಷೆಯ ಮಾಡದೆ ಅ.ಪ. ಉಭಯ ಶುಚಿತ್ವವು ಊರ್ಜಿತವೆನೆ ಜಗ- ದ್ವಿಭು ವಿಶ್ವಂಭರ ವಿಬುಧಾರಾದ್ಯ ಶುಭಮತಿ ಸಂಸ್ಥಿತಿಯಭಯವ ಪಾಲಿಸೊ ತ್ರಿಭುವನಮೋಹನ ಪ್ರಭು ನೀನನುದಿನ1 ಸಿಂಧುಶಯನ ನಿತ್ಯಾನಂದ ಗುಣಾಬ್ಧೇ ಹಿಂದಣ ಪಾಪವು ಮುಂದೆಸಗದ ರೀತಿ ಮಂದರಾದ್ರಿಧರ ಮಾಮವ ದಯಾಕರ 2 ಪಾಪಾತ್ಮರಲಿ ಭೂಪಾಲಕನು ನಾ ಶ್ರೀಪತಿ ಕರುಣದಿ ಕಾಪಾಡುವುದು ಗೋಪೀರಂಜನ ಗೋದ್ವಿಜರಕ್ಷಣ ಕಾಪುರುಷರ ಭಯ ನೀ ಪರಿಹರಿಸಯ್ಯ 3 ಸರ್ವೇಂದ್ರಿಯ ಬಲ ತುಷ್ಟಿ ಪುಷ್ಟಿಯಿತ್ತು ಸರ್ವಾಂತರ್ಯದೊಳಿರುವನೆ ಸಲಹೊ ದುರ್ವಾರಾಮಿತ ದುರ್ವಿಷಯದಿ ಬೇ- ಸರ್ವೇನು ಪನ್ನಗಪರ್ವತವಾಸನೇ 4 ಶರಣಾಗತನಾಗಿ ಸೆರಗೊಡ್ಡಿ ಬೇಡುವೆ ವರ ಮೂಲಿಕಪುರ ದೊರೆಯೇ ಹರಿ ಲಕ್ಷ್ಮೀನಾರಾಯಣ ತ್ರಿಜಗ ದ್ಭರಿತ ಉತ್ಪ್ರೇರಕ ಸ್ಥಿರಭಕ್ತಿಯನಿತ್ತು 5
--------------
ತುಪಾಕಿ ವೆಂಕಟರಮಣಾಚಾರ್ಯ
ತಪ್ಪ ಪಾಲಿಸಯ್ಯ ತಿಮ್ಮಯ್ಯ ತಪ್ಪ ಪಾಲಿಸಯ್ಯಪ. ತಪ್ಪ ಪಾಲಿಸದೆಯಿಪ್ಪರೆ ಯೆನ್ನೊಳು ಒಪ್ಪಿಗೆ ಪಟ್ಟೊಲಿಯಪ್ಪ ತಿಮ್ಮಪ್ಪನೆಅ.ಪ. ಜಲಜನಾಭ ನಿನ್ನ ಮಹಿಮೆಯ ನೆಲೆಯನರಿಯದೆನ್ನ ಮನವದು ನೆಲೆಯಿಲ್ಲದ ಭವಜಲಧಿಯೊಳಾಡುತ್ತ ಲಲನಾ ವಿಷಯದ ಬಲೆಗೆ ಮೋಹಿಸಿ ಮನ ಸಿಲುಕಿ ಮಲಿನವಾಯ್ತು ತತ್ವದ ನೆಲೆಯನರಿಯದಾಯ್ತು ಹೀಗೆನ್ನುತ ಕಳೆದುಹೋಯ್ತು ವಿಂಶತಿ ವತ್ಸರಗಳು ತೊಳಲಿ ಸಕಲ ಭವದೊಳಗಾರ್ಜಿತವಹ1 ಹಾಳು ಮನವು ಕೂಡಿ ನಾನಾ ಚಾಳಿ ಮಾಳ್ಪುದಾಡಿ ಬುದ್ಧಿಯ ಪೇಳಿದಷ್ಟು ದುಶ್ಯೀಲವೆ ಮಾಳ್ಪುದು ಆಲೋಚನೆಯೊಳಗೆ ಬಿದ್ದರೆ ಮೇಲಿಲ್ಲವು ಕ್ಷಣಕೆ ತನ್ನಯ ಶೀಲವನೆ ಸ್ವೀಕರಿಸುತಿರುವುದು ಪೇಳಲೇನು ಕರುಣಾಳು ನೀ ಯೆನ್ನಯ2 ನಾನಾ ಕಷ್ಟಪಟ್ಟೆ ಇನ್ನಾದರು ಮಾನಿಸಬೇಕಷ್ಟೆ ಎನ್ನೊಳು ಊನ ಗ್ರಹಿಸಿ ಅನುಮಾನ ಸಾಧಿಸಿದರೆ ನಾನೆಂಬುವದೇನು ಸ್ವತಂತ್ರವ ಕಾಣೆನು ಎನ್ನೊಳಗೆ ಸಂತತ ನೀನೇ ಗತಿಯೆನಗೆ ಇದಕನು- ಮಾನವಿಲ್ಲ ಪಾದಾನತಜನರಾ ಧೀನನೆಂಬ ಬಿರುದಾನಬೇಕಾದರೆ3 ಅಪರಾಧಿಯೆ ನಾನು ಹೇಗೈ ಅಖಿಲಾತ್ಮನು ನೀನು ಹೃದಯದಿ ಕೃಪೆಯ ಬೀರಿ ತೋರಿಪ ಪರಮಾತ್ಮನೆ ಚಪಲನಾಗಿ ಎನ್ನುಪಮೆಗೆಯೊಡ್ಡಿದೆ ಸಫಲವಾಯ್ತು ಎನಗೆ ಕೀರ್ತಿಯು ಅಪಕೀರ್ತಿಯು ನಿನಗೆ ಪಾದವ ಜಪಿಸುವಂತೆ ಕರುಣಿಪುದಿನ್ನಾದರೂ ಕಪಟವಾಯ್ತೆ ಸರೀಸೃಪಗಿರಿರಾಜನೆ4 ದೂಷಣಾರಿ ನಿನ್ನ ಪಾದದ ದಾಸಗೈಯ್ಯೊ ಎನ್ನ ಎನ್ನೊಳು ದೋಷವಿಲ್ಲ ಜಗದೀಶ ಜನಾರ್ದನ ದಾಶರಥಿಯ ಕರುಣಾಶರಧಿಯೊಳಗೆ ಈಸಾಡಿದ ದಾಸ ಕಾರ್ಕಳಾ ಧೀಶ ಶ್ರೀನಿವಾಸ ರವಿಶತ ಭಾಸ ಶ್ರೀಲಕ್ಷ್ಮೀನಾರಾಯಣ ಸ ರ್ವೇಶ ಭಕ್ತಜನಪೋಷ ನೀಯೆನ್ನಯ5
--------------
ತುಪಾಕಿ ವೆಂಕಟರಮಣಾಚಾರ್ಯ
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
(ಮೂಲ್ಕಿಯ ನರಸಿಂಹ ದೇವರು)ರಕ್ಷಿಸು ಮನದಾಪೇಕ್ಷೆಯ ಸಲಿಸುತಲಕ್ಷ್ಮೀನರಹರಿ ರಾಕ್ಷಸವೈರಿ ಪ.ಅಕ್ಷಮ ದುಶ್ಯೀಲ ದುವ್ರ್ಯಾಪಾರದಿಕುಕ್ಷಿಂಭರನೆಂದುಪೇಕ್ಷೆಯ ಮಾಡದೆ ಅ.ಪ.ಉಭಯ ಶುಚಿತ್ವವು ಊರ್ಜಿತವೆನೆ ಜಗ-ದ್ವಿಭುವಿಶ್ವಂಭರವಿಬುಧಾರಾದ್ಯಶುಭಮತಿ ಸಂಸ್ಥಿತಿಯಭಯವ ಪಾಲಿಸೊತ್ರಿಭುವನಮೋಹನ ಪ್ರಭು ನೀನನುದಿನ 1ತಂದೆಯ ಮುನಿಸಿನ ಕಂದನ ಸಲಹುತಸಿಂಧುಶಯನ ನಿತ್ಯಾನಂದ ಗುಣಾಬ್ಧೇಹಿಂದಣ ಪಾಪವು ಮುಂದೆಸಗದ ರೀತಿಮಂದರಾದ್ರಿಧರ ಮಾಮವ ದಯಾಕರ 2ಪಾಪಾತ್ಮರಲಿ ಭೂಪಾಲಕನು ನಾಶ್ರೀಪತಿ ಕರುಣದಿ ಕಾಪಾಡುವುದುಗೋಪೀರಂಜನ ಗೋದ್ವಿಜರಕ್ಷಣಕಾಪುರುಷರ ಭಯ ನೀ ಪರಿಹರಿಸಯ್ಯ 3ಸರ್ವೇಂದ್ರಿಯ ಬಲತುಷ್ಟಿಪುಷ್ಟಿಯಿತ್ತುಸರ್ವಾಂತರ್ಯದೊಳಿರುವನೆ ಸಲಹೊದುರ್ವಾರಾಮಿತ ದುರ್ವಿಷಯದಿ ಬೇ-ಸರ್ವೇನು ಪನ್ನಗಪರ್ವತವಾಸನೇ 4ಶರಣಾಗತನಾಗಿ ಸೆರಗೊಡ್ಡಿ ಬೇಡುವೆವರಮೂಲಿಕಪುರ ದೊರೆಯೇಹರಿಲಕ್ಷ್ಮೀನಾರಾಯಣತ್ರಿಜಗದ್ಭರಿತ ಉತ್ಪ್ರೇರಕ ಸ್ಥಿರಭಕ್ತಿಯನಿತ್ತು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಪ್ಪ ಪಾಲಿಸಯ್ಯ ತಿಮ್ಮಯ್ಯತಪ್ಪ ಪಾಲಿಸಯ್ಯ ಪ.ತಪ್ಪ ಪಾಲಿಸದೆಯಿಪ್ಪರೆ ಯೆನ್ನೊಳುಒಪ್ಪಿಗೆ ಪಟ್ಟೊಲಿಯಪ್ಪ ತಿಮ್ಮಪ್ಪನೆ ಅ.ಪ.ಜಲಜನಾಭ ನಿನ್ನ ಮಹಿಮೆಯನೆಲೆಯನರಿಯದೆನ್ನ ಮನವದುನೆಲೆಯಿಲ್ಲದ ಭವಜಲಧಿಯೊಳಾಡುತ್ತಲಲನಾ ವಿಷಯದ ಬಲೆಗೆ ಮೋಹಿಸಿ ಮನಸಿಲುಕಿ ಮಲಿನವಾಯ್ತು ತತ್ವದನೆಲೆಯನರಿಯದಾಯ್ತು ಹೀಗೆನ್ನುತಕಳೆದುಹೋಯ್ತು ವಿಂಶತಿ ವತ್ಸರಗಳುತೊಳಲಿ ಸಕಲ ಭವದೊಳಗಾರ್ಜಿತವಹ 1ಹಾಳು ಮನವು ಕೂಡಿ ನಾನಾಚಾಳಿ ಮಾಳ್ಪುದಾಡಿ ಬುದ್ಧಿಯಪೇಳಿದಷ್ಟು ದುಶ್ಯೀಲವೆ ಮಾಳ್ಪುದುತಾಳೆಂದರೆ ಒಂದು ವೇಳೆಗೆ ಸುಮತಿಯಆಲೋಚನೆಯೊಳಗೆ ಬಿದ್ದರೆಮೇಲಿಲ್ಲವು ಕ್ಷಣಕೆ ತನ್ನಯಶೀಲವನೆ ಸ್ವೀಕರಿಸುತಿರುವುದುಪೇಳಲೇನು ಕರುಣಾಳು ನೀ ಯೆನ್ನಯ 2ನಾನಾ ಕಷ್ಟಪಟ್ಟೆ ಇನ್ನಾದರುಮಾನಿಸಬೇಕಷ್ಟೆ ಎನ್ನೊಳುಊನ ಗ್ರಹಿಸಿ ಅನುಮಾನ ಸಾಧಿಸಿದರೆನಾನೆಂಬುವದೇನು ಸ್ವತಂತ್ರವಕಾಣೆನು ಎನ್ನೊಳಗೆ ಸಂತತನೀನೇ ಗತಿಯೆನಗೆ ಇದಕನು-ಮಾನವಿಲ್ಲ ಪಾದಾನತಜನರಾಧೀನನೆಂಬ ಬಿರುದಾನಬೇಕಾದರೆ 3ಅಪರಾಧಿಯೆ ನಾನು ಹೇಗೈಅಖಿಲಾತ್ಮನು ನೀನು ಹೃದಯದಿಕೃಪೆಯ ಬೀರಿ ತೋರಿಪ ಪರಮಾತ್ಮನೆಚಪಲನಾಗಿ ಎನ್ನುಪಮೆಗೆಯೊಡ್ಡಿದೆಸಫಲವಾಯ್ತು ಎನಗೆ ಕೀರ್ತಿಯುಅಪಕೀರ್ತಿಯು ನಿನಗೆ ಪಾದವಜಪಿಸುವಂತೆ ಕರುಣಿಪುದಿನ್ನಾದರೂಕಪಟವಾಯ್ತೆ ಸರೀಸೃಪಗಿರಿರಾಜನೆ 4ದೂಷಣಾರಿ ನಿನ್ನ ಪಾದದದಾಸಗೈಯ್ಯೊ ಎನ್ನ ಎನ್ನೊಳುದೋಷವಿಲ್ಲ ಜಗದೀಶ ಜನಾರ್ದನದಾಶರಥಿಯ ಕರುಣಾಶರಧಿಯೊಳಗೆಈಸಾಡಿದ ದಾಸ ಕಾರ್ಕಳಾಧೀಶ ಶ್ರೀನಿವಾಸ ರವಿಶತಭಾಸ ಶ್ರೀಲಕ್ಷ್ಮೀನಾರಾಯಣ ಸರ್ವೇಶ ಭಕ್ತಜನಪೋಷ ನೀಯೆನ್ನಯ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ