ಒಟ್ಟು 32 ಕಡೆಗಳಲ್ಲಿ , 15 ದಾಸರು , 30 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಖಿಳ ಗುಣಗಣ ಪೂರ್ಣ ಪ ಅಂಬುಜಾಸನ ಜನಕ ನರಹರಿ ಅಂಭ್ರಣೀ ಜಗನ್ನಾಥ ನಾಯಕ ಬಿಂಬ ವಿಷ್ಣುವೆ ನಿಖಿಳವಿಶ್ವಕೆ ತುಂಬಿ ಭಕ್ತಿಯ ಕಾಯೋ ಕರುಣಿ ಯೇ ಅ.ಪ. ತಂದೆಕಾರಣ ಭವದೀ- ನೀ ಎನ್ನ ಬಂದೆನಲ್ಲದೆ ನಿಜದೀ- ಸುಖಪೂರ್ಣ ನಿಂದು ನಡೆಸದೆ ಭವದೀ- ದಾಟಿನ್ನ ಎಂದಿಗಾದರು ಗೆಲ್ಲುವೆನೆ ಘನ್ನ ಬಂಧನಪ್ರದ ನೀ ಬಂಧಮೋಚಕ ತಂದ ವಿಷ್ಣುವೆ ಮೂಲಕಾರಣ ವೆಂದು ಶೃತಿಗಳವೃಂದ ನುಡಿವುವು ಬಂದು ನಿನಗಿಂತಧಿಕರಾರೈ ನಿಂದು ಹೃದಯದಿ ಸರ್ವಕಾಲದಿ ತಂದು ಉಣಿಸುವೆ ಸಕಲ ವಿಷಯವ ಬಂಧಿ ನಾನಿಹೆ ಜಡವೆ ನೀ ಬಿಡೆ ಮುಂದಿನಾಗತಿ ಬೇಗ ತೋರೈ ಇಂದಿರೇಶ ಮಹೇಂದ್ರ ಸುಖಮಯ ಕಂದರಾಶ್ರಯ ಬ್ರಹ್ಮಮಂದಿರ ನಂದಿವಾಹನ ತಾತ ವಿಭುವರ ಚಂದಗೋಚರ ಸಾರ್ವಭೌಮನೆ ಕೂಂದುನಕ್ರನ ಗಜವ ಸಲಹಿದೆ ನಂದನೀಡಿದೆ ಪಾರ್ಥಮಡದಿಗೆ ತಿಂದು ಎಂಜಲ ಕಾಯ್ದೆ ಶಬರಿಯ ಗಂಧ ಕೊಳ್ಳುತ ಕಾಯ್ದೆ ಕುಬ್ಜೆಯ ಕಂದ ಕೂಗಲ್ ಬಂದೆ ಕಂಭದಿ ಇಂದ್ರ ಗೋಸುಗ ಬಲಿಯ ಬೇಡದೆ ಮಂದರಾದ್ರಿಯ ಪೊತ್ತೆ ಸುರರಡೆ ಸುಂದರಾಂಗಿಯುಆದೆ ಹಾಗೆಯೆ ಹಿಂದೆ ಈತೆರ ನಿತ್ಯತೃಪ್ತನೆ ಬಂದು ಸಲಹಿದ ಭಕ್ತವೃಂದವ ಮಂದನಾದರು ಶರಣುಬಿದ್ದವ ನೆಂದು ಸಲಹೈ ಪೂರ್ಣಕರುಣಿಯೇ1 ಕೂಡಿಸುತ ಮನ ವಿಷಯ ಬಲೆಯಲ್ಲೀ ಮಾಡಿಸುವೆ ಮಾಡಿದ್ದ ದಿನದಿನದೀ ಗೂಢ ನಿನ್ನಯ ಭಕ್ತಿ ಕೊಡಲೊಲ್ಲೀ ಕೇಡುಮೋಹ ಸಜಾಡ್ಯ ಹರಿಸಿಲ್ಲೀ ಓಡಿಓಡಿಸೆ ಜಗವು ನಡೆವುದು ನೋಡಿನೋಡಿಸೆ ನಾವು ನೋಳ್ಪೆವು ಮಾಡಿಮಾಡಿಸೆ ಕರ್ಮವಾಹುದು ಪ್ರೌಢ ನಿನ್ನಯ ಬಲದ ವಿಶ್ವಕೆ ಕಾಡಿಕಾಡಿಪ ವಿಷಯ ಬಿಡಿಸುತ ಹಾಡಿಹಾಡಿಸಿ ನಿಮ್ಮ ಕೀರ್ತನೆ ಆಡಿಆಡಿಸಿ ಸಾಧುಸಂಗದ ಜಾಡುತೋರಿಸೊ ಭಕ್ತಿ ಮಾರ್ಗದ ಕ್ರೋಢನರಹರಿ ಮತ್ಸ್ಯವಾಮನ ಪ್ರೌಢ ಭಾರ್ಗವ ರಾಮಕೃಷ್ಣನೆ ಗಾಡಿಕಾರ ಪರೇಶ ಬುದ್ಧನೆ ದೂಡು ಕಲಿಯನು ಕಲ್ಕಿದೇವನೆ ಕೂಡು ಮನದಲಿ ಬಾದರಾಯಣ ನೀಡು ಜ್ಞಾನವ ಜೀಯ ಹಯಮುಖ ಮಾಡು ದತ್ತಾತ್ರೇಯ ಕೃಪೆಯನು ಈಡುಕಾಣದು ಕಪಿಲಮೂರ್ತಿಯೆ ಬೀಡುಗೈದಿಹ ಬೀಜ ನಿದ್ರೆಯು ನೋಡಗೊಡದೈ ನಿನ್ನತುರ್ಯನೆ ನಾಡುದೈವಗಳನ್ನು ಭಜಿಸಲು ಓಡದದು ಎಂದೆಂದು ಸತ್ಯವು ಮಾಡುತಲಿ ಸಾಷ್ಟಾಂಗ ನತಿಗಳ ಜೋಡಿಸಿಹೆ ಶಿರ ಪಾದಪದ್ಮದಿ ಗಾಢಪ್ರೇಮದಿ ಸಲಹು ಭೂಮನೆ ಮೂಡಿಸುತನಿಜ ಭಕ್ತಿ ಜ್ಞಾನವ 2 ಎನ್ನ ಯೋಗ್ಯತೆ ನೋಡೆ ಫಲವಿಲ್ಲ ನಿನ್ನಕೃಪೆ ತೋರದಿರೆ ಗತಿಯಿಲ್ಲ ಅನ್ಯ ಹಾದಿಯು ಯಾವುದೆನಗಿಲ್ಲ ಘನ್ನಚಿತ್ತಕೆ ಬರಲು ತಡಿಯಿಲ್ಲ _ ಹೇನಲ್ಲ ಪೂರ್ಣಜ್ಞಾನಾನಂದ ಶಾಶ್ವತ ಪೂರ್ಣ ಚಿನ್ಮಯ ಪೂರ್ಣ ಮೂಲದಿ ಪೂರ್ಣ ನಂದದಿ ಪೂರ್ಣ ಅವಯವಿ ಪೂರ್ಣಶಕ್ತನೆ ಪೂರ್ಣಬೋಧ ಮುನೀಂದ್ರ ವಂದಿತ ಶರಧಿ ದೇವನೆ ಪೂರ್ಣನಿತ್ಯಾನಂದ ದಾಯಕ ಪೂರ್ಣಮಾಡೈ ಬಯಕೆ ತೂರ್ಣದಿ ನೀನೆ ಸರ್ವಾಧಾರ ಪ್ರೇರಕ ನೀನೆ ರಕ್ಷಕ ಸರ್ವಶಿಕ್ಷಕ ನೀನೆ ಸೀಮಾಶೂನ್ಯ ನಿಶ್ಚಯ ನೀನೆಪೊಗಳಿತನಿಖಿಳವೇದದಿ ನೀನೆ ವಾಚ್ಯನು ಸರ್ವಶಬ್ದದಿ ನೀನೆ ಮುಕ್ತಾಯಕ್ತ ಸೇವಿತ ನೀನೆ ದೋಷವಿದೂರ ಸ್ಥಾಣುವು ನೀನೆ ಸೃಷ್ಟಾ ದ್ಯಷ್ಟಕರ್ತೃವು ನಿನ್ನಸಮ ಉತ್ಕøಷ್ಟರಿಲ್ಲವು ನಿನ್ನ ದಾಸರು ಸರ್ವಜೀವರು ಭಿನ್ನರೈ ಸರ್ವತ್ರ ಸರ್ವರು ನಿನ್ನ ದಾಸರ ಭಾಗ್ಯಬೇಡುವೆ ಜನ್ಮಜನ್ಮಕು ಇದನೆ ಬಯಸುವೆ ನಿನ್ನ ನಂಬಿಹೆ ನಿನ್ನನಂಬಿಹೆ ಸಿರಿಪತಿ ಕೃಷ್ಣವಿಠಲನೇ 3
--------------
ಕೃಷ್ಣವಿಠಲದಾಸರು
ನೋಡಿರಿ ರಾಘವೇಂದ್ರರ ಮಾಡಿರಿ ನಮಸ್ಕಾರ ಬೇಡಿದ ಇಷ್ಟ ವರ ನೀಡುವರು ನಮ್ಮ ಯತಿವರ ಪ ಮಂತ್ರಾಲಯದಿ ನಿಂತಿಹ ಚಿಂತೆಗಳ ಪರಿಹರಿಸುವ ಕಂತುಪಿತನನಂತಗುಣ ತನ್ನಂತರಂಗದಿ ಸ್ತುತಿಸುವ ಇಂಥ ಯತಿಗಳ ಕಾಣೆ ಹರಿಯೇಕಾಂತ ಭಕ್ತರೆನಿಸಿಕೊಂಡು ಮಂತ್ರಾಕ್ಷತೆ ಫಲ ನೀಡಿ ತಾ ಸಂತಾನ ಸಂಪತ್ತು ಕೊಡುವರ 1 ವಾತ ಪಿತ್ತ ವ್ಯಾಧಿಗಳ ಸೇತು (ಶ್ವೇತ?) ಕುಷ್ಠರೋಗಗಳ ಪಾತಕಿಯರ ಪಾಪಗಳ ಪ್ರೀತಿಲಿಂದ ಕಳೆವರೊ ಪ್ರಖ್ಯಾತರಾಗಿ ಬೆಳೆವರೊ ಭೂತಳದಿ ಸನ್ನೀತ (ಸನ್ನಿಹಿತ?) ರಾದ ಸೀತಾಪತಿ ನಿಜದೂತರೆನಿಸೋರು 2 ಭಜಸÉ ಭಕ್ತರ ನೋಡುವ ಸದನಕೆ ಬಂದುಕೂಡುವ ಒದಗಿದಾಪತ್ತು ದೂಡುವ ಬಂದು ಮುದದಿ ತಾ ದಯಮಾಡುವ ಅಜನಯ್ಯನ ಕೊಂಡಾಡುತ ತುಂಗಾನದಿಯ ತೀರ ವಾಸವಾಗಿ ಹೃದಯದೊಳು ಭೀಮೇಶ ಕೃಷ್ಣನ ಪದವ ಭಜಿಸಿ ಪಡೆವರಾನಂದವ3
--------------
ಹರಪನಹಳ್ಳಿಭೀಮವ್ವ
(ಉಂಗುರ ಕಳೆದಾಗ ಮಾಡಿದ ಪ್ರಾರ್ಥನೆ) ಬೇಡಿಕೊ ಮೂಢಾ ಬೇಡಿಕೊ ಬೇಡಿಕೊ ಭಕ್ತವತ್ಸಲನಲ್ಲಿ ಭಕ್ತಿ ಮಾಡು ಪೂಜೆಯನು ಯಥಾಮತಿ ಶಕ್ತಿ ದೂಡುತ್ತ ದುರುಳರ ಕುಚಿತ್ತಯುಕ್ತಿ ರೂಢಿವಳಗೆ ಸಂಗ್ರಹಿಸು ವಿರಕ್ತಿ ಪ. ಲಾಭಾಲಾಭ ಜಯಾಪಜಂiÀiಗಳು ಸ್ವಾಭಾÀವಿಕವಾಗಿ ಬಹ ಹಗಲಿರುಳು ನಾ ಭಾಗಿ ವರದನ ಪದ ಪದ್ಮ ನೆರಳು ನೀ ಭಜಿಸಿದ ಮೇಲೆ ಬಾಯೊಳು ಬೆರಳು 1 ಯತ್ನವಿಲ್ಲದೆ ಬಹ ನಷ್ಟಗಳಂತೆ ರತ್ನ ಭಂಗಾರ ಸಿಕ್ಕುವುದ್ಯಾಕೆ ಚಿಂತೆ ನೂತ್ನವಾದ ಮೋಹವನು ಬಿಡು ಭ್ರಾಂತೆ ರತ್ನಗರ್ಭವ ನಂಬಿರುವುದೆ ನಿಶ್ಚಿಂತೆ 2 ಅರಿ ಮಿತ್ರೋದಾಸೀನರಿಲ್ಲವು ಹರಿಗೆ ಸರಿಯಾಗಿ ನಡೆಸುವ ಸರ್ವ ಜೀವರಿಗೆ ಪರ ವಸ್ತು ನೀನೆಂದು ಸೇವೆ ಮಾಳ್ಪರಿಗೆ ಸುರ ವೃಕ್ಷದಂತೆ ಕಾರಣವಾಹ ಸಿರಿಗೆ 3 ಋಣವಿಲ್ಲದೆ ವಸ್ತು ಕ್ಷಣವಾದರಿರದು ಉಣುವ ಭೋಗಗಳೆಂದು ತಪ್ಪವು ನೆರದು ಅಣು ಮಹತ್ತುಗಳಂತರಾತ್ಮನ ಬಿರುದು ಗಣನೆ ಮಾಳ್ಪರ ಕೂಡಿ ನೆನೆ ಮನವರಿದು 4 ಆಶಾ ಪಾಶದಿ ಸಿಕ್ಕಿ ಕೆಡದಿರು ವ್ಯರ್ಥ ಶ್ರೀಶನ ನೆನೆವುದೆ ಸಕಲ ವೇದಾರ್ಥ ಶೇಷಗಿರೀಶನು ಸತ್ಪುರುಷಾರ್ಥ ದಾಸಗೆ ತಾನಾಗಿ ಕೊಡಲು ಸಮರ್ಥ5
--------------
ತುಪಾಕಿ ವೆಂಕಟರಮಣಾಚಾರ್ಯ
(ಲಾವಣಿ ಧಾಟಿ) ಕರುಣಾಳು ಕರುಣಾಳು ನಾನಿನಗೆ ಶರಣ್ಯನಾಗಿರೆ ದುರಿತದ ಭಯವ್ಯಾಕೆ ಬಲು ಜೋಕೆ ಪ. ಬಲು ಜೋಕೆಯಿಂದ ನೀ ಸ್ವೀಕರಿಸೆನ್ನ ದ- ಯಾಕರ ತ್ವರೆಯಿಂದ ಸುರವಂದ್ಯ 1 ಪಾದ ಮನ್ಮಂದಿರದ ಲಾ- ನಂದ ಬೀಜಬಿತ್ತು ಫಲವಿತ್ತು 2 ಫಲವಿತ್ತು ಸಲಹು ಪುರುಷೋತ್ತಮ ಸುಲಲಿತ ವರ್ತುಳ ಶುಭನಾಭ ಕರಶೋಭ 3 ಚಕ್ರಧರ ವಾರಿತದಾನವ ವೀರ ವಿದ್ಯಾಧೀರ ಜಲಧಾರಾ 4 ಜಲಧಾರಾಕರ ನಿಭ ಭೂರಮೇಶ ದು- ರ್ವಾರ ದುರಿತನಾಶ ಸರ್ಪೇಶ 5 ಸರ್ಪೇಶ ಗಿರೀಂದ್ರ ಸಮರ್ಪಿತ ವಿಗ್ರಹ ನಿತ್ಯದಿ ಕಾಪಾಡೊ ದಯಮಾಡು 6 ದಯಮಾಡು ದುರ್ಮತಿಯ ದೂಡು ಕಟಾಕ್ಷದಿ ನೋಡುತ ನಲಿದಾಡು 7
--------------
ತುಪಾಕಿ ವೆಂಕಟರಮಣಾಚಾರ್ಯ
ಅರಿವಿನ ಅರಿವಾ ತಿಳಿ ಜೀವಾ ಆನಂದರೂಪದ ಸಿರಿಯಾ ಅದೇ ನೀನು ಜೀವಾ ಜೀವಾ ಅದೇ ನೀನು ಜೀವಾ ಪ ಅನಿಸಿಕೆಯಡಗಲು ಉಳಿಯುವ ಸತ್ಯವೆ ನೀನಿಹೆ ನೀನಿಹೆ ಮನಸಿನ ತೋರಿಕೆಅಡಗುವಿಕೆಗಳಿಂ ಬೇರಿಹೆ ಬೇರಿಹೆ ಈ ನಾನೆಂಬುದು ಮನಸಿನದು ಆನಾನೆ ನೀನಾಗಿರುವಿ ಅದೇ ನಿಜವು ಜೀವಾ 1 ಪರಿ ನೋಡು ನೀ ನೋಡು ನೀ ನಾನಾವಿಧಗಳು ಪುಸಿಯಾಗಿಹವೈ ದೂಡು ನೀ ದೂಡು ನೀ ಆನಂದಾತ್ಮನೆ ನೀನಿರುವೀ ಆನಂದದಿಂದಲಿ ತಿಳಿಯೈಶಂಕರಾನಂದಬೋಧಾ ತಿಳೀನೀನೆ ನಿನ್ನೋಳ್ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಇಂದು ಕಂಡೇ ಪ ಪಾದ ಭಜನೆ ಮಾಡುವದೊಂದೆ ಅ.ಪ. ಪುಟ್ಟಿದಾರಾಭ್ಯ ಬಹುದಿಟ್ಟನಾಗಿಯೆ ಬಾಳು ಅಟ್ಟಿಮೆರೆಯುವ ಬಯಕೆ ವಿಟ್ಟು ಮನದಲಿ ಬಹಳ ಕಷ್ಟಪಟ್ಟೆನು ಘಳಿಸೆ ವಿತ್ತರಾಶಿಯ ವಿಪ್ರ ಶ್ರೇಷ್ಟಧರ್ಮವ ಬಿಟ್ಟು ವ್ಯರ್ಥ ವಿದ್ಯೆಯ ನೋದಿನೋದಿ ಅಷ್ಟಕರ್ತನು ಬಯಕೆ ಬಟ್ಟಬಯಲನು ಗೈದು ಕೊಟ್ಟು ಜ್ಞಾನದ ಕಣ್ಣು ನೆಟ್ಟನೆ ನೊಡೆನಲು ಬಟ್ಟು ಸುಖವನೆ ಮೆಲ್ವ ಜಟ್ಟಿ ಜಗದಲಿ ಕಾಣೆ ಭವ ಸುಖಕೆ 1 ಹೆಂಡತಿಯ ಸುಖವೆಂದೆ ಕೆಂಡಬಡತನ ಸೋಕೆ ಗಂಡು ಬಯಕೆಗಳೆಲ್ಲ ಉಂಡುದಣಿಯಲಿಲ್ಲ ಮಂಡೆ ಚಚ್ಚುತ ನಿತ್ಯ ತುಂಡು ಆದಳು ಅವಳು ಬೆಂಡು ಆದೆನುನಾನು ಹಿಂಡು ಬಳಗಗಳೆಲ್ಲ ಉಂಡು ದಣಿದರು ನಗೆಯ ಹಿಂಡಿ ಪರಜನ ಪ್ರಾಣ ಉಂಡು ಬದುಕಿಹೆ ಸ್ವಾಮಿ ಮುಂಡೆ ಗಿಂತಲು ಹೀನ ಷಂಡನಾಗಿಹೆ ಸ್ವಾಮಿ ಪಾಂಡುರಂಗನೆ ನಿನ್ನ ತೊಂಡನಾದರೆ ಧನ್ಯ 2 ವಿತ್ತ ಗಂಟು ಇಲ್ಲದಮೇಲೆ ಗಂಟುಮೋರೆಯ ನೇಮ ಒಂಟಿಗನೆ ಜೀವನಿಹ ನೆಂಟ ಬಿಂಬನೆ ಒಬ್ಬ ಭಂಟನೆಂದರೆ ಪಿಡಿವ ಶುಂಠ ಬಿಟ್ಟವ ಸತ್ಯ ಕಂಟಕವು ವಿಷಯತತಿ ಕಜ್ಜಿತಿನಸಿನ ತೆರದಿ ಎಷ್ಟು ಸೇವಿಸಲಷ್ಟು ತಂಟೆನೀಡುವವೇನೆ ಕುಂಠವಾದರು ಕರುಣ ಅಂಟಿಮನಸಿಗೆ ಭಾಧೆ ಉಂಟುಮಾಡುವವು ವೈಕುಂಠ ನಾಯಕಕಾಯೊ 3 ಬಾಡಿಗೆಯ ಮನೆಯಂತೆ ಗಾತ್ರವಿದು ಜೀವನಿಗೆ ಹೂಡಿಹನು ಭವಯಾತ್ರೆ ಓಡಿಹೊಹುದು ತಾನೆ ಆಗಿ ಮುಗಿಯಲು ಆಟ ಪ್ರೌಡ ಹರಿಪುರ ದಾರಿ ನೋಡಿಕೊಂಡವ ಜಾಣ ಕೇಡು ಮತ್ತಗೆ ಸಿದ್ಧ ಮಾಡುತಲಿ ವಿಧಿಗಳನು ದೂಡುತಲಿನಿಜೀವ ಕೂಡುತಲಿ ಸಜ್ಜನರ ಹಾಡುತಲಿ ಹರಿಗಾನ ಜೋಡಿಸುತ ಹರಿಭಕ್ತಿ ಬೇಡದಲೆ ಏನೊಂದು ಬಾಡದಿರೆ ದುಃಖ ಬರೆ ನೋಡುವನು ನಿಜ ಸುಖವ 4 ಹೆಂಡತಿಯು ಸುಗುಣಿ ಇರೆ ಗಂಡನಿಹ ದುರ್ಮಾರ್ಗ ಗಂಡ ಮೃದು ತರವೆನ್ನೆ ಹೆಂಡತಿಯು ಕರ್ಕಸಿಯು ಕುಂಡಲಿಯ ಸಿರಿಯೆನ್ನೆ ಮಂಡೆಯಲಿ ಮೆದುಳಿಲ್ಲ ಹೆಂಡ ಕುಡುಕರು ಸುತರು ಉಂಡುಸುಖಿಸೆ ರೋಗ ಮುಂಡೆಯರ ಚಲುವಿಕೆಯು ಶಂಡಸಹ ಸಂಸಾರ ಭಂಡ ಮಕ್ಕಳ ಬಾಳು ಪುಂಡಜನ ಸಹವಾಸ ಕಂಡು ಸಹಿಸದ ನೆಂಟ ಉಂಡು ದೂರುವ ಬಳಗ ದಂಡವಲ್ಲವೆ ಮತ್ತೆ ಕೊಂಡು ಮಾಡುವದೇನು 5 ಭವ ನಿಜಗುಣವೆ ಕ್ಲೇಶದಾಯಕ ವಿರಲು ಲೇಸು ದೊರಕುವದುಂಟೇ ಏಸು ಕಾಲವು ಕಳಿಯೆ ಏಸು ಕಡಿಯಲು ನೀರ ಸೂಸುವುದೆ ನವನೀತ ಹೇಸಿಗೆಯ ದುರ್ಗಂಧ ನಾಶವಾಗುವುದುಂಟೇ ಕ್ಲೇಶ ತೊಲಗದು ಎಂದು ದಾಶರಥಿಯ ಮನಮುಟ್ಟಿ ದಾಸ ನಾಗದ ತನಕ ಭಾಸವಾಗದು ಜ್ಞಾನ ಶ್ರೀಶ ಕಾಣಿಸ ತನ್ನ ದೋಷಿಯಾಗದೆ ಹರಿಗೆ ಮೀಸಲೆನ್ನಿರಿ ಎಲ್ಲ 6 ನಂಬಿ ಮತಿಮತ ತತ್ವ ವಿಷಯ ಹಂಬಲವಳಿದು ಡಿಂಬಗತ ಹರಿ ಬಿಂಬ ಧ್ಯಾನ ಮಾರ್ಗವ ಕಂಡು ಅಂಬುಜಾಕ್ಷ ನಮ್ಮ “ಶ್ರೀ ಕೃಷ್ಣವಿಠಲ”ನ್ನ ತುಂಬಿ ಹೃದಯದದಿ ಸತತ ಪರಮ ಸಂಭ್ರಮದಿಂದ ತಂಬೂರಿ ಮೀಟುತ್ತ ಗೆಜ್ಜೆ ಸಹ ಕುಣಿಕುಣಿದು ಅಂಬಕದಿ ಸುಖ ಬಾಷ್ಪ ಸುರಿಸುತ್ತಹರಿನೆನೆದು ಅಂಬುಜಾಸನ ಸುರಕದಂಬ ಕರುಣವ ಗಳಿಸಿ ಅಂಬೆ ಸಿರಿಪತಿ ಚರಣದಿಂಬು ಬೇಡುವದೊಂದೇ 7
--------------
ಕೃಷ್ಣವಿಠಲದಾಸರು
ಎಲೆ ಮನವೆ ಚಲಿಸದಿರು ಕಂಡಕಡೆಗೆ ನಿಲು ನೀನು ಸ್ಥಿರವಾಗಿ ಧ್ಯಾನ ಮಂಟಪದೊಳಗೆ ಪ ಕಲುಷಪೂರಿತವಾದ ಬಲೆಯ ದೂರಕೆ ದೂಡು ಒಲಿದು ರಕ್ಷಿಪುದೆಂದು ಜಲಜಾಕ್ಷನನು ಬೇಡು ಅ.ಪ ಆರು ಮಂತ್ರಿಗಳುಂಟು ಮೂರು ದುರ್ಗಗಳುಂಟು ಮೂರು ಮತ್ತೆರಡಶ್ವ ಸಹಿತ ನೀನು ದೂರ ದೂರದ ಸಿರಿಯ ತರುವೆ ನಾನೆಂದೆನುವೆ ಧೀರ ನೀನೇ ಎಂಬೆ ಮರುಳತನದಿಂದೆ 1 ನಡೆಯೆ ಸತ್ಪಥವೆಂಬೆ ನುಡಿಧರ್ಮವೆಂದೆಂಬೆ ಕುಡುಕನಂತತ್ತಿತ್ತ ಅಲೆಯುತಿರುವೆ ಸಿಡಿಲು ಬಡಿವುದ ಮರೆತು ದುಡುಕಿ ನಿರ್ದಯವಾಂತು ಕೆಡಬೇಡ ಮಾಂಗಿರಿಯ ಅಡಿವಿಡಿದು ಸುಖಿಯಾಗು2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಎಲೆ ಮನಸೆ ನಾಂ ಪೇಳ್ವ ಬುದ್ಧಿ ಮಾತುಗಳ ಕಲಿತು ಜಾಣನಾಗಿ ನಿಜಸುಖದಿ ಬಾಳು ಪ ಪರನಿಂದೆ ಬೆರೆಸದಿರು ನಿರುತರನು ಜರಿಯದಿರು ದುರಿತದೊಳಗುರುಳದಿರು ಪರಚಿಂತೆ ಮಾಡು ಗುರುಹಿರಿಯ್ಹರಳಿಯದಿರು ದುರುಳರೊಳಗಾಡದಿರು ಹರಿಯಶರಣರ ಸೇವೆ ಸ್ಥಿರವಾಗಿ ಮಾಡು 1 ಮರವೆ ಪರದೆಯ ಹರಿ ಅರಿವಿನಮೃತ ಸುರಿ ಸ್ಥಿರಜಾನ್ಞದೊಳು ಸೇರಿ ಹರಿಚರಿತ ಬರಿ ಹರಿದಾಟವನು ಮರಿ ಜರೆಮರಣದು:ಖ ತರಿ ಪರಮಹರುಷದಿ ಮರೆ ದುವ್ರ್ಯಸನ ತೂರಿ 2 ಕ್ರೋಧವನು ಕಡೆಮಾಡು ವಾದಬುದ್ಧಿಯ ದೂಡು ಸಾಧುಜನರೊಳಗಾಡು ಶೋಧನ ಮಾಡು ಖೇದವನು ಈಡ್ಯಾಡು ವೇದದರ್ಥವ ಮಾಡು ಪಾದಸೇವೆಯ ಮಾಡು ಮಾಧವನ ಕೂಡು 3 ಕಾಮಲೋಭವ ಕಡಿ ಭೂಮಿಮೋಹವ ತೊಡಿ ಭಾಮೆಯರ ಪ್ರೇಮ ಬಿಡಿ ಕ್ಷೇಮಪಥ ಪಿಡಿ ತಾಮಸದೂರಮಾಡಿ ಸಾವಧಾನದ್ಹಿಡಿ ಪಡಿ ನೇಮದ್ಹುಡುಕಾಡಿ 4 ಮೋಸಪಾಶವ ಗೆಲಿ ಕ್ಲೇಶಗುಣಗಳ ತುಳಿ ದಾಸಜನರೊಳು ನಲಿ ಶಾಶ್ವತವ ತಿಳಿ ಹೇಸಿಕ್ವಾಸನೆಯಳಿ ದೋಷರಾಸಿಯಿಂದುಳಿ ಶ್ರೀಶ ಶ್ರೀರಾಮನಲಿ ದಾಸನಾಗಿ ಸೆಳಿ 5
--------------
ರಾಮದಾಸರು
ಏಕನಾದ ಹರಿಗುರುಗಳ ಬಿಟ್ಟು ನರಸ್ತುತಿಗಳನು ಮಾಡಬಾರ್ದು ಪ ಸಿರಿವುರಿಯಲಿ ಸಿಕ್ಕಿ ನರಹರಿ ಚರಣವ ಬಿಡಬಾರ್ದು ಅ.ಪ. ಒಂಟಿಲಿ ಸತಿಯನು ಪತಿವ್ರತೆ ಎನ್ನುತ ಬಿಡಬಾರ್ದು ನೆಂಟೆಗೆ ಮಿತ್ರಗೆ ಸೂಳೆಗೆ ಸಾಲವ ಕೊಡಬಾರ್ದು ತುಂಟರ ಕುಡುಕರ ಜಾರರ ನೆರೆಹೊರೆ ಇರಬಾರ್ದು ಒಂಟಿಯ ಊಟವ ಪಯಣವ ಕಲಹವ ಬೆಳೆಸಬಾರ್ದು 1 ಮಾವನ ಮನೆಯಲಿ ದುಡಿಯದ ಅಳಿಯನು ನಿಲ್ಲಬಾರ್ದು ಕೋವಿದರಡಿಗಳ ಸುಜನರ ಸಂಗವ ಬಿಡಬಾರ್ದು ಜೀವರು ಹರಿ ಸಮ ಮಾಯವೆ ಜಗಸರಿ ಎನಬಾರ್ದು ದೇವನ ದೂಡುತ ವಿಷಯವ ಹರಿಸುತ ಕೆಡಬಾರ್ದು 2 ಮನೆಕದ ಮುಂದಿಲಿ ಪತಿವ್ರತೆ ತಾನು ನಿಲಬಾರ್ದು ತನುವನು ತೋರುತ ಸೆರೆಗನು ಬೀರುತ ನಡಿ ಬಾರ್ದು ವನಿತೆಯ ಸಂಗಡ ಗುಟ್ಟಿನ ವಿಷಯವ ನುಡಿಬಾರ್ದು ಮಣಿಯದೆಲೆಂದಿಗು ಹಿರಿಯರ ಚರಣಕೆ ನಡಿಬಾರ್ದು3 ನುಡಿಯುವ ತೆರೆದಲಿ ನಡೆಯದ ಮನುಜನ ನಂಬಬಾರ್ದು ತಡೆಯದೆ ಕೋಪವ ದುಡುಕುವ ನೆಡೆಯಲಿ ನಿಲ್ಲಬಾರ್ದು ಬೆಡಗನು ತೋರುವ ನಾರಿಯ ಕಡೆಯಲಿ ನೋಡಬಾರ್ದು ದುಡುಕುತ ಲೊಡನೆಯೆ ಯಾವುದು ನಿಶ್ಚಯ ಮಾಡಬಾರ್ದು 4 ಕೆಟ್ಟರೆ ನೆಂಟರನೆಂದಿಗು ಮಾನಿಯು ಸೇರಬಾರ್ದು ಕಷ್ಟವು ಬಂದೆಡೆ ಧೈರ್ಯವನೆಂದಿಗು ಬಿಡಬಾರ್ದು ಗುಟ್ಟಿನ ಮಂತ್ರವು ಘಟ್ಟಿಲಿ ಜಪಿಸುತ ಕೂಗಬಾರ್ದು ಶಿಷ್ಯರಿಗಲ್ಲದೆ ದುಷ್ಟಗೆ ಶಾಸ್ತ್ರವ ನುಡಿಬಾರ್ದು 5 ತಿಂಡಿಯ ಚಪಲವ ನರಹರಿ ತೊಂಡನು ಮಾಡಬಾರ್ದು ಹೆಂಡರ ಭಜಕನ ಜಾರನ ನುಡಿಗಳ ನಂಬಬಾರ್ದು ಸತಿ ಸಹ ಸರಸವ ಮಾಡಬಾರ್ದು ಮಂಡೆಲಿ ಚರಣದಿ ಬರಿತೆರ ವೆಂದಿಗು ಹೋಗಬಾರ್ದು 6 ಹುಡುಗರ ಶಾಲೆಗೆ ಕಲಿಯಲು ಹುಡುಗಿಯ ಕಳಿಸಬಾರ್ದು ಮಡದಿಗೆ ಭಂಟಗೆ ಒಡನೆಯೆ ಸದರವ ನೀಡಬಾರ್ದು ಹುಡುಗಿಯ ಕಾಣದ ಜನರಿಗೆ ದೇಶಕೆ ಕೊಡಬಾರ್ದು ನಡೆನುಡಿ ನೋಟ ವಿಶೇಷದಿ ನೇಮವನಿಡದಲೆ ಇರಬಾರ್ದು 7 ಯಾಚಕ ಸವಿನುಡಿ ವಿನಯ ವಿವೇಕವ ಮರಿಬಾರ್ದು ಯೋಚನೆ ಗೈಯದೆ ನೆರೆಹೊರೆ ಹಗೆತನ ಗಳಿಸಬಾರ್ದು ಒಗೆತನ ಹುಳುಕನು ಹಾಕಬಾರ್ದು ಮೋಚಕ ನಿಜ ಸಖ ಹರಿತಾನೆಂಬುದ ಮರಿಬಾರ್ದು 8 ದೊಡ್ಡವರೆಡೆಯಲಿ ಹುಡುಗರು ಸರಸವ ಮಾಡಬಾರ್ದು ದುಡ್ಡಿನ ಜನಗಳನೆದುರಿಸಿ ಬಡವನು ನಿಲ್ಲಬಾರ್ದು ಸಡ್ಡೆಯ ಮಾಡದೆ ಅಡ್ಡಿಗಳೆಲ್ಲವ ಸರ್ವರಿಂ ದೊಡ್ಡವ ಶ್ರೀ ಕೃಷ್ಣವಿಠಲನ ಭಜನೆಯ ಬಿಡಬಾರ್ದು 9
--------------
ಕೃಷ್ಣವಿಠಲದಾಸರು
ಘನಲೀಲಾಕುಲ ದೇವಕಿ ಬಾಲಾ ಪ ಹೀನನ ಮೊರೆ ಕಿವಿಗೆ ಬೀಳದಲಾ ಸ್ವಾಮಿ ಅ.ಪ ಬಾಲಕ ನೆನೆದುದ ಆಲಿಸಿದೈ ತಂದೆ ಖೂಳನ ನುಡಿ ಕಿವಿಗೆ ಕೇಳಿಸದೆ ದೇವಾ 1 ಹಾಡಲು ಅರಿಯೆ ಕೊಂಡಾಡಲು ಅರಿಯೆನು ನೋಡುವೆಯೋ ನದಿಗೆ ದೂಡುವೆಯೋ ದೇವಾ 2 ಚರಣ ಸರೋಜದ ದರುಶನಗೈಸೋ ಕರವ ಮುಗಿವೆ ಮಾಂಗಿರಿ ರಂಗಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಡಿಯೆಲೆ ಮನವೆ ನೀ ಬಡಬಡಿಸುವುದ್ಯಾಕೋ ಕೆಡಕುಯೋಚನೆಬಿಟ್ಟು ಕಡುಶಾಂತನಾಗೊ ಪ ಜಡಮತಿತನನೀಗಿ ಬಿಡದೆ ದೃಢದಿ ಜಗ ದೊಡೆಯನಡಿಯ ಭಜಿಸು ಕೊಡುವನು ನಿಜಸುಖ ಅ.ಪ ವಂಚಕನಾಗದೆ ವಾಂಛಲ್ಯಳಿದು ಮನ ಕಿಂಚಿತ್ತಗಲದೆ ನಿರ್ವಂಚಕ ಚಿತ್ತನಾಗೊ ವಂಚನಿಲ್ಲದೆ ಹರವಿರಂಚಿಗಳ್ನೂತನ ಪ್ರ ಪಂಚದೊಳಗೆ ನಿನ್ನನಚಲ ಸುಖದಿ ಕಾಯ್ವ 1 ನಿಷ್ಠುರನುಡಿ ಬಿಡು ದುಷ್ಟತ್ವ ದೂರಮಾಡು ಬಿಟ್ಟಗಲದೆ ಮಹ ಶಿಷ್ಟರೊಡನಾಡೊ ಅಷ್ಟಮೂರುತಿಪಾದ ನಿಷ್ಠೆಯ ಭಜಿಸು ನಿ ನಿನ್ನಷ್ಟದಖಿಲವರ ಕೊಟ್ಟು ರಕ್ಷಿಸಸನೆಲೊ 2 ಹಲವು ಭ್ರಾಂತಿ ಬಿಡು ಮಲಿನಗುಣವ ದೂಡು ಹೊಲೆಯ ಮನಸಿನ ಮಹ ಕಲ್ಮಷ್ಹಸನಮಾಡು ಜಲಜಾಕ್ಷನಂಘ್ರಿಯಂ ನಿಲದೆ ಭಜಿಸು ನಿನ ಗೊಲಿದು ನಿಜಸುಖವಿತ್ತು ಸಲಹುವ ಶ್ರೀರಾಮ 3
--------------
ರಾಮದಾಸರು
ತಾಳು ತಾಳೆಲೆ ಮನವೆ ತಾಳ್ಮೆಯ ತಾಳು ತಾಳೆಲೆ ಮನವೆ ಪ. ತಾಳು ತಾಳು ನಿನ್ನಾಳುವ ದೊರೆಯಿಹ ಅವ ಗಾಳಾಗಿ ನೀ ಬಾಳಲು ಕಾಳು ಮಾಡನು ಹರಿ ಅ.ಪ. ದುರ್ಜನರಾಡಿದ ನುಡಿ ಮನಕದ ಸಜ್ಜುಗೊಳಿಸಬೇಡ ಅರ್ಜುನ ಸಖನೇ ನಿನ್ನ ಪರೀಕ್ಷಿಸೆ ನಿರ್ಜರೇಶನೀಪರಿ ಮಾಡಿಹನೆಂದ 1 ಅಳಕು ಮನವ ಬಿಡು ನಿ ನ್ನಳದು ನೋಡುವ ಹರಿಯು ಅಳವಲ್ಲವನ ಲೀಲೆ ಕಂಡ್ಯ ಝಳ ಝಳ ಮನದಲಿ ಕಳೆ ಕಲೆ ಹರಿರೂಪ ಪೊಳೆದು ನಿನ್ನ ಮನದಳಕನೆ ದೂಡುವ 2 ಅಂಜದಿರಭಯವ ಅಂಜನಾಸುತ ಸೇವ್ಯ ಶ್ರೀ ಶ್ರೀನಿವಾಸ ಶ್ರೀರಾಮ ನಿ ನ್ನಂಜಿಸುವರನು ಅಂಜಿಸೆ ಕಾದಿಹ ಸಂಜಯ ಪ್ರಿಯ ಕಂಜನಾಭ ಹರಿ 3
--------------
ಸರಸ್ವತಿ ಬಾಯಿ
ತಿಳೀಮನವೇ ತಿಳೀಮನವೇ ತಿಳೀಮನವೇ ತಿಳಿ ಸಂಪೂರ್ಣ ಸುಖತಾಣಾ ತಿಳಿ ಸಂಪೂರ್ಣ ಸುಖತಾಣಾ ಸಾವಿನ ಬಾಧೆಯ ನೀಗುವಿ ನಿಜವಾಗೀ ಸಾವಿನ ಬಾಧಾ ಭಾವಾತೀತನ ನೀ ತಿಳೀಮನವೇ ಪ ನೋಡು ನೀನೇ ಆತ್ಮಸ್ವರೂಪಾ ಪೇಳಿದ ಗುರುಭೂಪಾ ಪೇಳ್ದೆ ಗುರುಭೂಪಾ ದೂಡು ದೇಹಾದಿಗಳ ತಾಪಾ ನೋಡುನಿಜರೂಪಾ ನೀ ನುಡಿಮನಗಳಿಗೂ ಕಡೆಯಾಗಿರುವ ಅಡಗಿದ ಗೂಢವಿದು ತಿಳೀಮನವೇ 1 ಕರ್ಮ ಪಾಶಕೆ ಕಠಾರಿಯಿದು ಜ್ಞಾನಾ ಮರ್ಮವಿದು ಘನಶಾಂತಿಯಾ ಸ್ಥಾನಾ ಧರ್ಮಾಧರ್ಮವ ಮೀರಿಹ ತಾಣ ದುರ್ಮತಿಯಾ ಬಿಡು ಜಾಣಾ ಘೋರತರದ ಸಂಸಾರದ ನಾಶಾ ಪೂರಣಗೊಂಬುದು ಆಶಾ ಪರಾಶಾಂತಿಗಿನ್ನೊಂದನು ಕಾಣೆ ಗುರುಶಂಕರನಾಣೇ ಗುರುಶಂಕರನಾಣೇ ತಿಳೀಮನವೇ 2
--------------
ಶಂಕರಭಟ್ಟ ಅಗ್ನಿಹೋತ್ರಿ
ದೂಡು ಧನಮಾನಗರ್ವವ ಅಭಿಮಾನವೆಲ್ಲವ ತರವಲ್ಲವೋ ಪ ಶಮೆದಮೆವೈರಾಗ್ಯ ದೃಢವಾಗಿಹ ಶೃತಿವಿದಿತಾಗಿಹ ಘನ ವಿನಯಾದಿ ಸಾಧನೆ ಪರಮಾರ್ಥಕೆ ಬೇಕು ತಿಳಿ ಜೀವನೇ 1 ಪರಿ ಪ್ರಶ್ನೆಯಾ ಮಾಡು ನಿಜ ಶೋಧವಾ ನೀಡು ಶಿರವನ್ನು ಗುರು ಶಂಕರನ ಪಾದಕೆ 2
--------------
ಶಂಕರಭಟ್ಟ ಅಗ್ನಿಹೋತ್ರಿ
ನಿನ್ನೊಳಗೆ ನೀ ತಿಳಿದುನೋಡು ನಿರ್ಮಲನಾಗಿ ಪ ನಿನ್ನೊಳಗೆ ನೀ ತಿಳಿದುನೋಡು ಚೆನ್ನಾಗಿ ಗುರುಭಕ್ತಿಯ ಮಾಡು ಭಿನ್ನಪದಾರ್ಥಗಳನ್ನು ಬಯಸದೆ ಅನನ್ಯಭಾವದಿ ನಿಜವನ್ನು ನಿತ್ಯಾತ್ಮನ ನರದೇಹದಿಂದಧಿಕವಿಲ್ಲಾ ಸ್ಥಿರವಾಗಿ ನಿಂದಿರುವುದಲ್ಲಾ ಬರಿದೆ ಕೆಡಿಸುವುದು ಸಲ್ಲಾ ಗುರುತಿಗೆ ಬೆರೆಸಲು ಬಲ್ಲಾ ಗುರುನಾಥನಿಂದುಪದೇಶವಾ ಕೈಕೊಂಡು ಇ ತರ ಪರಿಕರಂಗಳ ಆಶಾಪಾಶವಾ ವರ್ಜಿಸಿ ನಿನ್ನ ದುರಿತ ದುಃಖ ವಿನಾಶವಾಮಾಡಲು ಭವ ಶರಧಿಯ ದಾಟುವಾ ಆಯಾಸವಾ ನಿಲ್ಲುವದಿನ್ನು ಕುರಿತುಮನದಲಿ ತಿಳಿದುನೋಡು ಕಾಂಡುವ ಆರು ಅರಿಗಳ ವಿಚ್ಛೇಧನ ಮಾಡು ಅವಿದ್ಯೆಯನ್ನು ಶರಗು ಹಿಡಿದು ಹೊರಗೆ ದೂಡು ಹಮ್ಮಿನಹಲ್ಲು ಮುರಿದು ನಿನ್ನೊಳಗೆ ಕೂಡು ಹರಿಚರಣದೊಳಾಡು ಗುರುಮಂತ್ರವನುಚ್ಚರಿಸಿ ಕರ್ಪೂರವನು ಜಗದೊಳಿರುವುದೆಲ್ಲ ನಶ್ವರಸಂತೆ ನೋಡೆ ಬರುವದೆಲ್ಲ ಬಯಲಿನ ಭ್ರಾಂತಿ ಅರಿತಮಹಾತ್ಮರ ಚರಣನರಸಿಜಕೆ ಎರಗಿ ತತ್ವಾನಂದ ಭರಿತನೆಂದೆನಿಸುವ ನಿನ್ನೊಳಗೆ1 ವಾದಿಸಿ ಶುದ್ಧತತ್ವದ ಹಾದಿಯ ಬಲ್ಲವರಾದ ಸಾದು ಸತ್ಪುರುಷರಪಾದ ಕೊಡಿ ಶ್ರೀ ಗುರುಪ್ರಸಾದ ಸಾಧಿಸಿ ಸವಿಯನು ಬೇಡಿಕೊ ಬ್ರಹ್ಮಾನಂದದ ಬೋಧೆಯಿಂದ ನೀ ಲೋಲಾಡಿಕೊ ನಿತ್ಯನಿರ್ಮಲವಾದ ವಸ್ತು ನೀ ದೃಢಮಾಡಿಕೊ ಅಂತರಾತ್ಮನ ಶೋಧಿಸಿ ಸಜ್ಜಾಗಿ ನೋಡಿಕೊ ಅಷ್ಟರಮೇಲೆ ಹಾ ಧನ್ಯಧನ್ಯನೆನಿಸಿ ಮೆರೆವ ವರ್ಣಾಶ್ರಮದ ಭೇದವಳಿದು ಮಾಯೆಯ ಜರಿವೆ ನಿತ್ಯಾನಂದವಿನೋದಕೆ ಮಹಾತ್ಮರನು ಕರಿವೆ ನೋಡಲು ದ್ವೈತವಾದ ಮಿಥ್ಯವೆಂಬುದನರಿವೆ ಮಧ್ಯಾಂತ ಶ್ರೀ ಗುರುದೇವಾ ಬಹುಆದರವಿಡಿದು ಶಿಷ್ಯರಕಾವಾ ಸಂಪಾದಿಸಿಕೊಡುವಾ ಮುಕ್ತಿಯಠಾವಾ ನಿತ್ಯಾರಾಧಕರಿಗೆ ಸದ್ಗತಿಗಳನೀವಾ ತ್ರಿಮೂರ್ತಿಗಳಾದರೆಂತೆಂಬುದ ನಿನ್ನೊಳಗೆ 2 ನಿತ್ಯನಿರ್ಮಲದೊಳಗಾಡಿ ಪ್ರತ್ಯುಗಾತುಮನ ನೋಡಿ ಇತ್ತಣದ ಹಂಬಲವ ಬಿಡಬೇಕು ತನುಮನಧನ ಜೊತ್ತಾಗಿ ಶ್ರೀ ಗುರುವಿಗೆ ಕೊಡಬೇಕು ಕರುಣದವಜ್ರ ಕೆತ್ತಿದ ಕವಚವನು ತೊಡಬೇಕು ಬಿಡಬೇಕು ಇಂತಾಗಿ ಬಿಡದೆ ಮತ್ತಿ ತಾತ್ವರ್ಥವ ತಿಳಿದು ಕಾಣುಕಾಣದರೊಳು ಪ್ರತ್ಯಕ್ಷ ಹೊಳದಾಡುವ ಚಿದ್ಭಾನು ಪ್ರಕಾಶವನ್ನು ಅತ್ಯಧಿಕತೆಯಿಂದಲೀವನು ಜ್ಞಾನಿಗಳೊಳು ವಿಸ್ತಾರ ವಸ್ತು ವಿಚಾರವನು ಮಾಡಿ ನೋಡಿದರೆ ಕತ್ತಲೆ ಬೆಳಕೆರಡಿಲ್ಲದು ಸ್ವಯದಲಿ ಎತ್ತನೋಡಿದರು ಪ್ರಜ್ವಲಿಸುವುದು ತಾಂ ಉತ್ತಮಾನಂದದಿ ಸಲಿಸುವುದು ಗುರು ಭಕ್ತರ ನಿಜದಲಿ ನಿಲಿಸುವದು ಸುತ್ತು ಮುತ್ತು ಸುಳಿದು ತಾನೆ ಬಯಸುವದು ನೆತ್ತಿಯೊಳಗೆ ಹೊಳೆಯುತ್ತಿಹ ಜ್ಯೋತಿಯು ಎತ್ತಿತೋರಿತು ವಿಮಲಾನಂದ ಬ್ರಹ್ಮನ ನಿನ್ನೊಳಗೆ 3
--------------
ಭಟಕಳ ಅಪ್ಪಯ್ಯ