ಒಟ್ಟು 15 ಕಡೆಗಳಲ್ಲಿ , 11 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ನರಹರಿಯೆ ಸುಕ್ಷೇಮವ ಪ. ಪರಮಪ್ರಿಯರಿಗೆ ಇತ್ತು ವರ ಸೇವೆ ಕೈಕೊಂಡು ನಿರುತದಿ ಪಾಲಿಸೆನ್ನ ಘನ್ನ ಅ.ಪ. ದಾಸ ಗುರುಕುಲತಿಲಕರಿವರಿಗೆ ನೀನೀಗ ಘಾಸಿಗೊಳಿಸುವುದುಚಿತವೆ ದೋಷದೂರನೆ ಎಮ್ಮ ಮನವನರಿತವ ಜನರ ದೂಷಣೆಗೆ ಗುರಿ ಮಾಳ್ಪರೆ ಘಾಸಿಪಡುತಿಹರ ಆಯಾಸಪಡಿಸುವುದು ಬಹು ಲೇಸಲ್ಲ ನಿನಗೆ ಥರವೆ ಶೇಷಶಯನನೆ ಎಮ್ಮ ಮಾತು ಲಾಲಿಸಿ ಈಗ ಪೋಷಿಸಲಿ ಬೇಕೊ ಸ್ವಾಮಿ ಪ್ರೇಮಿ 1 ಕಲ್ಪತರುವಂತಿಹರು ಶಿಷ್ಯವೃಂದಕೆ ಇವರು ಇಪ್ಪರೋ ಚಂದ ಜಗದಿ ತಪ್ಪದಲೆ ಆಯುರಾರೊಗ್ಯ ಕೊಟ್ಟು ನೀ ಸರ್ಪಶಯನನೆ ರಕ್ಷಿಸೊ ಒಪ್ಪದಿಂದಲಿ ಎಮ್ಮ ಸೇವೆ ಸಫಲವಗೊಳಿಸಿ ಅಪ್ಪ ಸಂತಸವಪಡಿಸೊ ಬಪ್ಪ ಪೋಪ ಕೀರ್ತಿ ಅಪಕೀರ್ತಿ ನಿನ್ನಡಿಗೆ ಪುಷ್ಪದಂತರ್ಪಿಸುವೆನೊ ನೃಹರಿ 2 ಮನವಚನ ಕಾಯದಲಿ ಅನ್ಯ ಬಗೆಯದೆ ಎಮ್ಮ ಗುರುಗಳನು ಸೇವಿಸುವೆವೊ ಚಿನುಮಯನೆ ನೀ ಸಾಕ್ಷಿಯೋ ಮನುಜರಿದನೇನ ಬಲ್ಲರು ಕೇಳು ತಂತಮ್ಮ ಮನ ಬಂದ ತೆರ ನುಡಿವರೊ ಎನಗದರ ಗೊಡವೇನು ನೀನಿರಲು ಭಯವೇನು ಘನ ಮಹಿಮ ಪೊರೆಯೊ ಬೇಗ ಸ್ವಾಮಿ 3 ಪಂಚಪ್ರಾಣರು ಇವರು ವಂಚನಿಲ್ಲದೆ ಪೇಳ್ವೆ ಮುಂಚೆ ನೀ ಕಾಪಾಡೆಲೊ ಸಂಚಿತಾಗಾಮಿ ಪ್ರಾರಬ್ಧ ದುಷ್ಕರ್ಮಗಳು ಮಿಂಚಿನಂದದಿ ಮಾಡೆಲೊ ಸಂಚಿತಾಗಾಮಿಗಳ ಶಿಷ್ಯರಿಗೆ ಕಳೆವರಿಗೆ ಕೊಂಚ ಬಾಧೆಯ ಕೊಡದೆಲೊ ಸಂಚಿತಿತ ಪ್ರದನೆ ಎನ್ನ ಮೊರೆ ಲಾಲಿಸು ಅಚಂಚಲದ ಕ್ಷೇಮವೀಯೋ ದೇವ 4 ಪರಿ ಪ್ರಾರ್ಥಿಸುವೆ ಶ್ರೀ ಪತಿಯೆ ದಯವ ಮಾಡೊ ನಾ ಪೇಳ್ವುದಿನ್ನೇನು ನಿನ್ನ ಸೇವಾದಿಗಳು ಕೃಪೆಯಿಂದ ಗುರುಗಳಿಂದ ಪಾಪ ಪರಿಹರನೆ ನೀ ಕೈಕೊಂಡು ಕೀರ್ತಿಯನು ಈ ಪೃಥ್ವಿಯಲ್ಲಿ ನೆಲಸೊ ಗೋಪಾಲಕೃಷ್ಣವಿಠ್ಠಲನೆ ನೀ ಕಾಪಾಡು ಕಾಪಾಡು ಜಗದ್ರಕ್ಷಕ ಹರಿಯೆ 5
--------------
ಅಂಬಾಬಾಯಿ
(ಊ) ಲೋಕನೀತಿಯ ಕೃತಿಗಳು ಕೆಟ್ಟಗುಣಗಳು ನರನ ಅಟ್ಟಿಕೆಡಹುತಲಿಹುವು ಭ್ರಷ್ಟನೆನಿಸದೆ ಬಿಡವು ಇವನ ಪ ಸೃಷ್ಟಿಯೊಳಗಿವುಗಳಿಂದೆಷ್ಟುಜನ ಕೆಟ್ಟಿಹರೋ ಕಟ್ಟುತ್ತ ಮುಸಲದಿಂ ಕುಟ್ಟುತಿಹುವೂ ಅ.ಪ ಸರಿಧರೆಯ ಸ್ತ್ರೀಯರಂ ಕಾಯಿಸಲು ನರತಾನು ಹರಿಯಿಂದ ಹತನಾಗಿ ಹೋದಾ ವರವಿಪ್ರನಲಿ ಕ್ರೋಧಮಾಡಿದ ಬಕಾಸುರನ ತರಿದನಲ್ಲವೆ ಭೀಮ ತಾನು 1 ದಾಯವನು ಲೋಭದಿಂ ಕೌರವನು ಪಾಂಡವರಿ ಗೀಯದುದಕವನೇನು ಪಡೆದಾ ರಾಯದಶರಥ ತನ್ನ ಸತಿಸುತರ ಮೋಹವಿರೆ ಆಯುವಿಂ ಗತನಾಗಿ ಹೋದಾ 2 ಜಮದಗ್ನಿಯ ಹೋಮಧೇನುವಂ ಮದದಿಂದೆ ಕಾರ್ತಿವೀರ್ಯಾರ್ಜುನನು ಕೊಳಲು ಅಮಿತಬಲನಾಪರಶುಧಾರಿಯು ತಾನು ಸಮರದೊಳೆ ಸವರುತ್ತ ಅವನ ಕಳೆದ3 ಕೃಷ್ಣನನು ಮತ್ಸರದಿ ಶಿಶುಪಾಲ ಬಯ್ಯಲು ವಿಷ್ಣುಚಕ್ರವು ಕೊಂದಿತವನ ಬಾಣ ತಾನೀರ್ಷೆಯಿಂ ಭವಗವಂತನಿದಿರೇಳೆ ಪ್ರಾಣವುಳಿಯುತ ನಾಲ್ಕು ತೋಳ್ಗಳಾಯ್ತು 4 ವಾಸುದೇವನ ಮೇಲಸೂಯೆಯಿಂ ಪೌಂಡ್ರಕ ವಾಸುದೇವನೊಳು ಅಳಿದ ಕಂಡ್ಯಾ ದೂಷಣೆಯು ಡಂಬಗಳು ನಾಶನವ ಗೈಯುವುವು ಈಶ ಸುಜನರಿಗಾಗಿ ಭಾವಿಸುವ ಜಗದೀ5 ದರ್ಪದಿಂ ದಶಶಿರನು ಮರೆಯುತ್ತಲಿರಲಾಗಿ ಅಪಹಾರಗೈದ ಶ್ರೀರಾಮ ತಲೆಯಾ ರಿಪುಗಳಾ ಮಧು ಕೈಟಭರ ಮಮತೆಯನು ಉಪಮೆಯಲ್ಲಿದು ಮಾಯಿ ಮುರಿದ ನೋಡಾ 6 ನಿರ್ವಿಕಾರನ ನೆನೆದು ಗರ್ವವರ್ಜಿತರಾಗಿ ಸರ್ವವೂ ಹೆಜ್ಜಾಜಿ ಕೇಶವಾ ಯೆಂದು ಪರ್ವತೋದ್ಧರನಲ್ಲಿ ಕರ್ಮಾರ್ಪಣೆಯ ಮಾಡಿ ಒರ್ವನೇ ಜಗದೀಶನೆಂದು ನಮಿಸೀ 7
--------------
ಶಾಮಶರ್ಮರು
ಇಂದ್ರಿಯವಶಕನ ಮಾಡಿದಿರೆನ್ನಮುಂದುವರಿವೆನರಿಯದೆ ಸುಪ್ರಸನ್ನಾಪಎನ್ನೊಳಿರುವ ಗುಣದೋಷ ಸೂಕ್ಷ್ಮಂಗಳಚನ್ನಾಗಿ 'ವರಿಸಿ ತಿಳಿದು ನೋಡೆಮನ್ನಿಸಿ ಪೊರೆವ ಕರುಣ ಬರದಿದ್ದರುನಿನ್ನವನೆಂಬಭಿಮಾನದಿಂ ಗುರುವೆ1ಶೈಲಕೆ ಸ್ಥೂಲತೆ ಜಾಲಾಂದ್ರಗತ ರೇಣುಜಾಲಕೆ ಸೂಕ್ಷ್ಮತೆಯತಿ ಲಾಘವತೂಲಕೆ ಬಂದಿಪ್ಪ ಸ್ವಾಭಾ'ಕವ ನೋಡಿತಾಳಲಾರದವನಂದದಿ ಮುಂದುವರಿಸುವೆನು2ಮಶಕ ಮಕ್ಷುಕ ಮಲ ಕ್ರಿ'ು ಖರ ಸೂಕರಶಶ ಗಜ ತುರಗ ವ್ಯಾಘ್ರಾಧಿಗಳಪಶುಗಳ ಸಂದಣಿಗಳಲಿ ಕೊಂಬೆನು ಎನ್ನವಶ'ಲ್ಲವೆಂದಿವ ವೊಳಗುಗೈವವರುಂಟೆ 3ಪರರೆನ್ನೊಳಿಹ ಗುಣ ದೋಷಾನುಸಾರದಿಹರುಷ 'ಷಾದಜನಕ ವಾಕ್ಯವಅರಿತರಿಯದೆ ನುಡಿದರೆ 'ಚಾರಿಸಿ ನಾನೆಚ್ಚರುಗೊಳ್ಳದು ಭ್ರಮೆುಂ ಕೆಡುತಿಹೆನಾಗಿ 4ಪರರ ದೂಷಣೆಯ ನಾ ಮಾಡಿದರುಪರರೊಳು ಬರಿದೆ ದ್ವೇಷವನೆಸಗಿದರು ಮುಂದೆ'ರಿಯರ ವಚನವ ಹಳಿದರು ಸಟೆಯನುಚರಿಸಿದರಾಗಲೆನಗೆ 'ಪ್ರಹತಿ ದೋಷ 5ರಾಗ ದ್ವೇಷದ ಬಲ'ಡಿದನ್ಯಧರ್ಮವನಾಗಮವಂತರ ಸಮ್ಮತವಾಕೂಗಿ ವಾದಿಸಿ ಜುಸುವ ಬುದ್ಧಿಗೈದರಿನ್ನಾಗಲಿ ಸುರೆಯನ್ನೀಂಟಿದ ದೋಷವೆನಗೆ6ಪರನಾರಿಯರ ರೂಪು ಲಾವಣ್ಯವನು ನೋಡಿಕರಗಿದೆನೈ ಕಾಮಾಧೀನನಾಗಿಬರಿಯನೃತವನಾಡ್ದೆನೈ ತಪ್ಪಿದೆನು ಮುಂದೆಬರಲಿ ಸ್ವರ್ಣಸ್ತಿಯ ದೋಷವೆನಗೆ ಸ್ವಾ'ು 7ಆರಾದರೇನವರೆಸಗಿದ ಕರ್ಮದದಾರಿಯೊಳಿರೆ ನಿಗ್ರ'ಸಿನು ಮುಂದೆದೂರಿಕೊಂಡರೆ ಕೇಳಿ ಖತಿಗೊಂಡೆನಾದರೆಸಾರಲಿ ಗುರುದಾರಗಾ'ುದೋಷವು ನನ್ನ 8ಆವಜನ್ಮದ ಸುಕೃತವೊ ನಿನ್ನ ಚರಣದಸೇವೆ ದೊರಕಿ ಧನ್ಯನಾದೆನಯ್ಯಾಭಾವನೆಯಳವಡದ ಅಭಿಮಾನದಿಂದನ್ಯಜೀವರೊಳ್ದೋಷವನೆಣಿಸಿ ನಾನೊಂದೆನೂ 9ಎನ್ನ ಜನನಿ ಜನಕರು ನಿನ್ನ ಚರಣದೊಳ್ಚೆನ್ನಾಗಿ ನಿಂದರು ಸದ್ಗುರುವೆನಿನ್ನವನಾದೆ ನಾನಿಲ್ಲ ಜನುಮವೆನಗೆನ್ನುತಿದ್ದರು ರಾಗಾದಿಗಳಾಶೆ ಬಲುಹಯ್ಯ 10ಮರೆತು ನಡದೆನು ತಪ್ಪಿದೆನಯ್ಯ ಚಿಕನಾಗಪುರವಾಸ ಗುರು ವಾಸುದೇವಾರ್ಯನೆಪರಮ ಪಾಪಿಗಳ ಸಂಸರ್ಗದೋಷವೆನಗೆಬರಲಿ ಮಾಡಿದ ಪ್ರತಿಜ್ಞೆಯ ಬಿಟ್ಟೆನಾದರೆ 11
--------------
ವೆಂಕಟದಾಸರು
ಇನ್ನೆಲ್ಲಿತನಕ ಇವಗೆ ದುರ್ಬವಣೆ ಹರಿಯೆ ನಿನ್ನ ಉನ್ನತವಾದ ಮರೆಬಿದ್ದ ಬಳಿಕ ಪ ಮಂದಮತಿ ತೊಲಗದು ಕುಂದು ನಿಂದೆ ಅಳಿವಲ್ಲದು ಮಂದಿಮಕ್ಕಳ ಮೋಹವೊಂದು ಕಡಿವಲ್ಲದು ಸಿಂಧುಶಯನನೆ ಗೋವಿಂದ ನಿಮ್ಮ ಚರಣ ವೊಂದೆ ಮನದಲಿ ಭಜಿಸಾನಂದಪಡಿವಲ್ಲದು 1 ಮೋಸಮರವೆ ಹರಿವಲ್ಲದು ಆಶಪಾಶ ಬಿಡವಲ್ಲದು ಹೇಸಿ ಸಂಸಾರದ ದುರ್ವಾಸನೆಯು ಹಿಂಗದು ದೂಷಣೆಗೆ ನೋಯುವುದು ಭೂಷಣೆಗೆ ಹಿಗ್ಗುವುದು ದೋಷದೂರನೆ ನಿನ್ನ ಧ್ಯಾಸನಿಲ್ಲವಲ್ಲದು 2 ಕಪಟ ಮತ್ಸರಬುದ್ಧಿ ಚಪಲತನ ಅತಿಕ್ರೋಧ ಕಪಿಮನದ ಚೇಷ್ಟೆ ಅಪರೋಕ್ಷ ನಿಲ್ಲವಲ್ಲದು ಅಪ್ಪ ಶ್ರೀರಾಮ ನಿಮ್ಮ ಜಪತಪ ಸಿದ್ಧಿಸವಲ್ಲದು 3
--------------
ರಾಮದಾಸರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಕೃಪಣ ಶಿಷ್ಯನಿಗೇಅಪವರ್ಗಪ್ರದ ಹರಿಯೆ | ಅಪವಾದ ಕಳೆಯೋ ಅ.ಪ. ದಾಸನಾದವನು ನಿ | ರ್ದೋಷಿ ಎನುವುದು ನಿಜದಾಸನೆನೆ ಹನುಮಂಗೆ | ಲೇಸು ಸಲ್ಲುವುದೋ |ದಾಸರನುಯಾಯಿ ನರ | ದೂಷಣೆಗೆ ಒಳಗಾಗಿಕ್ಲೇಶ ಪಡುವುದು ಉಚಿತೆ | ಶ್ರೀಶ ಸರ್ವೇಶಾ 1 ಫಲವು ತುಸು ಕೆಟ್ಟಿರಲು | ಆ ಉಪಭಾಗವ ಬಿಸುಟುಮೆಲುವುದಿಲ್ಲವೆ ಫಲವ | ಹಲವು ಜನರೂಕಲಿಮಲಘ್ನನೆ ಹರಿಯೆ | ಕಲುಮಷವನೆ ಕಳೆಯುತ್ತಕಲುಷ ದೂರನ ಗೈಯ್ಯೋ | ಬಲು ದಯಾ ಪೂರ್ಣಾ 2 ಶಿರಿಮಾಧವಾ ಭಿನ್ನ | ಗುರು ಗೋವಿಂದ ವಿಠಲಕರುಣಾಪಯೋನಿಧಿಯೆ | ಸರ್ವಾಂತರಾತ್ಮತರಳಗೊದಗಿಹ ವಿಪದ | ಪರಿಹರವ ಗೈಯ್ಯುತ್ತಕರುಣಿಸೆನೆ ಮನಶಾಂತಿ | ಹರಿಯೆ ಭಿನ್ನವಿಪೇ 3
--------------
ಗುರುಗೋವಿಂದವಿಠಲರು
ಥೂ ನಿನ್ನ ಮೋರೆಗೆ ಬೆಂಕ್ಯ್ಹಚ್ಚ ಮನವೆ ಕುಯುಕ್ತಿ ಬಿಡು ಮನವೆ ಪ ಮುನ್ನ ನೀ ಪಡೆದದ್ದು ನಿನ್ನಗಿರಲಿಕ್ಕಾಗಿ ಅನ್ಯರೊಡವೆಯ ಬಯಸಿ ಕಣ್ಣಿಕ್ಕಿ ಕುದಿವಿ ಕುನ್ನಿಮನಸೆ ನಾಳೆ ಕಣ್ಣಿನೋಳುರಿಗೆಂಡ ವನ್ನು ತುಂಬಿಸುವೆ ಮನಚೆನ್ನಾಗಿ ನೋಡೊ 1 ಮಿಥ್ಯ ಸತಿಸುತರಿಗೆ ತೊತ್ತಾಗಿ ದುಡಿದು ಮುದಿಕತ್ತೆ ನೀನಾದಿ ಮೃತ್ವಿಗೆ ತುತ್ತಾಗಿ ಅತ್ತತ್ತು ಬಾಯಿಬಿಡುವ ಹೊತ್ತಿಗಿರರಾರಾರು ಅರ್ತು ನೀ ನೋಡೊ 2 ಚಿತ್ತಜಪಿತನಂಘ್ರಿ ಸತ್ಯಭಜನಕೆ ಕರೆಯೆ ಸುತ್ತಿ ಮಲುಗುವಿ ಸತಿಸತ್ತಳುವನಂತೆ ಮತ್ತೆ ಎತ್ತಕೆ ಕರೆಯೆ ವತ್ತರಿಲ್ಲ ಓಡ್ವಿ ಮುಕ್ತಿಕೊಂಡೆಯ್ವೆ ಮನ ತೊತ್ತಾಗಬೇಡೊ 3 ದಾಸಾನುದಾಸರ ದೂಷಣೆಯ ಮಾಡಿ ಮಹ ಹಾಸ್ಯದಿಂ ನಗುವಿ ಭವಪಾಶದೋಳ್ಸಿಲ್ಕಿ ನಾಶಬುದ್ಧಿಯ ಬಿಡು ಹೇಸಿಮನುಜನೆ ಯಮ ಪಾಶ ಬರುವುದು ಮುಂದೆ ಸೋಸಿ ನೀನೋಡೊ 4 ನೆರೆದು ತೋರುವ ಸಂತೆಪರಿಯಂತೆ ಸಂಸಾರ ಮರೆಮೋಸದ ಉರುಲು ದುರಿತದ ತವರು ಮರುಳತನವನು ನೀಗಿ ಪರಮ ಶ್ರೀರಾಮನ ಚರಣಸ್ಮರಣೆಯೊಳಿರ್ದು ವರಮುಕ್ತಿ ಪಡೆಯೊ 5
--------------
ರಾಮದಾಸರು
ಪೋಷಿಸೆನ್ನ ವೆಂಕಟೇಶ ಶ್ರೀಶ ಶ್ರೀನಿವಾಸ ಶೇಷಗಿರಿನಿಲಯ ಶ್ರೀ ಇಂದಿರೇಶ ಈಶ ಪ ಹೇಸಿಯಿವನೆಂದೆನುತ ದೂಷಣೆಯ ಮಾಡದಿರು ದೋಷದೂರನೆ ನಿನ್ನ ದಾಸ ನಾನಭವ ದಾಸಜನರ ಮನದುಲ್ಲಾಸದೇವರು ನೀನು ದಾಸನ ಆಸೆಯನು ಪೂರೈಸಿ ಸಲಹಯ್ಯ 1 ಕುನ್ನಿಕುಲದಲಿ ಜನಿಸಿ ಬನ್ನಬಡಲಾರದೆ ಉನ್ನತೋನ್ನತಮಹಿಮ ನಿನ್ನ ಬೆನ್ನು ಬಿದ್ದೆ ಭಿನ್ನತಾರದೆ ಎನಗೆ ನಿನ್ನ ದರ್ಶನವಿತ್ತು ಉನ್ನತಮತಿ ನೀಡಿ ಮನ್ನಿಸಿ ಸಲಹು 2 ನಿತ್ಯ ತವ ಶರಣಜನರುಂಡು ಮಿಕ್ಕ ಪರಮಪ್ರಸಾದ ಶರಣೆಂದು ಚರಣಕ್ಕೆ ಮರೆವೊಕ್ಕೆ ನೆರೆನಂಬಿ ತಿರುಪತೀಶನೆ ಭಕ್ತ ಕರುಣಿ ಶ್ರೀರಾಮ 3
--------------
ರಾಮದಾಸರು
ಪ್ರಾಣಿ ದಿನ ಮೋಸಗಳೆಯಬ್ಯಾಡ ಧ್ರುವ ವಂದಿಸದೆ ಸಾಧು ಸಜ್ಜನರ ಶ್ರೀಪಾದವನು ಬರುದೆ ಶೋಧವಿಯ ನೀ ಮಾಡಬ್ಯಾಡ ಅರಿಯದ ಧಮರಸಂಗ ಕೂಡಬ್ಯಾಡ ಪರನಿಂದೆ ದೂಷಣೆಯ ಮಾಡಬ್ಯಾಡ ಗುರುಹಿರಿಯರ ಮಾತು ಮೀರಬ್ಯಾಡ 1 ಏನೆಂದು ತಿಳಿಯದೆ ಜ್ಞಾನಿಗಳ ಮಹಿಮೆಯನು ಅಜ್ಞಾನತನದಲಿ ಉಳಬ್ಯಾಡ ಹೀನ ಗುಣದಲಿ ನೀ ಬಾಳಬ್ಯಾಡ ಅನ್ಯಾಯತನವೆ ನೀ ಕೇಳಬ್ಯಾಡ ನಿನ್ನ ಸ್ತುತಿ ನೀನೆವೆ ಹೇಳಬ್ಯಾಡ 2 ನಿನ್ನೊಳು ನಿನ್ನ ಸ್ಥಿತಿಗಳನು ತಿಳಿಯದೆ ಕುಂದ ನೀ ನೋಡಬ್ಯಾಡ ನಾನೆ ದೊಡ್ಡವನೆಂದು ಆಡಬ್ಯಾಡ ಮಹಿಪತಿ ನೀ ದಗಿಯ ಬೀಳಬ್ಯಾಡ ಗುರು ಆಜ್ಞೆಯಿಂದ ಕಡಿಗ್ಯಾಗಬ್ಯಾಡ ಪ್ರಾಣಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುವ್ವಿ ಸುವ್ವಿ ನಮ್ಮ ಶ್ರೀರಮಣಗೆ ಸುವ್ವಿ ಸುವ್ವಿ ಸುವ್ವಿ ನಮ್ಮ ಭೂರಮಣಗೆ ಸುವ್ವಿ ಸುವ್ವಿ ಎಂದು ಪಾಡಿ ಸಜ್ಜನರೆಲ್ಲ ಕೇಳಿ ಪ. ಹರಿಗೆ ಶರಣೆಂಬೆ ಸಿರಿಗೆ ಶರಣೆಂಬೆ ವರ ವಾಣಿರಮಣಗೆ ಶರಣೆಂಬೆ ಸುವ್ವಿ ವರ ವಾಣಿರಮಣಗೆ ಶರಣೆಂದು ಪೇಳಿದ ಗುರುವಾದಿರಾಜೇಂದ್ರನ ಕೃತಿಯೆಂದು ಸುವ್ವಿ 1 ¥ಕ್ಕಿವಾಹನ್ನ ಜಗಕ್ಕೆ ಮೋಹನ್ನ ರಕ್ಕಸದಾಹನ್ನನಿವ ಸುವ್ವಿ ರಕ್ಕಸದಾಹನ್ನನಿವ ತನ್ನ ಮರೆ- ಹೊಕ್ಕರ ಕಾಯ್ವ ಪ್ರಸನ್ನನಿವ ಸುವ್ವಿ 2 ಯಶೋದೆಯ ಕಂದ ತನ್ನ ವಿಷವನುಣ್ಣೆಂದ ಕರ್ಕಶದ ಪೂತನಿಯ ಶಿಶುವಾಗಿ ಸುವ್ವಿ ಕರ್ಕಶದ ಪೂತನಿಯ ಶಿಶುವಾಗಿ ಕೊಂದ ನಮ್ಮ ಎಸೆವ ಗೋವಿಂದ ಪಾಲಿಸ ಬಂದ ಸುವ್ವಿ 3 ಶಕಟಾಸುರನ್ನ ಮೆಟ್ಟಿ ಕೊಂದ ಬಲು ವಿಕಟ ದೈತ್ಯನ್ನ ಕೊರಲೆತ್ತಿ ಸುವ್ವಿ ವಿಕಟದೈತ್ಯನ್ನ ಕೊರಲೆತ್ತಿ ಕೊಂದು ಸರ್ಪನ ಮ- ಸ್ತಕದಮೇಲೆ ನಲಿವುತ ನಿಂದ ಸುವ್ವಿ4 ಕರುಗಳ ಕಣ್ಣಿಯ ಬಿಡುವಾಗ ನಾರಿಯರೆಲ್ಲರು ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುವ್ವಿ ಪೊರವಡಲು ತಾ ಪೊಕ್ಕು ಪಾಲ್ಮೊಸರನೆ ಸುರಿದು ಅವರ್ಬರಲು ಬೆಣ್ಣೆಯ ಕೊಂಡೋಡುವ ಸುವ್ವಿ 5 ಮತ್ತಿಯ ಮರಗಳ ಕಿತ್ತುವಾಗ ಅಲ್ಲಿ ಭೃತ್ಯರಿಗೊಲಿದು ವರವಿತ್ತ ಸುವ್ವಿ ಭೃತ್ಯರಿಗೊಲಿದು ವರವಿತ್ತ ತನ್ನ ಮಿತ್ರಜನಕಾಗಿ ಗಿರಿಯೆತ್ತಿದನೆ ಸುವ್ವಿ 6 ವೃಂದಾವನದಿ ನಿಂದು ಚಂದದಿ ನಲಿವಾಗ ತನ್ನ [ಕೊಂದಪೆ]ನೆಂದು ಬಂದ ಬಕನ ಸುವ್ವಿ [ಕೊಂದಪೆ]ನೆಂದು ಬಂದ ಬಕನ ಸೀಳಿ ಪುಲ್ಲಂದದಿ ಕೊಂದು ಬಿಸುಟಾನೆ ಸುವ್ವಿ 7 ಕಲ್ಪತರುವಂತೆ ನಮ್ಮ ತನ್ನಧರಿಂದ ಕೊಳಲನೂದುವ ಚೆಲುವಗೆ ಸುವ್ವಿ ಕೊಳಲನೂದುವ ಚೆಲುವ ಗಾನಲೋಲ ಗೋ- ಪಾಲಕೃಷ್ಣನಿಗೆ ಶರಣೆಂಬೆ ಸುವ್ವಿ 8 ರಂಗ ರಾಸಕ್ರೀಡೆಯೆಂಬ ಶೃಂಗಾರರಸ ಬಸಿವ ಮಂಗಳ ವಿಲಾಸವನು [ರಚಿಸಿದ]ಸುವ್ವಿ ಮಂಗಳ ವಿಲಾಸವನು ರಚಿಸಿದಾತನ ಕಂಡು ದೇ ವಾಂಗನೆಯರೆಲ್ಲರು ತನುವ ಮರೆತರು ಸುವ್ವಿ 9 ಮಧುರೆಗೆ ಪೋಗಿ ಮಲ್ಲರಸುವ ನೀಗಿ ಮದಾಂಧ ಮಾವನ್ನ ಮಡುಹಿದ ಸುವ್ವಿ ಮದಾಂಧ ಮಾವನ್ನ ಮಡುಹಿದ ಶ್ರೀಕೃಷ್ಣ ಮುದದಿ ತನ್ನವರ ಮುದ್ದಿಸಿದ ಸುವ್ವಿ 10 ಧರ್ಮವ ಬಿಡಬೇಡ ದುಷ್ಕರ್ಮ ಮಾಡಬೇಡ ದುರ್ಮನವ ಬಿಡದೆ ಹರಿಯಲಿಡು ಸುವ್ವಿ ದುರ್ಮನವ ಬಿಡದೆ ಹರಿಯಲಿಡು ಮನವ ಕಾಮಿನಿಯೊಳಾಡಿ ಕೆಡಬೇಡ ಸುವ್ವಿ 11 ದುರುಳರ ನೋಡಿ ದೂರಕ್ಕೋಡು ಹರಿ- ಶರಣಡಿಗೆ ಪೊಡಮಡು ಸುವ್ವಿ ಶರಣರಡಿಗೆ ಪೊಡಮಡು ಶ್ರೀಕೃಷ್ಣನ ಸು- ಚರಿತವ ಪಾಡುವರೊಳಗಾಡು ಸುವ್ವಿ 12 ಏರಲರಿಯದವ ಮರನೇರಿ ಬಿದ್ದು ಸಾವಂತೆ ನೀರ ಮೀನುಗಳು ಕರಗುವಂತೆ ಸುವ್ವಿ ನೀರ ಮೀನುಗಳು ಕರಗುವಂತೆ ಮನುಜ ನೀ ಬಾರದ ಭಾಗ್ಯಕ್ಕೆ ಹೋರಬೇಡ ಸುವ್ವಿ 13 ಹಿಂದೆ ಪುಣ್ಯದ ಬೀಜವ ಕುಂದದೆ ಬಿತ್ತಿದರೆ ಇಂದು[ಬಾಹದೈಶ್ವರ್ಯ ಮುಂದಿಪ್ಪೋದು] ಸುವ್ವಿ ಇಂದು [ಬಾಹದೈಶ್ವರ್ಯ ಮುಂದಿಪ್ಪೋದು] ಬರಿದೆ ನೀ ನೊಂದು ವಿಧಿಯ ಬೈದರೆ ಎಂದೆಂದು ಕೆಡುವೆ ಸುವ್ವಿ 14 ದುರುಳ ಕೀಚಕ ಕೆಟ್ಟ ಪರಧನಕೆ ಮರುಳಾಗಿ ಕುರುರಾಯ ಸುವ್ವಿ ಪರಧನಕೆ ಮರುಳಾಗಿ ಕುರುರಾಯ ಕೆಟ್ಟನೆಂದು ಒರೆವ ಭಾರತವ ನಿರುತ ಕೇಳು ಸುವ್ವಿ 15 ವಾದಿಯೂ ಹರಿಯಾದ ಪ್ರತಿವಾದಿಯೂ ಹರಿಯಾದ ಭೇದವಿಲ್ಲವೆಂಬ ಮತದಲ್ಲಿ ಸುವ್ವಿ ಭೇದವಿಲ್ಲವೆಂಬ ಮತದಲ್ಲಿ ತಾನೊಬ್ಬನೇ ಕಾದಿ ಗೆದ್ದಾನೆಂತು ಬಿದ್ದಾನೆಂತು ಸುವ್ವಿ 16 ಎಲ್ಲ ಒಂದಾಂದರೆ ಶಾಲ್ಯಾನ್ನನುಂಬುವರು ಪುಲ್ಲನ್ಯಾಕೆ ಮೆದ್ದು ಬದುಕರು ಸುವ್ವಿ ಪುಲ್ಲನ್ಯಾಕೆ ಮೆದ್ದು ಬದುಕರು ಸ್ಥಳಚರರು ಜಲದೊಳು ಚರಿಸೆ ಅಳುವದ್ಯಾಕೆ ಸುವ್ವಿ 17 ವರ್ತಿಯ ಸಂಸಾರ ವ್ಯವಹಾರಕ್ಕೀಗ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಸುವ್ವಿ ಸ- ರ್ವತ್ರ ಜೀವ ಭೇದವುಂಟೆಂಬುವಗೆ ಭೇದ ಸತ್ಯವಾದರೈಕ್ಯ ಎತ್ತಿಹೋದು ಸುವ್ವಿ 18 ಅತ್ತೆ ಸೊಸೆಯರಿದ್ದಾಗ ಮನೆಯೊಳು ಮತ್ಸರವು ಕತ್ತೆನಾಯಿಗಳಂತೇಕೆ ಬೆರಸರು ಸುವ್ವಿ ಕತ್ತೆನಾಯಿಗಳಂತೇಕೆ ಬೆರಸರು ಅದರಿಂದ ಪ್ರತ್ಯೇಕ ಜೀವರ ಇರವು ಸುವ್ವಿ 19 ಮಿಥ್ಯಾ ಭೇದಾದರೆ ಅದು ಶುಕ್ತಿರೂಪದಂತೆ ತ- ನ್ನರ್ಥವ ತಾ ಕಾಣಲರಿಯನು ಸುವ್ವಿ ತ- ನ್ನರ್ಥವ ತಾ ಕಾಣಲರಿಯನು ಅದರಿಂದ ನಾ- ವೆತ್ತಿದ ದೂಷಣೆಗೆ ಉತ್ತರವಿಲ್ಲ ಸುವ್ವಿ 20 ಬೊಮ್ಮ ಮಿಥ್ಯವಲ್ಲವೋ ನಿನ್ನ ಮಿಥ್ಯ ಶಶಶೃಂಗ ಸತ್ಯವಲ್ಲ ಸುವ್ವಿ ಮಿಥ್ಯಶ ಶಶೃಂಗ ಸತ್ಯವಲ್ಲ ಶೃಂಗ್ಯೆರಡು ಜ- ಗತ್ತಿನೊಳು ಕೂಡವು ಕುಯುಕ್ತಿಯ ನಿನಗಾವ ಕಲಿಸಿದ ಸುವ್ವಿ 21 ಸತ್ತ ಪೆಣನುಂಟು ಸಾಯದ ವಸ್ತುಂಟು ಸತ್ತು ಸಾಯದ ಮತ್ರ್ಯರಿಲ್ಲ ಸುವ್ವಿ ಸತ್ತು ಸಾಯದ ಮತ್ರ್ಯರಿಲ್ಲ ಮತ್ರ್ಯನಾಗಿ ನಿನ್ನ [ಮಿಥ್ಯಾವಾದ]ವೆಂತು ನಿತ್ಯವಹುದು ಸುವ್ವಿ 22 ಸತ್ಯವೆಂದರುಂಟು ಮಿಥ್ಯವೆಂದರಿಲ್ಲ ಎಂ- ಬರ್ಥ ತಾ ಕೂಡಲರಿಯದು ಸುವ್ವಿ ಎಂ- ಬರ್ಥ ತಾ ಕೂಡಲರಿಯದು ಅದರಿಂದ ಅರ್ಥವಪೇಳೆ ಮಿಥ್ಯಕೆ ನಾಮಾಂತರ ಸುವ್ವಿ23 ಭರ್ತೃಯಿಲ್ಲದವಳ ಮುತ್ತೈದೆಯೆಂಬಂತೆ ನಿನ್ನ ಮಿಥ್ಯಜಗಕಿಟ್ಟ ಸತ್ಯನಾಮ ಸುವ್ವಿ ಮಿಥ್ಯಜಗಕಿಟ್ಟ ಸತ್ಯನಾಮ ನಿನ್ನ ಯುಕ್ತಿಶೂನ್ಯನೆಂದು ಸುತ್ತ ನಗುತಿಪ್ಪುದು ಸುವ್ವಿ 24 ಇಲ್ಲ ಜಗವೆಂಬುದನು ಈಗ ಕಂಡದ ಕಾರಣ ಇಲ್ಲವಾತನ ವಾದಕ್ಕೆ ಪೊಗಳಲರಿಯದು ಸುವ್ವಿ ಇಲ್ಲವಾತನ ವಾದಕ್ಕೆ ಪೊಗಳಲರಿಯದ ಹೊಲೆಯನ [ಎಲ್ಲರರಿಯದಿದ್ದರೆ] ಹೊಲೆಜಾತಿ ಹೋಕ ಸುವ್ವಿ 25 ಗಿರಿಯ ಪಿರಿಯ ಗುಹೆಯೊಳು ದಳ್ಳುರಿಯ ಬೇಗೆಗೆ ಬೆಂದ ಕರಿಯನರಿಯದ ಕಾರಣ ಮರನ ಮುರಿವುದೆ ಸುವ್ವಿ ಕರಿಯನರಿಯದ ಕಾರಣ ಮರನ ಮುರಿವುದೆ ವಾದಿಯೀ ಪರಿಯಲಿ ನಿನ್ನ ಮಿಥ್ಯದಿ ಕಾರ್ಯವಾಗದು ಸುವ್ವಿ 26 ಹಳೆಯ ಮಲವೆಲ್ಲವು ಮಲವೆ ಅಲ್ಲದೆ ಮತ್ತೆ ಜಲಜಾಕ್ಷಿಯರ ಸಂಗಕ್ಕೆ ಪರಿಮಳವೀವುದೆ ಸುವ್ವಿ ಜಲಜಾಕ್ಷಿ ್ಷಯರ ಸಂಗಕ್ಕೆ ಪರಿಮಳವೀವುದೆ ಶೂಲದಿ ಸತ್ತ[ಪೆಣನು] ಸುಳಿವುತಿಪ್ಪುದೆ ಸುವ್ವಿ 27 ನಾಸ್ತಿಯೆಂಬ ವಸ್ತುವ ನಾಸ್ತಿಯೆಂದರಿಯದೆ ಆಸ್ತಿಯೆಂದು ಕಂಡರೆ ಅತಿಮೂರ್ಖ ಸುವ್ವಿ ಆಸ್ತಿಯೆಂದು ಕಂಡರೆ ಅತಿಮೂರ್ಖ ಅಕಟಕಟ ಜ- ಗತ್ತಿನ ಮಹಂತರ ಉನ್ಮತ್ತರ ಮಾಡಿದ ಸುವ್ವಿ 28 ಏಕಾಕಿ ನ ರಮತೆಯೆಂಬ ವೇದವಾಕ್ಯ ವಿ- ವೇಕಿಗಳೆಲ್ಲ ಬಲ್ಲರು ಸುವ್ವಿ ವಿ- ವೇಕಿಗಳೆಲ್ಲ ಬಲ್ಲರು ಅದರಿಂದ ನಿನ್ನ ಮುಕ್ತಿ ಏಕಾಕಿಯಾದರೆ ಶೋಕಕ್ಕೊಳಗಾದೆ ಸುವ್ವಿ 29 ಲೋಕದೊಳು ಹಾಳೂರ ಹಂದಿಯ ಬೇಸರದೆ ನೋಡೊ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ಸುವ್ವಿ ನಿ- ನ್ನ ಕೈವಲ್ಯದ ಘಸಣೆ ಸಾಕು ಸಾಕು ನಮ್ಮ ಶ್ರೀ ವೈಕುಂಠದ ವಾಸನೆ ಲೇಸು ಸುವ್ವಿ 30 ಅಲ್ಲಿ ಸಹಬ್ರಹ್ಮಣಾ ಸರ್ವಕ ಮಂಗಳೆಂಬಾರಂತೆ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ಸುವ್ವಿ ಅಲ್ಲಿ ಸರ್ವೇನಂದತಿ ಎಂಬ ಶ್ರುತಿಯು ನೀ ಕೇಳು ಎಲ್ಲ ಮತ್ರ್ಯರಲ್ಲಿ ಹರಿಯನುವ್ರತರಂತೆ ಸುವ್ವಿ 31 ಅಲ್ಲಿ ನರ ನಾರಿಯರು ಚಿನುಮಯ ಚೆಲುವರಂತೆ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಸುವ್ವಿ ಅಲ್ಲಿ ಚತುರ್ಬಾಹುಗಳಾಗಿಪ್ಪರಂತೆ ಅವರ ಶ್ರೀ- ವಲ್ಲಭ ಲಾಲಿಸಿ ಪಾಲಿಸುವನಚಿಂತೆ ಸುವ್ವಿ 32 ನಗರ ಕೃಷ್ಣಗೆ ಘನೋದಕದ ಮೇಲೆ ಮಿಂಚುತಿಪ್ಪುದು ಸುವ್ವಿ ಘನೋದಕದ ಮೇಲೆ ಮಿಂಚುತಿಪ್ಪುದು ಅಲ್ಲಿ ಮನೆ ಮನೆಯಲಿ ಮುಕ್ತರ ಸಂದಣಿ ಸುವ್ವಿ34 ಇಂತು ಹಯವದನ ನಿಶ್ಚಿಂತ ಜಗತ್ಕಾಂತ ಸಂತರನು ಸದಾ ಸಲಹುವ ಸುವ್ವಿ ಸಂತರನು ಸದಾ ಸಲಹುವ ಮಾರಾಂತರ ಕೃ- ತಾಂತನ ಬಳಿಗೆ ಕಳುಹುವ ಸುವ್ವಿ 35
--------------
ವಾದಿರಾಜ
ಸೃಷ್ಟೀಶ ಕೃಪೆದೋರಿದ ಬಾಲನಮಾನನಷ್ಟವ ಜಾರಿಸಿದ ಪ ನ್ಯಾಯಕೆ ಪೋಪಕಾಲದಿ ಪುಟ್ಟಯಾಖ್ಯನ ಸ್ವಪ್ನದಲಿ ತಾಂ- ಬಿಟ್ಟು ಬನ್ನಿರಿಯೆನುತಪೇಳ್ದಾ ಅ.ಪ ಎಲ್ಲಾರ ನಿನ್ನೊಳಗೆ ಸೇರಿಸಿ ಮುಂದೆ- ಉಲ್ಲಾಸಕೊಡುವೆ ನಿನಗೆ ಕಲ್ಲಿನಂದದಿ ಮೌನಧರಿಸುತ- ಖುಲ್ಲಮನುಜರ ಸಂಗವರ್ಜಿಸಿ ನಿಲ್ಲಿಸು ಮನವನೆನುತಲಿ 1 ಗುರುತು ಕಾಣುವದೆಂದಿಗೆ ಪರಮ ತಿರುಮಂತ್ರಾರ್ಥ ಅಷ್ಟಾ- ಕ್ಷರಿಯ ಜಪತಪಧ್ಯಾನಮಾಡುವ ದೊರಯದೆಂದಿಗು ಕೀರ್ತಿ ಎನುತಲಿ 2 ಮತಧರ್ಮಜ್ಞಾನಿಗಳು ಪೇಳಿರುವಂತ ಮತಶಾಸ್ತ್ರವೀಕ್ಷಿಸದೆ ಸತತದೂಷಣೆಗೈದು ಸುಜನರ - ಕ್ಷಿತಿಯ ಭೋಗವನಂಬಿ ಗರ್ವದಿ ಹಿತವತಪ್ಪಿಸಿ ಕರವಪಿಡಿಯುತ 3 ಸ್ಥಿರವಲ್ಲಕಾಯವೆಂದು ಸಾತ್ವಿಕಶೃತಿಯೊ- ಳಿರುವ ಸತ್ಯ ನೋಡೆಂದು ನಿರುತಬೋಧಿಸಿ ಜನನಮರಣವ ತರಿದು ಎನ್ನನೆ ಯಜಿಸು ಯೆನುತಲಿ- ಹರಸಿ ಮೋಕ್ಷವನಿತ್ತ ಆರ್ಯನು 4 ಬಿಟ್ಟು ಸತಿಸುತರೆಲ್ಲರ ಎನ್ನೊಳುಮನವ ನಿಟ್ಟುನಂಬಿದಭಕ್ತರ ಬಿಟ್ಟುಕೊಡೆನಾನೆಂದು ಹೃದಯಾ- ಧಿಷ್ಟಿತನು ತಾನಾಗಿ ಅಭಯವ ಇಷ್ಟಶ್ರೀಗುರುರಂಗನೀಕ್ಷಿಸಿ 5
--------------
ರಂಗದಾಸರು
ಹರಿವಾಸರದುಪವಾಸದ ಫಲವು ಕಂಡವರಿಗೆ ದೊರಕುವುದೆ ಪ. ಹಿರಿದು ಜನ್ಮಗಳಲಿ ಹರಿಯನಾರಾಧಿಪ ಪರಮ ಭಾಗವತರ ಭಕ್ತರಿಗಲ್ಲದೆ ಅ.ಪ. ಸ್ನಾನಸಂಧ್ಯಾನವು ಮೊದಲಾದ ಕರ್ಮ ನ್ಯೂನದ ಪಾಪಂಗಳು ದೀನತ್ವದಿಂದ ತುಚ್ಛರಕೈಯ ಹಿಡಿದ ದು ರ್ದಾನದ ಪಾಪಂಗಳು ಭಾನುಬಿಂಬವ ಕಂಡ ಹಿಮದಂತೆ ಚಿದಾನಂದವಾದ ವ್ರತಕೆ ಸರಿ ಬಾರದು 1 ಪರಸತಿಯರ ನೋಡಿ ಮನವಿಟ್ಟ ಪಾಪವು ಪರದೂಷಣೆಯ ಪಾಪವು ಪರಮಾತ್ಮನ ಹೊಗಳುವ ನಾಲಗೆಯಲ್ಲಿ ನರರ ಹೊಗಳುವ ಪಾಪವು ಪರ ವಸ್ತುಗಳನಪ- ಹರಿಸುವ ಪಾಪಂಗಳು ಕರಿ ಓಡುವಂತೆ ದುರಿತ ಕೋಟಿಗಳನು ಪರಿಹರಿಸುವ ಶ್ರೀ 2 ಆಡುವ ಅನೃತವಾಕ್ಯಗಳಿಂದ ಸಂಭವವಾಗುವ ಪಾಪಂಗಳು ನೋಡಿಕೊಳ್ಳದೆ ದುರಾನ್ನವನುಂಬ ದುರ್ದಾನದ ಪಾಪಂಗಳು ಮಾಡಬಾರದ ದಿನದಲಿ ಸ್ತ್ರೀಗೋಷ್ಠಿಯ ಮಾಡಿದ ಪಾಪಂಗಳು ಓಡುವುದಘಸಂಘ ಉತ್ತಮವಾಗಿಹ3 ಮತ್ತೆ ಈ ಬಹಳ ಪಾಪಗಳಿಗೆಲ್ಲ ತಾ ಪಕ್ಷ ಪ್ರಾಯಶ್ಚಿತ್ತವು ಉತ್ತಮವಾದ ವ್ರತಗಳಿಗೆಲ್ಲ ತಾ ಉತ್ತಮವೆನಿಸುವುದು ಚಿತ್ತಶುದ್ಧಿಯನಿತ್ತು ಜ್ಞಾನವೈರಾಗ್ಯದಿ ಭಕ್ತಿ ಮಾರ್ಗವನೀವುದು ಮುಕ್ತಿಗೆ ಸೋಪಾನವಾಗಿ ಭವಾಭ್ಧಿಯ ದಾಟಿಸಿ ಹರಿಯ ಸನ್ನಿಧಿಗೆ ದಾರಿಯನೀವ 4 ತೋರುವ ದಶಮಿ ದ್ವಾದಶಿಗಳು ಸಂಪುಟಾಕಾರದಿ ಹರಿದಿನವು ಮೂರುದಿನದ ವ್ರತ ನಾಲ್ಕು ಹೊತ್ತಿನ ಆಹಾರಗಳು ವರ್ಜಿತವು ಊರುದಾರಿಗಳ ನಡೆಯದೆ ತಾಂಬೂಲ ಚರ್ವಣಂಗಳೊರ್ಜಿತವು ಜಾಗರ ಮಾಡಿ ವ್ರತವಾಚರಿಸುವ 5 ಅತಿಶಯವಾದ ಶ್ರೀಹರಿದಿನದಿ ಪಿತೃತರ್ಪಣಗಳು ವಜ್ರ್ಯವು ಪ್ರತಿವರುಷದಲಿ ಆಚರಿಸುವ ತಾಯಿತಂದೆ ತಿಥಿಗಳೆಲ್ಲ ವಜ್ರ್ಯವು ಸತತವು ಮಾಡುವ ಯಜ್ಞಪುರುಷಗೆ ಆಹುತಿಗಳೆಲ್ಲ ವಜ್ರ್ಯವು ಇತರ ಭೋಗ ಕೃತ್ಯಗಳನೆಲ್ಲ ವರ್ಜಿತಮಾಡಿ ಈ ವ್ರತವನಾಚರಿಸುವ 6 ಹಲವು ವ್ರತಗಳಾಚರಿಸಿ ದಾನಂಗಳ ಹಲವು ಮಾಡಿದರೇನು ಹಲವು ಪುಣ್ಯತೀರ್ಥನದಿಯಲ್ಲಿ ಸ್ನಾನವÀ ಮುದದಿ ಮಾಡಿದರೇನು ಹಲವು ಪುರಾಣಂಗಳ ಹಲವು ಶಾಸ್ತ್ರಂಗಳ ಹಲವು ಕೇಳಿದರೇನು ಶ್ರೀಹಯವದನನ್ನ ದಿನಕೆ ಸರಿಬಾರದು 7
--------------
ವಾದಿರಾಜ
ಹುಡುಕಿದಳೆಶೋದ ಕಂದನ ಪಿಡಿದು ದಾರೆತ್ತಿಕೊಂಡ್ಹೋದರೆನುತ ಪ ಕಂಗಳನಿಕ್ಕಿ ಕಾದಿಹ್ಯದು ಸಿಂಗರದ ಗೋಪಿರ್ಹೆಂಗಳೆಯರು ರಂಗನ ಸುಖಕವರು ಗುಂಗುಹಿಡಿದು ಕುಳಿತಿಹ್ಯರು ರಂಗುಮಂಟಪದೊಳಗೆ ಎನ್ನ ಕಂಗಳಿದರ ಕಾಣನಾವ ಅಂಗನೆಯರಡಗಿಸಿದರೆಂದು ಅಂಗಲಾಚಿ ಅಂತರಂಗದಿ 1 ಉನ್ನತೋನ್ನತ ಋಷಿಗಣರು ಪನ್ನಂಗಶಾಯಿಯ ಸನ್ನಿಧಿಲವರು ಮುನ್ನಾವ ಕಾಲದಿಂ ಕುಳಿತಿಹರು ಭಿನ್ನವಿಲ್ಲದೆ ತಪವ ಮಾಳ್ಪರು ಇನ್ನು ಕಾಣಲವರು ತಮ್ಮಿಷ್ಟ ವನ್ನು ಪೂರ ಪಡೆವನಕ ಎನ್ನ ಕಣ್ಣಿಗೆ ಹಾಕರೆಂದು ಬನ್ನಬಡುತ ತನ್ನೊಳ್ತಾನು 2 ದೂಷಣೆ ಭೂಷಣಗಳನೊದೆದ ಮೋಸ ಕ್ಲೇಶಗಳನು ತರಿದ ಆಶಾ ಪಾಶಗಳನು ಜರಿದ ಈಶನುನ್ನತ ನಿಜವ ತಿಳಿದ ಶ್ರೀಶ ಶ್ರೀರಾಮ ನಿನ್ನ ಪಾದ ದಾಸರು ಕಾಣಲು ತಮ್ಮ ಭಕ್ತಿ ಪಾಶದಿಂದ ಬಿಗಿದು ಕಟ್ಟಿ ನ್ನೇಸು ಕಾಲದಿ ಬಿಡರೆಂದರಿದು 3
--------------
ರಾಮದಾಸರು
ದಾರಿ ಏನಿದಕೆ ಮುರಾರಿ - ನೀ ಕೈಯ ಹಿಡಿಯದಿದ್ದರೆ-|ದಾರಿ ಏನಿದಕೆ ಮುರಾರಿ? ಪಕಷ್ಟ-ಕರ್ಮಂಗಳ ಎಷ್ಟಾದರು ಮಾಳ್ಪೆ |ಎಷ್ಟಾದರೂ ನುಡಿದೆ ಗುರುಹಿರಿಯರ ||ದುಷ್ಟರ ಸಂಗವ ಬಹಳ ಮಾಡಿದರಿಂದ |ಶಿಷ್ಟರ ಸೇವೆಯೆಂದರಾಗದೆನಗೆ 1ಪರರ ದೂಷಣೆ ಪರಪಾಪಂಗಳನೆಲ್ಲ |ಪರಿಪರಿಯಲ್ಲಿ ಆಡಿಕೊಂಬೆ ನಾನು ||ಹರಿನಾಮಾಮೃತವ ಹೇಳದೆ ಕೇಳದೆ |ಹರಟೆಯಲ್ಲಿ ಹೊತ್ತುಗಳೆದೆ ನಾ ಹರಿಯೆ 2ಪಾತಕಕರ್ಮಗಳ ಮಾಡಿದಜಾಮಿಳಗೆ |ಪ್ರೀತಿಯಿಂದಲಿ ಮುಕ್ತಿ ಕೊಡಲಿಲ್ಲವೆ? ||ನೂತನವೇಕಿನ್ನುಸೂರ್ಯಮಂಡಲ |ರೀತಿಯಾದನು ಸಿರಿಪುರಂದರವಿಠಲ 3
--------------
ಪುರಂದರದಾಸರು
ನಿನಗೆ ತಿಳಿದಂತೆ ಮಾಡುವದಯ್ಯ ಬೇಡೆನಲು |ಯನಗೆ ಸ್ವಾತಂತ್ರ್ಯವುಂಟೇ ||ಮನಸಿಜಪಿತ ನಿನ್ನ ಮೀರಿ, ಸಿರಿ, ವಿಧಿ,ಶರ್ವ|ತೃಣ ಮುರಿಯೆ ಶಕ್ತರಲ್ಲಾ ಹರಿಯೇ ಪಅಪಮಾನ ಮಾಡಿಸೊ ಕೋಪವನೆ ಹೆಚ್ಚಿಸೊಕೃಪಣತನದಲ್ಲಿರಿಸೊ |ಅಪಹಾಸಗೈದಿಸೋ ಡಾಂಭಿಕದವನೆನಿಸೋಉಪವಾಸದಲ್ಲೇ ಇರಿಸೊ |ಕೃಪೆಯುಳ್ಳ ನರನೆನಿಸೋ ಮಾನವೆಗ್ಗಳ ಕೊಡಿಸೊಚಪಲ ಬುದ್ಧಿಯನೆ ಕಲಿಸೊ |ಅಪರಾಧವನೆ ಹೊರಿಸೊ ಬಲು ಭಯವ ತೋರಿಸೋತ್ರಿಪುರಾಂತಕರ್ಚಿತ ಪದ ಹರಿಯೇ 1ಬೈಸು ಬೈದಾಡಿಸೊ ಬಾಂಧವರನಗಲಿಸೊಹೇಸಿಕೆಯು ಲಜ್ಜೆ ತೋರಿಸೊ |ಗ್ರಾಸವನೇ ಉಣಿಸೋ ನರರಾಲಯವ ಕಾಯಿಸೋಕ್ಲೇಶನಿತ್ಯದಲಿ ಬಡಿಸೊ |ಆಶೆಯನು ಜರಿಸು ಕೈಕಾಲುಗಳ ಕುಂಠಿಸೊದೋಷಕ್ಕೆ ಮನವಂಜಿಸೋ |ವಾಸುದೇವನೆ ನಿನ್ನ ವ್ರತವ ಮಾಡಿಸುವಂದುದೇಶ ಬಹುಕಡೆಗೆ ತಿರುಗಿಸೊ ಹರಿಯೇ2ಕವನಗಳ ಪೇಳಿಸೊಕರ್ಮಬಾಹಿರನೆನಿಸೊಭುವನದೊಳು ಭಂಡನೆನಿಸೊ |ಕವಿಸು ಅಜ್ಞಾನವನು ಸನ್ಮತಿಯ ಪ್ರೇರಿಸೊಕಿವಿ ಮಾತ್ರ ದೃಢದಲಿರಿಸೋ |ಜವನ ಸದನದ ಪೊಗಿಸೋ ಬಂಧಾನದೊಳಗಿರಿಸೊತವ ದಾಸರೊಳು ಕೂಡಿಸೊ |ದಿವಿಜರೊಲ್ಲಭ ನ್ಯಾಯವನ್ಯಾಯವನೆಮಾಡುಭವಪಂಕದೊಳು ಮುಳುಗಿಸೋ ಹರಿಯೇ 3ಹೆತ್ತವರ ಸೇವೆ ಮಾಡಿಸೊ ನೀಚರ ಬಳಿಯತೊತ್ತು ಕೆಲಸವ ಮಾಡಿಸೋ |ಚಿತ್ತ ಚಂಚಲಗೊಳಿಸೊ ವೈರಾಗ್ಯ ಪುಟ್ಟಿಸೊಉತ್ತಮರ ನೆರೆಯಲಿರಿಸೊ |ಮುತ್ತಿನಾಭರಣಿಡಿಸೊ ತಿರುಕೆಯನೆ ಬೇಡಿಸೊವಿತ್ತಸಂಗ್ರಹ ಮಾಡಿಸೊ |ಮುತ್ತೆಗೊಲಿದಿಹನೆ ವಿಷ ಕುಡಿಸೊ ಅಮೃತವುಣಿಸೊಮತ್ತೊಬ್ಬರಾರು ಗತಿಯೋ ಹರಿಯೇ 4ಸಾಲಗೊಯ್ಯನಮಾಡುಕಂಡ ಕುಲದಲಿ ತಿನಿಸುಕೀಳು ಮನುಜರ ಪೊಂದಿಸೋ |ನಾಲಿಗೆಗೆಡಕನೆನಿಸೊ ಸತ್ಯ ವಚನಿಯು ಎನಿಸೊಸ್ಥೂಲ ಪುಣ್ಯವ ಮಾಡಿಸೋ |ಕೇಳಿಸೋ ಸಚ್ಛಾಸ್ತ್ರ, ನೀತಿಯರಿಯನು ಎನಿಸೋಆಲಯದಿ ಸುಖದಲಿರಿಸೋ |ಮೂಲೋಶ ಪತಿಯೆಹರಿಕುದುರೆಯೇರಿಸೊ ಮತ್ತೆಕಾಲು ನಡಿಗೆಯಲೆ ನಡೆಸೊ ಹರಿಯೇ 5ಅರಸು ಪದವಿಯ ಕೊಡಿಸೊಕಾಷ್ಠಭಾರವ ಹೊರಿಸೊಪರದೂಷಣೆಯ ಮಾಡಿಸೊ |ಮರ್ಯಾದೆಗಳು ತಿಳಿಸು ಅತಿಮೂಢನೆಂದೆನಿಸೊನಿರುತ ರೋಗದಲಿ ಇರಿಸೋ |ಕರೆಕರೆಯ ಹಿಂಗಿಸೊ ದಿವ್ಯ ವಸನವನುಡಿಸೊಸುರಗಂಗಿ ತಡಿಯೊಳಿರಿಸೊ |ಪರಮಾತ್ಮನೆ ವಂಧ್ಯನೆನಿಸೊ ಸುತರನ್ನೆ ಕೂಡೊಮರಿಸೋ ದುರ್ವಿಷಯಗಳನೂ ಹರಿಯೆ6ಮಾಕಾಂತ ಪ್ರಾಣೇಶ ವಿಠಲ ನೀನಿತ್ತುದಕೆಶೋಕಿಸಲು ಸಲ್ಲದಯ್ಯ |ಆ ಕುಂಭೀಪಾಕ ಮೊದಲಾದ ನರಕದೊಳೆನ್ನಹಾಕಿದರೂ ಒಳಿತೆ ಜೀಯಾ |ಈ ಕಲಿಯುಗದಿಪಂಚಭೇದತಿಳಿಯದ ದೈತ್ಯರಾಕುಲದೊಳಿರಿಸಬೇಡ |ಶ್ರೀ ಕಾಳೀಕಾಂತನರ್ಚನೆ ಸರ್ವ ಕಾಲದಲಿಬೇಕುಬಿನ್ನಪಲಾಲಿಸೋ ಹರಿಯೇ 7
--------------
ಪ್ರಾಣೇಶದಾಸರು