ಒಟ್ಟು 42 ಕಡೆಗಳಲ್ಲಿ , 20 ದಾಸರು , 39 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಕುತಿಗೆ ಹೊಣಿಯಿದಕೋ ಭಕುತಿ ಪ ಹರಿಭಕುತಿಯ ಗುರು ಮೂರ್ತಿಲಿ ತಂದು | ಬೆರೆವದು ತನುಮನವಚನದಲೀ 1 ಆಚಾರ್ಯಮಾಂವಿಧಿ ಎಂದುದ್ದವಗೇ | ಸೂಚಿಸಿ ಹೇಳಿದ ಯದುವರನೀಗ2 ಸರ್ವಂ ವಾಸುದೇವೆನುತಿರಲಿಕ್ಕೆ | ಗುರ್ವಿನೊಳಗ ಅನುಮಾನವು ಬೇಕ3 ಬಲ್ಲವ ಬಲ್ಲವನೀ ಮಾತಿನ ಖೂನಾ | ಎಲ್ಲರಿಗಿದು ಅಗಮ್ಯದ ಸ್ಥಾನಾ4 ತಂದೆ ಮಹೀಪತಿ ಪ್ರಭು ದಯದಿಂದಾ | ಕಂದಗೆಚ್ಚರಿಸಿದ ಸುಖಸ್ವಾನಂದ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದೇ ನಮ್ಮ ವೃತ್ತಿ ಸದ್ಗುರುಭಾವಭಕ್ತಿ ಧ್ರುವ ಇದೇ ನಮ್ಮ ಮನೆಯ ಸದ್ಗುರು ಸ್ಮರಣಿಯ ಇದೇ ನಮ್ಮ ವರ್ತನೆಯು ಸದ್ಗುರು ಪ್ರಾರ್ಥನೆಯು 1 ಇದೇ ನಮ್ಮ ಗ್ರಾಮ ಸದ್ಗುರು ದಿವ್ಯನಾಮ ಇದೇ ನಮ್ಮ ಸ್ತೋಮ ಸದ್ಗುರು ಆತ್ಮಾರಾಮ 2 ಇದೇ ನಮ್ಮ ಭೂಮಿ ಸದ್ಗುರು ಘನಸ್ವಾಮಿ ಇದೇ ನಮ್ಮ ಸೀಮಿ ಸದ್ಗುರು ಅಂತರ್ಯಾಮಿ 3 ಇದೇ ನಮ್ಮ ದೇಶ ಸದ್ಗರು ಉಪದೇಶ ಇದೇ ನಮ್ಮಭ್ಯಾಸ ಸದ್ಗುರು ಜಗದೀಶ 4 ಇದೇ ನಮ್ಮ ವಾಸ ಸದ್ಗುರು ಸಮರಸ ಗ್ರಾಸ ಸದ್ಗುರು ಪ್ರೇಮರಸ 5 ಇದೇ ನಮ್ಮ ವ್ಯವಸನ ಸದ್ಗುರು ನಿಜಧ್ಯಾಸ ಇದೇ ನಮ್ಮ ಆಶೆ ಸದ್ಗುರು ಸುಪ್ರಕಾಶ6 ಇದೇ ನಮ್ಮಾಶ್ರಮ ಸದ್ಗುರು ನಿಜದ್ಯಾಸ ಇದೇ ನಮ್ಮುದ್ದಿಮೆ ಸದ್ಗುರು ಸಮಾಗಮ 7 ಇದೇ ನಮ್ಮ ಭಾಗ್ಯ ಸದ್ಗತಿ ಸುವೈರಾಗ್ಯ ಇದೇ ನಮ್ಮ ಶ್ರಾಧ್ಯ ಸದ್ಗುರು ಪಾದಯೋಗ್ಯ 8 ಇದೇ ನಮ್ಮ ಕುಲವು ಸದ್ಗುರು ದಯದೊಲವು ಇದೇ ನಮ್ಮ ಬಲವು ಸದ್ಗುರು ದಯಜಲವು 9 ಇದೇ ನಮ್ಮಾಭರಣ ಸದ್ಗುರು ದಯ ಕರುಣ ಇದೇ ದ್ರವ್ಯ ಧನ ಸದ್ಗತಿ ಸಾಧನ 10 ಕಾಯ ಸದ್ಗುರುವಿನುಪಾಯ ಇದೇ ನಮ್ಮ ಮಾಯ ಸದ್ಗುರುವಿನ ಅಭಯ 11 ಇದೇ ನಮ್ಮ ಪ್ರಾಣ ಸದ್ಗುರು ಚರಣ ಇದೇ ನಮ್ಮ ತ್ರಾಣ ಸದ್ಗುರು ದರುಶನ 12 ಇದೇ ನಮ್ಮ ಜೀವ ಸದ್ಗುರು ವಾಸುದೇವ ಇದೇ ನಮ್ಮ ದೇವ ಸದ್ಗುರು ಅತ್ಮಲೀವ್ಹ 13 ಇದೇ ನಮ್ಮ ನಾಮ ಸದ್ಗುರು ಸದೋತ್ತಮ ಇದೇ ನಮ್ಮ ನೇಮ ಸದ್ಗುರು ಸರ್ವೋತ್ತಮ 14 ಇದೇ ನಮ್ಮ ಕ್ಷೇತ್ರ ಸದ್ಗುರು ಬಾಹ್ಯಂತ್ರ ಗಾತ್ರ ಸದ್ಗುರು ಘನಸೂತ್ರ 15 ಇದೇ ನಮ್ಮ ತೀರ್ಥ ಸದ್ಗುರು ಸಹಿತಾರ್ಥ ಇದೇ ನಮ್ಮ ಸ್ವಾರ್ಥ ಸದ್ಗುರು ಪರಮಾರ್ಥ 16 ಇದೇ ನಮ್ಮ ಮತ ಸದ್ಗುರು ಸುಸನ್ಮತ ಪಥ ಸದ್ಗುರುಮಾರ್ಗ ದ್ವೈತ 17 ಇದೇ ನಮ್ಮ ವೇದ ಸದ್ಗುರು ಶ್ರೀಪಾದ ಇದೇ ನಮ್ಮ ಸ್ವಾದ ಸದ್ಗುರು ನಿಜಬೋಧ 18 ಇದೇ ನಮ್ಮ ಗೋತ್ರ ಸದ್ಗುರು ಸರ್ವಾಂತ್ರ ಸೂತ್ರ ಸದ್ಗುರು ಚರಿತ್ರ 19 ಇದೇ ಸದ್ಯ ಸ್ನಾನ ಸದ್ಗುರು ಕೃಪೆ ಙÁ್ಞನ ಇದೇ ಧ್ಯಾನ ಮೌನ ಸದ್ಗುರು ನಿಜಖೂನ 20 ಇದೇ ಜಪತಪ ಸದ್ಗುರು ಸ್ವಸ್ವಸೂಪ ಇದೇ ವೃತ್ತುದ್ಯೋಪ ಸದ್ಗುರು ಸುಸಾಕ್ಷೇಪ 21 ಇದೇ ನಿಮ್ಮ ನಿಷ್ಠಿ ಸದ್ಗುರು ಕೃಪಾದೃಷ್ಟಿ ಇದೇ ನಮ್ಮಾಭೀಷ್ಠಿ ಸದ್ಗುರು ದಯಾದೃಷ್ಟಿ 22 ಇದೇ ಪೂಜ್ಯಧ್ಯಕ ಸದ್ಗುರು ಪ್ರತ್ಯಕ್ಷ ಇದೇವೆ ಸಂರಕ್ಷ ಸದ್ಗುರು ಕಟಾಕ್ಷ 23 ಇದೇ ನಮ್ಮ ಊಟ ಸದ್ಗುರು ದಯನೋಟ ಇದೇ ನಮ್ಮ ಆಟ ಸದ್ಗುರು ಪಾದಕೂಟ 24 ಮಾತೃಪಿತೃ ನಮ್ಮ ಸದ್ಗುರು ಪರಬ್ರಹ್ಮ ಭ್ರಾತೃಭಗಿನೀ ನಮ್ಮ ಸದ್ಗುರು ಪಾದಪದ್ಮ 25 ಇದೇ ಬಂಧು ಬಳಗ ಸದ್ಗುರುವೆ ಎನ್ನೊಳಗೆ ಇದೇ ಸರ್ವಯೋಗ ಬ್ರಹ್ಮಾನಂದ ಭೋಗ26 ಇದೇ ಸರ್ವಸೌಖ್ಯ ಮಹಿಪತಿ ಗುರುವಾಕ್ಯ ಇದೇ ನಿಜ ಮುಖ್ಯ ಸದ್ಗತಿಗಿದೆ ಐಕ್ಯ 27
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನಿತ್ಯನಮಸ್ಕಾರ ನೋಡಿ ಗುರುಚರಣಕೆ ಮನಗೂಡಿ ಧ್ರುವ ಬಿಡದಿಹುದೇ ಸತ್ಸಂಗಾ ನೋಡಿ ಇದೇವೆ ಶಿರಸಾಷ್ಟಾಂಗಾ ಕಡದ್ಹೋಯಿತು ಭವದುಸ್ಸಂಗಾ ದೃಢಮಾಡಿ ಅಂತರಂಗಾ1 ನಮೃತಲಿಹುದೆ ನಮನಾ ನೇಮದಿಂದ ನಡೆದವರು ದಿನಾ ಬ್ರಹ್ಮಾನಂದದೋರುವ ಸಾಧನ 2 ಗುರ್ವಿನಂಘ್ರಿಗೆ ಎಡೆಮಾಡಿ ಅರ್ವಿನೊಳಾದ ಮಹಿಪತಿ ನೋಡಿ ಗರ್ವ ಪುಣ್ಯೆಂಬುದು ಈಡ್ಯಾಡಿ ಸರ್ವಪಾಪ ಹೋಯಿತು ನೋಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ಗುರು ಘನ ಮಹಿಮೆ ಧ್ರುವ ಅಧ್ಯಾತ್ಮದಾನಂದದ ನೆಲೆನಿಭ ಮಹಾತ್ಮರು ಬಲ್ಲರು ಖೂನ ಹೊಳೆಯುತಿಹ್ಯದು ಅನುದಿನ ಚಿಂತಾಯಕ ಗುರು ಘನ ಪ್ರತಾಪವು ತುಂಬಿಹ್ಯದು ಪರಿಪೂರ್ಣ ಶುದ್ಧಾಂತ್ಮದ ಸೂತ್ರಾಂತ್ರದ ಗತಿಗಳ ಮೂಢಾತ್ಮರು ಬಲ್ಲವೇನ 1 ಮಹಿಮರು ಮನಿಮನಿಗಿಲ್ಲ ಮಹಿಮಾನಂದದನು ಸಂಧಾನ ಪರಮವಿರಕ್ತನೇ ಬಲ್ಲ ಜೀವನ್ಮುಕ್ತಾಗುವ ಗತಿ ಮಾರ್ಗವು ಎಂದಿಗೆ ದೊರೆವದಿದೆಲ್ಲ ಪೂರ್ವಕಲ್ಪನೆಯಲ್ಲ ಮಿಕ್ಕಿನಾ ನರಗುರಿಗಳಿಗಿದು ಇಲ್ಲ 2 ಹುರಳಿಲ್ಲದ ಕರ್ಮಾಚರಣೆಯೊಳು ಮರುಳಾದರು ಜನವೆಲ್ಲ ಸರ್ವರಿಗಾವುದಲ್ಲ ಪೂರ್ವಾ ಪಾರ ಮಹಾಗುರು ಯೋಗಮಾರ್ಗವು ಸ್ತುತಿಸಲೆನಗಳವಲ್ಲ ಸರ್ವಮಯವೆಲ್ಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ಗುರುಕೃಪೆಯದಾಟಗಳು ಧ್ರುವ ಮನಯೋಗದ ಗೋಲ್ಹಾಟಗಳು ಅನುದಿನ ಅನಿಮಿಷ ನಯನದ ನೋಟಗಳು ಜ್ಞಾನ ಸಮುದ್ರದ ಲೋಟಗಳು ಏನೇಂದ್ಹೇಳಲಿ ಸ್ವಾನಂದದ ಸುಖ ಅನಂದೋಬ್ರಹ್ಮದ ಆಟಗಳು 1 ಸೊನ್ನೆಯ ಸೂಟಿಗಳು ತಾಳಮೃಂದಗವು ಭೇರಿಡುತಿಹ್ಯ ಕೇಳುವ ಧಿಮಿಧಿಮಿಟಗಳು ತಲ್ಲೀನದಿ ಶ್ರುತಿಘೋಷಾಲಿಸುವನೀದೃಶ್ಯದ ಉದಾಟಗಳು ತಿಳಿಯಲು ಬಲು ಆವ್ಹಾಟಗಳು 2 ಬಲ್ಲವೇನು ನರಕೀಟಗಳು ದೇವದೇವೋತ್ಮನ ನೋಟಗಳು ದಯಕರುಣದಿ ಜೀವನ ¸ದ್ಗೈಸುವ ಭವನಾಶನ ಕೃಪಾದೃಷ್ಟಿಗಳು ಧನ್ಯಧನ್ಯ ಕುಲಕೋಟಿಗಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ನರ ಪಶು ಕಾಣಿರ್ಯೋ | ಇದೇ ಮನದ ಸ್ಥಿತಿ ನೋಡಿರ್ಯೋ ಪ ಉದಯದಲೇಳುತ ಉದರದಿ ಧಾವತಿ | ಉದರ ತುಂಬಲು ನಿದ್ರಿಯ ಭರವು | ಮದದಲಿ ಭಯ ಕೊಟ್ಟಿಗೆಯಲಿ ಮಾಯದ | ಸದಮಲ ಪಾರದ ಬಂಧನವು 1 ಸಂಚಿತ ನೊಗ ಹೆಗಲಲಿ ಪೊತ್ತು | ಘನ್ನದುರಿತ ಘಸಣೆಯ ತಳೆದು | ತನ್ನ ಹಿತಾ ಹಿತ ಲೇಶವ ನರಿಯದೆ | ಕಣ್ಣೆವೆಯಿಕ್ಕದೆ ಡೋಕುವನು 2 ಗುರುವರ ಮಹಿಪತಿ ನಂದನ ಸ್ವಾಮಿಯು | ಹೊರೆವ ವಡಿಯನೆಂಬ ಗುರುತರಿದೇ | ಅನುದಿನ ಕಾವವ | ಸಿರಿಯ ಮದಾಂಧನ ನಂಬಿಹುದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದೇವೆ ನಿಜನೋಡಿ ನಮ್ಮ ನೇಮನಿತ್ಯ ಸಾಧು ಜನರಿಗೆ ನಡೆವದು ಸತ್ಯ ಧ್ರುವ ಅನುಸಂಧಾನ ತ್ರಿಕಾಲ ಸಂಧ್ಯಾನ ನಿತ್ಯ ನಿತ್ಯದಿತ್ಯರ್ಥದ ನಿಜಸುಷ್ಠಾನ 1 ದೇವದೇವೇಶನಾರಾಧನೆಯು ಭುವನತ್ರಯದಲಿದೆ ಸರ್ವಸಾಧನೆಯು 2 ಕರ್ಮಹರಿಸಿದ ನಿಮಿಷದೊಳಗೆ ಬ್ರಹ್ಮಾನಂದವಾಯಿತು ಮಹಿಪತಿಗೆ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ಪೂಜೆಯ ನೋಡಿ ಹೃದಯದಲಿ ನಿಜ ಒಡಗೂಡಿ ಧ್ರುವ ನಾಮಸ್ವರೂಪದ ನಿಜಗುಹ್ಯವಾರ್ತಿ ವ್ಯೋಮಾಕಾರದ ಮನೆಮೂರ್ತಿ ಸ್ವಾಮಿ ಸದ್ಗುರುವಿನ ಕೀರ್ತಿ 1 ನಿತ್ಯ ನಿರ್ಗುಣ ನಿರ್ವಿಕಲ್ಪಾ ಸತ್ಯಸದ್ಗುರು ಸ್ವರೂಪಾ ನಿತ್ಯ ನಿತ್ಯರ್ಥ ಸುದೀಪಾ ತತ್ವಜ್ಞಾನ ಮನಮಂಟಪಾ 2 ಸ್ವಾದೋದಕ ಙÁ್ಞನ ಭಾಗೀರಥೀ ಅಭಿಷೇಕ ಮೌನಮೌನ್ಯವಸ್ತ್ರಾ ಮೋಲಿಕಾ ಧಾನ್ಯವೆಂಬುದೇ ಸೇವೆ ಅನೇಕಾ 3 ಗಂಧಾಕ್ಷತಿ ಪರಿಮಳವುಳ್ಳ ಪುಷ್ಪ ಬುದ್ಧಿಮನವಾಯಿತು ಸ್ವರೂಪಾ ಸದ್ವಾಸನ್ಯಾಯಿತು ಧೂಪದೀಪ ಸದ್ಭಾವನೆ ನೈವೇದ್ಯಮೋಪಾ 4 ಫಲತಾಂಬೋಲವೆ ಸದ್ಭಕ್ತಿ ಮ್ಯಾಲಭಿಭಾವನೆ ಮಂಗಳಾರ್ತಿ ಕುಲಕೋಟಿ ಉದ್ಧರಿಸುವ ಗತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ಬಂದದಾ ಖೂನವು | ಇದೇವೆ ಸಾರ್ಥಕ ಜನುಮವು ಪ ಹೊತ್ತು ಹೋಗದ ಬೀದಿ ಮಾತುಗಳಾಡದೆ ಚಿತ್ತಕ ಆಲೇಶ ತರಗುಡನು ಉತ್ತಮರೊಳುಕೂಡಿ ಶ್ರೀಹರಿ ಮಹಿಮೆಯಾ ನಿತ್ಯ ಕಥಾಮೃತ ಸೇವಿಪನು 1 ಹಾಲವನೆರೆದರೆ ಸರಕನೆ ಕುಡಿಯದ ಬಾಲಕನಂದದಿ ಈ ಮನವು ಕಾಲಕಾಲಕ ಸದ್ಭೋದವ ಕೇಳಿಸಿ ಮ್ಯಾಲ ಸ್ವಹಿತ ಕೊಡುವನು 2 ಉದರದ ಧಾವತಿಗನುದಿನ ಬೆರತಿರ ಇದರೊಳಗೆಚ್ಚರ ಹಿಡಿದಿಹನು ಮದಮತ್ಸರಳಿದು ಗುರುಮಹಿಪತಿ ಪದ ಪದುಮದಹಿಷ್ಠೆಯ ಜಡಿದಿಹನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕರಿಮುಖದ ಗಣಪತಿಯ ಚರಣಕ್ವಂದನೆ ಮಾಡಿ ಶಾರದೆಗೆ ಶಿರಬಾಗಿ ಬೇಡಿಕೊಂಬುವೆ ನಾನು ಒಲಿದೆನಗೆ ವರವ ಕೊಡುಯೆಂದು 1 ಭವ ನಾರಂದ ಸುಜನರ್ವಂದಿತ ವಾಯು ಮುದದಿಂದ ಮುದ್ದು ಮಾಲಕ್ಷ್ಮಿ ನಾರಾಯಣರ ಅಂಬುಜ ಪಾದಕ್ಕೆರಗಿ ನಮೋಯೆಂಬೆ 2 ಪದುಮನಾಭ ಹರಿಗೆ ನಿಜ ಭಕ್ತರಾದಂಥ ಬುಧ ಬೃಹಸ್ಪತಿಗಳ ಕಥೆಯ ಪೇಳುವೆ ನಾನು ಮುದದಿಂದ ಕೇಳಿ ಜನರೆಲ್ಲ3 ಇರುತಿದ್ದ ಬಡವ ಬ್ರಾಹ್ಮಣ ಒಂದು ಪಟ್ಟಣದಿ ಮಡದಿ ಮಕ್ಕಳು ನಾಲ್ಕು ಮಂದಿ ಸುತರು ಸೊಸೆಯರೊಡಗೂಡಿಕೊಂಡು ಸುಖದಿಂದ 4 ಒಬ್ಬೊಬ್ಬ ಸುತಗಿಬ್ಬಿಬ್ಬರು ಗಂಡಸು ಮಕ್ಕಳು ವಿಧ್ಯುಕ್ತದಿಂದ ಜಾವಳ ಜುಟ್ಟು ಉಪನಯನ ಶುದ್ಧಾತ್ಮರಾಗಿ ಇರುತಿಹರು 5 ಪ್ರಾತಃಕಾಲದೊಳೆದ್ದು ನಾಲ್ಕು ಮಂದಿ ಸುತರು ಗೋಪಾಳ ಜೋಳ ನಾಲ್ಕು ಸೇರು ಕಾಳು ತಂದ್ಹಾಕೋರು ಅರ್ಧಗ್ರಾಸವನು 6 ಮೂರು ಪಾವು ಹಿಟ್ಟು ಮುಂಜಾನೆಗೆ ಇಟ್ಟು ಗ್ರಾಸ ಮುದ್ದೆ ಅಂಬಲಿ ಕಾಲ ಕಳೆವೋರು 7 ಒಂದಾನೊಂದಿನದಲ್ಲಿ ಬಂದರಿಬ್ಬರು ದ್ವಿಜರು ಮಂದಿರದ ದ್ವಾರದಲಿ ನಿಂತು ಕೂಗುತಿರೆ ಬಂದಳೊಬ್ಬಿ ್ಹರಿಯ ಸೊಸೆ ತಾನು 8 ದಾರು ಬಂದವರು ನಿಮ್ಮ ನಾಮವೇನೆಂದೆನುತ ಬಾಗಿ ಶಿರಗಳನೆ ಚರಣಕ್ವಂದನೆ ಮಾಡಿ ಭಾಳ ಭಕ್ತಿಂದ ಕರೆದಳು 9 ದಾರಾದರೇನಮ್ಮ ಬಾಯಾರಿ ಬಳಲುತಲಿ ಮೂರು ನಿರಾಹಾರ ಮಾಡಿ ಬಂದೆವು ನಾವು ಆಹಾರ ನೀಡಿ ಕಳಿಸೆಂದ್ರು 10 ಭಿಕ್ಷಕೆ ಹೋದವರು ಈ ಕ್ಷಣದಿ ಬರುವೋರು ಅರೆಕ್ಷಣ ನೀವು ತಡೆದರೆ ಜೋಳದ ಭಕ್ಷ್ಯವನೆ ಮಾಡಿ ಬಡಿಸುವೆನು 11 ಹೊತ್ತು ಭಾಳಾಯಿತು ಹಸ್ತವು ನಮ್ಮೊ ್ಹಟ್ಟೆ ತುತ್ತನ್ನ ಹಾಕಿದರೆ ಈಗ ನಾವದನುಂಡು ತೃಪ್ತರಾಗ್ಹರಸಿ ನಡೆದೇವು 12 ಮಡಿವುಟ್ಟು ಮಾಡಿದೆನು ಮುಂಜಿಮನೆಗಳಿಗಡಿಗೆ ತಡೆಯದೆ ಸ್ನಾನಮಾಡಿ ಬನ್ನಿರೆಂದು ನುಡಿದಳು ಬ್ಯಾಗ ಪತಿವ್ರತೆ 13 ನಾಲ್ಕು ಭಕ್ಕರಿಯೊಳಗೆ ಎಂಟರ್ಧವನು ಮಾಡಿ ಎಂಟುಮಕ್ಕಳಿಗೆ ಬಡಿಸೋ ಗ್ರಾಸವನು ಸಂತೋಷದಿಂದ ಬಡಿಸುವೆನು 14 ಸ್ನಾನ ಸಂಧ್ಯಾನವ ಮಾಡಿ ಬಂದೇವೆನಲು ತಾನು ಎಡೆಮಾಡಿ ಎರಡೆರಡು ಭಕ್ಕರಿಯ ನೀಡಿದಳು ಭಾಳ ಭಕ್ತಿಂದೆ 15 ಬೆಣ್ಣೆ ಬೆಲ್ಲ ತುಪ್ಪ ಕರಣೆ ಕರಣೆ ಕೆನೆಮೊಸರು ನುಣ್ಣನೆ ತವ್ವೆ ಅರೆದಕೊಬ್ಬರಿ ಖಾರ ಉಣ್ಣಿರೆಂದ್ಹಾಕುತಿರಲಾಗ 16 ಸಡಗರದಲದನುಂಡು ಕುಡಿದು ಮ್ಯಾಲ್ ಮಜ್ಜಿಗೆಯ ಒಡೆದಡಿಕೆಯೆಲೆ ಕೊಟ್ಟು ಕೇಳುತ ನಿಮ್ಮ ನಡೆವೊ ನಾಮೇನು ಹೇಳೆಂದ್ಲು 17 ಇಂದುಸುತ ಸುರರ ಗುರುವೆಂದು ಪೇಳುವರ್ ನಮಗೆ ಬಂದೆವು ನಾವು ಬುಧ ಬೃಹಸ್ಪತಿಗಳು ಆ- ನಂದವಾಯಿತು ನಮಗೆಂದ್ರು 18 ಅನ್ನ ಬೇಕಾದರೆ ಅಡಿಗೆ ಒಲೆಗೋಡೆಯಲಿ ನ- ಮ್ಮನ್ನ ಬರೆದು ಪೂಜೆ ಮಾಡಿದರೀಗ ಅನ್ನವನು ನಾವು ಕೊಡುವೆವು 19 ಭಾಗ್ಯ ಬೇಕಾದರೆ ಬರೆದು ಪೆಟ್ಟಿಗೆಮ್ಯಾಲೆ ಭಾಳ ಭಕ್ತಿಂದ ಪೂಜೆ ಮಾಡಿದರೆ ಭಾಗ್ಯ ಕೊಡುವೆವೆಂದ್ಹೇಳಿ ನಡೆದರು 20 ಸುಣ್ಣಸಾರಣೆಮಾಡಿ ಬಣ್ಣ ಚಿತ್ರವ ಬರೆದು ಚೆನ್ನಾಗಿ ಬರೆದು ಬುಧ ಬೃಹಸ್ಪತಿಗಳನೆ ಮನ್ನಿಸಿ ಪೂಜಿಸಿದಳಾಗ 21 ಹಚ್ಚಿಟ್ಟು ಗಂಧಾಕ್ಷತೆ ಪುಷ್ಪಗಳ ಉತ್ರಾಣಿ ಅಕ್ಕಿ ಮಂತ್ರಾಕ್ಷತೆ ಮಾಡಿ ಭಕ್ತಿಂದೆ ಪೂಜಿಸಿದಳಾಗ 22 ಗೋಪಾಳಕ್ಕ್ಹೋದಲ್ಲಿ ಗೋಧಿ ಅಕ್ಕಿ ಬ್ಯಾಳೆ ಹಾಕುವರು ನಾಲ್ಕು ಬೀದಿಯಲಿ ಅದು ಗಂಟು ತಾವ್‍ಕಟ್ಟಿ ಹೊತ್ತರ್ಹೆಗಲಲ್ಲಿ 23 ಹಿಡಿಜೋಳ ಬೇಡಿದರೆ ಪಡಿಜೋಳ ಹಾಕುವರು ಬಡವರು ನೀವು ಬನ್ನಿರೆಂದು ಕರೆದು ಹಿಡಿಹಿಡಿ ರೊಕ್ಕ ಕೊಡುವೋರು 24 ಭರದಿಂದ ಬಂದಾಗ ಸುರುವಿದರು ಧಾನ್ಯವನು ಬರೆದಂಥ ಗೊಂಬೆ ನೋಡಿ ಕೇಳುತ ಅದರ ವಿವರವನು ಹೇಳಬೇಕೆನುತ 25 ಇವರು ಬುಧ ಬೃಹಸ್ಪತಿಗಳೆಂಬೊ ದೇವತೆಗಳು ಇವರು ಬಂದೆನ್ನ ಮನೆಯಲ್ಲೂಟವನುಂಡು ಒಲಿದ್ವರವ ಕೊಟ್ಟು ನಡೆದರು26 ಇಂಥÀವರ ಪುಣ್ಯದಿಂದೀ ಧಾನ್ಯ ದೊರಕಿದವು ನಿ ರಂತರದಿ ನಮ್ಮ ಮನೆಯಲ್ಲಿಟ್ಟವರನು ಸಂತೋಷದಲಿ ಪೂಜಿಸುವಣೆಂದ್ರು 27 ಭಾಳ ಅನ್ನವ ಮಾಡು ಜೋಳ ಭಕ್ಕರಿ ಮಾಡು ಬ್ಯಾಳೆಯ ತವ್ವೆ ಬೆಲ್ಲ ಪಲ್ಯವು ಬೆಣ್ಣೆ ಮಾಡಿ ನೈವೇದ್ಯಕ್ಕಿಡುಯೆಂದ್ರು&ಟಿbs
--------------
ಹರಪನಹಳ್ಳಿಭೀಮವ್ವ
ಕೈವಲ್ಯ ಇದೇವೆ ದೇವಾಲ್ಯ ತ್ರಾಹಿ ತ್ರಾಹಿ ತ್ರಾಹಿ ಎಂದು ನೋಡಿಮನದ ವೈಶಾಲ್ಯ ಧ್ರುವ ಮಹಾಮಹಿಮೆ ದೋರುವ ಇದೆ ದೇವದ್ವಾರ ಸೋಹ್ಯದೋರಿ ಕುಡುತಿಹ ಪುಣ್ಯ ಸಹಕಾರ ಬಾಹ್ಯಾಂತ್ರ ಭಾಸುತಿಹ ಸದ್ಗುರು ಸಹಕಾರ ದೇಹ ಅಭಿಮಾನ ಬಿಟ್ಟು ಮಾಡಿ ಜಯ ಜಯಕಾರ 1 ಮಾರ್ಗ ಸುಪಥವಿದೆ ನೋಡಿ ಸಾಕ್ಷಾತ್ಕಾರ ವರ್ಗ ಷಡ್ವೆರಿಗಳ ಮಾಡಿ ಬ್ಯಾಗೆ ದೂರ ದೀರ್ಘದಂಡ ಹಾಕಿ ಗುರುವಿಗೆ ನಮಸ್ಕಾರ ಸ್ವರ್ಗ ಸುಖಗೊಳ್ಳಲಿಕೆ ಇದೇವೆ ಸಹಕಾರ 2 ಸ್ವರ್ಗ ಭೂಕೈಲಾಸ ವೈಕುಂಠವಿದೆ ನೋಡೆವೈ ಪಾದ ಪದ್ಮಕೂಡಿ ಯೋಗ ಇದೆ ಸುಗಮ ಸಾಧನವ ಮಾಡಿ ಸುಙÁ್ಞನ ಸೂರೆಗೊಂಡು ಮಹಿಪತಿ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರುವಚನದಲಿ ನಂಬನು ನರಭಾವ ಅವರೊಳು ಕಾಂಬನು ಕರಣ ತ್ರಯದಲಿ ಶುಂಭನು ಗುರು ಭಕ್ತ ನೆನಿಸದರೇನು ಮಾ 1 ಸರ್ವರೊಳು ಹರಿ ನೋಡದೇ ಗರ್ವದ ಗುಣಗಳೀಸಾಡದೆ ನಿಜ | ದರ್ವಿನೊಳು ಮನ ಕೂಡದೇ | ಭಾಗವತರೆನಿಸಿದರೇನು ಮಾ 2 ವಾಸನಿಯ ಬಲ ಕಡಿಯಾ ದೇವೆ | ಆಸೆಯಲಿ ಮನ ಜಡಿಯದೆ ನಿಜ | ದ್ಯಾಸದಂಡವ ಪಿಡಿಯದೆ ಸ | ನ್ಯಾಸಿಯೆನಿಸಿದರೇನು ಮಾ 3 ನುಡಿಯ ಬೀರುತ ಸಂತರಾಜನ | ರೊಡನೆ ಹಾಕುತ ಸಿಂತರಾ ತಮ್ಮ | ನಡತಿ ನೋಡಲು ಭ್ರಾಂತರಾ ತಾ | ಸಂತ ನೆನಿಸಿದರೇನು ಮಾ 4 ತಂದೆ ಮಹಿಪತಿ ಪಾದವಾ ಬೆರೆ | ಭವ | ಬಂಧ ಮಾಡದೇ ವಾತಾ | ಬಂದ ಜನಮಕಿದೇನು ಮಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗೋಪಿದೇವಿ ಎಂತು ಪೇಳಲೆ ನಾನೆಂತು ತಾಳಲೆ ಪ ಶ್ರೀಪತಿ ಬಂದು ನಿಂದು ಏಕಾಂತವನ್ನ ಆಡುತಾನೆ | ಪಾಪ ಇಂಥಾದುಂಟೇನೆ ಕೇಳೆ ಲಕ್ಷ್ಮೀಕಾಂತನೀತನೆ || ಮಂಥನ ಮಾಡುವಲ್ಲಿ ಮಂಥಣಿಯ ಒಡೆದನು | ಕುಂತಳವ ಪಿಡಿದು ಎನ್ನ ಕುಳ್ಳಿರಿಸಿದಾ ಕಿರಿಬೆವರನೊರಸಿದಾ 1 ಚಿಕ್ಕಮಕ್ಕಳ ಕೂಡಿ ಚಕ್ಕನೆ ತಾ ಬಂದು ಬೇಗ | ಬೆಕ್ಕು ಕುನ್ನಿ ಮರ್ಕಟವ ತಂದನಮ್ಮಾ ಇದು ಚಂದವೇನಮ್ಮ || ಉಕ್ಕುತಿಹ ಪಾಲ್ಗೊಡಗಳ ಉರುಳಿಸಿದಾ ಸುಮ್ಮನೆ | ಚೊಕ್ಕವೇನೆ ಸುಮ್ಮನೆ ಮೊಸರ ಸುರಿದಾ ಮೀಸಲು ಮುರಿದಾ 2 ರಕ್ಕಸರ ಗಂಡ ನಮ್ಮ ರಾಜ್ಯದೊಳಗಿವಗಿನ್ನು | ತಕ್ಕ ಬುದ್ದಿಯ ಪೇಳುವರದಾರು ಮೀರಿದ ಗೋಪಗೆ || ಸಿಕ್ಕ ಪಿಡಿದೇವೆಂದರೆ ಸಿಕ್ಕನಮ್ಮ ಇವ ಗುಡಿವಡ್ಡಿ ಬೇಡವೇ | ಕಕ್ಕಸದಲಿ ಬಲು ಕಕ್ಕಲಾತಿಯಲಿ 3 ಬಿರಬಿರನೆ ತಾ ಬಂದು ಬೆದರಿ ಎನಗಂದು | ಹರವಿಯ ಹಾಲು ಕುಡಿದಾ ತಾ ಎತ್ತ ಓಡಿದನೆ || ವಾರಿಗಣ್ಣಿನಿಂದಲಿ ನೋಡಿ ಒದಗಿ ಬಳಿಗೆ ಬಂದು | ತೋರವಾದ ಕುಚಗಳ ಪಿಡಿದಾನೆ ಬಲಿದನೇನೆ 4 ಹಾರ ಪದಕವು ಹಿಡಿ ಹಿಡಿ ಎಂದು ಎನ್ನ ಕೂಡ | ಸರಸವನಾಡಲಿಕ್ಕೆ ಅರಸನೇನೆ ನಮಗೆ ಪುರುಷನೇನೆ || ಪುರುಷರು ಕಂಡರೆನ್ನ ಪರಿಪರಿ ಬಾಧಿಸ್ಯಾರು | ತರಳನ ಕರೆದ್ಹೇಳು ತಿದ್ದಿ ನೀನು ಇವಗೆ ಬುದ್ಧಿ5 ಚಂಡನಾಡುತಲಿ ಚಿಕ್ಕ ಮಿಂಡಿಯರ ಕಂಡು ತಾನು | ಚಂಡು ಅಂತ ಕುಚಗಳ ಪಿಡಿದಾನೆ ಇಂಥದುಂಟೇನೆ || ಭಂಡು ಮಾಡತಾನೆ ಭಂಡಿಯ ಗೋವಳಗಿಂದು | ದಂಡಿಸವ್ವಾ ದಂಡವನು ಕೊಡು ನೀನು 6 ಚಂಡ ಪ್ರಚಂಡನಿವನು ಗೋಪಿಕೆಯರಿಗೆಲ್ಲ | ಉದ್ದಂಡನಿವನು ತಂಡ ತಂಡದಲಿ ತುರು- || ಹಿಂಡುಗಳ ಕಾಯುವ ಗೊಲ್ಲಬಾಲಕನಮ್ಮಾ |ಪಾಂಡುರಂಗ ವಿಜಯವಿಠ್ಠಲರಾಯ ಬಲು ದಿಟ್ಟನಿವನು7
--------------
ವಿಜಯದಾಸ
ತಣ್ಣನೆ ಹೊತ್ತಿಲಿ ನಾವು ಬೆಣ್ಣೆ ತೆಗೆಯುವ ಸಮಯದಿಚಿಣ್ಣ ಬಂದು ಕಣ್ಣು ಮುಚ್ಚಿ ಬೆಣ್ಣೆ ಸವಿದು ಪೋದನೆ ಪ ಹಿಂಡುಗೆಳೆಯರ ಕೂಡಿಕೊಂಡುಬಂದು ಬಾಗಿಲೊಳಾಡುತಚೆಂಡು ಬುಗುರಿಯ ಹುಡುಕುತ ನಮ್ಮದುಂಡು ಕುಚಗಳ ಪಿಡಿದನೆ1 ಆಕಳ್ಹಾಲನು ಕಾಸಿ ನಾವುಮೀಸಲೆಂದಿಟ್ಟಿದ್ದೇವೆಜÉೂೀಕೆಯಿಂದಲಿ ಕೃಷ್ಣ ಬಂದುಮೀಸಲಳಿದು ಪೋದನೇ2 ಇದ್ದ ಮಾನವನುಳುಹಿಕೊಂಡುಎದ್ದು ಪೋಗುವುದುಚಿತವೆಬುದ್ಧಿ ಪೇಳಬಾರದೆ ನಮ್ಮಮುದ್ದು ಶ್ರೀಪತಿ ಕೃಷ್ಣಗೆ 3
--------------
ವ್ಯಾಸರಾಯರು
ನಿನ್ನ ಕರುಣಕೆಯ ಕಾಣೆನಾ | ವಿಠಲರಾಯಮನ್ನುಜನ್ನ ರೂಪ ಧರಿಪನಾಅನ್ನ ವಸನವಿತ್ತು ಪಿತಗೆ | ಚನ್ನ ಸೇವೆ ಮಾಳ್ಪದೇವೆಘನ್ನ ಸಾಧ್ಯ ಸಾಧನವೆಂದು | ಮನ್ನಣೆಯ ತೋರ್ದೆ ಜಗಕೆ ಅ.ಪ. ಪಂಥ ಜನರ ಸಂದಣೀಯಲಿ | ಮೆರೆಯುತ್ತಿದ್ದಪಂಢರಪುರದ ಸುಪ್ರದೇಶದಿಪುಂಡರೀಕ ನಯನ ಭಕ್ತ | ಬಂಡುಣೀಯ ಮನವ ನೋಡೆಅಂಡಾ ನಂತಕೀಶ ಮನುಜ | ದಿಂಡು ಧರಿಸಿ ಬಂದು ನಿಂತ 1 ಇಂದು ಭಾಗ ಸರಿತು ತೀರದಿ | ಪುಂಡಲೀಕತಂದೆ ಪಾದಸೇವೆ ಭರದಲಿ |ಬಂದ ಮನುಜ ವೇಷ ಹರಿಗೆ | ನಿಂದಿರೆಂದು ಪ್ರಾರ್ಥಿಸುತ್ತಅಂದ ಅನ್ಯ ಪೀಠವಿರದೆ | ಒಂದು ಇಟ್ಟಗಿ ಪೀಠವಿತ್ತ2 ಸಿಂಧು | ಸುಷ್ಠು ಒತ್ತಿಪ ದಯಾಸಿಂಧು3 ಶಾಸ್ತ್ರ ಬಹಳ ಶೃತನು ಎನುತಲೂ | ಶುದ್ಧಮೇಧ ಶಕ್ತಿ ಬಹಳ ಯುತನು ಎನುತಲೂ | ಯುಕ್ತಿಗಾಗ್ಯ ವಲಿವನಲ್ಲ | ಮುಕ್ತಿದಾತ ಲಕ್ಷ್ಮೀನಲ್ಲಭಕ್ತಿ ಮುಡುಪು ಯಿತ್ತು ತುತಿಪ | ಭಕ್ತ ಜನರ ಬಿಡದೆ ಪಾಲಿಪ4 ಭಾವ ದ್ರವ್ಯ ಕ್ರಿಯವು ಎಂಬುದಾ | ಮಹತು ಎನಿಪಈ ವಿಧ ದ್ವೈತತ್ರಯಗಳಾ |ಭಾವದಲ್ಲಿ ಚರಿಸುವಂಥ | ಭಾವವಿತ್ತು ಸಲಹೊ ಗುರುಗೋವಿಂದ ವಿಠಲ ಭಕ್ತಿಪಂಥ | ದೇವನೆಂದು ಮೆರೆವ ವಿಠಲ 5
--------------
ಗುರುಗೋವಿಂದವಿಠಲರು